ದೇಶ-ವಿದೇಶ

ಕೇಜ್ರಿವಾಲ್‍ಗೆ ಎಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ/ ತಿಹಾರ್ ಜೈಲಿಗೆ ಶಿಫ್ಟ್

ಸಮಗ್ರ ನ್ಯೂಸ್: ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ, ಅರವಿಂದ್ ಕೇಜ್ರಿವಾಲ್‍ಗೆ ಎಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದು, ಇದರ ಜೊತೆಗೆ ಬಿಗಿ ಭದ್ರತೆಯ ಮಧ್ಯೆ ತಿಹಾರ್ ಜೈಲಿಗೆ ಕರೆತರಲಾಗಿದೆ. ಬಂಧನದ ಸಮಯದಲ್ಲಿ ಓದುವ ಸಾಮಗ್ರಿಗಳಿಗಾಗಿ ವಿಶೇಷ ವಿನಂತಿ ಮಾಡಿದ್ದಾರೆ. ಭಗವದ್ಗೀತೆ, ರಾಮಾಯಣ ಮತ್ತು ನೀರಜಾ ಚೌಧರಿ ಅವರ “ಹೌ ಪ್ರೈಮ್ ಮಿನಿಸ್ಟರ್ ಡಿಸೈಡ್ಸ್” ಎಂಬ ಮೂರು ಪುಸ್ತಕಗಳನ್ನು ತಮ್ಮೊಂದಿಗೆ ಇಟ್ಟುಕೊಳ್ಳಲು ಅವರ ವಕೀಲರು ನ್ಯಾಯಾಲಯದಿಂದ ಅನುಮತಿ ಕೋರಿದ್ದಾರೆ. ಅವರು ಜೈಲಿನಲ್ಲಿದ್ದಾಗ ಅಗತ್ಯ ಔಷಧಿಗಳನ್ನು […]

ಕೇಜ್ರಿವಾಲ್‍ಗೆ ಎಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ/ ತಿಹಾರ್ ಜೈಲಿಗೆ ಶಿಫ್ಟ್ Read More »

21,000 ಕೋಟಿ ರೂ. ಮೌಲ್ಯದ ರಕ್ಷಣಾ ರಫ್ತು/ ದಾಖಲೆ ನಿರ್ಮಿಸಿದ ಭಾರತ

ಸಮಗ್ರ ನ್ಯೂಸ್: ಸ್ವತಂತ್ರ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ 21,000 ಕೋಟಿ ರೂ. ರಕ್ಷಣಾ ರಫ್ತು ಗಡಿ ದಾಟಿದೆ ಎಂದು ರಕ್ಷಣಾ ಸಚಿವ ರಾಜನಾಥ್ ತಿಳಿಸಿದ್ದಾರೆ.2023-24ರ ಹಣಕಾಸು ವರ್ಷದಲ್ಲಿ ಭಾರತದ ರಕ್ಷಣಾ ರಫ್ತು 21,083 ಕೋಟಿಗೆ ತಲುಪಿದ್ದು, ಇದು ಹಿಂದಿನ ಹಣಕಾಸು ವರ್ಷಕ್ಕಿಂತ 32.5% ಹೆಚ್ಚಿಗೆಯಾಗಿದೆ. ಈ ವಿಚಾರವನ್ನು ಭಾರತದ ಜನರಿಗೆ ತಿಳಿಸಲು ಸಂತೋಷವಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. ಮೇ, 2023 ರಲ್ಲಿ ನೈಜೀರಿಯಾದಲ್ಲಿ ಭಾರತೀಯ ಡಯಾಸ್ಪೋರಾ ಸದಸ್ಯರೊಂದಿಗೆ ಸಂವಾದದ ಸಮಯದಲ್ಲಿ, ರಕ್ಷಣಾ ಸಚಿವರು ಆತ್ಮನಿರ್ಭರ ಭಾರತ್

21,000 ಕೋಟಿ ರೂ. ಮೌಲ್ಯದ ರಕ್ಷಣಾ ರಫ್ತು/ ದಾಖಲೆ ನಿರ್ಮಿಸಿದ ಭಾರತ Read More »

ತೋಷಖಾನ ಪ್ರಕರಣ: ಇಮ್ರಾನ್ ದಂಪತಿಗೆ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿದ ಪಾಕಿಸ್ತಾನ ಹೈ

ಸಮಗ್ರ ನ್ಯೂಸ್‌ : ತೋಷಖಾನ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಷಾರಾ ಬೀಬಿಗೆ ವಿಧಿಸಲಾಗಿದ್ದ 14 ವರ್ಷ ಜೈಲು ಶಿಕ್ಷೆಯನ್ನು ಪಾಕಿಸ್ತಾನ ಹೈಕೋರ್ಟ್ ರದ್ದುಗೊಳಿಸಿದೆ. ಖಾನ್ ಅವರು 2018 ರಿಂದ 2022ರ ಅವಧಿಯಲ್ಲಿ ವಿದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ವೀಕರಿಸಿದ 140 ಮಿಲಿಯನ್‌ಕ್ಕಿಂತ ಹೆಚ್ಚು ಮೌಲ್ಯದ ಉಡುಗೊರೆಗಳನ್ನು ಸರ್ಕಾರಿ ಸ್ವಾಧೀನದಲ್ಲಿ ಖರೀದಿಸಲು ಮತ್ತು ಮಾರಾಟ ಮಾಡಲು ಪ್ರೀಮಿಯರ್‌ಶಿಪ್ ಅನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪವನ್ನು ಖಾನ್‌ ಮೇಲೆ ಹೋರಿಸಲಾಗಿತ್ತು. ಈ

ತೋಷಖಾನ ಪ್ರಕರಣ: ಇಮ್ರಾನ್ ದಂಪತಿಗೆ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿದ ಪಾಕಿಸ್ತಾನ ಹೈ Read More »

ಪ್ರೆಗ್ನೆನ್ಸಿ ವಿಚಾರದಲ್ಲಿ ನೆಟ್ಟಿಗರ ಪ್ರಶ್ನೆಗೆ ಉತ್ತರ ಕೊಟ್ಟ ಪರಿಣಿತಿ ಚೋಪ್ರಾ

ಸಮಗ್ರ ನ್ಯೂಸ್:‌ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ರವರು ‘ಅಮರ್ ಸಿಂಗ್ ಚಮ್ಕಿಲಾ’ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿದ್ದು, ಇದರ ನಡುವೆ ಪರಿಣಿತಿ ಚೋಪ್ರಾ ಪ್ರೆಗ್ನೆನ್ಸಿ ಎಂಬ ಸುದ್ದಿ ಎಲ್ಲಾ ಕಡೆ ಹಬ್ಬಿದ್ದು, ಈ ವದಂತಿಗೆ ನಟಿ ಸ್ಪಷ್ಟನೆ ನೀಡಿದ್ದಾರೆ. ನಟಿ ಪರಿಣಿತಿ ಚೋಪ್ರಾ ‘ಅಮರ್ ಸಿಂಗ್ ಚಮ್ಕಿಲಾ’ ಚಿತ್ರದ ಸಂದರ್ಶನಕ್ಕೆ ಬರುವಾಗ ನಟಿ ಫಿಟೆಡ್ ಬಟ್ಟೆಯನ್ನು ಧರಿಸಿದ್ದರು. ಇದನ್ನು ನೋಡಿ ಚೋಪ್ರಾ ರವರು ಪ್ರೆಗ್ನೆನ್ಸಿ ಎಂಬ ಸುದ್ದಿ ಎಲ್ಲಾ ಕಡೆ ಹರಡಿತ್ತು. ಈ ವಿಷಯ ಅವರಿಗೆ

ಪ್ರೆಗ್ನೆನ್ಸಿ ವಿಚಾರದಲ್ಲಿ ನೆಟ್ಟಿಗರ ಪ್ರಶ್ನೆಗೆ ಉತ್ತರ ಕೊಟ್ಟ ಪರಿಣಿತಿ ಚೋಪ್ರಾ Read More »

ನವದೆಹಲಿ:ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ

ಸಮಗ್ರ ನ್ಯೂಸ್‌ : ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಘಟನೆ ನಡೆದಿದೆ. ಕೇಂದ್ರ ಚುನಾವಣಾ ಆಯೋಗದಲ್ಲಿ ಸರ್ಕಾರವು ತನ್ನದೇ ಆದ ಜನರನ್ನು ಹೊಂದಿದೆ ಮತ್ತು ಇವಿಎಂ ಇಲ್ಲದೆ ಚುನಾವಣೆಯನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಭಾಷಣ ಮಾಡಿದ್ದು,. ಇದರ ಜೊತೆಗೆ ಬಿಜೆಪಿ ಹಿರಿಯ ನಾಯಕ ಹರ್ದೀಪ್ ಸಿಂಗ್ ಪುರಿ ನೇತೃತ್ವದ ನಿಯೋಗ ದೇಶ ವಿರೋಧಿ ಹೇಳಿಕೆ ಎಂದು ವ್ಯಾಖ್ಯಾನಿಸಿ ದೂರು ನೀಡಿದೆ. ಕೇಜ್ರಿವಾಲ್ ಇಡಿ ಬಂಧನ ಖಂಡಿಸಿ ಭಾನುವಾರ ಇಂಡಿಯಾ ಒಕ್ಕೂಟ ದೆಹಲಿಯ

ನವದೆಹಲಿ:ರಾಹುಲ್ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಿಜೆಪಿ Read More »

ದೆಹಲಿ: ದಲಿತ ಬಾಲಕ ಮೇಲ್ಜಾತಿ ವ್ಯಕ್ತಿಯ ನೀರಿನ ಬಕೆಟ್ ಮುಟ್ಟಿದ್ದಕ್ಕೆ ಹಲ್ಲೆ

ಸಮಗ್ರ ನ್ಯೂಸ್ : ಶಾಲೆಯಲ್ಲಿ ಹ್ಯಾಂಡ್ ಪಂಪ್ ಬಳಿ ಇರಿಸಲಾಗಿದ್ದ ಮೇಲ್ಜಾತಿ ವ್ಯಕ್ತಿಯ ನೀರಿನ ಬಕೆಟ್ ಅನ್ನು ಎಂಟು ವರ್ಷದ ದಲಿತ ಬಾಲಕ ಮುಟ್ಟಿದನು ಎಂಬ ಕಾರಣಕ್ಕೆ ಬಾಲಕನಿಗೆ ಥಳಿಸಿರುವ ಘಟನೆ ರಾಜಸ್ಥಾನದ ಅಲ್ವಾರ್‌ನ ಮಂಗಳೇಶಪುರ ಗ್ರಾಮದಲ್ಲಿ ನಡೆದಿದೆ. ನಾಲ್ಕನೇ ತರಗತಿ ಬಾಲಕ ಚಿರಾಗ್ ಎಂದು ಗುರುತಿಸಲಾಗಿದೆ. ರತಿರಾಮ್ ಠಾಕೂರ್ ಎಂಬ ಮೇಲ್ಜಾತಿಯ ವ್ಯಕ್ತಿ ಹ್ಯಾಂಡ್ ಪಂಪ್‌ನಿಂದ ಬಕೆಟ್‌ನಲ್ಲಿ ನೀರು ತುಂಬಿಸುತ್ತಿದ್ದನು. ಚಿರಾಗ್ ನೀರು ಕುಡಿಯಲು ಬಕೆಟ್ ಅನ್ನು ಸರಿಸಿದ್ದ. ಆತ ಮುಟ್ಟಿದ್ದಕ್ಕೆ ಕೋಪಗೊಂಡ ಠಾಕೂರ್, ಚಿರಾಗ್

ದೆಹಲಿ: ದಲಿತ ಬಾಲಕ ಮೇಲ್ಜಾತಿ ವ್ಯಕ್ತಿಯ ನೀರಿನ ಬಕೆಟ್ ಮುಟ್ಟಿದ್ದಕ್ಕೆ ಹಲ್ಲೆ Read More »

ಚೀನಾಗೆ ಸೆಡ್ಡು ಹೊಡೆದ ಫಿಲಿಪ್ಪಿನ್ಸ್/ ಸಮುದ್ರ ಮಾರ್ಗದ ಭದ್ರತೆ ಇನ್ನಷ್ಟು ಬಿಗಿ

ಸಮಗ್ರ ನ್ಯೂಸ್: ಬಲಿಷ್ಠ ಚೀನಾಗೆ ಪುಟ್ಟ ರಾಷ್ಟ್ರ ಫಿಲಿಪ್ಪಿನ್ಸ್ ಸೆಡ್ಡುಹೊಡೆದಿದ್ದು,ಸಮುದ್ರ ಮಾರ್ಗದ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲು ಫಿಲಿಪ್ಪಿನ್ಸ್ ಅಧ್ಯಕ್ಷ ಫರ್ಡಿನ್ಯಾಂಡ್ ಮಾರ್ಕಸ್ ಜೂನಿಯರ್ ಆದೇಶ ನೀಡಿದ್ದಾರೆ. ದಕ್ಷಿಣ ಚೀನಾ ಸಮುದ್ರ ವಲಯದಲ್ಲಿ ನೌಕಾಪಡೆ ಸಂಘರ್ಷ, ಅತಿಕ್ರಮಣ ಪ್ರಯತ್ನಗಳು – ಹೆಚ್ಚುತ್ತಿರುವ ಬೆನ್ನಿಗೇ ಅಲರ್ಟ್ ಆಗಿರುವ ಫಿಲಿಪ್ಪಿನ್ಸ್‌ ಸರ್ಕಾರ, ಚೀನಾ ಹೆಸರನ್ನು ಉಲ್ಲೇಖಿಸದೆಯೇ ಈ ಆದೇಶ ಹೊರಡಿಸಿದೆ. ದಕ್ಷಿಣ ಚೀನಾ ಸಮುದ್ರ ವ್ಯಾಪ್ತಿ ಬಹುತೇಕ ತನ್ನ ಗಡಿಗೆ ಸೇರಿದೆ ಎಂದು ಚೀನಾ ಪ್ರತಿಪಾದಿಸುತ್ತಲೆ ಇದೆ. ಆದರೆ ಫಿಲಿಪ್ಪಿನ್ಸ್, ವಿಯೆಟ್ನಾಂ,

ಚೀನಾಗೆ ಸೆಡ್ಡು ಹೊಡೆದ ಫಿಲಿಪ್ಪಿನ್ಸ್/ ಸಮುದ್ರ ಮಾರ್ಗದ ಭದ್ರತೆ ಇನ್ನಷ್ಟು ಬಿಗಿ Read More »

ಕಾಂಗ್ರೆಸ್ ಗೆ ರಿಲೀಫ್ ಕೊಟ್ಟ ಸುಪ್ರೀಂ/ ತೆರಿಗೆ ವಸೂಲಿಗೆ‌ ತಡೆ

ಸಮಗ್ರ ನ್ಯೂಸ್: ಆದಾಯ ತೆರಿಗೆ ಇಲಾಖೆ ನೀಡಿರುವ ನೋಟಿಸ್‌ ವಿಚಾರದಲ್ಲಿ ಕಾಂಗ್ರೆಸ್‌ಗೆ ಸುಪ್ರೀಂಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ ಕಾಂಗ್ರೆಸ್‌ ಪಕ್ಷದ ವಿರುದ್ಧ ಪ್ರತಿಕೂಲ ಕ್ರಮ ಕೈಗೊಳ್ಳದಂತೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ. ಲೋಕಸಭಾ ಎಲೆಕ್ಷನ್ ಹೊತ್ತಿನಲ್ಲಿ ಬಾಕಿ ಇರುವ ಕೋಟ್ಯಾಂತರ ರೂಪಾಯಿ ತೆರಿಗೆ ಪಾವತಿಸಲು IT ಇಲಾಖೆ ನೋಟಿಸ್‌ ನೀಡಿದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸುಪ್ರೀಂಕೋರ್ಟ್‌ ಮೆಟ್ಟಿಲೇರಿತ್ತು. ಕಾಂಗ್ರೆಸ್ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಚುನಾವಣೆಯ ಸಮಯದಲ್ಲಿ ಪಕ್ಷದ ವಿರುದ್ಧ ಪ್ರತಿಕೂಲ ಕ್ರಮ ಕೈಗೊಳ್ಳದಂತೆ ಹೇಳಿದೆ. ಸುಪ್ರೀಂಕೋರ್ಟ್ ಮಹತ್ವದ

ಕಾಂಗ್ರೆಸ್ ಗೆ ರಿಲೀಫ್ ಕೊಟ್ಟ ಸುಪ್ರೀಂ/ ತೆರಿಗೆ ವಸೂಲಿಗೆ‌ ತಡೆ Read More »

ನವದೆಹಲಿ: ಚುನಾವಣೆ ಮುಗಿಯುವರೆಗೆ ಕಾಂಗ್ರೆಸ್‌ ಪಕ್ಷದ ತೆರಿಗೆ ವಸೂಲಿ ಇಲ್ಲ| ಕೇಂದ್ರ ಭರವಸೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಮುಗಿಯುವರೆಗೂ ಕಾಂಗ್ರೆಸ್‌ ಪಕ್ಷ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ.‌ ಆದಾಯ ತೆರಿಗೆ ಇಲಾಖೆ ಒಟ್ಟು 3,567 ಕೋಟಿ ರೂ. ಬಾಕಿ ತೆರಿಗೆ ಪಾವತಿಸುವಂತೆ ನೀಡಿದ ನೋಟಿಸ್‌ ಪ್ರಶ್ನಿಸಿ ಕಾಂಗ್ರೆಸ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನ್ಯಾ. ಬಿ.ವಿ.ನಾಗರತ್ನ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬಂದಿತು. ಈ ವೇಳೆ ಸಾಲಿಸಿಟರ್‌ ಜನರಲ್‌

ನವದೆಹಲಿ: ಚುನಾವಣೆ ಮುಗಿಯುವರೆಗೆ ಕಾಂಗ್ರೆಸ್‌ ಪಕ್ಷದ ತೆರಿಗೆ ವಸೂಲಿ ಇಲ್ಲ| ಕೇಂದ್ರ ಭರವಸೆ Read More »

ಪತ್ನಿಯ ವಾಟ್ಸಾಪ್ ಸ್ಟೇಟಸ್‌ನಲ್ಲಿ ಪತಿಯನ್ನು ಕೊಂದವರಿಗೆ ₹ 50,000 ಬಹುಮಾನ ಘೋಷಣೆ

ಸಮಗ್ರ ನ್ಯೂಸ್: ಪತಿಯ ಹತ್ಯೆಗೆ ಪತ್ನಿ ₹ 50,000 ಬಹುಮಾನವನ್ನು ಘೋಷಿಸಿದ್ದ ಘಟನೆ ಆಗ್ರಾದ ಬಹ್ ಜಿಲ್ಲೆಯಲ್ಲಿ ನಡೆದಿದೆ. ಪತ್ನಿಯು ವಾಟ್ಸಾಪ್ ಸ್ಟೇಟಸ್‌ನಲ್ಲಿ ಗಂಡನನ್ನು ಕೊಂದವರಿಗೆ ಬಹುಮಾನ ಘೋಷಣೆ ಮಾಡಿದ್ದಾರೆ. ಪತಿಯು ಪತ್ನಿಯ ಸ್ಟೇಟಸ್ ನೋಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿಂದೆ ಪತ್ನಿಯ ಸ್ನೇಹಿತರೊಬ್ಬರು ಬೆದರಿಕೆ ಹಾಕಿದ್ದರು ಎಂದು ಪತಿ ದೂರಿನಲ್ಲಿ ಆರೋಪಿಸಿದ್ದಾರೆ. ಮಹಿಳೆ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಬಹ್ ಪೊಲೀಸ್ ಠಾಣೆಯ ಉಸ್ತುವಾರಿ ಶ್ಯಾಮ್ ಸಿಂಗ್ ಹೇಳಿದ್ದಾರೆ.‌ ಇವರು

ಪತ್ನಿಯ ವಾಟ್ಸಾಪ್ ಸ್ಟೇಟಸ್‌ನಲ್ಲಿ ಪತಿಯನ್ನು ಕೊಂದವರಿಗೆ ₹ 50,000 ಬಹುಮಾನ ಘೋಷಣೆ Read More »