ದೇಶ-ವಿದೇಶ

ರಾಹುಲ್ ವಿರುದ್ಧ ಕೇರಳ ಬಿಜೆಪಿ ಮುಖ್ಯಸ್ಥ ಕೆ.ಸುರೇಂದ್ರನ್ ಸ್ಪರ್ಧೆ

ಸಮಗ್ರ ನ್ಯೂಸ್‌: ಲೋಕಸಭಾ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದ್ದು, ಈ ಬಾರಿಯೂ ಕಾಂಗ್ರೆಸ್‌ನ ಹಾಲಿ ಸಂಸದ ರಾಹುಲ್‌ ಗಾಂಧಿ ವಯನಾಡಿನಿಂದಲೇ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ರಾಹುಲ್‌ ಗಾಂಧಿ ಅವರಿಗೆ ಪ್ರತಿಸ್ಪರ್ಧಿಯಾಗಿ ಕೇರಳದ ಬಿಜೆಪಿ ಮುಖ್ಯಸ್ಥ ಕೆ. ಸುರೇಂದ್ರನ್‌ ವಯಾನಾಡು ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ರಾಗಾ ಕೇರಳದ ವಯನಾಡು ಹಾಗೂ ಉತ್ತರ ಪ್ರದೇಶದ ಅಮೇಥಿಯಿಂದ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಅಮೇಥಿಯಲ್ಲಿ ಸ್ಮೃತಿ ಇರಾನಿ ಅವರ ವಿರುದ್ಧ 55,120 ಮತಗಳ ಅಂತರದಿಂದ ರಾಗಾ ಸೋಲು ಕಂಡರು, ವಯನಾಡಿನಲ್ಲಿ ಜಯ […]

ರಾಹುಲ್ ವಿರುದ್ಧ ಕೇರಳ ಬಿಜೆಪಿ ಮುಖ್ಯಸ್ಥ ಕೆ.ಸುರೇಂದ್ರನ್ ಸ್ಪರ್ಧೆ Read More »

ಟ್ರಕ್‌ನಡಿಗೆ ಸಿಲುಕಿ ಭಾರತೀಯ ವಿದ್ಯಾರ್ಥಿನಿ ಲಂಡನ್ ನಲ್ಲಿ ಸಾವು

ಸಮಗ್ರ ನ್ಯೂಸ್‌ : ಭಾರತೀಯ ಮೂಲದ 33 ವರ್ಷದ ವಿದ್ಯಾರ್ಥಿನಿ ಲಂಡನ್ ನಲ್ಲಿ ಓದುತ್ತಿದ್ದು, ತನ್ನ ಮನೆಗೆ ಸೈಕ್ಲಿಂಗ್ ಮಾಡುತ್ತಿದ್ದಾಗ ಟ್ರಕ್ ಅಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇತ್ತೀಚೆಗೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಪಿಎಚ್‌ಡಿ ಮಾಡುತ್ತಿದ್ದ ಗುರುಗ್ರಾಮ್‌ನ ಮೂಲದವರಾಗಿದ್ದು, ನಿವೃತ್ತ ಲೆಫ್ಟಿನೆಂಟ್ ಜನರಲ್ ಎಸ್‌ಪಿ ಕೊಚ್ಚರ್ ಪುತ್ರಿಯಾಗಿರುವ ಚೀಸ್ತಾ ಕೊಚ್ಚರ್ ಎಂದು ಗುರುತಿಸಲಾಗಿದೆ. ಇವರು ಈ ಹಿಂದೆ ಸಾರ್ವಜನಿಕ ನೀತಿ ಥಿಂಕ್-ಧನ್ಯವಾದ NITI ಆಯೋಗ್‌ನೊಂದಿಗೆ ಕೆಲಸ ಮಾಡುತ್ತಿದ್ದರು. ಅಪಘಾತ ಸಂಭವಿಸಿದಾಗ ಚೀಸ್ತಾ

ಟ್ರಕ್‌ನಡಿಗೆ ಸಿಲುಕಿ ಭಾರತೀಯ ವಿದ್ಯಾರ್ಥಿನಿ ಲಂಡನ್ ನಲ್ಲಿ ಸಾವು Read More »

ಬರ ಪರಿಹಾರದ ಕುರಿತು ಕೋರ್ಟ್ ತೀರ್ಮಾನಿಸಲಿ/ ನಿರ್ಮಲಾ ಸೀತರಾಮನ್ ಹೇಳಿಕೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಬರ ಪರಿಹಾರ ನೀಡುತ್ತಿಲ್ಲ ಎಂದು ಸುಪ್ರೀಂಕೋರ್ಟ್‍ಗೆ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದ ಕ್ರಮಕ್ಕೆ, ಈ ವಿಚಾರದಲ್ಲಿ ಯಾರಿಂದ ಲೋಪವಾಗಿದೆ ಎಂದು ನ್ಯಾಯಾಲಯವೇ ತೀರ್ಮಾನಿಸಲಿ ಎಂದು ತೀಕ್ಷ್ಣವಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಅನುದಾನ ಬಂದಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಬೆಂಗಳೂರಿನ ಆರ್.ವಿ.ದಂತ ವೈದ್ಯಕೀಯ ಕಾಲೇಜು ಸಭಾಂಗಣದಲ್ಲಿ ಚಿಂತಕರ ವೇದಿಕೆ ಹಾಗೂ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿಯ

ಬರ ಪರಿಹಾರದ ಕುರಿತು ಕೋರ್ಟ್ ತೀರ್ಮಾನಿಸಲಿ/ ನಿರ್ಮಲಾ ಸೀತರಾಮನ್ ಹೇಳಿಕೆ Read More »

ರಾಮಮಂದಿರದಲ್ಲಿ ಮೊದಲ ಹೋಳಿ ಹಬ್ಬದ ಸಂಭ್ರಮ/ ಆಯೋಧ್ಯೆಯಲ್ಲಿ ಸಕಲ ಸಿದ್ಧತೆ

ಸಮಗ್ರ ನ್ಯೂಸ್: ಆಯೋಧ್ಯೆಯಲ್ಲಿ ರಾಮಲಲಾನ ಪ್ರಾಣಪ್ರತಿಷ್ಟೆ ಬಳಿಕ ಇದೇ ಮೊದಲ ಬಾರಿಗೆ ಶ್ರೀ ರಾಮ ಮಂದಿರದಲ್ಲಿ ಹೋಳಿ ಹಬ್ಬದ ಸಂಭ್ರಮ. ಹೀಗಾಗಿ ಅದ್ಧೂರಿ ಹಬ್ಬದ ಆಚರಣೆಗೆ ರಾಮಜನ್ಮಭೂಮಿ ಟ್ರಸ್ಟ್ ನಿರ್ಧರಿಸಿದ್ದು, ಇದಕ್ಕಾಗಿ ಎಲ್ಲಾ ತಯಾರಿ ಮಾಡಿಕೊಂಡಿದೆ. ಭವ್ಯ ಮಂದಿರದಲ್ಲಿ ಶ್ರೀರಾಮನಿಗೆ ಮೊದಲ ಹೋಳಿ ಹಬ್ಬ ಆಚರಣೆಯಾಗಿದೆ. ಹೀಗಾಗಿ ವಿಶೇಷವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಹೋಳಿ ಹಬ್ಬ ಆಚರಣೆ ವೇಳೆ ರಾಮಲಲಾನಿಗೆ ಬಣ್ಣ ಹಚ್ಚಲಾಗುತ್ತದೆ. ಇದೇ ವೇಳೆ ಕಚೋರಿ, ಗುಜಿಯಾ, ಪುರಿ, ಕಡುಬು ಸೇರಿದಂತೆ ಇತರ ಭಕ್ಷ್ಯಗಳನ್ನು

ರಾಮಮಂದಿರದಲ್ಲಿ ಮೊದಲ ಹೋಳಿ ಹಬ್ಬದ ಸಂಭ್ರಮ/ ಆಯೋಧ್ಯೆಯಲ್ಲಿ ಸಕಲ ಸಿದ್ಧತೆ Read More »

ರಾಷ್ಟ್ರಪತಿ ವಿರುದ್ಧವೇ ಸುಪ್ರೀಂ ಮೆಟ್ಟಿಲೇರಿದ ಕೇರಳ ಸರ್ಕಾರ

ಸಮಗ್ರ ನ್ಯೂಸ್: ಕೇರಳ ವಿಧಾನಸಭೆಯು ಅಂಗೀಕಾರ ನೀಡಿರುವ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿಗಳು ಅಂಕಿತ ಹಾಕುತ್ತಿಲ್ಲ ಎಂದು ಕೇರಳ ಸರ್ಕಾರ ರಾಷ್ಟ್ರಪತಿ ದೌಪದಿ ಮುರ್ಮು ಅವರ ವಿರುದ್ಧ ಸುಪ್ರೀಂ ಕೋರ್ಟ್‍ನ ಮೆಟ್ಟಿಲೇರಿದೆ. ಕೇಂದ್ರ ಸರ್ಕಾರ, ರಾಷ್ಟ್ರಪತಿಯವರ ಕಾರ್ಯದರ್ಶಿ, ಕೇರಳ ರಾಜ್ಯಪಾಲ ಆಸಿಫ್ ಮೊಹಮ್ಮದ್ ಖಾನ್ ಹಾಗೂ ಅವರ ಹೆಚ್ಚುವರಿ ಕಾರ್ಯದರ್ಶಿಯನ್ನು ಈ ಅರ್ಜಿಯಲ್ಲಿ ಪ್ರತಿವಾದಿಗಳು ಎಂದು ಹೆಸರಿಸಲಾಗಿದೆ. ವಿಶ್ವವಿದ್ಯಾಲಯ ಕಾನೂನುಗಳ (ತಿದ್ದುಪಡಿ) (ನಂ. 2) ಮಸೂದೆ -2021, ಕೇರಳ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ – 2022, ವಿಶ್ವವಿದ್ಯಾಲಯ

ರಾಷ್ಟ್ರಪತಿ ವಿರುದ್ಧವೇ ಸುಪ್ರೀಂ ಮೆಟ್ಟಿಲೇರಿದ ಕೇರಳ ಸರ್ಕಾರ Read More »

ಸೈನಿಕರೊಂದಿಗೆ ಹೋಳಿ ಹಬ್ಬ ಆಚರಿಸಿದ ರಾಜನಾಥ್ ಸಿಂಗ್

ಸಮಗ್ರ ನ್ಯೂಸ್: ರಕ್ಷಣಾ ಸಚಿವಾ ರಾಜ್‍ನಾಥ್ ಸಿಂಗ್ ಲೇಹ್‍ಗೆ ತೆರಳಿ ಸೈನಿಕರೊಂದಿಗೆ ಸಂಭ್ರಮದಿಂದ ಬಣ್ಣದ ಹಬ್ಬ ಹೋಳಿಯನ್ನು ಆಚರಿಸಿದರು. ಹೋಳಿ ಹಬ್ಬ ಆಚರಣೆ ವೇಳೆ ರಾಜನಾಥ್ ಸಿಂಗ್ ಜೊತೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಲೆಫ್ಟಿನೆಂಟ್ ಜನರಲ್ ರಶೀಮ್ ಬಾಲಿ ಉಪಸ್ಥಿತರಿದ್ದರು. ಈ ಸಂದರ್ಭ ಯೋಧರನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ನಮ್ಮ ರಾಜಧಾನಿಯಾದರೇ, ಲಡಾಖ್ ಶೌರ್ಯವನ್ನು ತೋರಿಸುವ ಮತ್ತೊಂದು ರಾಜಧಾನಿಯಾಗಿದೆ. ನಿಮ್ಮೆಲ್ಲರನ್ನು ಭೇಟಿ ಮಾಡಿ ಹೋಳಿ ಆಚರಿಸಿರುವುದು ನನಗೆ ಅತ್ಯಂತ ಸಂತೋಷದಾಯಕ ಕ್ಷಣ. ಸಿಯಾಚಿನ್

ಸೈನಿಕರೊಂದಿಗೆ ಹೋಳಿ ಹಬ್ಬ ಆಚರಿಸಿದ ರಾಜನಾಥ್ ಸಿಂಗ್ Read More »

ಜೆಎನ್‍ಯು ವಿದ್ಯಾರ್ಥಿ ಘಟಕದ ಚುನಾವಣೆ/ ಗೆದ್ದು ಬೀಗಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್

ಸಮಗ್ರ ನ್ಯೂಸ್: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್( ಎಬಿವಿಪಿ) ದೆಹಲಿ ಜವಾಹರ್‍ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಘಟಕದ ಚುನಾವಣೆಯಲ್ಲಿ ಗೆದ್ದು ಬೀಗಿದೆ. ಜೆಎನ್‍ಯು ವಿದ್ಯಾರ್ಥಿ ಘಟಕದ ಅಧ್ಯಕ್ಷ ಸ್ಥಾನ ಮತ್ತು ಇತರ ಮೂರು ಸ್ಥಾನಗಳನ್ನೂ ಎಬಿವಿಪಿ ಪಾಲಾಗಿದೆ. ಎಬಿವಿಪಿ ನಾಯಕ ಉಮೇಶ್ ಚಂದ್ರ ಜೆಎನ್‍ಯು ವಿದ್ಯಾರ್ಥಿ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೆನ್‍ಯು ವಿದ್ಯಾರ್ಥಿ ಘಟಕದ ಅಧ್ಯಕ್ಷನಾಗಿ ಉಮೇಶ್ ಚಂದ್ರ, ಉಪಾಧ್ಯಕ್ಷನಾಗಿ ಅವಿಜಿತ್ ಘೋಷ್, ಪ್ರಧಾನ ಕಾರ್ಯದರ್ಶಿಯಾಗಿ ಅರ್ಜುನ್ ಆನಂದ್ ಹಾಗೂ ಜಂಟಿ ಕಾರ್ಯದರ್ಶಿಯಾಗಿ ಗೋವಿಂದ್ ದಂಗಿ ಆಯ್ಕೆಯಾಗಿದ್ದಾರೆ.

ಜೆಎನ್‍ಯು ವಿದ್ಯಾರ್ಥಿ ಘಟಕದ ಚುನಾವಣೆ/ ಗೆದ್ದು ಬೀಗಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ Read More »

ಲೋಕಸಭಾ ಚುನಾವಣೆ/ ಮೋದಿ ವಿರುದ್ಧ ಮತ್ತೆ ಕಣಕ್ಕಿಳಿದ ಕಾಂಗ್ರೆಸ್ಸಿನ ಅಜಯ್ ರೈ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ವಾರಣಾಸಿಯಿಂದ ಪ್ರದಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ಅಜಯ್ ರೈ ಹೆಸರನ್ನು ಘೋಷಿಸಿದೆ. 2014, 2019ರಲ್ಲೂ ಅಜಯ್ ರೈ ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದರು. ಇದೀಗ 3ನೇ ಬಾರಿಗೆ ಅಜಯ್ ರೈ ಮೋದಿ ವಿರುದ್ಧ ಕಣಕ್ಕಿಳಿದಿದ್ದಾರೆ. ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಮುಖ ನಾಯಕನಾಗಿ ಗುರುತಿಸಿಕೊಂಡಿರುವ ಅಜಯ್ ರೈ ಮಾಜಿ ಬಿಜೆಪಿ ನಾಯಕ. 1996 ರಿಂದ 2007ರ ವರೆಗೆ ಉತ್ತರ ಪ್ರದೇಶದ ಕೋಲಸಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.

ಲೋಕಸಭಾ ಚುನಾವಣೆ/ ಮೋದಿ ವಿರುದ್ಧ ಮತ್ತೆ ಕಣಕ್ಕಿಳಿದ ಕಾಂಗ್ರೆಸ್ಸಿನ ಅಜಯ್ ರೈ Read More »

ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಸ್ಪರ್ಶಿಸಿದ ಸ್ಥಳಕ್ಕೆ ‘ಶಿವ ಶಕ್ತಿ’ ಹೆಸರು ಫೈನಲ್/ ಅಂತಾರಾಷ್ಟ್ರೀಯ ಖಗೋಳ ಒಕ್ಕೂಟ ಅನುಮೋದನೆ

ಸಮಗ್ರ ನ್ಯೂಸ್: ಚಂದ್ರಯಾನ-3 ಮಿಷನ್‍ನ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಸ್ಪರ್ಶಿಸಿದ ಸ್ಥಳಕ್ಕೆ ‘ಶಿವ ಶಕ್ತಿ’ ಎಂದು ಹೆಸರಿಡಲು ಅಂತಾರಾಷ್ಟ್ರೀಯ ಖಗೋಳ ಒಕ್ಕೂಟ ಅನುಮೋದನೆ ನೀಡಿದೆ. ಚಂದ್ರನ ಮೇಲೆಯಲ್ಲಿ ವಿಕ್ರಂ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವ ಶಕ್ತಿ’ ಎಂದು ಕರೆಯಲಾಗಿತ್ತು. ಇದಾದ 7 ತಿಂಗಳ ಬಳಿಕ ಈ ಸ್ಥಳಕ್ಕೆ ಅಧಿಕೃತವಾಗಿ ‘ಶಿವ ಶಕ್ತಿ’ ಎಂದು ಹೆಸರಿಡಲು ಪ್ಯಾರಿಸ್ ಮೂಲದ ಐಎಯು ಅನುಮೋದನೆ ನೀಡಿದೆ. ಗ್ಯಾಜೆಟಿಯರ್ ಆಫ್ ಪ್ಲಾನೆಟರಿ ನಾಮಕರಣದ ಪ್ರಕಾರ ಖಗೋಳ ಸಂಸ್ಥೆಯು ಅನುಮೋದಿಸಿದ ಗ್ರಹಗಳ ಹೆಸರುಗಳ

ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಸ್ಪರ್ಶಿಸಿದ ಸ್ಥಳಕ್ಕೆ ‘ಶಿವ ಶಕ್ತಿ’ ಹೆಸರು ಫೈನಲ್/ ಅಂತಾರಾಷ್ಟ್ರೀಯ ಖಗೋಳ ಒಕ್ಕೂಟ ಅನುಮೋದನೆ Read More »

ಭಾರತದ ಜೊತೆ ಮತ್ತೆ ವ್ಯಾಪಾರ ಸಂಬಂಧ ಬೆಳೆಸಲು ಒಲವು ತೋರಿದ ಪಾಕಿಸ್ತಾನ

ಸಮಗ್ರ ನ್ಯೂಸ್: ಭಾರತದೊಂದಿಗೆ ಕಳೆದ ಐದು ವರ್ಷದಿಂದ ಸ್ಥಗಿತಗೊಂಡಿರುವ ವ್ಯಾಪಾರ ಸಂಬಂಧವನ್ನು ಮತ್ತೀಗ ಪುನಃಸ್ಥಾಪಿಸಲು ಪಾಕಿಸ್ತಾನ ಒಲವು ತೋರುತ್ತಿರುವಂತಿದೆ. ಪಾಕಿಸ್ತಾನದಲ್ಲಿ ಚುನಾವಣೆ ಬಳಿಕ ಅಸ್ತಿತ್ವಕ್ಕೆ ಬಂದಿರುವ ಹೊಸ ಸರ್ಕಾರ ಭಾರತದ ಜೊತೆಗಿನ ರಾಜತಾಂತ್ರಿಕ ನಿಲುವನ್ನು ಬದಲಿಸುವಂತಿದೆ ಎಂಬ ವಿಚಾರವನ್ನು ವಿದೇಶಾಂಗ ಸಚಿವ ಇಶಾಕ್ ದರ್ ತಿಳಿಸಿದ್ದಾರೆ. ಲಂಡನ್ನಲ್ಲಿ ನಡೆದ ಪತ್ರಿಕಾಗೋಷ್ಠಿಯೊಂದರಲ್ಲಿ ಪಾಕ್ ಸಚಿವರು ಭಾರತದೊಂದಿಗೆ ತಮ್ಮ ದೇಶ ವ್ಯಾಪಾರ ಸಂಬಂಧ ಪುನಾರಂಭಿಸುವ ನಿರ್ಧಾರವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ.‘ಪಾಕಿಸ್ತಾನದ ಉದ್ಯಮಿಗಳು ಭಾರತದೊಂದಿಗೆ ವ್ಯಾಪಾರ ಸಂಬಂಧ ಪುನಾರಂಭವಾಗಬೇಕೆಂದು ಬಯಸುತ್ತಿದ್ದಾರೆ.

ಭಾರತದ ಜೊತೆ ಮತ್ತೆ ವ್ಯಾಪಾರ ಸಂಬಂಧ ಬೆಳೆಸಲು ಒಲವು ತೋರಿದ ಪಾಕಿಸ್ತಾನ Read More »