ದೇಶ-ವಿದೇಶ

ಮಾರ್ಚ್ 18 ರಂದು ಕೊಯಂಬತ್ತೂರಿನಲ್ಲಿ ಮೋದಿ ರೋಡ್ ಶೋ/ ಮದ್ರಾಸ್ ಹೈಕೋರ್ಟ್ ಅನುಮತಿ

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಮಾರ್ಚ್ 18 ರಂದು ತಮಿಳುನಾಡಿನ ಕೊಯಂಬತ್ತೂರಿನಲ್ಲಿ ರೋಡ್ ಶೋ ಆಯೋಜಿಸಲು ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕೆ ಪೋಲಿಸ್ ಇಲಾಖೆ ಅನುಮತಿ ನಿರಾಕರಿಸಿತ್ತು. ಆದರೆ ಇದೀಗ ಮೋದಿ ರೋಡ್ ಶೋಗೆ ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿದ್ದು, ಈ ಬೆಳವಣಿಗೆ ತಮಿಳುನಾಡು ಸರ್ಕಾರಕ್ಕೆ ತೀವ್ರ ಮುಖಭಂಗ ತಂದಿದೆ. ಪ್ರಧಾನಿ ನರೇಂದ್ರ ಮೋದಿ. ದಕ್ಷಿಣ ಭಾರತ ಪ್ರವಾಸದಲ್ಲಿದ್ದು, ಮಾರ್ಚ್ 18 ರಂದು ಕೊಯಂಬತ್ತೂರಿನಲ್ಲಿ 4 ಕಿಲೋಮೀಟರ್ ರೋಡ್ ಶೋ ನಡೆಸಲು ಬಿಜೆಪಿ ನಿರ್ಧರಿಸಿತ್ತು. ಹೈದರಾಬಾದ್ ಸೇರಿದಂತೆ ಇತರ […]

ಮಾರ್ಚ್ 18 ರಂದು ಕೊಯಂಬತ್ತೂರಿನಲ್ಲಿ ಮೋದಿ ರೋಡ್ ಶೋ/ ಮದ್ರಾಸ್ ಹೈಕೋರ್ಟ್ ಅನುಮತಿ Read More »

ಚುನಾವಣಾ ಬಾಂಡ್ ಗಳ ಸಮಗ್ರ ವರದಿ ನೀಡಲು SBI ಗೆ ಸುಪ್ರೀಂ ಆದೇಶ| ಮಾ.16ರೊಳಗೆ ಎಲ್ಲಾ ಬಾಂಡ್ ಗಳ ಸಂಖ್ಯೆ ಪ್ರಕಟಿಸಲು ಸೂಚನೆ

ಸಮಗ್ರ ನ್ಯೂಸ್: ನಾಳೆ ಮಾರ್ಚ್ 16 ರೊಳಗೆ ಎಲ್ಲಾ ಚುನಾವಣಾ ಬಾಂಡ್‌ಗಳಲ್ಲಿನ ಸಂಖ್ಯೆಗಳನ್ನು ಪ್ರಕಟಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ. ಈ ಸಂಖ್ಯೆಗಳು ದಾನಿಗಳು ಮತ್ತು ರಾಜಕೀಯ ಪಕ್ಷಗಳ ನಡುವಿನ ಸಂಪರ್ಕವನ್ನು ಬಹಿರಂಗಪಡಿಸುತ್ತವೆ. ಅಂದರೆ ಯಾರು ದೇಣಿಗೆ ನೀಡಿದರು ನಿರ್ದಿಷ್ಟವಾಗಿ ಯಾವ ಪಕ್ಷಕ್ಕೆ ನೀಡಿದರು ಎಂಬ ಮಾಹಿತಿ ಗೊತ್ತಾಗಲಿದೆ. ಮಾರ್ಚ್ 12 ರಂದು, ಎಸ್‌ಬಿಐ ಬಾಂಡ್‌ಗಳ ದಾಖಲೆಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ (ECI) ಸಲ್ಲಿಸಿತ್ತು. ಎಸ್‌ಬಿಐ ಬಾಂಡ್

ಚುನಾವಣಾ ಬಾಂಡ್ ಗಳ ಸಮಗ್ರ ವರದಿ ನೀಡಲು SBI ಗೆ ಸುಪ್ರೀಂ ಆದೇಶ| ಮಾ.16ರೊಳಗೆ ಎಲ್ಲಾ ಬಾಂಡ್ ಗಳ ಸಂಖ್ಯೆ ಪ್ರಕಟಿಸಲು ಸೂಚನೆ Read More »

ನಾಳೆ ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಮಧ್ಯಾಹ್ನ 3 ಗಂಟೆಗೆ ಪ್ರೆಸ್ ಮೀಟ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಈಗಾಗಲೇ ಎಲ್ಲಾ ಪಕ್ಷಗಳು ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಆದರೆ ಚುನಾವಣೆ ದಿನಾಂಕಕ್ಕೆ ಮಾತ್ರ ಎಲ್ಲರೂ ಕಾಯುತ್ತಿದ್ದಾರೆ. ಲೋಕಸಭೆ ಚುನಾವಣಾ ದಿನಾಂಕವನ್ನು ಮಾ.16ರಂದು ಅಂದರೆ ನಾಳೆ ಘೋಷಣೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಚುನಾವಣಾ ಆಯೋಗದ ನೂತನ ಆಯುಕ್ತರು, ನಾಳೆ ಸಂಜೆ 3.00 ಗಂಟೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ.

ನಾಳೆ ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್| ಮಧ್ಯಾಹ್ನ 3 ಗಂಟೆಗೆ ಪ್ರೆಸ್ ಮೀಟ್ Read More »

ಇಂದಿನಿಂದ ಪೇಟಿಎಂ ಸೇವೆ ಸಂಪೂರ್ಣ ಬಂದ್| UPI ಸೇವೆಗಳು ಮುಂದುವರಿಕೆ

ಸಮಗ್ರ ನ್ಯೂಸ್: ಕೆವೈಸಿ ದಾಖಲಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕಿಗೆ ಆರ್‌ಬಿಐ ನಿಷೇಧ ಹೇರಿದ್ದು, ಮಾರ್ಚ್ 15 ರಿಂದ ಎಲ್ಲಾ ಸೇವೆಗಳ ಮೇಲಿನ ನಿರ್ಬಂಧ ಜಾರಿಗೆ ಬರಲಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಖಾತೆ ಮತ್ತು ಫಾಸ್ಟ್ ಟ್ಯಾಗ್ ಸೇರಿದಂತೆ ವಿವಿಧ ವ್ಯಾಲೆಟ್ ಗಳಲ್ಲಿ ಹಣವಿದ್ದರೆ ಅದು ಖಾಲಿಯಾಗುವವರೆಗೆ ಬಳಸಬಹುದು. ಆದರೆ, ಅವುಗಳಿಗೆ ಮತ್ತೆ ರಿಚಾರ್ಜ್ ಮಾಡಲು ಅವಕಾಶ ಇರುವುದಿಲ್ಲ. ಫೆಬ್ರವರಿ 29ರಂದೇ ತನ್ನ ಎಲ್ಲಾ ಸೇವೆ ನಿಲ್ಲಿಸುವಂತೆ ಆರ್‌ಬಿಐ ಆದೇಶ ನೀಡಿ ನಂತರ ಮಾರ್ಚ್ 14ರವರೆಗೂ

ಇಂದಿನಿಂದ ಪೇಟಿಎಂ ಸೇವೆ ಸಂಪೂರ್ಣ ಬಂದ್| UPI ಸೇವೆಗಳು ಮುಂದುವರಿಕೆ Read More »

ಸಲಿಂಗ ವಿವಾಹ ನಿರಾಕರಿಸುವುದು ಅಸಂವಿಧಾನಿಕ/ ಜಪಾನ್ ಹೈಕೋರ್ಟ್ ಅಭಿಪ್ರಾಯ

ಸಮಗ್ರ ನ್ಯೂಸ್: ಸರ್ಕಾರ, ಸಲಿಂಗ ವಿವಾಹಕ್ಕೆ ಅವಕಾಶ ನೀಡಲು ಇರುವ ಕಾನೂನು ತೊಡಕುಗಳನ್ನು ನಿವಾರಿಸಲು ತುರ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಜಪಾನ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸಲಿಂಗ ವಿವಾಹ ನಿರಾಕರಿಸುವುದು ಅಸಂವಿಧಾನಿಕ. ಪ್ರಸ್ತುತ ವಿವಾಹ ಕಾನೂನನ್ನು ರದ್ದುಗೊಳಿಸುವ ಅಧಿಕಾರ ನ್ಯಾಯಾಲಯಕ್ಕೆ ಇಲ್ಲ. ಕಾನೂನನ್ನು ಪರಿಷ್ಕರಿಸದ ಹೊರತು ಎಲ್‍ಜಿಬಿಟಿಕ್ಯು + ದಂಪತಿಗಳು ಅಥವಾ ಇತರ ರೀತಿಯ ವಿವಾಹಗಳಿಗೆ ಅನುಮತಿಸುವ ಹೊಸ ಕಾನೂನನ್ನು ಜಾರಿಗೊಳಿಸದ ಹೊರತು ಸರ್ಕಾರಿ ಕಚೇರಿಗಳು ಸಲಿಂಗ ದಂಪತಿಗಳಿಗೆ ವಿವಾಹ ಮಾನ್ಯತೆ ನಿರಾಕರಿಸುವುದನ್ನು ಮುಂದುವರಿಸಬಹುದಾಗಿದೆ ಎಂದು ಹೇಳಿದೆ. ಸಲಿಂಗಿ

ಸಲಿಂಗ ವಿವಾಹ ನಿರಾಕರಿಸುವುದು ಅಸಂವಿಧಾನಿಕ/ ಜಪಾನ್ ಹೈಕೋರ್ಟ್ ಅಭಿಪ್ರಾಯ Read More »

ಅಸಭ್ಯ ಮತ್ತು ಅಶ್ಲೀಲ ಮಾಹಿತಿಗಳಿರುವ 18 ಒಟಿಟಿ ಪ್ಲಾಟ್‌ಫಾರ್ಮ್‌ ನಿರ್ಬಂಧಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಅಶ್ಲೀಲ ಮತ್ತು ಅಸಭ್ಯ” ವಿಷಯವನ್ನು ಪ್ರದರ್ಶಿಸುತ್ತಿರುವ 18 ಒಟಿಟಿ ಪ್ಲಾಟ್‌ಫಾರ್ಮ್‌ಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನಿರ್ಬಂಧ ಮಾಡಿದೆ. ವಿವಿಧ ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳ ಸಮನ್ವಯದೊಂದಿಗೆ ಸಚಿವಾಲಯವು 19 ವೆಬ್‌ಸೈಟ್‌ಗಳು, ಗೂಗಲ್ ಪ್ಲೇ ಸ್ಟೋರ್‌ನಲ್ಲಿ (Google Play Store) ಏಳು ಮತ್ತು ಆಪಲ್ ಆಪ್ ಸ್ಟೋರ್‌ನಲ್ಲಿ ಮೂರು ಸೇರಿದಂತೆ 10 ಮೊಬೈಲ್ ಅಪ್ಲಿಕೇಶನ್‌ಗಳು ಮತ್ತು ಭಾರತದಲ್ಲಿ ಸಾರ್ವಜನಿಕ ಪ್ರವೇಶಕ್ಕಾಗಿ ನಿರ್ಬಂಧಿಸಲಾದ ಪ್ಲಾಟ್‌ಫಾರ್ಮ್‌ಗಳಿಗೆ ಸಂಬಂಧಿಸಿದ 57 ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿಷ್ಕ್ರಿಯಗೊಳಿಸಿದೆ. ಡ್ರೀಮ್ಸ್ ಫಿಲ್ಮ್ಸ್ (Dreams

ಅಸಭ್ಯ ಮತ್ತು ಅಶ್ಲೀಲ ಮಾಹಿತಿಗಳಿರುವ 18 ಒಟಿಟಿ ಪ್ಲಾಟ್‌ಫಾರ್ಮ್‌ ನಿರ್ಬಂಧಿಸಿದ ಕೇಂದ್ರ ಸರ್ಕಾರ Read More »

ದೆಹಲಿಯಲ್ಲಿ ಇಂದು ಕಿಸಾನ್ ಮದ್ದೂರ್ ಮಹಾಪಂಚಾಯತ್/ 30,000 ಕ್ಕೂ ಹೆಚ್ಚು ರೈತರು ಭಾಗವಹಿಸುವ ಸಾಧ್ಯತೆ

ಸಮಗ್ರ ನ್ಯೂಸ್: ಪಂಜಾಬ್ ಮತ್ತು ಹರಿಯಾಣದಲ್ಲಿ, ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿ ಸೇರಿದಂತೆ ಹಲವು ಬೇಡಿಕೆಗಳ ಜಾರಿಗಾಗಿ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ರೈತ ಸಂಘಟನೆಗಳು ಆಯೋಜಿಸಿರುವ ಕಿಸಾನ್ ಮದ್ದೂರ್ ಮಹಾಪಂಚಾಯತ್ ನಲ್ಲಿ 30,000 ಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಇದೆ. ಪಂಜಾಬ್ ಮತ್ತು ಹರಿಯಾಣದ ರೈತರು ಬುಧವಾರದಿಂದ ದೆಹಲಿಗೆ ಆಗಮಿಸುತ್ತಿದ್ದು, ಸುಮಾರು 800 ಟ್ರಕ್‍ಗಳು, ಬಸ್‍ಗಳು ಮತ್ತು ರೈಲುಗಳ ಮೂಲಕ ಈಗಾಗಲೇ ದೆಹಲಿಯನ್ನು ತಲುಪಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಯಲ್ಲಿ ಇಂದು ಕಿಸಾನ್ ಮದ್ದೂರ್ ಮಹಾಪಂಚಾಯತ್/ 30,000 ಕ್ಕೂ ಹೆಚ್ಚು ರೈತರು ಭಾಗವಹಿಸುವ ಸಾಧ್ಯತೆ Read More »

ಶ್ವಾನ ಪ್ರಿಯರಿಗೆ ಶಾಕಿಂಗ್ ನ್ಯೂಸ್/ 23 ನಾಯಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿ ನಿಷೇಧ

ಸಮಗ್ರ ನ್ಯೂಸ್: ದೇಶಾದ್ಯಂತ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ಪರಿಹಾರ ಕ್ರಮವಾಗಿ ಕೇಂದ್ರ ಸರ್ಕಾರವು 23 ನಾಯಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿಯನ್ನು ನಿಷೇಧಿಸಲಾಗಿದೆ. ಪಿಟ್‍ಬುಲ್ ಟೆರಿಯರ್, ಟೋಸಾ ಇನು, ಅಮೇರಿಕನ್ ಸ್ಟಾಫರ್ಡ್ ಶೈರ್ ಟೆರಿಯರ್, ಫಿಲಾ ಬ್ರೆಸಿಲಿರೊ, ಡೊಗೊ ಅಜೆರ್ಂಟಿನೋ, ಅಮೇರಿಕನ್ ಬುಲ್‍ಡಾಗ್, ಬೋರ್‍ಬೋಲ್, ಕಂಗಲ್, ಸೆಂಟ್ರಲ್ ಏಷ್ಯನ್ ಶೆಫರ್ಡ್ ಡಾಗ್, ಕಕೇಶಿಯನ್ ಶೆಫರ್ಡ್ ಡಾಗ್, ಸೌತ್ ರಷ್ಯನ್ ಶೆಫರ್ಡ್, ಟೊರ್ನ್‍ಜಾಕ್, ಟೊಸಪ್ಲಾನಿನಾಕ್, ಮಾಸ್ಟಿಫ್ಟ್, ರೊಟ್‍ವೀಲರ್, ಟೆರಿಯರ್‍ಗಳು, ರೊಡೇಸಿಯನ್ ರಿಡ್ಜ್ ಬ್ಯಾಕ್, ವುಲ್ಫ್ ಡಾಗ್ಸ್,

ಶ್ವಾನ ಪ್ರಿಯರಿಗೆ ಶಾಕಿಂಗ್ ನ್ಯೂಸ್/ 23 ನಾಯಿಗಳ ಆಮದು, ಮಾರಾಟ ಮತ್ತು ಸಂತಾನೋತ್ಪತ್ತಿ ನಿಷೇಧ Read More »

ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ: ಇಂದು ಮಧ್ಯರಾತ್ರಿಯಿಂದಲೆ ಪರಿಷ್ಕೃತ ದರ ಜಾರಿ

ಸಮಗ್ರ ನ್ಯೂಸ್: ವಾಹನ ಸವಾರರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್ ಗೆ 2 ರೂ ಇಳಿಕೆ ಮಾಡಿದೆ. ಇಂದು ಮಧ್ಯರಾತ್ರಿಯಿಂದಲೆ ಪರಿಷ್ಕೃತ ದರ ಜಾರಿಯಾಗಲಿದೆ. ಇಂದು ಬೆಂಗಳೂರು ನಗರದಲ್ಲಿ ಪೆಟ್ರೋಲ್ ಬೆಲೆ 101.94 ಹಾಗೆ ಡಿಸೇಲ್ ಬೆಲೆ 87.89 ಆಗಿದೆ. ನಾಳೆಯಿಂದ ತಲಾ 2 ರೂಪಾಯಿ ಇಳಿಕೆಯಾಗಲಿದೆ.

ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ: ಇಂದು ಮಧ್ಯರಾತ್ರಿಯಿಂದಲೆ ಪರಿಷ್ಕೃತ ದರ ಜಾರಿ Read More »

ನೂತನ ಚುನಾವಣಾ ಆಯುಕ್ತರ ಆಯ್ಕೆ/ ಮೋದಿ ನೇತೃತ್ವದಲ್ಲಿ ಮಾರ್ಚ್ 14 ರಂದು ಸಭೆ

ಸಮಗ್ರ ನ್ಯೂಸ್: ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ ಹಾಗೂ ಅನೂಪ್ ಚಂದ್ರ ಪಾಂಡೆ ರಾಜೀನಾಮೆ ಹಿನ್ನೆಲೆಯಲ್ಲಿ ಖಾಲಿ ಇರುವ ಎರಡು ಚುನಾವಣಾ ಆಯುಕ್ತರ ಹುದ್ದೆಗಳ ಭರ್ತಿ ಪ್ರಕ್ರಿಯೆ ಚುರುಕುಗೊಂಡಿದ್ದು, ಮಾ.14ರಂದು ಉನ್ನತಾಧಿಕಾರಿಗಳ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಉನ್ನತ ಮಟ್ಟದ ಚುನಾವಣಾ ಸಮಿತಿಯು ಚುನಾವಣಾ ಆಯೋಗವನ್ನು ಆಯ್ಕೆ ಮಾಡಲು ಮಾರ್ಚ್ 14 ರಂದು ಸಭೆ ನಡೆಸಲು ನಿರ್ಧರಿಸಿದೆ. ಮಾರ್ಚ್ 15 ರಂದು ಸಂಜೆ 6 ಗಂಟೆಗೆ ಸಭೆ ನಡೆಯಲಿದೆ ಎಂದು

ನೂತನ ಚುನಾವಣಾ ಆಯುಕ್ತರ ಆಯ್ಕೆ/ ಮೋದಿ ನೇತೃತ್ವದಲ್ಲಿ ಮಾರ್ಚ್ 14 ರಂದು ಸಭೆ Read More »