ರಾಷ್ಟ್ರೀಯ

ಮೈಚಾಂಗ್ ಚಂಡಮಾರುತ| ನೀರಿನಿಂದ ಮುಳುಗಿದ ರಸ್ತೆಗಳು

ಸಮಗ್ರ ನ್ಯೂಸ್: ಡಿ. 4ರಂದು ಮುಂಜಾನೆ ಉತ್ತರ ತಮಿಳುನಾಡಿಗೆ ಅಪ್ಪಳಿಸಲು ಮೈಚಾಂಗ್ ಚಂಡಮಾರುತವು ಸಜ್ಜಾಗುತ್ತಿದ್ದಂತೆ, ರಸ್ತೆಗಳು ನೀರಿನಿಂದ ಮುಳುಗಿದಂತೆ ಕಾರುಗಳು ತೇಲುತ್ತಿರುವುದನ್ನು ದೃಶ್ಯಗಳು ತೋರಿಸುತ್ತವೆ. ಸಾಮಾಜಿಕ ಮಾಧ್ಯಮ ಬಳಕೆದಾರರು ರಾಜ್ಯದ ಜಲಾವೃತ ಬೀದಿಗಳು ಮತ್ತು ವಿಮಾನ ನಿಲ್ದಾಣದ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. 12 ಗಂಟೆಗಳ ಅವಧಿಯಲ್ಲಿ “ಕರುಣೆಯಿಲ್ಲದ” ಮಳೆಯು ತಮ್ಮ ವಸತಿ ಪ್ರದೇಶಗಳನ್ನು ಮುಳುಗಿಸಿದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿದ್ದಾರೆ. ಮಂಗಳವಾರದಂದು ದಕ್ಷಿಣ ಆಂಧ್ರಪ್ರದೇಶಕ್ಕೆ ಅಪ್ಪಳಿಸಲಿರುವ ಮೈಚಾಂಗ್ ಚಂಡಮಾರುತ ಇಂದು ಉತ್ತರ ತಮಿಳುನಾಡಿಗೆ ಅಪ್ಪಳಿಸಿದೆ. ಈ ಕಾರಣದಿಂದಾಗಿ, […]

ಮೈಚಾಂಗ್ ಚಂಡಮಾರುತ| ನೀರಿನಿಂದ ಮುಳುಗಿದ ರಸ್ತೆಗಳು Read More »

ರಾಜ್ ಕೋಟ್ ಕೋಟೆಯಲ್ಲಿ ಶಿವಾಜಿ ಪ್ರತಿಮೆ/ ಪ್ರಧಾನಿ ಮೋದಿಯಿಂದ ಇಂದು ಅನಾವರಣ

ಛತ್ರಪತಿ ಶಿವಾಜಿ ಮಹಾರಾಜ್ ಅವರ ಪ್ರತಿಮೆಯನ್ನು ಮಹಾರಾಷ್ಟ್ರದ ಸಿಂಧುದುರ್ಗ್ ಜಿಲ್ಲೆಯ ರಾಜ್ಯೋಟ್ ಕೋಟೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದರು. ಛತ್ರಪತಿ ಶಿವಾಜಿ ಮಹಾರಾಜರ ಸಿಂಧುದುರ್ಗ್ ಕೋಟೆ ಸೇರಿದಂತೆ ಹಲವಾರು ಕರಾವಳಿ ಮತ್ತು ಸಮುದ್ರ ಕೋಟೆಗಳನ್ನು ನಿರ್ಮಿಸಿದ ಮರಾಠ ದೊರೆಯ ಶ್ರೀಮಂತ ಕಡಲ ಪರಂಪರೆಗೆ ಅವರು ಗೌರವ ಸಲ್ಲಿಸಿದರು.

ರಾಜ್ ಕೋಟ್ ಕೋಟೆಯಲ್ಲಿ ಶಿವಾಜಿ ಪ್ರತಿಮೆ/ ಪ್ರಧಾನಿ ಮೋದಿಯಿಂದ ಇಂದು ಅನಾವರಣ Read More »

ಮನೆಯ ಸಾಕು ಬೆಕ್ಕು ಕಚ್ಚಿ ತಂದೆ-ಮಗ ಸಾವು

ಸಮಗ್ರ ನ್ಯೂಸ್: ಮನೆಯಲ್ಲಿ ಸಾಕಿದ ಬೆಕ್ಕು ಕಚ್ಚಿದ ಪರಿಣಾಮ ತಂದೆ ಮತ್ತು ಮಗ ಡೆಡ್ಲಿ ರೆಬೀಸ್​ ಗೆ ಬಲಿಯಾಗಿದ್ದಾರೆ. ಮೃತರ ಮನೆಯ ಬೆಕ್ಕಿಗೆ ಹುಚ್ಚು ನಾಯಿಯೊಂದು ಕಚ್ಚಿತ್ತು. ಬಳಿಕ ಈ ಬೆಕ್ಕು ತನ್ನ ಮಾಲೀಕರಿಬ್ಬರಿಗೆ ಕಚ್ಚಿತ್ತು. ಕಚ್ಚಿದ ಒಂದು ವಾರದಲ್ಲಿ ಇಬ್ಬರೂ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಕಾನ್ಪುರ ನಗರದ ಅಕ್ಬರ್ ಪುರದಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಬೆಕ್ಕನ್ನು ಸಾಕಿದ್ದರು. ತುಂಬಾ ಮುದ್ದಿನಿಂದ ಬೆಕ್ಕನ್ನು ಸಾಕಿದ್ದರು. ಒಂದು ದಿನ ಆ ಬೆಕ್ಕಿಗೆ ಬೀದಿ ನಾಯಿಯೊಂದು ಕಚ್ಚಿತ್ತು.ಕಚ್ಚಿದ್ದ ಕೆಲವೇ ದಿನಗಳಲ್ಲಿ

ಮನೆಯ ಸಾಕು ಬೆಕ್ಕು ಕಚ್ಚಿ ತಂದೆ-ಮಗ ಸಾವು Read More »

ಐಷಾರಾಮಿ ಬಸ್ ಬೆಂಕಿಗಾಹುತಿ| ಓರ್ವ ಸಜೀವ ದಹನ

ಸಮಗ್ರ ನ್ಯೂಸ್: ಖಾಸಗಿ ಟ್ರಾವೆಲ್ಸ್ ಗೆ ಸೇರಿದ ಐಷಾರಾಮಿ ಬಸ್ ಭಸ್ಮಗೊಂಡ ಘಟನೆ ಆಂಧ್ರ ಪ್ರದೇಶದ ನಲ್ಲಗೊಂಡ-ಮರಿಗೂಡ ಬೈಪಾಸ್ ರಸ್ತೆ ಬಳಿ ಸಂಭವಿಸಿದೆ. ಶಾಕ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿಗೆ ಆಹುತಿಯಾದ ಬಸ್ ಶ್ರೀ ಕೃಷ್ಣ ಟ್ರಾವೆಲ್ಸ್ ಗೆ ಎಂಬ ಖಾಸಾಗಿ ಕಂಪೆನಿಗೆ ಸೇರಿದ್ದು ಎಂದು ಪೊಲೀಸರು ತಿಳಿಸಿದ್ದಾರೆ. ದುರ್ಘಟನೆಯಲ್ಲಿ ಒಬ್ಬ ಪ್ರಯಾಣಿಕ ಪ್ರಾಣ ಕಳೆದುಕೊಂಡಿದ್ದು, ದುರ್ಘಟನೆ ಸಂದರ್ಭ ಬಸ್ಸಿನಲ್ಲಿ 40 ಪ್ರಯಾಣಿಕರಿದ್ದರು ಎನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ವಸ್ತುಗಳು, ಪ್ರಮುಖ ದಾಖಲೆಗಳು ಸುಟ್ಟು ಕರಕಲಾಗಿದೆ. ಸಹಾಯಕ್ಕಾಗಿ

ಐಷಾರಾಮಿ ಬಸ್ ಬೆಂಕಿಗಾಹುತಿ| ಓರ್ವ ಸಜೀವ ದಹನ Read More »

ಭಾರತೀಯ ಸೇನಾ ತರಬೇತಿ ವಿಮಾನ ಪತನ

ಸಮಗ್ರ ನ್ಯೂಸ್: ಭಾರತೀಯ ವಾಯುಪಡೆಯ (ಐಎಎಫ್) ತರಬೇತಿ ವಿಮಾನವು ತೂಪ್ರಾನ್‌ನ ರಾವೆಲ್ಲಿ ಗ್ರಾಮದ ಹೊರವಲಯದಲ್ಲಿ ಸೋಮವಾರ ಬೆಳಗ್ಗೆ ಪತನಗೊಂಡಿದೆ. ವಿಮಾನದಲ್ಲಿ ಎಷ್ಟು ಮಂದಿ ಇದ್ದರು ಎಂಬುದು ತಕ್ಷಣಕ್ಕೆ ಖಚಿತವಾಗಿಲ್ಲ. ಅಪಘಾತದ ನಂತರ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ವಿಮಾನವು ಸುಟ್ಟು ಬೂದಿಯಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಐಎಎಫ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೈಲಟ್ ವಿಮಾನದಿಂದ ಹೊರಗೆ ಜಿಗಿದಿದ್ದಾರೆಯೇ ಎಂಬುದು ಪೊಲೀಸರಿಗೆ ಖಚಿತವಾಗಿಲ್ಲ.

ಭಾರತೀಯ ಸೇನಾ ತರಬೇತಿ ವಿಮಾನ ಪತನ Read More »

‘ತ್ರಿ’ ವಿಕ್ರಮ ಮೆರೆದ ಬಿಜೆಪಿ| ದೇಶಕ್ಕೆ ಮೋದಿಯೇ ಗ್ಯಾರಂಟಿ ಟ್ರೆಂಡ್| ಕಾಂಗ್ರೆಸ್ ಗೆ ಸಿಹಿಗಿಂತ ಕಹಿಯೇ ಜಾಸ್ತಿ

ಸಮಗ್ರ ನ್ಯೂಸ್: ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಬಿಜೆಪಿ ನಾಯಕರು ದೇಶಕ್ಕೆ “ಮೋದಿಯೇ ಗ್ಯಾರಂಟಿ” ಎಂದು ಪೋಸ್ಟರ್‌ ಹಂಚಿಕೊಳ್ಳುತ್ತಿದ್ದಾರೆ. ಲೋಕಸಭೆಗೆ ಚುನಾವಣೆ ನಡೆಯುವ ಮುನ್ನದ ಸೆಮಿಫೈನಲ್‌ ಎಂದೇ ಬಿಂಬಿತವಾಗಿದ್ದ ಮೂರು ರಾಜ್ಯಗಳಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸುತ್ತಿದ್ದಂತೆಯೇ ಸಾಮಾಜಿಕ ಜಾಲತಾಣದಲ್ಲಿ #ModikiGuarantee ಟ್ರೆಂಡ್‌ ಆಗಿದೆ. ಬಿಜೆಪಿ ನಾಯಕರು ದೇಶಕ್ಕೆ ಮೋದಿಯೇ ಗ್ಯಾರಂಟಿ ಎಂದು ಪೋಸ್ಟರ್‌ ಹಂಚಿಕೊಳ್ಳುತ್ತಿದ್ದಾರೆ. ಕರ್ನಾಟಕ ಚುನಾವಣೆಯಲ್ಲಿ ಯಶಸ್ವಿ ಆಗುತ್ತಿದ್ದಂತೆ ಕಾಂಗ್ರೆಸ್‌ ಈಗ ನಡೆಯುತ್ತಿರುವ ಚುನಾವಣಾ ರಾಜ್ಯಗಳಲ್ಲಿ

‘ತ್ರಿ’ ವಿಕ್ರಮ ಮೆರೆದ ಬಿಜೆಪಿ| ದೇಶಕ್ಕೆ ಮೋದಿಯೇ ಗ್ಯಾರಂಟಿ ಟ್ರೆಂಡ್| ಕಾಂಗ್ರೆಸ್ ಗೆ ಸಿಹಿಗಿಂತ ಕಹಿಯೇ ಜಾಸ್ತಿ Read More »

ತೆಲಂಗಾಣ ಸಿಎಂ ಆಗಿ ನಾಳೆ ರೇವಂತ್ ರೆಡ್ಡಿ ಪ್ರಮಾಣವಚನ

ಸಮಗ್ರ ನ್ಯೂಸ್: ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅದು ನಾಳೆ ಸರಳ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ಹೈದರಾಬಾದ್ನ ಎಲ್ಬಿ ಸ್ಟೇಡಿಯಂನಲ್ಲಿ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಈ ನಿಟ್ಟಿನಲ್ಲಿ ವ್ಯವಸ್ಥೆ ಮಾಡುವಂತೆ ರೇವಂತ್ ರೆಡ್ಡಿ ಡಿಜಿಪಿ ಅಂಜನಿ ಕುಮಾರ್ ಅವರಿಗೆ ನಿರ್ದೇಶನ ನೀಡಿದರು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಾಕಷ್ಟು ವ್ಯವಸ್ಥೆ ಮಾಡುವಂತೆ ಅಂಜನಿ ಕುಮಾರ್ ಅವರಿಗೆ ಸೂಚಿಸಲಾಗಿದೆ. ಶೀಘ್ರದಲ್ಲೇ ರಾಜ್ಯಪಾಲರನ್ನು ಭೇಟಿ ಮಾಡುವುದಾಗಿ ಅವರು ಹೇಳಿದರು. ಡಿಜಿಪಿ ಮತ್ತು ಹೆಚ್ಚುವರಿ ಡಿಜಿಗಳಾದ ಎಸ್.ಕೆ.ಜೈನ್

ತೆಲಂಗಾಣ ಸಿಎಂ ಆಗಿ ನಾಳೆ ರೇವಂತ್ ರೆಡ್ಡಿ ಪ್ರಮಾಣವಚನ Read More »

ಪಿಒಕೆ ಯಲ್ಲಿ ಪ್ರಯಾಣಿಕರ ಬಸ್ ಮೇಲೆ ಗುಂಡಿನ ದಾಳಿ| 8 ಮಂದಿ ಸಾವು, 26 ಮಂದಿಗೆ ಗಾಯ

ಸಮಗ್ರ ನ್ಯೂಸ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್ ಬಾಲ್ಟಿಸ್ತಾನದಲ್ಲಿ ಪ್ರಯಾಣಿಕರ ಬಸ್ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 26 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಚಿಲಾಸ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಉಪ ಆಯುಕ್ತ ಡಯಾಮರ್ ಕ್ಯಾಪ್ಟನ್ (ನಿವೃತ್ತ) ಆರಿಫ್ ಅಹ್ಮದ್ ಅವರನ್ನು ಉಲ್ಲೇಖಿಸಿ ವರದಿಯಲ್ಲಿ ತಿಳಿಸಲಾಗಿದ್ದು, ಅಪರಿಚಿತ ದಾಳಿಕೋರರು ಪ್ರಯಾಣಿಕರ ಬಸ್ ಮೇಲೆ ಗುಂಡು ಹಾರಿಸಿದ್ದಾರೆ. ಈ ನಡುವೆ ಚಿಲಾಸ್ ಬಳಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ

ಪಿಒಕೆ ಯಲ್ಲಿ ಪ್ರಯಾಣಿಕರ ಬಸ್ ಮೇಲೆ ಗುಂಡಿನ ದಾಳಿ| 8 ಮಂದಿ ಸಾವು, 26 ಮಂದಿಗೆ ಗಾಯ Read More »

ವಾಟ್ಸಾಪ್ ಪ್ಲಾಟ್‍ಫಾರ್ಮ್ ವಿರುದ್ಧ ನಿಂದನೆ/ 75 ಲಕ್ಷ ಖಾತೆಗಳನ್ನು ನಿಷೇಧಿಸಿದ ಮೆಟಾ

ಸಮಗ್ರ ನ್ಯೂಸ್: ವಾಟ್ಸಾಪ್ ಪ್ಲಾಟ್‍ಫಾರ್ಮ್ ವಿರುದ್ಧದ ನಿಂದನೆಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಭಾರತದಲ್ಲಿ ಮೆಟಾ-ಮಾಲೀಕತ್ವದ ವಾಟ್ಸಾಪ್ 75 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿದೆ. 75,48,000 ವಾಟ್ಸಾಪ್ ಖಾತೆಗಳನ್ನು ಅಕ್ಟೋಬರ್ 1 ಮತ್ತು ಅಕ್ಟೋಬರ್ 31ರ ನಡುವೆ ನಿಷೇಧಿಸಲಾಗಿದ್ದು, ಈ ಪೈಕಿ 19,19,000 ಬಳಕೆದಾರರನ್ನು ಈಗಾಗಲೇ ದೂರುಗಳಿಂದ ನಿಷೇಧಿಸಲಾಗಿದೆ ಎಂದು ಕಂಪನಿಯು ತನ್ನ ಮಾಸಿಕ ವರದಿಯಲ್ಲಿ ತಿಳಿಸಿದೆ. ಅತ್ಯಂತ ಜನಪ್ರಿಯ ಮೆಸೇಜಿಂಗ್ ಪ್ಲಾಟ್‍ಫಾರ್ಮ್ ಆಗಿರುವ ವಾಟ್ಸಾಪ್ ದೇಶದಲ್ಲಿ ಸುಮಾರು 500 ಮಿಲಿಯನ್ ಬಳಕೆದಾರರನ್ನು ಹೊಂದಿದ್ದು, ಅಕ್ಟೋಬರ್‍ನಲ್ಲಿ ದೇಶದಲ್ಲಿ 9,063 ದೂರು

ವಾಟ್ಸಾಪ್ ಪ್ಲಾಟ್‍ಫಾರ್ಮ್ ವಿರುದ್ಧ ನಿಂದನೆ/ 75 ಲಕ್ಷ ಖಾತೆಗಳನ್ನು ನಿಷೇಧಿಸಿದ ಮೆಟಾ Read More »

ಪಾಕ್ ಪರ ಘೋಷಣೆ ಕೂಗಿದ ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಪಾಕಿಸ್ತಾನ​ ಪರ ಘೋಷಣೆ ಕೂಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನಾಯತ್​ವುಲ್ಲಾ ಖಾನ್ ಹಾಗೂ ಸೈಯದ್ ಮುಬಾರಕ್ ಬಂಧಿತ ಆರೋಪಿಗಳು. ಬೆಂಗಳೂರಿನ ಜೆಪಿ ನಗರದ ಪಬ್‌ವೊಂದರಲ್ಲಿ ಭಾರತ-ಆಸ್ಟ್ರೇಲಿಯಾ ತಂಡದ ನಡುವೆ ಟಿ20 ಪಂದ್ಯ ವೀಕ್ಷಣೆ ಮಾಡುತ್ತಿದ್ದ ವೇಳೆ ಇಬ್ಬರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದರು. ಘಟನೆಗೆ ಸಂಬಂಧಿಸಿ ಪಬ್​ನಲ್ಲಿದ್ದವರು ಜೆ.ಪಿ.ನಗರ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇನಾಯತ್​ವುಲ್ಲಾ ಖಾನ್, ಸೈಯದ್ ಮುಬಾರಕ್​ನನ್ನು ಬಂಧಿಸಿದ್ದಾರೆ.

ಪಾಕ್ ಪರ ಘೋಷಣೆ ಕೂಗಿದ ಇಬ್ಬರು ಅರೆಸ್ಟ್ Read More »