ರಾಷ್ಟ್ರೀಯ

ಜಿಎಸ್ಟಿ ವಂಚನೆ ಆರೋಪ| ಅದಾನಿ ಗ್ರೂಪ್ಸ್ ಮೇಲೆ‌ ಅಧಿಕಾರಿಗಳಿಂದ ದಾಳಿ

ಸಮಗ್ರ ನ್ಯೂಸ್: ಜಿಎಸ್‌ಟಿ ಜಮಾ ಮಾಡಿಲ್ಲ ಎಂಬ ಆರೋಪದಡಿ ಗೌತಮ್​ ಅದಾನಿ ಒಡೆತನದ ಅದಾನಿ ಕಂಪನಿ ಮೇಲೆ ರಾಜ್ಯ ಅಬಕಾರಿ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಮಾಚಲ ಪ್ರದೇಶ ರಾಜ್ಯ ತೆರಿಗೆ ಇಲಾಖೆಯು ಪರ್ವಾನೂರಿನಲ್ಲಿರುವ ಅದಾನಿ ಕಂಪನಿ ಮೇಲೆ ದಾಳಿ ಮಾಡಿದೆ. ಬುಧವಾರದಂದು ರಾತ್ರಿ ವೇಳೆ ಹಿಮಾಚಲ ಪ್ರದೇಶದಲ್ಲಿರುವ ಅದಾನಿ ವಿಲ್ಮಾರ್ ಗ್ರೂಪ್​ನ ಸಿ ಆಯಂಡ್​ ಎಫ್​ ಸ್ಟೋರ್​ಗಳ ಮೇಲೆ ​ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ, ಕಳೆದ 5 ವರ್ಷದಿಂದ ಸರಕು ಮತ್ತು […]

ಜಿಎಸ್ಟಿ ವಂಚನೆ ಆರೋಪ| ಅದಾನಿ ಗ್ರೂಪ್ಸ್ ಮೇಲೆ‌ ಅಧಿಕಾರಿಗಳಿಂದ ದಾಳಿ Read More »

ಉತ್ತರಾಖಂಡ್, ಜೋಶಿಮಠದಲ್ಲಿ ಭಾರೀ ಭೂಕಂಪ‌ ಸಾಧ್ಯತೆ – NGRI

ಸಮಗ್ರ ನ್ಯೂಸ್: ಜೋಶಿಮಠ ಸೇರಿ ಉತ್ತರಾಖಂಡದಲ್ಲಿ ಭಾರಿ ಭೂಕಂಪ ಸಾಧ್ಯತೆ ಇದೆ ಎಂದು NGRI ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಭೂಕುಸಿತ ಸಂಭವಿಸಿದ್ದ ಜೋಶಿಮಠ ಸೇರಿದಂತೆ ಉತ್ತರಾಖಂಡ ರಾಜ್ಯದ ಹಲವೆಡೆ ಭವಿಷ್ಯದಲ್ಲಿ ಭಾರಿ ಭೂಕಂಪ ಸಂಭವಿಸಲಿದೆ ಎಂದು ಹೈದರಾಬಾದ್ ಮೂಲದ ಸಿಎಸ್ಐಆರ್-ರಾಷ್ಟ್ರೀಯ ಭೌಗೋಳಿಕ ಸಂಶೋಧನಾ ಸಂಸ್ಥೆಯ(ಎನ್ ಜಿಆರ್ ಐ) ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಉತ್ತರಾಖಂಡವನ್ನು ಭೂಕಂಪ ವಲಯ ಎಂದು ಗುರುತಿಸಲಾಗಿದ್ದು, 9,000ಕ್ಕೂ ಅಧಿಕ ಜನರ ಸಾವಿಗೆ ಕಾರಣವಾಗಿರುವ ಟರ್ಕಿ– ಸಿರಿಯಾದಲ್ಲಿ ಸಂಭವಿಸಿದ ಭೂಕಂಪದ ಸಂದರ್ಭದಲ್ಲೇ ಈ ಎಚ್ಚರಿಕೆ

ಉತ್ತರಾಖಂಡ್, ಜೋಶಿಮಠದಲ್ಲಿ ಭಾರೀ ಭೂಕಂಪ‌ ಸಾಧ್ಯತೆ – NGRI Read More »

ಮೋದಿ ಅದಾನಿಯನ್ನು ರಕ್ಷಿಸುತ್ತಿದ್ದಾರೆ | ಸಂಸತ್ತಿನಲ್ಲಿ ರಾಹುಲ್ ಗಾಂಧಿ ಹೇಳಿಕೆ

ಸಮಗ್ರ ನ್ಯೂಸ್: ಅದಾನಿ ವಿವಾದದ ಬಗ್ಗೆ ಯಾವುದೇ ತನಿಖೆಯ ಪ್ರಸ್ತಾಪವಿಲ್ಲದ ಕಾರಣ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಉದ್ಯಮಿ ಗೌತಮ್ ಅದಾನಿ ಅವರನ್ನ ಪ್ರಧಾನಿ ಮೋದಿ ರಕ್ಷಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದರು. ‘ಪ್ರಧಾನಿಯವರ ಭಾಷಣದಿಂದ ನನಗೆ ತೃಪ್ತಿಯಾಗಿಲ್ಲ. ವಿಚಾರಣೆಯ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಅವರು (ಗೌತಮ್ ಅದಾನಿ) ಸ್ನೇಹಿತನಲ್ಲದಿದ್ದರೆ, ಅವರು (ಪ್ರಧಾನಿ) ತನಿಖೆ ನಡೆಸಬೇಕೆಂದು

ಮೋದಿ ಅದಾನಿಯನ್ನು ರಕ್ಷಿಸುತ್ತಿದ್ದಾರೆ | ಸಂಸತ್ತಿನಲ್ಲಿ ರಾಹುಲ್ ಗಾಂಧಿ ಹೇಳಿಕೆ Read More »

2004-2014 ಹಗರಣಗಳ‌ ದಶಕ| ಕಾಂಗ್ರೆಸ್ ವಿರುದ್ದ ಸಂಸತ್ತಿನಲ್ಲಿ ಪ್ರಧಾನಿ ವಾಗ್ದಾಳಿ

ಸಮಗ್ರ ನ್ಯೂಸ್: ಬಜೆಟ್​ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಮಾಡಿದ್ದ ಭಾಷಣದ ಮೇಲಿನ ವಂದನಾ ನಿರ್ಣಯದಲ್ಲಿ ಪಾಲ್ಗೊಂಡು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ಟೀಕಾಪ್ರಹಾರ ಎಸಗಿದರು. ಈ ಸಂದರ್ಭದಲ್ಲಿ ಅವರು ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸುತ್ತಾ ಕಾಂಗ್ರೆಸ್​ ವಿರುದ್ಧ ಟೀಕಾಪ್ರಹಾರ ನಡೆಸಿದರು. ಯುಪಿಎ ಸರ್ಕಾರದ ಅವಧಿಯ ಆಡಳಿತವನ್ನು ಪ್ರಸ್ತಾಪಿಸಿ, “ಆ 10 ವರ್ಷಗಳಲ್ಲಿ ದೇಶದಲ್ಲಿ ಕೇವಲ ಹತ್ಯೆಗಳು, ಭಯೋತ್ಪಾದನೆ ಹಾಗು ಹಗರಣಗಳೇ ತುಂಬಿದ್ದವು. ಜಾಗತಿಕ ವೇದಿಕೆಯಲ್ಲಿ ಭಾರತದ ಧ್ವನಿ

2004-2014 ಹಗರಣಗಳ‌ ದಶಕ| ಕಾಂಗ್ರೆಸ್ ವಿರುದ್ದ ಸಂಸತ್ತಿನಲ್ಲಿ ಪ್ರಧಾನಿ ವಾಗ್ದಾಳಿ Read More »

ಕುತೂಹಲ ಮೂಡಿಸಿದ‌ ಮೈಲಾರ ಗೊರವಯ್ಯನ ಕಾರ್ಣಿಕ ನುಡಿ| ಅಂಬಲಿ ಹಳಸೀತು, ಕಂಬಳಿ ಬೀಸಿತಲೇ ಎಂದ ಗೊರವಯ್ಯ| ಏನಿದರ ಒಳ ಮರ್ಮ?

ಸಮಗ್ರ ನ್ಯೂಸ್: ತೀವ್ರ ಕೂತುಹಲ ಕೆರಳಿಸಿದ್ದ ಈ ಬಾರಿಯ ಮೈಲಾರ ಕಾರ್ಣಿಕೋತ್ಸವವನ್ನು ಮಂಗಳವಾರ ಗೊರವಯ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್ ಎಂಬ ದೈವನುಡಿ ಎಲ್ಲರಲ್ಲೂ ಕುತೂಹಲ ಮೂಡಿಸಿದೆ. ಅನ್ನದಾತರಿಗೆಲ್ಲಾ ಆನಂದ ತಂದಿದ್ದರೆ, ರಾಜಕೀಯ ಪಕ್ಷಗಳಲ್ಲಿ ಚರ್ಚೆ ಹುಟ್ಟು ಹಾಕಿದೆ. ದಕ್ಷಿಣ ಭಾರತದಲ್ಲಿ ಪ್ರಖ್ಯಾತಿ ಹೊಂದಿರುವ ಐತಿಹಾಸಿಕ ಸುಕ್ಷೇತ್ರ ಮೈಲಾರ ಕಾರ್ಣಿಕೋತ್ಸವ ಅದ್ದೂರಿಯಾಗಿ ಜರುಗಿತು. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ಭಂಡಾರದ ಒಡೆಯ ದೈವವಾಣಿಯನ್ನು ಲಕ್ಷಾಂತರ ಜನರು ಆಲಿಸಿದರು‌. ಭರತ ಹುಣ್ಣಿಮೆ ನಂತರ

ಕುತೂಹಲ ಮೂಡಿಸಿದ‌ ಮೈಲಾರ ಗೊರವಯ್ಯನ ಕಾರ್ಣಿಕ ನುಡಿ| ಅಂಬಲಿ ಹಳಸೀತು, ಕಂಬಳಿ ಬೀಸಿತಲೇ ಎಂದ ಗೊರವಯ್ಯ| ಏನಿದರ ಒಳ ಮರ್ಮ? Read More »

ಮುಂದುವರಿದ ಮರಣ ಮೃದಂಗ| ಸಾವಿರದ ಗಡಿ ದಾಟಿದ ಸಾವಿನ ಸಂಖ್ಯೆ| ಕಂಪಿಸುತ್ತಲೇ ಇದೆ ಟರ್ಕಿ..!

ಸಮಗ್ರ ನ್ಯೂಸ್: ಟರ್ಕಿ ಹಾಗೂ ಸಿರಿಯಾದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ಭೂಕಂಪ ಸಂಭವಿಸಿದ್ದು ಮೃತಪಟ್ಟವರ ಸಂಖ್ಯೆ 1200ಕ್ಕೆ ಏರಿಕೆಯಾಗಿದ್ದು, ಪ್ರಬಲ ಭೂಕಂಪನದ ನಂತರ ಸುಮಾರು 40 ಬಾರಿ ಕಂಪನಗಳು ಸಂಭವಿಸಿವೆ. ಈಜಿಪ್ಟನ್ ನ ಸೈಪ್ರಸ್ ಎಂಬ ದ್ವೀಪದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದ್ದು, ಭೂಮಿಯಿಂದ 17.9 ಕಿ.ಮೀ. ಆಳದಲ್ಲಿ ಭೂಮಿ ನಡುಗಿದೆ. ಭೂಕಂಪನದಲ್ಲಿ ಟರ್ಕಿಯಲ್ಲಿ 1720ಕ್ಕೂ ಹೆಚ್ಚು ಕಟ್ಟಡಗಳು ಧರೆಗುರುಳಿದಿದ್ದು, 912 ಮಂದಿ ಮೃತಪಟ್ಟಿದ್ದಾರೆ. 8 ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. 130 ಕಟ್ಟಡಗಳು ಭಾಗಶಃ ಹಾನಿಯಾಗಿದ್ದರೆ,

ಮುಂದುವರಿದ ಮರಣ ಮೃದಂಗ| ಸಾವಿರದ ಗಡಿ ದಾಟಿದ ಸಾವಿನ ಸಂಖ್ಯೆ| ಕಂಪಿಸುತ್ತಲೇ ಇದೆ ಟರ್ಕಿ..! Read More »

ಟರ್ಕಿ, ಸಿರಿಯಾದಲ್ಲಿ 7.8 ತೀವ್ರತೆಯ ಭೀಕರ ಭೂಕಂಪ| 100ಕ್ಕೂ ಹೆಚ್ಚು ಮಂದಿ ಸಾವು| ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ; ಅಪಾರ ಹಾನಿ

ಸಮಗ್ರ ನ್ಯೂಸ್: ಸೋಮವಾರ ಟರ್ಕಿ ಮತ್ತು ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪ 100ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದೆ. ಅನೇಕರು ಮಲಗಿದ್ದಾಗಲೇ ಕಟ್ಟಡಗಳು ನೆಲಚ್ಚಿದ್ದು ಭೂಮಿ ಸೈಪ್ರಸ್ ಮತ್ತು ಈಜಿಪ್ಟ್​ವರೆಗೆ ಕಂಪಿಸಿದೆ. ಟರ್ಕಿಯಲ್ಲಿನ ತುರ್ತು ಸೇವಾ ಅಧಿಕಾರಿಗಳು ಆರಂಭಿಕ ಸಾವಿನ ಸಂಖ್ಯೆಯನ್ನು 76 ಎಂದು ಹೇಳಿದ್ದು, ಇದು ಗಣನೀಯವಾಗಿ ಹೆಚ್ಚಾಗುವ ಸಾಧ್ಯತೆ ಇದೆ. ರಾತ್ರಿಯ ದುರಂತ, ಪ್ರಮುಖ ನಗರಗಳಲ್ಲಿ ಅನೇಕ ಕಟ್ಟಡಗಳು ನೆಲಸಮ ಆಗಿವೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಸಿರಿಯಾದ ಸರ್ಕಾರದ ನಿಯಂತ್ರಣ ಇರುವ ಭಾಗಗಳಲ್ಲಿ ಮತ್ತು

ಟರ್ಕಿ, ಸಿರಿಯಾದಲ್ಲಿ 7.8 ತೀವ್ರತೆಯ ಭೀಕರ ಭೂಕಂಪ| 100ಕ್ಕೂ ಹೆಚ್ಚು ಮಂದಿ ಸಾವು| ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ; ಅಪಾರ ಹಾನಿ Read More »

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ವಿಚಾರ| ಕೇಂದ್ರಕ್ಕೆ ನೊಟೀಸ್ ಜಾರಿ‌ ಮಾಡಿದ ಸುಪ್ರೀಂ

ಸಮಗ್ರ ನ್ಯೂಸ್: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು 2002ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. 2002 ರ ಗುಜರಾತ್ ಗಲಭೆ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ‘ಇಂಡಿಯಾ: ದಿ ಮೋದಿ ಕ್ವೆಷನ್’ ಲಿಂಕ್‌ಗಳನ್ನು ಸಾಮಾಜಿಕ ಜಾಲತಾಣಗಳಾದ ಟ್ವಿಟರ್, ಯೂಟ್ಯೂಬ್​ನಲ್ಲಿ ತೆಗೆದುಹಾಕುವ ನಿರ್ಧಾರದ ಕುರಿತು ದಾಖಲೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ವಿಚಾರ| ಕೇಂದ್ರಕ್ಕೆ ನೊಟೀಸ್ ಜಾರಿ‌ ಮಾಡಿದ ಸುಪ್ರೀಂ Read More »

9600 ಕೋಟಿ‌ ಭೂಹಗರಣ ಆರೋಪ| ರಾಬರ್ಟ್ ವಾದ್ರಾ, ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತಕ್ಕೆ ಬಿಜೆಪಿ ದೂರು

ಸಮಗ್ರ ನ್ಯೂಸ್: ಬೆಂಗಳೂರು ಮತ್ತು ಸುತ್ತಮುತ್ತಲಿನ 1,100 ಎಕರೆ ಭೂಮಿಯನ್ನು ಅಕ್ರಮವಾಗಿ 9,600 ಕೋಟಿ ರೂ. ಸ್ವಾಧೀನಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ವಿರುದ್ಧ ಕರ್ನಾಟಕ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್. ಈ ಸಂಬಂಧ ರಮೇಶ್ 120 ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಹಗರಣ ನಡೆದಿದೆ. ಅವರು

9600 ಕೋಟಿ‌ ಭೂಹಗರಣ ಆರೋಪ| ರಾಬರ್ಟ್ ವಾದ್ರಾ, ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತಕ್ಕೆ ಬಿಜೆಪಿ ದೂರು Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕೇರಳ, ತಮಿಳುನಾಡಿನಲ್ಲಿ ಭಾರೀ ಮಳೆ| ರಾಜ್ಯದಲ್ಲಿ ಮೋಡಕವಿದ ವಾತಾವರಣ|

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಶ್ರೀಲಂಕಾ, ಕೇರಳ, ಚೆನ್ನೈನಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯು ಇಂದೂ ಕೂಡ ಮುಂದುವರೆಯಲಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಿರುವರೂರು ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದಲ್ಲದೆ, ನಾಗಪಟ್ಟಣಂ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಶ್ರೀಲಂಕಾ, ತಮಿಳುನಾಡು ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇದೆ. ತಮಿಳುನಾಡು ಮತ್ತು

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕೇರಳ, ತಮಿಳುನಾಡಿನಲ್ಲಿ ಭಾರೀ ಮಳೆ| ರಾಜ್ಯದಲ್ಲಿ ಮೋಡಕವಿದ ವಾತಾವರಣ| Read More »