ರಾಷ್ಟ್ರೀಯ

ಪ್ರಧಾ‌ನಿ ಮೋದಿ ಮೇಲೆ ದಾಳಿ ಸಂಚು| ದ.ಕ ಜಿಲ್ಲೆ 16 ಕಡೆಗಳಲ್ಲಿ ಎನ್ಐಎ ಮಿಂಚಿನ ದಾಳಿ

ಸಮಗ್ರ ನ್ಯೂಸ್: ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿಂನಗಡಿ, ವೇಣೂರು ಸೇರಿದಂತೆ 16 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವರ ಮನೆ, ಕಚೇರಿ, ಆಸ್ಪತ್ರೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಇದೇ […]

ಪ್ರಧಾ‌ನಿ ಮೋದಿ ಮೇಲೆ ದಾಳಿ ಸಂಚು| ದ.ಕ ಜಿಲ್ಲೆ 16 ಕಡೆಗಳಲ್ಲಿ ಎನ್ಐಎ ಮಿಂಚಿನ ದಾಳಿ Read More »

ಆರೋಪ‌ ಸಾಬೀತಾದರೆ ಗಲ್ಲುಶಿಕ್ಷೆಗೆ ಸಿದ್ಧ| ಕುಸ್ತಿಪಟುಗಳ ಆಕ್ರೋಶದ ನಡುವೆ ಬ್ರಿಜ್ ಭೂಷಣ್ ಸಿಂಗ್ ಹೇಳಿಕೆ

ಸಮಗ್ರ ನ್ಯೂಸ್: ಲೈಂಗಿಕ ಕಿರುಕುಳದ ಆರೋಪದ ಮೇಲೆ WFI ಮುಖ್ಯಸ್ಥ ಬ್ರಿಜ್ ಭೂಷಣ್ ನನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನಾ ಕಾವು ಜೋರಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ (ಎಂಪಿ) ಮತ್ತು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸರಣ್ ಸಿಂಗ್ ಈ ಹೇಳಿಕೆಗಳಿಂದ ವಿಚಲಿತರಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಬ್ರಿಜ್ ಭೂಷಣ್, ‘ನಾನು ತಪ್ಪಿತಸ್ಥನಲ್ಲ. ನನ್ನ ಯಾವುದೇ ಸಣ್ಣ ಆರೋಪ ಸಾಬೀತಾದರೆ ಗಲ್ಲಿಗೇರಿಸಿ’ ಎಂದು ಹೇಳಿದರು. ಏತನ್ಮಧ್ಯೆ, ಕ್ರೀಡೆಯ ಅಂತರಾಷ್ಟ್ರೀಯ

ಆರೋಪ‌ ಸಾಬೀತಾದರೆ ಗಲ್ಲುಶಿಕ್ಷೆಗೆ ಸಿದ್ಧ| ಕುಸ್ತಿಪಟುಗಳ ಆಕ್ರೋಶದ ನಡುವೆ ಬ್ರಿಜ್ ಭೂಷಣ್ ಸಿಂಗ್ ಹೇಳಿಕೆ Read More »

ಪತನಗೊಂಡ ವಿಮಾನದಿಂದ ಕಾಣೆಯಾದ ಮಕ್ಕಳಿಗಾಗಿ ಮುಂದುವರಿದ ಶೋಧ| ತಿಂಗಳು ಕಳೆದರೂ ನಾಲ್ಕು ಮಕ್ಕಳು ಬದುಕಿ ಸಿಗುವರೆಂಬ ನಿರೀಕ್ಷೆ

ಸಮಗ್ರ ನ್ಯೂಸ್: ಸುಮಾರು ಒಂದು ತಿಂಗಳ ಹಿಂದೆ ಕೊಲಂಬಿಯಾದ ಅಮೆಜಾನ್ ಕಾಡಿನಲ್ಲಿ ವಿಮಾನವೊಂದು ಅಪಘಾತಕ್ಕೀಡಾಗಿತ್ತು. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ನಾಲ್ಕು ಮಕ್ಕಳ ಶವ ದೊರೆತಿರಲಿಲ್ಲ. ಅವರ ಜತೆ 11 ತಿಂಗಳ ಮಗು ಕೂಡ ಇತ್ತು ಎನ್ನಲಾಗಿದೆ. ಅರ್ಧ ತಿಂದಿರುವ ಹಣ್ಣು, ಮಗುವಿನ ಡೈಪರ್, ಒಂದು ಜತೆ ಶೂ ಪತ್ತೆಯಾಗಿದೆ. ಹಾಗಾಗಿ ಒಂದು ತಿಂಗಳಾದರೂ ಮಕ್ಕಳು ಬದುಕಿರಬಹುದು ಎನ್ನುವ ಭರವಸೆ ಒಂದೆಡೆ ಇದೆ. ಒಂದೊಮ್ಮೆ ಮೃತಪಟ್ಟಿದ್ದರೆ ಶ್ವಾನಗಳು ಅವರನ್ನು ಪತ್ತೆಹಚ್ಚುತ್ತವೆ. ಮೇ 1 ರಂದು ಕೊಲಂಬಿಯಾದ ಆಗ್ನೇಯದಲ್ಲಿ

ಪತನಗೊಂಡ ವಿಮಾನದಿಂದ ಕಾಣೆಯಾದ ಮಕ್ಕಳಿಗಾಗಿ ಮುಂದುವರಿದ ಶೋಧ| ತಿಂಗಳು ಕಳೆದರೂ ನಾಲ್ಕು ಮಕ್ಕಳು ಬದುಕಿ ಸಿಗುವರೆಂಬ ನಿರೀಕ್ಷೆ Read More »

ಧರೆಗುರುಳಿದ ಸಪ್ತರ್ಷಿಗಳು!! ಭೀಕರ ಗಾಳಿ ಮಳೆಗೆ ಭಾರೀ ಅನಾಹುತ; ಇಬ್ಬರ ಸಾವು

ಸಮಗ್ರ ನ್ಯೂಸ್: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿರುವ ಮಹಾಕಾಲ್ ಲೋಕ ಕಾರಿಡಾರ್ ಭಾನುವಾರ ಮಧ್ಯಾಹ್ನ ಬೀಸಿದ ಬಿರುಗಾಳಿಯಿಂದ ಸಪ್ತಋಷಿಗಳ ಪ್ರತಿಮೆಗಳಿಗೆ ಹಾನಿಯಾಗಿದೆ. ಏಳು ಪ್ರತಿಮೆಗಳಲ್ಲಿ ಆರು ಸ್ಥಳಾಂತರಗೊಂಡಿವೆ ಮತ್ತು ಎರಡು ಹಾನಿಗೊಳಗಾಗಿವೆ. ಇದರ ಜೊತೆಗೆ ಬಿರುಗಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಬಿರುಗಾಳಿಯಿಂದ ಪ್ರತಿಮೆಗಳಲ್ಲಿ ಕೆಲವು ನೆಲಕ್ಕೆ ಉರುಳಿದ್ದರಿಂದ ಕೈಗಳು ಮತ್ತು ತಲೆಗಳು ಮುರಿದಿವೆ. 2022 ರ ಅಕ್ಟೋಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ ಮಹಾಕಾಲ್ ಲೋಕ ದೇವಾಲಯದ ಕಾರಿಡಾರ್‌ನಲ್ಲಿ ಘಟನೆ ಸಂಭವಿಸಿದೆ. ದೇವಾಲಯದ ಕಾರಿಡಾರ್‌ನಲ್ಲಿ ಆರು ಪ್ರತಿಮೆಗಳನ್ನು

ಧರೆಗುರುಳಿದ ಸಪ್ತರ್ಷಿಗಳು!! ಭೀಕರ ಗಾಳಿ ಮಳೆಗೆ ಭಾರೀ ಅನಾಹುತ; ಇಬ್ಬರ ಸಾವು Read More »

ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರಿಂದ ದೌರ್ಜನ್ಯ| ಹಾಡುಹಗಲೇ ನಡೆಯಿತು ‘ಪ್ರಜಾಪ್ರಭುತ್ವದ ಕಗ್ಗೊಲೆ!’

ಸಮಗ್ರ ನ್ಯೂಸ್: ರಾಷ್ಟ್ರರಾಜಧಾನಿಯಲ್ಲಿ ಒಂದು ಕಡೆ ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನವನ್ನು ಉದ್ಘಾಟನಿಸಿದರೆ, ಮತ್ತೊಂದೆಡೆ ಜಂತರ್‌-ಮಂತರ್‌ನಲ್ಲಿ ಒಂದು ರೀತಿಯಲ್ಲಿ ಅರಾಜಕತೆ ಸೃಷ್ಟಿಯಾಗಿದೆ. ದೇಶಕ್ಕೆ ಪದಕ ಜಯಿಸಿದ ಭಜರಂಗ್ ಫೂನಿಯಾ, ವಿನೇಶ್ ಫೋಗಾಟ್, ಸಾಕ್ಷಿ ಮಲಿಕ್ ಸೇರಿದಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾರತೀಯ ಜನತಾ ಪಕ್ಷ(ಬಿಜೆಪಿ) ಸಂಸದ ಹಾಗೂ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರ ಮೇಲೆ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಕೂಡಲೇ

ಪ್ರತಿಭಟನಾ ನಿರತ ಕುಸ್ತಿಪಟುಗಳ ಮೇಲೆ ದೆಹಲಿ ಪೊಲೀಸರಿಂದ ದೌರ್ಜನ್ಯ| ಹಾಡುಹಗಲೇ ನಡೆಯಿತು ‘ಪ್ರಜಾಪ್ರಭುತ್ವದ ಕಗ್ಗೊಲೆ!’ Read More »

ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆ ನೀವು ನೋಡಿದ್ದೀರಾ?

ಸಮಗ್ರ ನ್ಯೂಸ್: ಕೆಲವರು ಚಿಪ್ಪು ಮತ್ತು ಮಾಂಸಕ್ಕಾಗಿ ಆಮೆಯನ್ನು ಕಳ್ಳ ಬೇಟೆಯಾಡುತ್ತಾರೆ. ಇದರಿಂದಾಗಿ ಈ ಪ್ರಾಣಿಯು ಅಳಿವಿನಂಚಿನಲ್ಲಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ. ಪ್ರಖ್ಯಾತ ವನ್ಯಜೀವಿಧಾಮ ಕಪ್ಪತಗುಡ್ಡದ ಅಂಚಿನಲ್ಲಿರುವ ಶೆಟ್ಟಿಕೆರೆಯಲ್ಲಿ ಅಪರೂಪದ ಆಮೆಯೊಂದು ಕಾಣಿಸಿಕೊಂಡಿದೆ. ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆ ಶೆಟ್ಟಿಕೆರೆಯಲ್ಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಕುತೂಹಲ ಹುಟ್ಟಿಸಿದೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶೆಟ್ಟಿಕೆರಿ ಗ್ರಾಮದಲ್ಲಿರುವ ಕಾಣಿಸಿಕೊಂಡಿರುವ ನಕ್ಷತ್ರ ಆಮೆ “ಟೆಸ್ಟುಡಿನಿಡೆ” ಕುಟುಂಬಕ್ಕೆ ಸೇರಿದೆ ಎಂದು ಹೇಳಲಾಗಿದೆ. ಇದರ ವೈಜ್ಞಾನಿಕ ಹೆಸರು “ಜಿಯೋಚಲೋನ್ ಎಲಗನ್ಸ್” ಎಂದಾಗಿದ್ದು ಇದರ

ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆ ನೀವು ನೋಡಿದ್ದೀರಾ? Read More »

ಸಾರ್ವಜನಿಕರೇ ಗಮನಿಸಿ‌‌‌…ಉಚಿತ ಆಧಾರ್ ಅಪ್ಡೇಟ್ ಗೆ ಜೂ.14ರವರೆಗೆ ಅವಕಾಶ

ಸಮಗ್ರ ನ್ಯೂಸ್: ಜೂನ್ 14 ರವರೆಗೆ ಉಚಿತ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಲು ಅವಕಾಶ ನೀಡಲಾಗಿದೆ. ಆಧಾರ್ ನಲ್ಲಿನ ಹೆಸರು, , ಫೋಟೋ, ಮೊಬೈಲ್ ಸಂಖ್ಯೆಯಂತಹ ಯಾವುದೇ ಮಾಹಿತಿಯನ್ನು ಅಪ್ಡೇಟ್ ಮಾಡಲು 50 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದರೆ, ಪ್ರಸ್ತುತ UIDAI ಈ ಎಲ್ಲ ತಿದ್ದುಪಡಿ ಸೇವೆಗಳನ್ನು ಜೂನ್ 14ರವರೆಗೆ ಉಚಿತವಾಗಿ ನೀಡಲಿದೆ. myAadhaar ಪೋರ್ಟಲ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅಪ್ಡೇಟ್ ಮಾಡಿದರೆ ಯಾವುದೇ ಶುಲ್ಕ ಇರುವುದಿಲ್ಲ. https://myaadhaar.uidai.gov.in/ ಗೆ ಭೇಟಿ ನೀಡಿ ವಿಳಾಸ

ಸಾರ್ವಜನಿಕರೇ ಗಮನಿಸಿ‌‌‌…ಉಚಿತ ಆಧಾರ್ ಅಪ್ಡೇಟ್ ಗೆ ಜೂ.14ರವರೆಗೆ ಅವಕಾಶ Read More »

ಕರಾವಳಿಯಲ್ಲಿ ಖಾಸಗಿ ಬಸ್ ಸೇವೆಗೆ ನಿಷೇಧದ ತೂಗುಗತ್ತಿ| ಕೋಮು ಸಾಮರಸ್ಯ ಕದಡಲು ಖಾಸಗಿ ಬಸ್ ಸಿಬ್ಬಂದಿ ಕಾರಣವಂತೆ!! ಹಿಂದುತ್ವದ ಪ್ಯಾಕ್ಟರಿಗೆ ‘ಕೈ’ ಹಾಕಿದ ಸರ್ಕಾರ?

ಸಮಗ್ರ ನ್ಯೂಸ್: ಮಂಗಳೂರು ನಗರ ಸೇರಿದಂತೆ ದಕ್ಷಿಣ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ಬಂದ್ ಮಾಡಿ ಸರಕಾರಿ ಬಸ್ ಸೇವೆಗೆ ಮಾತ್ರ ಅವಕಾಶ ನೀಡುವ ಕುರಿತು ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದಲ್ಲಿ ಚಿಂತನೆ ನಡೆದಿದೆ. ಕರಾವಳಿಯಲ್ಲಿ ಹರಡುತ್ತಿರುವ ಕೋಮುವಾದವನ್ನು ಮಟ್ಟಹಾಕುವ ಉದ್ದೇಶದಿಂದಲೇ ಖಾಸಗಿ ಬಸ್ ಸೇವೆ ರದ್ದು ಮಾಡಲು ಸರಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಕರಾವಳಿಯಲ್ಲಿ ಕೋಮುವಾದ ಬೆಳೆಯುವಲ್ಲಿ ಖಾಸಗಿ ಬಸ್ ವಲಯದ ಪಾತ್ರ ಇರುವುದು ಮತ್ತು ಕರಾವಳಿಯ ಖಾಸಗಿ ಬಸ್ ಮಾಫಿಯಾದ ಕಪಿಮುಷ್ಠಿ ದಿನದಿಂದ ದಿನಕ್ಕೆ

ಕರಾವಳಿಯಲ್ಲಿ ಖಾಸಗಿ ಬಸ್ ಸೇವೆಗೆ ನಿಷೇಧದ ತೂಗುಗತ್ತಿ| ಕೋಮು ಸಾಮರಸ್ಯ ಕದಡಲು ಖಾಸಗಿ ಬಸ್ ಸಿಬ್ಬಂದಿ ಕಾರಣವಂತೆ!! ಹಿಂದುತ್ವದ ಪ್ಯಾಕ್ಟರಿಗೆ ‘ಕೈ’ ಹಾಕಿದ ಸರ್ಕಾರ? Read More »

ಯುಪಿಎಸ್ ಸಿ ಫಲಿತಾಂಶ ಪ್ರಕಟ| ರಾಜ್ಯದ 35 ಮಂದಿ ಪಾಸ್| ಎಚ್.ಎಸ್ ಭಾವನಾ ಕರ್ನಾಟಕದ ಟಾಪರ್

ಸಮಗ್ರ ನ್ಯೂಸ್: ಕೇಂದ್ರ ಲೋಕ ಸೇವಾ ಆಯೋಗದ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆಗಳ 2022ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದ 35ಕ್ಕೂ ಅಧಿಕ ಅಭ್ಯರ್ಥಿಗಳು ರ‍್ಯಾಂಕ್‌ ಪಡೆದು ಸಾಧನೆ ಮಾಡಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಐಆರ್‌ಎಸ್‌ ಸೇವೆಯಲ್ಲಿರುವ ರಾಜ್ಯದ ಎಚ್‌.ಎಸ್‌.ಭಾವನಾ 55ನೇ ರ‍್ಯಾಂಕ್‌ ಪಡೆದು ರಾಜ್ಯದ ಟಾಪರ್‌ ಆಗಿದ್ದಾರೆ. ಭಾವನಾ ಅವರು ನಗರದ ಮೌಂಟ್‌ ಕಾರ್ಮೆಲ್‌ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಮುಗಿಸಿ ಬಳಿಕ ಯಲಹಂಕದ ವೆಂಕಟೇಶ್ವರ ಕಾಲೇಜಿನಲ್ಲಿ ಎಂಜಿನಿಯರಿಂಗ್‌ ಪೂರ್ಣಗೊಳಿಸಿದ್ದರು. ಐಎಎಸ್‌ ಅಧಿಕಾರಿ ಆಗಬೇಕು ಎಂದು ಯುಪಿಎಸ್‌ಸಿ ಪರೀಕ್ಷೆ

ಯುಪಿಎಸ್ ಸಿ ಫಲಿತಾಂಶ ಪ್ರಕಟ| ರಾಜ್ಯದ 35 ಮಂದಿ ಪಾಸ್| ಎಚ್.ಎಸ್ ಭಾವನಾ ಕರ್ನಾಟಕದ ಟಾಪರ್ Read More »

ಐತಿಹಾಸಿಕ ದಾಖಲೆ ನಿರ್ಮಿಸಿದ ಮಹೀಂದ್ರಾ ಥಾರ್ SUV| ಒಂದು ಲಕ್ಷ ವಾಹನ ಮಾರಾಟ ಸಾಧನೆ

ಸಮಗ್ರ ನ್ಯೂಸ್: ಮಹೀಂದ್ರಾ ಥಾರ್ ಎಸ್‍ಯುವಿಯು ಬಹಳ ವರ್ಷಗಳಿಂದ ದೇಶಿಯ ಮಾರುಕಟ್ಟೆಯಲ್ಲಿ ಜನಪ್ರಿಯ ಆಫ್-ರೋಡರ್ ಎಸ್‍ಯುವಿಯಾಗಿದೆ. ಸದ್ಯ ದೇಶಿಯ ಮಾರುಕಟ್ಟೆಯಲ್ಲಿರುವ ಪ್ರಸ್ತುತ ಜನರೇಷನ್ ಮಹೀಂದ್ರಾ ಥಾರ್ ಮಾದರಿಯು ಬಹುಬೇಡಿಯೊಂದಿಗೆ ಭರ್ಜರಿಯಾಗಿ ಮಾರಾಟವಾಗುತ್ತಿದೆ. ಇದರಿಂದ ಬೇಡಿಕೆ ಹೆಚ್ಚಾಗಿರುವುದರಿಂದ ಮಹೀಂದ್ರಾ ಥಾರ್ ಎಸ್‍ಯುವಿಯ ಕಾಯುವ ಅವಧಿಯು ಕೂಡ ಹೆಚ್ಚಾಗುತ್ತಿದೆ. ಇದೀಗ ಮಹೀಂದ್ರಾ ಥಾರ್ ಎಸ್‍ಯುವಿಯು 1 ಲಕ್ಷ ಮಾರಾಟವಾಗಿ ಹೊಸ ಮೈಲಿಗಲ್ಲು ದಾಖಲಿಸಿದೆ. 2020ರ ಆಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾದ ಈ ಆಫ್-ರೋಡ್ 1 ಲಕ್ಷ ಉತ್ಪಾದನಾ ಗಡಿಯನ್ನು ದಾಟಿದೆ ಮತ್ತು

ಐತಿಹಾಸಿಕ ದಾಖಲೆ ನಿರ್ಮಿಸಿದ ಮಹೀಂದ್ರಾ ಥಾರ್ SUV| ಒಂದು ಲಕ್ಷ ವಾಹನ ಮಾರಾಟ ಸಾಧನೆ Read More »