ರಾಷ್ಟ್ರೀಯ

ಬಿಹಾರದಲ್ಲಿ ಘನಘೋರ ರಸ್ತೆ ಅಪಘಾತ| ಟ್ರಕ್ ಹರಿದು 15 ಮಂದಿ ದುರ್ಮರಣ; ಹಲವರು ಗಂಭೀರ

ಸಮಗ್ರ ನ್ಯೂಸ್: ಜನವಸತಿ ಪ್ರದೇಶಕ್ಕೆ ಟ್ರಕ್ ನುಗ್ಗಿದ ಪರಿಣಾಮ 15 ಜನರು ಸಾವನ್ನಪ್ಪಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆ ಮೆಹನಾರ್‌ನಲ್ಲಿ ನಡೆದಿದೆ. ಘಟನೆಯಲ್ಲಿ 7 ಮಕ್ಕಳು ಸೇರಿ 15 ಜನ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಉಪವಿಭಾಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಶಾಲಿ ಜಿಲ್ಲೆಯ ದೇಸರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೇಗವಾಗಿ ಬಂದ ಟ್ರಕ್, ಮಕ್ಕಳ ಸಹಿತ ಹಲವರ ಮೇಲೆ ಹರಿದಿದೆ. ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ದುರ್ಘಟನೆಯನ್ನು ದುರಂತ ಎಂದು ಹೇಳಿದ್ದಾರೆ. ಮೃತರ […]

ಬಿಹಾರದಲ್ಲಿ ಘನಘೋರ ರಸ್ತೆ ಅಪಘಾತ| ಟ್ರಕ್ ಹರಿದು 15 ಮಂದಿ ದುರ್ಮರಣ; ಹಲವರು ಗಂಭೀರ Read More »

ಪ್ರತಿಷ್ಟಿತ ರಾಡಿಸನ್ ಬ್ಲೂ ಹೊಟೇಲ್ ಮಾಲಕ ಅಮಿತ್ ಜೈನ್ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಗಾಜಿಯಾಬಾದ್‌ ನ ಜನಪ್ರಿಯ ರಾಡಿಸನ್ ಬ್ಲೂ ಹೋಟೆಲ್‌ ನ ಮಾಲೀಕ ಅಮಿತ್ ಜೈನ್ ದೆಹಲಿಯ ಕಾಮನ್‌ ವೆಲ್ತ್ ವಿಲೇಜ್ ಪ್ರದೇಶದಲ್ಲಿನ ಅವರ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಮಾಂಡವಲಿ ಪೊಲೀಸ್ ಠಾಣೆಯ ಪೊಲೀಸ್ ನಿಯಂತ್ರಣ ಕೊಠಡಿಗೆ ಶನಿವಾರ ಕರೆ ಬಂದಿದ್ದು, ಕಾಮನ್‌ವೆಲ್ತ್ ಗೇಮ್ಸ್ ಗ್ರಾಮದಲ್ಲಿರುವ ತನ್ನ ಮನೆಯಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಕರೆ ಮಾಡಿದವರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಕೌಶಂಬಿಯಲ್ಲಿರುವ ರಾಡಿಸನ್ ಬ್ಲೂ

ಪ್ರತಿಷ್ಟಿತ ರಾಡಿಸನ್ ಬ್ಲೂ ಹೊಟೇಲ್ ಮಾಲಕ ಅಮಿತ್ ಜೈನ್ ಶವವಾಗಿ ಪತ್ತೆ Read More »

ಭಾರತದಲ್ಲಿ ಮತ್ತೆ ಹವಾ ಸೃಷ್ಟಿಸಲು ಬರುತ್ತಿದೆ ಇನೋವಾ ಹೈಕ್ರಾಸ್|ಹೇಗಿದೆ ಗೊತ್ತ..?

ಟೊಯೊಟಾ ಹಲವಾರು ಜನಪ್ರಿಯ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಇದೀಗ ಟೊಯೊಟಾ ಕಂಪನಿಯು ಹೊಸ ಇನೋವಾ ಹೈಕ್ರಾಸ್ ಕಾರನ್ನು ಇದೇ ತಿಂಗಳಿನಲ್ಲಿ ಬಿಡುಗಡೆ ಮಾಡಲು ಸಜ್ಜಾಗಿದೆ. ಟೊಯೊಟಾ ಮತ್ತೊಮ್ಮೆ ಬಹುನಿರೀಕ್ಷಿತ ಹೊಸ ಇನೋವಾ ಹೈಕ್ರಾಸ್‌ನ ಹೊಸ ಟೀಸರ್ ಅನ್ನು ಬಿಡುಗಡೆ ಮಾಡಿದ್ದು ನ. 25, ರಂದು ಭಾರತಕ್ಕೆ ಪಾದಾರ್ಪಣೆ ಮಾಡಲು ಯೋಜಿಸಲಾಗಿದೆ, ಹೊಸ ಟೊಯೋಟಾ ಹೈಕ್ರಾಸ್ ಮೊದಲ ಬಾರಿಗೆ ಇಂಡೋನೇಷ್ಯಾದಲ್ಲಿ ಮಾರಾಟವಾಗಲಿದೆ. ಹೊಸ ಟೀಸರ್‌ನೊಂದಿಗೆ, ಟೊಯೋಟಾ, “ಲೆಜೆಂಡ್ ತನ್ನನ್ನು ಹೊಸ HY ಗೆ ಏರಿಸಿಕೊಂಡಿದೆ, ಸ್ನಾಯುವಿನ SUV ನಿಲುವು

ಭಾರತದಲ್ಲಿ ಮತ್ತೆ ಹವಾ ಸೃಷ್ಟಿಸಲು ಬರುತ್ತಿದೆ ಇನೋವಾ ಹೈಕ್ರಾಸ್|ಹೇಗಿದೆ ಗೊತ್ತ..? Read More »

ಹೃದಯಾಘಾತ; ನಟಿ ತಬಸ್ಸುಮ್ ನಿಧನ

ಸಮಗ್ರ ನ್ಯೂಸ್: ಫೂಲ್‌ ಖಿಲೆ ಹೈ ಗುಲ್ಶನ್‌ ಗುಲ್ಶನ್‌ ಖ್ಯಾತಿಯ ಬಾಲಿವುಡ್‌ ನಟಿ ತಬಸ್ಸುಮ್‌ (78) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಾಲ ಕಲಾವಿದೆಯಾಗಿ ಬಾಲಿವುಡ್‌ ಸಿನಿಮಾ ರಂಗ ಪ್ರವೇಶಿಸಿ, ಹಲವು ಸಿನಿಮಾಗಳಲ್ಲಿ ನಟಿಸಿದ್ದ ಅವರು ದೂರದರ್ಶನದ ಫೂಲ್‌ ಖಿಲೆ ಹೈ ಗುಲ್ಶನ್‌ ಗುಲ್ಶನ್‌ ಟಾಕ್‌ ಶೋ ಮೂಲಕವೂ ದೇಶಾದ್ಯಂತ ಮನೆಮಾತಾಗಿದ್ದರು. ‘ನನ್ನ ತಾಯಿಗೆ ಹಲವು ದಿನಗಳಿಂದ ಅನಾರೋಗ್ಯ ಬಾಧಿಸುತ್ತಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖರಾಗಿರಲಿಲ್ಲ. ಶುಕ್ರವಾರ ರಾತ್ರಿ ಎರಡು ಬಾರಿ ಹೃದಯಾಘಾತ ಉಂಟಾಗಿ ನಮ್ಮನ್ನೆಲ್ಲ ಅಗಲಿದ್ದಾರೆ’ ಎಂದು

ಹೃದಯಾಘಾತ; ನಟಿ ತಬಸ್ಸುಮ್ ನಿಧನ Read More »

ನನ್ ಮಗ ಕಾರು,‌ಬೈಕ್ ರೈಡ್ ಮಾಡ್ತಾನೆ ಅಂತ ಜಂಬ ಪಡ್ತೀರಾ? ಅಪ್ರಾಪ್ತನಿಗೆ ಕಾರು ಚಲಾಯಿಸಲು ಕೊಟ್ಟು ಏನಾಗಿದೆ ಗೊತ್ತಾ?

ಸಮಗ್ರ ನ್ಯೂಸ್: ನಿಮ್ಮ ಅಪ್ರಾಪ್ತ ಮಕ್ಕಳಿಗೆ ವಾಹನ ಚಲಾಯಿಸಲು ಕೊಡುವ ಮೊದಲು ಅಂತಹ ಪಾಲಕರು ಈ ಸ್ಟೋರಿ ಓದ್ಲೇಬೇಕು. ಮಕ್ಕಳು ಕಾರು, ಬೈಕ್ ಓಡಿಸ್ತಾರೆ ಅಂತ ಅವರಿಗೆ ಗಾಡಿ ಕೊಡುವ ಮುನ್ನ ಈ ವಿಷಯ ಸರಿಯಾಗಿ‌ ತಿಳ್ಕೊಳ್ಳಿ. ತಮ್ಮ ಅಪ್ರಾಪ್ತ ‌ಪುತ್ರನಿಗೆ ವಾಹನ ಚಲಾಯಿಸಲು ನೀಡಿದ ತಪ್ಪಿಗೆ ವಾಹನ ಮಾಲಿಕನಿಗೆ ನ್ಯಾಯಾಲಯ ಬರೊಬ್ಬರಿ 20 ಸಾವಿರ ದಂಡ ವಿಧಿಸಿದ ಘಟನೆ ಕಡಬ ತಾಲ್ಲೂಕಿನಲ್ಲಿ ನಡೆದಿದೆ. ಕೊಯಿಲ ಗ್ರಾಮದ ಕೆ.ಸಿ.ಫಾರ್ಮ್ ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ದಂಡ ಪಾವತಿಸಿದ

ನನ್ ಮಗ ಕಾರು,‌ಬೈಕ್ ರೈಡ್ ಮಾಡ್ತಾನೆ ಅಂತ ಜಂಬ ಪಡ್ತೀರಾ? ಅಪ್ರಾಪ್ತನಿಗೆ ಕಾರು ಚಲಾಯಿಸಲು ಕೊಟ್ಟು ಏನಾಗಿದೆ ಗೊತ್ತಾ? Read More »

ಜೀನ್ಸ್‌ ಆರ್ಡರ್‌ ಮಾಡಿದ ಮಹಿಳೆಗೆ ಬ್ಯಾಗ್‌ ತುಂಬಾ ಈರುಳ್ಳಿ|“ಉಚಿತ ಈರುಳ್ಳಿ? ಈ ಆರ್ಥಿಕತೆಯಲ್ಲಿ? ವ್ಹಾವ್‌-ಕಾಮೆಂಟ್‌

ನ್ಯೂಯಾರ್ಕ್: ಆನ್‌ಲೈನ್‌ನಲ್ಲಿ ಸೆಕೆಂಡ್‌ ಹ್ಯಾಂಡ್‌ ಜೀನ್ಸ್‌ ಆರ್ಡರ್‌ ಮಾಡಿದ ಮಹಿಳೆಗೆ ಬ್ಯಾಗ್‌ ತುಂಬಾ ಈರುಳ್ಳಿ ಬಂದಿದೆ. ಇದನ್ನು ನೋಡಿ ಮಹಿಳೆ ಶಾಕ್‌ ಆಗಿದ್ದಾರೆ. ಬ್ರಿಟಿಷ್ ಸೆಕೆಂಡ್ ಹ್ಯಾಂಡ್ ಫ್ಯಾಶನ್ ಸೈಟ್ ಡೆಪಾಪ್‌ನಲ್ಲಿ ಮಹಿಳೆ ಜೀನ್ಸ್ ಅನ್ನು ಆರ್ಡರ್ ಮಾಡಿದ್ದಾರೆ. ಆದರೆ ಅವರಿಗೆ ಬ್ಯಾಗ್‌ ತುಂಬಾ ಈರುಳ್ಳಿ ಪಾರ್ಸೆಲ್‌ ಬಂದಿದೆ. ಇದನ್ನು ಕಂಡು ಅಚ್ಚರಿಗೊಂಡ ಮಹಿಳೆ, ಮಾರಾಟಗಾರರನ್ನು ಸಂಪರ್ಕಿಸಿ ಪ್ರಶ್ನಿಸಿದ್ದಾರೆ. ಅವರು ಕೂಡ ಗೊಂದಲಕಾರಿ ಉತ್ತರವನ್ನು ನೀಡಿದ್ದಾರೆ. ಈರುಳ್ಳಿ ಹೇಗೆ ಬಂತು ಎಂಬುದು ನಮಗೂ ಗೊತ್ತಿಲ್ಲ ಎಂದು ಮಹಿಳೆಗೆ

ಜೀನ್ಸ್‌ ಆರ್ಡರ್‌ ಮಾಡಿದ ಮಹಿಳೆಗೆ ಬ್ಯಾಗ್‌ ತುಂಬಾ ಈರುಳ್ಳಿ|“ಉಚಿತ ಈರುಳ್ಳಿ? ಈ ಆರ್ಥಿಕತೆಯಲ್ಲಿ? ವ್ಹಾವ್‌-ಕಾಮೆಂಟ್‌ Read More »

ಅಪರಿಚಿತ ಸಂಖ್ಯೆಯಿಂದ ಕರೆಯೇ? ಇನ್ನಿಲ್ಲ ಗೊಂದಲ

ಸಮಗ್ರ ನ್ಯೂಸ್: ಅಪರಿಚಿತ (unknown) ನಂಬರ್, ಸ್ಪ್ಯಾಮ್ ಅಥವಾ ಅನಪೇಕ್ಷಿತ ಕರೆಗಳ ಸಮಸ್ಯೆಯನ್ನು ನಿವಾರಿಸಲು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೊಸ ಮಾರ್ಗ ಕಂಡು ಹಿಡಿದಿದೆ. ಫೋನ್‌ನಲ್ಲಿ ಸೇವ್ ಆಗಿರದ ನಂಬರ್‌ಗಳಿಂದ ಯಾರಾದರೂ ಕರೆ ಮಾಡಿದರೆ ಕರೆ ಮಾಡಿದ ವ್ಯಕ್ತಿಯ ಹೆಸರು ನಿಮ್ಮ ಮೊಬೈಲ್‌ನಲ್ಲಿ ಕಂಡುಬರುವಂತೆ ಮಾಡುವ ಹೊಸ ಉಪಕ್ರಮವನ್ನು ಟ್ರಾಯ್ ಶೀಘ್ರವೇ ಜಾರಿಗೆ ತರಲು ಸಜ್ಜಾಗಿದೆ. ಟೆಲಿಕಾಂ ಆಪರೇಟರ್‌ಗಳ ಬಳಿ ಲಭ್ಯವಿರುವ ಕೆವೈಸಿ (ನಿಮ್ಮ ಗ್ರಾಹಕರನ್ನು ತಿಳಿಯಿರಿ) ದಾಖಲೆಯನ್ನು ಆಧರಿಸಿ ಕರೆ ಮಾಡಿದವರ ಹೆಸರನ್ನು ತಿಳಿಯುವಂತೆ

ಅಪರಿಚಿತ ಸಂಖ್ಯೆಯಿಂದ ಕರೆಯೇ? ಇನ್ನಿಲ್ಲ ಗೊಂದಲ Read More »

ಪಶ್ಚಿಮ ಬಂಗಾಳಕ್ಕೆ ಹೊಸ ರಾಜ್ಯಪಾಲ

ಡಾ.ಸಿ.ವಿ. ಆನಂದ ಬೋಸ್ ಅವರನ್ನು ಪಶ್ಚಿಮ ಬಂಗಾಳದ ರಾಜ್ಯಪಾಲರನ್ನಾಗಿ ಗುರುವಾರ ನೇಮಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ. ಅವರ ನೇಮಕವು ಅವರು ತಮ್ಮ ಕಚೇರಿಯ ಜವಾಬ್ದಾರಿಯನ್ನು ವಹಿಸಿಕೊಳ್ಳುವ ದಿನಾಂಕದಿಂದ ಜಾರಿಗೆ ಬರಲಿದೆ ಎಂದು ಹೇಳಿದೆ. ಮಣಿಪುರ ಗವರ್ನರ್ ಲಾ ಗಣೇಶನ್ ಅವರು ಜುಲೈನಿಂದ ಪಶ್ಚಿಮ ಬಂಗಾಳದ ಹೆಚ್ಚುವರಿ ಉಸ್ತುವಾರಿ ವಹಿಸಿಕೊಂಡಿದ್ದರು.

ಪಶ್ಚಿಮ ಬಂಗಾಳಕ್ಕೆ ಹೊಸ ರಾಜ್ಯಪಾಲ Read More »

ಮೆಟಾ ಇಂಡಿಯಾ ಮುಖ್ಯಸ್ಥರಾಗಿ ಸಂಧ್ಯಾ ದೇವನಾಥನ್ ನೇಮಕ

ಸಮಗ್ರ ನ್ಯೂಸ್: ಫೇಸ್​ಬುಕ್​ ವಾಟ್ಸ್​ಆಯಪ್​ಗಳ ಒಡೆತನ ಹೊಂದಿರುವ ಮೆಟಾ ಕಂಪನಿಯ ಭಾರತದ ಮುಖ್ಯಸ್ಥರಾಗಿ ಸಂಧ್ಯಾ ದೇವನಾಥನ್​ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದಿನ ಮುಖ್ಯಸ್ಥರಾಗಿದ್ದ ಅಜಿತ್​ ಮೋಹನ್​ ಅವರು ಇತ್ತೀಚೆಗಷ್ಟೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾದ ಜಾಗವನ್ನು ದೇವನಾಥನ್​ ತುಂಬಲಿದ್ದಾರೆ. ವಾಟ್ಸಾಪ್‌ನ ಭಾರತದ ಮುಖ್ಯಸ್ಥ ಅಭಿಜಿತ್ ಬೋಸ್ ಮತ್ತು ಭಾರತದಲ್ಲಿ ಮೆಟಾ ಸಂಸ್ಥೆಯ ಸಾರ್ವಜನಿಕ ನೀತಿ ನಿರ್ದೇಶಕ ರಾಜೀವ್ ಅಗರ್​ವಾಲ್​ ಕೂಡ ಇತ್ತೀಚೆಗೆ ಕಂಪನಿಯಿಂದ ಹೊರಬಂದಿದ್ದರು.

ಮೆಟಾ ಇಂಡಿಯಾ ಮುಖ್ಯಸ್ಥರಾಗಿ ಸಂಧ್ಯಾ ದೇವನಾಥನ್ ನೇಮಕ Read More »

ಭಾರತದಲ್ಲಿ ಎಲ್ಲಾ ಸ್ಮಾರ್ಟ್ ಫೋನ್‌ಗಳಿಗೂ ಒಂದೇ ರೀತಿಯ ಚಾರ್ಜಿಂಗ್ ಪೋರ್ಟ್

ನವದೆಹಲಿ: ಭಾರತವು ಎಲ್ಲಾ ಸ್ಮಾರ್ಟ್ ಸಾಧನಗಳಿಗಾಗಿ ಯುಎಸ್ಬಿ ಮಾದರಿಯ ಸಿ ಚಾರ್ಜಿಂಗ್ ಪೋರ್ಟ್‌‌ಗೆ ಸ್ಥಳಾಂತರಗೊಳ್ಳಲಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಕೇಂದ್ರ ಸರ್ಕಾರವು ರಚಿಸಿರುವ ಅಂತರ್ ಸಚಿವಾಲಯದ ಕಾರ್ಯಪಡೆಯ ಸಭೆಯಲ್ಲಿ ಪಾಲುದಾರರು ಒಮ್ಮತಕ್ಕೆ ಬಂದ ಬಳಿಕ ಎಲ್ಲಾ ಸ್ಮಾರ್ಟ್ ಸಾಧನಗಳಿಗಾಗಿ ಯುಎಸ್ಬಿ ಮಾದರಿಯ ಸಿ ಚಾರ್ಜಿಂಗ್ ಪೋರ್ಟ್‌‌ಗೆ ಸ್ಥಳಾಂತರಗೊಳ್ಳಲಿದೆ ಎಂದು ತೀರ್ಮಾನಿಸಲಾಗಿದೆ ಎಂದರು. ಇನ್ನು ‘ಸ್ಮಾರ್ಟ್ಫೋನ್‌ಗಳು, ಟ್ಯಾಬ್‌ಗಳು ಮತ್ತು ಲ್ಯಾಪ್‌ಟಾಪಗಳಂತಹ ಎಲೆಕ್ಟ್ರಾನಿಕ್ ಸಾಧನಗಳಿಗೆ ಚಾರ್ಜಿಂಗ್

ಭಾರತದಲ್ಲಿ ಎಲ್ಲಾ ಸ್ಮಾರ್ಟ್ ಫೋನ್‌ಗಳಿಗೂ ಒಂದೇ ರೀತಿಯ ಚಾರ್ಜಿಂಗ್ ಪೋರ್ಟ್ Read More »