ರಾಷ್ಟ್ರೀಯ

ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ ಮಹಾರಾಷ್ಟ್ರ ಬಿಕ್ಕಟ್ಟು| ತುರ್ತು ವಿಚಾರಣೆಗೆ ಸಮ್ಮತಿಸಿದ ನ್ಯಾಯಾಲಯ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಭವಿಷ್ಯದ ರಾಜಕೀಯ ಹೋರಾಟ ಭಾನುವಾರ ಕಾನೂನು ವಲಯಕ್ಕೆ ಹೋಗಿದ್ದು, ಬಂಡಾಯ ಶಾಸಕ ಏಕನಾಥ್ ಶಿಂಧೆ ಅವರು ತಮ್ಮ ಮತ್ತು ಇತರ 15 ಶಾಸಕರನ್ನು ಅನರ್ಹಗೊಳಿಸಿದ ಶಿವಸೇನೆಯ ಕ್ರಮವನ್ನು ಸರ್ವೊಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಾಳೆ ನಡೆಯಲಿದೆ. ಉಪಸಭಾಪತಿ ನರಹರಿ ಝಿರ್ವಾಲ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಿ ಅಜಯ್ ಚೌಧರಿ ಅವರನ್ನು ಶಿವಸೇನೆ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಿರುವುದನ್ನು ಏಕನಾಥ್ ಶಿಂಧೆ ಬಣವು ಪ್ರಶ್ನಿಸಿದೆ […]

ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ ಮಹಾರಾಷ್ಟ್ರ ಬಿಕ್ಕಟ್ಟು| ತುರ್ತು ವಿಚಾರಣೆಗೆ ಸಮ್ಮತಿಸಿದ ನ್ಯಾಯಾಲಯ Read More »

ವಯನಾಡ್: ರಾಹುಲ್ ಗಾಂಧಿ ಕಚೇರಿ ಧ್ವಂಸ

ಸಮಗ್ರ ನ್ಯೂಸ್: ಕೇರಳದ ವಯನಾಡಿನಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಚೇರಿಯ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದು ಕಚೇರಿಯನ್ನು ಧ್ವಂಸಗೊಳಿಸಿರುವುದು ಕಂಡುಬಂದಿದೆ. ಈ ದಾಳಿ ಹಿಂದೆ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಪಾತ್ರವಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ರಾಹುಲ್ ಗಾಂಧಿ ಅವರ ವಯನಾಡಿನಲ್ಲಿರುವ ಕಚೇರಿ ಮೇಲೆ ನಡೆದ ದಾಳಿಯ ದೃಶ್ಯಗಳನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಟ್ವೀಟ್ ಅನ್ನು ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಸಿಪಿಐ(M) ಪ್ರಧಾನ ಕಾರ್ಯದರ್ಶಿ

ವಯನಾಡ್: ರಾಹುಲ್ ಗಾಂಧಿ ಕಚೇರಿ ಧ್ವಂಸ Read More »

ಭಾರತ ದೇಣಿಗೆ ನೀಡಿದ್ದಲ್ಲ, ಸಾಲ ಕೊಟ್ಟಿದ್ದು- ಶ್ರೀಲಂಕಾ ಹೇಳಿಕೆ

ಸಮಗ್ರ ನ್ಯೂಸ್: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ನಮಗೆ ಭಾರತ ನೀಡಿದ ಹಣಕಾಸಿನ ನೆರವು ದತ್ತಿ ದೇಣಿಗೆಗಳಲ್ಲ’ ಎಂದು ಶ್ರೀಲಂಕಾದ ಸಂಸತ್ತಿಗೆ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರು ತಿಳಿಸಿದ್ದಾರೆ. ಅಲ್ಲದೆ, ಈ ಹಣಕಾಸಿನ ನೆರವಿನ ಸಾಲವನ್ನು ಮರುಪಾವತಿಸಲೇಬೇಕು ಎಂದು ಹೇಳಿದ್ದಾರೆ. ಭಾರತದಿಂದ ನಾವು ಸಾಲದ ರೂಪದಲ್ಲಿ ₹31 ಸಾವಿರ ಕೋಟಿ ನೆರವು ಪಡೆದಿದ್ದೇವೆ. ಅಲ್ಲದೆ, ಇನ್ನೂ ಹೆಚ್ಚಿನ ಹಣಕಾಸಿನ ನೆರವು ನೀಡುವಂತೆ ಭಾರತಕ್ಕೆ ಕೋರಿದ್ದೆವು. ಆದರೆ, ಇಂಥ ಸಂದರ್ಭದಲ್ಲಿ ಭಾರತವೊಂದೇ ನಿರಂತರವಾಗಿ ನಮ್ಮ ನೆರವಿಗೆ ನಿಲ್ಲಲು ಸಾಧ್ಯವಿಲ್ಲ. ನಮಗೆ

ಭಾರತ ದೇಣಿಗೆ ನೀಡಿದ್ದಲ್ಲ, ಸಾಲ ಕೊಟ್ಟಿದ್ದು- ಶ್ರೀಲಂಕಾ ಹೇಳಿಕೆ Read More »

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ| 155 ಮಂದಿ ಸಾವು

ಸಮಗ್ರ ನ್ಯೂಸ್: ಅಫ್ಘಾನಿಸ್ತಾನದಲ್ಲಿ ಪ್ರಭಲ ಭೂಕಂಪನ ಸಂಭವಿಸಿದ್ದು, ಈ ಭೂಕಂಪದಲ್ಲಿ 155 ಮಂದಿ ಸಾವನ್ನಪ್ಪಿರುವ ಮಾಹಿತಿ ಹೊರಬಿದ್ದಿದೆ. ಇನ್ನು ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಹೆಚ್ಚಿನ ಸಾವುಗಳು ಪಕ್ತಿಕಾ ಪ್ರಾಂತ್ಯದಲ್ಲಿ ಸಂಭವಿಸಿದ್ದು, ಅಲ್ಲಿ 100 ಜನರು ಸಾವನ್ನಪ್ಪಿದ್ದಾರೆ ಮತ್ತು 250 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಆಡಳಿತದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಮೊಹಮ್ಮದ್ ನಾಸಿಮ್ ಹಕ್ಕಾನಿ ಹೇಳಿದ್ದಾರೆ. ಅಧಿಕಾರಿಗಳು ಹೆಚ್ಚಿನ ಸಾವುನೋವುಗಳನ್ನು ಪರಿಶೀಲಿಸುತ್ತಿರುವುದರಿಂದ ಪೂರ್ವ ಪ್ರಾಂತ್ಯಗಳಾದ ನಂಗರ್ಹಾರ್ ಮತ್ತು ಖೋಸ್ಟ್ ನಲ್ಲಿಯೂ ಸಾವುಗಳು ವರದಿಯಾಗಿವೆ‌ ಎಂದು

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ| 155 ಮಂದಿ ಸಾವು Read More »

ದ್ರೌಪದಿ ಮುರ್ಮುರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಎನ್ ಡಿಎ

ಸಮಗ್ರ ನ್ಯೂಸ್: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ನಡೆದ ಬಿಜೆಪಿ ಸಂಸದೀಯ ಸಮಿತಿ ಸಭೆಯಲ್ಲಿ ದ್ರೌಪದಿ ಮುರ್ಮು ಅವರನ್ನು ಎನ್ ಡಿ ಎ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಬುಡಕಟ್ಟು ಸಮುದಾಯಕ್ಕೆ ಸೇರಿದ ದ್ರೌಪದಿ ಮುರ್ಮು ಅವರು ಜಾರ್ಖಂಡ್ ನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. 64 ವರ್ಷದ ದ್ರೌಪದಿ ಮುರ್ಮು ಅವರು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಬೈದಾಪೋಸಿ ಗ್ರಾಮದಲ್ಲಿ 1958 ರ

ದ್ರೌಪದಿ ಮುರ್ಮುರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಎನ್ ಡಿಎ Read More »

ಯೋಗದ ಪ್ರಾಮುಖ್ಯತೆಯನ್ನು ಎಲ್ಲರೂ ಅರ್ಥ‌ಮಾಡಿಕೊಳ್ಳಬೇಕು – ಪ್ರಧಾನಿ ನರೇಂದ್ರ ಮೋದಿ ಅಭಿಮತ

ಸಮಗ್ರ ನ್ಯೂಸ್: ಯೋಗ ಕೇವಲ ವ್ಯಕ್ತಿಗಾಗಿ ಅಲ್ಲ ಅದು ಮನು ಕುಲದ ಒಳಿತಿಗಾಗಿ, ಇಡೀ ವಿಶ್ವಕ್ಕೆ ಶಾಂತಿ ನೀಡುವ ಶಕ್ತಿ ನಮ್ಮ ಯೋಗಕ್ಕಿದೆ. ಅದರ ಪ್ರಾಮುಖ್ಯತೆಯನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಹೇಳಿದರು. ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರು ಅರಮನೆ ಮೈದಾನದಲ್ಲಿ ಆಯೋಜಿಸಿರುವ ವಿಶೇಷ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದರು. ಈ ದಿನ ಆಚರಿಸುತ್ತಿರುವ 8ನೇ ಅಂತಾರಾಷ್ಟ್ರೀಯ ಯೋಗ ದಿನದಂದು ನಾನು ಎಲ್ಲರಿಗೂ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಇಂದು ಪ್ರಪಂಚದ ಎಲ್ಲಾ ಭಾಗಗಳಲ್ಲಿ ಯೋಗವನ್ನು

ಯೋಗದ ಪ್ರಾಮುಖ್ಯತೆಯನ್ನು ಎಲ್ಲರೂ ಅರ್ಥ‌ಮಾಡಿಕೊಳ್ಳಬೇಕು – ಪ್ರಧಾನಿ ನರೇಂದ್ರ ಮೋದಿ ಅಭಿಮತ Read More »

100ರ ವಸಂತಕ್ಕೆ ಕಾಲಿಟ್ಟ ಮೋದಿ ತಾಯಿ ಹೀರಾಬೆನ್| ಮಾತೆಯ ಆಶೀರ್ವಾದ ಪಡೆದ ನಮೋ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ತಾಯಿ ಹೀರಾಬೆನ್ ಮೋದಿ ಅವರ ಜನ್ಮದಿನದಂದು ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಹೀರಾಬೆನ್ ಮೋದಿ ಇಂದು ತಮ್ಮ ಜೀವನದ 100 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.ಗಾಂಧಿನಗರದಲ್ಲಿರುವ ತಮ್ಮ ತಾಯಿ ಹೀರಾಬೆನ್ ಮೋದಿ ಅವರ ನಿವಾಸಕ್ಕೆ ಆಗಮಿಸಿದ ಪ್ರಧಾನಿ ಮೋದಿ ವಡ್ನಗರ್‌ನ ಹಟಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ವಯಸ್ಸಿನಲ್ಲೂ ಹೀರಾಬೆನ್ ಮೋದಿ ಆರೋಗ್ಯವಾಗಿದ್ದಾರೆ. ಅವರು ತಮ್ಮ ಕಿರಿಯ ಮಗ ಪಂಕಜ್ ಮೋದಿ ಜೊತೆಗೆ

100ರ ವಸಂತಕ್ಕೆ ಕಾಲಿಟ್ಟ ಮೋದಿ ತಾಯಿ ಹೀರಾಬೆನ್| ಮಾತೆಯ ಆಶೀರ್ವಾದ ಪಡೆದ ನಮೋ Read More »

ಯುವಕರಿಗೆ ಸೇನೆಯಲ್ಲಿ ಹೊಸ ಅವಕಾಶ ಅಗ್ನಿಪಥ್ ಯೋಜನೆಯಲ್ಲಿ ಯುವ ಜನರಿಗೆ ಅವಕಾಶ

ನವದೆಹಲಿ: ಭಾರತೀಯ ಯುವಕರಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅಗ್ನಿಪಥ್ ಎಂಬ ಹೊಸ ಅಲ್ಪಾವಧಿಯ ನೇಮಕಾತಿ ಯೋಜನೆಯನ್ನು ಕೇಂದ್ರ ಪ್ರಾರಂಭಿಸಿದೆ. ಅಗ್ನಿಪಥ್ ಎಂದು ಕರೆಯಲ್ಪಡುವ ಯೋಜನೆ 17.5 ರಿಂದ 21 ವರ್ಷ ವಯಸ್ಸಿನ ಯುವಕರು 4 ವರ್ಷಗಳ ಅವಧಿಗೆ 3 ಸೇವೆಗಳಲ್ಲಿ ಯಾವುದಾದರೂ ಒಂದರಲ್ಲಿ ಸೇರಿಕೊಳ್ಳಬಹುದು. ಈ ಯುವ ಯೋಧರನ್ನು ‘ಅಗ್ನಿವೀರ್’ ಎಂದು ಕರೆಯಲಾಗುತ್ತದೆ. ಈ ಹೊಸ ನೇಮಕಾತಿಯನ್ನು ಕೇಂದ್ರ ಮಂಗಳವಾರ ಅನಾವರಣ ಮಾಡಿದೆ. ಅಗ್ನಿಪಥ್ ಯೋಜನೆಯನ್ನು ಈ ಹಿಂದೆ ‘ಟೂರ್ ಆಫ್ ಡ್ಯೂಟಿ’ ಎಂದು ಕರೆಯಲಾಗುತ್ತಿತ್ತು.

ಯುವಕರಿಗೆ ಸೇನೆಯಲ್ಲಿ ಹೊಸ ಅವಕಾಶ ಅಗ್ನಿಪಥ್ ಯೋಜನೆಯಲ್ಲಿ ಯುವ ಜನರಿಗೆ ಅವಕಾಶ Read More »

ರಾಜ್ಯಸಭೆ ಚುನಾವಣೆ| ಹೆಚ್ಚಿದ “ಕೈ” ಬಲ; ಮೂರು ಸ್ಥಾನ ಕೆಳಗಿಳಿದ “ಕಮಲ”

ಸಮಗ್ರ ನ್ಯೂಸ್: ಜೂನ್ 10 ರಂದು ನಡೆದ ರಾಜ್ಯಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಸಂಸತ್ತಿನ ನಿರ್ಣಾಯಕ ಮೇಲ್ಮನೆಯಲ್ಲಿ ಆಡಳಿತಾರೂಢ ಬಿಜೆಪಿಯ ಸಂಖ್ಯಾಬಲ 95 ರಿಂದ 92ಕ್ಕೆ ಕುಸಿದಿದೆ. ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ಸಂಖ್ಯೆ 29 ರಿಂದ 31 ಕ್ಕೆ ಏರಿಕೆಯಾಗಿದ್ದು, ಕೈ ಸ್ವಲ್ಪ ಬಲ ಹೆಚ್ಚಿಸಿಕೊಂಡಿದೆ. ರಾಜಸ್ಥಾನ, ಹರಿಯಾಣ, ಕರ್ನಾಟಕ ಮತ್ತು ಮಹಾರಾಷ್ಟ್ರದ ನಾಲ್ಕು ರಾಜ್ಯಗಳಲ್ಲಿ ತೀವ್ರ ಪೈಪೋಟಿಗೆ ಸಾಕ್ಷಿಯಾದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ 57 ಸ್ಥಾನಗಳ ಪೈಕಿ 22 ರಲ್ಲಿ ಗೆದ್ದರೆ, ಕಾಂಗ್ರೆಸ್ ಒಂಬತ್ತು ಸ್ಥಾನಗಳನ್ನು

ರಾಜ್ಯಸಭೆ ಚುನಾವಣೆ| ಹೆಚ್ಚಿದ “ಕೈ” ಬಲ; ಮೂರು ಸ್ಥಾನ ಕೆಳಗಿಳಿದ “ಕಮಲ” Read More »