ರಾಷ್ಟ್ರೀಯ

ಉತ್ತರಕನ್ನಡ: ನಿಧನರಾಗಿ 8 ತಿಂಗಳಾದರೂ ಯಕ್ಷಗಾನ‌ ಅಕಾಡಮಿ ಅಧ್ಯಕ್ಷರು ಇವರೇ !ಕನ್ನ‌ಡ ಮತ್ತು ಸಂಸ್ಕೃತಿ ಇಲಾಖೆಯ ಬೇಜವಾಬ್ದಾರಿ|

ಶಿರಸಿ: ಮೃತರಾಗಿ ಎಂಟು ತಿಂಗಳಾದರೂ‌ ಆಧುನಿಕ‌ ನಡೆಯಲ್ಲಿ ವಿಫುಲ ಹೆಜ್ಜೆ ಇಡುತ್ತಿರುವ ಕನ್ನಡ‌ ಮತ್ತು ಸಂಸ್ಕ್ರತಿ ‌ಇಲಾಖೆಯ ವೆಬ್ ಸೈಟ್ ನಲ್ಲಿ ಮೃತರೇ ಅಧ್ಯಕ್ಷರಾಗಿ ‌ಮುಂದುವರಿದಿದ್ದಾರೆ. ಕಳೆದ ಏಪ್ರಿಲ್ 18ರಂದು ಅಕಾಲಿಕವಾಗಿ ಅಗಲಿದ ಯಕ್ಷಗಾನ‌ ಅಕಾಡಮಿ ಅಧ್ಯಕ್ಷ ಪ್ರೋ ಎಂ.ಎ.ಹೆಗಡೆ ಅವರ‌ ಜಾಗಕ್ಕೆ ಸರಕಾರ ಆಡಳಿತಾಧಿಕಾರಿ ನೇಮಕ‌ ಮಾಡಿದ್ದರ ಬಗ್ಗೆ ಆಕ್ಷೇಪ, ಅಸಮಧಾನಗಳು ಬಂದ ಬೆನ್ನಲ್ಲೇ, ವೆಬ್ ಸೈಟಿನಲ್ಲಿ ಎಂ.ಎ.ಹೆಗಡೆ ಅವರ ಹೆಸರನ್ನು ಬದಲಾಯಿಸದೇ ಇರುವುದು ಆಕ್ಷೇಪಕ್ಕೆ ಕಾರಣವಾಗಿದೆ. ಕನ್ನಡ ನಾಡು‌ ನುಡಿ, ಕಲೆಯ ಸೇವೆಗಾಗಿ ಇರುವ‌ […]

ಉತ್ತರಕನ್ನಡ: ನಿಧನರಾಗಿ 8 ತಿಂಗಳಾದರೂ ಯಕ್ಷಗಾನ‌ ಅಕಾಡಮಿ ಅಧ್ಯಕ್ಷರು ಇವರೇ !ಕನ್ನ‌ಡ ಮತ್ತು ಸಂಸ್ಕೃತಿ ಇಲಾಖೆಯ ಬೇಜವಾಬ್ದಾರಿ| Read More »

ಲಾಠಿ ಹಿಡಿದು ಪೊಲೀಸ್ ಲುಕ್ ನಲ್ಲಿ ದರ್ಶನ ನೀಡುತ್ತಿರುವ ಕಾಲಭೈರವೇಶ್ವರ| ಜಾಲತಾಣಗಳಲ್ಲಿ ಫೋಟೋ ವೈರಲ್|

ಲಕ್ನೋ: ಕಾಲಭೈರವನಿಗೆ ಪೊಲೀಸ್ ಸಮವಸ್ತ್ರ ತೊಡಿಸಿದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ದೇವರನ್ನು ಕಣ್ತುಂಬಿಕೊಳ್ಳಲು ಭಕ್ತರು ದೇವಸ್ಥಾನದತ್ತ ಆಗಮಿಸುತ್ತಿರುವ ದೃಶ್ಯ ವಾರಣಾಸಿಯಲ್ಲಿ ನಡೆದಿದೆ. ವಾರಣಾಸಿಯ ಕಾಶಿಯ ಕೊತ್ವಾಲಾ ಎಂದೂ ಕರೆಯಲಾಗುವ ಭೈರವನ ಈ ಸಮವಸ್ತ್ರದ ಸುದ್ದಿ ಭಾರೀ ವೈರಲ್ ಆಗುತ್ತಿದೆ. ಇದೇ ಮೊದಲ ಬಾರಿಗೆ ಕಾಶಿಯ ಪ್ರಸಿದ್ಧ ದೇವರು ಬಾಬಾ ಕಾಲ ಭೈರವನಿಗೆ ಪೊಲೀಸ್ ಸಮವಸ್ತ್ರ ತೊಡಿಸಲಾಗಿದೆ. ದೇವರ ಮೂರ್ತಿಯ ತಲೆಯ ಮೇಲೆ ಪೊಲೀಸ್ ಕ್ಯಾಪ್ ಹಾಗೂ ಎದೆ ಮೇಲೆ ಬ್ಯಾಡ್ಜ್ ನ್ನು ಹಾಕಲಾಗಿದ್ದು,

ಲಾಠಿ ಹಿಡಿದು ಪೊಲೀಸ್ ಲುಕ್ ನಲ್ಲಿ ದರ್ಶನ ನೀಡುತ್ತಿರುವ ಕಾಲಭೈರವೇಶ್ವರ| ಜಾಲತಾಣಗಳಲ್ಲಿ ಫೋಟೋ ವೈರಲ್| Read More »

ಸೆಕ್ಸ್ ಗಾಗಿ ಪತ್ನಿಯರ ಎಕ್ಸ್ ಚೇಂಜ್| ದೇವರ ನಾಡಲ್ಲೊಂದು ಅನಾಗರಿಕ ದಂಧೆ| ಟೆಲಿಗ್ರಾಂ, ಮೆಸೇಂಜರ್ ನಲ್ಲಿ ನಡೆಯುತ್ತೆ ವ್ಯವಹಾರ|

ತಿರುವನಂತಪುರಂ: ಸೆಕ್ಸ್​ಗಾಗಿ ಪತ್ನಿಯರನ್ನೇ ವಿನಿಮಯ ಮಾಡಿಕೊಳ್ಳುವ ದಂಧೆ ನಡೆಸುತ್ತಾ ದಾಂಪತ್ಯ ಬದುಕಿಗೆ ಕೊಳ್ಳಿ ಇಡುತ್ತಿರುವ ವಿಚಿತ್ರ ದಂಧೆಯೊಂದು ಕೇರಳದಲ್ಲಿ ನಡೆಯುತ್ತಿದೆ. ಇಂತದ್ದೊಂದು ಅನಾಗರಿಕ ವ್ಯವಹಾರಕ್ಕಾಗಿ ಈ ನೀಚ ಕಾಮುಕರು ಟೆಲಿಗ್ರಾಂ, ಮೆಸೆಂಜರ್​ನಲ್ಲಿ ಗ್ರೂಪ್​ ರಚಿಸಿಕೊಂಡು ‘ಪತ್ನಿಯರ ವಿನಿಮಯ’ ದಂಧೆ ನಡೆಸುತ್ತಾ ಕೇರಳದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಕೇರಳದ ಕೊಟ್ಟಾಯಂ ಜಿಲ್ಲೆಯ ಕರುಕಾಚಲ್​ನಲ್ಲಿ ಹಣ ಮತ್ತು ಸೆಕ್ಸ್​ಗಾಗಿ ತಮ್ಮ ಪತ್ನಿಯರನ್ನು ವಿನಿಮಯ ಮಾಡಿಕೊಳ್ಳಲೆಂದೇ ದುಷ್ಕರ್ಮಿಗಳು ಟೆಲಿಗ್ರಾಂ, ಮೆಸೆಂಜರ್ ಗ್ರೂಪ್​ ರಚನೆ ಮಾಡಿಕೊಂಡಿದ್ದರು. ಕೇರಳದ ಮೂರು ಜಿಲ್ಲೆಯ 1 ಸಾವಿರಕ್ಕೂ

ಸೆಕ್ಸ್ ಗಾಗಿ ಪತ್ನಿಯರ ಎಕ್ಸ್ ಚೇಂಜ್| ದೇವರ ನಾಡಲ್ಲೊಂದು ಅನಾಗರಿಕ ದಂಧೆ| ಟೆಲಿಗ್ರಾಂ, ಮೆಸೇಂಜರ್ ನಲ್ಲಿ ನಡೆಯುತ್ತೆ ವ್ಯವಹಾರ| Read More »

ಸರ್ವರ್ ಡೌನ್| ಗೂಗಲ್ ಪೇ, ಪೇಟಿಎಂ ಅಪ್ಲಿಕೇಶನ್ ಸ್ಥಗಿತ

ನವದೆಹಲಿ : ನ್ಯಾಷನಲ್ ಪೇಮೆಂಟ್‌ ಕಾರ್ಪೊರೇಷನ್ ಆಫ್ ಇಂಡಿಯಾ ಅಭಿವೃದ್ಧಿಪಡಿಸಿದ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ ಅಥವಾ ಯುಪಿಐ ಒಂದು ಗಂಟೆಗೂ ಹೆಚ್ಚು ಕಾಲ ಡೌನ್ ಆಗಿದೆ ಎಂದು ವರದಿಯಾಗಿದೆ. ಹೀಗಾಗಿ ಗೂಗಲ್ ಪೇ ಅಥವಾ ಪೇಟಿಎಂನಂತಹ ಅಪ್ಲಿಕೇಶನ್ʼಗಳ ಬಳಕೆದಾರರು ಯಾವುದೇ ವಹಿವಾಟುಗಳನ್ನ ಮಾಡದಂತೆ ತಡೆಯಲಾಗಿದೆ. ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿದ NPCI, ‘ಮಧ್ಯಂತರ ತಾಂತ್ರಿಕ ದೋಷ’ದಿಂದಾಗಿ ಈ ತೊಂದರೆ ಸಂಭವಿಸಿದ್ದು, ಯುಪಿಐ ಸೇವೆಗಳು ಈಗ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದೆ. ಪಾವತಿ ನಿಗಮವು ‘ವ್ಯವಸ್ಥೆಯನ್ನು ನಿಕಟವಾಗಿ

ಸರ್ವರ್ ಡೌನ್| ಗೂಗಲ್ ಪೇ, ಪೇಟಿಎಂ ಅಪ್ಲಿಕೇಶನ್ ಸ್ಥಗಿತ Read More »

ಇಂದು ಸಂಜೆ ಪ್ರಧಾನಿ ನೇತೃತ್ವದಲ್ಲಿ ಸಭೆ| ಒಮಿಕ್ರಾನ್, ಕೊರೊನಾ ಸಂಬಂಧಿಸಿದ ಚರ್ಚೆ ಸಾಧ್ಯತೆ|

ನವದೆಹಲಿ: ಇಂದು ಸಂಜೆ 4.30ಕ್ಕೆ ಪ್ರಧಾನಿ ನರೇಂದ್ರ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಿಗದಿಪಡಿಸಲಾಗಿದೆ. ದೇಶದಲ್ಲಿ ಕೊರೋನಾ ಹಾಗೂ ಓಮಿಕ್ರಾನ್ ಆರ್ಭಟ ಹೆಚ್ಚಾಗುತ್ತಿದ್ದು 3ನೇ ಅಲೆ ಆರಂಭವಾಗಿದೆ ಎನ್ನಲಾಗುತ್ತಿದೆ. ಭಾರತದಲ್ಲಿ ಕೊರೋನಾ, ಓಮಿಕ್ರಾನ್ ಸ್ಥಿತಿಗತಿಯ ಬಗ್ಗೆ ಚರ್ಚಿಸಲು ಇಂದು ಸಂಜೆ 4.30ಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಕೇಂದ್ರ ಸಚಿವರು ಸೇರಿದಂತೆ ವಿವಿಧ ತಜ್ಞರು ಭಾಗವಹಿಸಲಿದ್ದಾರೆ. ಇಂದಿನ ಸಭೆಯಲ್ಲಿ ದೇಶದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಮಹತ್ವದ ವಿಚಾರಗಳ ಕುರಿತಂತೆ ಚರ್ಚೆ ಕೂಡ ನಡೆಯಲಿದೆ

ಇಂದು ಸಂಜೆ ಪ್ರಧಾನಿ ನೇತೃತ್ವದಲ್ಲಿ ಸಭೆ| ಒಮಿಕ್ರಾನ್, ಕೊರೊನಾ ಸಂಬಂಧಿಸಿದ ಚರ್ಚೆ ಸಾಧ್ಯತೆ| Read More »

ಒಮಿಕ್ರಾನ್ ಗಂಭೀರವಲ್ಲ, ಶಾಲೆಗಳ ಬಂದ್, ಲಾಕ್ ಡೌನ್ ಮಾಡಿ ಗಾಬರಿ ಹುಟ್ಟಿಸಬೇಡಿ| ಕೇಂದ್ರಕ್ಕೆ ತಜ್ಞರಿಂದ ಸಲಹೆ|

ನವದೆಹಲಿ: ದೇಶದಲ್ಲಿ ಕೊರೊನಾ ಕೇಸ್ ಗಳನ್ನು ನೋಡಿ ಶಾಲೆಗಳನ್ನು ಬಂದ್ ಮಾಡಬೇಡಿ. ನಿರ್ಬಂಧ ಹೇರಬೇಡಿ ಎಂದು ಕೇಂದ್ರ ಸರ್ಕಾರದ ರಾಷ್ಟ್ರೀಯ ಕೋವಿಡ್ ಸೂಪರ್ ಮಾಡೆಲ್ ಸಮಿತಿಯ ಮುಖ್ಯಸ್ಥ, ಹೈದರಾಬಾದ್ ಐಐಟಿ ಪ್ರಾಧ್ಯಾಪಕ ಡಾ. ವಿದ್ಯಾಸಾಗರ್ ಸಲಹೆ ನೀಡಿದ್ದಾರೆ. ಶಾಲೆ, ಕಾಲೇಜು, ಕಚೇರಿಗಳನ್ನು ಬಂದ್ ಮಾಡುವುದು, ಲಾಕ್ಡೌನ್ ಮಾಡುವುದು ಗಾಬರಿಯ ಕ್ರಮಗಳಾಗಿವೆ. ಕೊರೋನಾ ಏರುಗತಿಯಲ್ಲಿ ಇದ್ದರೂ, ಆಸ್ಪತ್ರೆ ಸೇರುವವರ ಸಂಖ್ಯೆ ಬಹಳ ಕಡಿಮೆ ಇದೆ. ಎಲ್ಲಾ ಸೋಂಕಿತರನ್ನು ಕಾಯಿಲೆ ಪೀಡಿತರು ಎಂದು ಹೇಳಲಾಗುವುದಿಲ್ಲ. ಸಂಖ್ಯೆಯನ್ನು ನೋಡಿ ಗಾಬರಿ ಆಗಬಾರದು,

ಒಮಿಕ್ರಾನ್ ಗಂಭೀರವಲ್ಲ, ಶಾಲೆಗಳ ಬಂದ್, ಲಾಕ್ ಡೌನ್ ಮಾಡಿ ಗಾಬರಿ ಹುಟ್ಟಿಸಬೇಡಿ| ಕೇಂದ್ರಕ್ಕೆ ತಜ್ಞರಿಂದ ಸಲಹೆ| Read More »

ಕೊರೊನಾ ನಡುವೆಯೇ ಎಲೆಕ್ಷನ್ ಭರಾಟೆ| ಪಂಚರಾಜ್ಯ ಚುನಾವಣೆಗೆ ದಿನ ನಿಗದಿಪಡಿಸಿದ ಚುನಾವಣಾ ಆಯೋಗ|

ನವದೆಹಲಿ: ದೇಶದಲ್ಲಿ ಏರುತ್ತಿರುವ ಕೊರೊನಾ ಪ್ರಕರಣಗಳ ಆತಂಕದ ನಡುವೆಯೇ ಕೇಂದ್ರ ಚುನಾವಣಾ ಆಯೋಗ ಮಹತ್ವದ ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಜ.8ರಂದು ಘೋಷಣೆ ಮಾಡಿದೆ. ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಉತ್ತರ ಪ್ರದೇಶ, ಉತ್ತರಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ರಾಜ್ಯಗಳ ವಿಧಾನಸಭೆ ಚುನಾವಣೆಯು ಒಟ್ಟು 690 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಮಾರ್ಚ್ 7ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಏಳೂ ಹಂತದಲ್ಲಿ

ಕೊರೊನಾ ನಡುವೆಯೇ ಎಲೆಕ್ಷನ್ ಭರಾಟೆ| ಪಂಚರಾಜ್ಯ ಚುನಾವಣೆಗೆ ದಿನ ನಿಗದಿಪಡಿಸಿದ ಚುನಾವಣಾ ಆಯೋಗ| Read More »

ನಿಶ್ಚಿತಾರ್ಥ ಮಾಡಿಕೊಂಡ ಸಲಿಂಗಿ ವೈದ್ಯರು ಗೋವಾದಲ್ಲಿ ಮದ್ವೆಯಾಗ್ತಿದಾರಂತೆ!

ನಾಗ್ಪುರ: ಈ ಹಿಂದೆ ತೆಲಂಗಾಣದಲ್ಲಿ ಸಲಿಂಗಿ ಜೋಡಿಯೊಂದು ಹಸೆಮಣೆ ಏರಿದ್ದ ಸುದ್ದಿ ನಡೆದಿರುವ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದ ನಾಗ್ಪುರದಲ್ಲಿ ಇಬ್ಬರು ಮಹಿಳಾ ವೈದ್ಯರು ಸರಳ ಸಮಾರಂಭದಲ್ಲಿ ನಿಶ್ಚಿತಾರ್ಥವಾಗಿದ್ದಾರೆ. ಪರಸ್ಪರ ಪ್ರೇಮಿಸುತ್ತಿದ್ದ ಈ ಇಬ್ಬರು ಸಲಿಂಗಿ ವೈದ್ಯರು, ಒಂದು ಹೆಜ್ಜೆ ಮುಂದೆ ಹೋಗಿ ಜೀವನಪರ್ಯಂತ ಜೊತೆಗಿರಲು ನಿರ್ಧರಿಸಿದ್ದಾರೆ. ಈ ಸಲಿಂಗಿ ಜೋಡಿ ಶೀಘ್ರದಲ್ಲೇ ಗೋವಾದಲ್ಲಿ ಮದುವೆಯಾಗಲು ಯೋಜಿಸಿದ್ದಾರೆ. ಪರೋಮಿತಾ ಮುಖರ್ಜಿ ಮತ್ತು ಸುರಭಿ ಮಿತ್ರ ಡಿಸೆಂಬರ್ 29ರಂದು ನಾಗ್ಪುರದ ಹೊರವಲಯದಲ್ಲಿ ಪರಸ್ಪರ ಉಂಗುರ ಬದಲಾಯಿಸುವ ಮೂಲಕ ನಿಶ್ಚಿತಾರ್ಥವಾಗಿದ್ದಾರೆ. ಇಬ್ಬರು

ನಿಶ್ಚಿತಾರ್ಥ ಮಾಡಿಕೊಂಡ ಸಲಿಂಗಿ ವೈದ್ಯರು ಗೋವಾದಲ್ಲಿ ಮದ್ವೆಯಾಗ್ತಿದಾರಂತೆ! Read More »

‘ಅವರು ರಸ್ತೆ ಮೂಲಕ ಬರುತ್ತಾರೆಂದು ಪೊಲೀಸರು ಹೇಳಿದ್ರು, ಹೆಲಿಪ್ಯಾಡ್ ನೋಡಿ ನಾವದನ್ನು ನಂಬಲಿಲ್ಲ’ | ರೈತ ಸಂಘ ಸ್ಪಷ್ಟನೆ

ನವದೆಹಲಿ: ಪ್ರಧಾನಿ ರಸ್ತೆ ಮಾರ್ಗವಾಗಿ ಬರುತ್ತಿದ್ದಾರೆಂದು ಪೊಲೀಸರು ನಮಗೆ ಹೇಳಿದರು. ಅವರು ಸುಳ್ಳು ಹೇಳುತ್ತಿದ್ದಾರೆಂದು ನಾವು ಭಾವಿಸಿದ್ದೆವು ಎಂದು ಪ್ರಧಾನಿ ಮೋದಿ ಬೆಂಗಾವಲು ಪಡೆಯನ್ನು ಪ್ರತಿಭಟನಾಕಾರರು ಏಕೆ ತಡೆದರು ಎಂಬುದಕ್ಕೆ ರೈತ ಮುಖಂಡ ಸ್ಪಷ್ಟನೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆಯನ್ನು ತನ್ನ ಕಾರ್ಯಕರ್ತರು ತಡೆದಿರುವುದನ್ನು ಭಾರತೀಯ ಕಿಸಾನ್ ಯೂನಿಯನ್(ಕ್ರಾಂತಿಕಾರಿ) ಒಪ್ಪಿಕೊಂಡಿದೆ. ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಮುಖ್ಯಸ್ಥ ಸುರ್ಜಿತ್ ಸಿಂಗ್ ಫೂಲ್, ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಕುರಿತು ಸರ್ಕಾರ ಯಾವುದೇ ಸಮಿತಿ ರಚಿಸದ ಕಾರಣ

‘ಅವರು ರಸ್ತೆ ಮೂಲಕ ಬರುತ್ತಾರೆಂದು ಪೊಲೀಸರು ಹೇಳಿದ್ರು, ಹೆಲಿಪ್ಯಾಡ್ ನೋಡಿ ನಾವದನ್ನು ನಂಬಲಿಲ್ಲ’ | ರೈತ ಸಂಘ ಸ್ಪಷ್ಟನೆ Read More »

ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ| “ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ”ಎಂದ ಪ್ರಧಾನಿ

ಚಂಡೀಗಢ: ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪಂಜಾಬ್‍ಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದ ವೇಳೆ ಭಾರೀ ಭದ್ರತಾ ಲೋಪವಾಗಿದೆ. ಬಟಿಂಡಾದಲ್ಲಿ ಇಂದು ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಪಂಜಾಬ್‍ಗೆ ಆಗಮಿಸಿದ್ದರು. ಮಧ್ಯಾಹ್ನ ಹುಸೇನಿವಾಲಾದಲ್ಲಿ ರಾಷ್ಟ್ರೀಯ ಹುತಾತ್ಮರ ಸ್ಮಾರಕ ಸ್ಥಳಕ್ಕೆ ತೆರಳಲು ಹೋಗುತ್ತಿದ್ದಾಗ ಭದ್ರತಾ ಲೋಪವಾಗಿದೆ. ಕಾರ್ಯಕ್ರಮಕ್ಕೆ ಕಾರಿನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಫ್ಲೈ ಓವರ್‌ನಲ್ಲಿ ತೆರಳುತ್ತಿದ್ದಾಗ ರೈತರು ಪ್ರತಿಭಟನೆ ಮಾಡುತ್ತಿರುವುದು ಗೊತ್ತಾಗಿದೆ. ಭದ್ರತಾ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‍ನ ಫ್ಲೈಓವರ್‌ನಲ್ಲಿ ಸುಮಾರು 20

ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ| “ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ”ಎಂದ ಪ್ರಧಾನಿ Read More »