ರಾಷ್ಟ್ರೀಯ

ವಿಕ್ರಾಂತ್‌ ಯುದ್ದನೌಕೆ ಪರೀಕ್ಷಾರ್ಥ ಪ್ರಯೋಗ ಯಶಸ್ವಿ| ಸೇನಾವಲಯದಲ್ಲಿ ಐತಿಹಾಸಿಕ ‌ಮೈಲಿಗಲ್ಲು ಸಾಧಿಸಿದ ಭಾರತ|

ನವದೆಹಲಿ: ಭಾರತದ ಮೊದಲ ದೇಶೀಯ ವಿಮಾನ ವಾಹಕ ಯುದ್ಧನೌಕೆ (IAC) ವಿಕ್ರಾಂತ್ ಐದು ದಿನಗಳ ಪರೀಕ್ಷಾರ್ಥ ಸಂಚಾರ ಮುಗಿಸಿ ಹಿಂದಿರುಗಿದೆ. 40,000 ಟನ್​ ಯುದ್ಧನೌಕೆಯ ಕಾರ್ಯಕ್ಷಮತೆಯನ್ನು ಪರೀಕ್ಷೆ ಮಾಡಲು, ಐದು ದಿನಗಳ ಸಮುದ್ರ ಪ್ರಯೋಗ ಕಳೆದ ಬುಧವಾರದಿಂದ ಪ್ರಾರಂಭವಾಗಿತ್ತು. ಅಂದಾಜು 23 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಈ ವಿಕ್ರಾಂತ್​ ಯುದ್ಧನೌಕೆ ಯನ್ನು ತಯಾರಿಸಲಾಗಿದೆ. ಈ ಸ್ವದೇಶಿ ನಿರ್ಮಿತ ವಿಮಾನ ವಾಹಕ ಯುದ್ಧನೌಕೆ ಮುಂದಿನ ವರ್ಷ ಆಗಸ್ಟ್​​ನಿಂದ ಭಾರತೀಯ ನೌಕಾಪಡೆಯನ್ನು ಸೇರಲಿದೆ. ಈ ಯುದ್ಧ ನೌಕೆಯೀಗ ಯಶಸ್ವಿಯಾಗಿ […]

ವಿಕ್ರಾಂತ್‌ ಯುದ್ದನೌಕೆ ಪರೀಕ್ಷಾರ್ಥ ಪ್ರಯೋಗ ಯಶಸ್ವಿ| ಸೇನಾವಲಯದಲ್ಲಿ ಐತಿಹಾಸಿಕ ‌ಮೈಲಿಗಲ್ಲು ಸಾಧಿಸಿದ ಭಾರತ| Read More »

ರೈತರಿಗೆ ಗುಡ್ ನ್ಯೂಸ್|ನಾಳೆ ಪಿಎಂ ಕಿಸಾನ್ ಸಮ್ಮಾನ್ ನ ಮತ್ತೊಂದು ಕಂತು ಬಿಡುಗಡೆ|

ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಮತ್ತೊಂದು ಕಂತು ದೇಶದ ರೈತರ ಖಾತೆಗೆ ನಾಳೆ ವರ್ಗಾವಣೆಯಾಗಲಿದೆ. ಪಿಎಂ-ಕಿಸಾನ್ ನ ಕಂತನ್ನು ಕೇಂದ್ರ ಸರ್ಕಾರವು ಆಗಸ್ಟ್ 9 ರಂದು ವಿತರಿಸಲಿದ್ದು, ಸರಿ ಸುಮಾರು 90 ಮಿಲಿಯನ್ ರೈತರಿಗೆ ಒಟ್ಟು 19,000 ಕೋಟಿ ರೂ ಪಿಎಂ-ಕಿಸಾನ್ ಅಡಿಯಲ್ಲಿ ರೈತರ ಖಾತೆಗೆ ಜಮೆಯಾಗಲಿದೆ. ಕೇಂದ್ರ ಸರ್ಕಾರವು ಪ್ರತಿ ಭೂಮಿ ಹೊಂದಿರುವ ರೈತರಿಗೆ ಮಾಸಿಕ ದಾಖಲಾತಿಯೊಂದಿಗೆ ವಾರ್ಷಿಕ ರೂ. 6,000 ಆದಾಯದ ಬೆಂಬಲವನ್ನು ನೀಡುತ್ತಿದೆ. ಪಿಎಂ ಕಿಸಾನ್ ಹಣವನ್ನು ವರ್ಷದಲ್ಲಿ ಮೂರು

ರೈತರಿಗೆ ಗುಡ್ ನ್ಯೂಸ್|ನಾಳೆ ಪಿಎಂ ಕಿಸಾನ್ ಸಮ್ಮಾನ್ ನ ಮತ್ತೊಂದು ಕಂತು ಬಿಡುಗಡೆ| Read More »

ಪತ್ನಿಯ ಇಚ್ಚೆಗೆ ವಿರುದ್ಧದ ಲೈಂಗಿಕತೆಯೂ ಅತ್ಯಾಚಾರವೇ….| ಕೇರಳ ಹೈಕೋರ್ಟ್ ಮಹತ್ವದ ತೀರ್ಪು

ಕೊಚ್ಚಿ: ವೈವಾಹಿಕ ಜೀವನದಲ್ಲಿ ಲೈಂಗಿಕ ಸಂಬಂಧವನ್ನು ವ್ಯಾಖ್ಯಾನಿಸುವ ಪ್ರಮುಖ ಅವಲೋಕನದಲ್ಲಿ, ಕೇರಳ ಹೈಕೋರ್ಟ್ ಶುಕ್ರವಾರ ಹೆಂಡತಿಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಕ್ರಿಯೆಗಳನ್ನು ಮಾಡುವುದು ‘ವೈವಾಹಿಕ ಅತ್ಯಾಚಾರ’ ಮತ್ತು ವಿಚ್ಛೇದನ ಪಡೆಯಲು ಅದು ಉತ್ತಮ ಆಧಾರವಾಗಿದೆ ಎಂದು ಹೇಳಿದೆ.ನ್ಯಾಯಮೂರ್ತಿ ಎ.ಮುಹಮ್ಮದ್ ಮುಸ್ತಾಕ್ ಮತ್ತು ನ್ಯಾಯಮೂರ್ತಿ ಕೌಸರ್ ಎಡಪ್ಪಗತ್ ಅವರನ್ನು ಒಳಗೊಂಡ ಪೀಠವು ಈ ರೀತಿ ಹೇಳಿದ್ದು, ಇದೇ ವೇಳೆ ಕ್ರೌರ್ಯದ ಆಧಾರದ ಮೇಲೆ ವಿಚ್ಛೇದನಕ್ಕಾಗಿ ಹೆಂಡತಿಯ ಮನವಿಯನ್ನು ಆಲಿಸುವ ಕುಟುಂಬ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪತಿಯ ಮನವಿಯನ್ನು ತಳ್ಳಿಹಾಕಿದೆ.

ಪತ್ನಿಯ ಇಚ್ಚೆಗೆ ವಿರುದ್ಧದ ಲೈಂಗಿಕತೆಯೂ ಅತ್ಯಾಚಾರವೇ….| ಕೇರಳ ಹೈಕೋರ್ಟ್ ಮಹತ್ವದ ತೀರ್ಪು Read More »

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ‌ ವಿಶ್ವ ಸಂಸ್ಥೆ ಭದ್ರತಾ ಮಂಡಳಿ ಸಭೆ| ಮೊದಲ ಬಾರಿಗೆ ಉನ್ನತ ಹುದ್ದೆ ಅಲಂಕರಿಸಿದ ಭಾರತ|

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ಅಧ್ಯಕ್ಷ ಸ್ಥಾನವನ್ನು ಭಾರತ ಭಾನುವಾರ ವಹಿಸಿಕೊಂಡಿದೆ. ಮುಂದಿನ ಒಂದು ತಿಂಗಳ ಕಾಲ ಭಾರತ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರೆಯಲಿದೆ. ಈ ಅವಧಿಯಲ್ಲಿ ಹಲವು ಮಹತ್ವದ ವಿಷಯಗಳನ್ನು ಚರ್ಚೆಗೆ ಎತ್ತಿಕೊಳ್ಳಲು ಭಾರತ ನಿರ್ಧರಿಸಿದೆ. ಇನ್ನೊಂದು ವಿಶೇಷವೆಂದರೆ ಆ.9ರಂದು ಭದ್ರತಾ ಮಂಡಳಿಯ ಸಭೆ ಆಯೋಜನೆಯಾಗಿದ್ದು, ಸಭೆಯ ಅಧ್ಯಕ್ಷರಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಕಾರ್ಯನಿರ್ವಹಿಸಲಿದ್ದಾರೆ. ಈ ಮೂಲಕ ಭದ್ರತಾ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿಕೊಂಡ ದೇಶದ ಮೊದಲ ಪ್ರಧಾನಿ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ. 1992ರಲ್ಲಿ

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ‌ ವಿಶ್ವ ಸಂಸ್ಥೆ ಭದ್ರತಾ ಮಂಡಳಿ ಸಭೆ| ಮೊದಲ ಬಾರಿಗೆ ಉನ್ನತ ಹುದ್ದೆ ಅಲಂಕರಿಸಿದ ಭಾರತ| Read More »

ಇ-ರುಪಿಗೆ ಚಾಲನೆ ನೀಡಿದ ಪ್ರಧಾನಿ| ಇಂಟರ್ನೆಟ್ ಇಲ್ಲದೇ ಹಣ ಪಾವತಿ ಸೌಲಭ್ಯ ಏನಿದರ ವಿಶೇಷತೆ ಅಂತೀರಾ? ಈ ಸ್ಟೋರಿ ಓದಿ.

ನವದೆಹಲಿ: ಭಾರತವನ್ನು ಡಿಜಿಟಲೀಕರಣ ಮಾಡಲು ಪಣ ತೊಟ್ಟಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಡಿಜಿಟಲ್ ಮೂಲಕ ಹಣ ಪಾವತಿ ಮಾಡುವ ಇ-ರುಪಿ (E-RUPI) ಸೇವೆಗೆ ಇಂದು ಚಾಲನೆ ನೀಡಿದ್ದಾರೆ. ಈಗಾಗಲೇ ಫೋನ್ ಪೇ, ಗೂಗಲ್ ಪೇ, ಪೇಟಿಎಂ, ವಾಟ್ಸಾಪ್ ಪೇ ಮುಂತಾದ ಡಿಜಿಟಲ್ ಪೇಮೆಂಟ್​ ಆಯ್ಕೆಗಳಿವೆಯಲ್ಲ ಎಂದು ನೀವು ಹುಬ್ಬೇರಿಸಬಹುದು. ಆದರೆ, ಈ ಇ-ರುಪಿ ಬಹಳ ವಿಶೇಷವಾಗಿದ್ದು, ಇದರ ಮೂಲಕ ಇಂಟರ್ನೆಟ್, ಸ್ಮಾರ್ಟ್​ಫೋನ್​ಗಳು ಇಲ್ಲದೆಯೂ ವೋಚರ್ ಮೂಲಕ ಹಣ ಪಾವತಿ ಮಾಡಲು ಸಾಧ್ಯವಿದೆ. ಇಂದು ಈ ಇ-ರುಪಿ ಸೇವೆಗೆ

ಇ-ರುಪಿಗೆ ಚಾಲನೆ ನೀಡಿದ ಪ್ರಧಾನಿ| ಇಂಟರ್ನೆಟ್ ಇಲ್ಲದೇ ಹಣ ಪಾವತಿ ಸೌಲಭ್ಯ ಏನಿದರ ವಿಶೇಷತೆ ಅಂತೀರಾ? ಈ ಸ್ಟೋರಿ ಓದಿ. Read More »

ಜೂಜು‌ ದಂಧೆ ಪ್ರಕರಣ| ಹರಿರಾಜ್ ಶೆಟ್ಟಿ ಮೇಲೆ ಚಾರ್ಜ್ ಶೀಟ್

ಬೆಂಗಳೂರು: ಮಹಾನಗರದ ಹಲವು ಕಡೆ ಜೂಜು ಅಡ್ಡೆ ನಿರ್ಮಿಸಿ ಗ್ಯಾಂಬ್ಲಿಂಗ್ ನಡೆಸುತ್ತಿದ್ದ ಆರೋಪದ ಮೇರೆಗೆ ಮುಂಗಾರು ಮಳೆ-2 ಸಿನಿಮಾ ಖ್ಯಾತಿಯ ನಟಿ ನೇಹಾ ಶೆಟ್ಟಿ ತಂದೆ, ಉದ್ಯಮಿ ಹರಿರಾಜ್ ಶೆಟ್ಟಿಯನ್ನು ಬಂಧಿಸಿದ ಸಿಸಿಬಿ ಅಧಿಕಾರಿಗಳು ಚಾರ್ಚ್ ಶೀಟ್ ಸಲ್ಲಿಸಿದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಗ್ಯಾಬ್ಲಿಂಗ್ ಉದ್ಯಮಿ ಹರಿರಾಜ್ ಶೆಟ್ಟಿ, ಮಹಿಳೆಯರು ಸೇರಿದಂತೆ ಒಟ್ಟು 42 ಮಂದಿ ಗ್ಯಾಂಬ್ಲರ್ ಗಳ ವಿರುದ್ಧ 250 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಇವರು ಪೂಲ್ ಮತ್ತು ರಿ ಕ್ರಿಯೇಷನ್ ಹೆಸರಿನಲ್ಲಿ

ಜೂಜು‌ ದಂಧೆ ಪ್ರಕರಣ| ಹರಿರಾಜ್ ಶೆಟ್ಟಿ ಮೇಲೆ ಚಾರ್ಜ್ ಶೀಟ್ Read More »

ಪ್ರಜ್ವಲ್ ಹೊದ್ದೇಟ್ಟಿಗೆ ಆಸ್ಟ್ರೇಲಿಯಾದ ಬ್ರೀಸ್ಬನೆ ಕ್ಯಾಂಪಸ್ ನಿಂದ ಫೆಲೋಶಿಪ್

ಆಸ್ಟ್ರೇಲಿಯಾದ ಜೆಂಸ್ ಕುಕ್ಕ್ ಯುನಿವರ್ಸಿಟಿ ಯ ಸಿಂಗಾಪುರ್ ನ ಕ್ಯಾಂಪಸ್ ನಲ್ಲಿ ಬ್ಯಾಚುಲರ್ ಆಫ್ ಬ್ಯುಸಿನೆಸ್‌ ಮೇಜರಿಂಗ್ ಅಂತರಾಷ್ಟ್ರೀಯ ಬ್ಯುಸಿನೆಸ್ ಎರಡು ವರ್ಷಗಳ ವಿಧ್ಯಾಭ್ಯಾಸ ವನ್ನು, ಆಸ್ಟ್ರೇಲಿಯಾದ ಬ್ರೀಸ್ಬೆನೆ ಕ್ಯಾಂಪಸ್ ನಲ್ಲಿ ಎರಡು ವರ್ಷಗಳ ವಿಧ್ಯಾಭ್ಯಾಸ ವನ್ನು ಪೂರೈಸಿದ ಪ್ರಜ್ವಲ್ ಹೊದ್ದೇಟ್ಟಿ ಯವರು ಫೆಲೋಶಿಪ್ ಪಡೆದಿರುತ್ತಾರೆ.ಮಂಗಳೂರುನಲ್ಲಿ BSNL ಉದ್ಯೋಗಿ ಗೋವರ್ಧನ ಹೊದ್ದೇಟ್ಟಿ ಹಾಗೂ ಶ್ರೀಮತಿ ಭಾಗೀರಥಿ ದಂಪತಿಗಳ ಪುತ್ರ

ಪ್ರಜ್ವಲ್ ಹೊದ್ದೇಟ್ಟಿಗೆ ಆಸ್ಟ್ರೇಲಿಯಾದ ಬ್ರೀಸ್ಬನೆ ಕ್ಯಾಂಪಸ್ ನಿಂದ ಫೆಲೋಶಿಪ್ Read More »

ಮೀನು, ಚಿಕನ್, ಮಟನ್‍ಗಿಂತ ಜಾಸ್ತಿ ಗೋಮಾಂಸವನ್ನೇ ತಿನ್ನಿ: ಬಿಜೆಪಿ ಸಚಿವ

ಶಿಲ್ಲಾಂಗ್: ಮೀನು, ಚಿಕನ್, ಮಟನ್‍ಗಳಿಗಿಂತ ಜಾಸ್ತಿ ಗೋಮಾಂಸವನ್ನು ತಿನ್ನಿ ಎಂದು ರಾಜ್ಯದ ಜನರಿಗೆ ಮೇಘಾಲಯದ ಬಿಜೆಪಿ ಸಚಿವ ಸ್ಯಾನ್ಬೋರ್ ಶುಲ್ಲೈ ಪ್ರೋತ್ಸಾಹಿಸಿದ್ದಾರೆ. ಕಳೆದವಾರವಷ್ಟೇ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿರುವ ಬೆನ್ನಲೇ ಶುಲ್ಲೈ, ಇದು ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿ ಪ್ರತಿಯೊಬ್ಬರಿಗೂ ಬೇಕಾದನ್ನು ತಿನ್ನಲ್ಲು ಸ್ವಾತಂತ್ರ್ಯವಿದೆ. ನಾನಂತೂ ಜನರಿಗೆ ಚಿಕನ್, ಮಟನ್, ಮೀನಿಗಿಂತಲೂ ಜಾಸ್ತಿ ಗೋಮಾಂಸ ತಿನ್ನಿ ಎಂದೇ ಪ್ರೋತ್ಸಾಹಿಸುತ್ತೇನೆ. ಬಿಜೆಪಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುತ್ತದೆಂಬ ಗ್ರಹಿಕೆ ತುಂಬ ಜನರಿಗೆ ಇದೆ. ಗೋಮಾಂಸ ತಿನ್ನಲು ಹೆಚ್ಚೆಚ್ಚು ಪ್ರೋತ್ಸಾಹ ನೀಡುವ

ಮೀನು, ಚಿಕನ್, ಮಟನ್‍ಗಿಂತ ಜಾಸ್ತಿ ಗೋಮಾಂಸವನ್ನೇ ತಿನ್ನಿ: ಬಿಜೆಪಿ ಸಚಿವ Read More »

ಸಿಬಿಎಸ್ ಸಿ 12ನೇ ತರಗತಿ ಫಲಿತಾಂಶ ಇಂದು ಪ್ರಕಟ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಇಂದು 12 ನೇ ತರಗತಿ ಫಲಿತಾಂಶವನ್ನು ಸಿಬಿಎಸ್ಸಿಯು 2 ಗಂಟೆಗೆ ಘೋಷಿಸಲಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ CBSE ಬೋರ್ಡ್ ಇಂದು ಮಧ್ಯಾಹ್ನ 2 ಗಂಟೆಗೆ ಸಿಬಿಎಸ್ಸಿ 12ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿಸಿದೆ. ಫಲಿತಾಂಶ ವೀಕ್ಷಣೆ ಹೇಗೆ.? ವಿದ್ಯಾರ್ಥಿಗಳು ಇಂದು ಮಧ್ಯಾಹ್ನ ಪ್ರಕಟಗೊಳ್ಳಲಿರುವಂತ ಸಿಬಿಎಸ್ಸಿ 12ನೇ ತರಗತಿಯ ಫಲಿತಾಂಶವನ್ನು ಬೋರ್ಡ್ ಅಧಿಕೃತ ಜಾಲತಾಣ cbse.nic.in ಇಲ್ಲವೇ cbseresults.nic.in ನೋಡಬಹುದಾಗಿದೆ. ಇದಲ್ಲದೇ ವಿದ್ಯಾರ್ಥಿಗಳು ಡಿಜಿಲಾಕರ್ ನಲ್ಲಿ

ಸಿಬಿಎಸ್ ಸಿ 12ನೇ ತರಗತಿ ಫಲಿತಾಂಶ ಇಂದು ಪ್ರಕಟ Read More »

ಮತಾಂತರಗೊಂಡಿಲ್ಲ ಎಂದು ಸಾಬೀತುಪಡಿಸಲು ಸುಪ್ರೀಂ ಕೋರ್ಟ್‌ನತ್ತ ಹೊರಟ ಯುವಕ

ದೆಹಲಿ: ಇಲ್ಲಿನ ಇಸ್ಲಾಮಿಕ್ ಪ್ರಚಾರಕರಿಂದ ಮತಾಂತರಗೊಂಡ ನೂರಾರು ಮಂದಿಯ ಪಟ್ಟಿಯಲ್ಲಿ ಯುವಕನ ಹೆಸರಿರುವುದನ್ನು ಕಂಡು ಆತ ಕಾಲ್ನಡಿಗೆಯಲ್ಲೇ ದೆಹಲಿಗೆ ಹೊರಟು ಸುಪ್ರೀಂ ಕೋರ್ಟ್ ಮುಂದೆ ತಾವು ಮತಾಂತರಗೊಂಡಿಲ್ಲ ಎಂದು ಸಾಬೀತು ಪಡಿಸಲು ಮುಂದಾಗಿದ್ದಾರೆ.ಉತ್ತರ ಪ್ರದೇಶದ ಸಹರಾನ್ಪುರದ ಪ್ರವೀಣ್ ಕುಮಾರ್ ಕಾಲ್ನಡಿಗೆಯಲ್ಲೇ ಹೊರಟ ಯುವಕ. ಪಿಎಚ್‌ಡಿ ಪದವೀಧರರಾದ ಇವರು ಕಳೆದ ತಿಂಗಳು ವಿಧ್ವಂಸಕ ಕೃತ್ಯಗಳ ಸಂಬಂಧ ತನಿಖೆ ನಡೆಸುತ್ತಿದ್ದ ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳದ ತನಿಖೆ ವಿಚಾರಿಸಿ ಕ್ಲೀನ್ ಚಿಟ್ ಪಡೆದಿದ್ದರು. ಆರರೆ ಆತನ ಗ್ರಾಮವಾದ ಶಿಟ್ಲಾ

ಮತಾಂತರಗೊಂಡಿಲ್ಲ ಎಂದು ಸಾಬೀತುಪಡಿಸಲು ಸುಪ್ರೀಂ ಕೋರ್ಟ್‌ನತ್ತ ಹೊರಟ ಯುವಕ Read More »