ರಾಷ್ಟ್ರೀಯ

ಮತಾಂತರಗೊಂಡಿಲ್ಲ ಎಂದು ಸಾಬೀತುಪಡಿಸಲು ಸುಪ್ರೀಂ ಕೋರ್ಟ್‌ನತ್ತ ಹೊರಟ ಯುವಕ

ದೆಹಲಿ: ಇಲ್ಲಿನ ಇಸ್ಲಾಮಿಕ್ ಪ್ರಚಾರಕರಿಂದ ಮತಾಂತರಗೊಂಡ ನೂರಾರು ಮಂದಿಯ ಪಟ್ಟಿಯಲ್ಲಿ ಯುವಕನ ಹೆಸರಿರುವುದನ್ನು ಕಂಡು ಆತ ಕಾಲ್ನಡಿಗೆಯಲ್ಲೇ ದೆಹಲಿಗೆ ಹೊರಟು ಸುಪ್ರೀಂ ಕೋರ್ಟ್ ಮುಂದೆ ತಾವು ಮತಾಂತರಗೊಂಡಿಲ್ಲ ಎಂದು ಸಾಬೀತು ಪಡಿಸಲು ಮುಂದಾಗಿದ್ದಾರೆ.ಉತ್ತರ ಪ್ರದೇಶದ ಸಹರಾನ್ಪುರದ ಪ್ರವೀಣ್ ಕುಮಾರ್ ಕಾಲ್ನಡಿಗೆಯಲ್ಲೇ ಹೊರಟ ಯುವಕ. ಪಿಎಚ್‌ಡಿ ಪದವೀಧರರಾದ ಇವರು ಕಳೆದ ತಿಂಗಳು ವಿಧ್ವಂಸಕ ಕೃತ್ಯಗಳ ಸಂಬಂಧ ತನಿಖೆ ನಡೆಸುತ್ತಿದ್ದ ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳದ ತನಿಖೆ ವಿಚಾರಿಸಿ ಕ್ಲೀನ್ ಚಿಟ್ ಪಡೆದಿದ್ದರು. ಆರರೆ ಆತನ ಗ್ರಾಮವಾದ ಶಿಟ್ಲಾ […]

ಮತಾಂತರಗೊಂಡಿಲ್ಲ ಎಂದು ಸಾಬೀತುಪಡಿಸಲು ಸುಪ್ರೀಂ ಕೋರ್ಟ್‌ನತ್ತ ಹೊರಟ ಯುವಕ Read More »

ಭೂಗತ ಪಾತಕಿ ಛೋಟಾ ರಾಜನ್ ಗೆ ಅನಾರೋಗ್ಯ| ಏಮ್ಸ್‌ಗೆ ದಾಖಲು

ನವದೆಹಲಿ: ಭೂಗತ ದೊರೆ ಛೋಟಾ ರಾಜನ್ ಅನಾರೋಗ್ಯದ ಕಾರಣ ದೆಹಲಿಯ ಏಮ್ಸ್‌ಗೆ ಜುಲೈ 27ರಂದು ದಾಖಲಾಗಿದ್ದಾನೆ. ಛೋಟಾ ರಾಜನ್ ದೇಶದ ಕಾನೂನುಗಳನ್ನು ಗೌರವಿಸದ ಕಾರಣ ಅವರಿಗೆ ಜಾಮೀನು ನೀಡಬಾರದು ಎಂದು ಕೇಂದ್ರ ತನಿಖಾ ದಳ ಬುಧವಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದೆ. ಇದಾದ ಒಂದು ದಿನದ ನಂತರ ರಾಜನ್ ನ ಅನಾರೋಗ್ಯದ ಸುದ್ದಿ ಬಂದಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪರದೀಪ್ ಘರತ್ ಅವರು ನ್ಯಾಯಮೂರ್ತಿ ಅನುಜಾ ಪ್ರಭುದೇಸಾಯಿ ಅವರ ಏಕೈಕ ನ್ಯಾಯಪೀಠಕ್ಕೆ ಅಂಡರ್ವರ್ಲ್ಡ್ ಡಾನ್ ಹಲವಾರು ಪ್ರಕರಣಗಳನ್ನು ಎದುರಿಸುತ್ತಿದ್ದಾನೆ

ಭೂಗತ ಪಾತಕಿ ಛೋಟಾ ರಾಜನ್ ಗೆ ಅನಾರೋಗ್ಯ| ಏಮ್ಸ್‌ಗೆ ದಾಖಲು Read More »

ಜಾಲತಾಣಗಲ್ಲಿ ವಿವಾದಕ್ಕೀಡಾದ ವಿರಾಟ್‌ ಕೊಹ್ಲಿ

ನವದೆಹಲಿ : ಟೀಮ್‌ ಇಂಡಿಯಾ ಆಟಗಾರ ವಿರಾಟ್‌ ಕೊಯ್ಲಿ ವಿಶ್ವವಿದ್ಯಾಲಯದ ಕುರಿತು ಪೋಸ್ಟ್‌ ಮಾಡಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ವಿವಾದಕ್ಕೀಡಾಗಿದ್ದರೆ. ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ, ಇಂಗ್ಲೆಂಡ್ ಪ್ರವಾಸದಲ್ಲಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆಯುವ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಕೊಹ್ಲಿ ಸಿದ್ದತೆ ನಡೆಸುತ್ತಿದ್ದಾರೆ. ಅಭ್ಯಾಸದ ಜೊತೆ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿಯೂ ಕೊಹ್ಲಿ ಸಕ್ರೀಯವಾಗಿದ್ದಾರೆ. ಇಷ್ಟು ದಿನ ತಮ್ಮ ಖಾಸಗಿ ಬದುಕಿನ ಕುರಿತು ಪೋಸ್ಟ್‌ ಮಾಡುತ್ತಿದ್ದ ಕೊಹ್ಲಿ ಇದೀಗ ಖಾಸಗಿ ವಿಶ್ವವಿದ್ಯಾಲಯದ ಕುರಿತು ಪೋಸ್ಟ್‌ ಮಾಡಿದ್ದರು. ಪೋಸ್ಟ್‌ನಲ್ಲಿ,

ಜಾಲತಾಣಗಲ್ಲಿ ವಿವಾದಕ್ಕೀಡಾದ ವಿರಾಟ್‌ ಕೊಹ್ಲಿ Read More »

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ರೈಲ್ವೆ ಇಲಾಖೆಯಲ್ಲಿ 1664 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಉತ್ತರ ಮಧ್ಯ ರೈಲ್ವೆಯ (ಎನ್​ಸಿಆರ್​​) ಪ್ರಯಾಗ್​ರಾಜ್​, ಉತ್ತರ ಪ್ರದೇಶ ವಿಭಾಗದಲ್ಲಿ ಖಾಲಿ ಇರುವ ಬರೋಬ್ಬರಿ 1664 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಉತ್ತರ ಮಧ್ಯ ರೈಲ್ವೆ ನೇಮಕಾತಿ 2021ಕ್ಕೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಟ 10ನೇ ತರಗತಿ ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾಭ್ಯಾಸವನ್ನು ಪೂರೈಸಿರಬೇಕು. ಅಲ್ಲದೆ ಕನಿಷ್ಟ 50 ಪ್ರತಿಶತ ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.ವೆಲ್ಡರ್, ವೈರ್​ ಮ್ಯಾನ್​ ಹಾಗೂ ಬಡಗಿ ಕೆಲಸಕ್ಕೆ

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ರೈಲ್ವೆ ಇಲಾಖೆಯಲ್ಲಿ 1664 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಹೆದ್ದಾರಿ‌ ಬದಿಗಳಲ್ಲಿ ಮದ್ಯಮಾರಾಟ – ಸುಪ್ರೀಂನಿಂದ ಮಹತ್ವದ ಆದೇಶ

ನವದೆಹಲಿ: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಮತ್ತು ರಾಷ್ಟ್ರೀಯ ಅಥವಾ ರಾಜ್ಯ ಹೆದ್ದಾರಿಗಳ ಹೊರ ಅಂಚಿನಿಂದ 500 ಮೀಟರ್ ದೂರದಲ್ಲಿ ಅಥವಾ ಹೆದ್ದಾರಿಯ ಉದ್ದಕ್ಕೂ ಒಂದು ಸೇವಾ ಲೇನ್‌ಗೆ ಮದ್ಯ ಮಾರಾಟಕ್ಕೆ ಪರವಾನಗಿ ನೀಡುವುದನ್ನು ನಿಲ್ಲಿಸುವ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ನೀಡಿದೆ. 20,000 ಜನರು ಅಥವಾ ಅದಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಪ್ರದೇಶಗಳ ಸಂದರ್ಭದಲ್ಲಿ, 500 ಮೀಟರ್‌ಗಳ ಅಂತರವನ್ನು 220 ಮೀಟರ್‌ಗೆ ಇಳಿಸಿ ಆದೇಶ ಹೊರಡಿಸಿದೆ. ಈ ಮೂಲಕ 220 ಮೀಟರ್

ಹೆದ್ದಾರಿ‌ ಬದಿಗಳಲ್ಲಿ ಮದ್ಯಮಾರಾಟ – ಸುಪ್ರೀಂನಿಂದ ಮಹತ್ವದ ಆದೇಶ Read More »

ಪೊಲೀಸ್ ವಶದಲ್ಲಿದ್ದ ಯುವಕ ಸಾವು: ಮಹಿಳಾ ಪೇದೆಯನ್ನು ಬಲಿಪಡೆದ ಉದ್ರಿಕ್ತ ಗುಂಪು

ಬಿಹಾರ: ಯುವಕನ ಲಾಕಪ್ ಡೆತ್ ವಿರೋಧಿಸಿ ಉದ್ರಿಕ್ತ ಗುಂಪು ಪ್ರತಿಭಟನೆ ನಡೆಸಿದ್ದು ಅಲ್ಲದೆ ಪೊಲೀಸರ ಮೇಲೆ ಕಲ್ಲು ತೂರಾಟ, ಗುಂಡಿನ ದಾಳಿ ನಡೆಸಿದ್ದಾರೆ. ಇನ್ನು ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾಗ ಪೊಲೀಸ್ ಮಹಿಳಾ ಪೇದೆ ಸಾವನ್ನಪ್ಪಿದ್ದಾರೆ. ಪ್ರತಿಭಟನಾಕಾರರು ಉದ್ರಿಕ್ತರಾಗಿ ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಮಡು ತೂರಿದ್ದಾರೆ. ಕಲ್ಲು ತೂರಾಟದ ವೇಳೆ ಹಲವಾರು ಪೊಲೀಸರು ಗಾಯಗೊಂಡಿರುವುದಾಗಿ ಜಿಹಾನಾಬಾದ್ ಪೊಲೀಸ್ ಮೂಲಗಳು ತಿಳಿಸಿವೆ. ಪ್ರತಿಭಟನೆಯಿಂದಾಗಿ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಆರ್ವಾಲ್- ಜಿಹಾನಾಬಾದ್ ಹೆದ್ದಾರಿ ಸಂಚಾರದಲ್ಲಿ

ಪೊಲೀಸ್ ವಶದಲ್ಲಿದ್ದ ಯುವಕ ಸಾವು: ಮಹಿಳಾ ಪೇದೆಯನ್ನು ಬಲಿಪಡೆದ ಉದ್ರಿಕ್ತ ಗುಂಪು Read More »

ರಾಯಗಢ ಭಾರೀ ವರ್ಷಧಾರೆಗೆ ಭೂಕುಸಿತ | 130 ಕ್ಕೂ ಹೆಚ್ಚು ಸಾವು | ಸಾವಿರಾರು ಜನ ಮಣ್ಣಿನಡಿ ಸಿಲುಕಿರುವ ಶಂಕೆ

ಮಹಾರಾಷ್ಟ್ರ: ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ರಾಯಗಢ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದೆ. 130 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರೆ. ಸಾವಿರಾರು ಜನ ಮಣ್ಣಿನಡಿ ಮತ್ತು ಪ್ರವಾಹದಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ. ಜಿಲ್ಲೆಯ ಮಹಾದ್ ತಾಲೂಕಿನ ತಹಿಲೆ ಗ್ರಾಮ ಸಂಪೂರ್ಣ ಪ್ರವಾಹಕ್ಕೆ ಒಳಗಾಗಿದೆ. ಗುರುವಾರ ಮತ್ತು ಶುಕ್ರವಾರ ರಾತ್ರಿ ಭೂಕುಸಿತ ಉಂಟಾಗಿದ್ದು, ನೂರಾರು ಜನ ಸಾವನ್ನಪ್ಪಿದ್ದಾರೆ. ಸಾವಿರಾರು ಜನ ಕಣ್ಮರೆಯಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅದಿತಿ ತಟ್ಕರೆ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ,

ರಾಯಗಢ ಭಾರೀ ವರ್ಷಧಾರೆಗೆ ಭೂಕುಸಿತ | 130 ಕ್ಕೂ ಹೆಚ್ಚು ಸಾವು | ಸಾವಿರಾರು ಜನ ಮಣ್ಣಿನಡಿ ಸಿಲುಕಿರುವ ಶಂಕೆ Read More »

ಲವರ್ ಜೊತೆ ಹೆಂಡತಿ ಪರಾರಿ : ಹುಡುಕಿ ಮದುವೆ ಮಾಡಿಸಿದ ಗಂಡ | ಪ್ರೀತಿ ಮಧುರ, ತ್ಯಾಗ ಅಮರ…!

ಜಾರ್ಖಂಡ್‍: ಮದುವೆಯಾದ 17 ದಿನದಲ್ಲಿ ಹೆಂಡತಿ ಆಕೆಯ ಹಳೆ ಪ್ರಿಯಕರನ ಜೊತೆ ಪರಾರಿಯಾಗಿದ್ದು, ಬಳಿಕ ಗಂಡ ಅವರಿಬ್ಬರನ್ನು ಹುಡುಕಿ ಮದುವೆ ಮಾಡಿಸಿದ ಘಟನೆ ಜಾರ್ಖಂಡಿನ ರಾಂಚಿಯಲ್ಲಿ ನಡೆದಿದೆ. ಯಾವ ಹುಡುಗನಿಗೆ ಯಾವ ಹುಡುಗಿ ಎಂದು ಮೊದಲೇ ದೇವರು ನಿರ್ಧರಿಸಿರುತ್ತಾನೆ. ಏನೇ ಆದರೂ ಅದನ್ನು ಯಾರು ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳುವ ಹಿರಿಯರ ವಾಕ್ಯಕ್ಕೂ ಈ ಘಟನೆ ಕನ್ನಡಿಯಂತಿದೆ. ಇಬ್ಬರು ಕುಟುಂಬದವರ ಸಮ್ಮುಖದಲ್ಲಿ ಹುಡುಗ, ಹುಡುಗಿಗೆ ಮದುವೆ ಮಾಡಲಾಗಿತ್ತು. ಆದರೆ ವಧು ಮದುವೆಯಾದ 17 ದಿನಗಳ ಬಳಿಕ ಗಂಡನ

ಲವರ್ ಜೊತೆ ಹೆಂಡತಿ ಪರಾರಿ : ಹುಡುಕಿ ಮದುವೆ ಮಾಡಿಸಿದ ಗಂಡ | ಪ್ರೀತಿ ಮಧುರ, ತ್ಯಾಗ ಅಮರ…! Read More »

ವಾಹನ ಸವಾರರಿಗೆ ಗುಡ್ ನ್ಯೂಸ್| ಇಳಿಕೆಯಾಗಲಿದೆ ಪೆಟ್ರೋಲ್, ಡೀಸೆಲ್‌ ರೇಟ್|

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಕೇಂದ್ರವು ಕಡಿತಗೊಳಿಸದಿದ್ದರೂ ಇಂಧನ ಬೆಲೆ ಕಡಿಮೆಯಾಗುವ ಸಾಧ್ಯತೆ ದಟ್ಟವಾಗಿದೆ. ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ (ಒಪೆಕ್) ಮತ್ತು ಅದರ ಮಿತ್ರರಾಷ್ಟ್ರಗಳು ಉತ್ಪಾದನೆಯನ್ನು ಹೆಚ್ಚಿಸಲು ಮುಂದಾಗಿರುವುದು ಮತ್ತು ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಳದಿಂದಾಗಿ ಜಾಗತಿಕ ಕಚ್ಚಾ ತೈಲ ಬೆಲೆ ಕುಸಿಯುತ್ತಿರುವುದರಿಂದ ಇಂಧನ ಬೆಲೆಗಳು ಇನ್ನೂ ಕಡಿಮೆಯಾಗಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ತೈಲ ಬೆಲೆಯಲ್ಲಿ ಬುಧವಾರ ಇಳಿಕೆಯಾಗಿದೆ. ಮಂಗಳವಾರ ಶೇ. 1ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಕಂಡಿದ್ದ ಬ್ರೆಂಟ್

ವಾಹನ ಸವಾರರಿಗೆ ಗುಡ್ ನ್ಯೂಸ್| ಇಳಿಕೆಯಾಗಲಿದೆ ಪೆಟ್ರೋಲ್, ಡೀಸೆಲ್‌ ರೇಟ್| Read More »

ಭಾರತ-ಪಾಕಿಸ್ತಾನ ಗಡಿಯಲ್ಲಿ ಮತ್ತೆ ಸಂಭ್ರಮ | ಪರಸ್ಪರ ಸಿಹಿ ಹಂಚಿಕೊಂಡ ಇಂಡೋ-ಪಾಕ್ ಯೋಧರು

ನವದೆಹಲಿ: ಭಾರತ ಪಾಕಿಸ್ತಾನ ನಡುವಿನ ಗಡಿಯಲ್ಲಿ ಇಂದು ಎರಡೂ ದೇಶಗಳ ಯೋಧರು ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಈ ಮೂಲಕ ಎರಡು ರಾಷ್ಟ್ರಗಳ ಯೋಧರು ಬ್ರಾತೃತ್ವ ಸಾರುವ ಈದ್ ಮಿಲಾದ್ ಹಬ್ಬವನ್ನು ಆಚರಿಸಿದ್ದಾರೆ. ಎರಡು ವರ್ಷಗಳ ಹಿಂದೆಯೂ ಈ ರೀತಿಯ ಸಂಭ್ರಮ ಗಡಿಯಲ್ಲಿ ಕಂಡು ಬರುತ್ತಿತ್ತು. ಭಾರತದ ಸ್ವಾತಂತ್ರ್ಯ ದಿನಾಚರಣೆ, ಪಾಕಿಸ್ತಾನ ದ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ದೀಪಾವಳಿ, ಈದ್ ಇತ್ಯಾದಿ ಹಬ್ಬಗಳ ಸಂದರ್ಭದಲ್ಲಿ ಗಡಿಯಲ್ಲಿ ಯೋಧರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸುತ್ತಿದ್ದರು. ಆದರೆ 2019 ರ

ಭಾರತ-ಪಾಕಿಸ್ತಾನ ಗಡಿಯಲ್ಲಿ ಮತ್ತೆ ಸಂಭ್ರಮ | ಪರಸ್ಪರ ಸಿಹಿ ಹಂಚಿಕೊಂಡ ಇಂಡೋ-ಪಾಕ್ ಯೋಧರು Read More »