ರಾಷ್ಟ್ರೀಯ

ಕೇವಲ ₹ 62 ಕ್ಕೆ ಸಿಗಲಿದೆ ಪೆಟ್ರೋಲ್’ನ ಪರ್ಯಾಯ ಇಂಧನ | ಈ ಬಗ್ಗೆ ಸಾರಿಗೆ ಸಚಿವರು ಹೇಳಿದ್ದೇನು……?

ನವದೆಹಲಿ: ಪೆಟ್ರೋಲ್ ಗೆ ಪರ್ಯಾಯ ಇಂಧನವಾಗಿ ಇಥನಾಲ್ ಬಳಸಬಹುದಾಗಿದ್ದು, ಇಥನಾಲ್ ಇಂಜಿನ್ ಗಳನ್ನು ತಯಾರಿಸಲು ಶೀಘ್ರವೇ ಆಟೋಮೋಬೈಲ್ ಕಂಪನಿಗಳಿಗೆ ಸೂಚಿಸಲಾಗುವುದೆಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಘಡ್ಕರಿ ಹೇಳಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ದಿನೇ ದಿನೇ ಹೆಚ್ಚಳವಾಗುತ್ತಿರುವುದು ಜನಸಾಮಾನ್ಯರ ಮೇಲೆ ಪರಿಣಾಮ ಬೀರಿದೆ ನಿಜ. ಇದು ಸರ್ಕಾರದ ಗಮನದಲ್ಲಿದೆ. ಆದರೆ ಇಂಧನ ಬೆಲೆ ಜಾಗತಿಕ ಮಟ್ಟದಲ್ಲಿ ನಿರ್ಧಾರವಾಗುತ್ತಿರುವುದರಿಂದ ಬೆಲೆ ಇಳಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಿಲ್ಲ. ಅದಕ್ಕಾಗಿ ಪೆಟ್ರೋಲ್ ಗೆ ಪರ್ಯಾಯ ಇಂಧನವನ್ನು ನಾವೇ […]

ಕೇವಲ ₹ 62 ಕ್ಕೆ ಸಿಗಲಿದೆ ಪೆಟ್ರೋಲ್’ನ ಪರ್ಯಾಯ ಇಂಧನ | ಈ ಬಗ್ಗೆ ಸಾರಿಗೆ ಸಚಿವರು ಹೇಳಿದ್ದೇನು……? Read More »

ಕೊಡಗಿನ ಕಾಡಿನಲ್ಲಿ ನೆಲೆಯೂರಲು ಸಿದ್ಧತೆ ನಡೆಸಿದ್ದ ಐಸಿಸ್ | ರಾಜ್ಯದ ಹಿಂದೂ ಮುಖಂಡರ ಹತ್ಯೆಗೆ ಸಂಚು……!? | ಐಎನ್ಎ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು: ರಾಜ್ಯದ ಹಿಂದೂ ಸಂಘಟನೆಗಳ ಮುಖಂಡರುಗಳ ಹತ್ಯೆಗೆ ಸಂಚು ರೂಪಿಸಿ ಕೊಡಗು ಸಹಿತ ರಾಜ್ಯದ ಕೆಲವು ದಟ್ಟ ಅರಣ್ಯ ಪ್ರದೇಶದಲ್ಲಿ ನೆಲೆಯೂರಲು ಉಗ್ರ ಸಂಘಟನೆಗಳು ಸಿದ್ಧತೆ ನಡೆಸಿದ್ದವು ಎಂಬ ಸ್ಪೋಟಕ ಮಾಹಿತಿ ಬಹಿರಂಗ ಗೊಂಡಿದೆ. ದಕ್ಷಿಣ ಭಾರತದ ಅರಣ್ಯ ಪ್ರದೇಶಗಳಲ್ಲಿ ಐಸಿಸ್ ಪ್ರೇರಿತ ಅಲ್-ಹಿಂದ್ ಉಗ್ರ ಸಂಘಟನೆಯ ಪ್ರಾಂತ್ಯ ಸ್ಥಾಪಿಸಿ, ಪ್ರತಿ ಪ್ರಾಂತ್ಯದಲ್ಲಿ 50-100 ಉಗ್ರರನ್ನು ಬಿಟ್ಟು ರಾಜ್ಯದಲ್ಲಿ ವಿದ್ವಂಸಕ ಕೃತ್ಯಗಳನ್ನು ನಡೆಸುವ ಯೋಜನೆಯಿತ್ತು ಎಂದು ಕೇಂದ್ರ ತನಿಖಾ ದಳ ಐಎನ್ಎ ತಿಳಿಸಿದೆ. ದಿಲ್ಲಿಯಲ್ಲಿ ಸೆರೆಯಾದ ಉಗ್ರ

ಕೊಡಗಿನ ಕಾಡಿನಲ್ಲಿ ನೆಲೆಯೂರಲು ಸಿದ್ಧತೆ ನಡೆಸಿದ್ದ ಐಸಿಸ್ | ರಾಜ್ಯದ ಹಿಂದೂ ಮುಖಂಡರ ಹತ್ಯೆಗೆ ಸಂಚು……!? | ಐಎನ್ಎ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ Read More »

ಮುಸ್ಲಿಂ ವ್ಯಕ್ತಿಗೆ ಥಳಿಸಿದ ವಿಡಿಯೋ ಹಂಚಿಕೊಂಡ ಆರೋಪ | ಪತ್ರಕರ್ತೆ ರಾಣಾ ಅಯ್ಯೂಬ್ ಬಂಧನಕ್ಕೆ ಒಂದು ತಿಂಗಳ ತಡೆ ನೀಡಿದ ಬಾಂಬೆ ಹೈಕೋರ್ಟ್‌

ಮುಂಬೈ: ಗಾಜಿಯಾಬಾದ್ ಲೋನಿಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಥಳಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತೆ ರಾಣಾ ಅಯ್ಯೂಬ್ ಅವರನ್ನು 4 ವಾರಗಳ ಕಾಲ ಬಂಧಿಸದಂತೆ ಬಾಂಬೆ ಹೈಕೋರ್ಟ್ ಆದೇಶ ನೀಡಿದೆ. ಜೂನ್ ಮೊದಲ ವಾರದಲ್ಲಿ ಗಾಝಿಯಾಬಾದ್ ಲೋನಿಯಲ್ಲಿ ಮುಸ್ಲಿಂ ವೃದ್ಧರೊಬ್ಬರನ್ನು ಯುವಕರು ಥಳಿಸಿದ ವಿಡಿಯೋವನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡ ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ರಾಣಾ ಅಯ್ಯೂಬ್ ಅವರ ವಿರುದ್ಧ FIR ದಾಖಲಾಗಿತ್ತು. FIR ದಾಖಲಾದ ಬೆನ್ನಲ್ಲೇ ರಾಣಾ ಅಯ್ಯೂಬ್ ತಮ್ಮ ಬಂಧನಕ್ಕೆ ತಡೆಕೋರಿ ಬಾಂಬೆ

ಮುಸ್ಲಿಂ ವ್ಯಕ್ತಿಗೆ ಥಳಿಸಿದ ವಿಡಿಯೋ ಹಂಚಿಕೊಂಡ ಆರೋಪ | ಪತ್ರಕರ್ತೆ ರಾಣಾ ಅಯ್ಯೂಬ್ ಬಂಧನಕ್ಕೆ ಒಂದು ತಿಂಗಳ ತಡೆ ನೀಡಿದ ಬಾಂಬೆ ಹೈಕೋರ್ಟ್‌ Read More »

ಹೆಚ್ಚು ಮಕ್ಕಳ ಹೆತ್ತವರಿಗೆ ಟ್ರೋಫಿ ಸಹಿತ ಒಂದು ಲಕ್ಷ ಬಹುಮಾನ…!

ಮಿಜೋರಾಂ: ಕೇಂದ್ರ ಸರ್ಕಾರ ಸಹಿತ ಭಾರತದ ಎಲ್ಲ ರಾಜ್ಯ ಸರ್ಕಾರಗಳು ಜನಸಂಖ್ಯಾ ನಿಯಂತ್ರಣಕ್ಕೆ ಪ್ರೋತ್ಸಾಹ ನೀಡುತ್ತಿರುವುದರ ನಡುವೆ ಮಿಜೋರಾಂನ ಕ್ರೀಡಾ ಸಚಿವರು ಅಚ್ಚರಿಯ ಘೋಷಣೆ ಒಂದನ್ನು ಮಾಡಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಹೆಚ್ಚು ಮಕ್ಕಳನ್ನು ಹೆತ್ತ ಪೋಷಕರಿಗೆ ಪ್ರಮಾಣಪತ್ರ, ಟ್ರೋಫಿ ಜೊತೆಗೆ ಒಂದು ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಮಿಜೋರಾಮ್ ನ ಕ್ರೀಡಾ ಸಚಿವ ರಾಬರ್ಟ್ ರೊಮಾವಿಯಾ ರಾಯ್ಟೆ ಈ ಹೇಳಿಕೆ ನೀಡಿದವರು. ಈ ಹೇಳಿಕೆಯ ಉದ್ದೇಶ ಕಡಿಮೆ ಜನಸಂಖ್ಯೆ ಹೊಂದಿರುವ ಮಿಜೊ ಸಮುದಾಯಗಳನ್ನು ಪ್ರೋತ್ಸಾಹಿಸುವುದಾಗಿದೆ.

ಹೆಚ್ಚು ಮಕ್ಕಳ ಹೆತ್ತವರಿಗೆ ಟ್ರೋಫಿ ಸಹಿತ ಒಂದು ಲಕ್ಷ ಬಹುಮಾನ…! Read More »

ದೀಪಾವಳಿ ವೇಳೆಗೆ ಕೊರೊನ ಮೂರನೇ ಆಟಂ ಬಾಂಬ್….! ಆತಂಕ ಎಬ್ಬಿಸಿದ ತಜ್ಞರ ಹೇಳಿಕೆ

ನವದೆಹಲಿ: ಭಾರತದಲ್ಲಿ ಇನ್ನು ಎರಡರಿಂದ ನಾಲ್ಕು ತಿಂಗಳ ಅವಧಿಯೊಳಗೆ ಕೊರೋನಾ 3ನೇ ಅಲೆ ಕಾಣಿಸಿಕೊಳ್ಳಬಹುದು ಆರೋಗ್ಯ ಕ್ಷೇತ್ರದ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಮೊದಲ 2 ಅಲೆಗೆ ಹೋಲಿಸಿದರೆ ಭಾರತವು 3ನೇ ಅಲೆಯನ್ನು ಹೆಚ್ಚು ಉತ್ತಮ ರೀತಿಯಲ್ಲಿ ನಿರ್ವಹಿಸಲಿದೆ ಎಂದು ಹೇಳಿದ್ದಾರೆ. ರಾಯಿಟರ್ಸ್‌ ಸುದ್ದಿ ಸಂಸ್ಥೆ ಆನ್‌ಲೈನ್‌ ಮೂಲಕ 40 ಜನ ಆರೋಗ್ಯ ಕ್ಷೇತ್ರದ ತಜ್ಞರು, ವೈದ್ಯರು, ವಿಜ್ಞಾನಿಗಳು, ಸೂಕ್ಷ್ಮಾಣುಜೀವಿ ಮತ್ತು ಸಾಂಕ್ರಾಮಿಕ ರೋಗ ತಜ್ಞರನ್ನು ಸಮೀಕ್ಷೆಗೆ ಒಳಪಡಿಸಿತ್ತು. ಈ ವೇಳೆ 3 ತಜ್ಞರು ಆಗಸ್ಟ್‌ ವೇಳೆಗೆ

ದೀಪಾವಳಿ ವೇಳೆಗೆ ಕೊರೊನ ಮೂರನೇ ಆಟಂ ಬಾಂಬ್….! ಆತಂಕ ಎಬ್ಬಿಸಿದ ತಜ್ಞರ ಹೇಳಿಕೆ Read More »

ಪಾಕಿಸ್ತಾನದ ಮಾರ್ಗದರ್ಶನದಲ್ಲಿ ಭಾರತೀಯರ ಮತಾಂತರ | ಸಾವಿರ ಸಾವಿರ ಸಂಖ್ಯೆಯಲ್ಲಿ ಅನ್ಯಧರ್ಮೀಯರು ಇಸ್ಲಾಂಗೆ….!?

ಉತ್ತರ ಪ್ರದೇಶ: ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಮಕ್ಕಳು ಮತ್ತು ಅಸಹಾಯಕರನ್ನು ಆಮಿಷ ಒಡ್ಡಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಈ ಸಂಬಂಧ ಇಬ್ಬರನ್ನು ಉತ್ತರ ಪ್ರದೇಶದ ಎಟಿಎಸ್ ಅಧಿಕಾರಿಗಳು ಬಂಧಿಸಿದ್ದಾರೆ. ಕಳೆದ ಜೂನ್ 2ರಂದು ದೆಹಲಿಯ ದಾಸನ ದ ದೇವಾಲಯಕ್ಕೆ ಇಬ್ಬರು ಅಕ್ರಮವಾಗಿ ನುಸುಳಿದ್ದರು. ಆ ಸಂಬಂಧ ಅವರಿಬ್ಬರನ್ನು ಬಂದಿಸಿ ತೀವ್ರ ವಿಚಾರಣೆಗೊಳಪಡಿಸಿದಾಗ ಹಲವಾರು ಆಘಾತಕಾರಿ ಅಂಶಗಳು ಹೊರಬಂದಿವೆ. ಬಂಧಿತರನ್ನು ಜಂಹಗೀರ್ ಹಾಗೂ ಉಮರ್ ಗೌತಮ್ ಎಂದು ಗುರುತಿಸಲಾಗಿದೆ. ಇದರಲ್ಲಿ ಉಮರ್ ಗೌತಮ್

ಪಾಕಿಸ್ತಾನದ ಮಾರ್ಗದರ್ಶನದಲ್ಲಿ ಭಾರತೀಯರ ಮತಾಂತರ | ಸಾವಿರ ಸಾವಿರ ಸಂಖ್ಯೆಯಲ್ಲಿ ಅನ್ಯಧರ್ಮೀಯರು ಇಸ್ಲಾಂಗೆ….!? Read More »

ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ: ಮೂವರು ಸಾವು

ತಮಿಳುನಾಡು: ದೇಶದಲ್ಲೇ ಅತೀ ಹೆಚ್ಚು ಪಟಾಕಿ ಉತ್ಪಾದಿಸುವ ತಮಿಳುನಾಡಿನ ಶಿವಕಾಶಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ ಒಂದು ಮಗು ಮತ್ತು ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಶಿವಕಾಶಿಯ ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಇಂದು ಮುಂಜಾನೆ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ ಇತರ ಇಬ್ಬರು ಗಾಯಗೊಂಡಿದ್ದಾರೆ. ಸ್ಪೋಟದ ತೀವ್ರತೆಗೆ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿದ್ದು, ಕಾರ್ಖಾನೆ ಸುಟ್ಟು ಕರಕಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ: ಮೂವರು ಸಾವು Read More »

ಮೂವರು ಲಷ್ಕರ್-ಎ -ತಾಯ್ಬ ಉಗ್ರರನ್ನು ಸದೆಬಡಿದ ಸೇನೆ

ಬರಾಮುಲ್ಲ: ಲಷ್ಕರ್ -ಇ- ತಾಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಸೇರಿದಂತೆ ಮೂವರು ಉಗ್ರರನ್ನು ಭಾರತೀಯ ಸೇನೆ ಇಂದು ಮುಂಜಾನೆ ಹತ್ಯೆ ಮಾಡಿದೆ. ಜಮ್ಮು-ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯ ಸುಪೋರ್ ನಲ್ಲಿ ಉಗ್ರರು ಇರುವ ಮಾಹಿತಿ ಪಡೆದ ಸೇನೆ ಯೋಜಿತ ದಾಳಿ ನಡೆಸಿ ಉಗ್ರರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದೆ. ನಿನ್ನೆ ರಾತ್ರಿ ಆರಂಭವಾದ ಸೇನಾಕಾರ್ಯಾಚರಣೆ ಇಂದು ಮುಂಜಾನೆ ಉಗ್ರ ಸಂಘಟನೆಯ ಕಮಾಂಡರ್ ಮುದಾಸಿರ್ ಪಂಡಿತ್ ಹತ್ಯೆಯಾಗುವ ಮೂಲಕ ಕೊನೆಗೊಂಡಿದೆ ಎಂದು ತಿಳಿದುಬಂದಿದೆ. ಈ ಉಗ್ರರು ವಾರದ ಹಿಂದೆ ಇಬ್ಬರು ನಾಗರಿಕರು ಮತ್ತು

ಮೂವರು ಲಷ್ಕರ್-ಎ -ತಾಯ್ಬ ಉಗ್ರರನ್ನು ಸದೆಬಡಿದ ಸೇನೆ Read More »

ಕೊನೆಗೂ ಭಾಷೆ ಕಲಿಸುವ ಲೋಕಸಭಾ ಕಾರ್ಯಗಾರದಲ್ಲಿ ಸೇರ್ಪಡೆಯಾಯ್ತು ಕನ್ನಡ

ಬೆಂಗಳೂರು: ಆರಂಭದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿದ್ದ ಕೇಂದ್ರ ಸರ್ಕಾರ ಇದೀಗ ಲೋಕಸಭೆ ಸಚಿವಾಲಯದ ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಸೇರ್ಪಡಿಸಿ ಆದೇಶ ಹೊರಡಿಸಿದೆ. ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ದೇಶೀಯ ಮತ್ತು ವಿದೇಶಿ ಭಾಷೆಗಳನ್ನು ಕಲಿಸಲು ಜೂ.22ರಂದು ದೆಹಲಿಯಲ್ಲಿ ಪ್ರೈಡ್‌ ಕಲಿಕಾ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ತೆಲುಗು, ಬಂಗಾಳಿ, ಮರಾಠಿ, ತಮಿಳು ಸೇರಿದಂತೆ ಬಹುತೇಕ ಭಾಷೆಗಳನ್ನು ಸೇರ್ಪಡೆ ಮಾಡಿ ಕನ್ನಡವನ್ನು ನಿರ್ಲಕ್ಷ್ಯಿಸಲಾಗಿತ್ತು. ಈ ಹಿನ್ನಲೆಯಲ್ಲಿ ಕನ್ನಡಿಗರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಲೋಕಸಭೆ ಕನ್ನಡ ಭಾಷೆಯನ್ನು ಸೇರ್ಪಡಿಸಿಕೊಂಡಿದೆ. ಲೋಕಸಭಾ ಸಚಿವಾಲಯದ

ಕೊನೆಗೂ ಭಾಷೆ ಕಲಿಸುವ ಲೋಕಸಭಾ ಕಾರ್ಯಗಾರದಲ್ಲಿ ಸೇರ್ಪಡೆಯಾಯ್ತು ಕನ್ನಡ Read More »

ಯೋಗ ಕೊರೊನ ಸಂಕಷ್ಟ‌ ನಿವಾರಣೆಯ ಆಶಾಕಿರಣ- ಪ್ರಧಾನಿ ಮೋದಿ

ನವದೆಹಲಿ : ಕೊರೊನಾ ಸಂಕಷ್ಟ ತೊಲಗಿಸಲು ಯೋಗ ಆಶಾಕಿರಣವಾಗಿದೆ. ಯೋಗದಿಂದ ಜನರ ಉತ್ಸಾಹ ಪ್ರೀತಿ ಹೆಚ್ಚಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಇಂದು 7 ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಭಾಷಣ ಮಾಡಿದ ಪ್ರಧಾನಿ ಮೋದಿ, ದೇಶದ ಮೂಲೆ ಮೂಲೆಯಲ್ಲಿ ಲಕ್ಷಾಂತರ ಜನರಿಂದ ಯೋಗ ನಡೆಯುತ್ತಿದೆ. ಕೊರೊನಾದ ವಿರುದ್ಧ ಹೋರಾಡಲು ಯೋಗ ಸಹಕಾರಿಯಾಗಿದೆ. ಕೊರೊನಾದಿಂದ ಇಂದು ವಿಶ್ವವೇ ನರಳುತ್ತಿದೆ. ಹೀಗಾಗಿ ದೊಡ್ಡ ಕಾರ್ಯಕ್ರಾಮ ಆಯೋಜನೆ ಮಾಡಲಾಗುತ್ತಿಲ್ಲ.ಆದರೂ ಯೋಗ ದಿನದ ಹುಮ್ಮಸ್ಸು ಮಾತ್ರ ಕಡಿಮೆಯಾಗಲ್ಲ. ಈ ಬಾರಿಯ

ಯೋಗ ಕೊರೊನ ಸಂಕಷ್ಟ‌ ನಿವಾರಣೆಯ ಆಶಾಕಿರಣ- ಪ್ರಧಾನಿ ಮೋದಿ Read More »