ರಾಷ್ಟ್ರೀಯ

ಅರಣ್ಯ ಕ್ಯಾಂಟೀನ್/ ಚುನಾವಣೆ ನಂತರ ಸ್ಥಾಪನೆಗೆ ರೂಪುರೇಷೆ

ಸಮಗ್ರ ನ್ಯೂಸ್: ರಾಜ್ಯ ಅರಣ್ಯ ಇಲಾಖೆ ಸಿಬ್ಬಂದಿಯ ಬಹುದಿನದ ಬೇಡಿಕೆಯಾದ ಅರಣ್ಯ ಕ್ಯಾಂಟೀನ್ ಸ್ಥಾಪನೆಗೆ ಇಲಾಖೆ ಮುಂದಾಗಿದ್ದು, ಚುನಾವಣೆಯ ನಂತರ ಆ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಂಡು ಕ್ಯಾಂಟೀನ್ ಸ್ಥಾಪನೆಗೆ ರೂಪುರೇಷೆ ಸಿದ್ಧಪಡಿಸಲು ನಿರ್ಧರಿಸಲಾಗಿದೆ. ಕಡಿಮೆ ಬೆಲೆಯಲ್ಲಿ ಪಡಿತರ ಸಿಗಲು ಪೊಲೀಸ್ ಕ್ಯಾಂಟೀನ್ ಮಾದರಿಯಲ್ಲಿ ಅರಣ್ಯ ಕ್ಯಾಂಟೀನ್ ಸ್ಥಾಪಿಸುವಂತೆ ಹಲವು ವರ್ಷಗಳಿಂದ ಆಗ್ರಹಕ್ಕೆ ಪೂರಕವಾಗಿ ಕೆಲ ತಿಂಗಳ ಹಿಂದಷ್ಟೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಮತ್ತು ಮುಖ್ಯ ವನ್ಯಜೀವಿ ವಾರ್ಡನ್ ಸುಭಾಷ್ ಮಾಲ್ಖೆಡೆ ಅವರು ಸೇನೆ […]

ಅರಣ್ಯ ಕ್ಯಾಂಟೀನ್/ ಚುನಾವಣೆ ನಂತರ ಸ್ಥಾಪನೆಗೆ ರೂಪುರೇಷೆ Read More »

ಚೆನ್ನೈ: ಚುನಾವಣೆಯ ಬಗ್ಗೆ ಭವಿಷ್ಯ ನುಡಿದ ಗಿಳಿ ಮಾಲೀಕನ ಬಂಧನ

ಸಮಗ್ರ ನ್ಯೂಸ್‌ : ಲೋಕಸಭಾ ಚುನಾವಣೆಯ ಪ್ರಚಾರ ಜೋರಾಗಿದ್ದು, ತಮಿಳುನಾಡಿನಲ್ಲಿ PMK ಪಕ್ಷದ ಚುನಾವಣಾ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಗಿಳಿಯೊಂದು ಭವಿಷ್ಯ ನುಡಿದಿದ್ದು, ಗಿಳಿಯ ಮಾಲೀಕನನ್ನು ಪೊಲೀಸರು ಬಂಧಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಗಿಳಿಮರಿ ಕೈಯಲ್ಲಿ ಭವಿಷ್ಯ ಹೇಳಿಸಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಕಡಲೂರು ಲೋಕಸಭಾ ಕ್ಷೇತ್ರದಲ್ಲಿ ಪಿಎಂಕೆ ಪಕ್ಷದಿಂದ ಥಂಕರ್ ಬಚ್ಚನ್ ಅವರು ಸ್ಪರ್ಧಿಸಿದ್ದಾರೆ. ಇವರು ಬೀದಿ ಬದಿಯಲ್ಲಿ ಗಿಳಿ ಶಾಸ್ತ್ರ ಕೇಳಿದ್ದರು. ಸೆಲ್ವರಾಜ್ ಎಂಬುವವರು ಗಿಳಿ ಕೈಯಲ್ಲಿ ಭವಿಷ್ಯ ಹೇಳಿಸಿ ಥಂಕರ್

ಚೆನ್ನೈ: ಚುನಾವಣೆಯ ಬಗ್ಗೆ ಭವಿಷ್ಯ ನುಡಿದ ಗಿಳಿ ಮಾಲೀಕನ ಬಂಧನ Read More »

ಇನ್ಸ್ಟಾಗ್ರಾಮ್ ನಲ್ಲಿ ಹೊಸ ಅಪ್ಡೇಟ್| ಬ್ಲ್ಯಾಕ್ ಮೇಲ್‌ಮಾಡುವವರಿಗೆ ಬಿತ್ತು‌ ಭರ್ಜರಿ ಶಾಕ್| ಏನದು ಹೊಸ ಟೆಕ್ನಾಲಜಿ!?

ಸಮಗ್ರ ನ್ಯೂಸ್: ಮಕ್ಕಳ ಬೆತ್ತಲೆ ಚಿತ್ರಗಳನ್ನು ಪೋಷಕರಿಗೆ ಕಳುಹಿಸಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುವ ಘಟನೆಗಳು ಹಲವು ಕಡೆ ನಡೆದ ಹಿನ್ನೆಲೆ ಇನ್ಸ್ಟಾಗ್ರಾಮ್ ಹೊಸ ಸುರಕ್ಷತಾ ವೈಶಿಷ್ಟ್ಯವನ್ನು ಪರಿಚಯಿಸುತ್ತಿದೆ ಎಂದು ವರದಿಯಾಗಿದೆ. ಹದಿಹರೆಯದವರು ತಮ್ಮ ನೇರ ಸಂದೇಶಗಳಲ್ಲಿ ಅನಗತ್ಯ ನಗ್ನ ಫೋಟೋಗಳನ್ನು ನೋಡದಂತೆ ರಕ್ಷಿಸಲು ಸಹಾಯ ಮಾಡಲು ಇನ್ಸ್ಟಾಗ್ರಾಮ್ ಹೊಸ ಸುರಕ್ಷತಾ ವೈಶಿಷ್ಟ್ಯವನ್ನು ಪರಿಚಯಿಸುತ್ತಿದೆ ಎಂದು ವರದಿಯಾಗಿದೆ. 18 ವರ್ಷದೊಳಗಿನವರಿಗೆ ಅಶ್ಲೀಲ ಫೋಟೋ ಬ್ಲರ್ ಆಗಿ ಕಾಣಿಸಲಿದೆ. 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬಂದರೆ ಮಸುಕಾಗಿಯೇ ಇರುತ್ತವೆ. 18

ಇನ್ಸ್ಟಾಗ್ರಾಮ್ ನಲ್ಲಿ ಹೊಸ ಅಪ್ಡೇಟ್| ಬ್ಲ್ಯಾಕ್ ಮೇಲ್‌ಮಾಡುವವರಿಗೆ ಬಿತ್ತು‌ ಭರ್ಜರಿ ಶಾಕ್| ಏನದು ಹೊಸ ಟೆಕ್ನಾಲಜಿ!? Read More »

ಜಮ್ಮು ಮತ್ತು ಕಾಶ್ಮೀರ ಶೀಘ್ರದಲ್ಲೇ ಸಂಪೂರ್ಣ ರಾಜ್ಯ/ ನರೇಂದ್ರ ಮೋದಿ ಹೇಳೀಕೆ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರವನ್ನು ಶೀಘ್ರದಲ್ಲೇ ಸಂಪೂರ್ಣ ರಾಜ್ಯವಾಗಿ ಮರುಸ್ಥಾಪಿಸಲಾಗುವುದು ಮತ್ತು ಈ ಪ್ರಕ್ರಿಯೆಯ ಭಾಗವಾಗಿ, ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಲ್ಲಿಯವರೆಗೆ ಏನಾಗಿದೆ ಎಂಬುದು ಕೇವಲ ಟ್ರೈಲರ್ ಮಾತ್ರ. ಹೊಸ ಜಮ್ಮು ಮತ್ತು ಕಾಶ್ಮೀರದ ಅದ್ಭುತ ಚಿತ್ರವನ್ನು ನಾನು ಚಿತ್ರಿಸಬೇಕಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಮಯ ದೂರವಿಲ್ಲ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಸಿಗಲಿದೆ ಎಂದು ಉಧಂಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ

ಜಮ್ಮು ಮತ್ತು ಕಾಶ್ಮೀರ ಶೀಘ್ರದಲ್ಲೇ ಸಂಪೂರ್ಣ ರಾಜ್ಯ/ ನರೇಂದ್ರ ಮೋದಿ ಹೇಳೀಕೆ Read More »

370 ನೇ ವಿಧಿಯನ್ನು ತಿದ್ದುಪಡಿ ಮಾಡಲು ಪ್ರಯತ್ನಿಸಬೇಡಿ/ ಅಮಿತ್ ಷಾ ಎಚ್ಚರಿಕೆ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ನೇ ವಿಧಿಯನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿದ್ದು, ಅದನ್ನು ಮತ್ತೊಮ್ಮೆ ತಿದ್ದುಪಡಿ ಮಾಡುವ ಧೈರ್ಯ ಮಾಡಬೇಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್‍ಗೆ ಎಚ್ಚರಿಕೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ನೇ ವಿಧಿಯನ್ನು ರದ್ದುಗೊಳಿಸುವ ನಿರ್ಧಾರವನ್ನು ಬಿಜೆಪಿ ಕಾರ್ಯಕರ್ತರು ಮತ್ತು ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಂಡಿದ್ದಾರೆ ಎಂದು ಮಧ್ಯಪ್ರದೇಶದ ಮಂಡ್ಲಾದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿದರು. ಕಾಂಗ್ರೆಸ್

370 ನೇ ವಿಧಿಯನ್ನು ತಿದ್ದುಪಡಿ ಮಾಡಲು ಪ್ರಯತ್ನಿಸಬೇಡಿ/ ಅಮಿತ್ ಷಾ ಎಚ್ಚರಿಕೆ Read More »

18 ವರ್ಷ ತುಂಬಿದವರಿಗೆಲ್ಲಾ ಮತದಾನಕ್ಕೆ ಅವಕಾಶ

ಸಮಗ್ರ ನ್ಯೂಸ್: ಈ ವರ್ಷ 18 ಪ್ರಾಯ ತುಂಬಿದವರಿಗೂ ಚುನಾವಣಾ ಆಯೋಗ ಗುಡ್ ನ್ಯೂಸ್ ನೀಡಿದ್ದು, 2016 ರ ಜನವರಿ 1 ಮಾರ್ಚ್ 31ರ ನಡುವೆ ಜನಿಸಿದವರಿಗೂ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ. ಈಗಷ್ಟೇ 18 ವರ್ಷ ಆದವರಿಗೆ ಈಗ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶ ನೀಡದಿದ್ದರೆ ಅವರು ಮೊದಲ ಬಾರಿಗೆ ಮತ ಚಲಾಯಿಸಲು ಮುಂದಿನ ಚುನಾವಣೆಯವರೆಗೆ ಕಾಯಬೇಕಾಗುತ್ತದೆ. ಹೀಗಾಗಿ ಫಾರ್ಮ್ 6 ರ ನಿಬಂಧನೆಯ

18 ವರ್ಷ ತುಂಬಿದವರಿಗೆಲ್ಲಾ ಮತದಾನಕ್ಕೆ ಅವಕಾಶ Read More »

ಲಖನೌ: ಅರ್ಚಕರಂತೆ ವಸ್ತ ಧರಿಸಿ ಕಾಶಿ ದೇಗುಲದಲ್ಲಿ ಕರ್ತವ್ಯ ನಿರ್ವಹಿಸಲಿರುವ ಪೊಲೀಸ್‌ ಸಿಬ್ಬಂದಿ

ಸಮಗ್ರ ನ್ಯೂಸ್: ಕಾಶಿ ದೇಗುಲದಲ್ಲಿ ಪೊಲೀಸರಿಗೆ ಹೊಸ ವಸ್ತ್ರಸಂಹಿತೆ ಜಾರಿಗೊಳಿಸಲಾಗಿದೆ. ಕೊರಳಲ್ಲಿ ರುದ್ರಾಕ್ಷಿ ಮಾಲೆ ಧರಿಸಿ, ಹಣೆಯಲ್ಲಿ ಗಂಧ ಅಥವಾ ವಿಭೂತಿ ಹಚ್ಚಿಕೊಂಡು, ಕಿತ್ತಳೆ ಬಣ್ಣದ ವಸ್ತ ಧರಿಸಿಕೊಂಡು ಥೇಟ್‌ ಅರ್ಚಕರಂತೆ ಪ್ರಸಿದ್ಧ ವಾರಾಣಸಿಯ ಕಾಶಿ ವಿಶ್ವನಾಥ ದೇಗುಲದ ಗರ್ಭಗುಡಿಯಲ್ಲಿ ಉತ್ತರಪ್ರದೇಶದ ಪೊಲೀಸ್‌ ಸಿಬ್ಬಂದಿ, ಭಕ್ತರು ದರ್ಶನಕ್ಕೆ ಬರುವ ವೇಳೆ ಕರ್ತವ್ಯ ನಿರ್ವಹಿಸಲಿದ್ದಾರೆ.‌ ವಿಶ್ವನಾಥನ ಗರ್ಭಗುಡಿಯ ಕರ್ತವ್ಯಕ್ಕೆ ನಿಯೋಜಿಸಲಾದ ಪೊಲೀಸ್‌ ಸಿಬ್ಬಂದಿಗೆ ಮಾತ್ರ ಈ ಹೊಸ ವಸ್ತ್ರಸಂಹಿತೆ ಅನ್ವಯಿಸಲಿದೆ. ಗರ್ಭಗುಡಿಯಲ್ಲಿ ಕರ್ತವ್ಯ ನಿಯೋಜಿತ ಮಹಿಳಾ ಪೊಲೀಸ್‌ ಸಿಬ್ಬಂದಿಯೂ

ಲಖನೌ: ಅರ್ಚಕರಂತೆ ವಸ್ತ ಧರಿಸಿ ಕಾಶಿ ದೇಗುಲದಲ್ಲಿ ಕರ್ತವ್ಯ ನಿರ್ವಹಿಸಲಿರುವ ಪೊಲೀಸ್‌ ಸಿಬ್ಬಂದಿ Read More »

ಚಂಡೀಗಢ:ಇಂದಿರಾ ಗಾಂಧಿ ಹಂತಕನ ಪುತ್ರ ಲೋಕಸಭಾ ಚುನಾವಣೆಗೆ ಸ್ಪರ್ಧೆ

ಸಮಗ್ರ ನ್ಯೂಸ್‌ : ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹಂತಕನ ಪುತ್ರನೊಬ್ಬ ಪಂಜಾಬ್‌ನ ಸಂಸತ್ ಚುನಾವಣೆಯಲ್ಲಿ ಫರೀದ್‌ಕೋಟ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. 12ನೇ ತರಗತಿಯಲ್ಲಿ ಡ್ರಾಪ್ಔಟ್ ಆಗಿದ್ದ ಸರಬ್ಜಿತ್ ಸಿಂಗ್ ಖಾಲ್ಸಾ (45) ಚುನಾವಣೆಯಲ್ಲಿ ಸ್ಪರ್ಧೆಗಿಳಿದಿದ್ದಾರೆ. ಇವರು ದಿವಂಗತ ಪ್ರಧಾನಿಯ ಇಬ್ಬರು ಹಂತಕರಲ್ಲಿ ಒಬ್ಬನಾದ ಬಿಯಾಂತ್ ಸಿಂಗ್ ಮಗ. 2014 ಮತ್ತು 2009 ರಲ್ಲಿ ಸರಬ್ಜಿತ್ ಸಿಂಗ್ ಖಾಲ್ಸಾ ಅವರು ಅನುಕ್ರಮವಾಗಿ ಫತೇಘರ್ ಸಾಹಿಬ್ (ಮೀಸಲು) ಮತ್ತು ಬಟಿಂಡಾ ಕ್ಷೇತ್ರಗಳಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.

ಚಂಡೀಗಢ:ಇಂದಿರಾ ಗಾಂಧಿ ಹಂತಕನ ಪುತ್ರ ಲೋಕಸಭಾ ಚುನಾವಣೆಗೆ ಸ್ಪರ್ಧೆ Read More »

ಇವಿಎಂ ಕುರಿತು ಅಪಪ್ರಚಾರ/ ಮಾನಿಟರಿಂಗ್ ತಂಡ ರಚಿಸಿದ ಪೊಲೀಸ್ ಇಲಾಖೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ವಿದ್ಯುನ್ಮಾನ ಮತಯಂತ್ರ ಕುರಿತಾಗಿ ಸುಳ್ಳು ಸುದ್ದಿ ಹಬ್ಬಿಸುವವರ ಮೇಲೆ ನಿಗಾ ಇರಿಸಿರುವ ಕೇರಳ ಪೊಲೀಸರು ಮುಲಾಜಿಲ್ಲದೆ ಪ್ರಕರಣ ದಾಖಲಿಸಿಕೊಳ್ಳುತ್ತಿದ್ದಾರೆ. ಸಮಾಜದಲ್ಲಿ ಒಡಕು, ಘರ್ಷಣೆ, ದ್ವೇಷ ಹುಟ್ಟು ಹಾಕುವ, ಮತದಾರರನ್ನು ದಾರಿ ತಪ್ಪಿಸುವ ಸಂದೇಶ ರವಾನೆ, ಪ್ರಚಾರಕ್ಕೆ ಸಂಬಂಧಿಸಿ ಇದುವರೆಗೆ ಕೇರಳದಲ್ಲಿ ಒಟ್ಟು 12 ಪ್ರಕರಣಗಳು ದಾಖಲಾಗಿವೆ. ಮಲಪ್ಪುರಂ, ಎರ್ನಾಕುಳಂ ನಗರ, ತ್ರಿಶೂರ್ ನಗರದಲ್ಲಿ ತಲಾ ಎರಡು ಪ್ರಕರಣ ದಾಖಲಾಗಿದ್ದರೆ, ತಿರುವನಂತಪುರಂ ಗ್ರಾಮಾಂತರ, ಕೊಲ್ಲಂ ನಗರ, ಪತ್ತನಂತಿಟ್ಟ, ಅಲಪ್ಪುಳ, ಪಾಲಕ್ಕಾಡ್ ಮತ್ತು

ಇವಿಎಂ ಕುರಿತು ಅಪಪ್ರಚಾರ/ ಮಾನಿಟರಿಂಗ್ ತಂಡ ರಚಿಸಿದ ಪೊಲೀಸ್ ಇಲಾಖೆ Read More »

ನವದೆಹಲಿ: ನಾನು ಹಣಕ್ಕಾಗಿ ಗಂಡನನ್ನು ಮಾರಾಟ ಮಾಡಲು ಹಿಂದೆ ಮುಂದೆ ನೋಡುವುದಿಲ್ಲ- ಮನ್ನತ್ ಕುಲ್ಹಾರಿಯಾ

ಸಮಗ್ರ ನ್ಯೂಸ್ : ನಾನು ಹಣಕ್ಕಾಗಿ ನನ್ನ ಗಂಡನನ್ನು ಹರಾಜು ಹಾಕಲು ಅಥವಾ ಮಾರಾಟ ಮಾಡಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಇನ್ಸ್ಟಾಗ್ರಾಮ್ನಲ್ಲಿ ಮನ್ನತ್ ಕುಲ್ಹಾರಿಯಾ ವಿಡಿಯೋದಲ್ಲಿ ಹೇಳಿರುವ ಹೇಳಿಕೆ ಎಲ್ಲೆಡೆ ಸುದ್ದಿಯಾಗಿದೆ. ಶ್ರೀದೇವಿ ಹಾಗೂ ಅನಿಲ್ ಕಪೂರ್ ಜೊತೆಯಾಗಿ ನಟಿಸಿದ್ದ ಜುಡಾಯಿ ಚಿತ್ರದಲ್ಲಿ ನಾಯಕಿ ಹೇಗೆ ತನ್ನ ಗಂಡನನ್ನು ಮಾರಾಟ ಮಾಡಲು ಯೋಚಿಸುವುದಿಲ್ಲವೋ ಅದೇ ರೀತಿ ನಾನು ಸಹ ಯಾವುದೇ ಆಲೋಚನೆ ಇಲ್ಲದೇ ಆತನನ್ನು ಮಾರುತ್ತೇನೆ. ಆತ ಬೆಲೆಯಿಲ್ಲದ ವಸ್ತು ಆಗಿರುವುದರಿಂದ ನಾನು ಆತನನ್ನು ಮಾರಾಟ

ನವದೆಹಲಿ: ನಾನು ಹಣಕ್ಕಾಗಿ ಗಂಡನನ್ನು ಮಾರಾಟ ಮಾಡಲು ಹಿಂದೆ ಮುಂದೆ ನೋಡುವುದಿಲ್ಲ- ಮನ್ನತ್ ಕುಲ್ಹಾರಿಯಾ Read More »