ರಾಜ್ಯ

ಇಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ| ಬಹುನಿರೀಕ್ಷಿತ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಸಮಗ್ರ ನ್ಯೂಸ್: ರಾಜ್ಯ ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಆರ್.ವಿ ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಉದ್ಘಾಟನೆ ಮಾಡಲಿದ್ದಾರೆ. ಸದ್ಯ ರೈಲುಗಳ ಕೊರತೆ ಇರುವುದರಿಂದ ಆರಂಭದ ಕೆಲ ತಿಂಗಳು 20-25 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. 2026ರ ಮಾರ್ಚ್ ವೇಳೆಗೆ 12 ರೈಲು ಸೇರ್ಪಡೆ ಆಗಲಿದ್ದು, ಒಟ್ಟು 15 ರೈಲುಗಳು ಈ ಮಾರ್ಗದಲ್ಲಿ ಕಾರ್ಯಾಚರಣೆ ಮಾಡಲಿವೆ. ಮುಂದಿನ ದಿನಗಳಲ್ಲಿ ಟ್ರಿಪ್‌ಗಳ ಸಂಖ್ಯೆ […]

ಇಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ| ಬಹುನಿರೀಕ್ಷಿತ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ Read More »

ರೈಲ್ವೆ ಪ್ರಯಾಣಿಕರಿಗೆ ಶುಭ ಸುದ್ದಿ| ಪ್ಯಾಕೇಜ್ ಮೂಲಕ ರಿಯಾಯಿತಿ ಯೋಜನೆ

ಸಮಗ್ರ ನ್ಯೂಸ್: ರೌಂಡ್-ಟ್ರಿಪ್ ಪ್ಯಾಕೇಜ್ ಯೋಜನೆಯ ಅಡಿಯಲ್ಲಿ ಭಾರತೀಯ ರೈಲ್ವೆಯು ಪ್ರಯಾಣಿಕರಿಗೆ ಶೇ. 20 ರಷ್ಟು ರಿಯಾಯಿತಿ ನೀಡುಲು ನಿರ್ಧರಿಸಿದೆ. ಈ ಒಂದು ಯೋಜನೆಯಡಿಯಲ್ಲಿ ಒಂದೇ ಗುಂಪಿನ ಪ್ರಯಾಣಿಕರಿಗೆ ಮುಂದಿನ ಪ್ರಯಾಣ ಮತ್ತು ಹಿಂದಿರುಗುವ ಪ್ರಯಾಣ ಎರಡಕ್ಕೂ ಟಿಕೆಟ್‌ಗಳನ್ನು ಬುಕ್ ಮಾಡಿದಾಗ ರಿಯಾಯಿತಿಗಳು ಅನ್ವಯವಾಗುತ್ತವೆ ಅಲ್ಲದೆ ಬುಕ್ ಮಾಡಿದ ಟಿಕೆಟ್‌ಗಳಿಗೆ ಯಾವುದೇ ಮರುಪಾವತಿ ಇರುವುದಿಲ್ಲ. ಈ ಯೋಜನೆಯಡಿಯಲ್ಲಿ ಬುಕಿಂಗ್‌ಗಳು ಈ ತಿಂಗಳ 14 ರಿಂದ ಅಕ್ಟೋಬರ್ 13 ರ ಮುಂಗಡ ಕಾಯ್ದಿರಿಸುವ ಅವಧಿಗೆ ಪ್ರಾರಂಭವಾಗುತ್ತವೆ. ಇದಲ್ಲದೆ, ರಿಟರ್ನ್

ರೈಲ್ವೆ ಪ್ರಯಾಣಿಕರಿಗೆ ಶುಭ ಸುದ್ದಿ| ಪ್ಯಾಕೇಜ್ ಮೂಲಕ ರಿಯಾಯಿತಿ ಯೋಜನೆ Read More »

ಕುಕ್ಕೆಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದಲ್ಲಿEmployability Excellence :Career Ace ತರಬೇತಿ ಕಾರ್ಯಕ್ರಮ 

ಸಮಗ್ರ ನ್ಯೂಸ್: ಕುಕ್ಕೆಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ, ಎಚ್ ಆರ್ ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ, ಮ್ಯಾಜಿಕ್ ಬಸ್ ಇಂಡಿಯ ಫೌಂಡೇಶನ್ ಹಾಗೂ ರಿಲಯನ್ಸ್ ಫೌಂಡೇಶನ್ ಇವರ ಆಶ್ರಯದಲ್ಲಿ Employability Excellence :Career Ace ತರಬೇತಿ ಕಾರ್ಯಕ್ರಮವು 4.08.2025 ರಿಂದ 9.8.2025 ರವರೆಗೆ ನಡೆಯಿತು. ಮಹಾವಿದ್ಯಾಲಯದ ಪ್ರಾಂಶುಪಾಲರಾದ Dr. ದಿನೇಶ   ಪಿ.ಟಿ. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ, ಪ್ರೀತಮ್ ಪ್ರಸಾದ್ ಎಸ್. ಪ್ಲೇಸ್ಮೆಂಟ್ ಆಫೀಸರ್, ರಿಲಯನ್ಸ್ ಫೌಂಡೇಶನ್ ಬೆಂಗಳೂರು ಹಾಗೂ ಅಜಯ್ ಕುಮಾರ್ ಎ. ಜೆ.

ಕುಕ್ಕೆಶ್ರೀ ಸುಬ್ರಮಣ್ಯೇಶ್ವರ ಮಹಾವಿದ್ಯಾಲಯದಲ್ಲಿEmployability Excellence :Career Ace ತರಬೇತಿ ಕಾರ್ಯಕ್ರಮ  Read More »

ಗೃಹಲಕ್ಷ್ಮಿಯರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಪ್ಟ್ ನೀಡಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯದ ಮಹಿಳೆಯರಿಗೆ ವರಮಮಹಾಲಕ್ಮೀ ಹಬ್ಬದ ಸಂದರ್ಭದಲ್ಲಿ ಸಿಹಿಸುದ್ದಿ ಸಿಕ್ಕಿದ್ದು, ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡುಗಡೆಯಾಗಿದೆ. 2025- 26 ನೇ ಸಾಲಿನ ಮೂರನೇ ಕಂತಿನ ಎರಡು ಸಾವಿರ ರೂಪಾಯಿಯನ್ನು ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ಎರಡು ಮೂರು ದಿನದಲ್ಲಿ ಜಮಾ ಮಾಡಲಾಗುವುದು. ರಾಜ್ಯದ 1.24 ಕೋಟಿ ಮಹಿಳೆಯರ ಖಾತೆಗೆ ಮೂರನೇ ಕಂತಿನ ಹಣ ಜಮಾ ಆಗಲಿದ್ದು, ನಾಲ್ಕು ಮತ್ತು ಐದನೇ ಕಂತಿನ ಹಣ ಬಾಕಿ ಉಳಿಯಲಿದೆ. ಆಯಾ ತಾಲೂಕು ಪಂಚಾಯಿತಿ

ಗೃಹಲಕ್ಷ್ಮಿಯರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಪ್ಟ್ ನೀಡಿದ ರಾಜ್ಯ ಸರ್ಕಾರ Read More »

ಧರ್ಮಸ್ಥಳ ಹಲ್ಲೆ‌ ವಿಚಾರ| ಯಾರೇ ತಪ್ಪು ಮಾಡಿದರೂ ಕ್ರಮ – ಸಿಎಂ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನಿನ್ನೆ ಖಾಸಗಿ ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಯಾರೇ ತಪ್ಪು ಮಾಡಿದರು ಅವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿನ್ನೆ ಧರ್ಮಸ್ಥಳದಲ್ಲಿ ಗಲಾಟೆ ಮಾಡಿದ್ದರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಯಾರೇ ತಪ್ಪು

ಧರ್ಮಸ್ಥಳ ಹಲ್ಲೆ‌ ವಿಚಾರ| ಯಾರೇ ತಪ್ಪು ಮಾಡಿದರೂ ಕ್ರಮ – ಸಿಎಂ Read More »

ಪುತ್ತೂರು‌‌ ಮೂಲದ‌ ಪಶುವೈದ್ಯೆ ಮಂಗಳೂರಿನಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಪುತ್ತೂರು ಮೂಲದ ಯುವ ಪಶುವೈದ್ಯೆಯೊಬ್ಬರು ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ನಡೆದಿದೆ ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ, ಚಾರ್ಟಡ್್ರ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ, ಮಂಗಳೂರಿನಲ್ಲಿ ಪಶು ವೈದ್ಯೆಯಾಗಿದ್ದ ಡಾ.ಕೀರ್ತನಾ ಜೋಶಿ (27) ಸೋಮವಾರ ರಾತ್ರಿ ಮಂಗಳೂರಿನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೀರ್ತನಾ ಜೋಶಿ ಅವರ ಮೃತದೇಹವನ್ನು ಪುತ್ತೂರಿನ ಮನೆಗೆ ತಂದು ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಪಶು ವೈದ್ಯಕೀಯದಲ್ಲಿ ಎಂ.ಡಿ. ಶಿಕ್ಷಣ ಪೂರೈಸಿದ್ದ ಡಾ. ಕೀರ್ತನಾ ಜೋಶಿ

ಪುತ್ತೂರು‌‌ ಮೂಲದ‌ ಪಶುವೈದ್ಯೆ ಮಂಗಳೂರಿನಲ್ಲಿ ಆತ್ಮಹತ್ಯೆ Read More »

ಧರ್ಮಸ್ಥಳ: ಯೂಟ್ಯೂಬ್ ವಾಹಿನಿಗಳ ಪ್ರತಿನಿಧಿಗಳ ಮೇಲೆ‌ ಅನಾಮಿಕರಿಂದ‌ ಗೂಂಡಾಗಿರಿ| ನಾಲ್ವರು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಪಾಂಗಾಳದ ದಿ. ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮ ಪ್ರತಿನಿಧಿಗಳ ಮೇಲೆ ಆಗಂತುಕರು ದಾಳಿ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬುಧವಾರ ಸಂಜೆ ವರದಿಯಾಗಿದೆ. ಕುಡ್ಲ ರ‍್ಯಾಂಪೇಜ್ ಎಂಬ ಹೆಸರಿನ ಯೂಟ್ಯೂಬರ್ ಆಗಿರುವ ಅಜಯ್ ಅಂಚನ್ ಅವರ ಜೊತೆಗೆ, ಯುನೈಟೆಡ್‌ ಮೀಡಿಯಾದ ಅಭಿಷೇಕ್, ಸಂಚಾರಿ ಸ್ಟುಡಿಯೋದ ವಿಜಯ್ ಮತ್ತು ಕುಡ್ಲಾ ರಾಂಪೇಜ್‌ನ ಕ್ಯಾಮೆರಾ ಪರ್ಸನ್ ಮೇಲೆ ದಾಳಿ

ಧರ್ಮಸ್ಥಳ: ಯೂಟ್ಯೂಬ್ ವಾಹಿನಿಗಳ ಪ್ರತಿನಿಧಿಗಳ ಮೇಲೆ‌ ಅನಾಮಿಕರಿಂದ‌ ಗೂಂಡಾಗಿರಿ| ನಾಲ್ವರು ಆಸ್ಪತ್ರೆಗೆ ದಾಖಲು Read More »

ಧರ್ಮಸ್ಥಳ ಪ್ರಕರಣ| ಮೀಸಲು ಅರಣ್ಯದಲ್ಲಿ ಹೆಣ ಹೂತವರ ವಿರುದ್ಧವೂ ಕ್ರಮ – ಸಚಿವ ಖಂಡ್ರೆ

ಸಮಗ್ರ ನ್ಯೂಸ್: ಧರ್ಮಸ್ಥಳ ಸುತ್ತಮುತ್ತ ಮೀಸಲು ಅರಣ್ಯದೊಳಗೆ ಸಮಾಧಿ ಅಗೆಯುತ್ತಿರುವ ಎಸ್.ಐ.ಟಿ.ಗೆ ಕೆಲವೆಡೆ ಮಾನವರ ಅಸ್ಥಿ ಸಿಕ್ಕಿದ್ದು, ತನಿಖೆ ಮುಗಿದ ಬಳಿಕ ಅಕ್ರಮವಾಗಿ ಶವ ಹೂತಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೀದರ್ ನಲ್ಲಿಂದು ಕರ್ನಾಟಕ ಮಾಧ್ಯಮ ಅಕಾಡಮಿ ಆಯೋಜಿಸಿದ್ದ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯದಲ್ಲಿ ಅಕ್ರಮವಾಗಿ ಶವ ಹೂತಿರುವುದು ದೃಢಪಟ್ಟರೆ, ಬೇಜವಾಬ್ದಾರಿತನ, ನಿರ್ಲಕ್ಷ್ಯ ತೋರಿದ ಅರಣ್ಯ ಅಧಿಕಾರಿ,

ಧರ್ಮಸ್ಥಳ ಪ್ರಕರಣ| ಮೀಸಲು ಅರಣ್ಯದಲ್ಲಿ ಹೆಣ ಹೂತವರ ವಿರುದ್ಧವೂ ಕ್ರಮ – ಸಚಿವ ಖಂಡ್ರೆ Read More »

ಮಂಗಳೂರಿಗೆ ಬಂದಿಳಿದ T-55 ಯುದ್ಧ ಟ್ಯಾಂಕ್

ಸಮಗ್ರ ನ್ಯೂಸ್: ಸಾಮಾನ್ಯವಾಗಿ ಯುದ್ಧದಲ್ಲಿ ಪಾಲ್ಗೊಂಡು ಸೇವೆಯಿಂದ ನಿವೃತ್ತಿ ಪಡೆದ ಟ್ಯಾಂಕ್ ಮತ್ತಿತರ ಸೇನೆಯ ಆಯುಧಗಳನ್ನು ವಾರ್ ಟ್ರೋಫಿ (ಯುದ್ಧ ಸ್ಮರಣಿಕೆ) ರೀತಿಯಲ್ಲಿ ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅದೇ ರೀತಿ ಮಂಗಳೂರಿಗೆ ಟ್ಯಾಂಕ್ ಅನ್ನು ನೀಡುವಂತೆ ಸಂಸದ ಕ್ಯಾ|ಬ್ರಿಜೇಶ್ ಚೌಟ ರಕ್ಷಣಾ ಸಚಿವಾಲಯಕ್ಕೆ ಮನವಿ ಮೇರೆಗೆ ಯುದ್ದ ಟ್ಯಾಂಕ್ ಮಂಗಳೂರು ತಲುಪಿದೆ. ಕದ್ರಿ ಯುದ್ಧಸ್ಮಾರಕ ಅಥವಾ ಸರ್ಕಿಟ್ ಹೌಸ್ ಮುಂಭಾಗ ಅಥವಾ ಇತರ ಯೋಗ್ಯ ಸ್ಥಳದಲ್ಲಿ ಟ್ಯಾಂಕ್ ಅನ್ನು ಇರಿಸಲಾಗುವುದು. ಅದಕ್ಕಾಗಿ ಪ್ರತ್ಯೇಕ ವೇದಿಕೆ ನಿರ್ಮಿಸುವ ಕೆಲಸವನ್ನು ಮಹಾನಗರಪಾಲಿಕೆ

ಮಂಗಳೂರಿಗೆ ಬಂದಿಳಿದ T-55 ಯುದ್ಧ ಟ್ಯಾಂಕ್ Read More »

ಬೆಳ್ತಂಗಡಿ: ಮತ್ತೆರಡು ಪ್ರಕರಣ‌‌ ಎಸ್ಐಟಿ‌ ತನಿಖೆಗೆ ಆದೇಶ| ತನಿಖೆಯಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲವೆಂದ ಹೋಮ್ ಮಿನಿಸ್ಟರ್

ಸಮಗ್ರ ನ್ಯೂಸ್: ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 31 ರಂದು 6 ನೇ ಗುರುತು ಮಾಡಿದ ಜಾಗದಲ್ಲಿ ಪತ್ತೆಯಾದ ಅಸ್ಥಿಪಂಜರ ಪ್ರಕರಣ ಆಗಸ್ಟ್ 1 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ಮತ್ತು ಆಗಸ್ಟ್ 4 ರಂದು ಅಪ್ರಾಪ್ತ ಬಾಲಕಿಯನ್ನು ಕಾನೂನು ಬಾಹಿರವಾಗಿ ಹೂತು ಹಾಕಿರುವ ಬಗ್ಗೆ ಜಯಂತ್.ಟಿ ನೀಡಿದ ದೂರಿನ ಪಿಟಿಷನ್ ಪ್ರಕರಣವನ್ನು ಮುಂದಿನ ತನಿಖೆಗಾಗಿ ಕರ್ನಾಟಕ ರಾಜ್ಯದ ಡಿಜಿಪಿ & ಐಜಿಪಿ ರವರು

ಬೆಳ್ತಂಗಡಿ: ಮತ್ತೆರಡು ಪ್ರಕರಣ‌‌ ಎಸ್ಐಟಿ‌ ತನಿಖೆಗೆ ಆದೇಶ| ತನಿಖೆಯಲ್ಲಿ ಸರ್ಕಾರದ ಹಸ್ತಕ್ಷೇಪ ಇಲ್ಲವೆಂದ ಹೋಮ್ ಮಿನಿಸ್ಟರ್ Read More »