ರಾಜ್ಯ

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ| 123 ಕೆಜಿ‌ ಗಾಂಜಾ‌ ವಶ, ಮೂವರ ಬಂಧನ

ಸಮಗ್ರ ನ್ಯೂಸ್: ಮಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ಮಾದಕ ದ್ರವ್ಯ ಕಳ್ಳಸಾಗಣೆ ತಡೆ ಕಾರ್ಯಾಚರಣೆಯಲ್ಲಿ 123 ಕೆಜಿ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಆಂಧ್ರಪ್ರದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಅಧಿಕಾರಿಗಳು ಗುರುವಾರ ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್‌ನ ಮಠದಕೆರೆ ಬಳಿ ಎರಡು ಕಾರುಗಳನ್ನು ಅಡ್ಡಗಟ್ಟಿದ್ದಾರೆ. ಈ ಕಾರುಗಳಲ್ಲಿ ನಿಷೇಧ ವಸ್ತುಗಳನ್ನು ರಾಜ್ಯದ ಗಡಿಗಳಲ್ಲಿ ಕಳ್ಳಸಾಗಣೆ ಮಾಡಲಾಗುತಿತ್ತು ಎಂದು ವರದಿಯಾಗಿದೆ. ಬಂಧಿತ […]

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ| 123 ಕೆಜಿ‌ ಗಾಂಜಾ‌ ವಶ, ಮೂವರ ಬಂಧನ Read More »

ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಮಾಧ್ಯಮ ನಿರ್ಬಂಧ ತೆರವು| ಪ್ರತಿಬಂಧಕ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಹರ್ಷೇಂದ್ರ ಕುಮಾರ್ ಅವರ ಬಗ್ಗೆ ಯಾವುದೇ ಸುದ್ದಿ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ಹೈಕೋರ್ಟ್‌ ವಜಾಗೊಳಿಸಿದೆ. ಮಾಧ್ಯಮಗಳನ್ನು ನಿರ್ಬಂಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ್ದ ಪ್ರತಿಬಂಧಕಾದೇಶ ಪ್ರಶ್ನಿಸಿ ದಕ್ಷಿಣ ಕನ್ನಡದ ‘ಕುಡ್ಲ ರ‍್ಯಾಂಪೇಜ್‌’ ಯೂಟ್ಯೂಬ್ ಚಾನಲ್‌ನ ಪ್ರಧಾನ ಸಂಪಾದಕ ಅಜಯ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯನ್ನು ಭಾಗಶಃ

ಧರ್ಮಸ್ಥಳ ಪ್ರಕರಣದ ಸುದ್ದಿ ಪ್ರಸಾರಕ್ಕೆ ಮಾಧ್ಯಮ ನಿರ್ಬಂಧ ತೆರವು| ಪ್ರತಿಬಂಧಕ ಆದೇಶ ರದ್ದುಗೊಳಿಸಿದ ಹೈಕೋರ್ಟ್ Read More »

ಪ್ರಣವ್ ರನ್ನು ಕೇಂದ್ರ ಸೇವೆಗೆ ಕಳುಹಿಸುವ ನಿರ್ಧಾರ ತೆಗೆದುಕೊಂಡಿಲ್ಲ| ಧರ್ಮಸ್ಥಳ ಪ್ರಕರಣದ ಸತ್ಯಾಂಶವೇ ಮುಖ್ಯ – ಪರಮೇಶ್ವರ್

ಸಮಗ್ರ ನ್ಯೂಸ್: ಕೇಂದ್ರ ಸರಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಧರ್ಮಸ್ಥಳ ಪ್ರಕರಣದ ಎಸ್‌ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿಯವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರಕಾರ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಬಹಳಷ್ಟು ತಪ್ಪು ಕಲ್ಪನೆಗಳನ್ನು ಹುಟ್ಟುಹಾಕಲಾಗುತ್ತಿದೆ. ಡಿಜಿ ಹಂತದ ಅಧಿಕಾರಿಯನ್ನು ಎಸ್‌ಐಟಿ ಮುಖ್ಯಸ್ಥರನ್ನಾಗಿ ಮಾಡಬೇಕು ಎಂದು ಸರಕಾರ ತೀರ್ಮಾನ ಮಾಡಿತ್ತು. ಅದರಂತೆ ಪ್ರಣವ್ ಮೊಹಾಂತಿಯವರನ್ನು ನೇಮಿಸಿದ್ದೇವೆ. ಕೇಂದ್ರ

ಪ್ರಣವ್ ರನ್ನು ಕೇಂದ್ರ ಸೇವೆಗೆ ಕಳುಹಿಸುವ ನಿರ್ಧಾರ ತೆಗೆದುಕೊಂಡಿಲ್ಲ| ಧರ್ಮಸ್ಥಳ ಪ್ರಕರಣದ ಸತ್ಯಾಂಶವೇ ಮುಖ್ಯ – ಪರಮೇಶ್ವರ್ Read More »

ಧರ್ಮಸ್ಥಳ ಪ್ರಕರಣ| ಕೋರ್ಟ್ ಆದೇಶ ಮೀರಿ ಮತ್ತೊಂದು ‌ಚಾನಲ್ ತೆರೆಯೋದ್ಯಾಕೆ? ಕುಡ್ಲ ರಾಂಪೇಜ್‌ಗೆ ಹೈಕೋರ್ಟ್ ಪ್ರಶ್ನೆ

ಸಮಗ್ರ ನ್ಯೂಸ್: ‘ನ್ಯಾಯಾಲಯದ ಆದೇಶಗಳನ್ನು ಏಕೆ ಪದೇ ಪದೇ ಉಲ್ಲಂಘನೆ ಮಾಡುತ್ತಿದ್ದೀರಿ’ ಎಂದು ಯೂ ಟ್ಯೂಬರ್‌ಗಳನ್ನು ಪ್ರಶ್ನಿಸಿರುವ ಹೈಕೋರ್ಟ್‌, ‘ಪ್ರತಿಬಂಧಕ ಆದೇಶ ನೀಡಿದ ಮೇಲೂ ಒಂದರ ನಂತರ ಮತ್ತೊಂದು (ಯೂ ಟ್ಯೂಬ್) ಚಾನಲ್‌ ಆರಂಭಿಸುತ್ತಿರುವುದೇಕೆ’ ಎಂದು ಮೌಖಿಕವಾಗಿ ಪ್ರಶ್ನಿಸಿದೆ. ‘ಕೊಲೆಯಾದ ನೂರಾರು ಶವಗಳನ್ನು ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಹೂಳಲಾಗಿದೆ’ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡಬಾರದು’

ಧರ್ಮಸ್ಥಳ ಪ್ರಕರಣ| ಕೋರ್ಟ್ ಆದೇಶ ಮೀರಿ ಮತ್ತೊಂದು ‌ಚಾನಲ್ ತೆರೆಯೋದ್ಯಾಕೆ? ಕುಡ್ಲ ರಾಂಪೇಜ್‌ಗೆ ಹೈಕೋರ್ಟ್ ಪ್ರಶ್ನೆ Read More »

ಧರ್ಮಸ್ಥಳ ಪ್ರಕರಣ| 13 ಸ್ಥಳಗಳನ್ನು ಗುರುತಿಸಿದ ಸಾಕ್ಷಿದಾರ| ಇಂದೂ ಮಹಜರು ಮುಂದುವರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮ ವ್ಯಾಪ್ತಿಯ ಹಲವೆಡೆ ಶವಗಳನ್ನು ಹೂತಿರುವುದಾಗಿ ಅನಾಮಿಕ ಹೇಳಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಎಸ್‌.ಐ.ಟಿ. (ವಿಶೇಷ ತನಿಖಾ ದಳ) ಅಧಿಕಾರಿಗಳ ಮುಂದೆ ಹಾಜರಾದ ಅನಾಮಿಕ ವ್ಯಕ್ತಿ, 13 ಸ್ಥಳಗಳನ್ನು ಗುರುತಿಸಿದಂತೆ ಸ್ಥಳ ಮಹಜರು ನಡೆಸಲಾಗಿದೆ. ಜು.27 ರಂದು ಮಂಗಳೂರಿನಲ್ಲಿ ಅನಾಮಿಕನ ಸಂಪೂರ್ಣ ಹೇಳಿಕೆ ಪಡೆದು ಪ್ರಕರಣವನ್ನು ಚುರುಕುಗೊಳಿಸಿದ ತನಿಖಾಧಿಕಾರಿ ಜಿತೇಂದ್ರ ಕುಮಾರ್‌ ದಯಾಮ, ಎಸ್ಪಿ ಸಿ.ಎ.ಸೈಮನ್‌ ಹಾಗೂ ಅಧಿಕಾರಿಗಳ ತಂಡವು ಬೆಳಗ್ಗೆಯೇ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ಎಸ್‌.ಐ.ಟಿ. ಕಚೇರಿಗೆ ಆಗಮಿಸಿದ್ದರು. ಅನಾಮಿಕ ತನ್ನ

ಧರ್ಮಸ್ಥಳ ಪ್ರಕರಣ| 13 ಸ್ಥಳಗಳನ್ನು ಗುರುತಿಸಿದ ಸಾಕ್ಷಿದಾರ| ಇಂದೂ ಮಹಜರು ಮುಂದುವರಿಕೆ ಸಾಧ್ಯತೆ Read More »

ಕೆಸರುಮಯವಾದ ರಸ್ತೆ  ಗ್ರಾಮಸ್ಥರಿಂದ ರಸ್ತೆ ಮಧ್ಯೆ  ಬಾಳೆಗಿಡನೆಟ್ಟು ಆಕ್ರೋಶ

ಕಡಬ: ಮಳೆಯಿಂದಾಗಿ ರಸ್ತೆ ಕೆಸರುಮಯವಾಗಿದ್ದು ರೋಸಿ ಹೋದ ಸ್ಥಳೀಯರು ರಸ್ತೆಯ ಮಧ್ಯೆ ಗುಂಡಿ ತೆಗೆದು ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದ ಘಟನೆ ಕಡಬ ತಾಲೂಕಿನ ಏನೇಕಲ್ಲು  ಸಮೀಪದ ದೇವರಹಳ್ಳಿ ಕಲ್ಲಾಜೆ ಎಂಬಲ್ಲಿ ಜು.27 ರಂದು ನಡೆದಿದೆ. ಕಳೆದ 1 ತಿಂಗಳಿನಿಂದ  ಈ ಸಮಸ್ಯೆ ಮತ್ತೆ ಹೆಚ್ಚಾಗಿದ್ದು ಸಂಬಂಧಪಟ್ಟವರಲ್ಲಿ ಹೇಳಿಯೂ ಪರಿಹಾರವಾಗದೇ ಇದ್ದುದಕ್ಕೆ  ಅಧಿಕಾರಿಗಳ ಗಮನ ಸೆಳೆಯುವ ನಿಟ್ಟಿನಲ್ಲಿ ಸುಮಾರು 12 ಮಂದಿ ಬಾಳೆಗಿಟ್ಟು ನೆಟ್ಟು ಅಧಿಕಾರಿಗಳ ನಡೆಯನ್ನು ಟೀಕಿಸಿದ್ದಾರೆ. ಇನ್ನು ಇಲ್ಲಿನ  ಮರಕತ  ದೇವಸ್ಥಾನ ಹತ್ತಿರ ಡ್ಯಾಮ್

ಕೆಸರುಮಯವಾದ ರಸ್ತೆ  ಗ್ರಾಮಸ್ಥರಿಂದ ರಸ್ತೆ ಮಧ್ಯೆ  ಬಾಳೆಗಿಡನೆಟ್ಟು ಆಕ್ರೋಶ Read More »

ಧರ್ಮಸ್ಥಳದಲ್ಲಿ ಮೃತದೇಹ ಹೂತ ಪ್ರಕರಣ| ಎಸ್ಐಟಿ ತಂಡದ ಎದುರು‌ ಹಾಜರಾದ‌ ದೂರುದಾರ

ಸಮಗ್ರ ನ್ಯೂಸ್: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಂಗಳೂರು ಐಬಿಗೆ ಎಸ್.ಐ.ಟಿ ತನಿಖೆಗಾಗಿ ಅಧಿಕಾರಿಗಳ ಮುಂದೆ ಮುಖಕ್ಕೆ ಕಪ್ಪು ಬಣ್ಣದ ಕವರ್ ಹಾಕಿಕೊಂಡು ದೂರುದಾರ ವ್ಯಕ್ತಿ ಇಬ್ಬರು ವಕೀಲರ ಜೊತೆ ಕಾರಿನಲ್ಲಿ ಜುಲೈ 26 ರಂದು ಬಂದು ಹಾಜರಾಗಿದ್ದಾನೆ. ಪ್ರಕರಣದ ತನಖೆಯನ್ನು ಎಸ್.ಐ.ಟಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಮಲ್ಲಿಕಟ್ಟೆಯಲ್ಲಿರುವ ಎಸ್ ಪಿ‌ ಕಚೇರಿಗೆ ಆಗಮಿಸಿರುವ ದೂರುದಾರ ತನಿಖಾಧಿಕಾರಿ ಅನುಚೇತ್ ಅವರಿಗೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

ಧರ್ಮಸ್ಥಳದಲ್ಲಿ ಮೃತದೇಹ ಹೂತ ಪ್ರಕರಣ| ಎಸ್ಐಟಿ ತಂಡದ ಎದುರು‌ ಹಾಜರಾದ‌ ದೂರುದಾರ Read More »

ದಕ್ಷಿಣ‌ ಕನ್ನಡ ಜಿಲ್ಲೆಗೆ ‘ತುಳುನಾಡು’ ಎಂದು ಮರು ನಾಮಕರಣವಾಗಲಿ – ಬಿಳಿಮಲೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಎಂದು ಮರುನಾಮಕರಣ ಮಾಡಬೇಕೆಂಬ ಕೂಗು ಹಲವು ದಿನಗಳಿಂದ ಕೇಳಿಬರುತ್ತಿದೆ. ಈ ಬೆನ್ನಲ್ಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆಯವರು ಬದಲಿಸುವುದಾದರೇ ತುಳುನಾಡು ಅಂತಾ ಬದಲಿಸಲಿ ಎಂದು ಹೇಳಿದ್ದಾರೆ. ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಜಿಲ್ಲೆಯನ್ನು ಮಾಡುವುದಾದರೆ ಯಾವ ಹೆಸರು ಬೇಕಾದರೂ ಇಟ್ಟುಕೊಳ್ಳಲಿ. ಆದರೆ ಐತಿಹಾಸಿಕ ಸ್ಥಳಗಳ ಹೆಸರನ್ನು ಯಾರು ಕೂಡ ಬದಲಿಸಬಾರದು. ಕರ್ನಾಟಕ ಏಕೀಕರಣದ ಸಂದರ್ಭದಲ್ಲಿ ಕಾಸರಗೋಡು ಕರ್ನಾಟಕದಿಂದ ಬೇರೆ ಆಯಿತು. ತುಳುನಾಡು ಎಂದು ಇಟ್ಟಿದ್ದರೆ

ದಕ್ಷಿಣ‌ ಕನ್ನಡ ಜಿಲ್ಲೆಗೆ ‘ತುಳುನಾಡು’ ಎಂದು ಮರು ನಾಮಕರಣವಾಗಲಿ – ಬಿಳಿಮಲೆ Read More »

ಬಂಟ್ವಾಳ: ಅನಾರೋಗ್ಯದಿಂದ ಯುವ ವಕೀಲೆ ಸಾವು

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಯುವ ಬರಹಗಾರ್ತಿ, ವಕೀಲೆ ರಾಜಶ್ರೀ ಜಯರಾಜ್ ಪೂಜಾರಿ ನಿಧನರಾಗಿದ್ದಾರೆ. ಚಿಕ್ಕವಯಸ್ಸಿನಲ್ಲೇ ಕಲೆ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಯುವ ಪ್ರತಿಭೆ ನಿಧನರಾಗಿದ್ದು, ಆಘಾತ ಉಂಟುಮಾಡಿದೆ. ಬಂಟ್ವಾಳದ ಜಯರಾಜ್ ಮತ್ತು ಸರೋಜಿನಿ ದಂಪತಿಗಳಿಗೆ ಜನವರಿ 16, 2000 ರಂದು ಜನಿಸಿದ ರಾಜಶ್ರೀ, ಬಂಟ್ವಾಳದಲ್ಲಿ ತನ್ನ ಆರಂಭಿಕ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು ನಂತರ ಬಡಗ ಎಕ್ಕಾರು ಮತ್ತು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನಲ್ಲಿ ಕಟೀಲಿನ ಶಿಕ್ಷಣವನ್ನು ಮುಂದುವರೆಸಿದರು. ತನ್ನ ವಿಧ್ಯಾಬ್ಯಾಸದ ಸಂದರ್ಭ

ಬಂಟ್ವಾಳ: ಅನಾರೋಗ್ಯದಿಂದ ಯುವ ವಕೀಲೆ ಸಾವು Read More »

ಧರ್ಮಸ್ಥಳ ಪ್ರಕರಣ| ಎಸ್ಐಟಿ ಯಿಂದ ತನಿಖೆ ಶುರು

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗೆ ರಾಜ್ಯ ಸರಕಾರ ರಚಿಸಿರುವ ಎಸ್ಐಟಿ ತಂಡ ಮಂಗಳೂರಿಗೆ ಆಗಮಿಸಿದೆ. ಇದರೊಂದಿಗೆ ಅಧಿಕೃತವಾಗಿ ಪ್ರಕರಣದ ತನಿಖೆ ಪ್ರಾರಂಭವಾಗಲಿದೆ. ತನಿಖೆಯ ಭಾಗವಾಗಿರುವ ಡಿಐಜಿ ಎಂ.ಎನ್. ಅನುಚೇತ್ ಮಂಗಳೂರಿಗೆ ಆಗಮಿಸಿ ಇತರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಎಂದು ಮೂಲಗಳು ತಿಳಿಸಿವೆ. ಪೊಲೀಸ್‌ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್‌.ಅನುಚೇತ್‌ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಸದಸ್ಯರಾಗಿದ್ದಾರೆ. ಅನುಚೇತ್‌ ಮತ್ತು ದಯಾಮ ಮಾತ್ರ

ಧರ್ಮಸ್ಥಳ ಪ್ರಕರಣ| ಎಸ್ಐಟಿ ಯಿಂದ ತನಿಖೆ ಶುರು Read More »