ರಾಜ್ಯ

ಕುಡಿಯದಿದ್ರೂ ಚಾಲಕರ ಮೇಲೆ ಕೇಸು ಹಾಕಿದ ಅಧಿಕಾರಿಗಳು| ಕೇರಳ ಸಾರಿಗೆ ನಿಗಮದ ಚಾಲಕರ ಪಾಲಿಗೆ ವಿಲನ್ ಆದ ಹಲಸು

ಸಮಗ್ರ ನ್ಯೂಸ್: ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್ಟಿಸಿ) ಮೂವರು ಬಸ್ ಚಾಲಕರು ಮದ್ಯಪಾನ ಮಾಡದೆ ಬ್ರೀಥಲೈಸರ್ ಪರೀಕ್ಷೆಯಲ್ಲಿ ವಿಫಲವಾದ ನಂತರ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಹಲಸಿನ ಹಣ್ಣು ತಿಂದು ಕೇಸು ದಾಖಲಾದ ಈ ವಿಲಕ್ಷಣ ಘಟನೆ ಪಥನಂತಿಟ್ಟ ಜಿಲ್ಲೆಯ ಪಂದಳಂ ಡಿಪೋದಲ್ಲಿ ಕಳೆದ ವಾರ ನಡೆದಿದೆ ಎಂದು ವರದಿ ಆಗಿದೆ. ಕರ್ತವ್ಯಕ್ಕೆ ಹಾಜರಾಗುವ ಮೊದಲು ಬ್ರೀಥಲೈಸರ್ ಪರೀಕ್ಷೆ ನಿಗಮದಲ್ಲಿ ಖಡ್ಡಾಯ. ಚಾಲಕರು ಪರೀಕ್ಷೆಯನ್ನು ತೆಗೆದುಕೊಂಡಾಗ, ಸಾಧನವು ಕಾನೂನುಬದ್ಧವಾಗಿ ಅನುಮತಿಸಲಾದ ಮಿತಿಗಿಂತ 10 ರಕ್ತದ […]

ಕುಡಿಯದಿದ್ರೂ ಚಾಲಕರ ಮೇಲೆ ಕೇಸು ಹಾಕಿದ ಅಧಿಕಾರಿಗಳು| ಕೇರಳ ಸಾರಿಗೆ ನಿಗಮದ ಚಾಲಕರ ಪಾಲಿಗೆ ವಿಲನ್ ಆದ ಹಲಸು Read More »

ಧರ್ಮಸ್ಥಳ ಪ್ರಕರಣ| ಇಬ್ಬರು ತನಿಖಾಧಿಕಾರಿಗಳು ಹೊರಕ್ಕೆ

ಸಮಗ್ರ ನ್ಯೂಸ್: ಧರ್ಮಸ್ಥಳಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದಿಂದ (SIT) ಇಬ್ಬರು ಅಧಿಕಾರಿಗಳು ಹಿಂದೆ ಸರಿದಿರುವುದಾಗಿ ತಿಳಿದುಬಂದಿದೆ. ಧರ್ಮಸ್ಥಳ ಗ್ರಾಮದ ಸುತ್ತಮುತ್ತ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ಸಂಬಂಧಿಸಿದಂತೆ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಪೊಲೀಸ್ ನೇಮಕಾತಿ ವಿಭಾಗದ ಡಿಐಜಿ ಎಂ. ಎನ್. ಅನುಚೇತ್, ಸಿಎಆರ್ ಕೇಂದ್ರದ ಡಿಸಿಪಿ ಸೌಮ್ಯಲತಾ, ಆಂತರಿಕ ಭದ್ರತಾ

ಧರ್ಮಸ್ಥಳ ಪ್ರಕರಣ| ಇಬ್ಬರು ತನಿಖಾಧಿಕಾರಿಗಳು ಹೊರಕ್ಕೆ Read More »

ಕೊಡಗು‌ ಜಿಲ್ಲೆಯಲ್ಲಿ ನಿಲ್ಲದ‌ ವರುಣಾರ್ಭಟ| ನಾಳೆ(ಜು.25) ಶಾಲೆ,‌ ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ನಾಳೆ ( ಜು 25) ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ. ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಗುಡ್ಡಕುಸಿತ, ನೆರೆ ಅನಾಹುತಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.

ಕೊಡಗು‌ ಜಿಲ್ಲೆಯಲ್ಲಿ ನಿಲ್ಲದ‌ ವರುಣಾರ್ಭಟ| ನಾಳೆ(ಜು.25) ಶಾಲೆ,‌ ಪಿಯು ಕಾಲೇಜುಗಳಿಗೆ ರಜೆ Read More »

ಧರ್ಮಸ್ಥಳ ವರದಿಗಳಿಗೆ ಮಾಧ್ಯಮ ನಿರ್ಬಂಧ| ಸುಪ್ರೀಂನಲ್ಲಿ ಅರ್ಜಿ ವಿಚಾರಣೆಗೆ ನಕಾರ

ಸಮಗ್ರ ನ್ಯೂಸ್: ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ವ್ಯಕ್ತಿಯೊಬ್ಬರು ನೀಡಿರುವ ದೂರಿಗೆ ಸಂಬಂಧಿಸಿದಂತೆ, ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನ ಮತ್ತು ಅದನ್ನು ನಡೆಸುತ್ತಿರುವ ಕುಟುಂಬದ ವಿರುದ್ಧ ಯಾವುದೇ ‘ಮಾನಹಾನಿಕರ ವಿಷಯ’ ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಬುಧವಾರ (ಜುಲೈ 23) ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಪೀಠದ ಮುಂದೆ ಅರ್ಜಿದಾರರಾದ ‘ಥರ್ಡ್ ಐ ಯೂಟ್ಯೂಬ್ ಚಾನೆಲ್’ ಪರ ವಕೀಲರು ವಿಷಯ ಪ್ರಸ್ತಾಪಿಸಿದ್ದರು.

ಧರ್ಮಸ್ಥಳ ವರದಿಗಳಿಗೆ ಮಾಧ್ಯಮ ನಿರ್ಬಂಧ| ಸುಪ್ರೀಂನಲ್ಲಿ ಅರ್ಜಿ ವಿಚಾರಣೆಗೆ ನಕಾರ Read More »

ಅರಣ್ಯ ಪ್ರದೇಶದಲ್ಲಿ ಜಾನುವಾರು ಮೇಯಿಸುವುದು ನಿಷೇಧಿಸಿ‌ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ

ಅರಣ್ಯ ಪ್ರದೇಶದಲ್ಲಿ ಜಾನುವಾರು ಮೇಯಿಸುವುದು ನಿಷೇಧಿಸಿ‌ ರಾಜ್ಯ ಸರ್ಕಾರ ಆದೇಶ Read More »

ಧರ್ಮಸ್ಥಳ ಪ್ರಕರಣ ಕುರಿತು ‌ಮಾನಹಾನಿಕರ ವರದಿ ಪ್ರಕಟಿಸದಂತೆ ಮಾಧ್ಯಮ ನಿರ್ಬಂಧ| ಸುಪ್ರೀಂ ಮೊರೆಹೋದ ಯೂಟ್ಯೂಬ್ ಚಾನಲ್

ಸಮಗ್ರ ನ್ಯೂಸ್: ಧರ್ಮಸ್ಥಳದ ಧರ್ಮಾಧಿಕಾರಿಗಳಾಗಿರುವ ವಿರೇಂದ್ರ ಹೆಗ್ಗಡೆ ಮತ್ತು ಅವರ ಸೋದರ ಡಿ. ಹರ್ಷೇಂದ್ರ ಕುಮಾರ್‌ ಬಗ್ಗೆ ಯಾವುದೇ ಸುದ್ದಿ ಪ್ರಕಟಿಸಿದಂತೆ ಬೆಂಗಳೂರು ಸಿವಿಲ್‌ ನ್ಯಾಯಾಲಯ ನೀಡಿರುವ “ಗ್ಯಾಗ್‌ ಆದೇಶ” ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆಹೋಗಲಾಗಿದೆ. ಬೆಂಗಳೂರು ನ್ಯಾಯಾಲಯದ ಆದೇಶ ಹಿಂದೆಂದೂ ನೀಡದಂತಹ ಆತಂಕಕಾರಿ ಆದೇಶವಾಗಿದೆ. ಇದು ವಾಕ್‌ ಸ್ವಾತಂತ್ರ್ಯ ಮತ್ತು ಪತ್ರಿಕಾ ಸ್ವಾತಂತ್ರ್ಯ ಎರಡಕ್ಕೂ ಧಕ್ಕೆ ತರುವ ವಿಷಯವಾಗಿದೆ .ನ್ಯಾಯ ಪ್ರಕ್ರಿಯೆಯ ಮೂಲಭೂತ ತತ್ವಗಳ ಮೇಲೆ ನಡೆಸಿರುವ ಹಲ್ಲೆಯಾಗಿದೆ ಎಂದು ಥರ್ಡ್‌ ಐ ತನ್ನ ಅರ್ಜಿಯಲ್ಲಿ

ಧರ್ಮಸ್ಥಳ ಪ್ರಕರಣ ಕುರಿತು ‌ಮಾನಹಾನಿಕರ ವರದಿ ಪ್ರಕಟಿಸದಂತೆ ಮಾಧ್ಯಮ ನಿರ್ಬಂಧ| ಸುಪ್ರೀಂ ಮೊರೆಹೋದ ಯೂಟ್ಯೂಬ್ ಚಾನಲ್ Read More »

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ಖಾಸಗಿ ಕಾರ್ಯಕ್ರಮಗಳಿಗೆ ಉಚಿತ ಅನ್ನಪ್ರಸಾದ ರದ್ದತಿಗೆ ಚಿಂತನೆ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಹೆಸರಾಂತ ಶಿವಕ್ಷೇತ್ರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇನ್ನು ಮುಂದೆ ಖಾಸಗಿ ಕಾರ್ಯಕ್ರಮಗಳಿಗೆ ಉಚಿತ ಅನ್ನಪ್ರಸಾದ ವಿತರಣೆ ವ್ಯವಸ್ಥೆಯನ್ನು ನಿಲ್ಲಿಸಲು ಚಿಂತಿಸಲಾಗಿದೆ ಎಂದು ಶಾಸಕ ಅಶೋಕ ರೈ ಹೇಳಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ನಿರ್ವಹಣೆಗೆ ಹಣದ ಕೊರತೆ ಎದುರಾಗಿದ್ದು, ಈ ಹಿನ್ನಲೆ ಮುಂದಿನ ದಿನಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಉಚಿತವಾಗಿ ನೀಡಲಾಗುತ್ತಿದ್ದ ಅನ್ನಪ್ರಸಾದ ಸೇವೆಯನ್ನು ನಿಲ್ಲಿಸಲು ಸೂಚಿಸಲಾಗಿದ್ದು, ಅನ್ನಪ್ರಸಾದ ಬೇಕಾದಲ್ಲಿ ಬೇಕಾದಲ್ಲಿ ಹಣ ಕೊಟ್ಟು ಪಡೆಯುವಂತೆ ಸೂಚನೆ ನೀಡಲಾಗಿದೆ ಎಂದು

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ಖಾಸಗಿ ಕಾರ್ಯಕ್ರಮಗಳಿಗೆ ಉಚಿತ ಅನ್ನಪ್ರಸಾದ ರದ್ದತಿಗೆ ಚಿಂತನೆ Read More »

ಉಪರಾಷ್ಟ್ರಪತಿ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ| ಮುಂದೆ ಈ ಹುದ್ದೆ ಅಲಂಕರಿಸುವವರು ಯಾರು?

ಸಮಗ್ರ ನ್ಯೂಸ್: ಜಗದೀಪ್‌ ಧನಕರ್‌ ರಾಜೀನಾಮೆಯಿಂದಾಗಿ ತೆರವಾಗುವ ಉಪರಾಷ್ಟ್ರಪತಿ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ. 74 ವರ್ಷದ ಧನಕರ್‌ ಅವರು 2022ರ ಆಗಸ್ಟ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಧಿಕಾರದ ಅವಧಿ 2027ರ ವರೆಗೂ ಇತ್ತು. ರಾಜ್ಯಸಭೆಯ ಸಭಾಪತಿಯೂ ಆಗಿರುವ ಅವರು ಸೋಮವಾರ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಕಲಾಪದಲ್ಲಿ ಪಾಲ್ಗೊಂಡಿದ್ದರು. ಉಪ ರಾಷ್ಟ್ರಪತಿ ಜಗದೀಪ್ ಧನಕರ್‌ ಅವರು ವೈದ್ಯಕೀಯ ಕಾರಣಗಳನ್ನು ನೀಡಿ ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯಸಭಾ ಉಪ

ಉಪರಾಷ್ಟ್ರಪತಿ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ| ಮುಂದೆ ಈ ಹುದ್ದೆ ಅಲಂಕರಿಸುವವರು ಯಾರು? Read More »

ಜಾಗ ವಿವಾದದ ಕಾರಣ ನನ್ನ ತಂದೆಯನ್ನು ಕೊಲೆ ಮಾಡಲಾಗಿದೆ| ಧರ್ಮಸ್ಥಳದ ವಿರುದ್ಧ ಕೇರಳದಲ್ಲಿ ದೂರು ನೀಡಿದ ವ್ಯಕ್ತಿ

ಸಮಗ್ರ ನ್ಯೂಸ್: ಜಾಗದ ವಿವಾದದ ಹಿನ್ನಲೆಯಲ್ಲಿ ತನ್ನ ತಂದೆಯನ್ನು ವಾಹನ ಅಪಘಾತದ ಮೂಲಕ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಈ ಹಿಂದೆ ಧರ್ಮಸ್ಥಳ ಹಾಗೂ ಬೆಳ್ತಂಗಡಿ ತಾಲೂಕಿನ‌ ಇತರೆಡೆಗಳಲ್ಲಿ ವಾಸವಾಗಿದ್ದ, ಈಗ ಕೇರಳದಲ್ಲಿ ವಾಸವಾಗಿರುವ ಅನೀಶ್ ಜೋಯಿ ಎಂಬವರು ಕೇರಳದ ತಳಿಪರಂಬ ಪೊಲೀಸರಿಗೆ ದೂರು ನೀಡಿದ್ದಾರೆ. ಇದೀಗ ಅಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಿದ್ದು, ಪೊಲೀಸರು ಇದರ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ವಾಸಿಸುತ್ತಿದ್ದ ವೇಳೆ ಅನೀಶ್ ಅವರ ತಂದೆ

ಜಾಗ ವಿವಾದದ ಕಾರಣ ನನ್ನ ತಂದೆಯನ್ನು ಕೊಲೆ ಮಾಡಲಾಗಿದೆ| ಧರ್ಮಸ್ಥಳದ ವಿರುದ್ಧ ಕೇರಳದಲ್ಲಿ ದೂರು ನೀಡಿದ ವ್ಯಕ್ತಿ Read More »

ಧರ್ಮಸ್ಥಳದಲ್ಲಿ ಭಾರೀ ಹೈಡ್ರಾಮಾ| ನ್ಯಾಯಕ್ಕಾಗಿ ಪಾದಯಾತ್ರೆ ಮಾಡಿದವರಿಗೆ ಭಕ್ತರಿಂದ ತಡೆ

ಸಮಗ್ರ ನ್ಯೂಸ್: ಧರ್ಮಸ್ಥಳ ಇದೀಗ ಇಡೀ ರಾಷ್ಟ್ರದ ಗಮನ ಸೆಳೆಯುತ್ತಿದ್ದು, ಅನಾಮಿಕ ವ್ಯಕ್ತಿಯೊಬ್ಬನ ದೂರಿನ ಬೆನ್ನಲ್ಲೇ ಇದೀಗ ಎಸ್ ಐಟಿ ರಚನೆಯಾಗಿದ್ದು, ಈ ನಡುವೆ ಸೌಜನ್ಯ ಪ್ರಕರಣದ ನ್ಯಾಯಕ್ಕಾಗಿ ಕಲಬುರ್ಗಿಯಿಂದ ಪಾದಯಾತ್ರೆಯಲ್ಲಿ ಬಂದಿದ್ದೇವೆ ಎಂದು ಹೇಳಿಕೊಂಡು ಧರ್ಮಸ್ಥಳಕ್ಕೆ ಹತ್ತಕ್ಕೂ ಹೆಚ್ಚು ಮಂದಿ ಯುವಕರು ಬಂದಿದ್ದು, ಇವರನ್ನು ಸ್ಥಳೀಯರು ಅಡ್ಡಗಟ್ಟಿದ್ದು ಭಾರೀ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ಸೌಜನ್ಯಳಿಗೆ ನ್ಯಾಯ ಎಂಬ ಧ್ಯೆಯದೊಂದಿಗೆ ಕಲಬುರಗಿ ಜಿಲ್ಲೆಯ ಅಳಂದ ತಾಲೂಕಿನ ರುದ್ರವಾಡಿ ಗ್ರಾಮದ ಶರಣಪ್ಪ ನೇತೃತ್ವದ ತಂಡವು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಹಮ್ಮಿಕೊಂಡಿತ್ತು.

ಧರ್ಮಸ್ಥಳದಲ್ಲಿ ಭಾರೀ ಹೈಡ್ರಾಮಾ| ನ್ಯಾಯಕ್ಕಾಗಿ ಪಾದಯಾತ್ರೆ ಮಾಡಿದವರಿಗೆ ಭಕ್ತರಿಂದ ತಡೆ Read More »