ರಾಜ್ಯ

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ| ಎಸ್ಐಟಿ ತಂಡದಿಂದ ಇಬ್ಬರು ಅಧಿಕಾರಿಗಳು ಹೊರಕ್ಕೆ?

ಸಮಗ್ರ ನ್ಯೂಸ್: ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನ ಹೂಳಲಾಗಿದೆ ಎಂಬ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಸರ್ಕಾರ ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಸರ್ಕಾರ ನಿರ್ಧರಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ. SIT ತಂಡ ರಚಿಸಿ ಅರ್ಧ ದಿನ ಕಳೆಯುವಷ್ಟರಲ್ಲೇ ಆರಂಭಿಕ ವಿಘ್ನ ಎದುರಾಗಿದೆ. ವಿಶೇಷ ತನಿಖಾ ತಂಡದ ನಾಲ್ವರಲ್ಲಿ ಇಬ್ಬರು ಐಪಿಎಸ್‌ ಅಧಿಕಾರಿಗಳು ಹಿಂದಕ್ಕೆ ಸರಿದಿದ್ದಾರೆ ಅನ್ನೋ ಮಾಹಿತಿ‌ ಉನ್ನತ ಮೂಲಗಳಿಂದ ತಿಳಿದುಬಂದಿದೆ. ತನಿಖೆಯಿಂದ […]

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ| ಎಸ್ಐಟಿ ತಂಡದಿಂದ ಇಬ್ಬರು ಅಧಿಕಾರಿಗಳು ಹೊರಕ್ಕೆ? Read More »

ಧರ್ಮಸ್ಥಳ‌ ಶವ ಹೂತಿಟ್ಟ ಪ್ರಕರಣ| ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಧರ್ಮಸ್ಥಳದ ಸುತ್ತಮುತ್ತಲು ನಡೆದಿವೆ ಎನ್ನಲಾದ ನೂರಾರು ಕೊಲೆ, ಅಸಹಜ ಸಾವು, ಅತ್ಯಾಚಾರ ಶಂಕೆ ಹಾಗೂ ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಲು ರಾಜ್ಯ ಸರ್ಕಾರ ಕೊನೆಗೂ ಎಸ್​​​ಐಟಿ ರಚನೆ ಮಾಡಿದೆ. ಐಪಿಎಸ್ ಅಧಿಕಾರಿ ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ನಾಲ್ವರು ಐಪಿಎಸ್​ ಅಧಿಕಾರಗಳು ಈ ವಿಶೇಷ ತನಿಖಾ ತಂಡದಲ್ಲಿದ್ದಾರೆ. ಈ ತಂಡದಲ್ಲಿ ಅನುಚೇತ್, ಜಿತೇಂದ್ರ ಕುಮಾರ್ ಸೌಮ್ಯಲತಾ ಇದ್ದಾರೆ. ಸದ್ಯದಲ್ಲೇ ಹೈಪ್ರೊಫೈಲ್​​​​​​ ಪ್ರಕರಣದ ಬಗ್ಗೆ ಎಸ್​​​​ಐಟಿ ತನಿಖೆ ಶುರು

ಧರ್ಮಸ್ಥಳ‌ ಶವ ಹೂತಿಟ್ಟ ಪ್ರಕರಣ| ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರ್ಕಾರ Read More »

ಚಿಕ್ಕಮಗಳೂರು: ಹುಡುಗಿ ಕೈಕೊಟ್ಟು ಹೋದಳೆಂದು ಅರೆಹುಚ್ಚನಾದ ಯುವಕ

ಸಮಗ್ರ ನ್ಯೂಸ್: ಪ್ರೀತಿ ವಿಫಲವಾದ ದುಃಖದಲ್ಲಿಯೇ ಅರೆಹುಚ್ಚನಾದ ಯುವಕ, ತನ್ನ ತಲೆಗೆ ಬಾಟಲಿಯಿಂದ ಹೊಡೆದುಕೊಂಡಿದ್ದಾನೆ. ತನ್ನ ತಲೆಯಲ್ಲಿ ರಕ್ತ ಹರಿಯುತ್ತಿದ್ದರೂ, ಸುಮ್ಮನೆ ಕುಳಿತಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್‌ಪೋಸ್ಟ್ ಬಳಿ ಗುರುವಾರ ಬೆಳಕಿಗೆ ಬಂದಿದೆ. ತಮಿಳುನಾಡು ಮೂಲದ ಈ ಯುವಕ, ಕೆಲ ತಿಂಗಳ ಹಿಂದೆ ಕಾಫಿತೋಟದ ಕೆಲಸಕ್ಕಾಗಿ ಚಿಕ್ಕಮಗಳೂರು ಬಂದಿದ್ದರು. ಕೆಲಸದಲ್ಲಿಯೇ ಇಲ್ಲಿಯ ಹುಡುಗಿಯನ್ನು ಪ್ರೀತಿ ಮಾಡುತ್ತಿದ್ದರು. ಆದರೆ, ಕಾಲಕ್ರಮೇಣ ಹುಡುಗಿ ಕೈಕೊಟ್ಟು ಬೇರೆ ಯಾರೊಂದಿಗೋ ಮದುವೆಯಾಗಿದ್ದಾಳೆ. ಈ ಘಟನೆಯು ಯುವಕನ ಮನಸ್ಸಿಗೆ ಆಘಾತ ಉಂಟುಮಾಡಿ,

ಚಿಕ್ಕಮಗಳೂರು: ಹುಡುಗಿ ಕೈಕೊಟ್ಟು ಹೋದಳೆಂದು ಅರೆಹುಚ್ಚನಾದ ಯುವಕ Read More »

ಧರ್ಮಸ್ಥಳ ಪ್ರಕರಣಗಳ‌ ತನಿಖೆಯನ್ನು ಎನ್ಐಎ‌ಗೆ ವಹಿಸಲು ರಾಜ್ಯಸಭಾ ಸದಸ್ಯರಿಂದ ಅಮಿತ್ ಷಾಗೆ‌ ಪತ್ರ

ಸಮಗ್ರ ನ್ಯೂಸ್: ರಾಜ್ಯದ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ದಶಕಗಳಿಂದ ವ್ಯವಸ್ಥಿತವಾಗಿ ನಡೆಯುತ್ತಿರುವ ಸರಣಿ ಅಪರಾಧಗಳು, ಅದರಲ್ಲೂ ಮುಖ್ಯವಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಹತ್ಯೆಗಳ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ (ಎನ್ಐಎ) ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ರಾಜ್ಯಸಭಾ ಸದಸ್ಯ ಹಾಗೂ ಸಿಪಿಐ ನಾಯಕ ಪಿ. ಸಂದೋಷ್ ಕುಮಾರ್ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಗಂಭೀರ ಸ್ವರೂಪದ ಪತ್ರ ಬರೆದಿದ್ದಾರೆ. 500ಕ್ಕೂ ಹೆಚ್ಚು ಶವಗಳನ್ನು ತಾನೇ ವಿಲೇವಾರಿ ಮಾಡಿರುವುದಾಗಿ ದೇವಾಲಯದ ಮಾಜಿ ನೌಕರನೊಬ್ಬ

ಧರ್ಮಸ್ಥಳ ಪ್ರಕರಣಗಳ‌ ತನಿಖೆಯನ್ನು ಎನ್ಐಎ‌ಗೆ ವಹಿಸಲು ರಾಜ್ಯಸಭಾ ಸದಸ್ಯರಿಂದ ಅಮಿತ್ ಷಾಗೆ‌ ಪತ್ರ Read More »

ಮಂಗಳೂರು: ಸಾಲ ಕೊಡುವುದಾಗಿ ಬಹುಕೋಟಿ ವಂಚನೆ| ಸಿನಿಮೀಯ ಶೈಲಿಯಲ್ಲಿ ಸಿಕ್ಕಿಬಿದ್ದ ಮಹಾವಂಚಕ ರೋಹನ್ ಸಲ್ದಾನಾ

ಸಮಗ್ರ ನ್ಯೂಸ್: ಸಾಲ ಕೊಡುವುದಾಗಿ ಕೋಟ್ಯಂತರ ರೂ ಹಣ ಪಡೆದು ವಂಚನೆ ಮಾಡುತ್ತಿದ್ದ ನಟೋರಿಯಸ್ ರೋಹನ್ ಸಲ್ಡಾನಾ ಎಂಬಾತನನ್ನ ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಅನೇಕ ವರ್ಷಗಳಿಂದ 200 ಕೋಟಿಗೂ ಅಧಿಕ ವಂಚನೆ ಮಾಡಿದ್ದಾನೆ. ಆಂಧ್ರ ಪ್ರದೇಶ ಮೂಲದ ಸಿಲ್ಕ್ ಸ್ಯಾರಿ ತಯಾರಿಕ ಕಂಪನಿ ಮಾಲೀಕ, ಸಾಲಕ್ಕಾಗಿ 2023ರಲ್ಲಿ ಬೆಂಗಳೂರಿನಲ್ಲಿ ಫೈನಾನ್ಸ್ ಕನ್ಸಲ್‌ಟೆನ್ಸಿ ನಡೆಸಿಕೊಂಡಿರುವ ವಿಮಲೇಶ್ ಎಂಬಾತನ ಮೊರೆ ಹೋಗಿದ್ದ. ಆಗ ವಿಮಲೇಶ್ ಇದೇ ರೋಹನ್‌ನನ್ನ ಪರಿಚಯಿಸಿಕೊಟ್ಟಿದ್ದ. ಸಾಲ ಕೊಡಿಸೋದಕ್ಕೆ ಒಂದು ಸ್ಟ್ಯಾಂಪ್ ಪೇಪರ್‌ಗೆಂದು ರೋಹನ್ ಉದ್ಯಮಿ

ಮಂಗಳೂರು: ಸಾಲ ಕೊಡುವುದಾಗಿ ಬಹುಕೋಟಿ ವಂಚನೆ| ಸಿನಿಮೀಯ ಶೈಲಿಯಲ್ಲಿ ಸಿಕ್ಕಿಬಿದ್ದ ಮಹಾವಂಚಕ ರೋಹನ್ ಸಲ್ದಾನಾ Read More »

ಧರ್ಮಸ್ಥಳ ಸರಣಿ ಹತ್ಯೆ‌,‌ ಅಂತ್ಯಸಂಸ್ಕಾರ ಪ್ರಕರಣ| ಸದ್ಯಕ್ಕೆ‌ ಎಸ್ಐಟಿ ರಚನೆ ಮಾಡಲ್ಲ ಎಂದ ಸಿಎಂ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ, ಸರಣಿ ಹತ್ಯೆ, ಸಾಮೂಹಿಕ ಅಂತ್ಯಸಂಸ್ಕಾರ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚನೆ ಮಾಡುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಈ ವಿಚಾರವಾಗಿ ಎಸ್‌ಐಟಿ ರಚನೆ ಮಾಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಜುಲೈ 12ರಂದು ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳ ಪ್ರಕಾರ, ಒಂದು ತಲೆಬುರುಡೆ ದೊರೆತಿದ್ದು, ವೈದ್ಯಕೀಯ ವಿದ್ಯಾರ್ಥಿನಿ ನಾಪತ್ತೆಯ ಬಗ್ಗೆ ಕುಟುಂಬದವರ

ಧರ್ಮಸ್ಥಳ ಸರಣಿ ಹತ್ಯೆ‌,‌ ಅಂತ್ಯಸಂಸ್ಕಾರ ಪ್ರಕರಣ| ಸದ್ಯಕ್ಕೆ‌ ಎಸ್ಐಟಿ ರಚನೆ ಮಾಡಲ್ಲ ಎಂದ ಸಿಎಂ Read More »

ಅತ್ಯಧಿಕ ಹಾಲು ಸಂಗ್ರಹ/ ದಾಖಲೆ ನಿರ್ಮಿಸಿದ ಕೆಎಂಎಫ್

ಸಮಗ್ರ ನ್ಯೂಸ್‌: ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಈ ಮೂಲಕ ಕೆಎಂಎಫ್ ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಹಾಲು ಸಂಗ್ರಹವಾಗುತ್ತಿದೆ. ಕಳೆದ ವರ್ಷ ಜೂನ್ ಹಾಗೂ ಜುಲೈ ತಿಂಗಳಲ್ಲಿ 90 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿತ್ತು. ಆದರೆ ಈ ವರ್ಷದ ಮೇ ತಿಂಗಳಾಂತ್ಯದಿಂದ ನಿತ್ಯ ಕೋಟಿಗಿಂತಲೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಪ್ರಸ್ತುತ ರಾಜ್ಯದಲ್ಲಿ ಕೆಎಂಎಫ್‌ನಲ್ಲಿ ದಿನನಿತ್ಯ 1.05 ಕೋಟಿ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ವಾತಾವರಣ

ಅತ್ಯಧಿಕ ಹಾಲು ಸಂಗ್ರಹ/ ದಾಖಲೆ ನಿರ್ಮಿಸಿದ ಕೆಎಂಎಫ್ Read More »

ಕೋಲ್ಕತಾದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ| ಬಾಗಲಕೋಟೆಯ ಯುವಕ ಅರೆಸ್ಟ್

ಸಮಗ್ರ ನ್ಯೂಸ್: ಕೊಲ್ಕತ್ತಾದಲ್ಲಿ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಾಗಲಕೋಟೆ ಮೂಲದ ವಿದ್ಯಾರ್ಥಿ ಪರಮಾನಂದ ಜೈನ್ ಎನ್ನುವ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜು.12ರ ರಾತ್ರಿ ಪರಮಾನಂದನನ್ನು ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರ ನಿವಾಸಿಯಾದ ಪರಮಾನಂದ ಐಐಎಂ ಕಾನೂನು ಕಾಲೇಜಿನಲ್ಲಿ ಓದುತ್ತಿದ್ದಾನೆ. ಹಾಸ್ಟೆಲಿಗೆ ಯುವತಿಯನ್ನು ಕರೆಸಿಕೊಂಡು, ಮತ್ತು ಬರುವ ಪಾನಿಯ ಕೊಡಿಸಿ ಪರಮಾನಂದ ಅತ್ಯಾಚಾರ ಎಸಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.ಜುಲೈ 12ರಂದು ಆರೋಪಿ ಪರಮಾನಂದನನ್ನು

ಕೋಲ್ಕತಾದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ| ಬಾಗಲಕೋಟೆಯ ಯುವಕ ಅರೆಸ್ಟ್ Read More »

ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಎಸ್ಮಾ ಜಾರಿ

ಸಮಗ್ರ ನ್ಯೂಸ್: ವೇತನ ಪರಿಷ್ಕರಣೆ, ಹಿಂಬಾಕಿ ನೀಡುವುದು ಸೇರಿದಂತೆ ಸಾರಿಗೆ ನಿಗಮಗಳ ನೌಕರರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ. ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್‌ಆರ್ಟಿಸಿ ಶಾಕ್ ನೀಡಿದೆ. ಪ್ರತಿಭಟನೆ ನಡೆಸದಂತೆ ಕೆಎಸ್‌ಆರ್ಟಿಸಿ ವತಿಯಿಂದ ಎಸ್ಮಾ ಜಾರಿ ಮಾಡಲಾಗಿದೆ. ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ 2013ರ ಅಡಿ ಎಸ್ಮಾ ಜಾರಿ ಮಾಡಿದ್ದು, 5

ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರಿಗೆ ಎಸ್ಮಾ ಜಾರಿ Read More »

ಧರ್ಮಸ್ಥಳ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣ| ಎಸ್ಐಟಿ ರಚನೆಗೆ‌ ಆಗ್ರಹ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಹಲವಾರು ಅತ್ಯಾಚಾರ, ಹತ್ಯೆ ಮತ್ತು ಕಾಡಿನಲ್ಲಿ ಶವಗಳನ್ನು ಹೂತಿರುವ ಪ್ರಕರಣದಲ್ಲಿ ಸಾಕ್ಷಿ ಫಿರ್ಯಾದಿಗೆ ರಾಜ್ಯ ಸರಕಾರವು ತತ್‌ಕ್ಷಣವೇ ಭದ್ರತೆ ಒದಗಿಸಬೇಕು. ಈ ಆರೋಪಗಳ ತನಿಖೆಗೆ ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಆಗ್ರಹಿಸಿದ್ದಾರೆ. ಮೇಲಿನ ಅಪರಾಧಗಳ ಸಂಬಂಧ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ಬಳಿಕವೂ ತನಿಖೆ ಸರಿಯಾಗಿ ಆಗುತ್ತಿಲ್ಲ.

ಧರ್ಮಸ್ಥಳ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣ| ಎಸ್ಐಟಿ ರಚನೆಗೆ‌ ಆಗ್ರಹ Read More »