ರಾಜ್ಯ

ಧರ್ಮಸ್ಥಳ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣ| ಎಸ್ಐಟಿ ರಚನೆಗೆ‌ ಆಗ್ರಹ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಹಲವಾರು ಅತ್ಯಾಚಾರ, ಹತ್ಯೆ ಮತ್ತು ಕಾಡಿನಲ್ಲಿ ಶವಗಳನ್ನು ಹೂತಿರುವ ಪ್ರಕರಣದಲ್ಲಿ ಸಾಕ್ಷಿ ಫಿರ್ಯಾದಿಗೆ ರಾಜ್ಯ ಸರಕಾರವು ತತ್‌ಕ್ಷಣವೇ ಭದ್ರತೆ ಒದಗಿಸಬೇಕು. ಈ ಆರೋಪಗಳ ತನಿಖೆಗೆ ಸುಪ್ರೀಂ ಕೋರ್ಟ್‌ ಅಥವಾ ಹೈಕೋರ್ಟ್‌ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲ ಗೌಡ ಆಗ್ರಹಿಸಿದ್ದಾರೆ. ಮೇಲಿನ ಅಪರಾಧಗಳ ಸಂಬಂಧ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ಬಳಿಕವೂ ತನಿಖೆ ಸರಿಯಾಗಿ ಆಗುತ್ತಿಲ್ಲ. […]

ಧರ್ಮಸ್ಥಳ ಸಾಮೂಹಿಕ ಅಂತ್ಯಸಂಸ್ಕಾರ ಪ್ರಕರಣ| ಎಸ್ಐಟಿ ರಚನೆಗೆ‌ ಆಗ್ರಹ Read More »

ಮೆಟ್ರೋದಲ್ಲಿ ಇನ್ಮುಂದೆ ನೆಟ್‌ವರ್ಕ್‌ ಸಮಸ್ಯೆ ಇಲ್ಲ/ ವೈಫೈ ಅಳವಡಿಸಲು ಮುಂದಾದ ಬಿಎಂಆರ್‌ಸಿಎಲ್

ಸಮಗ್ರ ನ್ಯೂಸ್‌: ನೆಟ್ವರ್ಕ್ ಸಮಸ್ಯೆ ಉಂಟಾಗುತ್ತಿರುವ ನಮ್ಮ ಮೆಟ್ರೋದ ಸುರಂಗ ಮಾರ್ಗಗಳಲ್ಲಿ ವೈಫೈ ಅಳವಡಿಸಲು ಬಿಎಂಆರ್‌ಸಿಎಲ್ ಮುಂದಾಗಿದೆ. ಮೆಟ್ರೋ ಮಾರ್ಗಗಳಲ್ಲಿ ಉಂಟಾಗುವ ನೆಟ್ವರ್ಕ್ ಸಮಸ್ಯೆ ನಿವಾರಣೆಗೆ ಬಿಎಂಆರ್‌ಸಿಎಲ್, ಮೆಟ್ರೋ ನಿಲ್ದಾಣಗಳಲ್ಲಿ ಐಬಿಎಸ್, ಬಿಟಿಎಸ್ ಸೆಲ್ಯುಲಾರ್ ಟವರ್ ಮತ್ತು ಪೋಲ್‌ಗಳನ್ನು ಇಟ್ಟು ವೈಫೈ ಮೂಲಕ ಗ್ರಾಹಕರಿಗೆ 4G, 5G ಸೇವೆ ಒದಗಿಸಲು ಮುಂದಾಗಿದೆ. ನಮ್ಮ ಮೆಟ್ರೋ ಎರಡನೇ ಹಂತದ ಸುರಂಗ ಹಾಗೂ ಎತ್ತರಿಸಿದ ಮಾರ್ಗದಲ್ಲಿ ನಿರಂತರ ಮತ್ತು ಸುಗಮ ಮೊಬೈಲ್ ಸಂಪರ್ಕ ಒದಗಿಸಲು ಅಡ್ವಾನ್‌ನ್ಸ್ ಕಮ್ಯೂನಿಕೇಶನ್ ಆ್ಯಂಡ್ ಎಲೆಕ್ಟ್ರಾನಿಕ್ಸ್

ಮೆಟ್ರೋದಲ್ಲಿ ಇನ್ಮುಂದೆ ನೆಟ್‌ವರ್ಕ್‌ ಸಮಸ್ಯೆ ಇಲ್ಲ/ ವೈಫೈ ಅಳವಡಿಸಲು ಮುಂದಾದ ಬಿಎಂಆರ್‌ಸಿಎಲ್ Read More »

ಧರ್ಮಸ್ಥಳ ರಹಸ್ಯ ಅಂತ್ಯಸಂಸ್ಕಾರ ಪ್ರಕರಣ| ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ – ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಧರ್ಮಸ್ಥಳ ರಹಸ್ಯ ಅಂತ್ಯಸಂಸ್ಕಾರ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಯಾರನ್ನೂ ರಕ್ಷಿಸುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಹೇಳಿದ್ದಾರೆ. ಧರ್ಮಸ್ಥಳದ ಮಾಜಿ ನೈರ್ಮಲ್ಯ ಸಿಬ್ಬಂದಿಯೊಬ್ಬರು ತಾವು ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಮೃತದೇಹಗಳನ್ನು ಹೂತಿರುವುದಾಗಿ ಹೇಳಿಕೆ ದಾಖಲಿಸಿದ ಬೆನ್ನಲ್ಲೇ ಇದೀಗ ನಾಪತ್ತೆ, ಅಸ್ವಾಭಾವಿಕ ಸಾವುಗಳು ಮತ್ತು ಲೈಂಗಿಕ ದೌರ್ಜನ್ಯಗಳ ಬಗ್ಗೆ ದೂರುಗಳು ದಾಖಲಾಗುತ್ತಿವೆ. ಯಾರನ್ನೂ ಬೆಂಬಲಿಸುವ ಅಥವಾ ರಕ್ಷಿಸುವ ಪ್ರಶ್ನೆಯೇ ಇಲ್ಲ. ನಾವು ಪ್ರಕರಣವನ್ನು ಸಂವೇದನಾಶೀಲಗೊಳಿಸಲು ಬಯಸುವುದಿಲ್ಲ, ಆದರೆ ನಾವು ಖಂಡಿತವಾಗಿಯೂ

ಧರ್ಮಸ್ಥಳ ರಹಸ್ಯ ಅಂತ್ಯಸಂಸ್ಕಾರ ಪ್ರಕರಣ| ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ – ದಿನೇಶ್ ಗುಂಡೂರಾವ್ Read More »

ನಿರೂಪಕಿ ಅನುಶ್ರೀ ಮದುವೆ ಫಿಕ್ಸ್| ಮುಂದಿನ ತಿಂಗಳೇ ಕಲ್ಯಾಣೋತ್ಸವ| ಹುಡುಗ ಯಾರು ಗೊತ್ತಾ?

ಸಮಗ್ರ ನ್ಯೂಸ್: ಖ್ಯಾತ ನಿರೂಪಕಿ ನಟಿ ಅನುಶ್ರೀ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಕೆಲ ವರ್ಷಗಳಿಂದ ಅನುಶ್ರೀ ಮದುವೆ ಯಾವಾಗ ಅನ್ನೋರಿಗೆ ಸಿಹಿಸುದ್ದಿ ಸಿಕ್ಕಿದೆ. ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರು ಆಗಸ್ಟ್ 28ಕ್ಕೆ ಮದುವೆ ಆಗಲಿದ್ದಾರೆ. ಕೊಡಗು ಮೂಲದ ಕಾರ್ಪೋರೇಟ್ ಉದ್ಯಮಿ ಜೊತೆ ಅನುಶ್ರೀ ಮದುವೆ ನಡೆಯಲಿದೆ. ಆಗಸ್ಟ್ 28ಕ್ಕೆ ಅನುಶ್ರೀ ಮದುವೆ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ. ಬೆಂಗಳೂರು ಮೂಲದ ಉದ್ಯಮಿ ರೋಷನ್ ಜೊತೆ ಅವರು ವಿವಾಹ ಆಗುತ್ತಿದ್ದಾರೆ. ಹಾಗಾದರೆ ಇದು ಲವ್ ಮ್ಯಾರೇಜಾ?

ನಿರೂಪಕಿ ಅನುಶ್ರೀ ಮದುವೆ ಫಿಕ್ಸ್| ಮುಂದಿನ ತಿಂಗಳೇ ಕಲ್ಯಾಣೋತ್ಸವ| ಹುಡುಗ ಯಾರು ಗೊತ್ತಾ? Read More »

ಬೆಂಗಳೂರು ಕಾಲ್ತುಳಿತಕ್ಕೆ‌ RCB, ವಿರಾಟ್ ಕೊಹ್ಲಿಯೇ ಕಾರಣ| ಕರ್ನಾಟಕ ಸರ್ಕಾರದಿಂದ ವರದಿ

ಸಮಗ್ರ ನ್ಯೂಸ್: 11 ಜನರ ಸಾವಿಗೆ ಕಾರಣವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಅವರಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಕಾರಣ ಎಂದು ಕರ್ನಾಟಕ ಸರ್ಕಾರದ ವರದಿ ಹೇಳುತ್ತಿದೆ. ಬೆಂಗಳೂರು ಕಾಲ್ತುಳಿತಕ್ಕೆ ಕರ್ನಾಟಕ ಸರ್ಕಾರ ಆರ್‌ಸಿಬಿಯನ್ನು ದೂಷಿಸಿದ್ದು, ಇದೇ ವರದಿಯಲ್ಲಿ ವಿರಾಟ್ ಕೊಹ್ಲಿ ಹೆಸರನ್ನೂ ಉಲ್ಲೇಖಿಸಲಾಗಿದೆ. ಕ್ರೀಡಾಂಗಣದಲ್ಲಿ ವಿಜಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಅಭಿಮಾನಿಗಳನ್ವು ಆಹ್ವಾನಿಸಲಾಗಿತ್ತು. ಆದರೆ ಇದಕ್ಕೆ ತಂಡದ ಆಡಳಿತ ಮಂಡಳಿ ರಾಜ್ಯ ಸರ್ಕಾರವನ್ನಾಗಲೀ ಅಥವಾ ಪೊಲೀಸ್

ಬೆಂಗಳೂರು ಕಾಲ್ತುಳಿತಕ್ಕೆ‌ RCB, ವಿರಾಟ್ ಕೊಹ್ಲಿಯೇ ಕಾರಣ| ಕರ್ನಾಟಕ ಸರ್ಕಾರದಿಂದ ವರದಿ Read More »

ಆ.5ರಿಂದ ಅನಿರ್ಧಿಷ್ಟಾವಧಿ‌ ಮುಷ್ಕರಕ್ಕೆ ಕರೆ ನೀಡಿದ ಸಾರಿಗೆ ನೌಕರರ ಸಂಘ| ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಸಮಗ್ರ ನ್ಯೂಸ್: ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 5 ರಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಲಾಗಿದೆ. ಬೇಡಿಕೆಗಳ ಈಡೇರಿಕೆ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಸಮಿತಿ ಪದಾಧಿಕಾರಿಗಳೊಂದಿಗೆ ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದು,

ಆ.5ರಿಂದ ಅನಿರ್ಧಿಷ್ಟಾವಧಿ‌ ಮುಷ್ಕರಕ್ಕೆ ಕರೆ ನೀಡಿದ ಸಾರಿಗೆ ನೌಕರರ ಸಂಘ| ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ Read More »

ಧರ್ಮಸ್ಥಳದಲ್ಲಿ ಕಾಣೆಯಾದ ಅನನ್ಯ ಭಟ್ ಕಳೆಬರಹ ಹುಡುಕಿಕೊಡಲು ಎಸ್ಪಿಗೆ ದೂರು ನೀಡಿದ ತಾಯಿ| ದೀರ್ಘ ದೂರಿನಲ್ಲಿ ಹಲವು ಘಟನೆಗಳು ಉಲ್ಲೇಖ

ಸಮಗ್ರ ನ್ಯೂಸ್: ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡಿದ್ದ ವ್ಯಕ್ತಿಯೋರ್ವನ ಹೇಳಿಕೆ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ. ಇದರ ಬೆನ್ನಲ್ಲೆ 60 ವರ್ಷದ ಮಹಿಳೆಯೊಬ್ಬರು 2003ರಲ್ಲಿ ಧರ್ಮಸ್ಥಳದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ತನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಕಳೆಬರಹವನ್ನು ಪತ್ತೆಹಚ್ಚಲು ನೆರವಾಗುವಂತೆ ಧರ್ಮಸ್ಥಳ ಪೊಲೀಸರಿಗೆ ಮನವಿ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರ ನಿವಾಸಿ ಮತ್ತು ಕೇಂದ್ರ ತನಿಖಾ ದಳದ ನಿವೃತ್ತ ಸ್ಟೆನೋಗ್ರಾಫರ್ ಸುಜಾತಾ ಭಟ್ ತಮ್ಮ

ಧರ್ಮಸ್ಥಳದಲ್ಲಿ ಕಾಣೆಯಾದ ಅನನ್ಯ ಭಟ್ ಕಳೆಬರಹ ಹುಡುಕಿಕೊಡಲು ಎಸ್ಪಿಗೆ ದೂರು ನೀಡಿದ ತಾಯಿ| ದೀರ್ಘ ದೂರಿನಲ್ಲಿ ಹಲವು ಘಟನೆಗಳು ಉಲ್ಲೇಖ Read More »

ಪಾಠ‌ ಹೇಳುವ ಉಪನ್ಯಾಸಕರಿಂದ ವಿದ್ಯಾರ್ಥಿನಿಯ ಅತ್ಯಾಚಾರ| ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕರು ಬೆಂಗಳೂರಿನಲ್ಲಿ ಅರೆಸ್ಟ್

ಸಮಗ್ರ ನ್ಯೂಸ್: ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತರು ಬೆಂಗಳೂರು ಮೂಲದ ವಿದ್ಯಾರ್ಥಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ್ದು, ಮೂವರು ಆರೋಪಿಗಳನ್ನು ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿ ಸೇರಿದಂತೆ ಆಕೆಯ ಪೋಷಕರು ಈ ಕುರಿತಂತೆ ಮಹಿಳಾ ಆಯೋಗಕ್ಕೆ ನೀಡಿದ ದೂರಿನ ಆಧಾರದ ಮೇಲೆ ಎಫ್ ಐ ಆರ್ ದಾಖಲಿಸಿ ಉಪನ್ಯಾಸಕರಾದ ನರೇಂದ್ರ, ಸಂದೀಪ್ ಮತ್ತು ಸ್ನೇಹಿತ ಅನೂಪ್ ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಘಟನೆಯ ಹಿನ್ನೆಲೆ: ವಿದ್ಯಾರ್ಥಿನಿ ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ

ಪಾಠ‌ ಹೇಳುವ ಉಪನ್ಯಾಸಕರಿಂದ ವಿದ್ಯಾರ್ಥಿನಿಯ ಅತ್ಯಾಚಾರ| ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕರು ಬೆಂಗಳೂರಿನಲ್ಲಿ ಅರೆಸ್ಟ್ Read More »

ಧರ್ಮಸ್ಥಳದ ಸುತ್ತಮುತ್ತಲಿನ ಸಾವುಗಳ ಕುರಿತು ತನಿಖೆಗೆ ಎಸ್ಐಟಿ ರಚಿಸಿ| ಸರ್ಕಾರಕ್ಕೆ ಮಹಿಳಾ ಆಯೋಗ ಪತ್ರ

ಸಮಗ್ರ ನ್ಯೂಸ್: ಧರ್ಮಸ್ಥಳದ ಸುತ್ತಮುತ್ತಲು ಸಂಭವಿಸಿರುವ ಎನ್ನಲಾದ ಸಾವುಗಳ ಆರೋಪಗಳಿಗೆ ಸಂಬಂಧಿಸಿ ಕೂಲಂಕಷ ತನಿಖೆಗೆ ಎಸ್​​​ಐಟಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ. ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಹಲವು ಹೆಣಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರನೋರ್ವ ನೀಡಿರುವ ಹೇಳಿಕೆಗಳ ಆಧಾರದಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ. ಇದಲ್ಲದೇ ಕಳೆದ 20 ವರ್ಷಗಳ ಈ ವ್ಯಾಪ್ತಿಯಲ್ಲಿ

ಧರ್ಮಸ್ಥಳದ ಸುತ್ತಮುತ್ತಲಿನ ಸಾವುಗಳ ಕುರಿತು ತನಿಖೆಗೆ ಎಸ್ಐಟಿ ರಚಿಸಿ| ಸರ್ಕಾರಕ್ಕೆ ಮಹಿಳಾ ಆಯೋಗ ಪತ್ರ Read More »

ಪುತ್ತೂರು – ಮಂಗಳೂರು ತಡೆರಹಿತ ಬಸ್ ಸಂಚಾರ ಆರಂಭ

ಸಮಗ್ರ ನ್ಯೂಸ್: ಪುತ್ತೂರಿನಿಂದ ಮಂಗಳೂರು ನಡುವೆ ಹೊಸದಾಗಿ ತಡೆರಹಿತ ಸರಕಾರಿ ಬಸ್ ಓಡಾಡಕ್ಕೆ ಸೋಮವಾರ ಪುತ್ತೂರು ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಅವರು ಪುತ್ತೂರು ಬಸ್ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿ ತಡೆರಹಿತ ಬಸ್‍ಗೆ ಚಾಲನೆ ನೀಡಿದರು. ಪುತ್ತೂರು-ಮಂಗಳೂರು ನಡುವೆ ತಡೆರಹಿತವಾಗಿ ಪ್ರತಿದಿನ 7 ಬಸ್ಸುಗಳು 29 ಟ್ರಿಪ್‍ಗಳ ಸಂಚಾರ ನಡೆಸಲಿದೆ. ಪುತ್ತೂರು ಮಂಗಳೂರು ನಡುವೆ ಎಲ್ಲಿಯೂ ನಿಲ್ಲದೆ ನೇರ ಸಂಚರಿಸಲಿದ್ದು, ಅತಿ ಕಡಿಮೆ ಅವಧಿಯಲ್ಲಿ ತಲುಪಲಿದೆ. ಈ ಬಸ್‍ನಲ್ಲಿ ಪ್ರಯಾಣಿಸುವ

ಪುತ್ತೂರು – ಮಂಗಳೂರು ತಡೆರಹಿತ ಬಸ್ ಸಂಚಾರ ಆರಂಭ Read More »