ರಾಜ್ಯ

ಪುತ್ತೂರು – ಮಂಗಳೂರು ತಡೆರಹಿತ ಬಸ್ ಸಂಚಾರ ಆರಂಭ

ಸಮಗ್ರ ನ್ಯೂಸ್: ಪುತ್ತೂರಿನಿಂದ ಮಂಗಳೂರು ನಡುವೆ ಹೊಸದಾಗಿ ತಡೆರಹಿತ ಸರಕಾರಿ ಬಸ್ ಓಡಾಡಕ್ಕೆ ಸೋಮವಾರ ಪುತ್ತೂರು ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಅವರು ಪುತ್ತೂರು ಬಸ್ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿ ತಡೆರಹಿತ ಬಸ್‍ಗೆ ಚಾಲನೆ ನೀಡಿದರು. ಪುತ್ತೂರು-ಮಂಗಳೂರು ನಡುವೆ ತಡೆರಹಿತವಾಗಿ ಪ್ರತಿದಿನ 7 ಬಸ್ಸುಗಳು 29 ಟ್ರಿಪ್‍ಗಳ ಸಂಚಾರ ನಡೆಸಲಿದೆ. ಪುತ್ತೂರು ಮಂಗಳೂರು ನಡುವೆ ಎಲ್ಲಿಯೂ ನಿಲ್ಲದೆ ನೇರ ಸಂಚರಿಸಲಿದ್ದು, ಅತಿ ಕಡಿಮೆ ಅವಧಿಯಲ್ಲಿ ತಲುಪಲಿದೆ. ಈ ಬಸ್‍ನಲ್ಲಿ ಪ್ರಯಾಣಿಸುವ […]

ಪುತ್ತೂರು – ಮಂಗಳೂರು ತಡೆರಹಿತ ಬಸ್ ಸಂಚಾರ ಆರಂಭ Read More »

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ 2-3 ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ವರುಣನ ಆರ್ಭಟ ಇನ್ನಷ್ಟು ಹೆಚ್ಚಾಗಲಿದ್ದು, ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಪ್ರದೇಶಕ್ಕೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಎಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಮತ್ತು

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ಗ್ರಾಮ ಪಂಚಾಯತ್ ಜಾಲ್ಸೂರು, ನವಚೇತನ ಯುವಕ ಮಂಡಲದ ವತಿಯಿಂದ ನೂತನ ಬಸ್ ತಂಗುದಾಣ ನಿರ್ಮಾಣ

ಸಮಗ್ರ ನ್ಯೂಸ್:ನವಚೇತನ ಯುವಕ ಮಂಡಲ (ರಿ.) ಬೊಳುಬೈಲು ಇವರ ಸಹಭಾಗಿತ್ವದಲ್ಲಿ ನೂತನವಾಗಿ ಬೊಳುಬೈಲಿನಲ್ಲಿ ನಿರ್ಮಾಣಗೊಂಡ ಪ್ರಯಾಣಿಕರ ಬಸ್ಸು ತಂಗುದಾಣ ಉದ್ಘಾಟನಾ ಕಾರ್ಯಕ್ರಮವು ಜುಲೈ 13ರಂದು ನಡೆಯಿತು. ನವಚೇತನ ಯುವಕ ಮಂಡಲದ ಅಧ್ಯಕ್ಷ  ಪ್ರದೀಪ್ ಬೊಳುಬೈಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ  ಸಾವಿತ್ರಿ ಗೋಪಾಲ್ ಅಡ್ಕಾರು ವಹಿಸಿದ್ದರು. ಕಾರ್ಯಕ್ರಮದ ಬಗ್ಗೆ ಮಾತನಾಡಿದ ಇವರು “ಯುವ ಸಮೂಹ ಸಮಾಜಮುಖಿಯಾಗಿ ಕೆಲಸ ಮಾಡುತ್ತಾ ಸಾಗಿದಲ್ಲಿ ಗ್ರಾಮಗಳ ಅಭಿವೃದ್ಧಿ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ಬೊಳುಬೈಲಿನ

ಗ್ರಾಮ ಪಂಚಾಯತ್ ಜಾಲ್ಸೂರು, ನವಚೇತನ ಯುವಕ ಮಂಡಲದ ವತಿಯಿಂದ ನೂತನ ಬಸ್ ತಂಗುದಾಣ ನಿರ್ಮಾಣ Read More »

ದಾಂಪತ್ಯಕ್ಕೆ ವಿದಾಯ ಹೇಳಿದ ‌ಸೈನಾ‌ ನೆಹ್ವಾಲ್

ಸಮಗ್ರ ನ್ಯೂಸ್: ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ತಮ್ಮ ದೀರ್ಘಕಾಲದ ಸಂಗಾತಿ ಪರುಪಳ್ಳಿ ಕಶ್ಯಪ್ ಅವರಿಂದ ಬೇರ್ಪಡುವ ನಿರ್ಧಾರವನ್ನು ಘೋಷಿಸಿದ್ದಾರೆ. ಸೈನಾ ಇನ್ಸ್ಟಾಗ್ರಾಮ್ ನಲ್ಲಿ ತಮ್ಮ ನಿರ್ಧಾರವನ್ನು ಸಂಕ್ಷಿಪ್ತ ಹೇಳಿಕೆಯ ಮೂಲಕ ಪ್ರಕಟಿಸಿದರು. ಸುಮಾರು 7 ವರ್ಷಗಳ ದಾಂಪತ್ಯದ ನಂತರ ಸೈನಾ ಮತ್ತು ಪರುಪಳ್ಳಿ ಬೇರ್ಪಡಲಿದ್ದಾರೆ. ಸೈನಾ ಮತ್ತು ಪರುಪಳ್ಳಿ ಹೈದರಾಬಾದ್ ನ ಪುಲ್ಲೇಲ ಗೋಪಿಚಂದ್ ಅಕಾಡೆಮಿಯಲ್ಲಿ ಭಾರತೀಯ ಬ್ಯಾಡ್ಮಿಂಟನ್ ಶ್ರೇಯಾಂಕಗಳ ಮೂಲಕ ಒಟ್ಟಿಗೆ ಬೆಳೆದರು. ಸೈನಾ ತಮ್ಮ ಒಲಿಂಪಿಕ್ ಕಂಚು ಮತ್ತು ವಿಶ್ವದ ನಂ.

ದಾಂಪತ್ಯಕ್ಕೆ ವಿದಾಯ ಹೇಳಿದ ‌ಸೈನಾ‌ ನೆಹ್ವಾಲ್ Read More »

ಹಿರಿಯ ನಟಿ ಬಿ.ಸರೋಜಾದೇವಿ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಅವರು ಇಂದು ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ಸಮಯದಿಂದ ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಇದ್ದರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರ. ಸರೋಜಾ ಅವರು 1967ರಲ್ಲಿ ಹರ್ಷ ಅವರನ್ನು ವಿವಾಹ ಆದರು. 1986ರಲ್ಲಿ

ಹಿರಿಯ ನಟಿ ಬಿ.ಸರೋಜಾದೇವಿ ಇನ್ನಿಲ್ಲ Read More »

ನವಚೇತನ ಯುವಕ ಮಂಡಲದ ವತಿಯಿಂದ ನೂತನ ಬಸ್ ತಂಗುದಾಣ ನಿರ್ಮಾಣ

ಸಮಗ್ರ ನ್ಯೂಸ್:ನವಚೇತನ ಯುವಕ ಮಂಡಲ (ರಿ.) ಬೊಳುಬೈಲು ಇವರ ಸಹಭಾಗಿತ್ವದಲ್ಲಿ ನೂತನವಾಗಿ ಬೊಳುಬೈಲಿನಲ್ಲಿ ನಿರ್ಮಾಣಗೊಂಡ ಪ್ರಯಾಣಿಕರ ಬಸ್ಸು ತಂಗುದಾಣ ಉದ್ಘಾಟನಾ ಕಾರ್ಯಕ್ರಮವು ಜುಲೈ 13ರಂದು ನಡೆಯಿತು. ನವಚೇತನ ಯುವಕ ಮಂಡಲದ ಅಧ್ಯಕ್ಷ ಶ್ರೀ ಪ್ರದೀಪ್ ಬೊಳುಬೈಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದ ಉದ್ಘಾಟನೆಯನ್ನು ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ  ಸಾವಿತ್ರಿ ಗೋಪಾಲ್ ಅಡ್ಕಾರು ವಹಿಸಿದ್ದರು. ಕಾರ್ಯಕ್ರಮದ ಬಗ್ಗೆ ಮಾತನಾಡಿದ ಇವರು “ಯುವ ಸಮೂಹ ಸಮಾಜಮುಖಿಯಾಗಿ ಕೆಲಸ ಮಾಡುತ್ತಾ ಸಾಗಿದಲ್ಲಿ ಗ್ರಾಮಗಳ ಅಭಿವೃದ್ಧಿ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ಬೊಳುಬೈಲಿನ

ನವಚೇತನ ಯುವಕ ಮಂಡಲದ ವತಿಯಿಂದ ನೂತನ ಬಸ್ ತಂಗುದಾಣ ನಿರ್ಮಾಣ Read More »

ಸಿಗಂದೂರು ಸೇತುವೆ ಉದ್ಘಾಟನೆಗೆ ಕೌಂಟ್‌ಡೌನ್‌ ಶುರು/ ನಾಳೆ ನಿತಿನ್‌ ಗಡ್ಕರಿ ಲೋಕಾರ್ಪಣೆ

ಸಮಗ್ರ ನ್ಯೂಸ್‌: ಶರಾವತಿ ನದಿಯ ಹಿನ್ನೀರಿನಲ್ಲಿ ನಿರ್ಮಾಣಗೊಂಡಿರುವ ಐತಿಹಾಸಿಕ ಸಿಗಂದೂರು ಸೇತುವೆಯನ್ನು ನಾಳೆ (ಜುಲೈ 14) ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆಗೊಳಿಸಲಿದ್ದಾರೆ. ದೇಶದಲ್ಲೇ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆಯಾಗಿ ಖ್ಯಾತಿ ಪಡೆದ ಈ ಯೋಜನೆಯ ಮೂಲಕ ಮಲೆನಾಡಿನ ಪ್ರವಾಸೋದ್ಯಮ ಹಳ್ಳಿ ಮತ್ತಷ್ಟು ಬೆಳಕಿಗೆ ಬರಲು ಸಿದ್ಧವಾಗಿದ್ದು, ಶಿವಮೊಗ್ಗ ಜಿಲ್ಲೆಯ ಜನತೆಗೆ ಮತ್ತು ಪ್ರವಾಸೋದ್ಯಮಕ್ಕೆ ಹೊಸ ಆಯಾಮ ತೆರೆದಿರುವುದು ಖಚಿತ. ಶರಾವತಿ ನದಿಯ ಈ ಭಾಗದಲ್ಲಿ ಕರೂರು-ಬಾರಂಗಿ ಹೋಬಳಿಯ ನಾಲ್ಕು ಗ್ರಾಮ ಪಂಚಾಯತ್

ಸಿಗಂದೂರು ಸೇತುವೆ ಉದ್ಘಾಟನೆಗೆ ಕೌಂಟ್‌ಡೌನ್‌ ಶುರು/ ನಾಳೆ ನಿತಿನ್‌ ಗಡ್ಕರಿ ಲೋಕಾರ್ಪಣೆ Read More »

ಯಶಸ್ವಿಯಾದ ಆಕ್ಸಿಯಮ್ ಮಿಷನ್ -4 : ಮಂಗಳವಾರ ಭೂಮಿಗೆ ಮರಳಲಿದ್ದಾರೆ ಶುಭಾಂಶು ಶುಕ್ಲಾ & ಟೀಮ್

ಸಮಗ್ರ ನ್ಯೂಸ್‌: ಇತಿಹಾಸ ನಿರ್ಮಿಸಿರುವ ಆಕ್ಸಿಯಮ್ ಮಿಷನ್ -4 ಬಾಹ್ಯಾಕಾಶ ಪ್ರಯೋಗ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಈ ಮಿಷನ್‌ಗೆ ನಾಯಕತ್ವ ನೀಡಿದ ಭಾರತೀಯ ಮೂಲದ ಗಗನಯಾತ್ರಿ ಶುಭಾಂಶು ಶುಕ್ಲಾ ಹಾಗೂ ಅವರ ತಂಡವು ಮಂಗಳವಾರ ಭೂಮಿಗೆ ಸುರಕ್ಷಿತವಾಗಿ ಮರಳಲಿದ್ದಾರೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ (ISS) ಡ್ರಾಗನ್ ನೌಕೆಯ ಅನ್‌ಡಾಕಿಂಗ್ ಪ್ರಕ್ರಿಯೆ ಇಂದು ಸಂಜೆ 4:35ಕ್ಕೆ ಪ್ರಾರಂಭವಾಗಲಿದ್ದು, ಗಗನಯಾತ್ರಿಗಳು ನಾಳೆ ಮಧ್ಯಾಹ್ನ 2:25ಕ್ಕೆ ನೌಕೆಯೊಳಗೆ ಪ್ರವೇಶಿಸಲಿದ್ದಾರೆ. ಈ ಪ್ರಯಾಣದ ಅಂತಿಮ ಹಂತವಾಗಿ, ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಅವರು ಕ್ಯಾಲಿಫೋರ್ನಿಯಾದ

ಯಶಸ್ವಿಯಾದ ಆಕ್ಸಿಯಮ್ ಮಿಷನ್ -4 : ಮಂಗಳವಾರ ಭೂಮಿಗೆ ಮರಳಲಿದ್ದಾರೆ ಶುಭಾಂಶು ಶುಕ್ಲಾ & ಟೀಮ್ Read More »

ಹೈಕಮಾಂಡ್ ತುರ್ತು ಬುಲಾವ್/ ದೆಹಲಿಗೆ ಹೊರಟ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್‌: ಹೈಕಮಾಂಡ್ ತುರ್ತು ಬುಲಾವ್ ನೀಡಿದ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಶಿರಡಿಯಿಂದ ದೆಹಲಿಗೆ ಅವರು ಪ್ರಯಾಣ ಬೆಳೆಸಿದ್ದಾರೆ. ಇಂದು ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ ದೆಹಲಿಗೆ ತೆರಳಿದ್ದ ಡಿಕೆಶಿಯವರಿಗೆ ರಾಹುಲ್ ಗಾಂಧಿ ಭೇಟಿಗೆ ಸಮಯ ನೀಡಿರಲಿಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗುತ್ತಿರುವ ನಡುವೆಯೇ ಡಿಕೆ ಶಿವಕುಮಾ‌ರ್ ಅವರು ಜುಲೈ 8 ಮಂಗಳವಾರ ದೆಹಲಿಗೆ ತೆರಳಿದ್ದರು. ಮಂಗಳವಾರ ಮತ್ತು ಬುಧವಾರ ಕೇಂದ್ರ ಸರ್ಕಾರದ ಸಚಿವರನ್ನು ಭೇಟಿಯಾಗಿ ಇಲಾಖೆ ಸಂಬಂಧ

ಹೈಕಮಾಂಡ್ ತುರ್ತು ಬುಲಾವ್/ ದೆಹಲಿಗೆ ಹೊರಟ ಡಿ.ಕೆ ಶಿವಕುಮಾರ್ Read More »

ಬೆಳ್ತಂಗಡಿ: ಜಾಲತಾಣಗಳಲ್ಲಿ ಅಶ್ಲೀಲ ಪೋಸ್ಟ್| ಎರಡು ಪ್ರತ್ಯೇಕ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಸೌಜನ್ಯ ಹೋರಾಟಗಾರರು ಮತ್ತು ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶವಿರುವ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಾಗಿದೆ. ಮೊದಲನೇ ಪ್ರಕರಣದಲ್ಲಿ ಕಡಬ ಕೌಕ್ರಾಡಿ ಗ್ರಾಮದ ನಿವಾಸಿ ಜಯಂತ ಟಿ (46) ಎಂಬವರು ನೀಡಿದ ದೂರಿನಂತೆ ದಿನಾಂಕ:11-07-2025 ರಂದು ಪ್ರವೀಣ್‌ ಲೊಬೋ ಎಂಬ ಪೇಸ್ ಬುಕ್‌ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ, ಅಶ್ಲೀಲ ಸಂದೇಶವಿರುವ ಪೋಸ್ಟ್‌ ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಪಿರ್ಯಾದಿದಾರರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ

ಬೆಳ್ತಂಗಡಿ: ಜಾಲತಾಣಗಳಲ್ಲಿ ಅಶ್ಲೀಲ ಪೋಸ್ಟ್| ಎರಡು ಪ್ರತ್ಯೇಕ ಪ್ರಕರಣ ದಾಖಲು Read More »