ರಾಜ್ಯ

ಮಲೆಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳಿಗೆ ವಿಷವಿಕ್ಕಿ ಕೊಲೆ| ಮತ್ತೊಂದು ಹುಲಿಯೂ ಸಾವು

ಸಮಗ್ರ ನ್ಯೂಸ್: ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಹುಲಿಗಳ ಹತ್ಯಾಕಾಂಡ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹಸುಗಳನ್ನ ಬೇಟೆಯಾಡಿ ತಿಂದಿದ್ದಕ್ಕೆ ವಿಷಪ್ರಾಶನ ಮಾಡಿ ಹುಲಿಗಳನ್ನ ಕೊಂದಿರೋ ಆರೋಪ ಕೇಳಿಬಂದಿದೆ. ವಿಷವಿಟ್ಟವರು ಯಾರು ಅನ್ನೋದು ಇನ್ನೂ ಗೊತ್ತಾಗಿಲ್ಲ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೂಗ್ಯಂ ವಲಯದ ಮೀಣ್ಯಂ ಸಮೀಪ ಗುರುವಾರ ಬೆಳಗ್ಗೆ ಐದು ಹುಲಿಗಳು ಅಸಹಜವಾಗಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಸಮೀಪದ ಗ್ರಾಮವೊಂದರ ಐವರು ದನಗಾಹಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಐದು […]

ಮಲೆಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳಿಗೆ ವಿಷವಿಕ್ಕಿ ಕೊಲೆ| ಮತ್ತೊಂದು ಹುಲಿಯೂ ಸಾವು Read More »

ಭರ್ತಿಯಾದ ಕೃಷ್ಣರಾಜಸಾಗರ ಜಲಾಶಯ/ ಜೂನ್ 30ರಂದು ಮುಖ್ಯಮಂತ್ರಿಯಿಂದ ಬಾಗಿನ ಸಮರ್ಪಣೆ

ಸಮಗ್ರ ನ್ಯೂಸ್‌: ಕೃಷ್ಣರಾಜಸಾಗರ ಜಲಾಶಯವು ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಭರ್ತಿಯಾಗಿ ಹೊಸ ದಾಖಲೆ ಸೃಷ್ಟಿಸಿದ್ದು, ಈ ಸಂಭ್ರಮದ ಅಂಗವಾಗಿ ಜೂನ್ 30ರಂದು ಬೆಳಿಗ್ಗೆ 11ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 4ನೇ ಬಾರಿಗೆ ಬಾಗಿನ ಅರ್ಪಿಸಲಿದ್ದಾರೆ. ಈಗಾಗಲೇ 2013, 2014, 2024 ಈ ಮೂರು ವರ್ಷ ಕಾವೇರಿ ತಾಯಿಗೆ ಬಾಗಿನ ಅರ್ಪಿಸಿ, ಪೂಜೆ ಸಲ್ಲಿಸಿದ್ದಾರೆ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿದ ಕಾರಣ, ಜಲಾಶಯ ಜೂನ್‌ನಲ್ಲೇ ಭರ್ತಿಯಾಗಿದೆ. ಕೆಆರ್‌ಎಸ್ ಅಣೆಕಟ್ಟೆ

ಭರ್ತಿಯಾದ ಕೃಷ್ಣರಾಜಸಾಗರ ಜಲಾಶಯ/ ಜೂನ್ 30ರಂದು ಮುಖ್ಯಮಂತ್ರಿಯಿಂದ ಬಾಗಿನ ಸಮರ್ಪಣೆ Read More »

‘ಹುಡುಗರು’ ಚಿತ್ರದ ‘ಪಂಕಜಾ’ ಹಾಡಿನ ನಟಿ ಶೆಫಾಲಿ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಪುನೀತ್ ರಾಜ್​ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ಮಸ್ತ್ ಆಗಿ ಕುಣಿದಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಮುಂಬೈನ ಅಂಧೇರಿ ಲೋಖಂಡ್‌ವಾಲಾ ಪ್ರದೇಶದಲ್ಲಿ ವಾಸಿಸುತ್ತಿದ್ದ ನಟಿ ಶೆಫಾಲಿ ಜೂನ್ 27ರ ಬೆಳಿಗ್ಗೆ 11 ಗಂಟೆ ಸುಮಾರಿಗೆ ತೀವ್ರ ಅಸ್ವಸ್ಥರಾದರು. ಅವರಿಗೆ ಎದೆನೋವು ಕಾಣಿಸಿಕೊಂಡಿತು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ. ಆಗಲೇ ಅವರು ನಿಧನ ಹೊಂದಿದ್ದರು. ಪ್ರಸ್ತುತ,

‘ಹುಡುಗರು’ ಚಿತ್ರದ ‘ಪಂಕಜಾ’ ಹಾಡಿನ ನಟಿ ಶೆಫಾಲಿ ಹೃದಯಾಘಾತದಿಂದ ಸಾವು Read More »

ನೀವು ನಾಗರಹೊಳೆ ಹೆದ್ದಾರಿಯಲ್ಲಿ ಸಾಗುವಾಗ ವಾಹನದಿಂದ ಇಳಿಯುತ್ತೀರಾ? ಹಾಗಿದ್ರೆ ಈ ಸ್ಟೋರಿ ಓದ್ಲೇಬೇಕು…

ಸಮಗ್ರ ನ್ಯೂಸ್: ನಾಗರಹೊಳೆಯಲ್ಲಿರುವ ಹೆದ್ದಾರಿಯ ಮೂಲಕ ಸಾಗಿಬಂದ ಕೇರಳದ ಕಾರೊಂದರಿಂದ ಪ್ರಯಾಣಿಕರೊಬ್ಬರು ವೀರನನಹೊಸಳ್ಳಿ ವಲಯದಲ್ಲಿ ಇಳಿದು ದಟ್ಟಕಾಡಿನ ಮಾರ್ಗ ಮಧ್ಯೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಅದನ್ನು ಮತ್ತೊಂದು ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ತಮ್ಮ ಮೊಬೈಲಿನ ಮೂಲಕ ವಿಡಿಯೋ ಮಾಡಿ, ಅದನ್ನು ನಾಣಚ್ಚಿ ಗೇಟ್ ನಲ್ಲಿ ಚೆಕ್ ಪೋಸ್ಟ್ ಕರ್ನಾಟಕ ಅರಣ್ಯ ಇಲಾಖೆ ಸಿಬ್ಬಂದಿಗೆ ತೋರಿಸಿ, ಕಾರು ಇಳಿದು ಮೂತ್ರ ವಿಸರ್ಜನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ವಿಡಿಯೋವನ್ನು ಪರಿಶೀಲಿಸಿದ ಸಿಬ್ಬಂದಿಯು ಅದು ಕೇರಳದಲ್ಲಿ ನೋಂದಾವಣಿಯಾಗಿರುವ ಕಾರು ಎಂಬುದನ್ನು

ನೀವು ನಾಗರಹೊಳೆ ಹೆದ್ದಾರಿಯಲ್ಲಿ ಸಾಗುವಾಗ ವಾಹನದಿಂದ ಇಳಿಯುತ್ತೀರಾ? ಹಾಗಿದ್ರೆ ಈ ಸ್ಟೋರಿ ಓದ್ಲೇಬೇಕು… Read More »

ಕೆ.ಆರ್.ಎಸ್. ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ/ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ

ಸಮಗ್ರ ನ್ಯೂಸ್‌: ಕೃಷ್ಣರಾಜಸಾಗರ ಜಲಾಶಯದ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಕೆ.ಆರ್.ಎಸ್. ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ಮಾಡುವುದರಿಂದ ಜಲಾಶಯಕ್ಕೆ ಅಪಾಯ ಬರಬಹುದು ಎಂಬ ಆತಂಕದಿಂದ ರೈತರು, ಹೋರಾಟಗಾರರು, ವಿವಿಧ ಸಂಘಟನೆಗಳ ಕಾಯಕರ್ತರು, ಪರಿಸರವಾದಿಗಳು ಸೇರಿದಂತೆ ವಿವಿಧ ಚಳವಳಿಗಾರರ ವಿರೋಧದ ನಡುವೆ ರಾಜ್ಯ ಸರ್ಕಾರ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ ನಡೆಸಲು ಕಾಮಗಾರಿ ಕೈಗೊಂಡಿತ್ತು. ರಾಜ್ಯ ಸರ್ಕಾರದ ಇಂತಹ ನಿರ್ಧಾರವನ್ನು ಪ್ರಶ್ನಿಸಿ ರೈತ

ಕೆ.ಆರ್.ಎಸ್. ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ/ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ Read More »

ಧರ್ಮಸ್ಥಳ ಗ್ರಾಮದಲ್ಲಿನ ಅಸಹಜ ಸಾವುಗಳ ಕುರಿತ ಪತ್ರ ವೈರಲ್| ಎಸ್ಪಿ ಭೇಟಿ ಮಾಡಿದ ವಕೀಲರ ನಿಯೋಗ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿನ ಅಸಹಜ ಸಾವುಗಳ ಮಾಹಿತಿ ಇರುವ ವ್ಯಕ್ತಿ ಪೊಲೀಸ್ ಶರಣಾಗತಿ ಆಗುತ್ತೇನೆ ಎಂದು ವಕೀಲರ ಮೂಲಕ ಬರದೆ ಪತ್ರ ವೈರಲ್ ಆಗಿದ್ದು, ಇದೀಗ ಪತ್ರಕ್ಕೆ ಸಂಬಂಧಿಸಿದಂತೆ ವಕೀಲರ ತಂಡವೊಂದು ಜಿಲ್ಲಾ ಎಸ್ಪಿ ಭೇಟಿ ಮಾಡಲು ಮಂಗಳೂರಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಕೊಲೆಗಳು ಮತ್ತು ಅತ್ಯಾಚಾರಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಗೆ ಬಂದು ಶರಣಾಗುತ್ತೇನೆಂದು ವ್ಯಕ್ತಿಯೊಬ್ಬ ಬರೆದಿರುವ ಪತ್ರ ವೈರಲ್ ಆಗಿತ್ತು. ಇದೀಗ ವೈರಲ್ ಪತ್ರಕ್ಕೆ ಸಂಬಂಧಿಸಿದಂತೆ ವಕೀಲರಾದ

ಧರ್ಮಸ್ಥಳ ಗ್ರಾಮದಲ್ಲಿನ ಅಸಹಜ ಸಾವುಗಳ ಕುರಿತ ಪತ್ರ ವೈರಲ್| ಎಸ್ಪಿ ಭೇಟಿ ಮಾಡಿದ ವಕೀಲರ ನಿಯೋಗ Read More »

ಸುಹಾಸ್ ಶೆಟ್ಟಿ ಹತ್ಯೆ‌ ಪ್ರಕರಣದ ಎಲ್ಲಾ ಆರೋಪಿಗಳು ಎನ್ಐಎ ವಶಕ್ಕೆ

ಸಮಗ್ರ ನ್ಯೂಸ್: ಮಂಗಳೂರು ಹೊರವಲಯದ ಬಜಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಎಂಟು ಮಂದಿ ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಕಸ್ಟಡಿಗೆ ನೀಡಿದೆ. ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ಎನ್‌ಐಎ ಎಸ್​ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಬೆಂಗಳೂರಿನ 50ನೇ ಸಿಸಿಎಚ್ ನ್ಯಾಯಾಲಯ ಜುಲೈ 1ರ ವರೆಗೆ ಆರೋಪಿಗಳನ್ನು ಎನ್‌ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸುವಂತೆ ರಾಜ್ಯ

ಸುಹಾಸ್ ಶೆಟ್ಟಿ ಹತ್ಯೆ‌ ಪ್ರಕರಣದ ಎಲ್ಲಾ ಆರೋಪಿಗಳು ಎನ್ಐಎ ವಶಕ್ಕೆ Read More »

ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆ ಇಂದಿನಿಂದ ಪ್ರಾರಂಭ

ಸಮಗ್ರ ನ್ಯೂಸ್‌: ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆ ಇಂದಿನಿಂದ ಪ್ರಾರಂಭವಾಗಲಿದೆ. ಈ ರಥಯಾತ್ರೆಯಲ್ಲಿ ಜಗನ್ನಾಥ, ಬಲಭದ್ರ ಹಾಗೂ ಸುಭದ್ರೆಯರ ವಿಗ್ರಹಗಳನ್ನು ಜಗನ್ನಾಥ ದೇಗುಲದಿಂದ ಗುಂಡಿಚಾ ದೇಗುಲದವರೆಗೆ ರಥದಲ್ಲಿ ಕರೆದೊಯ್ಯಲಾಗುತ್ತದೆ. ಗಂಟೆ, ಶಂಖಗಳು ಮತ್ತು ‘ಜೈ ಜಗನ್ನಾಥ’ ಮಂತ್ರಗಳ ನಡುವೆ ರಥಗಳು ಚಲಿಸುಲಿದ್ದು, ಪುರಿಯ ವಾತಾವರಣವು ಅದ್ಭುತ ಮತ್ತು ದೈವಿಕ ಶಕ್ತಿಯಿಂದ ತುಂಬಿರಲಿದೆ. ಈ ಐತಿಹಾಸಿಕ ಉತ್ಸವವನ್ನು ವೀಕ್ಷಿಸಲು ಈಗಾಗಲೇ ಲಕ್ಷಾಂತರ ಭಕ್ತರು ಪುರಿಯನ್ನು ತಲುಪಿದ್ದಾರೆ. ರಥಯಾತ್ರೆ 9 ದಿನಗಳವರೆಗೆ ಇರಲಿದೆ. ಪುರಿಯ ರಥಯಾತ್ರೆಯನ್ನು ಧರ್ಮ, ಸಂಸ್ಕೃತಿ ಮತ್ತು ಸಾಮರಸ್ಯದ

ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆ ಇಂದಿನಿಂದ ಪ್ರಾರಂಭ Read More »

ಪುತ್ತೂರು – ಮಂಗಳೂರು ನಡುವೆ ನಾನ್ ಸ್ಟಾಪ್ ಬಸ್ ಸಂಚಾರಕ್ಕೆ ಕೆಎಸ್ಆರ್ ಟಿಸಿ ನಿರ್ಧಾರ| ಶೀಘ್ರದಲ್ಲೇ ಆರಂಭಿಸಲು ಚಿಂತನೆ

ಸಮಗ್ರ ನ್ಯೂಸ್: ಪುತ್ತೂರು ಮತ್ತು ಮಂಗಳೂರು ನಡುವೆ ನಾನ್ ಸ್ಟಾಪ್ ಕೆಎಸ್‌ಆರ್ ಟಿಸಿ ಬಸ್ ಸಂಚಾರ ಪ್ರಾರಂಭಿಸಿಲು ಕೆಎಸ್‌ಆರ್ ಟಿಸಿ ಅಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ. ಶಾಸಕ ಅಶೋಕ್‌ ರೈ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಪುತ್ತೂರಿನಿಂದ ನೇರವಾಗಿ ಮಂಗಳೂರಿಗೆ ತೆರಳುವ ಮತ್ತು ಮಂಗಳೂರಿನಿಂದ ನೇರವಾಗಿ ಪುತ್ತೂರಿಗೆ ಆಗಮಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಪುತ್ತೂರು – ಸ್ಟೇಟ್‌ಬ್ಯಾಂಕ್‌ ನಾನ್‌ಸ್ಟಾಪ್‌ ಬಸ್‌ಗಳನ್ನು ಶೀಘ್ರದಲ್ಲೇ ಓಡಿಸಲಾಗುತ್ತದೆ. ಆರಂಭದಲ್ಲಿ 6 ಬಸ್‌ಗಳು ಈ ಸೇವೆಗೆ ಇಳಿಯಲಿವೆ. ಇವು

ಪುತ್ತೂರು – ಮಂಗಳೂರು ನಡುವೆ ನಾನ್ ಸ್ಟಾಪ್ ಬಸ್ ಸಂಚಾರಕ್ಕೆ ಕೆಎಸ್ಆರ್ ಟಿಸಿ ನಿರ್ಧಾರ| ಶೀಘ್ರದಲ್ಲೇ ಆರಂಭಿಸಲು ಚಿಂತನೆ Read More »

ವಿಜಯಪುರ ಕೆನರಾ ಬ್ಯಾಂಕ್ ದರೋಡೆ ಪ್ರಕರಣ| ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲೆಯ ಮನಗೂಳಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಸೇರಿದಂತೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಮನಗೂಳಿ ಕೆನರಾ ಬ್ಯಾಂಕ್ ಹಿಂದಿನ ವ್ಯವಸ್ಥಾಪಕ ಹಾಗೂ ಹಾಲಿ ಹುಬ್ಬಳ್ಳಿಯ ಗದಗ ರೋಡ್ ನ ಕೊಠಾರಿ ನಗರದ ಕೆನರಾ ಬ್ಯಾಂಕ್ ಹಿರಿಯ ವ್ಯವಸ್ಥಾಪಕ ವಿಜಯ್ ಕುಮಾರ್ ಮಿರಿಯಾಲ (41), ಹುಬ್ಬಳ್ಳಿಯ ಜನತಾ ಕಾಲೋನಿಉದ್ಯೋಗಿ ಚಂದ್ರಶೇಖರ್ ನೆರೆಲ್ಲಾ (38) ಹುಬ್ಬಳ್ಳಿ ಚಾಲುಕ್ಯ ನಗರದ ಸುನೀಲ್ ಮೋಕಾ (40) ಎಂಬುವವರನ್ನು ಬಂಧಿಸಲಾಗಿದೆ. ಬಂಧಿತರಿಂದ

ವಿಜಯಪುರ ಕೆನರಾ ಬ್ಯಾಂಕ್ ದರೋಡೆ ಪ್ರಕರಣ| ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ Read More »