ರಾಜ್ಯ

ವಿಶ್ವದ 4ನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ| ನೀತಿ ಆಯೋಗದ ಸಿಇಒ ಘೋಷಣೆ

ಸಮಗ್ರ ನ್ಯೂಸ್: ಭಾರತ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ ಹೊರಹೊಮ್ಮಿದೆ.ಜಪಾನ್ ದೇಶವನ್ನು ಹಿಂದಿಕ್ಕಿದೆ ಎಂದು ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ (ಸಿಇಒ) ಬಿ.ವಿ.ಆ‌ರ್ ಸುಬ್ರಹ್ಮಣ್ಯಂ ಘೋಷಣೆ ಮಾಡಿದ್ಧಾರೆ. ಅಂತರರಾಷ್ಟ್ರೀಯ ಹಣಕಾಸು ನಿಧಿಯ (IMF) ದತ್ತಾಂಶವನ್ನು ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ (ಸಿಇಒ) ಬಿ.ವಿ.ಆ‌ರ್ ಸುಬ್ರಹ್ಮಣ್ಯಂ ದೇಶದಲ್ಲಿ ದೊಡ್ಡ ಜಿಡಿಪಿಯಲ್ಲಿ ಅಮೆರಿಕಾ ಮೊದಲ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ನಾವು ನಾಲ್ಕನೇ ಅತಿದೊಡ್ಡ ಆರ್ಥಿಕತೆಯಲ್ಲಿ ಇದ್ದವೆ ನಮ್ಮ ಆರ್ಥಿಕತೆ 4 ಟ್ರಿಲಿಯನ್ […]

ವಿಶ್ವದ 4ನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ| ನೀತಿ ಆಯೋಗದ ಸಿಇಒ ಘೋಷಣೆ Read More »

ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಕೇಸ್ ಗಳು ಏರಿಕೆ| ಲಾಕ್ ಡೌನ್ ಭೀತಿಯಲ್ಲಿ ಕರ್ನಾಟಕ!!

ಸಮಗ್ರ ನ್ಯೂಸ್: ದೇಶಾದ್ಯಂತ ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಇತ್ತ ನಮ್ಮ ರಾಜ್ಯದಲ್ಲೂ ಈಗಾಗಲೇ ಅದರಲ್ಲೂ ಬೆಂಗಳೂರಿನಲ್ಲಿ ಕೋವಿಡ್​​ಗೆ ಓರ್ವ ನಿನ್ನೆಯಷ್ಟೇ ಮೃತಪಟ್ಟಿದ್ದು, ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 38ಕ್ಕೇರಿಕೆಯಾಗಿವೆ. ಈ ಕುರಿತು ಮಾತನಾಡಿರುವ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು, ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಕಠಿಣ ನಿಮಯಗಳು ಜಾರಿ ಹಾಗೂ ಲಾಕ್​​ಡೌನ್​​​ ಜಾರಿ ಬಗ್ಗೆ ಸೂಕ್ಷ್ಮ ಸುಳಿವನ್ನು ನೀಡಿದ್ದಾರೆ. ಕೋವಿಡ್ ಪ್ರಕರಣಗಳ

ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಕೇಸ್ ಗಳು ಏರಿಕೆ| ಲಾಕ್ ಡೌನ್ ಭೀತಿಯಲ್ಲಿ ಕರ್ನಾಟಕ!! Read More »

ಈಗ ಕರ್ನಾಟಕದಲ್ಲಿ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ ಗ್ಯಾರಂಟಿ| ಖಾಸಗಿ ಸಂಸ್ಥೆಯ ಸಮೀಕ್ಷೆಯಲ್ಲಿ ಬಹಿರಂಗ

ಸಮಗ್ರ ನ್ಯೂಸ್: ಒಂದು ವೇಳೆ ರಾಜ್ಯದಲ್ಲಿ ಈಗಲೇ ವಿಧಾನಸಭೆ ಚುನಾವಣೆ ನಡೆದರೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಜನಪ್ರಿಯ ಪಂಚಗ್ಯಾರಂಟಿ ಯೋಜನೆಗಳನ್ನು ಮೆಟ್ಟಿ ಪ್ರತಿಪಕ್ಷ ಬಿಜೆಪಿ ಮೊದಲ ಬಾರಿಗೆ ಸ್ವತಂತ್ರವಾಗಿ ಸ್ಪಷ್ಟ ಜನಾದೇಶ ಪಡೆದು ಸರ್ಕಾರ ರಚನೆ ಮಾಡಲಿದೆ ಎಂದು ಖಾಸಗಿ ಸಂಸ್ಥೆಯ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ. ಹೈದರಾಬಾದ್ ಮೂಲದ ಪೀಪಲ್ಸ್ ಪಲ್ಸ್ ಆರ್ಗನೈಸೇಷನ್ ಎಂಬ ಸರ್ಕಾರೇತರ ಸಂಸ್ಥೆಯೊಂದು, ಕೊಮೆಡೊ ಟೆಕ್ನಾಲಜೀಸ್ ಎಂಬ ಸಂಸ್ಥೆಯೊಂದಿಗೆ ಸೇರಿ ಕರ್ನಾಟಕದ ಜಿಲ್ಲೆಗಳಲ್ಲಿ ಸಮೀಕ್ಷೆ ನಡೆಸಿದೆ. ಆ ಸಮೀಕ್ಷೆಯ ವರದಿಯಂತೆ, ಕರ್ನಾಟಕದ ಪ್ರಸಕ್ತ ಸನ್ನಿವೇಶದಲ್ಲೇನಾದರೂ

ಈಗ ಕರ್ನಾಟಕದಲ್ಲಿ ಚುನಾವಣೆ ನಡೆದರೆ ಬಿಜೆಪಿಗೆ ಬಹುಮತ ಗ್ಯಾರಂಟಿ| ಖಾಸಗಿ ಸಂಸ್ಥೆಯ ಸಮೀಕ್ಷೆಯಲ್ಲಿ ಬಹಿರಂಗ Read More »

ಸಿಇಟಿ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ್ದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಬೆಳಿಗ್ಗೆ 11:30 ಕ್ಕೆ ಕೆಇಎ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. ಫಲಿತಾಂಶದ ಲಿಂಕ್ ಗಳು ಮಧ್ಯಾಹ್ನ 2 ಗಂಟೆಯ ನಂತರ ಲೈವ್ ಆಗುತ್ತವೆ. https://cetonline.Karnataka.gov.in/ugcetrank2025/rank2025/checkresult.aspx & https://karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ಅಧಿಕೃತ ಜಾಲತಾಣ cetonline.karnataka.gov.in ಜಾಲತಾಣಕ್ಕೆ ಭೇಟಿ ನೀಡಬೇಕು.-ಕೆಸಿಇಟಿ ಫಲಿತಾಂಶ

ಸಿಇಟಿ ಫಲಿತಾಂಶ ಪ್ರಕಟ Read More »

ಕಾರ್ಕಳ: ಶಾಸಕ ಸುನಿಲ್ ಸಹೋದರ ನಿಧನ

ಸಮಗ್ರ ನ್ಯೂಸ್: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಕಾರ್ಕಳ: ಶಾಸಕ ಸುನಿಲ್ ಸಹೋದರ ನಿಧನ Read More »

ಬೆಳಗ್ಗೆ ಮದುವೆ ಕ್ಯಾನ್ಸಲ್| ಸಂಜೆ ಪ್ರಿಯಕರನ ಕೈಹಿಡಿದ ವಧು

ಸಮಗ್ರ ನ್ಯೂಸ್: ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ ನಡೆಯಬೇಕಿದ್ದ ಮದುವೆಯೊಂದು ಕೊನೆ ಕ್ಷಣದಲ್ಲಿ ರದ್ದಾದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದರೆ, ಸಂಜೆಯ ವೇಳೆಗೆ ಆ ದಿನವೇ ಗಣೇಶನ ದೇವಸ್ಥಾನದಲ್ಲಿ ಪಲ್ಲವಿ ಎಂಬ ಯುವತಿ ತನ್ನ ಪ್ರಿಯಕರ ರಘುವಿನ ಜೊತೆ ಹಸೆಮಣೆ ಏರಿದ ಘಟನೆ ಎಲ್ಲರ ಗಮನ ಸೆಳೆಯಿತು. ಬೆಳಗ್ಗೆ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಪಲ್ಲವಿಯ ಮದುವೆ ಒಂದು ಯುವಕನ ಜೊತೆ ಆಗಬೇಕಿತ್ತು. ಕುಟುಂಬಸ್ಥರ ಒಪ್ಪಿಗೆಯೊಂದಿಗೆ ಎಲ್ಲ ಸಿದ್ಧತೆಗಳು ನಡೆದಿದ್ದವು. ತಳಿರು ತೋರಣಗಳಿಂದ ಮಂಟಪವನ್ನು

ಬೆಳಗ್ಗೆ ಮದುವೆ ಕ್ಯಾನ್ಸಲ್| ಸಂಜೆ ಪ್ರಿಯಕರನ ಕೈಹಿಡಿದ ವಧು Read More »

ಮುಂದಿನ 24 ಗಂಟೆಗಳಲ್ಲಿ ಕೇರಳ ಪ್ರವೇಶಿಸಲಿರುವ ಮುಂಗಾರು| ಅವಧಿಗಿಂತ ಮೊದಲೇ ಮಾನ್ಸೂನ್ ಮಳೆ

ಸಮಗ್ರ ನ್ಯೂಸ್: ಈ ಬಾರಿ ಮುಂಗಾರು ಪ್ರವೇಶ ಮಾಮೂಲಿಗಿಂತ ಮೊದಲೇ ಆಗಲಿದೆ. ಮುಂದಿನ 24 ಗಂಟೆಯೊಳಗೆ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕಳೆದ 16 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಕೇರಳದಲ್ಲಿ ಅವಧಿಗಿಂತ ಮೊದಲೇ ಮಾನ್ಸೂನ್‌ ಪ್ರವೇಶಿಸಲಿದೆ. ಮಾನ್ಸೂನ್ ಆರಂಭಕ್ಕೆ ಎಲ್ಲಾ ಅನುಕೂಲಕರ ಪರಿಸ್ಥಿತಿಗಳು ರಾಜ್ಯದಲ್ಲಿ ಅಭಿವೃದ್ಧಿಗೊಂಡಿದ್ದು, ಕಳೆದ ಎರಡು ದಿನಗಳಿಂದ ಕಡಿಮೆ ಒತ್ತಡದ ಪ್ರದೇಶ ಮತ್ತು ಮುಂದುವರಿಯುತ್ತಿರುವ ಮಾನ್ಸೂನ್ ವ್ಯವಸ್ಥೆಯ ಸಂಯೋಜನೆಯಿಂದಾಗಿ ಕೇರಳದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಕೇರಳ ಪ್ರವೇಶಿಸಲಿರುವ ಮುಂಗಾರು| ಅವಧಿಗಿಂತ ಮೊದಲೇ ಮಾನ್ಸೂನ್ ಮಳೆ Read More »

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿಗಳ ತಿದ್ದುಪಡಿ ಮಸೂದೆ ರಾಷ್ಟ್ರಪತಿ ಅಂಗಳಕ್ಕೆ

ಸಮಗ್ರ ನ್ಯೂಸ್: ಮುಜರಾಯಿ ಇಲಾಖೆಯ ವ್ಯಾಪ್ತಿಯ ಶ್ರೀಮಂತ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಆದಾಯದಲ್ಲಿ ಒಂದು ಪಾಲನ್ನು ‘ಸಾಮಾನ್ಯ ಸಂಗ್ರಹಣಾ ನಿಧಿ’ಗೆ ವರ್ಗಾಯಿಸಲು ಅವಕಾಶ ಮಾಡಿಕೊಡುವ ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ಮಸೂದೆ’ಯನ್ನು ರಾಷ್ಟ್ರಪತಿಯ ಅಂಕಿತಕ್ಕೆ ಕಾಯ್ದಿರಿಸಿ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್ ವಾಪಸ್‌ ಕಳುಹಿಸಿದ್ದಾರೆ. ‘ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ- 1997’ರ ತಿದ್ದುಪಡಿಗಾಗಿ ‌ಉಭಯ ಸದನಗಳ ಅನುಮೋದನೆ ಪಡೆಯಲಾಗಿತ್ತು. ಆದರೆ, ಕೆಲವು ಸ್ಪಷ್ಟೀಕರಣ ಕೇಳಿ ರಾಜ್ಯಪಾಲರು ವಾಪಸ್‌ ಕಳುಹಿಸಿದ್ದರು.

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿಗಳ ತಿದ್ದುಪಡಿ ಮಸೂದೆ ರಾಷ್ಟ್ರಪತಿ ಅಂಗಳಕ್ಕೆ Read More »

ರಾಜ್ಯದಲ್ಲಿ ಜನೌಷಧಿ ಕೇಂದ್ರಗಳು ಸಂಪೂರ್ಣ ಸ್ಥಗಿತಗೊಳ್ಳುತ್ತವೆಯೇ? ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?

ಸಮಗ್ರ ನ್ಯೂಸ್: ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಲಾಗುತ್ತದೆ‌ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನ ಮಾತ್ರ ತೆರವುಗೊಳಿಸುವ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಮಾರಾಟಕ್ಕೆ ಅವಕಾಶ ಕೊಡುವುದು ಸರಿಯಲ್ಲ. ಸರ್ಕಾರವೇ ಉಚಿತವಾಗಿ ಔಷಧಿಗಳನ್ನು ನೀಡುವಾಗ, ಆಸ್ಪತ್ರೆಗಳಲ್ಲಿ ಔಷಧಿಗಳ ಮಾರಾಟ

ರಾಜ್ಯದಲ್ಲಿ ಜನೌಷಧಿ ಕೇಂದ್ರಗಳು ಸಂಪೂರ್ಣ ಸ್ಥಗಿತಗೊಳ್ಳುತ್ತವೆಯೇ? ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು? Read More »

ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು| ಕಣ್ಣೀರು ಹಾಕಿದ ವರ

ಸಮಗ್ರ ನ್ಯೂಸ್: ತಾಳಿ ಕಟ್ಟುವ ವೇಳೆ ವಧು ತಲೆ ಅಲ್ಲಾಡಿಸಿ ನನಗೆ ಈ ಮದುವೆ ಬೇಡ ಎಂದ ಘಟನೆ ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ತಾಳಿ ಕಟ್ಟೋ ಮುಹೂರ್ತಕ್ಕೂ ಮುನ್ನ ಯುವತಿಗೆ ಒಂದು ಫೋನ್ ಕರೆ ಬಂದಿದೆ. ಆಗ ವಧು ತಕ್ಷಣವೇ ನನಗೆ ಈ ಮದುವೆ ಬೇಡ ಎಂದು ವಧು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹೆತ್ತವರು, ಸಂಬಂಧಿಕರು ಯಾರು ಏನೇ ಹೇಳಿದರು ಕೇಳದ ವಧು ರೂಂಗೆ ಹೋಗಿ ಮದುವೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದಾರೆ.

ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು| ಕಣ್ಣೀರು ಹಾಕಿದ ವರ Read More »