ರಾಜ್ಯ

ಮಡೆನೂರು ಮನು ವಿರುದ್ದ ಅತ್ಯಾಚಾರ ಆರೋಪ ಪ್ರಕರಣ| ಉಲ್ಟಾ ಹೊಡೆದ ಸಂತ್ರಸ್ತೆ

ಸಮಗ್ರ ನ್ಯೂಸ್: ತನ್ನ ಮೇಲೆ ಮಡೆನೂರು ಮನು ಅತ್ಯಾಚಾರವೆಸಗಿದ್ದಾನೆ, ಗರ್ಭಪಾತ ಮಾಡಿಸಿದ್ದಾನೆ ಎಂದೆಲ್ಲಾ ಪೊಲೀಸ್ ಠಾಣೆ ಮಟ್ಟಿಲೇರಿದ್ದ ಕಿರುತೆರೆ ನಟಿ ಈಗ ಉಲ್ಟಾ ಹೊಡೆದಿದ್ದಾಳೆ. ಇದೀಗ ನಟಿ ಹೊಸ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದಾಳೆ. ಮಡೆನೂರು ಮನು ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ, ಬಲವಂತದಿಂದ ತಾಳಿ ಕಟ್ಟಿದ್ದಾನೆ, ಎರಡು ಬಾರಿ ಗರ್ಭಪಾತ ಮಾಡಿಸಿದ್ದಾನೆ ಎಂದು ನಟಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಅದರಂತೆ ಪೊಲೀಸರು ಮಡೆನೂರು ಮನುವನ್ನು ವಶಕ್ಕೆ ಪಡೆದಿದ್ದರು. ಇಂದು ಮಡೆನೂರು ಅಭಿನಯದ ಚೊಚ್ಚಲ ಸಿನಿಮಾ […]

ಮಡೆನೂರು ಮನು ವಿರುದ್ದ ಅತ್ಯಾಚಾರ ಆರೋಪ ಪ್ರಕರಣ| ಉಲ್ಟಾ ಹೊಡೆದ ಸಂತ್ರಸ್ತೆ Read More »

ಸುಳ್ಯ ಜೇನು ವ್ಯವಸಾಯಗಾರರ ನೂತನ ಕಟ್ಟಡ, ಆಧುನಿಕ ಸಂಸ್ಕರಣಾ ಘಟಕ, ಜೇನು ಚಾಕಲೇಟ್ ಇದರ ಲೋಕಾರ್ಪಣೆ| ಜಿಲ್ಲೆಯ ಉತ್ಪನ್ನಗಳು ವಿಶ್ವವ್ಯಾಪಿಯಾಗಲಿ – ಶೋಭಾ ಕರಂದ್ಲಾಜೆ

ಸುಳ್ಯ: ‘ಸುಳ್ಯದ ಪರಿಸರದಲ್ಲಿ ಭಾರಿ ದೊಡ್ಡ ಉದ್ಯಮ ಇಲ್ಲ, ಸುಮಾರು 50 ಕೋಟಿಗೂ ಹೆಚ್ಚಿನ ಜನರಿಗೆ ನಮ್ಮ ಕೃಷಿ ಕ್ಷೇತ್ರದಲ್ಲಿ ಉದ್ಯೋಗ ಸಿಗುತ್ತಿದೆ. ಮುಂದೆ ಕೃಷ್ಟಿ ನಂತರ ಭವಿಷ್ಯದ ಉದ್ಯಮವೆಂದರೆ ಅದು ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು. ಉತ್ತರ ಭಾಗದಲ್ಲಿ ವಿವಿಧ ರೀತಿಯ ಜೇನನ್ನು ಉತ್ಪಾದನೆ ಮಾಡುತ್ತಾರೆ ಹಾಗೂ ಅದು ವಿದೇಶಗಳಿಗೆ ರಫ್ತು ಆಗುತ್ತವೆ ಹಾಗೆಯೇ ಇಲ್ಲಿ ಉತ್ಪಾದನೆ ಆಗುವಂತಹ ಜೇನಿನ ಚಾಕಲೇಟ್ ವಿದೇಶಗಳಿಗೆ ರಫ್ತು ಆಗಬೇಕು. ಹಾಗೆಯೇ ದ.ಕ ಕನ್ನಡದಲ್ಲಿ ಒಂದು ಗುಣಮಟ್ಟದ ಫುಡ್ ಟೆಸ್ಟಿಂಗ್

ಸುಳ್ಯ ಜೇನು ವ್ಯವಸಾಯಗಾರರ ನೂತನ ಕಟ್ಟಡ, ಆಧುನಿಕ ಸಂಸ್ಕರಣಾ ಘಟಕ, ಜೇನು ಚಾಕಲೇಟ್ ಇದರ ಲೋಕಾರ್ಪಣೆ| ಜಿಲ್ಲೆಯ ಉತ್ಪನ್ನಗಳು ವಿಶ್ವವ್ಯಾಪಿಯಾಗಲಿ – ಶೋಭಾ ಕರಂದ್ಲಾಜೆ Read More »

ಮಾಸ್ಕೋದಲ್ಲಿ ಭಾರತದ ಸಂಸದರ ನಿಯೋಗ ಇಳಿಯುವ ವೇಳೆ‌‌ ಡ್ರೋನ್ ದಾಳಿ

ಸಮಗ್ರ ನ್ಯೂಸ್: ಸಂಸದೆ ಕನ್ನಿಮೋಳಿ ನೇತೃತ್ವದ ಭಾರತದ ಸಂಸದರ ನಿಯೋಗ ಏರ್​ಪೋರ್ಟ್​ನಲ್ಲಿ ಇಳಿಯುವಾಗ ಡ್ರೋನ್ ದಾಳಿ ಸಂಭವಿಸಿದೆ. ಆಪರೇಷನ್ ಸಿಂಧೂರ್‌ ಬಗ್ಗೆ ಇಡೀ ಜಗತ್ತಿಗೆ ಮಾಹಿತಿ ನೀಡಲು ಹಾಗೂ ಪಾಕ್​ ಬಣ್ಣ ಬಯಲು ಮಾಡಲು ಸಂಸದರ ನಿಯೋಗ ಹೊರಟಿದೆ. ಅದರಲ್ಲಿ ಈ ಒಂದು ನಿಯೋಗ ರಷ್ಯಾಗೆ ತೆರಳುತ್ತಿತ್ತು. ಭಾರತೀಯ ಸಂಸದರ ನಿಯೋಗವು ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿಯಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದೆ. ಈ ವಿಮಾನದಲ್ಲಿ ಡಿಎಂಕೆ ಸಂಸದೆ ಕನಿಮೋಳಿ ಇದ್ದರು. ಡ್ರೋನ್ ದಾಳಿಯಿಂದಾಗಿ, ಈ ವಿಮಾನವು

ಮಾಸ್ಕೋದಲ್ಲಿ ಭಾರತದ ಸಂಸದರ ನಿಯೋಗ ಇಳಿಯುವ ವೇಳೆ‌‌ ಡ್ರೋನ್ ದಾಳಿ Read More »

ಗಂಡ-ಹೆಂಡತಿ ಜಗಳದಲ್ಲಿ ಮದುವೆ ಬ್ರೋಕರ್ ಹತ್ಯೆ| ಮಂಗಳೂರಿನಲ್ಲೊಂದು ವಿಲಕ್ಷಣ ಘಟನೆ

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ವಳಚ್ಚಿಲ್‌ನಲ್ಲಿ ಗುರುವಾರ ರಾತ್ರಿ ವ್ಯಕ್ತಿಯೊಬ್ಬರಿಗೆ ಅವರ ಸಂಬಂಧಿಕನೇ ಚೂರಿಯಿಂದ ಇರಿದಿದ್ದು, ಗಾಯಾಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೃತ ವ್ಯಕ್ತಿಯ ಇಬ್ಬರು ಪುತ್ರರು ಗಾಯಗೊಂಡಿದ್ದಾರೆ. ಮೃತರನ್ನು ವಾಮಂಜೂರಿನ ಸುಲೇಮಾನ್ (50) ಎಂದು ಗುರುತಿಸಲಾಗಿದೆ. ಅವರ ಇಬ್ಬರು ಪುತ್ರರಾದ ರಿಯಾಬ್ ಹಾಗೂ ಶಿಯಾಬ್ ಕೂಡ ಗಾಯಗೊಂಡವರು. ಸುಲೇಮಾನ್ ಅವರ ಸಂಬಂಧಿ ವಳಚ್ಚಿಲ್ ನಿವಾಸಿ ಮುಸ್ತಾಫಾ (30) ಕೊಲೆ ಅರೋಪಿ. ಆತನನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ‘ಸುಲೇಮಾನ್ ಮದುವೆ

ಗಂಡ-ಹೆಂಡತಿ ಜಗಳದಲ್ಲಿ ಮದುವೆ ಬ್ರೋಕರ್ ಹತ್ಯೆ| ಮಂಗಳೂರಿನಲ್ಲೊಂದು ವಿಲಕ್ಷಣ ಘಟನೆ Read More »

ತಂದೆಯ ಹತ್ಯೆಗೆ ಚೈತ್ರಾ ಕುಂದಾಪುರ ಸುಪಾರಿ!? ದೂರು ನೀಡಿದ ಬಾಲಕೃಷ್ಣ ಪೂಜಾರಿ

ಸಮಗ್ರ ನ್ಯೂಸ್: ತಂದೆಯ ಕೊಲೆಗೆ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಸುಪಾರಿ ನೀಡಿದ್ದಾರಾ? ಹೀಗಂತ ಅವರ ತಂದೆ ಬಾಲಕೃಷ್ಣ ಪೂಜಾರಿ ಪೊಲೀಸರಿಗೆ ದೂರು ನೀಡಿದ್ದಾರೆ. ಶ್ರೀಕಾಂತ್ ಕಶ್ಯಪ್ ಜೊತೆ ಚೈತ್ರಾ ಕುಂದಾಪುರ ಮದುವೆಯಾದಾಗಿನಿಂದ ತಂದೆ ಮತ್ತು ಮಗಳ ನಡುವೆ ವಾಗ್ವಾದ ಮಿತಿ ಮೀರಿದೆ. ಉಡುಪಿ ಜಿಲ್ಲೆಯ ಕುಂದಾಪುರ ಪೊಲೀಸ್ ಠಾಣೆಗೆ ತಂದೆ ಬಾಲಕೃಷ್ಣ ಅವರು ದೂರು ನೀಡಿದ್ದು, ಆಸ್ತಿಗಾಗಿ ಚೈತ್ರಾ ಕುಂದಾಪುರ ನನ್ನನ್ನು ಕೊಲೆ ಮಾಡಬಹುದು. ಶ್ರೀಕಾಂತ್ ಮತ್ತು ಚೈತ್ರಾ ಇಬ್ಬರೂ ವಂಚಕರು, ಲಕ್ಷಾಂತರ ರೂಪಾಯಿ

ತಂದೆಯ ಹತ್ಯೆಗೆ ಚೈತ್ರಾ ಕುಂದಾಪುರ ಸುಪಾರಿ!? ದೂರು ನೀಡಿದ ಬಾಲಕೃಷ್ಣ ಪೂಜಾರಿ Read More »

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮೇ.24ರಿಂದ ಭಾರೀ ಮಳೆ ಮುನ್ಸೂಚನೆ| ಕರಾವಳಿ,‌ಮಲೆನಾಡಿಗೆ ರೆಡ್ ಅಲರ್ಟ್

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿಯ ಮೂರು ಜಿಲ್ಲೆಗಳು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಮೇ 24ರ ನಾಳೆಯಿಂದ ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಮುಂದಿನ ಎರಡು ದಿನಕ್ಕೆ ಹಾಗೂ ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ‘ರೆಡ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬೀದರ್, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ, ಕೋಲಾರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದ್ದು,

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮೇ.24ರಿಂದ ಭಾರೀ ಮಳೆ ಮುನ್ಸೂಚನೆ| ಕರಾವಳಿ,‌ಮಲೆನಾಡಿಗೆ ರೆಡ್ ಅಲರ್ಟ್ Read More »

ಅತ್ಯಾಚಾರ ಆರೋಪದಲ್ಲಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಅರೆಸ್ಟ್

ಸಮಗ್ರ ನ್ಯೂಸ್: ಅತ್ಯಾಚಾರ ಆರೋಪದಡಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ʼಕಾಮಿಡಿ ಕಿಲಾಡಿಗಳು’ ಖ್ಯಾತಿಯ ಕಲಾವಿದ, ಕಿರುತೆರೆ ನಟ ಮಡೆನೂರು ಮನು ವಿರುದ್ಧ ಯುವತಿಯೊಬ್ಬಳು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪವನ್ನು ಮಾಡಿ ಎಫ್‌ಐಆರ್‌ ದಾಖಲಿಸಿದ್ದರು. ಆರೋಪ ಕೇಳಿ ಬರುತ್ತಿದ್ದಂತೆ ನಟ ಮೊಬೈಲ್‌ ಸ್ವಿಚ್ಡ್‌ ಆಫ್‌ ಮಾಡಿಕೊಂಡು ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರು ಮನು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಶಾಂತಿಗ್ರಾಮದಲ್ಲಿ ಬೆಂಗಳೂರಿನ ಪೊಲೀಸರು

ಅತ್ಯಾಚಾರ ಆರೋಪದಲ್ಲಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಅರೆಸ್ಟ್ Read More »

ಕರಾವಳಿಯನ್ನು ಬೆಚ್ಚಿಬೀಳಿಸಿದ ವಿಮಾನ ದುರಂತಕ್ಕೆ 15 ವರ್ಷ| ಜಿಲ್ಲಾಡಳಿತದಿಂದ ಗೌರವ ನಮನ

ಸಮಗ್ರ ನ್ಯೂಸ್: 2010ರ ಮೇ 22ರಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ಭೀಕರ ವಿಮಾನ ದುರಂತಕ್ಕೆ ಈಗ 15 ವರ್ಷ. ಕರಾವಳಿಯನ್ನೇ ಬೆಚ್ಚಿಬೀಳಿಸಿದ್ದ ಈ ದುರ್ಘಟನೆಯಲ್ಲಿ ಮಡಿದವರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮೇ.22ರಂದು ಗೌರವ ಸಲ್ಲಿಸಿತು. ಅಂದು ಬೆಳಗ್ಗೆ 6:20ಕ್ಕೆ ದುಬೈನಿಂದ ಆಗಮಿಸಿದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವು ಬಜ್ಪೆ ಕೆಂಜಾರಿನಲ್ಲಿರುವ ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಹಂತದಲ್ಲಿ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ 166 ಮಂದಿಯ ಪೈಕಿ 158 ಮಂದಿ ಮೃತಪಟ್ಟಿದ್ದರು. ಕೆಂಜಾರು

ಕರಾವಳಿಯನ್ನು ಬೆಚ್ಚಿಬೀಳಿಸಿದ ವಿಮಾನ ದುರಂತಕ್ಕೆ 15 ವರ್ಷ| ಜಿಲ್ಲಾಡಳಿತದಿಂದ ಗೌರವ ನಮನ Read More »

ಶಿರಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ; ಚಾಲಕ ಗಂಭೀರ

ಸಮಗ್ರ ನ್ಯೂಸ್: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಶಿರಾಡಿ ಗ್ರಾಮದ ಕೊಡ್ಯಕಲ್ ಎಂಬಲ್ಲಿ ಮೇ 21 ರಂದು ಸಂಜೆ ಸುಮಾರು 4.30ರ ವೇಳೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಅನಿಲ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಕೊಡ್ಯಕಲ್ ನಲ್ಲಿ ಚಾಲಕ (ಬಬ್ಲಿ ಯಾದವ್) ನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆ ಇಲ್ಲದೇ ಇರುವುದರಿಂದ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಒಂದು

ಶಿರಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ; ಚಾಲಕ ಗಂಭೀರ Read More »

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ.ಎ ಸಲೀಂ ನೇಮಕ

ಸಮಗ್ರ ನ್ಯೂಸ್: ಕನ್ನಡಿಗ, ಹಿರಿಯ ಐಪಿಎಸ್‌ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ಕರ್ನಾಟಕದ ಪೊಲೀಸ್‌ ಮಹಾನಿರ್ದೇಶಕರಾಗಿ ( ಡಿಜಿ ಹಾಗೂ ಐಜಿಪಿ) ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮೇ 21ರಂದು ಕರ್ನಾಟಕದ ಪೊಲೀಸ್‌ ಮಹಾನಿರ್ದೇಶಕರಾಗಿರುವ ಡಾ.ಅಲೋಕ್‌ಮೋಹನ್‌ ಅವರು ಸೇವೆಯಿಂದ ನಿವೃತ್ತರಾಗಲಿದ್ದು, ಈ ಸ್ಥಾನಕ್ಕೆ ಕನ್ನಡಿಗ ಐಪಿಎಸ್‌ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ನೇಮಕ ಮಾಡಲಾಗಿದೆ. 1966ರ ಜೂನ್ 25ರಂದು ಬೆಂಗಳೂರು ಸಮೀಪದ ಪಟ್ಟಣದಲ್ಲಿ ಜನಿಸಿದ ಡಾ.ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1993ರಲ್ಲಿ ಉಸ್ಮಾನಿಯಾ

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ.ಎ ಸಲೀಂ ನೇಮಕ Read More »