ರಾಜ್ಯ

ಆರ್ ಸಿಬಿ ಆಟಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಚೆಲ್ಲಾಪಿಲ್ಲಿ

ಸಮಗ್ರ ನ್ಯೂಸ್: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್‌) ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಗೆಲುವು ಸಾಧಿಸಿದೆ. ಡೆಲ್ಲಿ ವಿರುದ್ಧ ಟಾಸ್‌ ಗೆದ್ದ ಆರ್‌ಸಿಬಿ, ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಭುವನೇಶ್ವರ್ ಕುಮಾರ್ (5ಕ್ಕೆ3) ಮತ್ತು ಜೋಶ್ ಹೇಝಲ್‌ವುಡ್‌ (12ಕ್ಕೆ4) ಅವರ ಸ್ವಿಂಗ್ ಮತ್ತು ವೇಗದ ದಾಳಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅಗ್ರ ಬ್ಯಾಟರ್‌ಗಳು ತರಗೆಲೆಗಳಂತೆ ಉದುರಿದರು. ಮಾರಕ ಬೌಲಿಂಗ್ ದಾಳಿಗೆ ಡೆಲ್ಲಿ ಕೇವಲ 74 ರನ್ ಗಳಿಸಲಷ್ಟೇ ಶಕ್ತವಾಯಿತು. ಪದಾರ್ಪಣೆ ಪಂದ್ಯವಾಡಿದ […]

ಆರ್ ಸಿಬಿ ಆಟಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಚೆಲ್ಲಾಪಿಲ್ಲಿ Read More »

ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿ ಬಸ್ ಉರುಳಿ ಬಿದ್ದು ಹಲವರಿಗೆ ಗಾಯ

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಭಾನುವಾರ ಮಧ್ಯಾಹ್ನ ಖಾಸಗಿ ಬಸ್ ಉರುಳಿ ಬಿದ್ದು, ಇಪ್ಪತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಧರ್ಮಸ್ಥಳದಿಂದ ದರ್ಶನ ಮುಗಿಸಿ ತೆರಳುತ್ತಿದ್ದ ಆಂಧ್ರ ಮೂಲದ ಭಕ್ತರಿದ್ದ ಖಾಸಗಿ ಬಸ್, ಉಜಿರೆಯಿಂದ ಕೊಟ್ಟಿಗೆಹಾರದ ಕಡೆ ಹೊರಟಿದ್ದ ವೇಳೆ ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡ ಕೆಲವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿ ಬಸ್ ಉರುಳಿ ಬಿದ್ದು ಹಲವರಿಗೆ ಗಾಯ Read More »

ಪುತ್ತೂರು: ದೇವಸ್ಥಾನದ ಅಭಿವೃದ್ಧಿಗೆ ಕಠಿಣ ಹೆಜ್ಜೆ ಇರಿಸಿದ ಶಾಸಕ‌ ಅಶೋಕ್ ಕುಮಾರ್ ರೈ

ಸಮಗ್ರ ನ್ಯೂಸ್: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹಾಗೂ ರಥಬೀದಿ ವಿಸ್ತರಣೆಗಾಗಿ ಉಳ್ಳಾಲ್ತಿ ಕಟ್ಟೆಯ ಬಳಿಯಿರುವ ಖಾಸಗಿ ಜಾಗವನ್ನು ಯಾವುದೇ ಬೆಲೆ ತೆತ್ತಾದರೂ ವಶಪಡಿಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, “ದೇವಸ್ಥಾನಕ್ಕೆ ಆ ಜಾಗದ ಅವಶ್ಯಕತೆಯಿದೆ. ಸಂಬಂಧಪಟ್ಟವರ ಜೊತೆ ಈಗಾಗಲೇ ಮಾತುಕತೆ ನಡೆಸಲಾಗುವುದು. ಅವರು 2 ಎಕರೆ ಜಾಗವನ್ನು ದೇವಸ್ಥಾನಕ್ಕೆ ನೀಡಬೇಕು. ಅದಕ್ಕೆ ಬೇಕಾದ ಹಣವನ್ನು ದೇವಸ್ಥಾನದ ಮೂಲಕವೇ ನೀಡಲಾಗುವುದು. ಒಂದು ವೇಳೆ ಅವರು ಸಹಕರಿಸದಿದ್ದರೆ, ರಸ್ತೆ ವಿಸ್ತರಣೆಗೆ

ಪುತ್ತೂರು: ದೇವಸ್ಥಾನದ ಅಭಿವೃದ್ಧಿಗೆ ಕಠಿಣ ಹೆಜ್ಜೆ ಇರಿಸಿದ ಶಾಸಕ‌ ಅಶೋಕ್ ಕುಮಾರ್ ರೈ Read More »

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಆರೋಪಿ ಶಾರೀಕ್ ಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ NIA ಕೋರ್ಟ್ ಆದೇಶ

ಸಮಗ್ರ ನ್ಯೂಸ್: ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ಶಾರಿಕ್ ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. 2022ರ ನವೆಂಬರ್ 19ರಂದು ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎನ್ ಐಎ ವಿಶೇಷ ನ್ಯಾಯಾಲಯ ಇಂದು ಅಪರಾಧಿ ಮೊಹಮ್ಮದ್ ಶಾರಿಕ್ ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. 2024ರ ಏಪ್ರಿಲ್ ನಲ್ಲಿ

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ| ಆರೋಪಿ ಶಾರೀಕ್ ಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ NIA ಕೋರ್ಟ್ ಆದೇಶ Read More »

ಪೇಟಿಎಂ ಬ್ಯಾಂಕಿಂಗ್ ಪರವಾನಗಿ ರದ್ದುಗೊಳಿಸಿದ ಆರ್ ಬಿಐ

ಸಮಗ್ರ ನ್ಯೂಸ್: ದೇಶದ ಪ್ರಮುಖ ಫಿನ್‌ಟೆಕ್ ಸಂಸ್ಥೆಯಾದ ಪೇಟಿಎಂಗೆ ದೊಡ್ಡ ಆಘಾತ ಎದುರಾಗಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ ಬ್ಯಾಂಕಿಂಗ್ ಪರವಾನಗಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಏಪ್ರಿಲ್ 24, 2026 ರಿಂದ ಜಾರಿಗೆ ಬರುವಂತೆ ತಕ್ಷಣದಿಂದ ರದ್ದುಗೊಳಿಸಿದೆ. ಆರ್‌ಬಿಐ ಆದೇಶದಂತೆ ಏಪ್ರಿಲ್ 24ರ ವ್ಯವಹಾರದ ಅಂತ್ಯದ ವೇಳೆಗೆ ಪೇಟಿಎಂ ಬ್ಯಾಂಕ್ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಬೇಕಿದೆ. ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949ರ ಸೆಕ್ಷನ್ 22(4) ರ ಅಡಿಯಲ್ಲಿ ನೀಡಲಾಗಿದ್ದ ಪರವಾನಗಿಯನ್ನು ರದ್ದುಪಡಿಸಲಾಗಿದೆ. ಬ್ಯಾಂಕ್ ನಡೆಸುತ್ತಿರುವ ವ್ಯವಹಾರದ ಶೈಲಿಯು ಠೇವಣಿದಾರರ

ಪೇಟಿಎಂ ಬ್ಯಾಂಕಿಂಗ್ ಪರವಾನಗಿ ರದ್ದುಗೊಳಿಸಿದ ಆರ್ ಬಿಐ Read More »

ಬಂಟ್ವಾಳ: ಚಲಿಸುತ್ತಿದ್ದ ರೈಲಿನಲ್ಲೇ ಮಗುವಿನ ಜನ್ಮ ನೀಡಿದ ಮಹಿಳೆ| ಸಹ ಪ್ರಯಾಣಿಕ ಮಹಿಳೆಯರಿಂದಲೇ ನಡೆಯಿತು ಹೆರಿಗೆ!!

ಸಮಗ್ರ ನ್ಯೂಸ್: ಅಪರೂಪದಲ್ಲೇ ಅಪರೂಪದ ಮತ್ತು ಮಾನವೀಯತೆಯ ದೃಶ್ಯವೊಂದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ರೈಲ್ವೇ ನಿಲ್ದಾಣ ಸಾಕ್ಷಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಿಂದ ಯಶವಂತಪುರಕ್ಕೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ರೈಲಿನಲ್ಲಿ ತುಂಬು ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ, ಸೂಕ್ತ ವೈದ್ಯಕೀಯ ನೆರವು ಸಿಗದ ಕಾರಣ ಸಹಪ್ರಯಾಣಿಕ ಮಹಿಳೆಯರೇ ದಾದಿಯರಾಗಿ ಬದಲಾಗಿ ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ಮೈಸೂರು ಮೂಲದ ಗರ್ಭಿಣಿಯೊಬ್ಬರು ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ತೆರಳುವ ರೈಲನ್ನೇರಿದ್ದರು. ರೈಲು ಬಿಸಿ ರೋಡ್ ಬಳಿ ತಲುಪುತ್ತಿದ್ದಂತೆ ಮಹಿಳೆಗೆ ತೀವ್ರ ಹೆರಿಗೆ ನೋವು

ಬಂಟ್ವಾಳ: ಚಲಿಸುತ್ತಿದ್ದ ರೈಲಿನಲ್ಲೇ ಮಗುವಿನ ಜನ್ಮ ನೀಡಿದ ಮಹಿಳೆ| ಸಹ ಪ್ರಯಾಣಿಕ ಮಹಿಳೆಯರಿಂದಲೇ ನಡೆಯಿತು ಹೆರಿಗೆ!! Read More »

ಉಪ್ಪಿನಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸವಾರ ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಉಪ್ಪಿನಂಗಡಿ- ಕೊಯಿಲಾ ರಸ್ತೆಯ ಹಿರೇಬಂಡಾಡಿ ಶಾಖೆಪುರ ಎಂಬಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ​ಮೃತರನ್ನು ಹಿರೇಬಂಡಾಡಿಯ ರವೀಂದ್ರ ರೈ ಮುರದಮೇಲುರವರ ಪುತ್ರ ಕಾಲೇಜ್ ವಿದ್ಯಾರ್ಥಿ ಲಿಖಿತ್ ರೈ ಎಂದು ಗುರುತಿಸಲಾಗಿದೆ. ಏ 22ರಂದು ಸಂಜೆ ಲಿಖಿತ್ ರೈ ಅವರು ತಮ್ಮ ಕೆಎ-21-ಇಸಿ-7292 ಸಂಖ್ಯೆಯ ಮೋಟಾರ್ ಸೈಕಲ್‌ನಲ್ಲಿ ಉಪ್ಪಿನಂಗಡಿ – ಕೊಯಿಲ ಸಾರ್ವಜನಿಕ ರಸ್ತೆಯಲ್ಲಿ ಸಂಚರಿಸುತ್ತಿದ್ದರು. ಹಿರೇಬಂಡಾಡಿ ಶಾಖೆಪುರ ಎಂಬಲ್ಲಿ ತಲುಪಿದಾಗ ಬೈಕ್ ಸವಾರನ ನಿಯಂತ್ರಣ

ಉಪ್ಪಿನಂಗಡಿ: ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸವಾರ ಚಿಕಿತ್ಸೆ ಫಲಿಸದೇ ಸಾವು Read More »

ಭಾರತಕ್ಕೆ ಈ ವರ್ಷ ‌ಎಲ್ ನಿನೋ ಭೀತಿ| ಮಳೆ ಕೊರತೆಯ ಆತಂಕ

ಸಮಗ್ರ ನ್ಯೂಸ್: ಭಾರತ ಸೇರಿದಂತೆ ವಿಶ್ವದ ಹಲವು ಭಾಗಗಳಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚಿನ ತಾಪಮಾನ ಮತ್ತು ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಸಿದೆ. ಪೆಸಿಫಿಕ್ ಸಾಗರದಲ್ಲಿ ಸೃಷ್ಟಿಯಾಗುತ್ತಿರುವ ‘ಎಲ್ ನಿನೋ’ ವಿದ್ಯಮಾನವು ಮೇ ತಿಂಗಳಿನಿಂದಲೇ ಪ್ರಭಾವ ಬೀರಲಿದ್ದು, ಇದು ಭಾರತದ ಮುಂಗಾರು ಮಳೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಆತಂಕ ಮೂಡಿಸಿದೆ. ಮೇ, ಜೂನ್ ಮತ್ತು ಜುಲೈ ತಿಂಗಳುಗಳಲ್ಲಿ ಭಾರತದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗಲಿದೆ. ಉತ್ತರ ಮತ್ತು

ಭಾರತಕ್ಕೆ ಈ ವರ್ಷ ‌ಎಲ್ ನಿನೋ ಭೀತಿ| ಮಳೆ ಕೊರತೆಯ ಆತಂಕ Read More »

ಪೊನ್ನಂಪೇಟೆ: ವಿದೇಶಿ ಮಹಿಳೆ ಮೇಲೆ‌ ಲೈಂಗಿಕ ದೌರ್ಜನ್ಯ| ಹೋಂ ಸ್ಟೇ ಮಾಲೀಕ ಸೇರಿ‌ ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಹೋಂ ಸ್ಟೇ ಮಾಲೀಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಾಷಿಂಗ್ಟನ್ ಮೂಲದ ಮಹಿಳೆಯೊಬ್ಬರು ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ್ದರು. ಅವರು ಕುಟ್ಟ ಗ್ರಾಮದಲ್ಲಿರುವ ‘ದೇವಿ ವಿಲ್ಲಾ ಹೋಮ್ ಸ್ಟೇ’ ನಲ್ಲಿ ತಂಗಿದ್ದರು. ವರದಿಗಳ ಪ್ರಕಾರ, ಕಳೆದ ಏಪ್ರಿಲ್ 19 ರಂದು ಈ ಘಟನೆ ನಡೆದಿದೆ. ದೌರ್ಜನ್ಯಕ್ಕೆ ಒಳಗಾದ ಮಹಿಳೆ ನೀಡಿದ

ಪೊನ್ನಂಪೇಟೆ: ವಿದೇಶಿ ಮಹಿಳೆ ಮೇಲೆ‌ ಲೈಂಗಿಕ ದೌರ್ಜನ್ಯ| ಹೋಂ ಸ್ಟೇ ಮಾಲೀಕ ಸೇರಿ‌ ಇಬ್ಬರು ಅರೆಸ್ಟ್ Read More »

ತಾನು ದುಡಿಯುತ್ತಿರುವ ಸರ್ಕಾರಿ ಶಾಲೆಯಲ್ಲಿ ಓದಿಸಿ ಮಗಳನ್ನು ರಾಜ್ಯಕ್ಕೆ ಟಾಪರ್ ಮಾಡಿದ ಶಿಕ್ಷಕ

ಸಮಗ್ರ ನ್ಯೂಸ್: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಪ್ರಾರ್ಥನಾ ಬಿರಾದಾರ್ ಅವರ ತಂದೆ ನಾಗಪ್ಪ ಬಿರಾದಾರ್ ಸರ್ಕಾರಿ ಶಾಲೆಯ ಶಿಕ್ಷಕ. ಮಗಳನ್ನು ತಮ್ಮ ಶಾಲೆಯಲ್ಲಿಯೇ ಓದಿಸಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸುವಂತೆ ಮಾರ್ಗದರ್ಶನ ಮಾಡಿ ಸಾಕಷ್ಟು ಪೋಷಕರಿಗೆ ಸ್ಫೂರ್ತಿಯಾಗಿದ್ದಾರೆ. ಮಕ್ಕಳು ಖಾಸಗಿ ಶಾಲೆಯಲ್ಲಿ ಓದಿದರೆ ಮಾತ್ರವೇ ಉತ್ತಮ ಅಂಕ ಗಳಿಸುತ್ತಾರೆ ಎಂಬ ಭ್ರಮೆ ಬಹುತೇಕ ಪೋಷಕರಲ್ಲಿದೆ. ಇನ್ನೂ ಸಾಕಷ್ಟು ಸರ್ಕಾರಿ ನೌಕರರು ಕೂಡ ತಮ್ಮ ಮಕ್ಕಳನ್ನು ದುಬಾರಿ ಶುಲ್ಕ ನೀಡಿ ಖಾಸಗಿ ಶಾಲೆಯಲ್ಲಿ ಓದಿಸುತ್ತಾರೆ.

ತಾನು ದುಡಿಯುತ್ತಿರುವ ಸರ್ಕಾರಿ ಶಾಲೆಯಲ್ಲಿ ಓದಿಸಿ ಮಗಳನ್ನು ರಾಜ್ಯಕ್ಕೆ ಟಾಪರ್ ಮಾಡಿದ ಶಿಕ್ಷಕ Read More »