ರಾಜ್ಯ

ಮೂರು ತಿಂಗಳಲ್ಲಿ 57 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ, ಸಾಲಮನ್ನಾ‌ ಬಗ್ಗೆ ಪರಿಶೀಲನೆ – ಸಿಎಂ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಯುವಜನತೆಗೆ ಇಲ್ಲೊಂದು ಭರವಸೆಯ ಸುದ್ದಿ ಇದೆ. ಮುಂಬರುವ ಮೂರು ತಿಂಗಳ ಅವಧಿಯಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಬರೋಬ್ಬರಿ 57 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಸ್ಥಳೀಯ ವೃಂದದ 15 ಸಾವಿರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಸೇರಿದಂತೆ ಒಟ್ಟು 57 ಸಾವಿರ

ಮೂರು ತಿಂಗಳಲ್ಲಿ 57 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ, ಸಾಲಮನ್ನಾ‌ ಬಗ್ಗೆ ಪರಿಶೀಲನೆ – ಸಿಎಂ Read More »

ಭಾರೀ ಮಳೆ‌ ಹಿನ್ನೆಲೆ| ದ. ಕನ್ನಡ ಸೇರಿ ವಿವಿಧ ಜಿಲ್ಲೆಗಳಲ್ಲಿ ನಾಳೆ(ಜು.8) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದ ಹಲವು ಕಡೆ ಮಳೆ ಅಬ್ಬರ ಮುಂದುವರೆದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆಯೂ ಹಲವು ಕಡೆ ಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಸಾಗರ ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಸಾಗರ ತಹಶೀಲ್ದಾರ್ ಪ್ರತಿಭಾ ಶಾಲೆ ಕಾಲೇಜುಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ

ಭಾರೀ ಮಳೆ‌ ಹಿನ್ನೆಲೆ| ದ. ಕನ್ನಡ ಸೇರಿ ವಿವಿಧ ಜಿಲ್ಲೆಗಳಲ್ಲಿ ನಾಳೆ(ಜು.8) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ರಾಜ್ಯಾದ್ಯಂತ ಮುಂದಿನ‌ 3 ದಿನ ಭಾರೀ ಮಳೆ ಸಾಧ್ಯತೆ| 11 ಜಿಲ್ಲೆಗಳಲ್ಲಿ ಆರೆಂಜ್ ಹಾಗೂ 8 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ 48 ಗಂಟೆಗಳ ಕಾಲ ವರುಣನ ಆರ್ಭಟ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು (IMD) ಭಾರಿ ಮಳೆ ಮುನ್ನೆಚ್ಚರಿಕೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರಾಜ್ಯದ ಒಟ್ಟು 11 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇರುವ 8 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಜಾರಿ ಮಾಡಲಾಗಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ

ರಾಜ್ಯಾದ್ಯಂತ ಮುಂದಿನ‌ 3 ದಿನ ಭಾರೀ ಮಳೆ ಸಾಧ್ಯತೆ| 11 ಜಿಲ್ಲೆಗಳಲ್ಲಿ ಆರೆಂಜ್ ಹಾಗೂ 8 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ Read More »

ಭಾರೀ ಮಳೆ ಹಿನ್ನಲೆ| ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ವಿವಿಧ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಐದು ತಾಲ್ಲೂಕುಗಳ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಯಲ್ಲಾಪುರ ತಾಲ್ಲೂಕುಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಈ ಐದೂ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ

ಭಾರೀ ಮಳೆ ಹಿನ್ನಲೆ| ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ Read More »

ಗೃಹಜ್ಯೋತಿ ಪರಿಷ್ಕರಣೆ ವೇಳೆ ಹೊಸ ಬಾಡಿಗೆದಾರರು ಆತಂಕಪಡುವ ಅಗತ್ಯವಿಲ್ಲ – ಬೆಸ್ಕಾಂ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಯ ಫಲಾನುಭವಿಗಳ ಮಾಹಿತಿ ಪರಿಶೀಲನಾ ಪ್ರಕ್ರಿಯೆಯು ಜುಲೈ 1, 2026 ರಿಂದ ಆರಂಭವಾಗಿದ್ದು, ಬಾಡಿಗೆದಾರರು ತಮ್ಮ ಆಧಾರ್ ವಿವರಗಳ ನವೀಕರಣ (ಅಪ್ಡೇಟ್) ಕುರಿತು ಯಾವುದೇ ಗೊಂದಲ ಅಥವಾ ಆತಂಕ ಪಡಬೇಕಾಗಿಲ್ಲ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸ್ಪಷ್ಟಪಡಿಸಿದೆ. ​ಮನೆ ಮನೆ ಸಮೀಕ್ಷೆ ನಡೆಸಲಿರುವ ಬೆಸ್ಕಾಂ ಮೀಟರ್ ರೀಡರ್ ಹಾಗೂ ಸಿಬ್ಬಂದಿ, ಹಳೆಯ ಬಾಡಿಗೆದಾರರ ಆಧಾರ್ ವಿವರಗಳನ್ನು ತೆಗೆದುಹಾಕಿ ಪ್ರಸ್ತುತ ವಾಸವಿರುವ ಬಾಡಿಗೆದಾರರ ಆಧಾರ್ ಸಂಖ್ಯೆಯನ್ನು

ಗೃಹಜ್ಯೋತಿ ಪರಿಷ್ಕರಣೆ ವೇಳೆ ಹೊಸ ಬಾಡಿಗೆದಾರರು ಆತಂಕಪಡುವ ಅಗತ್ಯವಿಲ್ಲ – ಬೆಸ್ಕಾಂ Read More »

ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರ ತಾತ್ಕಾಲಿಕ ಬಂದ್

ಸಮಗ್ರ ನ್ಯೂಸ್: ನಿರಂತರ ಸುರಿಯುತ್ತಿರುವ ಮಳೆಯಿಂದ ಆಗುಂಬೆ ಘಾಟಿ ಪ್ರದೇಶದಲ್ಲಿ ಭೂಕುಸಿತದ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮಹತ್ವದ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸಂಪರ್ಕಿಸುವ ಈ ಪ್ರಮುಖ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಈ ಕುರಿತು ಆದೇಶ ಹೊರಡಿಸಿದ್ದು, ರಾಷ್ಟ್ರೀಯ ಹೆದ್ದಾರಿ 169ಎ (ತೀರ್ಥಹಳ್ಳಿ-ಮಲ್ಪೆ ರಸ್ತೆ) ವ್ಯಾಪ್ತಿಯ ಆಗುಂಬೆ ಘಾಟಿಯಲ್ಲಿ ಮಣ್ಣು ಹೆಚ್ಚು ತೇವಗೊಂಡಿರುವ ಕಾರಣ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದಾಗಿ ತಿಳಿಸಿದ್ದಾರೆ.

ಆಗುಂಬೆ ಘಾಟ್ ನಲ್ಲಿ ಭಾರೀ ವಾಹನ ಸಂಚಾರ ತಾತ್ಕಾಲಿಕ ಬಂದ್ Read More »

ರಾಜ್ಯಾದ್ಯಂತ ಮುಂದುವರಿದ ವರ್ಷಧಾರೆ| ಕರಾವಳಿ, ಮಲೆನಾಡಿಗೆ ಭಾರೀ ಮಳೆಯ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಈ ಕಾರಣಕ್ಕೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಡಲ ತೀರದ ನಿವಾಸಿಗಳು ಮತ್ತು

ರಾಜ್ಯಾದ್ಯಂತ ಮುಂದುವರಿದ ವರ್ಷಧಾರೆ| ಕರಾವಳಿ, ಮಲೆನಾಡಿಗೆ ಭಾರೀ ಮಳೆಯ ಮುನ್ಸೂಚನೆ Read More »

ಸಂಘಟಿತ ಹೋರಾಟಕ್ಕೆ ಜಯ| ವಿದ್ಯುತ್ ವಿತರಣಾ ಪರವಾನಗಿ ಅರ್ಜಿ ವಾಪಾಸ್ ಪಡೆದ ಟಾಟಾ ಪವರ್|

ಸಮಗ್ರ ನ್ಯೂಸ್: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ(ಕೆಆರ್ ಇಸಿ) ಮುಂದೆ ಟಾಟಾ ಪವರ್ ಕಂಪೆನಿ ಸಲ್ಲಿಸಿದ್ದ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದ ‘ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ’ ಅರ್ಜಿಯನ್ನು ಹಿಂಪಡೆದಿದೆ. ಈ ಬೆಳವಣಿಗೆಯನ್ನು ಕಾರ್ಮಿಕ-ಜನಪರ ಸಂಘಟನೆಗಳು ಸ್ವಾಗತಿಸಿದ್ದು, ಒಗ್ಗಟ್ಟಿನ ಹೋರಾಟಕ್ಕೆ ಸಂದ ಜಯ ಎಂದು ಕರ್ನಾಟಕ ಪ್ರಾಂತ ರೈತ ಸಂಘ ತಿಳಿಸಿದೆ. ಶುಕ್ರವಾರ ಪ್ರಕಟಣೆ ನೀಡಿರುವ ಪ್ರಧಾನ ಕಾರ್ಯದರ್ಶಿ ಯಶವಂತ ಟಿ, ಕೆಇಆರ್ಸಿ ಮೂಲಗಳ ಪ್ರಕಾರ ಕಲಾಪದಲ್ಲಿ ಟಾಟಾ ಪವರ್ ಕಂಪೆನಿಯ ಪ್ರತಿನಿಧಿಯು, ಸಮಾನಾಂತರ ವಿದ್ಯುತ್

ಸಂಘಟಿತ ಹೋರಾಟಕ್ಕೆ ಜಯ| ವಿದ್ಯುತ್ ವಿತರಣಾ ಪರವಾನಗಿ ಅರ್ಜಿ ವಾಪಾಸ್ ಪಡೆದ ಟಾಟಾ ಪವರ್| Read More »

ಡಿಸಿಎಂ ಮತ್ತು ಡಿಸಿ ನಡುವಿನ ಫೇಕ್ ಲವ್ ಸ್ಟೋರಿ ಮಾಡಿದ್ದ ಯೂಟ್ಯೂಬರ್ ಅರೆಸ್ಟ್

ಸಮಗ್ರ ನ್ಯೂಸ್: ಉಪಮುಖ್ಯಮಂತ್ರಿ ಡಾ ಜಿ. ಪರಮೇಶ್ವರ ಹಾಗೂ ತುಮಕೂರು ಜಿಲ್ಲಾಧಿಕಾರಿ (ಡಿಸಿ) ಶುಭಾ ಕಲ್ಯಾಣ್ ಅವರ ವಿರುದ್ಧ ಸುಳ್ಳು ಹಾಗೂ ಅವಹೇಳನಕಾರಿ ಸುದ್ದಿ ಬಿತ್ತರಿಸಿದ್ದ ಯೂಟ್ಯೂಬರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ‘ಡಿಟೆಕ್ಟಿವ್ ಲೆಜೆಂಡ್’ ಹೆಸರಿನ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಬ್ರಹ್ಮಾನಂದ ರೆಡ್ಡಿ ಬಂಧಿತ ಆರೋಪಿಯಾಗಿದ್ದಾನೆ. ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಜುಲೈ 1 ರಂದು ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ವೀಡಿಯೋ ಅಪ್‌ಲೋಡ್ ಮಾಡಿದ್ದ ಬ್ರಹ್ಮಾನಂದ

ಡಿಸಿಎಂ ಮತ್ತು ಡಿಸಿ ನಡುವಿನ ಫೇಕ್ ಲವ್ ಸ್ಟೋರಿ ಮಾಡಿದ್ದ ಯೂಟ್ಯೂಬರ್ ಅರೆಸ್ಟ್ Read More »

ರಾಜ್ಯದ ಹಲವೆಡೆ ಅಬ್ಬರಿಸುತ್ತಿರುವ ಮುಂಗಾರು| ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ ಐಎಂಡಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿ ಮತ್ತು ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನ ಹದಗೆಟ್ಟಿದೆ. ಇಂದು ಕೂಡ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ದಾಖಲಾಗಿದೆ. ಮುಖ್ಯವಾಗಿ ಉತ್ತರ ಕನ್ನಡದ ಕಾರವಾರ

ರಾಜ್ಯದ ಹಲವೆಡೆ ಅಬ್ಬರಿಸುತ್ತಿರುವ ಮುಂಗಾರು| ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ ಐಎಂಡಿ Read More »