ರಾಜ್ಯ

ಈ ಬಾರಿ ಎಸ್ಎಸ್ಎಲ್ ಸಿ ಉತ್ತೀರ್ಣರಾಗಬೇಕಾದ್ರೆ ಶೇ.35 ಅಂಕ ಕಡ್ಡಾಯ| ಮತ್ತೆ ಹಳೆ ನಿಯಮ‌ ಜಾರಿಗೊಳಿಸಿದ‌ ಇಲಾಖೆ

ಸಮಗ್ರ ನ್ಯೂಸ್: ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಿದ್ದರೆ ಶೇಕಡಾ 35 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಕೋವಿಡ್ ಪೂರ್ವದ ದಿನಗಳಲ್ಲಿ ಜಾರಿಯಲ್ಲಿದ್ದ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತಂದಿದೆ. ಕಳೆದ ವರ್ಷ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆಯನ್ನು ಪರಿಗಣಿಸಿ, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಬಡ್ತಿ ಪಡೆಯಲು ಸಹಾಯ ಮಾಡುವುದಕ್ಕಾಗಿ ಮಂಡಳಿಯು ಕನಿಷ್ಠ ಉತ್ತೀರ್ಣ ಅಂಕಗಳನ್ನು ಶೇಕಡಾ 25 ಕ್ಕೆ ಇಳಿಕೆ ಮಾಡಿತ್ತು ಮತ್ತು ಗ್ರೇಸ್ […]

ಈ ಬಾರಿ ಎಸ್ಎಸ್ಎಲ್ ಸಿ ಉತ್ತೀರ್ಣರಾಗಬೇಕಾದ್ರೆ ಶೇ.35 ಅಂಕ ಕಡ್ಡಾಯ| ಮತ್ತೆ ಹಳೆ ನಿಯಮ‌ ಜಾರಿಗೊಳಿಸಿದ‌ ಇಲಾಖೆ Read More »

HSPR ನಂಬರ್ ಅಳವಡಿಕೆಗೆ ಮತ್ತೆ ಅವಧಿ ವಿಸ್ತರಣೆ| ಮಾ.31ಕ್ಕೆ ಕೊನೆ‌ ದಿನ ನಿಗದಿಗೊಳಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವನ್ನು ಮತ್ತೆ ವಿಸ್ತರಣೆ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 01-04-2019ಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಸರ್ಕಾರ ದಿನಾಂಕ 17-08-2023ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಇನ್ನೂ ಅನೇಕ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ

HSPR ನಂಬರ್ ಅಳವಡಿಕೆಗೆ ಮತ್ತೆ ಅವಧಿ ವಿಸ್ತರಣೆ| ಮಾ.31ಕ್ಕೆ ಕೊನೆ‌ ದಿನ ನಿಗದಿಗೊಳಿಸಿದ ರಾಜ್ಯ ಸರ್ಕಾರ Read More »

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ‌ನೇಮಕಾತಿ| ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR) ಇಲಾಖೆಯಿಂದ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ. ಉದ್ಯೋಗ ವಿವರಗಳುಇಲಾಖೆ ಹೆಸರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR)ಹುದ್ದೆಗಳ ಹೆಸರು ಓಂಬುಡ್ಸ್‌ಮನ್ (Ombudsman)ಒಟ್ಟು ಹುದ್ದೆಗಳು ತಿಳಿಸಿಲ್ಲಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online) ಆಫ್ಲೈನ್ (Offline)ಉದ್ಯೋಗ ಸ್ಥಳ – ಕರ್ನಾಟಕ ವಿದ್ಯಾರ್ಹತೆಆರ್‌ಡಿಪಿಆರ್ ಕರ್ನಾಟಕ ಅಧಿಕೃತ ಅಧಿಸೂಚನೆಯ ಪ್ರಕಾರ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ‌ನೇಮಕಾತಿ| ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಪುರುಷ ಪ್ರಯಾಣಿಕರಿಗೆ ಸೀಟ್ ಸಿಗುವಂತೆ ನೋಡಿಕೊಳ್ಳಿ| KSRTC ಯಿಂದ ಸಿಬ್ಬಂದಿಗೆ ಸೂಚನೆ

ಸಮಗ್ರ ನ್ಯೂಸ್: ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ಕೆಎಸ್‌ಆರ್‌ಟಿಸಿ ಸೂಚನೆ ನೀಡಿದೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಪುರುಷ ಪ್ರಯಾಣಿಕರಿಗೆ ಸೀಟು ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಹೀಗಾಗಿ ಪುರುಷ ಪ್ರಯಾಣಿಕರಿಗೆ ಮೀಸಲಿರುವ ಸೀಟುಗಳನ್ನು ಪುರುಷರಿಗೆ ಬಿಟ್ಟುಕೊಡಬೇಕು. ಈ ಬಗ್ಗೆ ಗಮನ ಹರಿಸಬೇಕು ಎಂದು ಕೆಎಸ್‌ಆರ್​ಟಿಸಿ ಮೈಸೂರು ವಿಭಾಗೀಯ ನಿಯಂತ್ರಣಾಧಿಕಾರಿ ಚಾಲಕರು ಹಾಗೂ ಸಿಬ್ಬಂದಿಗೆ ಇತ್ತೀಚೆಗೆ ಆದೇಶ ಹೊರಡಿಸಿರುವುದು

ಪುರುಷ ಪ್ರಯಾಣಿಕರಿಗೆ ಸೀಟ್ ಸಿಗುವಂತೆ ನೋಡಿಕೊಳ್ಳಿ| KSRTC ಯಿಂದ ಸಿಬ್ಬಂದಿಗೆ ಸೂಚನೆ Read More »

ಚಿಕ್ಕಮಗಳೂರು: ಬೇಟೆಗಾರರ ಉರುಳಿಗೆ ಸಿಲುಕಿದ ಚಿರತೆ – ಸಾವು ಬದುಕಿನ ನಡುವೆ ಹೋರಾಟ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆ ಒಂದು ಬೇಟೆಗಾರರು ಹಾಕಿದ ಅಕ್ರಮ ಉರುಳಿಗೆ ಸಿಲುಕಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಕಾಡುಹಂದಿ ಬೇಟೆಗೆ ಉರುಳು ಹಾಕಿದ್ದ ಬೇಟೆಗಾರರು ಘಟನೆ ಬಳಿಕ ಪರಾರಿಯಾಗಿದ್ದಾರೆ. ಘಟನೆಯ ಮಾಹಿತಿ ತಿಳಿದ ನಂತರ ಮೂಡಿಗೆರೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಚಿರತೆಗೆ ಅಗತ್ಯವಾದ ರಕ್ಷಣೆಯನ್ನು ನೀಡಲು ಶ್ರಮಿಸುತ್ತಿದ್ದಾರೆ. ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸಲು ಶಿವಮೊಗ್ಗದಿಂದ ಅರವಳಿಕೆ ತಜ್ಞರನ್ನು ಕರೆಸಲಾಗುತ್ತಿದೆ. ಅರಣ್ಯಾಧಿಕಾರಿಗಳು ಚಿರತೆಗೆ ಅರವಳಿಕೆ ನೀಡಿ ಅದನ್ನು ಸುರಕ್ಷಿತ ಸ್ಥಳಕ್ಕೆ

ಚಿಕ್ಕಮಗಳೂರು: ಬೇಟೆಗಾರರ ಉರುಳಿಗೆ ಸಿಲುಕಿದ ಚಿರತೆ – ಸಾವು ಬದುಕಿನ ನಡುವೆ ಹೋರಾಟ Read More »

ಮಾರ್ಚ್ 01 ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಸಮಗ್ರ ನ್ಯೂಸ್: ಮಾರ್ಚ್ 01 ರಿಂದ 20 ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕಾರ್ಯವನ್ನು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಅಲ್ಲದೇ ಪರೀಕ್ಷೆ ಗೌಪ್ಯತೆ, ಪರೀಕ್ಷೆಯ ಪಾವಿತ್ರ್ಯತೆ ಮತ್ತು ಸಮಗ್ರತೆಗೆ ಧಕ್ಕೆಯಾಗದಂತೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಪರೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಸೂಚನೆ ನೀಡಲಾಗಿದೆ.

ಮಾರ್ಚ್ 01 ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ Read More »

ಬೆಳ್ತಂಗಡಿ: 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ 7ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ (13) ಮೃತ ವಿದ್ಯಾರ್ಥಿ. ಈತ ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯಾಗಿದ್ದು ಮನೆಯ ಕೋಣೆಯಲ್ಲಿ ಫೆಬ್ರವರಿ 18ರಂದು ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: 7ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು Read More »

ಮಹಾಕುಂಭಮೇಳ ಅವಧಿ ವಿಸ್ತರಣೆಯಾಗುತ್ತಾ? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಅವಧಿಯನ್ನು ವಿಸ್ತರಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ರವೀಂದ್ರ ಮಾಂದಡ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ಮಹಾ ಕುಂಭಮೇಳಕ್ಕೆ ಭಾರಿ ಪ್ರಮಾಣದಲ್ಲಿ ಜನರು ಬರುತ್ತಿರುವುದರಿಂದ ಕುಂಭಮೇಳದ ಅವಧಿಯನ್ನು ವಿಸ್ತರಿಸಲಾಗುವುದು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದಾರೆ. ಮಹಾಕುಂಭಮೇಳದ ಅವಧಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಫೆಬ್ರವರಿ 26ಕ್ಕೆ ಮಹಾ ಕುಂಭಮೇಳ ಮುಕ್ತಾಯವಾಗಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಮಹಾ ಕುಂಭಮೇಳದ ಅವಧಿ ವಿಸ್ತರಣೆ

ಮಹಾಕುಂಭಮೇಳ ಅವಧಿ ವಿಸ್ತರಣೆಯಾಗುತ್ತಾ? ಇಲ್ಲಿದೆ ಫುಲ್ ಡೀಟೈಲ್ಸ್ Read More »

ಅನ್ನಭಾಗ್ಯ ಯೋಜನೆಯಲ್ಲಿ ‌ಇನ್ಮುಂದೆ ಹಣದ ಬದಲು ಅಕ್ಕಿ ಸಿಗುತ್ತೆ!!

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಕೆಲ ಅಂತ್ಯೋದಯ, ಬಿಪಿಎಲ್ ಕಾರ್ಡ್ ದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ಬ್ಯಾಂಕ್ ಖಾತೆಗಳಿಗೆ ಕಳೆದ 3 ತಿಂಗಳಿಂದ ಜಮೆಯಾಗಿಲ್ಲ. ಹೀಗಾಗಿ ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಕೆಲವು ತಿಂಗಳು ತಾಂತ್ರಿಕತೆಯ ಸಮಸ್ಯೆ ನೆಪವೊಡ್ಡಿ ವಿಳಂಬ ಆಗಿದೆ. ಇದೀಗ ಹಣದ ಬದಲಿಗೆ ಅಕ್ಕಿ ಕೊಡಲು ಚಿಂತನೆ ನಡೆದಿದೆ. ಆದರೆ ಅಕ್ಕಿ, ಹಣ ಎರಡು ಕೂಡ ಫಲಾನುಭವಿಗಳಿಗೆ ಸಿಗದೇ ತೊಂದರೆಯಾಗಿದೆ. ಇದನ್ನು ಮನಗಂಡು ಹೆಚ್ಚುವರಿ ಐದು ಕೆಜಿ ಅಕ್ಕಿಯನ್ನೇ ನೀಡಲು

ಅನ್ನಭಾಗ್ಯ ಯೋಜನೆಯಲ್ಲಿ ‌ಇನ್ಮುಂದೆ ಹಣದ ಬದಲು ಅಕ್ಕಿ ಸಿಗುತ್ತೆ!! Read More »

ಪ್ರಯಾಗ್ ರಾಜ್: ತ್ರಿವೇಣಿ ಸಂಗಮದ ನೀರು ಸ್ನಾನಕ್ಕೆ ಯೋಗ್ಯವಲ್ಲ| ಅಚ್ಚರಿಯ ವರದಿ ನೀಡಿದ ಎನ್ ಜಿಟಿ

ಸಮಗ್ರ ನ್ಯೂಸ್: ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಕೋಟ್ಯಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದು, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ನೀರು ಕಲುಷಿತವಾಗಿದೆ ಎಂದು ವರದಿ ಮಾಡಿತ್ತು. ಇದೀಗ ಇದರ ಬೆನ್ನಲ್ಲೇ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಅಚ್ಚರಿಯ ವರದಿಯನ್ನು ಮಾಡಿದೆ. ಫೆಬ್ರವರಿ 3 ರಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಮಾಡಿದಂತೆ ಮಹಾ ಕುಂಭಮೇಳದ ಸಮಯದಲ್ಲಿ ಮಲ ಕೋಲಿಫಾರ್ಮ್ ಬ್ಯಾಕ್ಟೀರಿಯಾದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ ಎಂದು ಹೇಳಿತ್ತು. ಆದರೆ ಇದೀಗ ಗಂಗಾ

ಪ್ರಯಾಗ್ ರಾಜ್: ತ್ರಿವೇಣಿ ಸಂಗಮದ ನೀರು ಸ್ನಾನಕ್ಕೆ ಯೋಗ್ಯವಲ್ಲ| ಅಚ್ಚರಿಯ ವರದಿ ನೀಡಿದ ಎನ್ ಜಿಟಿ Read More »