ರಾಜ್ಯ

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ದೈನಂದಿನ ಜೀವನದಲ್ಲಿ ರಾಶಿಗಳ‌ ಪ್ರಭಾವ ಮಹತ್ವದ್ದು. ರಾಶಿಗಳ ಚಲನೆ ಹಾಗೂ ಪ್ರಭಾವದಿಂದ ನಿತ್ಯ ಜೀವನದ ಫಲಾಫಲಗಳು ನಿರ್ದರಿಸುತ್ತವೆ. ಈ ವಾರ ಯಾವ ರಾಶಿಗೆ ಶುಭ? ಯಾರಿಗೆ ಲಾಭ? ನೋಡೋಣ ಬನ್ನಿ… ಮೇಷ: ದ್ವಿತೀಯದಲ್ಲಿ ಗುರುವಿರುವುದರಿಂದ ಗುರು ಬಲ ಇದ್ದು, ಏಕಾದಶ ಶನಿ ಇರುವುದರಿಂದ ಯಾವುದಕ್ಕೂ ಯೋಚನೆ ಮಾಡದೆ ಭಗವಂತನನ್ನು ನಂಬಿ ಬದುಕಿರಿ. ಫೆ. 4ರಿಂದ ಗುರು ವಕ್ರ ತ್ಯಾಗ ಮಾಡಿದ ನಂತರ ಇಚ್ಛಿತ ಕಾರ್ಯಗಳಲ್ಲಿ ಯಶಸ್ಸು ಸಾಧ್ಯ. ಉಜ್ಜಯಿನಿಯ ಮಹಾಕಾಲೇಶ್ವರನನ್ನು ಪೂಜಿಸಿ. ವೃಷಭ: ಲಗ್ನದಲ್ಲಿನ […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ| ಮತ್ತೊಬ್ಬ ಆರೋಪಿಗೆ ಪೊಲೀಸ್ ಗುಂಡೇಟು

ಸಮಗ್ರ ನ್ಯೂಸ್: ರಾಜ್ಯದ ಅತಿ ದೊಡ್ಡ ದರೋಡೆ ಪ್ರಕರಣ ಎಂದು ಹೇಳಲಾದ ಕೋಟೆಕಾರು ಬ್ಯಾಂಕ್‌ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಪ್ರಕರಣ ಶನಿವಾರ (ಫೆ.01) ನಡೆದಿದೆ. ಬ್ಯಾಂಕ್‌ ದರೋಡೆ ಪ್ರಕರಣದ ಪ್ರಮುಖ ಆರೋಪಿ ಮುಂಬಯಿ ಧಾರಾವಿಯ ಮುರುಗಂಡಿ ಎಂಬಾತನ ಕಾಲಿಗೆ ಪೊಲೀಸರು ಗುಂಡೇಟು ಇಳಿಸಿದ್ದಾರೆ. ಕೋಟೆಕಾರು ಅಜ್ಜಿನಡ್ಕ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಪೊಲೀಸರು ಸ್ಥಳ ಮಹಜರು ನಡೆಸಲು ಆರೋಪಿ ಮುರುಗಂಡಿಯನ್ನು ಕೋಟೆಕಾರಿಗೆ ಕರೆದುಕೊಂಡು ಬಂದಿದ್ದರು. ಈ ವೇಳೆ

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ| ಮತ್ತೊಬ್ಬ ಆರೋಪಿಗೆ ಪೊಲೀಸ್ ಗುಂಡೇಟು Read More »

ಇಂದೇ ಮುಖ್ಯವಾಹಿನಿಗೆ ಕೋಟೆಹೊಂಡ ರವೀಂದ್ರ| ರಾಜ್ಯದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ಶರಣಾಗುವ ಸಾಧ್ಯತೆ

ಸಮಗ್ರ ನ್ಯೂಸ್: ನಕ್ಸಲ್‌ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ಇಲ್ಲ ರವೀಂದ್ರ ಇಂದೇ ಮುಖ್ಯವಾನಿಗೆ ಬರಲಿದ್ದಾರೆ. ಇದರಿಂದ ಕರ್ನಾಟಕವು ನಕ್ಸಲ್ ನಿಂದ ಮುಕ್ತವಾಗಲಿದೆ. ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿಯಾಗಿದ್ದರು. ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಎಲ್ಲರನ್ನು ಸ್ವಾಗತಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.  ಈ ತಂಡದಿಂದ

ಇಂದೇ ಮುಖ್ಯವಾಹಿನಿಗೆ ಕೋಟೆಹೊಂಡ ರವೀಂದ್ರ| ರಾಜ್ಯದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ಶರಣಾಗುವ ಸಾಧ್ಯತೆ Read More »

ಅಮೇರಿಕಾದಲ್ಲಿ ‌ಮತ್ತೊಂದು ವಿಮಾನ ದುರಂತ| ಶಾಪಿಂಗ್ ಮಾಲ್ ಮೇಲೆ ಬಿದ್ದ ಲಘುವಿಮಾನ

ಸಮಗ್ರ ನ್ಯೂಸ್: ಅಮೆರಿಕದ ಫಿಲಡೆಲ್ಫಿಯಾದಲ್ಲಿ ಶನಿವಾರ (ಭಾರತೀಯ ಕಾಲಮಾನ) ಲಘು ವಿಮಾನ ಅಪಘಾತಕ್ಕೀಡಾಗಿದೆ. ವಾಷಿಂಗ್ಟನ್‌ ವಿಮಾನ ದುರಂತದ ನೆನಪು ಮಾಸುವ ಮುನ್ನವೇ ಯುಎಸ್‌ನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಶಾಪಿಂಗ್‌ ಮಾಲ್‌ ಮೇಲೆ ವಿಮಾನ ಬಿದ್ದು ದೊಡ್ಡ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಶನಿವಾರ (ಫೆ.1) ಬೆಳಗಿನ ಜಾವ ಫಿಲಡೆಲ್ಫಿಯಾದ ಶಾಪಿಂಗ್ ಮಾಲ್ ಬಳಿ ವಿಮಾನ ಅಪಘಾತಕ್ಕೀಡಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಹಲವಾರು ಮನೆಗಳು ಬೆಂಕಿಗೆ ಆಹುತಿಯಾಗಿದ್ದು, ಸಾವುನೋವು ಸಂಭವಿಸುವ ಸಾಧ್ಯತೆ ಇದೆ. ಕನಿಷ್ಠ ಇಬ್ಬರು ಪ್ರಯಾಣಿಕರನ್ನು ಹೊತ್ತ ವಿಮಾನವು

ಅಮೇರಿಕಾದಲ್ಲಿ ‌ಮತ್ತೊಂದು ವಿಮಾನ ದುರಂತ| ಶಾಪಿಂಗ್ ಮಾಲ್ ಮೇಲೆ ಬಿದ್ದ ಲಘುವಿಮಾನ Read More »

ರಾಜ್ಯಸರ್ಕಾರದಿಂದ ಗ್ರಾಮೀಣ ಜನರಿಗೆ ಗುಡ್ ನ್ಯೂಸ್| ಗ್ರಾ.ಪಂಚಾಯತ್ ಸೇವೆಗಳು ಈಗ ವಾಟ್ಸ್ಯಾಪ್ ನಲ್ಲಿ ಲಭ್ಯ| ಹೇಗೆ ಪಡೆದುಕೊಳ್ಳೋದು? ಇಲ್ಲಿದೆ ಪೂರ್ಣ ವಿವರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಗ್ರಾಮ ಪಂಚಾಯ್ತಿ ಸೇವೆಗಳು ಕುಳಿತಲ್ಲೇ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಪಂಚಮಿತ್ರ ವಾಟ್ಸಾಪ್ ಚಾಟ್ ಆರಂಭಿಸಲಾಗಿದೆ. ಇನ್ಮುಂದೆ ವಾಟ್ಸ್ ಆಪ್ ನಲ್ಲಿ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಪಡೆಯಬಹುದಾಗಿದೆ. ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ. ಕುಂದು-ಕೊರತೆಗಳನ್ನು ಹಾಗೂ ಸಮಸ್ಯೆಗಳನ್ನು ದಾಖಲಿಸಲು ಇದ್ದ ಪ್ರತ್ಯೇಕ ಕರೆ ಸಂಖ್ಯೆಗಳನ್ನು

ರಾಜ್ಯಸರ್ಕಾರದಿಂದ ಗ್ರಾಮೀಣ ಜನರಿಗೆ ಗುಡ್ ನ್ಯೂಸ್| ಗ್ರಾ.ಪಂಚಾಯತ್ ಸೇವೆಗಳು ಈಗ ವಾಟ್ಸ್ಯಾಪ್ ನಲ್ಲಿ ಲಭ್ಯ| ಹೇಗೆ ಪಡೆದುಕೊಳ್ಳೋದು? ಇಲ್ಲಿದೆ ಪೂರ್ಣ ವಿವರ Read More »

ಇಂದು‌(ಫೆ.1) ಕೇಂದ್ರ ಬಜೆಟ್ | ಹಲವು ಕ್ಷೇತ್ರಗಳಲ್ಲಿ ಗರಿಗೆದರಿದ ನಿರೀಕ್ಷೆ

ಸಮಗ್ರ ನ್ಯೂಸ್: ಬಹುನಿರೀಕ್ಷೆಯ ಕೇಂದ್ರ ಸರ್ಕಾರದ 2025-2026ನೇ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಇಂದು ಬೆಳಗ್ಗೆ 11ಗಂಟೆಗೆ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಬಡವರು, ಮಧ್ಯಮ ವರ್ಗದವರು, ಕೃಷಿ ವಲಯ ಸೇರಿದಂತೆ ವಿವಿಧ ವಲಯಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿವೆ. ಕೇಂದ್ರ ವಿತ್ತ ಸಚಿವೆ ಎಂಟನೇ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಬರೆಯಲಿದ್ದಾರೆ. ಕೇಂದ್ರ ಬಜೆಟ್ ಮೇಲೆ ಭಾರೀ ನಿರೀಕ್ಷೆಗಳು ಇವೆ. 140 ಕೋಟಿ ಭಾರತೀಯರ ಕನಸುಗಳು ಈಡೇರಿಸುವ ಹಂಬಲ

ಇಂದು‌(ಫೆ.1) ಕೇಂದ್ರ ಬಜೆಟ್ | ಹಲವು ಕ್ಷೇತ್ರಗಳಲ್ಲಿ ಗರಿಗೆದರಿದ ನಿರೀಕ್ಷೆ Read More »

ಪ್ರಯಾಗ್ ರಾಜ್‌ ಕುಂಭಮೇಳದಲ್ಲಿ ಭಾಗಿಯಾದ ಅನುಶ್ರೀ, ರಾಜ್ ಬಿ‌.ಶೆಟ್ಟಿ‌

ಸಮಗ್ರ ನ್ಯೂಸ್: ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಕರ್ನಾಟಕದ ಪ್ರಸಿದ್ಧ ನಟಿ ಹಾಗೂ ನಿರೂಪಕಿ ಅನುಶ್ರೀ ತೆರಳಿದ್ದಾರೆ. ಮೌನಿ ಅಮಾವಾಸ್ಯೆ ಶುಭ ದಿನದಂದು ಅನುಶ್ರೀ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. ಅನುಶ್ರೀ ತಮ್ಮ ಇನ್ಸ್ಟಾ ಖಾತೆಯಲ್ಲಿ ಮಹಾಕುಂಭ ಮೇಳದ ಫೋಟೋ ಹಾಗೂ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅನುಶ್ರೀ ಜೊತೆ ನಟ ಹಾಗೂ ನಿರ್ದೇಶ ರಾಜ್ ಬಿ ಶೆಟ್ಟಿ, ನಿರ್ದೇಶಕ ಕಿರಣ್ ರಾಜ್ ಹಾಗೂ ರಂಜನ್ ಎಸ್ ಸೇರಿದಂತೆ ಏಳು ಮಂದಿಯ ಟೀಮನ್ನು ನೀವು ಕಾಣ್ಬಹುದು. ಇನ್ಸ್ಟಾ ಪೋಸ್ಟ್ ನಲ್ಲಿ

ಪ್ರಯಾಗ್ ರಾಜ್‌ ಕುಂಭಮೇಳದಲ್ಲಿ ಭಾಗಿಯಾದ ಅನುಶ್ರೀ, ರಾಜ್ ಬಿ‌.ಶೆಟ್ಟಿ‌ Read More »

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ| ಇಡಿ‌ ತಾತ್ಕಾಲಿಕ ಆದೇಶದಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಸಮಗ್ರ ನ್ಯೂಸ್: ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಒಂದು ಕಡೆ ಲೋಕಾಯುಕ್ತ ಸಂಸ್ಥೆ ಇನ್ನೊಂದು ಕಡೆ ಜಾರಿ ನಿರ್ದೇಶನಾಲಯ (ED) ಸಂಸ್ಥೆ ಕೂಡ ಸಂಪೂರ್ಣ ತನಿಖೆ ನಡೆಸಿದ್ದು ಇದೀಗ ಇಡಿ ತಾತ್ಕಾಲಿಕ ಶಕ್ತಿ ಆದೇಶದಲ್ಲಿ ಸ್ಪೋಟಕವಾದ ಮಾಹಿತಿ ಬಹಿರಂಗವಾಗಿದ್ದು, ಮುಡಾದಲ್ಲಿ ಸೈಟ್ ಗಳ ಹಂಚಿಕೆಯ ಪರಿಹಾರಾರ್ಥವಾಗಿ ಅಕ್ರಮ ಹಣ ವರ್ಗಾವಣೆ ಯತ್ನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಕ್ರಮ ಹಣ ವರ್ಗಾವಣೆ ಯತ್ನದಲ್ಲಿ ಸಿಎಂ ಸಿದ್ದರಾಮಯ್ಯ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ| ಇಡಿ‌ ತಾತ್ಕಾಲಿಕ ಆದೇಶದಲ್ಲಿ ಸ್ಪೋಟಕ ಮಾಹಿತಿ ಬಹಿರಂಗ Read More »

ಮೇ ಅಂತ್ಯದೊಳಗೆ‌ ಬಿ.ಸಿ ರೋಡ್ – ಪೆರಿಯಶಾಂತಿ ರಾ.ಹೆದ್ದಾರಿ ಸಂಚಾರಕ್ಕೆ ಮುಕ್ತ – ಚೌಟ

ಸಮಗ್ರ ನ್ಯೂಸ್: ಬಿ.ಸಿ.ರೋಡ್ ನಿಂದ ಪೆರಿಯ ಶಾಂತಿಯವರೆಗಿನ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಮೇ 2025ರ ಅಂತ್ಯದ ವೇಳೆಗೆ ಶೇ 90ರಷ್ಟು ಪೂರ್ಣ ಗೊಳ್ಳಲಿದೆ ಮತ್ತು ಸಂಚಾರಕ್ಕೆ ಮುಕ್ತ ವಾಗಲಿದೆ ಎಂದು ದಕ್ಷಿಣ ಕನ್ನಡ ಲೋಕ ಸಭಾ ಸದಸ್ಯ ಬ್ರಿಜೇಶ್ ಚೌಟ ಸುದ್ದಿಗಾರರಿಗೆ ತಿಳಿಸಿದ್ದಾರೆ. ಅವರು ಗುರುವಾರ ಬಿ.ಸಿ.ರೋಡಿನಿಂದ ಗೋಳಿತೊಟ್ಟು ವರೆಗಿನ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು. ಬಿ.ಸಿ.ರೋಡ್ ನಿಂದ ಪೆರಿಯ ಶಾಂತಿಯ ವರೆಗಿನ ಸುಮಾರು 48 ಕಿ.ಮೀ ರಾಷ್ಟ್ರೀಯ ಹೆದ್ದಾರಿಯ ಮೇಲ್ ಸೇತುವೆ ಕಾಮಗಾರಿ ಗಳಲ್ಲಿ

ಮೇ ಅಂತ್ಯದೊಳಗೆ‌ ಬಿ.ಸಿ ರೋಡ್ – ಪೆರಿಯಶಾಂತಿ ರಾ.ಹೆದ್ದಾರಿ ಸಂಚಾರಕ್ಕೆ ಮುಕ್ತ – ಚೌಟ Read More »

ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ರೇಡ್| ಹಲವು ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ

ಸಮಗ್ರ ನ್ಯೂಸ್: ಭ್ರಷ್ಟಾಚಾರ, ತೆರಿಗೆ ವಂಚನೆ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳ್ಳಂಬೆಳಗ್ಗೆಯೇ ಹಲವು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು, ರಾಯಚೂರು, ಬಾಗಲಕೋಟೆ, ಬೆಳಗಾವಿ ಸೇರಿದಂತೆ ಹಲವೆಡೆ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಇಬ್ಬರು ಅಧಿಕಾರಿಗಳ ಮನೆಯ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಮಿಕ್ಕಂತೆ ಬೆಳಗಾವಿಯಲ್ಲಿ ಎರಡು ಕಡೆ, ಚಿತ್ರದುರ್ಗ, ರಾಯಚೂರು ಹಾಗೂ ಬಾಗಲಕೋಟೆಯಲ್ಲಿ ಸೇರಿದಂತೆ ಒಟ್ಟಾರೆ ಏಳು ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಲೋಖಾಯುಕ್ತ ಡಿವೈಎಸ್‌ಪಿ ಸಿದ್ದೇಶ್‌

ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ರೇಡ್| ಹಲವು ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ Read More »