ರಾಜ್ಯ

ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗುವುದು ಅಪರಾದ ಹೇಗಾಗುತ್ತದೆ? ಕಡಬದ ಪ್ರಕರಣ ಕುರಿತು ರಾಜ್ಯ ಪೊಲೀಸರಿಗೆ ಸುಪ್ರೀಂಕೋರ್ಟ್ ಪ್ರಶ್ನೆ

ಸಮಗ್ರ ನ್ಯೂಸ್: ಮಸೀದಿಯೊಳಗೆ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುವುದು ಹೇಗೆ ಅಪರಾಧವಾಗುತ್ತದೆ ಎಂದು ಪ್ರಶ್ನಿಸಿದ ಸುಪ್ರೀಂಕೋರ್ಟ್ ಈ ಕುರಿತು ಕರ್ನಾಟಕ ಪೊಲೀಸರ ನಿಲುವನ್ನು ಕೇಳಿದೆ. ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ್ದಕ್ಕಾಗಿ ಇಬ್ಬರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಸೀದಿಯೊಳಗೆ ‘ಜೈ ಶ್ರೀರಾಮ್’ ಎಂದು ಕೂಗುವುದು ಹೇಗೆ ಅಪರಾಧವಾಗುತ್ತದೆ? ಎಂದು ಪ್ರಶ್ನಿಸಿದೆ. ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ಸಂದೀಪ್ […]

ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗುವುದು ಅಪರಾದ ಹೇಗಾಗುತ್ತದೆ? ಕಡಬದ ಪ್ರಕರಣ ಕುರಿತು ರಾಜ್ಯ ಪೊಲೀಸರಿಗೆ ಸುಪ್ರೀಂಕೋರ್ಟ್ ಪ್ರಶ್ನೆ Read More »

ಲಂಚ ಪಡೆಯಲು ಫೋನ್‌ಪೇ ಬಳಕೆ -ತಗಲಾಕ್ಕೊಂಡ ಪಿಡಿಓ!

ಸಮಗ್ರ ನ್ಯೂಸ್: ಲಂಚ ಅನ್ನೋದು ಸಮಾಜದಲ್ಲಿ ವಿಷಜಂತುಗಳ ರೀತಿ ದಿನೇ ದಿನೇ ಹೆಚ್ಚಿದೆ. ಕಾಸು ಕೊಡದಿದ್ರೆ ಸರ್ಕಾರಿ ಫೈಲ್ ಗಳು ಟೇಬಲ್ ನಿಂದ ಮುಂದಿಕ್ಕೆ ಸಾಗೋದೇ ಇಲ್ಲ. ಡೈರೆಕ್ಟ್ ಆಗಿ ಹಣ ಸ್ವೀಕರಿಸೋದಕ್ಕೆ ಹೆದರುವ ಅಧಿಕಾರಿಗಳು ಈಗ ಡಿಜಿಟಲ್ ಮಾರ್ಗದ ಮೊರೆ ಹೋಗಿದ್ದಾರೆ. ಫೋನ್ ಪೇ ಹಾಗೂ ಗೂಗಲ್ ಪೇ ಮೂಲಕ ಲಂಚ ಪಡೆಯುವವರ ಸಂಖ್ಯೆ ಹೆಚ್ಚಿದ್ದು, ಕಲಬುರಗಿಯಲ್ಲಿ PDO ಅಧಿಕಾರಿಯೊಬ್ಬರು ತಗ್ಲಾಕೊಂಡಿದ್ದಾರೆ.ಕವಲಗಾ ಗ್ರಾಮ ಪಂಚಾಯ್ತಿಯ ಪಿಡಿಓ ಪ್ರೀತಿ ರಾಜ್ ಲೋಕಾಯುಕ್ತರ ಕೈಲಿ ಸಿಕ್ಕಿಹಾಕಿಕೊಂಡಿದ್ದು, ಪಂಪ್‌ ಆಪರೇಟರ್

ಲಂಚ ಪಡೆಯಲು ಫೋನ್‌ಪೇ ಬಳಕೆ -ತಗಲಾಕ್ಕೊಂಡ ಪಿಡಿಓ! Read More »

ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಇನ್ನಿಲ್ಲ

ಸಮಗ್ರ ನ್ಯೂಸ್: ಪದ್ಮಶ್ರೀ ಪ್ರಶಸ್ತಿ ಪುರಸ್ಕ್ರತ ಪರಿಸರ ಪ್ರೇಮಿ ‘ತುಳಸಿಗೌಡ’ (86) ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿಗೌಡ’ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಾಳಿ ಗ್ರಾಮದವರಾದ ತುಳಸಿ ಗೌಡ ಅವರು ಹಾಲಕ್ಕಿ ಬುಡಕಟ್ಟು ಜನಾಂಗಕ್ಕೆ ಸೇರಿದ್ದಾರೆ. 30 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಟ್ಟಿರುವ ಅವರ ಕೆಲಸವನ್ನು ಕೊಂಡಾಡಿ ಭಾರತ ಸರ್ಕಾರವು 2021ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಇನ್ನಿಲ್ಲ Read More »

ತೆಲುಗು ಬಿಗ್ ಬಾಸ್ ವಿನ್ನರ್ ಆಗಿ ಕನ್ನಡಿಗ ನಿಖಿಲ್ ಮಲಿಯಕ್ಕಲ್

ಸಮಗ್ರ ನ್ಯೂಸ್: ತೆಲುಗು ಬಿಗ್‌ಬಾಸ್‌ ಸೀಸನ್‌ 8ರ ವಿನ್ನರ್‌ ಆಗಿ‌ ನಿಖಿಲ್ ಮಲಿಯಕ್ಕಲ್ ಹೊರಹೊಮ್ಮಿದ್ದಾರೆ. ಭಾನುವಾರ ನಡೆದ ಗ್ರ್ಯಾಂಡ್‌ ಫಿನಾಲೆಯಲ್ಲಿ ನಿಖಿಲ್ ಅವರನ್ನು ವಿನ್ನರ್‌ ಎಂದು ಘೋಷಿಸಲಾಗಿದೆ. ಶೋ ನಡೆಸಿಕೊಟ್ಟ ನಟ ಅಕ್ಕಿನೇನಿ ನಾಗಾರ್ಜುನ್‌ ಹಾಗೂ ವಿಶೇಷ ಅತಿಥಿಯಾಗಿ ಆಗಮಿಸಿದ್ದ ನಟ ರಾಮ್‌ ಚರಣ್‌ ಅವರ ಸಮ್ಮುಖದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆಯಾಗಿದೆ. ಟಾಲಿವುಡ್‌ನ ಮೆಗಾ ಪವರ್‌ಸ್ಟಾರ್ ರಾಮ್ ಚರಣ್ ಅವರು ಬಿಗ್‌ಬಾಸ್‌ ವಿಜೇತರನ್ನು ಘೋಷಿಸಿದರು. ಉಗುರು ಕಚ್ಚುವ ಸ್ಪರ್ಧೆಯಲ್ಲಿ ಸಹ ಫೈನಲಿಸ್ಟ್ ಗೌತಮ್ ಕೃಷ್ಣ ವಿರುದ್ಧ

ತೆಲುಗು ಬಿಗ್ ಬಾಸ್ ವಿನ್ನರ್ ಆಗಿ ಕನ್ನಡಿಗ ನಿಖಿಲ್ ಮಲಿಯಕ್ಕಲ್ Read More »

ಹವಾಮಾನ ವರದಿ| ವಾಯುಭಾರ ಕುಸಿತ; ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಒಂದು ಭಾಗದಲ್ಲಿ ಒಣ ಹವೆ ಜೊತೆಗೆ ತೀವ್ರ ಮಂಜು ಆವರಿಸಿದೆ. ನಿತ್ಯವು ಮೈಕೊರೆವ ಚಳಿ ಕಾಡುತ್ತಿದೆ. ಇತ್ತ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಮೇಲೆ ಹೊಸ ಹೊಸ ಹವಾಮಾನ ವೈಪರಿತ್ಯಗಳ ಪ್ರಭಾವ ಉಂಟಾಗುತ್ತಿದೆ. ಇದರಿಂದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಸಾಧಾರಣದಿಂದ ವ್ಯಾಪಕ ಮಳೆ ಆರ್ಭಟಿಸುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸದ್ಯ ಲಕ್ಷದ್ವೀಪ ಹಾಗೂ ಮಾಲ್ಡೀವ್ಸ್ ಭಾಗದ ಸಾಗದಲ್ಲಿ ಮತ್ತು ವಾಯುಭಾರ ಕುಸಿತುವಾಗಿರುವುದು ಕಂಡು

ಹವಾಮಾನ ವರದಿ| ವಾಯುಭಾರ ಕುಸಿತ; ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ‌ ಮುನ್ಸೂಚನೆ Read More »

ಅತುಲ್‌ ಸುಭಾಷ್ ಪ್ರಕರಣದ ಇಫೆಕ್ಟ್: ಇನ್ನು ಮುಂದೆ ವಿಚ್ಛೇದನ ನೀಡಲು ಈ 8 ಸೂತ್ರಗಳು ಅನ್ವಯ

ಸಮಗ್ರ ನ್ಯೂಸ್ : ಬೆಂಗಳೂರಿನಲ್ಲಿ ಪತ್ನಿಯ ವರದಕ್ಷಿಣೆ ಕಿರುಕುಳ ಕೇಸ್ ನಿಂದ ಹೈರಾಣಾಗಿ ಆತ್ಮಹತ್ಯೆ ಮಾಡಿಕೊಂಡ ಟೆಕಿ ಅತುಲ್ ಸುಭಾಷ್ ಪ್ರಕರಣದ ನಂತರ ವಿಚ್ಛೇದನ ಪ್ರಕರಣ ಇತ್ಯರ್ಥಕ್ಕೆ ಸುಪ್ರೀಂಕೋರ್ಟ್ ಮಹತ್ವದ 8 ಸೂತ್ರಗಳನ್ನು ಅಳವಡಿಸಲು ಸೂಚಿಸಿದೆ. ದೇಶದ ಎಲ್ಲಾ ಕೋರ್ಟ್ ಗಳಿಗೆ ಅನ್ವಯವಾಗುವಂತೆ ಈ ಆದೇಶ ನೀಡಲಾಗಿದೆ. ಪತಿ-ಪತ್ನಿ ಕಲಹ ಪ್ರಕರಣದಲ್ಲಿ ಶಾಶ್ವತ ಜೀವನಾಂಶವನ್ನು ನಿರ್ಧರಿಸುವ ವೇಳೆ ನ್ಯಾಯಾಲಯಗಳು ಈ ಎಂಟು ಮಾರ್ಗಸೂಚಿಗಳನ್ನು ಅನುಸರಿಸಲು ಆದೇಶ ನೀಡಲಾಗಿದೆ. ಇದರಿಂದ ಪುರುಷರಿಗೂ ಅನ್ಯಾಯವಾಗದಂತೆ ತಡೆಯಬಹುದಾಗಿದೆ.ವಿಚ್ಛೇದನ ಪ್ರಕರಣವೊಂದರ ವಿಚಾರಣೆ ವೇಳೆ

ಅತುಲ್‌ ಸುಭಾಷ್ ಪ್ರಕರಣದ ಇಫೆಕ್ಟ್: ಇನ್ನು ಮುಂದೆ ವಿಚ್ಛೇದನ ನೀಡಲು ಈ 8 ಸೂತ್ರಗಳು ಅನ್ವಯ Read More »

ವಿಶ್ವದ ಅತೀ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ 3 ಭಾರತೀಯರಿಗೆ ಸ್ಥಾನ

ಸಮಗ್ರ ನ್ಯೂಸ್: ವಾಣಿಜ್ಯ ನಿಯತಕಾಲಿಕೆ ಫೋರ್ಟ್ಸ್ 2024ನೇ ಸಾಲಿನ ವಿಶ್ವದ 100 ಅತ್ಯಂತ ಪ್ರಭಾವಿ ಮಹಿಳೆಯರ 21ನೇ ವಾರ್ಷಿಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜಾಗತಿಕವಾಗಿ ಪ್ರಭಾವ ಬೀರಿದ ವಿವಿಧ ರಂಗದ ಮಹಿಳಾ ಸಾಧಕಿಯರು ಈ ಪಟ್ಟಿಯಲ್ಲಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಮೂವರು ಭಾರತಿಯರು ಇದರಲ್ಲಿ ಸ್ಥಾನ ಪಡೆದಿದ್ದಾರೆ. ನಿರ್ಮಲಾ ಅವರಿಗೆ ಪಟ್ಟಿಯಲ್ಲಿ 28ನೇ ಸ್ಥಾನ ಲಭಿಸಿದ್ದು, ಭಾರತೀಯರ ಪೈಕಿ ಮೊದಲಿಗರಾಗಿದ್ದಾರೆ. ಅಲ್ಲದೇ ಪಟ್ಟಿಯಲ್ಲಿ ಎಚ್‌ಸಿಎಲ್ ಕಾರ್ಪೋರೇಶನ್‌ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರೋಶನಿ ನಾದ‌ರ್

ವಿಶ್ವದ ಅತೀ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ 3 ಭಾರತೀಯರಿಗೆ ಸ್ಥಾನ Read More »

ನಟ ಅಲ್ಲು ಅರ್ಜುನ್ ಗೆ 14 ದಿನ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಹೈದರಾಬಾದ್ ನಲ್ಲಿ ಥಿಯೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ಅಲ್ಲು ಅರ್ಜುನ್ ಅವರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಇಂದು ಬೆಳಿಗ್ಗೆ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅವರ ನಿವಾಸದ ಬಳಿ ಬಂಧಿಸಿ ಠಾಣೆಗೆ ಕರೆದೊಯ್ದರು. ಬಳಿಕ ಪೊಲೀಸರು ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನಾಂಪಲ್ಲಿ ಕೋರ್ಟಿಗೆ ವಿಚಾರಣೆಗೆ ಹಾಜರುಪಡಿಸಿದ್ದರು. ಇದೀಗ ನಾಂಪಲ್ಲಿ ಕೋರ್ಟ್ ಅಲ್ಲು ಅರ್ಜುನ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ

ನಟ ಅಲ್ಲು ಅರ್ಜುನ್ ಗೆ 14 ದಿನ ನ್ಯಾಯಾಂಗ ಬಂಧನ Read More »

ಮುಖ್ಯಮಂತ್ರಿಯಿಂದ ಅವಮಾನ: ಸೋನು ನಿಗಮ್ ಆಕ್ರೋಶ!

ಸಮಗ್ರ ನ್ಯೂಸ್ : ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮ ಮತ್ತು ಇತರ ಜನ ಪ್ರತಿನಿಧಿಗಳ ವಿರುದ್ಧ ಪ್ರಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಅಸಮಾಧಾನ ಹೊರ ಹಾಕಿದ್ದಾರೆ. ಜೈಪುರದಲ್ಲಿ ನಡೆದ ಮೂರು ದಿನಗಳ ರೈಸಿಂಗ್ ರಾಜಸ್ಥಾನ ಗ್ಲೋಬಲ್ ಇನ್ವೆಸ್ಟ್‌ಮೆಂಟ್ ಶೃಂಗಸಭೆಯಲ್ಲಿ ಭಾಗವಹಿಸುವ ಪ್ರತಿನಿಧಿಗಳಿಗಾಗಿ ಹೋಟೆಲ್ ರಾಂಬಾಗ್‌ ಪ್ಯಾಲೇಸ್‌ನಲ್ಲಿ ಡಿ.9 ರಂದು ಸಾಂಸ್ಕೃತಿಕ ಸಂಜೆಯ ಭಾಗವಾಗಿ ಆಯೋಜಿಸಲಾಗಿದ್ದ ಪ್ರದರ್ಶನದಲ್ಲಿ ಮುಖ್ಯಮಂತ್ರಿ ಭಜನಲಾಲ್ ಶರ್ಮ ಮತ್ತು ಇತರ ಪ್ರತಿನಿಧಿಗಳು ಕಾರ್ಯಕ್ರಮ ನಡೆಯುತ್ತಿದ್ದ ವೇಳೆಯೇ ನಿರ್ಗಮಿಸಿರುವುದು ಖ್ಯಾತ ಗಾಯಕ ಸೋನು ನಿಗಮ್

ಮುಖ್ಯಮಂತ್ರಿಯಿಂದ ಅವಮಾನ: ಸೋನು ನಿಗಮ್ ಆಕ್ರೋಶ! Read More »

ಕೆಫೆ ಡೇ ಅವರಣದಲ್ಲಿಯೇ ಅಂತ್ಯಸಂಸ್ಕಾರ ಯಾಕೆ ಗೊತ್ತೇ..?

ಸಮಗ್ರ ನ್ಯೂಸ್ : ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಮಾಜಿ ಸಿಎಂ ಎಸ್‌ಎಂ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ. ಎಸ್ ಎಂ ಕೃಷ್ಣ ಅವರ ಇಷ್ಟದ ಸ್ಥಳ ಸೋಮನಹಳ್ಳಿ ಹೊರವಲಯದ ಕಾಫಿ ಡೇ ಆವರಣದಲ್ಲಿ ಸಂಜೆ 4 ಗಂಟೆಯ ನಂತರ ಅಂತ್ಯಸಂಸ್ಕಾರ ನಡೆಯಲಿದ್ದು, ಸಕಲ ಸಿದ್ಧತೆಗಳು ನಡೀತಿವೆ. ಎಸ್‌ಎಂ ಕೃಷ್ಣ ಅವರ ಮೂಲ ಮನೆ ಸೋಮನಹಳ್ಳಿ ಒಳಗಡೆ ಇದೆ. ಎಸ್ ಎಂ ಕೃಷ್ಣ ರಾಜ್ಯ ಸಚಿವರಾಗಿದ್ದಾಗ, ತಮ್ಮ ಪಿತ್ರಾರ್ಜಿತ ಆಸ್ತಿಯಲ್ಲಿ ಒಂದು ಗೆಸ್ಟ್ ಹೌಸ್ ನಿರ್ಮಿಸಿದ್ದರು. ಬೆಂಗಳೂರಿನಲ್ಲಿ ನೆಲೆಸಿದ್ದರಿಂದಾಗಿ

ಕೆಫೆ ಡೇ ಅವರಣದಲ್ಲಿಯೇ ಅಂತ್ಯಸಂಸ್ಕಾರ ಯಾಕೆ ಗೊತ್ತೇ..? Read More »