ರಾಜ್ಯ

ಮೈಸೂರು ರಾಜವಂಶಸ್ಥರ ಕುಟುಂಬದಲ್ಲಿ ತೊಟ್ಟಿಲು ಶಾಸ್ತ್ರದ ಸಂಭ್ರಮ, ಚಾಮುಂಡಿಬೆಟ್ಟದಲ್ಲಿ ಕಂಡ ಯದುವೀರ್ ಒಡೆಯರ್ 2ನೇ ಪುತ್ರ ಹೇಗಿದ್ದಾನೆ

ಸಮಗ್ರ ನ್ಯೂಸ್ : ಮೈಸೂರಿನ ರಾಜವಂಶಸ್ಥರ ಕುಟುಂಬದಲ್ಲಿ ಬುಧವಾರ ಸಂಭ್ರಮದ ದಿನ. ಎರಡು ತಿಂಗಳ ಹಿಂದೆ ದಸರಾದ ಸಂದರ್ಭದಲ್ಲಿಯೇ ರಾಜವಂಶಸ್ಥ ಹಾಗೂ ಸಂಸದ ಯದುವೀ‌ರ್ ಒಡೆಯರ್ ಅವರಿಗೆ ಎರಡನೇ ಪುತ್ರ ಜನಿಸಿದ್ದ. ಈಗ ಮನೆಯಲ್ಲಿ ತೊಟ್ಟಿಲು ಶಾಸ್ತ್ರದ ಸಡಗರ. ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇಗುಲದ ಆವರಣದಲ್ಲಿ ತೊಟ್ಟಿಲು ಶಾಸ್ತ್ರ ಹಾಗೂ ನಾನಾ ಪೂಜೆಗಳು ನೆರವೇರಿದವು. ಯದುವೀ‌ರ್ ಒಡೆಯರ್, ತ್ರಿಷಿಕಾದೇವಿ ಒಡೆಯರ್, ಪ್ರಮೋದಾದೇವಿ ಒಡೆಯರ್, ಆದ್ಯವೀ‌ರ್ ಒಡೆಯ‌ರ್ ಚಾಮುಂಡಿಬೆಟ್ಟಕ್ಕೆ ಪುಟ್ಟ ಮಗುವಿನೊಂದಿಗೆ ಆಗಮಿಸಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. […]

ಮೈಸೂರು ರಾಜವಂಶಸ್ಥರ ಕುಟುಂಬದಲ್ಲಿ ತೊಟ್ಟಿಲು ಶಾಸ್ತ್ರದ ಸಂಭ್ರಮ, ಚಾಮುಂಡಿಬೆಟ್ಟದಲ್ಲಿ ಕಂಡ ಯದುವೀರ್ ಒಡೆಯರ್ 2ನೇ ಪುತ್ರ ಹೇಗಿದ್ದಾನೆ Read More »

ಕುವೈತ್‌ ಬ್ಯಾಂಕ್‌ನಿಂದ ₹700 ಕೋಟಿ ಸಾಲ ಪಡೆದು ಪರಾರಿಯಾದ ಕೇರಳದ ನರ್ಸ್‌ಗಳು!

ಸಮಗ್ರ ನ್ಯೂಸ್ : ತಿರುವನಂತಪುರ ಕುವೈತ್ ಬ್ಯಾಂಕ್‌ವೊಂದರಲ್ಲಿ ₹700 ಕೋಟಿಗೂ ಹೆಚ್ಚು ಸಾಲ ಪಡೆದು ಮರುಪಾವತಿ ಮಾಡದೆ ವಂಚಿಸಿದ ಆರೋಪದಡಿ ಕೇರಳದ ನರ್ಸ್‌ಗಳು ಸೇರಿದಂತೆ 1,400ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಹುತೇಕ ಸಾಲಗಾರರು ಕುವೈತ್‌ನಿಂದ ತಾಯ್ಕಾಡಿಗೆ (ಕೇರಳ) ವಾಪಸ್ ಬಂದಿದ್ದಾರೆ. ಕೆಲವರು ಮತ್ತೆ ವಿದೇಶಗಳಿಗೂ ವಲಸೆ ಹೋಗಿದ್ದಾರೆ. ಇದರಿಂದಾಗಿ ಕುವೈತ್ ಬ್ಯಾಂಕ್ ಕೆಎಸ್‌ಸಿಪಿ (ಕುವೈತ್ ಸಾರ್ವಜನಿಕ ಷೇರುದಾರ ಕಂಪನಿ) ಇತ್ತೀಚೆಗೆ ಕೇರಳ ಪೊಲೀಸರಿಗೆ ದೂರು ನೀಡಿದ್ದು, ಅದರನ್ವಯ ರಾಜ್ಯದಲ್ಲಿ 10 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು

ಕುವೈತ್‌ ಬ್ಯಾಂಕ್‌ನಿಂದ ₹700 ಕೋಟಿ ಸಾಲ ಪಡೆದು ಪರಾರಿಯಾದ ಕೇರಳದ ನರ್ಸ್‌ಗಳು! Read More »

‘ಕಾಳಿ ದೇವಿ’ ಪ್ರತ್ಯಕ್ಷ ಆಗಿಲ್ಲ ಎಂದು ಬೇಸತ್ತು ಕತ್ತು ಸೀಳಿಕೊಂಡು ಅರ್ಚಕ ಆತ್ಮಹತ್ಯೆ

ಸಮಗ್ರ ನ್ಯೂಸ್ : ಕಾಳಿದೇವಿ ಪ್ರತ್ಯಕ್ಷ ಆಗಿಲ್ಲ ಎಂದು ಬೇಸತ್ತು ಕತ್ತು ಸೀಳಿಕೊಂಡು ಅರ್ಚಕ ಆತ್ಮಹತ್ಯೆಮಾಡಿಕೊಂಡ ಭಯಾನಕ ಘಟನೆ ವಾರಾಣಸಿ ನಗರದ ಕೊತ್ವಾಲಿ ಠಾಣಾ ಪ್ರದೇಶದ ಗಾಯಿ ಘಾಟ್ ನಲ್ಲಿ ನಡೆದಿದೆ. ಮೂಲಗಳ ಪ್ರಕಾರ 24 ಗಂಟೆ ಕಾಳಿ ಪೂಜೆ ಮಾಡಿದ ಅರ್ಚಕ ನಂತರ ಕಾಳಿ ಪ್ರತ್ಯಕ್ಷ ಆಗಿಲ್ಲ ಎಂದು ಬೇಸರಗೊಂಡು ಕತ್ತು ಸೀಳಿಕೊಂಡು ಅರ್ಚಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಹಿತಿ ಬಂದ ಮೇಲೆ ಬಂದ ಪೊಲೀಸ್ ಅಧಿಕಾರಿಗಳು ಶವವನ್ನು ಶವ ಪರೀಕ್ಷೆಗೆ ಕಳುಹಿಸಿದ್ದಾರೆ.ಪೂಜಾರಿ ಧಾರ್ಮಿಕ ನಂಬಿಕೆಗಳಿಂದ ಬಹಳ

‘ಕಾಳಿ ದೇವಿ’ ಪ್ರತ್ಯಕ್ಷ ಆಗಿಲ್ಲ ಎಂದು ಬೇಸತ್ತು ಕತ್ತು ಸೀಳಿಕೊಂಡು ಅರ್ಚಕ ಆತ್ಮಹತ್ಯೆ Read More »

ಕಿರಾಣಿ ಅಂಗಡಿಯಲ್ಲಿ ವ್ಯಾಪಾರ ಮಾಡಿದ ರಾಹುಲ್ !

ಸಮಗ್ರ ನ್ಯೂಸ್ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ತಮ್ಮ ಬಿಡುವಿನ ಸಮಯದಲ್ಲಿ ಜನರೊಂದಿಗೆ ಬೆರೆಯುತ್ತಿದ್ದು, ಅವರ ಸುಖ – ದುಃಖ, ಕಷ್ಟಗಳನ್ನು ಕೇಳಿ ಪರಿಹರಿಸುವ ಕಾರ್ಯ ಮುಂದುವರಿಸಿದ್ದಾರೆ.ಮಂಗಳವಾರ ದೆಹಲಿಯ ಭೋಗಲ್‌ನಲ್ಲಿರುವ ಕಿರಣ ಸ್ಟೋರ್ ಗೆ ಭೇಟಿ ನೀಡಿರುವ ರಾಹುಲ್ ಗಾಂಧಿ, ಅವರ ವ್ಯಾಪಾರ ವಹಿವಾಟು, ಲಾಭ ನಷ್ಟದ ಬಗ್ಗೆ ಮಾತನಾಡಿದ್ದಾರೆ. ಅಷ್ಟೇ ಅಲ್ಲದೆ ಅಂಗಡಿಗೆ ಬಂದ ಗ್ರಾಹಕರಿಗೆ ಸ್ವತಃ ಅವರೇ ವ್ಯಾಪಾರ ಮಾಡಿದ್ದಾರೆ.ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರು, ಕಿರಾಣಿ

ಕಿರಾಣಿ ಅಂಗಡಿಯಲ್ಲಿ ವ್ಯಾಪಾರ ಮಾಡಿದ ರಾಹುಲ್ ! Read More »

ಜನಸೇವೆ ಅಂದ್ರೆ ಇದಪ್ಪಾ! ಈ ಆಸ್ಪತ್ರೆಗೆ ಹಣಪವಾತಿ ಕೌಂಟರೇ ಇಲ್ಲ, ವಿಶ್ವದರ್ಜೆಯ ನೇತ್ರ ಚಿಕಿತ್ಸೆ ಸಂಪೂರ್ಣ ಉಚಿತ

ಸಮಗ್ರ ನ್ಯೂಸ್ : ಕುಂದಾಪುರ ಶಂಕರನಾರಾಯಣದಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ವಿಶ್ವದರ್ಜೆಯ ಚಿಕಿತ್ಸಾ ಸೌಲಭ್ಯಗಳನ್ನು ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಡಿ 08 ರಂದು ಉದ್ಘಾಟನೆಗೊಂಡಿತು. ನಾರಾಯಣ ನೇತ್ರಾಲಯ ಇದರ ನಿರ್ವಹಣೆ ಮಾಡಲಿದೆ. ಉನ್ನತ ಗುಣಮಟ್ಟದ ಆರೈಕೆಗಾಗಿ ತಜ್ಞ ವೈದ್ಯರ ಮತ್ತು ಆರೋಗ್ಯ ವೃತ್ತಿಪರರ ಸೇವೆಯನ್ನು ಒದಗಿಸಲು ಈ ಚಾರಿಟೇಬಲ್ ಆಸ್ಪತ್ರೆ ಸಜ್ಜಾಗಿದೆ.ಶಂಕರನಾರಾಯಣ ಕನ್‌ಸ್ಟ್ರಕ್ಷನ್ಸ್ ಪ್ರೈ. ಲಿ.ನ ಕಾರ್ಯನಿರ್ವಾಹಕ ಅಧ್ಯಕ್ಷ ಡಾ. ಎನ್. ಸೀತಾರಾಮ್ ಶೆಟ್ಟಿ ಅವರು ತಮ್ಮ ಸಂಸ್ಥೆಯ ಸಿಎಸ್‌ಆರ್ ಯೋಜನೆಯಡಿ

ಜನಸೇವೆ ಅಂದ್ರೆ ಇದಪ್ಪಾ! ಈ ಆಸ್ಪತ್ರೆಗೆ ಹಣಪವಾತಿ ಕೌಂಟರೇ ಇಲ್ಲ, ವಿಶ್ವದರ್ಜೆಯ ನೇತ್ರ ಚಿಕಿತ್ಸೆ ಸಂಪೂರ್ಣ ಉಚಿತ Read More »

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! FIRನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಸಮಗ್ರ ನ್ಯೂಸ್ : ಬೆಂಗಳೂರು ನಗರದ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಎಂಬ ವ್ಯಕ್ತಿ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ.09 ರಂದು ನಡೆದಿತ್ತು. ಈ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದಾಖಲಾಗಿರುವ ಎಫ್‌ಐಆರ್‌ನಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.ಅತುಲ್ ಆತ್ಮಹತ್ಯೆ ಪ್ರಕರಣದಲ್ಲಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು ಮೃತ ಅತುಲ್ ಬರಹ ಇರೋ ಬೋರ್ಡ್ ಕತ್ತಿಗೆ ಹಾಕಿಕೊಂಡು ಜೊತೆಗೆ

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! FIRನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ Read More »

ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನೇ ಆಯ್ಕೆ ಮಾಡಿಕೊಂಡು, ಪ್ರಧಾನಿ ಮೋದಿ ಭೇಟಿಗೆ ಬರ್ತಿದ್ದಾರೆ ಈ ರಾಷ್ಟ್ರದ ಅಧ್ಯಕ್ಷರು..!

ಸಮಗ್ರ ನ್ಯೂಸ್ : ಶ್ರೀಲಂಕಾದ ನೂತನ ಅಧ್ಯಕ್ಷ ಅನುರಾಕುಮಾರ ದಿಸ್ಸನಾಯಕೆ ಅವರು ಡಿ.15ರಿಂದ 17ರವರೆಗೆ ಭಾರತ ಪ್ರವಾಸ ಹಮ್ಮಿಕೊಂಡಿದ್ದಾರೆ. ದಿಸ್ಸನಾಯಕೆ ಅವರು ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ಏರಿದ ಮೇಲಿನ ಪ್ರಥಮ ವಿದೇಶ ಪ್ರವಾಸ ಇದಾಗಿದೆ. ಅಧಿಕಾರ ವಹಿಸಿಕೊಂಡ ಬಳಿಕದ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನೇ ಆಯ್ಕೆ ಮಾಡಿಕೊಂಡಿದ್ದು ವಿಶೇಷವಾಗಿದೆ.ಮಾರ್ಕ್ಸ್ವಾದಿ ನಾಯಕ ಅನುರಾ ಕುಮಾರ ದಿಸ್ಸನಾಯಕೆ ಅವರು ಭಾರತ ಪ್ರವಾಸದ ವೇಳೆ ಪ್ರಧಾನಿ ಮೋದಿಯವರನ್ನ ಮತ್ತು ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರನ್ನ ಭೇಟಿ ಮಾಡುವರು ಎಂದು ಶ್ರೀಲಂಕಾ ಸರ್ಕಾರದ

ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನೇ ಆಯ್ಕೆ ಮಾಡಿಕೊಂಡು, ಪ್ರಧಾನಿ ಮೋದಿ ಭೇಟಿಗೆ ಬರ್ತಿದ್ದಾರೆ ಈ ರಾಷ್ಟ್ರದ ಅಧ್ಯಕ್ಷರು..! Read More »

ಮೀಸಲಾತಿ ಹೋರಾಟದ ಕಿಚ್ಚು| ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಪ್ರತಿಭಟನೆ ನಡೆಸುತ್ತಿದ್ದ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಸಮುದಾಯದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿದ್ದು, ಸಮಾವೇಶದ ಬಳಿಕ ಪ್ರತಿಭಟನಾಕಾರರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬ್ಯಾರಿಕೇಡ್ ಗಳನ್ನು ತಳ್ಳಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ

ಮೀಸಲಾತಿ ಹೋರಾಟದ ಕಿಚ್ಚು| ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪೊಲೀಸ್ ವಶಕ್ಕೆ Read More »

ಬೆಂಗಳೂರಿನಲ್ಲಿ ₹50 ಕೋಟಿ ಅಪಾರ್ಟ್‌ಮೆಂಟ್ ಖರೀದಿಸಿ ವ್ಯಾಪಕ ಟೀಕೆಗೆ ಗುರಿಯಾದ ನಾರಾಯಣಮೂರ್ತಿ

ಸಮಗ್ರ ನ್ಯೂಸ್ : ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿರುವ ಇನ್ಫೋಸಿಸ್ ಸ್ಥಾಪಕ ನಾರಾಯಣಮೂರ್ತಿ ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ಟ್ರೋಲ್ ಆಗುತ್ತಿದ್ದರು. ಈ ಹಿಂದೆ ಕೆಲಸ ಅವಧಿ, ನಟಿ ಕರೀನಾ ಕಪೂರ್ ಕುರಿತ ಹೇಳಿಕೆಯಿಂದಾಗಿ ನಾರಾಯಣಮೂರ್ತಿ ವ್ಯಾಪಕ ಚರ್ಚೆಯಲ್ಲಿದ್ದರು. ಕೆಲ ದಿನಗಳ ಹಿಂದೆ ಬೆಂಗಳೂರಿನ ಕಿಂಗ್‌ಫಿಶರ್ ಟವರ್‌ನಲ್ಲಿ 50 ಕೋಟಿ ರೂಪಾಯಿ ಮೌಲ್ಯದ ಅಪಾರ್ಟ್‌ಮೆಂಟ್ ಖರೀದಿಸಿದ್ದರು. ಇದೀಗ ಈ ವಿಷಯವಾಗಿ ನೆಟ್ಟಿಗರು ನಾರಾಯಣಮೂರ್ತಿ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ನಾಲ್ಕು ವರ್ಷಗಳ ಹಿಂದೆ ನಾರಾಯಣಮೂರ್ತಿ

ಬೆಂಗಳೂರಿನಲ್ಲಿ ₹50 ಕೋಟಿ ಅಪಾರ್ಟ್‌ಮೆಂಟ್ ಖರೀದಿಸಿ ವ್ಯಾಪಕ ಟೀಕೆಗೆ ಗುರಿಯಾದ ನಾರಾಯಣಮೂರ್ತಿ Read More »

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ ಹಿನ್ನೆಲೆ| ಡಿ.11ರ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ(ಡಿ. ೧೧) ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ. ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದು, ಸಂತಾಪ ಸೂಚಿಸಿದ್ದಾರೆ. ನಾಳೆ ಅವರ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ ಹಿನ್ನೆಲೆ| ಡಿ.11ರ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ Read More »