ರಾಜ್ಯ

ಮಸೀದಿ ಸಮೀಕ್ಷೆ ವೇಳೆ ಹಿಂಸಾಚಾರ: 4 ಜನರು ಸಾವು; ಶಾಲಾ-ಕಾಲೇಜುಗಳು ಬಂದ್; ಇಂಟರ್ನೆಟ್ ಸ್ಥಗಿತ

ಸಮಗ್ರ ನ್ಯೂಸ್:ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಮಸೀದಿ ಸಮೀಕ್ಷೆಯ ವೇಳೆ ನಡೆದ ಹಿಂಸಾಚಾರ ಪ್ರಕರಣದಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಸಂಭಾಲ್ ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸರ್ವೆಗೆ ನ್ಯಾಯಾಲಯ ಆದೇಶ ನೀಡಿತ್ತು.ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸರ್ವೆಗೆ ಮುಂದಾಗಿದ್ದ ವೇಳೆ ಉದ್ರಿಕ್ತರು ಕಲ್ಲುತೂರಾಟ ನಡೆಸಿದ್ದರು.ಸ್ಥಳೀಯರು ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿತ್ತು. ಇದರಿಂದಾಗಿ ಸಾಂಭಾಲ್ ನಲ್ಲಿ ಸಂಪೂರ್ಣ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ನ.20ರಂದು ಮಸೀದಿ ಸಮೀಕ್ಷೆಗೆ ಬಂದಿದ್ದ […]

ಮಸೀದಿ ಸಮೀಕ್ಷೆ ವೇಳೆ ಹಿಂಸಾಚಾರ: 4 ಜನರು ಸಾವು; ಶಾಲಾ-ಕಾಲೇಜುಗಳು ಬಂದ್; ಇಂಟರ್ನೆಟ್ ಸ್ಥಗಿತ Read More »

ಗುಂಡ್ಯ: ಸರಣಿ ಅಪಘಾತ; ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಾಯ

ಸಮಗ್ರ ನ್ಯೂಸ್: ಖಾಸಗಿ ಬಸ್, ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿ ಖಾಸಗಿ ಬಸ್ಸಿನಲ್ಲಿದ್ದ ಹಲವು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ನ.23ರಂದು ಮುಂಜಾನೆ ಸಂಭವಿಸಿದೆ. ಘಟನೆಯಲ್ಲಿ ಖಾಸಗಿ ಬಸ್ಸಿನಲ್ಲಿದ್ದ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ. ಬೆಂಗಳೂರು ಕಾಮಾಕ್ಷಿಪಾಳ್ಯದ ಸೈಂಟ್ ಲಾರೆನ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಖಾಸಗಿ ಬಸ್ಸಿನಲ್ಲಿ ಕುಂದಾಪುರಕ್ಕೆ ಪ್ರವಾಸಕ್ಕೆ ಬಂದವರು ಮತ್ತೆ ಬೆಂಗಳೂರಿಗೆ ಹಿಂತಿರುಗುತ್ತಿದ್ದ ವೇಳೆ ಅಡ್ಡಹೊಳೆಯಲ್ಲಿ

ಗುಂಡ್ಯ: ಸರಣಿ ಅಪಘಾತ; ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಾಯ Read More »

ತಂದೆ ‘ಆಸ್ತಿ’ಯಲ್ಲಿ ಮಗಳಿಗೆ ಹಕ್ಕಿದ್ಯಾ.? ಎಷ್ಟು ಪಾಲು ಪಡೆಯೋದು.? ‘ಕಾನೂನು’ ಹೇಳುವುದೇನು ಗೊತ್ತಾ?

ಸಮಗ್ರನ್ಯೂಸ್: ಭಾರತೀಯಕಾನೂನಿನ ಪ್ರಕಾರ, ತಂದೆಯ ಆಸ್ತಿಯಲ್ಲಿ ಮಗಳಿಗೂ ಹಕ್ಕಿದೆ. ಭಾರತದ ಸಂವಿಧಾನದ ಹಿಂದೂ ಉತ್ತರಾಧಿಕಾರ ಕಾಯ್ದೆ 2005ರ ಪ್ರಕಾರ, ಮಗಳ ತಂದೆಯ ಆಸ್ತಿಯಲ್ಲಿ ಮಗನಂತೆ ಸಮಾನ ಹಕ್ಕು ಇದೆ.ಮಗಳು ಅವಿವಾಹಿತಳಾಗಿದ್ದರೂ ತಂದೆಯ ಆಸ್ತಿಯಲ್ಲಿ ಮಗಳಿಗೆ ಸಮಾನ ಪಾಲು ಸಿಗುತ್ತದೆ.ಮಗಳು ಮದುವೆಯಾಗಿದ್ದರೂ ಸಹ, ಮಗಳು ತಂದೆಯ ಆಸ್ತಿಯಲ್ಲಿ ಸಮಾನ ಪಾಲನ್ನ ಪಡೆಯಬಹುದು, ಈ ಸಂದರ್ಭದಲ್ಲಿ, ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯ ಮೇಲೆ ಗಂಡುಮಕ್ಕಳಷ್ಟೇ ಹಕ್ಕಿದೆ. ಕಾನೂನಿನ ಪ್ರಕಾರ, ತಂದೆಯು ತನ್ನ ಮರಣದ ಮೊದಲು ತನ್ನ ಉಯಿಲಿನಲ್ಲಿ ಮಗನ ಹೆಸರನ್ನ

ತಂದೆ ‘ಆಸ್ತಿ’ಯಲ್ಲಿ ಮಗಳಿಗೆ ಹಕ್ಕಿದ್ಯಾ.? ಎಷ್ಟು ಪಾಲು ಪಡೆಯೋದು.? ‘ಕಾನೂನು’ ಹೇಳುವುದೇನು ಗೊತ್ತಾ? Read More »

ಕಸ್ತೂರಿ ರಂಗನ್ ವರದಿ ವಿರೋಧಿಸಿ ಹೆದ್ದಾರಿ ತಡೆದ ಪ್ರಕರಣ| 13 ಮಂದಿಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಕಸ್ತೂರಿ ರಂಗನ್‌ ವರದಿ ವಿರೋಧಿಸಿ ನ.15ರಂದು ಮಲೆನಾಡು ಜನಹಿತ ರಕ್ಷಣ ವೇದಿಕೆ ನೇತೃತ್ವದಲ್ಲಿ ಗುಂಡ್ಯದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದ ಆರೋಪದಲ್ಲಿ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ 13 ಮಂದಿಗೆ ಜಾಮೀನು ದೊರೆತಿದೆ. ಹೆದ್ದಾರಿ ತಡೆ ನಡೆಸಿದ್ದಾರೆಂದು ಉಪ್ಪಿನಂಗಡಿ ಎಸ್‌ಐ ಅವಿನಾಶ್‌ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದರು. ಶಾಸಕರಾದ ಭಾಗೀರಥಿ ಮುರುಳ್ಯ, ಗುರುರಾಜ್‌ ಗಂಟಿಹೊಳೆ, ಮಲೆನಾಡು ಜನಹಿತ ರಕ್ಷಣ ವೇದಿಕೆಯ ಸಂಚಾಲಕ ಕಿಶೋರ್‌ ಶಿರಾಡಿ, ಪ್ರತಿಭಟನಕಾರರಾದ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಹೆದ್ದಾರಿ ತಡೆದ ಪ್ರಕರಣ| 13 ಮಂದಿಗೆ ಜಾಮೀನು ಮಂಜೂರು Read More »

ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ಸಂಗ್ರಹ ಮಾಡಿ ಬಂದ ದುಡ್ಡಲ್ಲಿ ಫ್ಲಾಟ್ ಖರೀದಿಸಿದ

ಸಮಗ್ರ ನ್ಯೂಸ್:ಚೀನಾದಲ್ಲಿ ವ್ಯಕ್ತಿಯೊಬ್ಬ ಕ್ಯಾನ್ಸರ್ ಹೆಸರಿನಲ್ಲಿ ಜನರಿಂದ ದೇಣಿಗೆ ಕೇಳಿ ಹಣ ಸಂಗ್ರಹಿಸಿ ತನಗಾಗಿ ಮನೆ ಖರೀದಿಸಿದ್ದಾನೆ.ಚೀನಾದಲ್ಲಿ ವಾಸಿಸುವ 29 ವರ್ಷದ ಲ್ಯಾನ್ ಎಂಬ ವ್ಯಕ್ತಿ, ಸಾಮಾಜಿಕ ಮಾಧ್ಯಮದಲ್ಲಿ ಭಾವನಾತ್ಮಕ ಪೋಸ್ಟ‌ರ್ ಅನ್ನು ಹಂಚಿಕೊಂಡಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಮತ್ತು ಸಹಾಯದ ಅಗತ್ಯವಿದೆ ಎಂದು ಜನರಿಗೆ ಮನವಿ ಮಾಡಿದ್ದಾನೆ. ಕೆಲವರು ಕೈಲಾದಷ್ಟು ಸಹಾಯವನ್ನು ಮಾಡಿದ್ದಾರೆ. ಕೆಲವು ತಿಂಗಳ ನಂತರ ಅವರು ತಮ್ಮ ಮನೆಯ ಫೋಟೋವನ್ನು ಪೋಸ್ಟ್ ಮಾಡಿದರು ಮತ್ತು ಕೆಲವೇ ದಿನಗಳ ಹಿಂದೆ ಈ ಮನೆಯನ್ನು ಖರೀದಿಸಿರುವುದಾಗಿ

ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ಸಂಗ್ರಹ ಮಾಡಿ ಬಂದ ದುಡ್ಡಲ್ಲಿ ಫ್ಲಾಟ್ ಖರೀದಿಸಿದ Read More »

ಸಾರ್ವಕಾಲಿಕ ಪತನ ಕಂಡ ರೂಪಾಯಿ| ಮಕಾಡೆ ಮಲಗಿದ ಸೆನ್ಸೆಕ್ಸ್

ಸಮಗ್ರ ನ್ಯೂಸ್: ಉಕ್ರೇನ್‌-ರಷ್ಯಾ ಸಂಘರ್ಷ ತೀವ್ರಗೊಂಡಿರುವುದು ಹಾಗೂ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿರುವುದರ ಪರಿಣಾಮವೆಂಬಂತೆ, ಡಾಲರ್‌ ಎದುರು ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ ದಾಖಲಿಸಿದೆ. ಗುರುವಾರ ರೂಪಾಯಿ ಮೌಲ್ಯ 8 ಪೈಸೆ ಕುಸಿದು, ದಿನದ ಅಂತ್ಯಕ್ಕೆ 84.50ಕ್ಕೆ ತಲುಪಿದೆ. ಈ ಹಿಂದೆ ನ.14ರಂದು 84.46 ರೂ.ಗೆ ತಲುಪಿದ್ದೇ ದಾಖಲೆ ಆಗಿತ್ತು. ಇದೇ ವೇಳೆ, ಅದಾನಿ ಗ್ರೂಪ್‌ ವಿರುದ್ಧ ಲಂಚ ಮತ್ತು ಷೇರು ವಂಚನೆ ಆರೋಪ ಕೇಳಿಬರುತ್ತಿದ್ದಂತೆಯೇ, ಷೇರುಪೇಟೆಯಲ್ಲಿ ಸಂಚಲನ ಮೂಡಿದೆ. ಹೂಡಿಕೆದಾರರು ಏಕಾಏಕಿ ಷೇರುಗಳ ಮಾರಾಟದಲ್ಲಿ ತೊಡಗಿದ

ಸಾರ್ವಕಾಲಿಕ ಪತನ ಕಂಡ ರೂಪಾಯಿ| ಮಕಾಡೆ ಮಲಗಿದ ಸೆನ್ಸೆಕ್ಸ್ Read More »

ಚಿನ್ನ ಧಾರಣೆಯಲ್ಲಿ ದಿಢೀರ್ ಏರಿಕೆ| ಇಂದಿನ ದರ ಎಷ್ಟು?

ಸಮಗ್ರ ನ್ಯೂಸ್: ದೇಶದ ಚಿನಿವಾರ ಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಚಿನ್ನದ ದರ ಏರಿಕೆಯಾಗಿದ್ದರೆ, ಬೆಳ್ಳಿ ಧಾರಣೆಯು ಸ್ಥಿರವಾಗಿದೆ. 10 ಗ್ರಾಂ ಚಿನ್ನದ ದರವು (ಶೇ 99.9 ಪರಿಶುದ್ಧತೆ) ₹1,400 ಏರಿಕೆಯಾಗಿದ್ದು, ₹79,300 ಆಗಿದೆ. ಸ್ಟ್ಯಾಂಡರ್ಡ್‌ ಚಿನ್ನದ (ಶೇ 99.5 ಶುದ್ಧತೆ) ದರವು 10 ಗ್ರಾಂಗೆ ಇಷ್ಟೇ ಪ್ರಮಾಣದಲ್ಲಿ ಹೆಚ್ಚಳವಾಗಿ, ₹78,900 ಆಗಿದೆ. ಬೆಳ್ಳಿ ಬೆಲೆಯು ಕೆ.ಜಿಗೆ ₹93 ಸಾವಿರ ಇದೆ ಎಂದು ಅಖಿಲ ಭಾರತ ಸರಾಫ್‌ ಅಸೋಸಿಯೇಷನ್‌ ತಿಳಿಸಿದೆ. ಆಭರಣ ತಯಾರಕರು ಮತ್ತು ಖರೀದಿದಾರರಿಂದ ಹೆಚ್ಚಿದ

ಚಿನ್ನ ಧಾರಣೆಯಲ್ಲಿ ದಿಢೀರ್ ಏರಿಕೆ| ಇಂದಿನ ದರ ಎಷ್ಟು? Read More »

ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ| ಕನಿಷ್ಠ 38 ಸಾವು; ಹಲವರಿಗೆ ಗಾಯ

ಸಮಗ್ರ ನ್ಯೂಸ್: ವಾಯುವ್ಯ ಪಾಕಿಸ್ತಾನದ ಬುಡಕಟ್ಟು ಪ್ರದೇಶದಲ್ಲಿ ಗುರುವಾರ ಭಯೋತ್ಪಾದಕರು ಪ್ರಯಾಣಿಕರ ವಾಹನಗಳ ಮೇಲೆ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ 38 ಜನರು ಸಾವನ್ನಪ್ಪಿದ್ದಾರೆ ಮತ್ತು 29 ಜನರು ಗಾಯಗೊಂಡಿದ್ದಾರೆ ಎಂದು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಮುಖ್ಯ ಕಾರ್ಯದರ್ಶಿ ನದೀಮ್ ಅಸ್ಲಂ ಚೌಧರಿ ತಿಳಿಸಿದ್ದಾರೆ. ಕುರ್ರಾಮ್ ಬುಡಕಟ್ಟು ಜಿಲ್ಲೆಯಲ್ಲಿ ಸಂಭವಿಸಿದ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಮಹಿಳೆ ಮತ್ತು ಮಗು ಸೇರಿದ್ದಾರೆ ಎಂದು ಚೌಧರಿ ಹೇಳಿದರು, “ಇದು ದೊಡ್ಡ ದುರಂತ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ” ಎಂದು ಹೇಳಿದರು.

ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ| ಕನಿಷ್ಠ 38 ಸಾವು; ಹಲವರಿಗೆ ಗಾಯ Read More »

ನ. 26 ರಿಂದ ಡಿ.12: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೋತ್ಸವ ಸಂಭ್ರಮ| ಡಿ.7ರಂದು ಮಹಾರಥೋತ್ಸವ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಷಷ್ಠಿ ಮಹೋತ್ಸವಕ್ಕಂತೂ ಕಿಕ್ಕಿರಿದು ಜನ ಸೇರುತ್ತಾರೆ. ಅನೇಕ ಧಾರ್ಮಿಕ ಆಚರಣೆಗಳು, ವಿವಿಧ ಉತ್ಸವಾದಿ ಕಾರ್ಯಗಳು ಇಲ್ಲಿ ನಿರಂತರವಾಗಿ ನಡೆಯುತ್ತದೆ. ಈಗಾಗಲೇ ಚಂಪಾ ಷಷ್ಠಿ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಸಿದ್ಧತೆಗಳು ಕೂಡಾ ಭರದಿಂದ ಸಾಗುತ್ತಿದೆ. ಚಂಪಾಷಷ್ಠಿ ಮಹೋತ್ಸವದ ಹಿನ್ನೆಲೆ ಇದೇ ಬರುವ ನ.27ರಿಂದ ಡಿ.12ರವರೆಗೆ ಶ್ರೀ ಕ್ಷೇತ್ರದಲ್ಲಿ ಅನೇಕ ಪೂಜಾ ಕೈಂಕರ್ಯಗಳು ನಿರಂತರವಾಗಿ ನಡೆಯಲಿದೆ. ಷಷ್ಠಿ ಮಹೋತ್ಸವದ ಪ್ರಯುಕ್ತ ದೇಗುಲದ ಆಡಳಿತ ಮಂಡಳಿ ಭಕ್ತಾದಿಗಳಿಗೆ ಆಮಂತ್ರಣ ಪತ್ರಿಕೆಯನ್ನು ಕೂಡಾ ಬಿಡುಗಡೆ

ನ. 26 ರಿಂದ ಡಿ.12: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರೋತ್ಸವ ಸಂಭ್ರಮ| ಡಿ.7ರಂದು ಮಹಾರಥೋತ್ಸವ Read More »

ತಿಮ್ಮಪ್ಪನ ದರ್ಶನ ಇನ್ನಷ್ಟು ಸುಲಭ!! ಭಕ್ತರಿಗೆ ಸಿಹಿ ಸುದ್ದಿನೀಡಿದ ಆಂದ್ರ ಸರ್ಕಾರ

ಸಮಗ್ರ ನ್ಯೂಸ್: ತಿರುಪತಿ ತಿಮ್ಮಪ್ಪ ಸ್ವಾಮಿಯ ದರ್ಶನಕ್ಕೆ ಪ್ರತಿನಿತ್ಯ ಸಾಗರೋಪಾದಿಯಲ್ಲಿ ಭಕ್ತರು ಬರುವ ಕಾರಣ ಸಾಕಷ್ಟು ಭಕ್ತರಿಗೆ ತಿಮ್ಮಪ್ಪನ ದರ್ಶನ ಆಗುವ ವೇಳೆಗೆ ಜೀವ ಬಾಯಿಗೆ ಬಂದು ಬಿಟ್ಟಿರುತ್ತದೆ. ಕೆಲವೊಮ್ಮೆ ದೇವರ ದರ್ಶನವಾಗದೆ ಹಿಂದಿರುಗಬೇಕಾಗುತ್ತದೆ. ಸದ್ಯ, ಈ ಎಲ್ಲ ಸಮಸ್ಯೆಗಳನ್ನು ಅರಿತಿರುವ ಆಂಧ್ರ ಸರ್ಕಾರ ಹೊಸದೊಂದು ತೀರ್ಮಾನಕ್ಕೆ ಬಂದಿದ್ದು, ಇದು ತಿಮ್ಮಪ್ಪನ ಭಕ್ತರಿಗೆ ತಿರುಪತಿ ಲಡ್ಡುವಿನಷ್ಟೇ ಸಿಹಿ ಸುದ್ದಿಯಾಗಲಿದೆ. ತಿರುಪತಿ ತಿಮ್ಮಪ್ಪ ದೇಗುಲದ ಆಡಳಿತ ಮಂಡಳಿಯು ಕೃತಕ ಬುದ್ಧಿಮತ್ತೆ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಸಹಾಯದಿಂದ ಹೊಸ ದರ್ಶನ

ತಿಮ್ಮಪ್ಪನ ದರ್ಶನ ಇನ್ನಷ್ಟು ಸುಲಭ!! ಭಕ್ತರಿಗೆ ಸಿಹಿ ಸುದ್ದಿನೀಡಿದ ಆಂದ್ರ ಸರ್ಕಾರ Read More »