ರಾಜ್ಯ

ದಕ್ಷಿಣ ಕನ್ನಡದಲ್ಲಿ ಸುರಿದ‌ ಭಾರೀ ಮಳೆ|‌ ಕೆದಿಲದಲ್ಲಿ ಸಿಡಿಲಿಗೆ ಬಾಲಕ ಬಲಿ

ಸಮಗ್ರ ನ್ಯೂಸ್: ಭಾನುವಾರ (ನ.17) ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಸಿಡಿಲು ಮಿಂಚಿನೊಂದಿಗೆ ಭಾರಿ ಮಳೆಯಾಗಿದ್ದು, ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಪುತ್ತೂರು, ಕಡಬ, ಬಂಟ್ವಾಳ ಹಾಗೂ ಮಂಗಳೂರಿನ ಕೆಲವೆಡೆ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಲ್ಲಿಯೂ ಸಂಜೆ ವೇಳೆ ವರುಣನ ಅಬ್ಬರವಾಗಿದೆ. ಈ ನಡುವೆ ಬಂಟ್ವಾಳ ತಾಲೂಕಿನ ಕೆದಿಲದಲ್ಲಿ ಸಿಡಿಲಾಘಾತಕ್ಕೆ ಕುಸಿದು ಬಿದ್ದು ಹೈಸ್ಕೂಲ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಗಡಿಯಾರ ಸಮೀಪ ಮುರಿಯಾಜೆ ಮನೆಯ ಚಂದ್ರಹಾಸ […]

ದಕ್ಷಿಣ ಕನ್ನಡದಲ್ಲಿ ಸುರಿದ‌ ಭಾರೀ ಮಳೆ|‌ ಕೆದಿಲದಲ್ಲಿ ಸಿಡಿಲಿಗೆ ಬಾಲಕ ಬಲಿ Read More »

ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ಆರೋಪದ ಮೇಲೆ ಮಹಿಳೆ ಬಟ್ಟೆ ಹರಿದು ಹಲ್ಲೆ!

ಸಮಗ್ರ ನ್ಯೂಸ್:ಬೆಳಗಾವಿಯಲ್ಲಿ ಸಾರ್ವಜನಿಕವಾಗಿ ಮಹಿಳೆಯ ಬಟ್ಟೆಯನ್ನು ಹರಿದು ಹಾಕಿ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯ ವಡ್ಡರವಾಡಿಯಲ್ಲಿ ನಡೆದಿದೆ.ಮಗಳು ವೇಶ್ಯಾವಾಟಿಕೆ ಮಾಡುತ್ತಿದ್ದಾಳೆ ಎಂದು ಆರೋಪಿಸಿ ತಾಯಿ, ಮಗಳ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಪಕ್ಕದ ಮನೆಯ ಅಷ್ಟೇಕರ್ ಕುಟುಂಬದಿಂದ ಹಲ್ಲೆ ಮಾಡಲಾಗಿದ್ದು, ಸಂಬಂಧ ಇಲ್ಲದವರೆಲ್ಲ ಮನೆಗೆ ಬಂದು ಹೋಗುತ್ತಾರೆ. ವೇಶ್ಯಾವಾಟಿಕೆ ದಂಧೆ ಮಾಡುತ್ತಿದ್ದೀರಿ ಎಂದು ಹಲ್ಲೆ ನಡೆಸಲಾಗಿದೆ. ತಾಯಿ, ಮಗಳನ್ನು ಮನೆ ಬಿಡಿಸಲು ಜಗಳ ತೆಗೆದು ಹಲ್ಲೆ ಮಾಡಲಾಗಿದೆ ಎನ್ನಲಾಗಿದ್ದು, ತಮಗೆ ಜೀವ ಭಯ ಇದೆ

ಬೆಳಗಾವಿಯಲ್ಲಿ ವೇಶ್ಯಾವಾಟಿಕೆ ಆರೋಪದ ಮೇಲೆ ಮಹಿಳೆ ಬಟ್ಟೆ ಹರಿದು ಹಲ್ಲೆ! Read More »

ಉತ್ತರಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿದುರಂತ| 10 ನವಜಾತ ಶಿಶುಗಳು ಸಾವು

ಸಮಗ್ರ ನ್ಯೂಸ್: ಉತ್ತರಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ವಾಡ್ 9ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 10 ಮಕ್ಕಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಆತಂಕ ಇದೆ. ಶುಕ್ರವಾರ ರಾತ್ರಿ 10.30ರ ವೇಳೆಗೆ ನವಜಾತ ಶಿಶುಗಳ ವಾರ್ಡ್‌ನಲ್ಲಿ ಸಿಲಿಂಡ‌ರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡು ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಅವಘಡದ ಕುರಿತು ಎಚ್ಚರಿಕೆ ನೀಡಬೇಕಿದ್ದ ಅಲರಾಂ ಹೊಡೆಯದೇ

ಉತ್ತರಪ್ರದೇಶ: ಸರ್ಕಾರಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿದುರಂತ| 10 ನವಜಾತ ಶಿಶುಗಳು ಸಾವು Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ದರ್ಶನ್ ಮಧ್ಯಂತರ ಜಾಮೀನು ತಡೆಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಮಗ್ರ ನ್ಯೂಸ್: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ಸಮ್ಮತಿ ನೀಡಿದೆ. ಚಿಕಿತ್ಸೆಗೆ ಜಾಮೀನು ನೀಡುವಂತೆ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಅರ್ಜಿ ಪುರಸ್ಕರಿಸಿದ್ದ ಹೈಕೋರ್ಟ್‌ ಷರತ್ತುಬದ್ಧವಾಗಿ ಆರು ವಾರಗಳ ಜಾಮೀನು‌ ಮಂಜೂರು ಮಾಡಿತ್ತು. ‌ಅದಾದ ಮೇಲೆ ದರ್ಶನ್ ಅವರು ಜೈಲಿನಿಂದ ಬಿಡುಗಡೆ ಆಗಿದ್ದರು. ಸದ್ಯ ಬಿಜಿಎಸ್ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ| ದರ್ಶನ್ ಮಧ್ಯಂತರ ಜಾಮೀನು ತಡೆಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆಗೆ ಸರ್ಕಾರ ಗ್ರೀನ್ ಸಿಗ್ನಲ್ Read More »

ಗುಂಡ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ‌ ಹೋರಾಟದಲ್ಲಿ ಅನುಮತಿ ಇಲ್ಲದೆ‌ ಹೆದ್ದಾರಿ ತಡೆ| ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗಂಟಿಹೊಳೆ‌‌ ಸೇರಿ 15 ಮಂದಿ ವಿರುದ್ದ ಕೇಸು ದಾಖಲು

ಸಮಗ್ರ ನ್ಯೂಸ್: ನ.15ರಂದು ಮಧ್ಯಾಹ್ನ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಉಪ್ಪಿನಂಗಡಿ ಠಾಣಾ ಎಸ್.ಐ.ಅವಿನಾಶ್ ಅವರ ದೂರಿನಂತೆ ಈ ಕೇಸು ದಾಖಲಾಗಿದೆ. ನ.15ರಂದು ಸಿರಿಬಾಗಿಲು ಗ್ರಾಮದ ಲಕ್ಷ್ಮೀ ವೆಂಕಟೇಶ್ ದೇವಸ್ಥಾನದ ಮಾಡ ಮೈದಾನದಲ್ಲಿ

ಗುಂಡ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ‌ ಹೋರಾಟದಲ್ಲಿ ಅನುಮತಿ ಇಲ್ಲದೆ‌ ಹೆದ್ದಾರಿ ತಡೆ| ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗಂಟಿಹೊಳೆ‌‌ ಸೇರಿ 15 ಮಂದಿ ವಿರುದ್ದ ಕೇಸು ದಾಖಲು Read More »

ವೈದ್ಯೆಗೆ ಮೋಸ ಮಾಡಿದ್ದ ಪೊಲೀಸ್ ಪ್ರಕರಣಕ್ಕೆ ತಿರುವು – ವೈದ್ಯೆ ಅವಳಲ್ಲ ಅವನು!

ಸಮಗ್ರ ನ್ಯೂಸ್: ಬಸವನಗುಡಿ ಪೊಲೀಸ್ ಠಾಣೆಯ ಪಿಎಸ್‌ಐ ರಾಜಕುಮಾ‌ರ್ ಜೋಡಟ್ಟಿ ಅವರು ವೈದ್ಯೆಯೊಬ್ಬರಿಗೆ ಹಣ ವಂಚಿಸಿದ್ದಲ್ಲದೇ ಲೈಂಗಿಕ ಕಿರುಕುಳ ನೀಡಿದ್ದರೆಂದು ಕೇಳಿಬಂದಿದ್ದ ಆರೋಪಕ್ಕೆ ತೀವ್ರ ತಿರುವು ಸಿಕ್ಕಿದೆ. ಯುವಕನೊಬ್ಬ ಮಹಿಳೆಯ ಹೆಸರಿನಲ್ಲಿ ಫೇಸ್ ಬುಕ್ ನಕಲಿ ಖಾತೆ ತೆಗೆದು ಪೊಲೀಸ್ ಪಿಎಸ್‌ಐ ರಾಜ್ ಕುಮಾರ್ ಜೋಡಟ್ಟಿಯವರಿಗೆ ವಂಚಿಸಿರುವ ಸಾಧ್ಯತೆ ಇರುವುದಾಗಿ ಪೊಲೀಸ್ ಆಯುಕ್ತ ದಯಾನಂದ ಅವರು ಮಾಹಿತಿ ನೀಡಿದ್ದಾರೆ. ವೈದ್ಯೆ ಸ್ವಾತಿ ದ್ಯಾಮಕ್ಕನವರ ಹೆಸರಿನಲ್ಲಿ ನಕಲಿ ಖಾತೆ ತೆಗೆದಿದ್ದ ಸಿದ್ದಪ್ಪ ದ್ಯಾಮಕ್ಕನವರ ಎಂಬ ವ್ಯಕ್ತಿ ಪೊಲೀಸ್‌ ಪಿಎಸ್‌ಐ

ವೈದ್ಯೆಗೆ ಮೋಸ ಮಾಡಿದ್ದ ಪೊಲೀಸ್ ಪ್ರಕರಣಕ್ಕೆ ತಿರುವು – ವೈದ್ಯೆ ಅವಳಲ್ಲ ಅವನು! Read More »

ನ.20ರಂದು ರಾಜ್ಯಾದ್ಯಂತ ‌ಮದ್ಯ ಮಾರಾಟ ಬಂದ್|

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮದ್ಯ ಮಾರಾಟಗಾರರಿಂದ ಹಣ ವಸೂಲಿ ಹಾಗೂ ಅಬಕಾರಿ ಇಲಾಖೆಯಲ್ಲಿನ ಮಿತಿ ಮೀರಿದ ಭ್ರಷ್ಟಾಚಾರವನ್ನು ಸರಿಪಡಿಸಬೇಕೆಂದು ಆಗ್ರಹಿಸಿ ರಾಜ್ಯ ಮದ್ಯ ಮಾರಾಟಗಾರರರು ನ.20ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನವೆಂಬರ್ 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗುತ್ತಿದೆ ಎಂದು ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಹೇಳಿದ್ದಾರೆ. ಸಿಎಂ, ಅಬಕಾರಿ ಸಚಿವರು, ಮತ್ತು ಪೊಲೀಸರ ಜೊತೆ ನಮ್ಮ ಸಭೆ ಆಗಬೇಕು.

ನ.20ರಂದು ರಾಜ್ಯಾದ್ಯಂತ ‌ಮದ್ಯ ಮಾರಾಟ ಬಂದ್| Read More »

ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ| ಇಂದಿನ ದರ ಎಷ್ಟು ಇದೆ ನೋಡಿ…

ಸಮಗ್ರ ನ್ಯೂಸ್: ಚಿನ್ನದ ಬೆಲೆ ಮತ್ತೆ ಮತ್ತೆ ಕುಸಿದು ಬೀಳುತ್ತಿದೆ, ಅದರಲ್ಲೂ ಕಳೆದ ಕೆಲವು ದಿನಗಳಿಂದ ಕೂಡ ನಿರಂತರವಾಗಿ ಚಿನ್ನದ ಬೆಲೆ & ಬೆಳ್ಳಿ ಬೆಲೆ ಕಡಿಮೆ ಆಗುತ್ತಿದೆ. ಈ ರೀತಿ ಚಿನ್ನದ ಬೆಲೆಯಲ್ಲಿ ಕುಸಿತ ಕಾಣುತ್ತಿರುವುದು ಮದುವೆ ಸೀಸನ್‌ಗೆ ಮೊದಲು ಖುಷಿ ನೀಡುತ್ತಿದೆ. ಯಾಕಂದ್ರೆ ಈಗ ಮದುವೆಗಳಿಗೆ ಅಂತಾನೆ ಮೊದಲೇ ಚಿನ್ನಕ್ಕೆ ಆರ್ಡರ್ ನೀಡಲು ಜನರು ಕಾಯುತ್ತಿದ್ದರು. ಈ ಸಮಯದಲ್ಲೇ ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿದೆ. ಅದರಲ್ಲೂ ಒಂದೇ ದಿನದಲ್ಲಿ ಚಿನ್ನದ ಬೆಲೆಯಲ್ಲಿ ಬರೋಬ್ಬರಿ

ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ| ಇಂದಿನ ದರ ಎಷ್ಟು ಇದೆ ನೋಡಿ… Read More »

ಪಾಕಿಸ್ತಾನದ ಮತ್ತೊಬ್ಬ ಟಿಕ್ ಟಾಕ್ ಸ್ಟಾರ್ ಖಾಸಗಿ ವಿಡಿಯೊ ಲೀಕ್; ಇದು ಪ್ರಚಾರದ ಗಿಮಿಕಾ.ಎಂದ ನೆಟ್ಟಿಗರು

ಸಮಗ್ರ ನ್ಯೂಸ್:ಪಾಕಿಸ್ತಾನದ ಟಿಕ್ ಟಾಕ್ ತಾರೆ ಇಮ್ಮಾ ರೆಹಮಾನ್ ಅವರ ಅಶ್ಲೀಲ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಮಲಿಕ್ ನಂತರ ಇಮ್ಮಾ ಅವರ ಖಾಸಗಿ ವಿಡಿಯೊಗಳು ವೈರಲ್(Viral Video) ಆದ ಕಾರಣ ಫಾಲೋವರ್ಸ್‌ಗಳನ್ನು ಸೆಳೆಯಲು ಉದ್ದೇಶಪೂರ್ವಕವಾಗಿ ಹಲವಾರು ಸೋಶಿಯಲ್ ಮೀಡಿಯಾಗಳಲ್ಲಿ ಖಾಸಗಿ ವಿಡಿಯೊಗಳನ್ನು ಹರಿಬಿಡುತ್ತಿದ್ದಾರೆ ಎಂದು ಹಲವರು ಆರೋಪಿಸಿದ್ದಾರೆ. ಇಮ್ಮಾ ದುರದೃಷ್ಟವಶಾತ್ ಗೌಪ್ಯತೆ ಉಲ್ಲಂಘನೆಯ ಆರೋಪಕ್ಕೆ ಸಿಲುಕಿದ್ದಾರೆ. ಇದರಿಂದ ಮುಜುಗರಕ್ಕೊಳಗಾದ ಇಮ್ಮಾ ತಮ್ಮ ಟಿಕ್ ಟ್ಯಾಕ್ ಹಾಗೂ ಇನ್ಸಾಗ್ರಾಂ ಖಾತೆಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ. ಮತ್ತು ಎಲ್ಲಿಯವರೆಗೆ ಈ ವಿಡಿಯೊ

ಪಾಕಿಸ್ತಾನದ ಮತ್ತೊಬ್ಬ ಟಿಕ್ ಟಾಕ್ ಸ್ಟಾರ್ ಖಾಸಗಿ ವಿಡಿಯೊ ಲೀಕ್; ಇದು ಪ್ರಚಾರದ ಗಿಮಿಕಾ.ಎಂದ ನೆಟ್ಟಿಗರು Read More »

ರಾಜ್ಯ ಸರ್ಕಾರದಿಂದ 2025ರ ಸಾರ್ವತ್ರಿಕ ರಜಾಪಟ್ಟಿ ಬಿಡುಗಡೆ| 19 ಸಾರ್ವತ್ರಿಕ, 20 ಪರಿಮಿತ ರಜಾಪಟ್ಟಿಗೆ ಅನುಮೋದನೆ

ಸಮಗ್ರ ನ್ಯೂಸ್: ರಾಜ್ಯ ಸರಕಾರ 2025ನೇ ಸಾಲಿನ ಸಾರ್ವತ್ರಿಕ ಹಾಗೂ ಪರಿಮಿತ ರಜಾ ದಿನಗಳನ್ನು ಘೋಷಣೆ ಮಾಡಿದೆ. ನ.14ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪಟ್ಟಿಗೆ ಒಪ್ಪಿಗೆ ನೀಡಲಾಗಿದೆ. ಒಟ್ಟು 19 ಸಾರ್ವತ್ರಿಕ ರಜೆ ನೀಡಲಾಗಿದ್ದರೆ, 20 ಪರಿಮಿತ ರಜೆಯನ್ನು ನೀಡಲಾಗಿದೆ. ಸಾರ್ವತ್ರಿಕ ರಜಾ ದಿನಗಳು14.01.2025 ಉತ್ತರಾಯಣ ಪುಣ್ಯಕಾಲ,ಮಕರ ಸಂಕ್ರಾಂತಿ26.02.2025 ಮಹಾ ಶಿವರಾತ್ರಿ31.03.2025 ಖುತುಬ್‌-ಎ-ರಂಜಾನ್‌10.04.2025 ಮಹಾವೀರ ಜಯಂತಿ14.04.2025 ಬಿ.ಆರ್‌. ಅಂಬೇಡ್ಕರ್‌ ಜಯಂತಿ18.04.2025 ಗುಡ್‌ ಫ್ರೈಡೇ30.04.2025 ಬಸವ ಜಯಂತಿ, ಅಕ್ಷಯ ತೃತೀಯಾ01.05.2025 ಕಾರ್ಮಿಕ ದಿನಾಚರಣೆ07.06.2025 ಬಕ್ರೀದ್‌15.08.2025 ಸ್ವಾತಂತ್ರ್ಯ

ರಾಜ್ಯ ಸರ್ಕಾರದಿಂದ 2025ರ ಸಾರ್ವತ್ರಿಕ ರಜಾಪಟ್ಟಿ ಬಿಡುಗಡೆ| 19 ಸಾರ್ವತ್ರಿಕ, 20 ಪರಿಮಿತ ರಜಾಪಟ್ಟಿಗೆ ಅನುಮೋದನೆ Read More »