ರಾಜ್ಯ

ದಯವಿಟ್ಟು ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲಾ ಸಾಯಿಸಲು ಅನುಮತಿ ನೀಡಿ: ತಾಯಿ ಕಣ್ಣೀರು

ಸಮಗ್ರ ನ್ಯೂಸ್: ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲಾ ಮಗನ್ನ ಸಾಯಿಸಲು ಅನುಮತಿ ನೀಡಿ ಎಂದು ತಾಯಿಯೊಬ್ಬಳು ಕಣ್ಣಿರು ಹಾಕಿದ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ನಡೆದಿದೆ. ತುರುವೇಕೆರೆಯ ರೇಣುಕಮ್ಮ ಮಗ ಅಭಿಷೇಕ್ ಎಂಬಾತ ಗಾಂಜಾ ಮಾದಕ ಸೇವನೆಗೆ ದಾಸನಾಗಿದ್ದ.ಇದರಿಂದಾಗಿ ಸಾಕಷ್ಟು ಅವಾಂತರ ಆಗಿತ್ತು.ಗಾಂಜಾ ಮತ್ತಿನಲ್ಲಿ ಸಿಕ್ಕ ಸಿಕ್ಕವರ ಮೇಲೆ ಪುಂಡಾಟಿಕೆ ಜೊತೆಗೆ ಹೆಣ್ಣು ಮಕ್ಕಳ ಮೇಲೆ ಕೀಟಲೆ ಮಾಡುತ್ತಿದ್ದ. ಸಿಕ್ಕವರ ಮೇಲೆ ಗಲಾಟೆ ಹೊಡೆದಾಟ ಮಾಡಿಕೊಳ್ಳುತ್ತಿದ್ದ. ಇದರಿಂದಾಗಿ ರೇಣುಕಮ್ಮ ರೋಸಿಹೋಗಿದ್ದು, ಕಣ್ಣಿರು ಹಾಕಿದ್ದಾರೆ. ಸಣ್ಣ ಹೋಟೆಲ್ […]

ದಯವಿಟ್ಟು ನನ್ನ ಮಗನನ್ನು ಜೈಲಿಗೆ ಹಾಕಿ, ಇಲ್ಲಾ ಸಾಯಿಸಲು ಅನುಮತಿ ನೀಡಿ: ತಾಯಿ ಕಣ್ಣೀರು Read More »

ಗರ್ಭಿಣಿಯರಾದ ಒಂದೇ ಗ್ರಾಮದ 35 ಮದುವೆಯಾಗದ ಕನ್ಯೆಯರು; ಊರಿಗೆ ಊರೇ ಶಾಕ್

ಸಮಗ್ರ ನ್ಯೂಸ್:ಉತ್ತರ ಪ್ರದೇಶದ ವಾರಾಣಸಿಯ ರಮ್ನಾ ಎಂಬ ಗ್ರಾಮದಲ್ಲಿ ಯುವತಿಯರು ಮುಜುಗರಕ್ಕೊಳಗಾಗಿದ್ದು, ಪೋಷಕರು ಒಂದು ಕ್ಷಣ ಆತಂಕಕಕ್ಕೊಳಗಾಗಿದ್ದರು.ಸುಮಾರು 35ಕ್ಕೂ ಅಧಿಕ ಮದುವೆಯಾಗದ ಯುವತಿಯರ ಮೊಬೈಲ್‌ಗೆ ಗರ್ಭಿಣಿ ಮಹಿಳೆ ಎಂಬ ನೋಂದಣಿಯಾದ ದಾಖಲಾತಿಯ ಸಂದೇಶ ಬಂದ ಘಟನೆ ನಡೆದಿದೆ. ಗ್ರಾಮಸ್ಥರ ದೂರಿನ ಮೇರೆಗೆ ಸಂದೇಶ ಕಳುಹಿಸಲು ಕಾರಣನಾದ ಇಲಾಖೆಯ ಅಧಿಕಾರಿಗೆ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ. ಮಾಧ್ಯಮವೊಂದರ ಜೊತೆ ಮಾತನಾಡಿರುವ ವಾರಾಣಸಿಯ ಮುಖ್ಯ ವಿಕಾಸ ಅಧಿಕಾರಿ ಹಿಮಾಂಶು ನಾಗಪಾಲ್ ಘಟನೆ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದಾರೆ.ರಮ್ಯಾ ಗ್ರಾಮದ ಮದುವೆಯಾಗದ

ಗರ್ಭಿಣಿಯರಾದ ಒಂದೇ ಗ್ರಾಮದ 35 ಮದುವೆಯಾಗದ ಕನ್ಯೆಯರು; ಊರಿಗೆ ಊರೇ ಶಾಕ್ Read More »

ಕೇಂದ್ರದಿಂದ ಬೆಂಗಳೂರು – ಮಂಗಳೂರು ಎಕ್ಸ್‌ಪ್ರೆಸ್‌ ಹೈವೇಗೆ ಡಿಪಿಆರ್ ಟೆಂಡರ್ ಆಹ್ವಾನ| ಸಾವಿರಾರು ಮರಗಳ ಆಪೋಷನಕ್ಕೆ ಸಿದ್ಧತೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ಡಿಪಿಆರ್ ತಯಾರಿಸಲು ಟೆಂಡರ್‌ ಆಹ್ವಾನಿಸಿದೆ. ಇದರಿಂದ ಬೆಂಗಳೂರು-ಮಂಗಳೂರು ನಡುವಿನ ಪ್ರಯಾಣ ಸಮಯ ಗಣನೀಯವಾಗಿ ಕಡಿಮೆಯಾಗಲಿದೆ. ಈ ಹಿನ್ನೆಲೆಯಲ್ಲಿ ಡಿಪಿಆರ್ ತಯಾರಿಸಲು ಟೆಂಡರ್ ಕರೆಯಲಾಗಿದೆ. ಬೆಂಗಳೂರು ಟು ಮಂಗಳೂರು ಹೋಗಬೇಕು ಅಂದರೆ ಸುಮಾರು 350 ಕಿಮೀ, ಕನಿಷ್ಟ ಆರರಿಂದ ಏಳು ಗಂಟೆಗಳ ಕಾಲ ಬೇಕಾಗುತ್ತದೆ. ಆದರೆ ಈ ಸಮಯವನ್ನು ಕಡಿಮೆ ಮಾಡಲು ಈಗಾಗಲೇ ಕೇಂದ್ರ ಸರ್ಕಾರ ಬೆಂಗಳೂರು ಟು ಮಂಗಳೂರು ಎಕ್ಸ್ ಪ್ರೆಸ್ ವೇ ಕಾರಿಡಾರ್ ಮಾಡಲು ಸಿದ್ಧತೆ

ಕೇಂದ್ರದಿಂದ ಬೆಂಗಳೂರು – ಮಂಗಳೂರು ಎಕ್ಸ್‌ಪ್ರೆಸ್‌ ಹೈವೇಗೆ ಡಿಪಿಆರ್ ಟೆಂಡರ್ ಆಹ್ವಾನ| ಸಾವಿರಾರು ಮರಗಳ ಆಪೋಷನಕ್ಕೆ ಸಿದ್ಧತೆ Read More »

ವಕ್ಫ್ ನೋಟಿಸ್ ವಾಪಸ್ ಗೆ ಕರ್ನಾಟಕ ಸರ್ಕಾರ ಅಧಿಕೃತ ಆದೇಶ

ಸಮಗ್ರ ನ್ಯೂಸ್: ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ಭುಗಿಲೆದ್ದಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದು ಅಧಿಕೃತ ಆದೇಶವೂ ಹೊರಬಿದ್ದಿದೆ. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟಿಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಿರಿ. ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಸೂಚಿಸಿದ್ದರು. ಕಾನೂನು ಬಾಹಿರವಾಗಿ ಹಾಗೂ ನೋಟಿಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು

ವಕ್ಫ್ ನೋಟಿಸ್ ವಾಪಸ್ ಗೆ ಕರ್ನಾಟಕ ಸರ್ಕಾರ ಅಧಿಕೃತ ಆದೇಶ Read More »

ಮಾಜಿ ಕ್ರಿಕೆಟಿಗನ ಪುತ್ರ ಈಗ ‘ಅವನಲ್ಲ ಅವಳು’! ಲಿಂಗ ಬದಲಾವಣೆ ಮಾಡಿಕೊಂಡ ಆರ್ಯನ್

ಸಮಗ್ರ ನ್ಯೂಸ್: ಇಂಡಿಯಾದ ಮಾಜಿ ಆಟಗಾರ ಸಂಜಯ್ ಬಂಗಾರ್ ಪುತ್ರ ಆರ್ಯನ್ ಬಂಗಾರ್ ಅವರು ಲಿಂಗ ಬದಲಾವಣೆ ಚಿಕಿತ್ಸೆಗೆ ಒಳಗಾಗಿದ್ದು, ತಮ್ಮ ಹೆಸರನ್ನು ಅನಾಯಾ ಎಂದು ಹೆಸರು ಬದಲಾಯಿಸಿಕೊಂಡಿದ್ದಾರೆ. 23 ವರ್ಷದ ಆರ್ಯನ್ ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರು, ಭಾರತದ ಮಾಜಿ ನಾಯಕರಾದ ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿಯೊಂದಿಗೆ ಮತ್ತು ಅವರ ತಂದೆಯೊಂದಿಗೆ ಕೆಲವು ಹಳೆಯ ಚಿತ್ರಗಳನ್ನು ಪೋಸ್ಟ್ ಲಿಂಗ ಬದಲಾವಣೆಯ ಥೆರಪಿಯೊಂದಿಗೆ ಹಂಚಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಯ 10 ತಿಂಗಳ ನಂತರ, ಕ್ರಿಕೆಟಿಗ

ಮಾಜಿ ಕ್ರಿಕೆಟಿಗನ ಪುತ್ರ ಈಗ ‘ಅವನಲ್ಲ ಅವಳು’! ಲಿಂಗ ಬದಲಾವಣೆ ಮಾಡಿಕೊಂಡ ಆರ್ಯನ್ Read More »

ಚಾರ್ಮಾಡಿ ಘಾಟ್ ರಸ್ತೆ ದ್ವಿಪಥಕ್ಕೆ 343.74 ಕೋಟಿ ಬಿಡುಗಡೆ – ಸಂಸದ ಚೌಟ

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯ ದಶಕದ ಸಮಸ್ಯೆಗೆ ಮುಕ್ತಿ ಹಾಡುವ ಕಾಲ ಸನ್ನಿಹಿತವಾಗಿದ್ದು ಘಾಟ್‌ ಹೆದ್ದಾರಿ ದ್ವಿಪಥಗೊಳಿಸಲು ಕೆಂದ್ರ ಸರ್ಕಾರ 343.74 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದ್ದಾರೆ. ಮಂಗಳೂರಿನಿಂದ ಮೂಡಿಗೆರೆಯಾಗಿ ತುಮಕೂರಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟಿಯಲ್ಲಿ 75 ಕಿ.ಮೀ ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ದಿಯಾಗಲಿದೆ. ಆ ಮೂಲಕ ಚಾರ್ಮಾಡಿ ಘಾಟ್ ಪ್ರದೇಶದ ರಸ್ತೆಯು ದ್ವಿಪಥವಾಗಿ ಅಗಲೀಕರಣಗೊಳ್ಳಲಿದೆ. ಈ ಹೆದ್ದಾರಿ ಕಾಮಗಾರಿಯ ಟೆಂಡರ್ ಪ್ರಕ್ರಿಯೆ

ಚಾರ್ಮಾಡಿ ಘಾಟ್ ರಸ್ತೆ ದ್ವಿಪಥಕ್ಕೆ 343.74 ಕೋಟಿ ಬಿಡುಗಡೆ – ಸಂಸದ ಚೌಟ Read More »

ಪುತ್ತೂರು: ಗೃಹಲಕ್ಷ್ಮಿ ಹಣದಿಂದ ಪತಿಗೆ ಸ್ಕೂಟರ್ ಕೊಡಿಸಿದ‌ ಪತ್ನಿ

ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಇದರಲ್ಲಿ ಮಹತ್ವದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡಲಾಗುತ್ತಿದೆ. ಈಗಾಗಲೇ ಈ ಯೋಜನೆಯ ಹಣವನ್ನೇ ಬಳಸಿಕೊಂಡು ಮಹಿಳೆಯರು ಗೃಹ ಉಪಯೋಗಿ ವಸ್ತುಗಳು, ತಮ್ಮ ಮಕ್ಕಳಿಗೆ ವಾಹನಗಳನ್ನು ಕೊಡಿಸಿದ ಉದಾಹರಣೆಗಳಿವೆ. ಹಾಗೆಯೇ ಇದೀಗ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ಗೃಹಿಣಿಯೊಬ್ಬರು ತನ್ನ ಪತಿಗೆ ಸ್ಕೂಟರ್ ಕೊಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಹಾಗಾದರೆ ಎಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಪುತ್ತೂರು: ಗೃಹಲಕ್ಷ್ಮಿ ಹಣದಿಂದ ಪತಿಗೆ ಸ್ಕೂಟರ್ ಕೊಡಿಸಿದ‌ ಪತ್ನಿ Read More »

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ:ಆರೋಪಿ ಪಾಕಿಸ್ತಾನಕ್ಕೆ ಪರಾರಿ

ಸಮಗ್ರ ನ್ಯೂಸ್:ನಗರದ ಬ್ರೂಕ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ ಆರನೇ ಆರೋಪಿ ಫೈಸಲ್ ಎಂಬಾತ ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿದ್ದಾನೆ’ ಎಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಶಂಕೆ ವ್ಯಕ್ತಪಡಿಸಿದೆ. ಕಳೆದ ಮಾರ್ಚ್ 1ರಂದು ಕೆಫೆಗೆ ಬಂದಿದ್ದ ಶಂಕಿತನೊಬ್ಬ ಬ್ಯಾಗ್‌ನಲ್ಲಿ ತಂದಿದ್ದ ಕಚ್ಚಾ ಬಾಂಬ್ ಅನ್ನು ಕೆಫೆಯಲ್ಲಿ ಇಟ್ಟು ಪರಾರಿ ಆಗಿದ್ದ. ಗ್ರಾಹಕರು ಗಾಯಗೊಂಡಿದ್ದರು.ತನಿಖೆ ನಡೆಸಿದ್ದ ಎನ್‌ಐಎ ಅಧಿಕಾರಿಗಳು, ಪಶ್ಚಿಮ ಬಂಗಾಳದಲ್ಲಿ ಶಂಕಿತ ಉಗ್ರರಾದ ಮುಸಾವೀ‌ರ್ ಹುಸೇನ್ ಶಾಜೀದ್‌ ಹಾಗೂ ಅಬ್ದುಲ್ ಮಥೀನ್ ಅಹ್ಮದ್ ತಾಹಾ ಅವರನ್ನು

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ:ಆರೋಪಿ ಪಾಕಿಸ್ತಾನಕ್ಕೆ ಪರಾರಿ Read More »

ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ದೇಶದ ಹಲವು ರಾಜ್ಯಗಳಲ್ಲಿ ಮತ್ತೊಂದು ಭಾರೀ ಮಳೆ ಸುರಿಯುವ ಸೂಚನೆ ಸಿಕ್ಕಿದೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಐದು ದಿನಗಳ ಕಾಲ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಒಣಹವೆ ಮಾತ್ರ ಕಾಣಿಸಿಕೊಳ್ಳುತ್ತಿದೆ. ಆದರೆ ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »

“ಗಂಡಾಗಿದ್ದರೆ ಪೊಲೀಸ್‌ಗೆ ಹೊಡಿ” ಎಂದ ತಾಯಿ| ತಾಯಿ ಮಾತು ವೇದವಾಕ್ಯ ಎಂದು ತಿಳಿದವ ಹೊಡೆದೇ ಬಿಟ್ಟ!! ಮುಂದೇನಾಯ್ತು?

ಸಮಗ್ರ ನ್ಯೂಸ್: ತಾಯಿ ಮತ್ತು ಮಗನ ನಡುವಿನ ಜಗಳದಿಂದ ಒಂದು ಅಹಿತಕರ ಘಟನೆ ನಡೆದಿದೆ. ಠಾಣೆಯಲ್ಲಿ ಜಗಳದ ವೇಳೆ ತಾಯಿಯ ಪ್ರಚೋದನೆಯಿಂದ ಮಗ ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಹಲ್ಲೆಗೊಳಗಾದ ಪಿಎಸ್‌ಐ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಆರೋಪಿಯನ್ನು ಬಂಧಿಸಲಾಗಿದೆ. ತಾಯಿಯ ಮಾತಿನಿಂದ ಪ್ರಚೋದನೆಗೊಂಡ ಮಗ ಮಹಿಳಾ ಪಿಎಸ್‌ಐ (PSI) ಮೇಲೆ ಹಲ್ಲೆ ಮಾಡಿದ್ದಾನೆ. ಮಧಸೂದನ್ ಹಲ್ಲೆ ಮಾಡಿದ ಆರೋಪಿ. ಬಿಇ ಡ್ರಾಪ್‌ಔಟ್ ಆಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮುಕ್ತಿನಾಥೇಶ್ವರ

“ಗಂಡಾಗಿದ್ದರೆ ಪೊಲೀಸ್‌ಗೆ ಹೊಡಿ” ಎಂದ ತಾಯಿ| ತಾಯಿ ಮಾತು ವೇದವಾಕ್ಯ ಎಂದು ತಿಳಿದವ ಹೊಡೆದೇ ಬಿಟ್ಟ!! ಮುಂದೇನಾಯ್ತು? Read More »