ರಾಜ್ಯ

SBI ಗ್ರಾಹಕರೇ… ವಾಟ್ಸಾಪ್ ನಲ್ಲಿ ಈ ‘ಸಂದೇಶ’ ಬಂದಿದೆಯೇ? ಹಾಗಾದ್ರೆ ಈ ಸ್ಟೋರಿ ಓದಿ…

ಸಮಗ್ರ ನ್ಯೂಸ್: ನೀವು ಸ್ಟೇಟ್ ಬ್ಯಾಂಕ್‌ ಆಫ್‌ ಇಂಡಿಯಾ (SBI) ಬಳಕೆದಾರರಾಗಿದ್ದರೆ,ಬ್ಯಾಂಕ್‌ನ ಹೆಸರಿನಲ್ಲಿ ಜನರಿಗೆ ಸಂದೇಶಗಳನ್ನು ಕಳುಹಿಸಲಾಗುತ್ತಿದ್ದು, ಈ ಸಂದೇಶಗಳಲ್ಲಿ ಲಿಂಕ್ ನೀಡಲಾಗುತ್ತದೆ. ಈ ಲಿಂಕ್ ಕ್ಲಿಕ್ ಮಾಡಲು ಬಳಕೆದಾರರಿಗೆ ಆಕರ್ಷಕ ಕೊಡುಗೆಗಳ ಆಮಿಷ ಒಡ್ಡಲಾಗುತ್ತಿದೆ. ಎಸ್‌ಬಿಐ ಬಳಕೆದಾರರಲ್ಲೂ ಇದೇ ರೀತಿಯ ವಂಚನೆ ನಡೆಯುತ್ತಿದೆ. ಈ ಬಗ್ಗೆ ಎಸ್‌ಬಿಐ ಬಳಕೆದಾರರಿಗೆ ಎಚ್ಚರಿಕೆಯನ್ನೂ ನೀಡಿದೆ.ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ (SBI) ತನ್ನ ಗ್ರಾಹಕರಿಗೆ ಈ ಕುರಿತು ಎಚ್ಚರಿಕೆ ನೀಡಿದ್ದು, ಈ ಸಂದೇಶಗಳನ್ನು WhatsApp ಮತ್ತು SMS ಮೂಲಕ ಕಳುಹಿಸಲಾಗುತ್ತಿದೆ. […]

SBI ಗ್ರಾಹಕರೇ… ವಾಟ್ಸಾಪ್ ನಲ್ಲಿ ಈ ‘ಸಂದೇಶ’ ಬಂದಿದೆಯೇ? ಹಾಗಾದ್ರೆ ಈ ಸ್ಟೋರಿ ಓದಿ… Read More »

ಬೆಂಗಳೂರಲ್ಲಿ 40 ಸಾವಿರ ಲಂಚ ಪಡೆಯುವಾಗ, ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ!

ಸಮಗ್ರ ನ್ಯೂಸ್: 40,000 ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಹಾಯಕ ಡ್ರಗ್ಸ್ ಕಂಟ್ರೋಲ‌ರ್ ಅಧಿಕಾರಿ ಅಜಯ್ ಡಿ.ಶಾ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೊನ್ನೇಲ್ ಮೆಡಿಕಲ್ ಶಾಪ್ ಲೈಸೆನ್ಸ್ ಗೆ ಸುಬ್ರಮಣ್ಯ ಎನ್ನುವವರು ಅರ್ಜಿ ಹಾಕಿದ್ದರು. ಮೆಡಿಕಲ್ ಶಾಪ್ ಗೆ ಲೈಸೆನ್ಸ್ ನೀಡಲು ಲಂಚಕ್ಕೆ ಅಜಯ್ ಡಿಮ್ಯಾಂಡ್ ಮಾಡಿದ್ದರು.ಸುಬ್ರಮಣ್ಯ ಬಳಿ ಕಾರಿನಲ್ಲಿ 40,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಬೆಂಗಳೂರಲ್ಲಿ 40 ಸಾವಿರ ಲಂಚ ಪಡೆಯುವಾಗ, ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ! Read More »

ಕಾರ್ಕಳ: ಪ್ರಿಯತಮನ ಜೊತೆ ಸೇರಿ ಪತಿಯ ಕೊಲೆಗೈದ ಪ್ರಕರಣ| ತನಿಖೆಯನ್ನು ಹಳ್ಳ ಹಿಡಿಸಲಾಗುತ್ತಿದೆ ಎಂದು ಮೃತನ ಸಹೋದರ ಆರೋಪ

ಸಮಗ್ರ ನ್ಯೂಸ್: ಕಾರ್ಕಳ ತಾಲೂಕಿನ ಅಜೆಕಾರು ಎಂಬಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಪತ್ನಿಯೇ ಕೊಂದ ಪ್ರಕರಣ ಕೆಲವು ದಿನಗಳ ಹಿಂದೆ ಸಂಭವಿಸಿತ್ತು. ಇದೀಗ ಈ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಇದೇ ವೇಳೆ ತನಿಖೆಯ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಆರೋಪಿ ಆರ್ಥಿಕವಾಗಿ ಪ್ರಬಲನಾಗಿದ್ದು ತನಿಖೆಯನ್ನು ಹಳ್ಳ ಹಿಡಿಸುವ ಕೆಲಸ ನಡೆಯುತ್ತಿದೆ ಎಂದು ಮೃತ ಬಾಲಕೃಷ್ಣ ಪೂಜಾರಿ ಸಹೋದರ ಪ್ರಕಾಶ್‌ ಪೂಜಾರಿ ಗಂಭೀರ ಆರೋಪ ಮಾಡಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಲಕೃಷ್ಣ ಪೂಜಾರಿ ಸಾವಿಗೂ

ಕಾರ್ಕಳ: ಪ್ರಿಯತಮನ ಜೊತೆ ಸೇರಿ ಪತಿಯ ಕೊಲೆಗೈದ ಪ್ರಕರಣ| ತನಿಖೆಯನ್ನು ಹಳ್ಳ ಹಿಡಿಸಲಾಗುತ್ತಿದೆ ಎಂದು ಮೃತನ ಸಹೋದರ ಆರೋಪ Read More »

ಹಾಸನಾಂಬೆ ದೇವಿಗೆ ಹರಿದು ಬಂದ ದಾಖಲೆ ಮೊತ್ತದ ಕಾಣಿಕೆ| ವರ್ಷಕ್ಕೊಮ್ಮೆ ತೆರೆಯುವ ದೇಗುಲದ ಈ ವರ್ಷದ ಆದಾಯ ಎಷ್ಟು ಗೊತ್ತಾ?

ಸಮಗ್ರ ನ್ಯೂಸ್: ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದೇವಿ ಸನ್ನಿಧಿಗೆ ರಾಜ್ಯ ಸೇರಿದಂತೆ ಹಲವು ಕಡೆಗಳಿಂದ ಆಗಮಿಸುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಅಧಿಕವಾಗುತ್ತಿರುವುದರಿಂದ ದೇಗುಲದ ಆದಾಯದಲ್ಲೂ ಗಣನೀಯವಾಗಿ ಏರಿಕೆಯಾಗಿದೆ. ಈ ಬಾರಿಯಂತೂ ಹಾಸನಾಂಬೆ ದೇಗುಲದ ಒಟ್ಟು ಆದಾಯ 12.64 ಕೋಟಿ ರೂ.ಗೆ ಏರಿಕೆಯಾಗಿ ಈ ಹಿಂದಿನ ದಾಖಲೆಗಳ ಮುರಿದು ಹೊಸ ದಾಖಲೆಯ ಸೃಷ್ಟಿಸಿದೆ. ಕೊರೊನಾ ನಂತರದ ವರ್ಷಗಳಲ್ಲಿ ದೇವಿಯ ಹಿರಿಮೆ- ಗರಿಮೆ ಹೆಚ್ಚಳದ ಜತೆಗೆ ದೇವಿಯ ದರ್ಶನ ಮಾಡುವ ಭಕ್ತರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಹಾಗೆಯೇ ಭಕ್ತರ

ಹಾಸನಾಂಬೆ ದೇವಿಗೆ ಹರಿದು ಬಂದ ದಾಖಲೆ ಮೊತ್ತದ ಕಾಣಿಕೆ| ವರ್ಷಕ್ಕೊಮ್ಮೆ ತೆರೆಯುವ ದೇಗುಲದ ಈ ವರ್ಷದ ಆದಾಯ ಎಷ್ಟು ಗೊತ್ತಾ? Read More »

ವಾಹನ ಸವಾರರಿಗೆ ಗುಡ್ ನ್ಯೂಸ್..HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ಮುಂದಕ್ಕೆ

ಸಮಗ್ರ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ಹಲವು ಬಾರಿ ಗಡುವು ವಿಸ್ತರಣೆ ಮಾಡಿದೆ. ಆದರೂ ವಾಹನ ಮಾಲೀಕರು ತಮ್ಮ ವಾಹನಕ್ಕೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಮುಂದಾಗಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತೊಂದು ಅವಕಾಶ ನೀಡಿದೆ. ಈ ತಿಂಗಳು ಕೊನೆ ಅಂದರೆ ನವೆಂಬರ್ 30ರವರೆಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ಅವಧಿ ಮುಗಿದಿದ್ದರೂ ಸಹ ರಾಜ್ಯ ಸರ್ಕಾರ ವಾಹನ ಮಾಲೀಕರಿಗೆ ಮತ್ತೆ

ವಾಹನ ಸವಾರರಿಗೆ ಗುಡ್ ನ್ಯೂಸ್..HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ಮುಂದಕ್ಕೆ Read More »

ಮೂಡಿಗೆರೆ: ಚಾರ್ಮಾಡಿ ಘಾಟ್ ನಲ್ಲಿ ಬಂಡೆಗಲ್ಲಿಗೆ ಡಿಕ್ಕಿ ಹೊಡೆದ ಕಾರು| ಗಾಯಗೊಂಡ ಮಹಿಳೆ ಸ್ಥಿತಿ ಗಂಭೀರ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಂಡೆಕಲ್ಲಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೂವರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸೋಮವಾರ(ನ.4) ನಡೆದಿದೆ. ಕಾರು ಉಜಿರೆಯಿಂದ ಮೂಡಿಗೆರೆ ಮಾರ್ಗವಾಗಿ ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಕಾರಿನಲ್ಲಿ ಎಡಬದಿಯಲ್ಲಿ ಕುಳಿತ್ತಿದ್ದ ಮಹಿಳೆಗೆ ತಲೆ ಭಾಗಕ್ಕೆ ಗಂಭೀರ ಏಟಾಗಿದ್ದು ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೂಡಿಗೆರೆ: ಚಾರ್ಮಾಡಿ ಘಾಟ್ ನಲ್ಲಿ ಬಂಡೆಗಲ್ಲಿಗೆ ಡಿಕ್ಕಿ ಹೊಡೆದ ಕಾರು| ಗಾಯಗೊಂಡ ಮಹಿಳೆ ಸ್ಥಿತಿ ಗಂಭೀರ Read More »

ಉತ್ತರಾಖಂಡದಲ್ಲಿ ಭೀಕರ ಅಪಘಾತ : ಬಸ್ ಕಂದಕಕ್ಕೆ| 22 ಮಂದಿ ಸಾವು.!

ಸಮಗ್ರ ನ್ಯೂಸ್: ಉತ್ತರಾಖಂಡದ ಅರಾ ಜಿಲ್ಲೆಯ ರಾಮ್ನಗ‌ರ್ ಬಳಿ ಸೋಮವಾರ ಬೆಳಿಗ್ಗೆ ಬಸ್‌ ಕಮರಿಗೆ ಬಿದ್ದ ಪರಿಣಾಮ ಮಕ್ಕಳು ಸೇರಿ ಕನಿಷ್ಠ 22 ಪ್ರಯಾಣಿಕರು ಸಾವನ್ನಪ್ಪಿದ ಘಟನೆ ನಡೆದಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕ‌ರ್ ಸಿಂಗ್ ಧಾಮಿ ಹೇಳಿದ್ದಾರೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಉತ್ತರಾಖಂಡದಲ್ಲಿ ಭೀಕರ ಅಪಘಾತ : ಬಸ್ ಕಂದಕಕ್ಕೆ| 22 ಮಂದಿ ಸಾವು.! Read More »

ಹವಾಮಾನ ಸಮಾಚಾರ| ಮತ್ತೆ ವಾಯುಭಾರ ಕುಸಿತ| ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ದೇಶದಲ್ಲಿ ಕೆಲವು ದಿನಗಳ ಹಿಂದಷ್ಟೇ ‘ಡಾನಾ’ ಚಂಡಮಾರುತ ಅಬ್ಬರಿಸಿ ಕೊನೆಗೊಂಡಿದೆ. ಇದರ ಬೆನ್ನಲ್ಲೆ ಇದೀಗ ಮತ್ತೊಂದು ಚಂಡಮಾರುತ ಪರಿಚಲನೆ ಸಮುದ್ರ ಮಟ್ಟದಲ್ಲಿ ಸೃಷ್ಟಿಯಾಗಿದೆ. ಇದು ಏನೇನು ಅವಾಂತರ ಸೃಷ್ಟಿ ಮಾಡಲಿದೆಯೋ ಎಂದು ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಒಡಿಶಾ ರಾಜ್ಯದ ಜನರಲ್ಲಿ ಆತಂಕ ಶುರುವಾಗಿದೆ. ಹವಾಮಾನ ಇಲಾಖೆ ಪ್ರಕಾರ, ದಕ್ಷಿಣ ತಮಿಳುನಾಡು ಕರಾವಳಿ ಮತ್ತು ಪಕ್ಕದ ಶ್ರೀಲಂಕಾದ ಮೇಲೆ ಚಂಡಮಾರುತದ ಪರಿಚಲನೆಯು ಈಗ ದಕ್ಷಿಣ ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಇದೆ.

ಹವಾಮಾನ ಸಮಾಚಾರ| ಮತ್ತೆ ವಾಯುಭಾರ ಕುಸಿತ| ಭಾರೀ ಮಳೆ ಮುನ್ಸೂಚನೆ Read More »

ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಇನ್ನಿಲ್ಲ| ಆತ್ಮಹತ್ಯೆ ಮಾಡಿಕೊಂಡರಾ ‘ಮಠ’ ಡೈರೆಕ್ಟರ್

ಸಮಗ್ರ ನ್ಯೂಸ್: ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ

ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಇನ್ನಿಲ್ಲ| ಆತ್ಮಹತ್ಯೆ ಮಾಡಿಕೊಂಡರಾ ‘ಮಠ’ ಡೈರೆಕ್ಟರ್ Read More »

ನೀಲೇಶ್ವರ ಪಟಾಕಿ ಅವಘಡ; ಆಸ್ಪತ್ರೆಯಲ್ಲಿ ಮೂವರ ಸ್ಥಿತಿ ಗಂಭೀರ

ಸಮಗ್ರ ನ್ಯೂಸ್: ನೀಲೇಶ್ವರದ ದೈವಸ್ಥಾನದಲ್ಲಿ ಕಳಿಯಾಟ ಮಹೋತ್ಸವ ವೇಳೆ ಅ.28 ರಂದು ರಾತ್ರಿ ಸಂಭವಿಸಿದ ಸುಡುಮದ್ದು ದುರಂತದಲ್ಲಿ ಗಾಯಗೊಂಡವರ ಪೈಕಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ | ತಿಮ್ಮಯ್ಯ ತಿಳಿಸಿದ್ದಾರೆ. ಎ.ಜೆ ಆಸ್ಪತ್ರೆಯಲ್ಲಿ ಒಟ್ಟು 26 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಸಾಮಾನ್ಯ ಗಾಯಗಳೊಂದಿಗೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಹಾಗೂ ಓರ್ವರು

ನೀಲೇಶ್ವರ ಪಟಾಕಿ ಅವಘಡ; ಆಸ್ಪತ್ರೆಯಲ್ಲಿ ಮೂವರ ಸ್ಥಿತಿ ಗಂಭೀರ Read More »