ರಾಜ್ಯ

ನಾಳೆಯಿಂದ ನಾಗರಿಕರ ಮನೆಬಾಗಿಲಿಗೆ ರಾಜ್ಯ ಸರ್ಕಾರ| ಅಧಿಕೃತವಾಗಿ ಆರಂಭವಾಗಲಿದೆ ‘ಪ್ರಜಾಸೇವೆ’

ಸಮಗ್ರ ನ್ಯೂಸ್: ಸೆಪ್ಟೆಂಬರ್‌ 5ರಿಂದ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ “ಪ್ರಜಾಸೇವೆ” ಅಭಿಯಾನ ಆರಂಭವಾಗಲಿದ್ದು, ಪ್ರತಿ ಶನಿವಾರ ತಾಲೂಕು/ಹೋಬಳಿ ಮಟ್ಟದಲ್ಲಿ ಸಭೆಗಳು ನಡೆಯಲಿದ್ದು ಸ್ಥಳದಲ್ಲೇ ಅರ್ಜಿ ಹಾಗೂ ದೂರುಗಳನ್ನು ಆನ್‌ಲೈನ್‌ ಮೂಲಕ ಸಲ್ಲಿಸಲು ಗ್ರಾಮ ಒನ್‌ ಮಳಿಗೆಗಳ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಪ್ರತಿ ಶನಿವಾರ ಬೆಳಗ್ಗೆ 10:00 ಗಂಟೆಯಿಂದ ಸಂಜೆಯವರೆಗೆ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಸಭೆಗಳನ್ನು ಆಯೋಜಿಸಲಾಗುತ್ತದೆ. 1ನೇ ಮತ್ತು 3ನೇ ಶನಿವಾರ ತಾಲೂಕು ಮಟ್ಟದಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ

ನಾಳೆಯಿಂದ ನಾಗರಿಕರ ಮನೆಬಾಗಿಲಿಗೆ ರಾಜ್ಯ ಸರ್ಕಾರ| ಅಧಿಕೃತವಾಗಿ ಆರಂಭವಾಗಲಿದೆ ‘ಪ್ರಜಾಸೇವೆ’ Read More »

ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ| ಕೃಷ್ಣನೊಲಿಸಲು ಹೇಗೆ ಪೂಜಿಸಬೇಕು ಗೊತ್ತಾ?

ಸಮಗ್ರ ನ್ಯೂಸ್: ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ದೇಶಾದ್ಯಂತ ಭಕ್ತಿಭಾವದಿಂದ ಆಚರಿಸಲಾಗುತ್ತದೆ. ಭಗವಾನ್ ವಿಷ್ಣುವಿನ ಅವತಾರವೆಂದು ನಂಬಲಾಗಿರುವ ಶ್ರೀಕೃಷ್ಣನ ಜನ್ಮವನ್ನು ಸ್ಮರಿಸುವ ಈ ಪವಿತ್ರ ದಿನವು ಭಕ್ತರಿಗೆ ವಿಶೇಷ ಮಹತ್ವ ಹೊಂದಿದೆ. 2026ರಲ್ಲಿ ಕೃಷ್ಣ ಜನ್ಮಾಷ್ಟಮಿ ಸೆಪ್ಟೆಂಬರ್ 4ರಂದು ಶುಕ್ರವಾರ ಆಚರಿಸಲಾಗುತ್ತಿದೆ. ಕೆಲವು ವೈಷ್ಣವ ಸಂಪ್ರದಾಯಗಳಲ್ಲಿ ಸೆಪ್ಟೆಂಬರ್ 5ರಂದು ಆಚರಣೆ ನಡೆಯಲಿದೆ. ಪುರಾಣಗಳ ಪ್ರಕಾರ, ಮಥುರಾದಲ್ಲಿ ದೇವಕಿ ಮತ್ತು ವಸುದೇವರ ಎಂಟನೇ ಮಗನಾಗಿ ಶ್ರೀಕೃಷ್ಣ ಜನಿಸಿದನು. ಆ ಸಂದರ್ಭದಲ್ಲಿ ಮಥುರಾದ ರಾಜನಾಗಿದ್ದ ಕಂಸನಿಗೆ

ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ| ಕೃಷ್ಣನೊಲಿಸಲು ಹೇಗೆ ಪೂಜಿಸಬೇಕು ಗೊತ್ತಾ? Read More »

ಡಿಜೆ ಸೌಂಡ್ಸ್ ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: DJ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದ ಪಿಯು ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ತಕ್ಷಣ ಸ್ನೇಹಿತರು ಆತನನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸ್ನೇಹಿತನ ಮನೆಯ ಮದುವೆ ಸಂಭ್ರಮದಲ್ಲಿ DJ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು, ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯ ಕೋಸ್ಗಿಯಲ್ಲಿ ನಡೆದಿದೆ. ನಾರಾಯಣಪೇಟೆ ಜಿಲ್ಲೆಯ ಕೋಸ್ಗಿ ಪುರಸಭೆ ವ್ಯಾಪ್ತಿಯ ಪೊತಿರೆಡ್ಡಿಪಲ್ಲಿಗೆ ಸೇರಿದ ದಸ್ತಯ್ಯ ಹಾಗೂ ಲಕ್ಷ್ಮೀ ದಂಪತಿಯ ಪುತ್ರ ರವಿತೇಜ (17) ಮೃತಪಟ್ಟ ವಿದ್ಯಾರ್ಥಿ. ರವಿತೇಜ

ಡಿಜೆ ಸೌಂಡ್ಸ್ ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕ ಹೃದಯಾಘಾತದಿಂದ ಸಾವು Read More »

ಬೆಳ್ತಂಗಡಿ: ಅಪಘಾತದ ಗಾಯಾಳು ಚಿಕಿತ್ಸೆ ಫಲಿಸದೇ ಸಾವು

ಸಮಗ್ರ ನ್ಯೂಸ್: ಬೆಳ್ತಂಗಡಿಯ ಪಣಕಜೆ ಮಸೀದಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೃತ ಯುವಕನನ್ನು ಉಜಿರೆ ನಿವಾಸಿ ರಿನ್ಸ್ ಶಿಬಿ (24) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಪಣಕಜೆ ಮಸೀದಿ ಬಳಿ ತೆರಳುತ್ತಿದ್ದಾಗ ಟೆಂಪೋಗೆ ರಿನ್ಸ್ ಚಲಾಯಿಸುತ್ತಿದ್ದ ಬೈಕ್ ಹಿಂಬದಿಯಿಂದ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ರಿನ್ಸ್‌ನನ್ನು ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ

ಬೆಳ್ತಂಗಡಿ: ಅಪಘಾತದ ಗಾಯಾಳು ಚಿಕಿತ್ಸೆ ಫಲಿಸದೇ ಸಾವು Read More »

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ

ಸುಬ್ರಮಣ್ಯ: ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧಿಸಿ ಬಳ್ಪ ಹಾಗೂ ಸುಬ್ರಹ್ಮಣ್ಯದಲ್ಲಿ ಸೋಮವಾರ ಮಲೆನಾಡು ಜನಹಿತ ರಕ್ಷಣ ವೇದಿಕೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಬಳಿಕ ಬಳ್ಪ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸ ಲಾಯಿತು. ಎರಡನೇ ಹಂತದಲ್ಲಿ ಸುಬ್ರಹ್ಮಣ್ಯ ದಲ್ಲಿ ಪ್ರತಿಭಟನೆ ನಡೆಸಿ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸುಮಾರು 1,000ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಲೆನಾಡು ಜನಹಿತ ರಕ್ಷಣ ವೇದಿಕೆಯ ರಾಜ್ಯ ಸಂಚಾಲಕ ಕಿಶೋರ್ ಶಿರಾಡಿ ಮಾತನಾಡಿ,

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ Read More »

ಪುತ್ತೂರು ಜೆರಾಕ್ಸ್ ಅಂಗಡಿಯಲ್ಲಿ ಹಲ್ಲೆ ಪ್ರಕರಣ| ಬಂಧಿತ ಆರೋಪಿ ಸುದರ್ಶನ್ ಪೈ ಗೆ ಜಾಮೀನು

ಸಮಗ್ರ ನ್ಯೂಸ್: ದರ್ಬೆಯ ಜನಸೇವಾ ಕೇಂದ್ರವೊಂದರಲ್ಲಿ ತಾಂತ್ರಿಕ ದೋಷದಿಂದ ಗ್ರಾಹಕರ ದಾಖಲಾತಿ ಹಾನಿಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದೇ ಪ್ರಕರಣದ ಇನ್ನೋರ್ವ ಆರೋಪಿಯಾಗಿರುವ ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ ಅವರಿಗೆ ನಿರೀಕ್ಷಣಾ ಜಾಮೀನು ಲಭಿಸಿದೆ. ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಉಭಯ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಸುಳ್ಯ ತಾಲೂಕಿನ

ಪುತ್ತೂರು ಜೆರಾಕ್ಸ್ ಅಂಗಡಿಯಲ್ಲಿ ಹಲ್ಲೆ ಪ್ರಕರಣ| ಬಂಧಿತ ಆರೋಪಿ ಸುದರ್ಶನ್ ಪೈ ಗೆ ಜಾಮೀನು Read More »

ಸೆ.18: ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿಯಾದ ಬಳಿಕ ಡಿ.ಕೆ.ಶಿವಕುಮಾರ್‌ ಆಡಳಿತವನ್ನು ಜನರ ಬಳಿಗೆ ತೆಗೆದುಕೊಂಡು ಹೋಗಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಮತ್ತೂ ಒಂದು ಹೆಜ್ಜೆ ಮುಂದೆ ಹೋಗಿ ಇದೇ ಮೊದಲ ಬಾರಿಗೆ ಕರಾವಳಿ ಪ್ರದೇಶಗಳಲ್ಲಿ ಸಚಿವ ಸಂಪುಟ ಸಭೆ ನಡೆಸಲು ಮುಂದಾಗಿದ್ದಾರೆ.ಸೆ. 18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ ಮೊದಲು ಬೆಳಗಾವಿ, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇತ್ತೀಚೆಗೆ ಸಚಿವ ಸಂಪುಟ ಸಭೆಗಳು ನಡೆದಿದ್ದವು. ಸಾಮಾನ್ಯವಾಗಿ ರಾಜಧಾನಿ ಬೆಂಗಳೂರಿನಲ್ಲೇ ಸಚಿವ ಸಂಪುಟ ಸಭೆಗಳು ನಡೆಯುವುದು ವಾಡಿಕೆ.

ಸೆ.18: ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ Read More »

ಕರಾವಳಿಯಲ್ಲಿ ಜನ್ಮಾಷ್ಟಮಿ, ಕ್ರೈಸ್ತ ತೆನೆಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಿ| ಶಾಸಕ ವೇದವ್ಯಾಸ ಕಾಮತ್ ಮನವಿ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲ್ಪಡುವ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ಮರಿಯಮ್ಮ ಜಯಂತಿ/ತೆನೆ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸುವಂತೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ನಾಡಿನೆಲ್ಲೆಡೆ ಸಾಲು ಸಾಲು ಹಬ್ಬಗಳ ಸಂಭ್ರಮ ಮನೆಮಾಡಿದ್ದು, ಸೆಪ್ಟೆಂಬರ್ 4 ರಂದು ಕರಾವಳಿಯಾದ್ಯಂತ ಅತ್ಯಂತ ವಿಜೃಂಭಣೆಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು

ಕರಾವಳಿಯಲ್ಲಿ ಜನ್ಮಾಷ್ಟಮಿ, ಕ್ರೈಸ್ತ ತೆನೆಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಿ| ಶಾಸಕ ವೇದವ್ಯಾಸ ಕಾಮತ್ ಮನವಿ Read More »

ಬ್ಯಾಂಕ್ ಆಫ್ ಬರೋಡಾದಲ್ಲಿ 2482 ಹುದ್ದೆಗಳಿಗೆ ಅರ್ಜಿ ಆಹ್ವಾನ| ಸ್ಥಳೀಯ ಭಾಷೆ ಬಲ್ಲವರಿಗೆ ಆಧ್ಯತೆ

ಸಮಗ್ರ ನ್ಯೂಸ್: ಬ್ಯಾಂಕ್‌ ಸಿಬ್ಬಂದಿಗೆ ಸ್ಥಳಿಯ ಭಾಷೆ ಬರಬೇಕು ಎಂಬ ಕನ್ನಡಿಗರ ಹೋರಾಟಕ್ಕೆ ಜಯ ಸಂದಿದ್ದು, ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವ ಕನ್ನಡಿಗರಿಗೂ ಮಹತ್ವದ ಸುದ್ದಿ ಲಭಿಸಿದೆ. ಕರ್ನಾಟಕ ಸೇರಿದಂತೆ ದೇಶದ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಳೀಯ ಭಾಷೆಗಳನ್ನು ಮಾತನಾಡಬಲ್ಲ 2,482 ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಬ್ಯಾಂಕ್ ಆಫ್ ಬರೋಡಾ (ಬಿಒಬಿ) ನಿರ್ಧರಿಸಿದೆ. ಬ್ಯಾಂಕ್ ಸಿಬ್ಬಂದಿ ಗ್ರಾಹಕರಿಗೆ ಸ್ಥಳೀಯ ಭಾಷೆಗಳನ್ನು ಮಾತನಾಡಲು ಸಾಧ್ಯವಾಗುತ್ತಿಲ್ಲ ಎಂಬ ಕಳವಳ ಹಾಗೂ ಆಕ್ರೋಶ ಹೆಚ್ಚುತ್ತಿರುವ ಸಮಯದಲ್ಲಿ ಈ ನಿರ್ಧಾರ ಬಂದಿದೆ.

ಬ್ಯಾಂಕ್ ಆಫ್ ಬರೋಡಾದಲ್ಲಿ 2482 ಹುದ್ದೆಗಳಿಗೆ ಅರ್ಜಿ ಆಹ್ವಾನ| ಸ್ಥಳೀಯ ಭಾಷೆ ಬಲ್ಲವರಿಗೆ ಆಧ್ಯತೆ Read More »

ಕೊಪ್ಪಳ: ಜಾನಕಿಯಾಗಿ ವೆಂಕಟೇಶ್ ನ ಕೈಹಿಡಿದ ಶಹೀನಾ

ಸಮಗ್ರ ನ್ಯೂಸ್: ಕೊಪ್ಪಳದ ಭಾಗ್ಯನಗರದ ಕಲ್ಯಾಣ ಮಂಟಪದಲ್ಲಿ ನಡೆದ ಹಿಂದೂ ಯುವಕ-ಮುಸ್ಲಿಂ ಯುವತಿಯ ವಿವಾಹ ಸಾಮರಸ್ಯ, ಸೌಹಾರ್ದಕ್ಕೆ ಸಾಕ್ಷಿಯಾಯಿತು. ಪ್ರೀತಿಸಿದ ಯುವಕನಿಗಾಗಿ ಮುಸ್ಲಿಂ ಯುವತಿ ಧರ್ಮದ ಕಟ್ಟಳೆ ಮೀರಿ ಬಿಂದಿ ಧರಿಸಿ, ಸಪ್ತಪದಿ ತುಳಿದು ಹಿಂದೂ ಸಂಪ್ರದಾಯದಂತೆ ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದಾರೆ. ತಾಲೂಕಿನ ಅಳವಂಡಿ ಗ್ರಾಮದ ಚಂದ್ರಕಲಾ ಹಾಗೂ ಸಿದ್ದರಡ್ಡಿ ಬಿಸನಹಳ್ಳಿ ಎಂಬುವರ ಮಗ ವೆಂಕಟೇಶ್ ರಡ್ಡಿ ಹಾಗೂ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಚಿಲಕವಾಡ ಗ್ರಾಮದ ಮಮ್ತಾಜಿ ಹಾಗೂ ಬಾಷುಸಾಬ್‌ ಕಟ್ಟಿಮನಿ ಅವರ ಪುತ್ರಿ ಶಹೀನಾ ಮದುವೆ

ಕೊಪ್ಪಳ: ಜಾನಕಿಯಾಗಿ ವೆಂಕಟೇಶ್ ನ ಕೈಹಿಡಿದ ಶಹೀನಾ Read More »