ರಾಜ್ಯ

ಬಿಹಾರ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ‌ ನೇಮಕ

ಸಮಗ್ರ ನ್ಯೂಸ್: ಬಿಹಾರ ರಾಜಕೀಯದಲ್ಲಿ ಮಂಗಳವಾರ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಸುಮಾರು ಎರಡು ದಶಕಗಳ ಕಾಲ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆ ಬೆನ್ನಲ್ಲೇ, ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮುಖಂಡ ಹಾಗೂ ಹಾಲಿ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಬಿಹಾರ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಂಪೂರ್ಣ ಸಜ್ಜಾಗಿದ್ದಾರೆ. ವಿಶೇಷವೆಂದರೆ, ಬಿಹಾರದ ರಾಜಕೀಯ ಇತಿಹಾಸದಲ್ಲಿ […]

ಬಿಹಾರ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ‌ ನೇಮಕ Read More »

ಚಿಕ್ಕಮಗಳೂರಿನಲ್ಲಿ ನೀರಲ್ಲಿ ಮುಳುಗಿ‌ ವಿಟ್ಲ‌ ಮೂಲದ ಬಾಲಕ ಸಾವು

ಸಮಗ್ರ ನ್ಯೂಸ್: ಶಿಕ್ಷಕರೊಂದಿಗೆ ಈಜುಕೊಳಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮೂಲದ ಅನಿಕೇತ್ (14) ಮೃತಪಟ್ಟ ದುರ್ದೈವಿ. ಜಯಪುರದ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ಅನಿಕೇತ್ ವ್ಯಾಸಂಗ ಮಾಡುತ್ತಿದ್ದ. ರವಿವಾರ ಮಧ್ಯಾಹ್ನ ಶಿಕ್ಷಕರ ತಂಡದೊಂದಿಗೆ ಈಜುಕೊಳಕ್ಕೆ ತೆರಳಿದ್ದಾಗ ಈ ಅವಘಡ ಸಂಭವಿಸಿದೆ. ಈಜಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಅಸ್ವಸ್ಥಗೊಂಡ ಬಾಲಕನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ

ಚಿಕ್ಕಮಗಳೂರಿನಲ್ಲಿ ನೀರಲ್ಲಿ ಮುಳುಗಿ‌ ವಿಟ್ಲ‌ ಮೂಲದ ಬಾಲಕ ಸಾವು Read More »

2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಅಧಿಕೃತವಾಗಿ ಪ್ರಕಟಿಸಿದೆ. ಹೊಸ ವೇಳಾಪಟ್ಟಿಯಂತೆ ಮೇ 29, 2026 ರಿಂದ ಶಾಲೆಗಳು ಪುನರಾರಂಭಗೊಳ್ಳಲಿವೆ. ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮೇ 29ರಿಂದಲೇ ಶಾಲೆಗಳು ಪುನರಾರಂಭಗೊಳ್ಳಲಿವೆ. ಒಟ್ಟು 245 ದಿನಗಳ ಶಾಲಾ ಕರ್ತವ್ಯದ ಅವಧಿಯಲ್ಲಿ ದಸರಾ ಮತ್ತು

2026-27ನೇ ಸಾಲಿನ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ Read More »

ಬೆಳ್ತಂಗಡಿ: ಅತಿವೇಗದಲ್ಲಿ ಬಂದು ಪಾದಾಚಾರಿಗಳ ಮೇಲೆರಗಿದ ಓಮ್ನಿ ಕಾರು; ಮಹಿಳೆ ಗಂಭೀರ

ಸಮಗ್ರ ನ್ಯೂಸ್: ಅತಿ ವೇಗವಾಗಿ ಬಂದ ಓಮ್ನಿ ಕಾರೊಂದು ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಡಿಕ್ಕಿ ಹೊಡೆದ ಘಟನೆ ಕೊಲ್ಪೆದಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಮೂವರು ಪವಾಡಸದೃಶವಾಗಿ ಪಾರಾಗಿದ್ದಾರೆ. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ತಿರುವಿನಲ್ಲಿ ವೇಗವಾಗಿ ಬಂದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಪಾದಚಾರಿಗಳ ಮೇಲೆ ಉರುಳಿದೆ. ಅದೃಷ್ಟವಶಾತ್ ಮಕ್ಕಳಿಬ್ಬರು ಹಾಗೂ ಮಹಿಳೆಯೊಬ್ಬರು

ಬೆಳ್ತಂಗಡಿ: ಅತಿವೇಗದಲ್ಲಿ ಬಂದು ಪಾದಾಚಾರಿಗಳ ಮೇಲೆರಗಿದ ಓಮ್ನಿ ಕಾರು; ಮಹಿಳೆ ಗಂಭೀರ Read More »

24 ಗಂಟೆಗಳ ನಿರಂತರ ಕೂಚುಪುಡಿ ನೃತ್ಯ| ಗೋಲ್ಡನ್ ಬುಕ್ ನಲ್ಲಿ ದಾಖಲೆ ಬರೆದ ಸುಳ್ಯದ ಅಭಿಷೇಕ್

ಸುಳ್ಯ: ಇಲ್ಲಿನ ನೆಹರೂ ಸ್ಮಾರಕ ಮಹಾವಿದ್ಯಾಲಯದ ಎರಡನೇ ವರ್ಷದ ಬಿಎಸ್‌ಸಿ ವಿದ್ಯಾರ್ಥಿ ಮಂಡೆಕೋಲಿನ ಅಭಿಷೇಕ್ ಕಣೆಮರಡ್ಕ ನಿರಂತರ 24 ಗಂಟೆಗಳ ಕಾಲ ಕೂಚುಪುಡಿ ನೃತ್ಯ ಪ್ರದರ್ಶನ ನೀಡುವ ಮೂಲಕ ಗೋಲ್ಡನ್ ಬುಕ್ ದಾಖಲೆ ಬರೆದಿದ್ದಾರೆ. ನೆಹರೂ‌‌ ಸ್ಮಾರಕ ಕಾಲೇಜಿನ ಸಭಾಂಗಣದಲ್ಲಿ ಏ.11ರಂದು ಸಂಜೆ 6.30ರಿಂದ ಆರಂಭಗೊಂಡು ಏ.12ರ ಸಂಜೆ 6.30ರ ತನಕ ನಿರಂತರ 24 ಗಂಟೆ ಕುಚ್ಚುಪುಡಿ ನೃತ್ಯ ಮಾಡಿದರು. ಗೋಲ್ಡನ್ ಬುಕ್ ಆಪ್ ವಲ್ಡ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದು ದಾಖಲೆ ನಿರ್ಮಿಸಬೇಕೆಂಬ ಹಂಬಲದಿಂದ ಅಭಿಷೇಕ್ ಕುಚುಪುಡಿ

24 ಗಂಟೆಗಳ ನಿರಂತರ ಕೂಚುಪುಡಿ ನೃತ್ಯ| ಗೋಲ್ಡನ್ ಬುಕ್ ನಲ್ಲಿ ದಾಖಲೆ ಬರೆದ ಸುಳ್ಯದ ಅಭಿಷೇಕ್ Read More »

ಹವಾಮಾನ ವರದಿ| ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಬಿಸಿಗಾಳಿ ಮುನ್ಸೂಚನೆ| ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು, ಹವಾಮಾನ ಇಲಾಖೆಯು ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಒಣ ಹವೆಯ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಿದೆ. ರವಿವಾರದಂದು ಕಲಬುರಗಿಯಲ್ಲಿ ಅತ್ಯಾಧಿಕ ಉಷ್ಣಾಂಶ ದಾಖಲಾಗಿದ್ದು, ಗರಿಷ್ಟ ತಾಪಮಾನವು 41.6 ಸೆಲ್ಸಿಯಸ್‍ಗೆ ಏರಿಕೆಯಾಗಿದೆ. ಎ.13ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಮೈಸೂರು ಮತ್ತು ಚಾಮರಾಜನಗರ, ಎ.14ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ

ಹವಾಮಾನ ವರದಿ| ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಬಿಸಿಗಾಳಿ ಮುನ್ಸೂಚನೆ| ಎಲ್ಲೋ ಅಲರ್ಟ್ ಘೋಷಣೆ Read More »

ಕಡಬ: ಕುಮಾರಧಾರಾ ನದಿ ತೀರದಲ್ಲಿ ಕಾಡಾನೆಗಳ ಹಿಂಡು| ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ 102 ನೆಕ್ಕಿಲಾಡಿ ಹಾಗೂ ಕೋರಿಯರ್ ಸಮೀಪದ ಕುಮಾರಧಾರಾ ನದಿ ತೀರದಲ್ಲಿ ಶನಿವಾರ 8 ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. ನದಿ ತೀರದಲ್ಲಿ ಆನೆಗಳು ಗುಂಪಾಗಿ ಸಂಚರಿಸುತ್ತಿರುವ ದೃಶ್ಯವನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಷಯ ತಿಳಿಯುತ್ತಿದ್ದಂತೆ ಸುಬ್ರಹ್ಮಣ್ಯ ಹಾಗೂ ಪಂಜ ವಲಯದ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆನೆಗಳು ಜನವಸತಿ ಪ್ರದೇಶಕ್ಕೆ ನುಗ್ಗದಂತೆ ತಡೆಯಲು ಅರಣ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಾಡಾನೆಗಳನ್ನು ಅರಣ್ಯದತ್ತ

ಕಡಬ: ಕುಮಾರಧಾರಾ ನದಿ ತೀರದಲ್ಲಿ ಕಾಡಾನೆಗಳ ಹಿಂಡು| ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ Read More »

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ -ಮಗಳು ಇಬ್ಬರೂ ಪಾಸ್

ಸಮಗ್ರ ನ್ಯೂಸ್: “ಸಾಧಿಸುವ ಛಲವಿದ್ದರೆ ಸಾಧನೆಗೆ ವಯಸ್ಸು ಅಡ್ಡಿಯಾಗದು” ಎಂಬ ಮಾತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ. ರೋಡ್‌ನಲ್ಲಿ ನಡೆದ ಈ ಅಪರೂಪದ ಘಟನೆ ಸಾಕ್ಷಿಯಾಗಿದೆ. ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ತಾಯಿ ಮತ್ತು ಮಗಳು ಏಕಕಾಲಕ್ಕೆ ಉತ್ತೀರ್ಣರಾಗುವ ಮೂಲಕ ಜಿಲ್ಲೆಯ ಗಮನ ಸೆಳೆದಿದ್ದಾರೆ. ಬಿ.ಸಿ. ರೋಡ್ ಕೈಕಂಬ ನಿವಾಸಿಯಾಗಿರುವ ನೇತ್ರಾವತಿ ವಿ.ಆರ್. ಅವರು ವೃತ್ತಿಯಲ್ಲಿ ಗೃಹಿಣಿ. ಸಂಸಾರದ ಜವಾಬ್ದಾರಿಗಳ ನಡುವೆಯೂ ಶಿಕ್ಷಣ ಮುಂದುವರಿಸಬೇಕೆಂಬ ಹಳೆಯ ಕನಸನ್ನು ಅವರು ಕೈಬಿಟ್ಟಿರಲಿಲ್ಲ. ಈ ಬಾರಿ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ -ಮಗಳು ಇಬ್ಬರೂ ಪಾಸ್ Read More »

ಮಹೇಶ್ ತಿಮರೋಡಿಗೆ ಮತ್ತೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್| ಮೂರನೇ ಬಾರಿ ಗಡೀಪಾರು ಆದೇಶಕ್ಕೆ ತಡೆ

ಸಮಗ್ರ ನ್ಯೂಸ್: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡಿಪಾರು ಮಾಡಿ ಹೊರಡಿಸಿರುವ ಆದೇಶವನ್ನು ಏಪ್ರಿಲ್ 16ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಸೂಚನೆ ನೀಡಿದೆ. ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಹೋರಾಟ ನಡೆಸುತ್ತಿದ್ದ ವಿಚಾರದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ಪೊಲೀಸ್‌ ಠಾಣಾ ವ್ಯಾಪ್ತಿಗೆ 6 ತಿಂಗಳ ಕಾಲ ಗಡಿಪಾರು

ಮಹೇಶ್ ತಿಮರೋಡಿಗೆ ಮತ್ತೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್| ಮೂರನೇ ಬಾರಿ ಗಡೀಪಾರು ಆದೇಶಕ್ಕೆ ತಡೆ Read More »

ಹುಲಿಕಲ್ ಘಾಟ್ ನಲ್ಲಿ ಗುಡ್ಡ ಕುಸಿತ| ಮೂವರು ಕಾರ್ಮಿಕರು ಸಾವು; ನಾಲ್ಕು ಮಂದಿ ಗಂಭೀರ

ಸಮಗ್ರ ನ್ಯೂಸ್: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಗುರುವಾರ ಸಂಜೆ ಸಂಭವಿಸಿದ ಗುಡ್ಡ ಕುಸಿತದಲ್ಲಿ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಹುಲಿಕಲ್ ಘಾಟಿಯ ಚಂಡಿಕಾಂಬಾ ದೇವಾಲಯದ ಸಮೀಪವಿರುವ ಹೇರ್ ಪಿನ್ ತಿರುವಿನಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಗುರುವಾರ ಸಂಜೆ ಸುಮಾರು 6:30ರ ವೇಳೆಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಏಕಾಏಕಿ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ಈ ವೇಳೆ ಕೆಲಸ ಮಾಡುತ್ತಿದ್ದ ಏಳು ಮಂದಿ ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದರು.

ಹುಲಿಕಲ್ ಘಾಟ್ ನಲ್ಲಿ ಗುಡ್ಡ ಕುಸಿತ| ಮೂವರು ಕಾರ್ಮಿಕರು ಸಾವು; ನಾಲ್ಕು ಮಂದಿ ಗಂಭೀರ Read More »