ರಾಜ್ಯ

ಹೃದಯಘಾತಕ್ಕೆ ಬಲಿಯಾದ 5 ವರ್ಷದ ಬಾಲಕಿ

ಸಮಗ್ರ ನ್ಯೂಸ್: 5 ವರ್ಷದ ಬಾಲಕಿಗೆ ಹೃದಯಾಘಾತ ಆಗಿ ಸಾವು ಕಂಡ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯ ಜಮ್ಮಿಕುಂಟಾದಲ್ಲಿ ನಡೆದಿದೆ. ಉಕ್ಕುಲು (5) ಹಾರ್ಟ್ ಅಟ್ಯಾಕ್ ನಿಂದ ಸಾವು ಕಂಡ ಬಾಲಕಿ.ಜಮುನಾ ಹಾಗೂ ರಾಜು ದಂಪತಿಯ ಪುತ್ರಿ ಬೆಳಿಗ್ಗೆ ತೀವ್ರ ಅಸ್ವಸ್ಥಳಾಗಿದ್ದಳು. ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ವೈದ್ಯರು ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. ಆದ್ರೆ ಅಷ್ಟೊತ್ತಿಗೆ ಬಾಲಕಿ ಇಹಲೋಕ ತ್ಯಜಿಸಿದ್ದಾಳೆ. ಆಕೆಗೆ ಹೃದಯ ಸಂಬಂಧಿ ಕಾಯಿಲೆ ಇರಬಹುದು ಎಂಬ ಕುರಿತಂತೆ ಶಂಕೆ ವ್ಯಕ್ತವಾಗಿತ್ತು. […]

ಹೃದಯಘಾತಕ್ಕೆ ಬಲಿಯಾದ 5 ವರ್ಷದ ಬಾಲಕಿ Read More »

ಮುಳುಗುತಜ್ಞ ಈಶ್ವರ ಮಲ್ಪೆ ಮಕ್ಕಳಿಗೆ ಕೇರಳದಲ್ಲಿ ಚಿಕಿತ್ಸೆ

ಸಮಗ್ರ ನ್ಯೂಸ್:ಮುಳುಗುತಜ್ಞ, ಸಾಮಾಜಿಕ ಕಾರ್ಯಕರ್ತ ಈಶ್ವರ್ ಮಲ್ಪೆ ಅವರ ಇಬ್ಬರು ಮಕ್ಕಳ ಚಿಕಿತ್ಸೆಯನ್ನು ಉಚಿತವಾಗಿ ನೀಡುವುದಾಗಿ ಕೇರಳ ರಾಜ್ಯದ ಸಂಘ, ಸಂಸ್ಥೆಯವರು ಮುಂದೆ ಬಂದಿದ್ದು, ಕೇರಳದ ಕೋಯಿಕ್ಕೋಡ್‌ನ ಮಲ್ಟಿ ಸ್ಪೆಶಾಲಿಟಿ ಮೈತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈಶ್ವ‌ರ್ ಮಲ್ಪೆ ಅವರ ಇಬ್ಬರು ಮಕ್ಕಳಾದ ಕಾರ್ತಿಕ್ (23), ಬ್ರಾಹ್ಮ (7) ಅನಾರೋಗ್ಯ ಪೀಡಿತರಾಗಿದ್ದು, ವೈದ್ಯಕೀಯ ಚಿಕಿತ್ಸೆಗಳಿಗೆ ಲಕ್ಷಾಂತರ ರೂ. ವ್ಯಯಿಸಬೇಕಿದೆ. ಶಿರೂರಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದ ಅರ್ಜುನ್ ಮೃತ ದೇಹವನ್ನು ಪತ್ತೆ ಮಾಡಲು ಈಶ್ವರ್

ಮುಳುಗುತಜ್ಞ ಈಶ್ವರ ಮಲ್ಪೆ ಮಕ್ಕಳಿಗೆ ಕೇರಳದಲ್ಲಿ ಚಿಕಿತ್ಸೆ Read More »

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿಯ ಬರ್ಬರ ಹತ್ಯೆ ನಡೆದು ನಾಲ್ಕು ತಿಂಗಳು ಕಳೆದಿದೆ. ಈ ಕೊಲೆ ಮಾಡಿದವರು ನಟ ದರ್ಶನ್ ಹಾಗೂ ಗ್ಯಾಂಗ್ ಎನ್ನುವ ಆರೋಪದಿಂದ ಪ್ರಕರಣ ಕೋರ್ಟ್ ಅಂಗಳದಲ್ಲಿ ಇದೆ. ಇನ್ನೂ ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾ ಐದು ತಿಂಗಳ ಗರ್ಭಿಣಿಯಾಗಿದ್ದರು. ಇದೀಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಪವಿತ್ರಾಗೆ ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್ ಮಾಡಿದ್ದರಿಂದ ದರ್ಶನ್ ಕೋಪಗೊಂಡು ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿಸಿ ಬೆಂಗಳೂರಿಗೆ ಕರೆತರುವ ಕೆಲಸ ದರ್ಶನ್

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ Read More »

ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗಿದರೆ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗದು| ಕಡಬದ ಮರ್ದಾಳ ಮಸೀದಿ ಪ್ರಕರಣದ ಕುರಿತು ಹೈಕೋರ್ಟ್ ಹೇಳಿಕೆ

ಸಮಗ್ರ ನ್ಯೂಸ್: ಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಕೂಗಿದರೆ ಯಾವುದೇ ಹಂತದಲ್ಲೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳದ ಮಸೀದಿಗೆ ನುಗ್ಗಿದ ಇಬ್ಬರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು. ಇವರ ವರ್ತನೆಯಿಂದ ಸಾರ್ವಜನಿಕ ಜೀವನಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ. ಅಲ್ಲದೇ ಧಾರ್ಮಿಕ ನಂಬಿಕೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಹೈಕೋರ್ಟ್, ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣದಡಿ ಕ್ರಮ ಕೈಗೊಳ್ಳುವ ಕುರಿತ ಅರ್ಜಿಯನ್ನು ವಜಾಗೊಳಿಸಿತು. ಬೈಕ್‌ನಲ್ಲಿ

ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗಿದರೆ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗದು| ಕಡಬದ ಮರ್ದಾಳ ಮಸೀದಿ ಪ್ರಕರಣದ ಕುರಿತು ಹೈಕೋರ್ಟ್ ಹೇಳಿಕೆ Read More »

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆ ಅ.16ರಿಂದ 19ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಡಳಿತ ‘ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಸೂಚಿಸಿದೆ. ಜೊತೆಗೆ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರರು ಕೂಡಲೇ ದಡ ಸೇರುವಂತೆ ತಿಳಿಸಿದೆ. ಇನ್ನು ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರಿ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇರುವುದರಿಂದ ನೀರು ಇರುವ ತಗ್ಗು

ಹವಾಮಾನ ಸಮಾಚಾರ| ಅ.19ರವರೆಗೂ ಭಾರೀ ಮಳೆ ಮುನ್ಸೂಚನೆ| ಸಮುದ್ರಕ್ಕೆ ಇಳಿಯದಂತೆ ದ.ಕ ಜಿಲ್ಲಾಡಳಿತದಿಂದ ಮೀನುಗಾರರಿಗೆ ಎಚ್ಚರಿಕೆ| ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಭಾರತದ ಲಕ್ಷಾಂತರ ಆಂಡ್ರಾಯ್ಡ್ ಬಳಕೆದಾರರಿಗೆ ಮಹತ್ವದ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಭಾರತೀಯ ಕಂಪ್ಯೂಟರ್ ತುರ್ತುಪ್ರತಿಕ್ರಿಯೆ ತಂಡ (ಸಿಇಆರ್ಟಿ-ಇನ್) ಆಂಡ್ರಾಯ್ಡ್ ಫೋನ್ ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದು, ಆಂಡ್ರಾಯ್ಡ್ ಸಾಫ್ಟ್ರ್ನಲ್ಲಿ ಹಲವಾರು ದುರ್ಬಲತೆಗಳನ್ನು ಗುರುತಿಸಿದೆ, ಅದನ್ನು ಹ್ಯಾಕರ್ಗಳು ಸುಲಭವಾಗಿ ಬಳಸಿಕೊಳ್ಳಬಹುದು ಎಂದು ಹೇಳಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸೈಬ‌ರ್ ಸೆಕ್ಯುರಿಟಿ ಏಜೆನ್ಸಿ ಆಂಡ್ರಾಯ್ಡ್ ಬಳಕೆದಾರರಿಗೆ ‘ಹೆಚ್ಚಿನ’ ತೀವ್ರತೆಯ ರೇಟಿಂಗ್ ನೀಡುವ ಬಗ್ಗೆ ಎಚ್ಚರಿಕೆ ನೀಡಿದೆ.ಇದನ್ನು ಹ್ಯಾಕರ್ಗಳು “ಉದ್ದೇಶಿತ ವ್ಯವಸ್ಥೆಯಲ್ಲಿ ಅನಿಯಂತ್ರಿತ ಕೋಡ್ ಅನ್ನು ಕಾರ್ಯಗತಗೊಳಿಸಲು” ಸುಲಭವಾಗಿ ಬಳಸಬಹುದು ಮತ್ತು ಬಳಸಿಕೊಳ್ಳಬಹುದು ಎಂದು ಸಲಹೆಯಲ್ಲಿ

ಭಾರತದ ಲಕ್ಷಾಂತರ ಆಂಡ್ರಾಯ್ಡ್ ಬಳಕೆದಾರರಿಗೆ ಮಹತ್ವದ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ Read More »

ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ಗೂಡ್ಸ್ ರೈಲಿಗೆ ಡಿಕ್ಕಿ

ಸಮಗ್ರ ನ್ಯೂಸ್: ಮೈಸೂರಿನಿಂದ ದರ್ಭಾಂಗ್‌ಗೆ ಭಾಗಮತಿ ಎಕ್ಸ್‌ಪ್ರೆಸ್‌ ರೈಲು ಪ್ರಯಾಣಿಸುತ್ತಿತ್ತು. ಚೆನ್ನೈ ಸಮೀಪದ ಕವರೈಪೆಟ್ಟೆ ರೈಲು ನಿಲ್ದಾಣದ ಬಳಿ ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಭಾಗಮತಿ ಎಕ್ಸ್‌ಪ್ರೆಸ್ಟೈಲಿನ ಆರು ಬೋಗಿಗಳು ಹಳಿತಪ್ಪಿದ್ದು, 2 ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಈ ಘಟನೆ ಅ.11 ರಂದು ನಡೆಯಿತು. ಅಪಘಾತಕ್ಕೆ ಸಂಬಂಧಿಸಿದಂತೆ ತಿರುವಳ್ಳೂರು ಜಿಲ್ಲಾಧಿಕಾರಿ ಟಿ.ಪ್ರಭುಶಂಕರ್ ಮಾತನಾಡಿ, ರಕ್ಷಣಾ ಕಾರ್ಯಚಾರಣೆ ನಡೆಯುತ್ತಿದ್ದು, ಸಾವು-ನೋವಿನ ಬಗ್ಗೆ ಯಾವುದೇ ರೀತಿಯ ಮಾಹಿತಿ ಲಭಿಸಿಲ್ಲ ಎಂದು ತಿಳಿಸಿದ್ದಾರೆ. ರೈಲು ಹಳಿ ತಪ್ಪಿರುವುದು ಈ ಅವಘಡಕ್ಕೆ ಕಾರಣವಾಗಿರಬಹುದು.

ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್‌ ಗೂಡ್ಸ್ ರೈಲಿಗೆ ಡಿಕ್ಕಿ Read More »

ಅಕ್ಟೋಬರ್ 24 ರಂದು ವಿಶ್ವಸಂಸ್ಥೆ ದಿನ/ ವಿಶ್ವಸಂಸ್ಥೆ ಧ್ವಜವನ್ನು ಹಾರಿಸಲು ಗ್ರಹ ಸಚಿವಾಲಯದಿಂದ ಕೇಂದ್ರ ಇಲಾಖೆಗಳಿಗೆ ನಿರ್ದೇಶನ

ಸಮಗ್ರ ನ್ಯೂಸ್‌: ವಿಶ್ವಸಂಸ್ಥೆಯ ದಿನವನ್ನು ಅಕ್ಟೋಬರ್ 24 ರಂದು ಆಚರಿಸಲಾಗುತ್ತಿದ್ದು. ಈ ದಿನ ವಿಶ್ವಸಂಸ್ಥೆ ಧ್ವಜವನ್ನು ಹಾರಿಸಲು ಗ್ರಹ ವ್ಯವಹಾರಗಳ ಸಚಿವಾಲಯವು ದೇಶದ ಎಲ್ಲಾ ಕೇಂದ್ರ ಇಲಾಖೆಗಳಿಗೆ ನಿರ್ದೇಶನ ನೀಡಿದೆ. ವಿಶ್ವಸಂಸ್ಥೆಯ ದಿನವನ್ನು ಆಚರಿಸಲು ಈ ತಿಂಗಳ ಅಕ್ಟೋಬರ್ 24 ರಂದು ದೇಶದ ಎಲ್ಲಾ ಪ್ರಮುಖ ಕಟ್ಟಡಗಳ ಮೇಲೆ ರಾಷ್ಟ್ರೀಯ ತ್ರಿವರ್ಣ ಧ್ವಜದೊಂದಿಗೆ ವಿಶ್ವಸಂಸ್ಥೆಯ ಧ್ವಜವನ್ನು ಹಾರಿಸುವಂತೆ ಗೃಹ ವ್ಯವಹಾರಗಳ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಎಲ್ಲಾ ಕೇಂದ್ರ ಇಲಾಖೆಗಳಿಗೆ ಹೇಳಿದೆ. ಆದರೆ ವಿಶ್ವಸಂಸ್ಥೆಯ ಧ್ವಜವನ್ನು

ಅಕ್ಟೋಬರ್ 24 ರಂದು ವಿಶ್ವಸಂಸ್ಥೆ ದಿನ/ ವಿಶ್ವಸಂಸ್ಥೆ ಧ್ವಜವನ್ನು ಹಾರಿಸಲು ಗ್ರಹ ಸಚಿವಾಲಯದಿಂದ ಕೇಂದ್ರ ಇಲಾಖೆಗಳಿಗೆ ನಿರ್ದೇಶನ Read More »

ಬ್ರಿಕ್ಸ್ ಶೃಂಗಸಭೆ/ ಸದಸ್ಯತ್ವಕ್ಕಾಗಿ ಅರ್ಜಿ ಸಲ್ಲಿಸಿದ 34 ದೇಶಗಳು

ಸಮಗ್ರ ನ್ಯೂಸ್‌: ಕಜಾನ್‌ನಲ್ಲಿ ಅಕ್ಟೋಬರ್ 22 ಮತ್ತು ಅಕ್ಟೋಬರ್ 24ರಂದು ಬ್ರಿಕ್ಸ್ ಶೃಂಗಸಭೆ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಬ್ರಿಕ್ಸ್ ಸದಸ್ಯತ್ವಕ್ಕಾಗಿ 34 ದೇಶಗಳು ಅಧಿಕೃತವಾಗಿ ಅರ್ಜಿ ಸಲ್ಲಿಸಿದೆ. ಕಜಾನ್‌ನಲ್ಲಿ ಬ್ರಿಕ್ಸ್ ಶೃಂಗಸಭೆಯಲ್ಲಿ 10 ಹೊಸ ಸದಸ್ಯರು ಮತ್ತು 10 ಪಾಲುದಾರರನ್ನು ಘೋಷಿಸಲಾಗುತ್ತದೆ. ಸಂಘರ್ಷ ಪೀಡಿತ ರಾಷ್ಟ್ರಗಳಾದ ಪ್ಯಾಲೆಸ್ತೀನ್, ಸಿರಿಯಾ ಮತ್ತು ಮ್ಯಾನ್ಮಾರ್ ಕೂಡ ಸದಸ್ಯತ್ವಕ್ಕಾಗಿ ಅರ್ಜಿ ಸಲ್ಲಿಸಿದ್ದು ಒಮ್ಮತದ ಅಭಿಪ್ರಾಯ ನಂತರ ಘೋಷಣೆ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಮೂರು ತಿಂಗಳ ಅವಧಿಯಲ್ಲಿ

ಬ್ರಿಕ್ಸ್ ಶೃಂಗಸಭೆ/ ಸದಸ್ಯತ್ವಕ್ಕಾಗಿ ಅರ್ಜಿ ಸಲ್ಲಿಸಿದ 34 ದೇಶಗಳು Read More »

ವಿಚ್ಛೇದನದ ಬಳಿಕ ಸೊಸೆ ಅತ್ತೆ-ಮಾವನ ಮನೆಯಲ್ಲಿ ಇರುವಂತಿಲ್ಲ

ಸಮಗ್ರ ನ್ಯೂಸ್: ವಿಚ್ಚೇದನದ ನಂತರ ಸೊಸೆಯು ಅತ್ತೆ-ಮಾವನ ಮನೆಯಲ್ಲಿ ಇರುವಂತಿಲ್ಲ ಎಂದು ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.ಈ ಪ್ರಕರಣವು ವಿಚ್ಛೇದಿತ ದಂಪತಿಗಳಾದ ಶೈಲೇಶ್‌ ಜೇಕಬ್ ಮತ್ತು ಮಲ್ಲಿಕಾ ಬಾಲ್ ನಡುವಿನ ವಿವಾದಕ್ಕೆ ಸಂಬಂಧಿಸಿದೆ. ಬಿಲಾಸ್‌ಪುರದ ಜರ್ಹಭಟ ನಿವಾಸಿಗಳಾದ ಶೈಲೇಶ್‌ಬಿಲಾಸ್‌ಪುರದ ಜರ್ಹಭಟ ನಿವಾಸಿಗಳಾದ ಶೈಲೇಶ್ ಜೇಕಬ್ ಮತ್ತು ಮಲ್ಲಿಕಾ ಬಾಲ್ ನಡುವೆ ಭಿನ್ನಾಭಿಪ್ರಾಯ ಉಂಟಾಗಿದ್ದು, ಶೈಲೇಶ್ ಅವರ ತಾಯಿ, ಸಹೋದರ ಮತ್ತು ಸಹೋದರಿಯ ಮೇಲೆ ಕೌಟುಂಬಿಕ ದೌರ್ಜನ್ಯದ ಆರೋಪ ಹೊರಿಸಿ ಮಲ್ಲಿಕಾ ಮ್ಯಾಜಿಸ್ಟ್ರೇಟ್ ಅವರು ಹೈಕೋರ್ಟ್‌ನಲ್ಲಿ ಕ್ರಿಮಿನಲ್

ವಿಚ್ಛೇದನದ ಬಳಿಕ ಸೊಸೆ ಅತ್ತೆ-ಮಾವನ ಮನೆಯಲ್ಲಿ ಇರುವಂತಿಲ್ಲ Read More »