ರಾಜ್ಯ

ಆರು ವರ್ಷಗಳ ಬಳಿಕ ಜಮ್ಮು-ಕಾಶ್ಮೀರದಿಂದ ರಾಷ್ಟ್ರಪತಿ ಆಳ್ವಿಕೆ ಹಿಂದಕ್ಕೆ| ಹೊಸ ಸರ್ಕಾರ ರಚನೆಗೆ ಅನುಮತಿ ನೀಡಿದ ದ್ರೌಪದಿ ಮುರ್ಮು

ಸಮಗ್ರ ನ್ಯೂಸ್: ಜಮ್ಮುಮತ್ತು ಕಾಶ್ಮೀರ ವಿಧಾನಸಭೆಗೆ ಇತ್ತೀಚೆಗೆ ಚುನಾವಣೆ ನಡೆದಿರುವ ಹಿನ್ನೆಲೆಯಲ್ಲಿ ಆರು ವರ್ಷಗಳ ಹಿಂದೆ ಈ ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಿಸಲಾಗಿದ್ದ ರಾಷ್ಟ್ರಪತಿ ಆಡಳಿತವನ್ನು ಕೊನೆಗೊಳಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ನೂತನ ಸರ್ಕಾರ ರಚನೆಗೆ ದಾರಿ ಮಾಡಿಕೊಟ್ಟಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ, 2019ರ ಸೆಕ್ಷನ್ 73 (2019 ರ 34) ಮತ್ತು ಭಾರತದ ಸಂವಿಧಾನದ 239 ಮತ್ತು 239 ಎ ವಿಧಿಗಳ ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಲು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ […]

ಆರು ವರ್ಷಗಳ ಬಳಿಕ ಜಮ್ಮು-ಕಾಶ್ಮೀರದಿಂದ ರಾಷ್ಟ್ರಪತಿ ಆಳ್ವಿಕೆ ಹಿಂದಕ್ಕೆ| ಹೊಸ ಸರ್ಕಾರ ರಚನೆಗೆ ಅನುಮತಿ ನೀಡಿದ ದ್ರೌಪದಿ ಮುರ್ಮು Read More »

ಹವಾಮಾನ ವರದಿ| ವಾಯುಭಾರ ಕುಸಿತ ಪರಿಣಾಮ| ರಾಜ್ಯದಲ್ಲಿ ಅ.16ರವರೆಗೂ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿಗಳ ಪರಿಣಾಮ ರಾಜ್ಯದಲ್ಲಿ ಐದು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ. ಹವಾಮಾನ ಇಲಾಖೆಯು ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಇಂದಿನಿಂದ ಅಕ್ಟೋಬರ್ 16ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕಳೆದ ಎಂಟು ದಿನಗಳಿಂದ ರಾಜ್ಯದಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಇದೇ ರೀತಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ. ರಾಜ್ಯದ ಒಳನಾಡಿನ ಹಲವು ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ. ಪೂರ್ವ ಅರಬ್ಬೀ ಸಮುದ್ರ

ಹವಾಮಾನ ವರದಿ| ವಾಯುಭಾರ ಕುಸಿತ ಪರಿಣಾಮ| ರಾಜ್ಯದಲ್ಲಿ ಅ.16ರವರೆಗೂ ಮಳೆ ಸಾಧ್ಯತೆ Read More »

ಉಡುಪಿ: 9 ಮಂದಿ‌ ಬಾಂಗ್ಲಾ ಪ್ರಜೆಗಳು ಅರೆಸ್ಟ್

ಸಮಗ್ರ ನ್ಯೂಸ್: ವಿಜಯದಶಮಿ ಹಬ್ಬದ ದಿವನೇ ಉಡುಪಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಉಡುಪಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 9 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಡುಪಿ ಪೊಲೀಸರು ಮಲ್ಪೆ ಬಳಿ 9 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ. ನಕಲಿ ಆಧಾರ್ ಕಾರ್ಡ್, ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್,

ಉಡುಪಿ: 9 ಮಂದಿ‌ ಬಾಂಗ್ಲಾ ಪ್ರಜೆಗಳು ಅರೆಸ್ಟ್ Read More »

ಇಂದು ನಾಡಿನೆಲ್ಲೆಡೆ ವಿಜಯದಶಮಿ ಸಂಭ್ರಮ| ಮೈಸೂರಿನಲ್ಲಿ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ

ಸಮಗ್ರ ನ್ಯೂಸ್: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂಭ್ರಮ ಕಳೆಗಟ್ಟಿದೆ. ನವರಾತ್ರಿ ಆಚರಣೆಯ ಅಂತಿಮಘಟ್ಟವಾದ ವಿಜಯದಶಮಿಯ ಇಂದು(ಸೆ.13) ವಿಶ್ವವಿಖ್ಯಾತ ಜಂಬೂ ಸವಾರಿ ನಡೆಯಲಿದೆ. ಜಂಬೂ ಸವಾರಿಯಲ್ಲಿ ಇದೇ ಮೊದಲ ಬಾರಿಗೆ 51 ಸ್ತಬ್ಧಚಿತ್ರಗಳು ಭಾಗವಹಿಸುತ್ತಿವೆ. ಯಾವುದೂ ಪುನರಾವರ್ತನೆಯಾಗಿಲ್ಲ. ಪ್ರತಿಯೊಂದೂ ಆಕರ್ಷಕವಾಗಿವೆ. ಈ ಬಾರಿ ಮೊದಲ ಬಾರಿಗೆ ಭಾರತೀಯ ರೈಲ್ವೆ, ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯದ ಸಾಧನೆಗಳ ಜೊತೆಗೆ ಸ್ವಾತಂತ್ರ್ಯಪೂರ್ವ-ನಂತರದಲ್ಲಿ ಸಾಧಿಸಿರುವ ಪ್ರಗತಿಯ ಕುರಿತ ಸ್ತಬ್ಧಚಿತ್ರಗಳು ಗಮನ ಸೆಳೆಯಲಿವೆ. ಮೈಸೂರು ರೇಷ್ಮೆ ಸೀರೆಗಳನ್ನು ಉತ್ಪಾದನೆ ಮಾಡುವಂತಹ ಕರ್ನಾಟಕ

ಇಂದು ನಾಡಿನೆಲ್ಲೆಡೆ ವಿಜಯದಶಮಿ ಸಂಭ್ರಮ| ಮೈಸೂರಿನಲ್ಲಿ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ Read More »

ಮೈಸೂರು ಜಂಬೂ ಸವಾರಿಯಲ್ಲಿ ತೇಜಸ್ವಿ ಪ್ರತಿಷ್ಠಾನ, ತೇಜಸ್ವಿ ವಿಸ್ಮಯ ಲೋಕದ ಅನಾವರಣ

ಸಮಗ್ರ ನ್ಯೂಸ್: ಮೈಸೂರು ದಸರಾದ ಜಂಬೂ ಸವಾರಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯಿಂದ ತೇಜಸ್ವಿ ಪ್ರತಿಷ್ಠಾನ, ತೇಜಸ್ವಿ ವಿಸ್ಮಯ ಲೋಕದ ಸ್ತಬ್ದಚಿತ್ರ ಪ್ರದರ್ಶನಗೊಳ್ಳಲಿದೆ. ಚಿಕ್ಕಮಗಳೂರು ಜಿಲ್ಲಾಡಳಿತ ಮತ್ತು ಜಿಲ್ಲಾ‌ ಪಂಚಾಯತಿ ವತಿಯಿಂದ ಈ ಬಾರಿ ತೇಜಸ್ವಿ ಪ್ರತಿಷ್ಠಾನ, ತೇಜಸ್ವಿ ವಿಸ್ಮಯ ಲೋಕದ ಸ್ತಬ್ಧ ಚಿತ್ರವನ್ನು ಆಯ್ಕೆ ಮಾಡಲಾಗಿದೆ. ಕೊಟ್ಟಿಗೆಹಾರದ  ತೇಜಸ್ವಿ ಪ್ರತಿಷ್ಠಾನದ ಕಟ್ಟಡ, ತೇಜಸ್ವಿ ಅವರ ಪ್ರತಿಮೆ, ಹಾರುವ ಓತಿ, ಪಶ್ಚಿಮ ಘಟ್ಟದಲ್ಲಿ ಕಾಣ ಸಿಗುವ ಕಪ್ಪೆ, ವಿವಿಧ ಬಗ್ಗೆ ಕೀಟಗಳು, ಹಕ್ಕಿಗಳು, ತೇಜಸ್ವಿ ಅವರ ಸಾಕುನಾಯಿ ಕಿವಿ, ಮೀನು

ಮೈಸೂರು ಜಂಬೂ ಸವಾರಿಯಲ್ಲಿ ತೇಜಸ್ವಿ ಪ್ರತಿಷ್ಠಾನ, ತೇಜಸ್ವಿ ವಿಸ್ಮಯ ಲೋಕದ ಅನಾವರಣ Read More »

ಮೈಸೂರಿನಿಂದ ಚೆನ್ನೈಗೆ ಹೊರಟಿದ್ದ ರೈಲು ಗೂಡ್ಸ್ ರೈಲಿಗೆ ಡಿಕ್ಕಿ| ಹಲವು ಪ್ರಯಾಣಿಕರಿಗೆ ಗಾಯ

ಸಮಗ್ರ ನ್ಯೂಸ್: ಮೈಸೂರಿನಿಂದ ದರ್ಬಾಂಗ್‌ ಗೆ ತೆರಳುತ್ತಿದ್ದ Mysuru-Darbhanga Express ರೈಲು, ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿರುವ ಘಟನೆ ಇಂದು ಸಂಜೆ ನಡೆದಿದೆ. ತಮಿಳುನಾಡಿನ ಚೆನ್ನೈ ರೈಲ್ವೇ ವಿಭಾಗದ ಗುಮ್ಮಿಡಿಪೊಂಡಿ ಬಳಿಯ ಕವರಪೇಟೈ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ Mysuru-Darbhanga Express ರೈಲಿನ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಅಪಘಾತದ ವಿಷಯ ತಿಳಿಯುತ್ತಿದ್ದಂತೆ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಅಪಘಾತದ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಇದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಹಲವು ಪ್ರಯಾಣಿಕರು ಚಿತ್ರ

ಮೈಸೂರಿನಿಂದ ಚೆನ್ನೈಗೆ ಹೊರಟಿದ್ದ ರೈಲು ಗೂಡ್ಸ್ ರೈಲಿಗೆ ಡಿಕ್ಕಿ| ಹಲವು ಪ್ರಯಾಣಿಕರಿಗೆ ಗಾಯ Read More »

ಬಿಗ್ ಬಾಸ್ ಮನೆಯಲ್ಲಿ ಎಮರ್ಜೆನ್ಸಿ ಸೈರನ್|ಬದಲಾಯಿತು ಸ್ವರ್ಗ- ನರಕ ಆಟದ ಶೈಲಿ

ಸಮಗ್ರ ನ್ಯೂಸ್: ಬಿಗ್ ಬಾಸ್ ಮನೆಯಲ್ಲಿ ಇದೀಗ ಎಮರ್ಜೆನ್ಸಿ ಸೈರನ್ ಮೊಳಗಿದೆ. ಈ ಸೈರನ್ ಗೆ ಒಂದು ಕ್ಷಣಕ್ಕೆ ಎಲ್ಲಾ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದು, ಮನೆಯಲ್ಲಿ ಏನಾಗ್ತಿದೆ ಅನ್ನೋ ಆತಂಕದಿಂದ ಕಿರುಚಾಡಿದ್ದಾರೆ. ಹೌದು, ಇಂದು ಬೆಳ್ಳಂಬೆಳಗ್ಗೆ ಪ್ರೊಮೋ ಬಿಟ್ಟಿದ್ದು ಈಮೂಲಕ ಬಿಗ್ಬಾಸ್ ವೀಕ್ಷಕರ ಕುತೂಹಲವನ್ನು ಹೆಚ್ಚಿಸಿದ್ದಾರೆ. ಪ್ರೋಮೊದಲ್ಲೇನಿದೆ..? ಬಿಗ್ಬಾಸ್ ಮನೆಯಲ್ಲಿ ಸೈರನ್ ಆಗಿದೆ. ಇದರಿಂದ ಸ್ಪರ್ಧಿಗಳು ಬೆಚ್ಚಿ ಬಿದ್ದು ಓಡಿ ಬಂದು ಎಲ್ಲರೂ ಒಟ್ಟಾಗಿ ನಿಂತಿದ್ದಾರೆ. ಕ್ರೇನ್ನಿಂದ ಏನೋ ತೆಗಿತಾ ಇದ್ದಾರೆ, ಏಯ್ ಯಾರು? ಏನಿದು’ ಅಂತಾ ಆತಂಕದಿಂದ

ಬಿಗ್ ಬಾಸ್ ಮನೆಯಲ್ಲಿ ಎಮರ್ಜೆನ್ಸಿ ಸೈರನ್|ಬದಲಾಯಿತು ಸ್ವರ್ಗ- ನರಕ ಆಟದ ಶೈಲಿ Read More »

ನವರಾತ್ರಿ ವೇಳೆಯೇ ಅರಮನೆಗೆ ಹೊಸ ಅತಿಥಿ.. ಯದುವೀರ್-ತ್ರಿಷಿಕಾ ದಂಪತಿಗೆ 2ನೇ ಮಗು ಜನನ

ಸಮಗ್ರ ನ್ಯೂಸ್: ಮೈಸೂರು ಅರಮನೆಯಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ, ಇತ್ತ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಪತ್ನಿ ತ್ರಿಷಿಕಾ ದಂಪತಿಗೆ ಎರಡನೇ ಗಂಡು ಮಗು ಜನಿಸಿದೆ. ಇದೀಗ ನವರಾತ್ರಿ ಸಂಭ್ರಮದಲ್ಲಿ ರಾಜರ ಕುಟುಂಬದಲ್ಲಿ ಸಂತಸ ಮತ್ತಷ್ಟು ಹೆಚ್ಚಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಕುಮಾರಿ ದೇವಿ ಅವರು 2ನೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಸ್ಪತ್ರೆಯಲ್ಲಿ ತಾಯಿ, ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಇದರಿಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ, ಮೈಸೂರು

ನವರಾತ್ರಿ ವೇಳೆಯೇ ಅರಮನೆಗೆ ಹೊಸ ಅತಿಥಿ.. ಯದುವೀರ್-ತ್ರಿಷಿಕಾ ದಂಪತಿಗೆ 2ನೇ ಮಗು ಜನನ Read More »

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್| ಚಿನ್ನದ ದರ ಭಾರೀ ಕುಸಿತ

ಸಮಗ್ರ ನ್ಯೂಸ್: ಗೋ ಲ್ಡ್ ಪ್ರಿಯರಿಗೆ ಗುಡ್ ನ್ಯೂಸ್ ಚಿನ್ನದ ದರ ಭಾರೀ ಕುಸಿತ ಕಂಡಿದೆ.ಕಳೆದ 2 ದಿನಗಳಿಂದ ಚಿನ್ನದ ಬೆಲೆ ಕಡಿಮೆ ಆಗಿದ್ದು, ಇಂದು ಆಯುಧ ಪೂಜೆ ಪ್ರಯುಕ್ತ ಬಂಗಾರ ಖರೀದಿ ಮಾಡುವುದು ಒಳ್ಳೆಯದು ಎಂದು ಹೇಳಲಾಗುತ್ತಿದೆ.ಇತ್ತೀಚಿಗೆ ಚಿನ್ನದ ಬೆಲೆ ಗಗನಕ್ಕೇರಿ ಗ್ರಾಹಕರಿಗೆ ಭಾರೀ ನಿರಾಸೆ ಮೂಡಿಸಿತ್ತು. ಬೆಂಗಳೂರಲ್ಲಿ ಇಂದು 22 ಕ್ಯಾರಟ್ ಗೋಲ್ಡ್ ರೇಟ್ ಒಂದು ಗ್ರಾಮ್‌ಗೆ 7,030 ರೂ. ಇದೆ. ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲೂ ಒಂದು ಗ್ರಾಮ್ ಚಿನ್ನದ ಬೆಲೆ

ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್| ಚಿನ್ನದ ದರ ಭಾರೀ ಕುಸಿತ Read More »

KSRTC ಆಯುಧ ಪೂಜೆ ಖರ್ಚು ₹.250 ಹೆಚ್ಚಿಸಿ ಸರ್ಕಾರ ಆದೇಶ

ಸಮಗ್ರ ನ್ಯೂಸ್: ನವರಾತ್ರಿ ಹಬ್ಬದಲ್ಲಿ ಆಚರಿಸಲಾಗುವ ಸಂಭ್ರಮದ ಆಯುಧ ಪೂಜೆ ಅ.11ರ ಶುಕ್ರವಾರ ನೆರವೇರಲಿದೆ. ಈ ಹಿನ್ನಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಬಸ್‌ಗಳಿಗೆ ಆಯುಧ ಪೂಜೆಗೆ ನೀಡಲಾಗುತ್ತಿದ್ದ ತಲಾ 100 ರೂ.ಗಳನ್ನು 250ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. 100 ರೂ.ಗಳಲ್ಲಿ ಬಸ್‌ನ ಪೂಜೆ ಕುರಿತು ಟೀಕೆ ಬೆನ್ನಲ್ಲೇ ಸಾರಿಗೆ ಇಲಾಖೆ ಸಚಿವರು ದರ ಪರಿಷ್ಕರಣೆ ಮಾಡಲು ಸೂಚಿಸಿದ್ದರು. ಅದರಂತೆ 2024ರ ಅಂದರೆ ಪ್ರಸಕ್ತ ವರ್ಷದಲ್ಲಿ ಆಯುಧಪೂಜೆಗೆ ಪ್ರತಿ ಬಸ್‌ಗೆ ಈಗ ನೀಡಲಾಗುತ್ತಿರುವ 100 ರೂ.ಗಳನ್ನು 250ಕ್ಕೆ

KSRTC ಆಯುಧ ಪೂಜೆ ಖರ್ಚು ₹.250 ಹೆಚ್ಚಿಸಿ ಸರ್ಕಾರ ಆದೇಶ Read More »