ರಾಜ್ಯ

ಉಜಿರೆ: ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ| ರಾಷ್ಟ್ರೀಯ ಹಿಂಜಾವೇ ಪ್ರಮುಖ್ ಮಹೇಶ್ ಶೆಟ್ಟಿ ವಿರುದ್ಧ ದೂರು

ಸಮಗ್ರ ನ್ಯೂಸ್: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಪ್ರಮುಖ ಮಹೇಶ್‌ ಶೆಟ್ಟಿ ತಿಮರೊಡಿ ಅವರು ಸೆ. 8ರಂದು ಉಜಿರೆಯಲ್ಲಿ ನಡೆದ ಸಾರ್ವಜನಿಕ ಗಣೇಶ ಚತುರ್ಥಿ ಹಬ್ಬದ ಸಭೆಯಲ್ಲಿ ಹಿಂದೂ ಮತ್ತು ಜೈನ ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ರೀತಿಯಲ್ಲಿ ಮಾತನಾಡಿದ್ದು, ಇದು ಧಾರ್ಮಿಕ ಭಾವನೆಗಳಿಗೆ ಘಾಸಿಯಾಗಿದೆ ಎಂದು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಸೆ. 12ರಂದು ಜೈನ ಸಮುದಾಯ ದೂರು ನೀಡಿದೆ. ಮಹೇಶ್‌ ಶೆಟ್ಟಿ ತಿಮರೋಡಿ ಅವರು ಸಾರ್ವಜನಿಕ ಸಂಸ್ಥೆಗಳ ವಿರುದ್ಧ ಅವಹೇಳನ ಮಾಡಿ ಅವಾಚ್ಯ ಮತ್ತು […]

ಉಜಿರೆ: ಗಣೇಶೋತ್ಸವ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ| ರಾಷ್ಟ್ರೀಯ ಹಿಂಜಾವೇ ಪ್ರಮುಖ್ ಮಹೇಶ್ ಶೆಟ್ಟಿ ವಿರುದ್ಧ ದೂರು Read More »

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ‌ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನೀಡಿ ಆದೇಶ ಹೊರಡಿಸಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತನ್ನ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ನಿರ್ಣಾಯಕ ತೀರ್ಪು ನೀಡಿದೆ. ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ತೀರ್ಪು ನೀಡಿದೆ. ನ್ಯಾಯಪೀಠವು ಸೆಪ್ಟೆಂಬರ್ ೫ ರಂದು ಅರ್ಜಿಗಳ ಮೇಲಿನ ತೀರ್ಪನ್ನು ಕಾಯ್ದಿರಿಸಿತ್ತು.

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ‌ ಜಾಮೀನು ಮಂಜೂರು Read More »

ಕುಕ್ಕೆ ದೇವಳದಲ್ಲಿ ಹೊಸ್ತಾರೋಗಣೆ; ಕದಿರು ಕಟ್ಟುವ ಕಾರ್ಯ| ವಿಶೇಷ ಕಾರ್ಯಕ್ರಮದಲ್ಲಿ ಸಂಭ್ರಮಿಸಿದ ಭಕ್ತಗಣ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಹೊಸ್ತಾರೋಗಣೆ ಮತ್ತು ಕದಿರು ಕಟ್ಟುವ ಕಾರ್ಯದ ವೈದಿಕ ವಿಧಿವಿಧಾನಗಳೊಂದಿಗೆ ಗುರುವಾರ ನೆರವೇರಿತು. ಈ ನಿಮಿತ್ತ ಪ್ರಾತಃಕಾಲ ಪಂಚಾಮೃತ ಮಹಾಭಿಷೇಕವನ್ನು ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಅವರು ನೆರವೇರಿಸಿದರು. ಅಭಿಷೇಕದ ಬಳಿಕ ಸೀತಾರಾಮ ಎಡಪಡಿತ್ತಾಯ ಅವರು ದರ್ಪಣತೀರ್ಥ ನದಿ ತೀರದಲ್ಲಿ ಭತ್ತದ ತೆನೆಗೆ ಪೂಜೆ ನೆರವೇರಿಸಿದರು. ಬಳಿಕ ತೆನೆಯನ್ನು ಮೆರವಣಿಗೆಯಲ್ಲಿ ದೇವಳಕ್ಕೆ ತರಲಾಯಿತು. ದೇವಳಕ್ಕೆ ಪ್ರದಕ್ಷಿಣೆ ಬಂದು ಅರ್ಚಕರು ತೆನೆಯನ್ನು ಗರ್ಭಗುಡಿಗೆ ಕೊಂಡೊಯ್ದರು. ನಂತರ ದೇವರ ಸನ್ನಿಧಿಯಲ್ಲಿ ಕದಿರು ಪೂಜೆ

ಕುಕ್ಕೆ ದೇವಳದಲ್ಲಿ ಹೊಸ್ತಾರೋಗಣೆ; ಕದಿರು ಕಟ್ಟುವ ಕಾರ್ಯ| ವಿಶೇಷ ಕಾರ್ಯಕ್ರಮದಲ್ಲಿ ಸಂಭ್ರಮಿಸಿದ ಭಕ್ತಗಣ Read More »

ರೊಟ್ಟಿ ಮುರಿದರೂ‌ ಬುದ್ದಿ ಕಲಿಯದ ದರ್ಶನ್| ಕ್ಯಾಮರಾ ಎದುರು ಮಿಡಲ್ ಫಿಂಗರ್ ತೋರಿ ಅಸಹ್ಯ ವರ್ತನೆ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್‌ ಅವರು ಪಶ್ಚಾತ್ತಾಪದ ದಿನಗಳನ್ನು ಕಳೆದಿದ್ದಾರೆ ಎಂಬ ಮಾತು ನಿಜಾನ? ಈ ಪ್ರಶ್ನೆ ಬರಲು ಕಾರಣ, ಅವರು ಕ್ಯಾಮೆರಾಗಳ ಮುಂದೆ ಅಸಹ್ಯ ಸಂಜ್ಞೆ ಮಾಡುವ ಮೂಲಕ ಮತ್ತದೇ ಚಾಳಿ ಮುಂದುವರೆಸಿರುವುದು. ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ ಅವರನ್ನು ಗುರುವಾರ ಅವರ ಪತ್ನಿ ವಿಜಯಲಕ್ಷ್ಮಿ ಹಾಗು ಸಹೋದರ ದಿನಕರ್‌ ತೂಗುದೀಪ ಅವರು ಭೇಟಿ ಮಾಡಲು ಬಂದಿದ್ದರು. ಅವರನ್ನು ನೋಡಲು ಪೊಲೀಸರ ಜೊತೆ ಬರುವಾಗ ತನ್ನ ಎರಡೂ

ರೊಟ್ಟಿ ಮುರಿದರೂ‌ ಬುದ್ದಿ ಕಲಿಯದ ದರ್ಶನ್| ಕ್ಯಾಮರಾ ಎದುರು ಮಿಡಲ್ ಫಿಂಗರ್ ತೋರಿ ಅಸಹ್ಯ ವರ್ತನೆ Read More »

ಇಂದು ಡಾ| ಸುಬ್ರಮಣಿಯನ್ ಸ್ವಾಮಿ ‌ಮಂಗಳೂರು ಭೇಟಿ

ಸಮಗ್ರ ನ್ಯೂಸ್::ವಿರಾಟ್‌ ಹಿಂದೂಸ್ಥಾನ್‌ ಸಂಗಮ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ಡಾ| ಸುಬ್ರಮಣಿಯನ್‌ ಸ್ವಾಮಿ ಅವರು ಸೆ.13ರಂದು ರಾತ್ರಿ ಮಂಗಳೂರಿಗೆ ಆಗಮಿಸಲಿದ್ದಾರೆ. ಸಂಜೆ ದಿಲ್ಲಿಯಿಂದ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸೆ.14ರಂದು ಬೆಳಗ್ಗೆ 8 ಗಂಟೆಗೆ ರಸ್ತೆ ಮಾರ್ಗವಾಗಿ ಶೃಂಗೇರಿಗೆ ತೆರಳಲಿದ್ದಾರೆ. ಸೆ. 14 ಮತ್ತು 15ರಂದು ಅವರ 85ನೇ ವರ್ಷದ ಜನ್ಮದಿನಾಚರಣೆ ಹಾಗೂ ವಿಎಚ್‌ಎಸ್‌ ಪ್ರತಿನಿಧಿಗಳ ಸಮಾವೇಶ ಶೃಂಗೇರಿಯ ಅಭಿನವ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

ಇಂದು ಡಾ| ಸುಬ್ರಮಣಿಯನ್ ಸ್ವಾಮಿ ‌ಮಂಗಳೂರು ಭೇಟಿ Read More »

ಕನ್ನಡಕದ ಬದಲು ಐ ಡ್ರಾಪ್ಸ್‌/ ನಿಷೇಧ ಹೇರಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್‌: ನಲವತ್ತು ವರ್ಷದ ಆಸುಪಾಸಿನವರಿಗೆ ಸಮೀಪ ದೃಷ್ಟಿದೋಷ ಉಂಟಾಗಿ ಓದಲು ತೊಂದರೆಯಾದಾಗ ಅದಕ್ಕೆ ಕನ್ನಡಕದ ಬದಲು ಬಳಸಬಹುದು ಎನ್ನಲಾಗಿದ್ದ ಐ ಡ್ರಾಪ್ಸ್‌ಗೆ ಕೇಂದ್ರ ಸರ್ಕಾರ ಪರವಾನಗಿಯನ್ನು ಅಮಾನತುಗೊಳಿಸಿದೆ. ಮುಂಬೈ ಮೂಲದ ಎಂಟೋಡ್‌ ಫಾರ್ಮಾಸ್ಯುಟಿಕಲ್ಸ್‌ ಕಂಪನಿ ತಾನು ‘ಪಿಲೋಕ್ಯಾರ್ಪೀನ್‌ ಹೈಡ್ರೋಕ್ಲೋರೈಡ್‌ ಆಪ್ತಾಲ್ಮಿಕ್‌ ಸೊಲ್ಯುಷನ್‌’ ಎಂಬ ಐ ಡ್ರಾಪ್ಸ್‌ ತಯಾರಿಸಿದ್ದು, ಅದನ್ನು ಕಣ್ಣಿಗೆ ಹಾಕಿಕೊಂಡರೆ ರೀಡಿಂಗ್‌ ಗ್ಲಾಸ್‌ನ ನೆರವಿಲ್ಲದೆ ಓದಬಹುದು ಎಂದು ಇತ್ತೀಚೆಗೆ ಹೇಳಿಕೆ ಬಿಡುಗಡೆ ಮಾಡಿತ್ತು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಭಾರತೀಯ ಔಷಧ ನಿಯಂತ್ರಣ ನಿರ್ದೇಶನಾಲಯ (ಡಿಸಿಜಿಐ),

ಕನ್ನಡಕದ ಬದಲು ಐ ಡ್ರಾಪ್ಸ್‌/ ನಿಷೇಧ ಹೇರಿದ ಕೇಂದ್ರ ಸರ್ಕಾರ Read More »

ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿ‌ ವಿಚಾರಣೆ ಪೂರ್ಣ| ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ‌. ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್ ಮನು ಸಿಂಘ್ವಿ, ಪ್ರೊ.ರವಿವರ್ಮ ಕುಮಾರ್, ಸರಕಾರದ ಪರ ಎ.ಜಿ.ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು‌. ದೂರುದಾರ ಟಿ.ಜೆ.ಅಬ್ರಹಾಂ ಪರ ವಕೀಲ ರಂಗನಾಥ್ ರೆಡ್ಡಿ ಪ್ರತಿವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿ, ತೀರ್ಪು ಕಾಯ್ದಿರಿಸಿದೆ.

ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿ‌ ವಿಚಾರಣೆ ಪೂರ್ಣ| ತೀರ್ಪು ಕಾಯ್ದಿರಿಸಿದ ಹೈಕೋರ್ಟ್ Read More »

ವಾಲ್ಮೀಕಿ ನಿಗಮ ಅವ್ಯವಹಾರ/ ಶೀಘ್ರದಲ್ಲೇ ಬಿಜೆಪಿ ಪಾದಯಾತ್ರೆ

ಸಮಗ್ರ ನ್ಯೂಸ್‌: ವಾಲ್ಮೀಕಿ ನಿಗಮ ಅವ್ಯವಹಾರ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶೀಘ್ರದಲ್ಲೇ ಬಿಜೆಪಿ ಪಾದಯಾತ್ರೆ ನಡೆಸಲಿದೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಕಾಂಗ್ರೆಸ್ ನಾಯಕರಿಗೆ ಕ್ಲೀನ್ ಚಿಟ್ ನೀಡಲು ಎಸ್‌ಐಟಿ ರಚಿಸಲಾಗಿದೆ ಎನ್ನಲಾಗಿದ್ದು, ಇದರ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಹೈಕಮಾಂಡ್ ನಮಗೆ ಸಲಹೆ ನೀಡಿದ್ದು, ವಾಲ್ಮೀಕಿ ಹಗರಣದಲ್ಲಿ ನಮ್ಮ ಎರಡನೇ ಹಂತದ ಹೋರಾಟ ಶುರುವಾಗಲಿದೆ ಎಂದು ಸುದ್ದಿಗಾರರೊಂದಿಗೆ ಹೇಳಿದ್ದಾರೆ. ಪಕ್ಷದ ಬೆಂಗಳೂರು-ಮೈಸೂರು ಪಾದಯಾತ್ರೆಯಲ್ಲಿ ಮುಡಾ ಹಗರಣ ಗಮನ ಸೆಳೆದಿತ್ತು. ಹೀಗಾಗಿ

ವಾಲ್ಮೀಕಿ ನಿಗಮ ಅವ್ಯವಹಾರ/ ಶೀಘ್ರದಲ್ಲೇ ಬಿಜೆಪಿ ಪಾದಯಾತ್ರೆ Read More »

ಷೇರು ಮಾರುಕಟ್ಟೆಯಲ್ಲಿ‌ ಗೂಳಿ ಗುದ್ದಾಟ| ಐತಿಹಾಸಿಕ ಅಂಕಗಳ ಮಟ್ಟ ತಲುಪಿದ ಸೆನ್ಸೆಕ್ಸ್

ಸಮಗ್ರ ನ್ಯೂಸ್: ಭಾರತೀಯ ಷೇರು ಮಾರುಕಟ್ಟೆ ಇತಿಹಾಸವನ್ನು ಸೃಷ್ಟಿಸಿದೆ. ಹೂಡಿಕೆದಾರರ ಭಾರೀ ಖರೀದಿಯಿಂದಾಗಿ, ಬಿಎಸ್‌ಇ ಸೆನ್ಸೆಕ್ಸ್ 1600 ಅಂಕಗಳ ಜಿಗಿತದೊಂದಿಗೆ ಮೊದಲ ಬಾರಿಗೆ 83000 ಅಂಕಗಳನ್ನ ದಾಟುವಲ್ಲಿ ಯಶಸ್ವಿಯಾಗಿದೆ. ನಿಫ್ಟಿ ಕೂಡ 500ಕ್ಕೂ ಹೆಚ್ಚು ಅಂಕಗಳ ಜಿಗಿತದೊಂದಿಗೆ 25,433 ಅಂಕಗಳ ಐತಿಹಾಸಿಕ ಗರಿಷ್ಠ ಮಟ್ಟವನ್ನ ತಲುಪಿತು. ಈ ಪರಿಣಾಮ ಇಂದು ಒಂದೇ ದಿನಕ್ಕೆ ಹೂಡಿಕೆದಾರರಿಗೆ ₹7 ಲಕ್ಷ ಕೋಟಿ ಲಾಭವಾಗಿದೆ. ಮಾರುಕಟ್ಟೆಯಲ್ಲಿನ ಈ ಬಲವಾದ ಆವೇಗದ ಶ್ರೇಯವು ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಅದ್ಭುತ ಏರಿಕೆಗೆ ಹೋಗುತ್ತದೆ. ಅಲ್ಲದೆ,

ಷೇರು ಮಾರುಕಟ್ಟೆಯಲ್ಲಿ‌ ಗೂಳಿ ಗುದ್ದಾಟ| ಐತಿಹಾಸಿಕ ಅಂಕಗಳ ಮಟ್ಟ ತಲುಪಿದ ಸೆನ್ಸೆಕ್ಸ್ Read More »

ಬದಲಾದ ಪಿಎಸ್‌ಐ ಪರೀಕ್ಷಾ ದಿನಾಂಕ/ ಸೆ.22ರ ಬದಲು ಸೆ.28ಕ್ಕೆ

ಸಮಗ್ರ ನ್ಯೂಸ್‌: ಯುಪಿಎಸ್‌ಸಿ ಪರೀಕ್ಷೆ ಹಾಗೂ ಪಿಎಸ್‌ಐ ಪರೀಕ್ಷೆ ಒಂದೇ ದಿನ ನಿಗದಿಯಾಗಿರುವ ಹಿನ್ನಲೆಯಲ್ಲಿ, ಪಿಎಸ್‌ಐ ಪರೀಕ್ಷೆಯನ್ನು ಸೆ.22ರ ಬದಲು ಸೆ.28ರ ಶನಿವಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ವಿಚಾರವಾಗಿ ಐಪಿಎಸ್ ಪರೀಕ್ಷೆ ಮುಂದೂಡಿಕೆ ಮಾಡಲು ಮನವಿ ಮಾಡಲಾಗಿತ್ತು. ಅದರಂತೆ ಪಿಎಸ್‌ಐ ಪರೀಕ್ಷೆ ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ರಾಜಧಾನಿ ಬೆಂಗಳೂರು ಸೇರಿದಂತೆ ಆರು ಜಿಲ್ಲೆಗಳ ಒಟ್ಟು 164 ಕೇಂದ್ರಗಳಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯನ್ನು ಸೆ.22ರಂದು ನಡೆಸಲು ಕರ್ನಾಟಕ ಪರೀಕ್ಷಾ

ಬದಲಾದ ಪಿಎಸ್‌ಐ ಪರೀಕ್ಷಾ ದಿನಾಂಕ/ ಸೆ.22ರ ಬದಲು ಸೆ.28ಕ್ಕೆ Read More »