ರಾಜ್ಯ

ಕುಕ್ಕೆ: ಭಕ್ತಾದಿಗಳಿಗೆ ಈಗ ತೀರ್ಥಸ್ನಾನಕ್ಕೆ ಶವರ್ ಬಾತ್ ವ್ಯವಸ್ಥೆ

ಸಮಗ್ರ ನ್ಯೂಸ್: ಕುಮಾರಧಾರ ನದಿಯಲ್ಲಿ ನೀರಿನ ಪ್ರಮಾಣ ಅಧಿಕವಾಗಿರುವ ಕಾರಣ ಸ್ನಾನ ಘಟ್ಟದ ಬಳಿ ದೇಗುಲದ ವತಿಯಿಂದ ಭಕ್ತರಿಗೆ ಶವರ್ ಬಾತ್ ವ್ಯವಸ್ಥೆ ಮಾಡಿದೆ. ಮಳೆಗಾಲ ಸಂದರ್ಭದಲ್ಲಿ ಯಾವುದೇ ಅನಾಹುತ ನಡೆಯಬಾರದು ಎನ್ನುವ ದೃಷ್ಠಿಯಲ್ಲಿ ದ.ಕ ಜಿಲ್ಲಾಧಿಕಾರಿ ಭಕ್ತರು ಕುಮಾರಧಾರ ನದಿಯಲ್ಲಿ ಇಳಿದು ತೀರ್ಥ ಸ್ನಾನ ಮಾಡದಂತೆ ಆದೇಶ ಹೊರಡಿಸಿದ್ದರು . ಹೀಗಾಗಿ ಆರಂಭದಲ್ಲಿ ತಾತ್ಕಾಲಿಕವಾಗಿ ಡ್ರಮ್ಮಿನಲ್ಲಿ ನದಿ ನೀರನ್ನು ತುಂಬಿ ತೀರ್ಥಸ್ನಾನ ಮಾಡಲು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಇದೀಗ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ಶವರ್ ವ್ಯವಸ್ಥೆ […]

ಕುಕ್ಕೆ: ಭಕ್ತಾದಿಗಳಿಗೆ ಈಗ ತೀರ್ಥಸ್ನಾನಕ್ಕೆ ಶವರ್ ಬಾತ್ ವ್ಯವಸ್ಥೆ Read More »

ನಾಗಮಂಗಲ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ‌ ಗಲಭೆ| 50 ಮಂದಿ‌ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ 50 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರು ಅಂಗಡಿಗಳಿಗೆ, ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, 13 ಅಂಗಡಿಗಳನ್ನು ಧ್ವಂಸ ಮಾಡಲಾಗಿದೆ. ಮೆರವಣಿಗೆ ಸಾಗುವಾಗ ಗಲ್ಲಿ ಗಲ್ಲಿಗಳಿಂದಲೂ ಕಲ್ಲುಗಳು ತೂರಿ ಬಂದಿವೆ. ಪೆಟ್ರೋಲ್ ಬಾಂಬ್, ಮಾರಕಾಸ್ತ್ರಗಳೊಂದಿಗೆ ಗಲಭೆ ಸೃಷ್ಟಿಸಲಾಗಿದೆ. ದರ್ಗಾದ ಬಳಿ ಗಣಪತಿ ಮೆರವಣಿಗೆ ಬಂದಾಗ ಘಟನೆ ನಡೆದಿದೆ. ಡೊಳ್ಳು, ತಮಟೆ ಬಾರಿಸಬೇಡಿ ಎಂದು ಮುಸ್ಲಿಂ ಯುವಕರು ಕಿರಿಕ್ ಮಾಡಿದ್ದಾರೆ. ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಹೆಚ್ಚಿನ ಪೊಲೀಸರನ್ನು

ನಾಗಮಂಗಲ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ‌ ಗಲಭೆ| 50 ಮಂದಿ‌ ಪೊಲೀಸ್ ವಶಕ್ಕೆ Read More »

ಬೆಳ್ತಂಗಡಿ: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಸರ್ಕಾರಿ ಜಮೀನು ಒತ್ತುವರಿ| ಹೈಕೋರ್ಟ್ ನಿಂದ ಜಿಲ್ಲಾಡಳಿತಕ್ಕೆ ನೋಟೀಸ್ ಜಾರಿ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದಲ್ಲಿ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ ಸರಕಾರಿ ಜಮೀನು ಒತ್ತುವರಿ ಮಾಡಿಕೊಂಡು ಅನಧಿಕೃತ ಕಟ್ಟಡ ನಿರ್ಮಾಣ ಮಾಡುತ್ತಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಈ ವಿಚಾರವಾಗಿ ತೆಂಕಕಾರಂದೂರು ಗ್ರಾಮದ ನಿವಾಸಿ ಅಶೋಕ್‌ ಆಚಾರ್ಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ| ಕೆ.ವಿ. ಅರವಿಂದ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ

ಬೆಳ್ತಂಗಡಿ: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ಸರ್ಕಾರಿ ಜಮೀನು ಒತ್ತುವರಿ| ಹೈಕೋರ್ಟ್ ನಿಂದ ಜಿಲ್ಲಾಡಳಿತಕ್ಕೆ ನೋಟೀಸ್ ಜಾರಿ Read More »

ಬೆಂಗಳೂರಿನಲ್ಲಿ ಘೋರ ದುರಂತ| ಹಿಟ್ & ರನ್ ಗೆ ಮೂವರು ಬಲಿ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಹಿಟ್ & ರನ್ ಗೆ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ನಗರ ತಾಲೂಕಿನ ಚಿಕ್ಕಜಾಲ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿದ್ದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ರೋಹಿತ್ (22), ಸುಚಿತ್ (22) ಹಾಗೂ ಹರ್ಷ (22) ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ವಾಹನ ಚಾಲಕ ಪರಾರಿಯಾಗಿದ್ದಾನೆ.

ಬೆಂಗಳೂರಿನಲ್ಲಿ ಘೋರ ದುರಂತ| ಹಿಟ್ & ರನ್ ಗೆ ಮೂವರು ಬಲಿ Read More »

ಶಿರಾಡಿ ಘಾಟ್ ನಲ್ಲಿ ಹೊತ್ತಿ‌ ಉರಿದ ಲಾರಿ

ಸಮಗ್ರ ನ್ಯೂಸ್: ಚಲಿಸುತ್ತಿದ್ದ ಮಿನಿ ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಡಬಲ್‌ಟರ್ನ್ ಬಳಿ ಬುಧವಾರ ನಡೆದಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಲಾರಿಯಲ್ಲಿ ಶಿರಾಡಿ ಘಾಟಿಯ ಡಬಲ್‌ಟರ್ನ್ ಬಳಿ ತಲುಪುತ್ತಿದ್ದಂತೆ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಲಾರಿಯನ್ನು ಹೆದ್ದಾರಿ ಬದಿ ನಿಲ್ಲಿಸಿ ಕೆಳಕ್ಕಿಳಿದಿದ್ದಾರೆ. ಬಳಿಕ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟುಹೋಗಿದೆ ಎಂದು ವರದಿಯಾಗಿದೆ. ಇದೇ ರಸ್ತೆಯಲ್ಲಿ ಬರುತ್ತಿದ್ದ ಅಂಬ್ಯುಲೆನ್ಸ್ ಚಾಲಕ ಲಾರಿಗೆ ಬೆಂಕಿ

ಶಿರಾಡಿ ಘಾಟ್ ನಲ್ಲಿ ಹೊತ್ತಿ‌ ಉರಿದ ಲಾರಿ Read More »

ರಾಜ್ಯದಲ್ಲಿ 20+ ಲಕ್ಷ ಅನರ್ಹ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ರದ್ದತಿಗೆ ಆಹಾರ‌ ಇಲಾಖೆ ಚಿಂತನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಸುಮಾರು 20 ಲಕ್ಷಕ್ಕೂ ಹೆಚ್ಚು ಕಾರ್ಡ್ ಗಳನ್ನು ರದ್ದುಪಡಿಸಲು ಆಹಾರ ಇಲಾಖೆ ಚಿಂತನೆ ನಡೆಸಿದೆ. ಅನರ್ಹ ಕಾರ್ಡ್ ಗಳನ್ನು ರದ್ದು ಮಾಡಲು ಆಹಾರ ಇಲಾಖೆ ಸಿದ್ಧತೆ ನಡೆಸಿದ್ದು, ಅನರ್ಹರ ಪತ್ತೆ ಹಚ್ಚಲು ಖಾಸಗಿ ಸಂಸ್ಥೆಗೆ ಸಮೀಕ್ಷೆ ಹೊಣೆ ನೀಡಲು ಪ್ಲಾನ್ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯ ಅನಗತ್ಯ ವೆಚ್ಚ ಉಳಿಸಲು ಈ ಕಾರ್ಡ್ ಗಳನ್ನು ರದ್ದು ಮಾಡಲು ಚಿಂತನೆ ನಡೆಸಲಾಗಿದೆ. ಆಹಾರ ಭದ್ರತೆ

ರಾಜ್ಯದಲ್ಲಿ 20+ ಲಕ್ಷ ಅನರ್ಹ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ರದ್ದತಿಗೆ ಆಹಾರ‌ ಇಲಾಖೆ ಚಿಂತನೆ Read More »

ಮೀಸಲಾತಿ ರದ್ದು ಹೇಳಿಕೆ/ ನಾಳೆ ರಾಹುಲ್‌ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಸಮಗ್ರ ನ್ಯೂಸ್‌: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಅಮೆರಿಕದಲ್ಲಿ ಮೀಸಲಾತಿ ರದ್ದು ಕುರಿತು ನೀಡಿರುವ ಹೇಳಿಕೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಚಿಕ್ಕಮಗಳೂರಿನಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಮಾತನಾಡಿದ್ದು, ರಾಹುಲ್ ದೇಶದ ಜನರ ಕ್ಷಮೆ ಕೇಳಬೇಕು. ಕಾಂಗ್ರೆಸ್ ಮೀಸಲಾತಿ ವಿರೋಧಿ ವಿಚಾರ ಇಟ್ಟುಕೊಂಡು ಹೋರಾಟ ಮಾಡುತ್ತಿತ್ತು. ರಾಹುಲ್ ಹೇಳಿಕೆಯಿಂದ ಎಸ್ಸಿ, ಎಸ್‌ಟಿ ಸಮುದಾಯ ಗಾಬರಿಯಾಗಿದೆ ಎಂದು ಹೇಳಿದ್ದಾರೆ. ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಪ್ರತಿಕ್ರಿಯಿಸಿದ್ದು, ರಾಹುಲ್ ಗಾಂಧಿಗೆ ನಾಚಿಕೆ

ಮೀಸಲಾತಿ ರದ್ದು ಹೇಳಿಕೆ/ ನಾಳೆ ರಾಹುಲ್‌ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ Read More »

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ/ ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಸಮಗ್ರ ನ್ಯೂಸ್‌: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಉದ್ಯಮಿಗಳಿಗೆ ಐದು ಲಕ್ಷದವರೆಗೆ ಬಡ್ಡಿ ರಹಿತ ಸಾಲ ಸೇರಿದಂತೆ ಐದು ಗ್ಯಾರಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್ ಘೋಷಣೆ ಮಾಡಿದೆ. ಮಹಿಳಾ ಉದ್ಯಮಿಗಳಿಗೆ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ, ಪ್ರತಿ ಕುಟುಂಬಕ್ಕೆ 25 ಲಕ್ಷ ಆರೋಗ್ಯ ವಿಮೆ. ಕುಟುಂಬದ ಯಜಮಾನಿಗೆ ಮಾಸಿಕ 3,000 ಹಣ, ಜೊತೆಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಪ್ರತಿ ವ್ಯಕ್ತಿಗೆ 11 ಕೆಜಿ ಧಾನ್ಯಗಳನ್ನು ನೀಡುವ ಯೋಜನೆಯ ಮರುಜಾರಿ ಮಾಡುವುದಾಗಿ, ಕಾಂಗ್ರೆಸ್

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ/ ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌ Read More »

ಪದೇಪದೇ ಕೈಕೊಟ್ಟ ಎಲೆಕ್ಟ್ರಿಕ್ ಬೈಕ್| ಶೋರೂಂಗೆ ಬೆಂಕಿ ಇಟ್ಟ ಗ್ರಾಹಕ

ಸಮಗ್ರ ನ್ಯೂಸ್: ಖರೀದಿಸಿದ ಎಲೆಕ್ಟ್ರಿಕ್ ಬೈಕ್ ಆಗಾಗ್ಗೆ ಕೈಕೊಟ್ಟ ಹಿನ್ನೆಲೆಯಲ್ಲಿ ಬೇಸತ್ತು ಗ್ರಾಹಕನೋರ್ವ ಶೋ ರೂಂಗೆ ಬೆಂಕಿ ಇಟ್ಟ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಸೆ.10ರಂದು ಕಲಬುರ್ಗಿಯ ಹುಮನಾಬಾದ್ ರಸ್ತೆಯಲ್ಲಿರುವ ಓಲಾ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಬಿದ್ದಿರುವ ಪ್ರಕರಣ ನಡೆದಿತ್ತು. ಆದರೆ ಇದು ಆಕಸ್ಮಿಕವಾಗಿ ನಡೆದಂತಹ ಘಟನೆ ಎಂದು ಊಹಿಸಲಾಗಿತ್ತು. ಆದರೆ ಯಾವಾಗ ಠಾಣೆಗೆ ಗ್ರಾಹಕನೊಬ್ಬ ಬಂದು ಶರಣಾಗಿ ನಾನೇ ಬೆಂಕಿ ಹಚ್ಚಿದ್ದೇನೆ ಎಂಬ ತಪ್ಪು ಒಪ್ಪಿಕೊಂಡಾಗ ಪೊಲೀಸರು ಬೆಚ್ಚಿಬಿದ್ದಿದ್ದಾರೆ. ಮೊಹಮ್ಮದ್ ನದೀಮ್ ಎಂಬಾತ ಈ ಕೃತ್ಯ

ಪದೇಪದೇ ಕೈಕೊಟ್ಟ ಎಲೆಕ್ಟ್ರಿಕ್ ಬೈಕ್| ಶೋರೂಂಗೆ ಬೆಂಕಿ ಇಟ್ಟ ಗ್ರಾಹಕ Read More »

ಮಂಗಳೂರು: ತಾಯಿಯನ್ನು ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

ಸಮಗ್ರ ನ್ಯೂಸ್: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ತಾಯಿಗೆ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು. 7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿಗಳು, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ

ಮಂಗಳೂರು: ತಾಯಿಯನ್ನು ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ Read More »