ರಾಜ್ಯ

ಜೂನ್ 3 ರಿಂದ ಬೆಂಗಳೂರು – ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಸಮಗ್ರ ನ್ಯೂಸ್: ಕರ್ನಾಟಕ ಕರಾವಳಿ ಭಾಗಕ್ಕೆ ಬೆಂಗಳೂರಿನಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸಂಚಾರದ ಕನಸು ನನಸಾಗುತ್ತಿದೆ. ವಂದೇ ಭಾರತ್ ರೈಲಿಗೆ ಇತ್ತೀಚೆಗೆ ಅನುಮೋದನೆ ನೀಡಿದ ಬೆನ್ನಲ್ಲೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿರುವ ರೈಲ್ವೆ ಇಲಾಖೆಯು ಇದೇ ಜೂನ್ 3ರಿಂದ ಪ್ರಾಯೋಗಿಕ ಸಂಚಾರ ಆರಂಭಿಸಲಿದೆ. ಪ್ರಮುಖ ರೈಲ್ವೆ ತಪಾಸಣೆಗಳು, ಪರೀಕ್ಷೆಗಳು ಈ ವೇಳೆ ನಡೆಯಲಿವೆ.ದಕ್ಷಿಣ ಕರ್ನಾಟಕದ ಭಾಗದಿಂದ ಕರಾವಳಿ ಕರ್ನಾಟಕದ ಭಾಗಕ್ಕೆ ವೇಗದ ರೈಲು ಸಾರಿಗೆ ಸಿಕ್ಕಂತಾಗಲಿದೆ. ಇದು ಪ್ರಯಾಣಿಕರಿಗೆ, ವ್ಯಾಪಾರ, ವಾಣಿಜ್ಯಕ್ಕೆ ಪೂರಕವಾಗುವ ಜೊತೆಗೆ ಕರಾವಳಿ ಪ್ರವಾಸೋದ್ಯಮಕ್ಕೆ […]

ಜೂನ್ 3 ರಿಂದ ಬೆಂಗಳೂರು – ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ Read More »

ಕಾಸರಗೋಡು: ವಿಷ ಸೇವಿಸಿ ನವವಿವಾಹಿತೆ ಆತ್ಮಹತ್ಯೆ

ಸಮಗ್ರ ನ್ಯೂಸ್: ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಅಶ್ವತಿ ಪಿ.ವಿ. (24) ಮೃತಪಟ್ಟ ದುರ್ದೈವಿ. ಕಾಸರಗೋಡು ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕುಟ್ಟಿಕ್ಕೋಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇತೂರುಪಾರದ ವಟ್ಟಂತಟ್ಟ ನಿವಾಸಿಯಾದ ಪುಷ್ಪಾ ಮತ್ತು ದಿವಂಗತ ಸುಕು ದಂಪತಿಯ ಪುತ್ರಿ ಅಶ್ವತಿ, ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್

ಕಾಸರಗೋಡು: ವಿಷ ಸೇವಿಸಿ ನವವಿವಾಹಿತೆ ಆತ್ಮಹತ್ಯೆ Read More »

ಧರ್ಮಸ್ಥಳ : ವೃದ್ಧೆಯ ಪ್ರಜ್ಞೆ ತಪ್ಪಿಸಿ  ಲಕ್ಷಾಂತರ ರೂಪಾಯಿಯ ಚಿನ್ನಾಭರಣ ದರೋಡೆ 

samagra news:  ಧರ್ಮಸ್ಥಳದ ದೇವಸ್ಥಾನದ ಮುಖ್ಯದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರಿಗೆ ಮತ್ತು ಬರಿಸುವ ಪಾನೀಯ ನೀಡಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಘಟನೆ ಮೇ 25 ರಂದು ರಾತ್ರಿ ನಡೆದಿದೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ನಿವಾಸಿ ಪ್ರೇಮಾ ಕೆ (70) ಎಂಬುವರೇ ದರೋಡೆಗೊಳಗಾದ ದುರ್ದೈವಿ. ಇವರಿಂದ 112 ಗ್ರಾಂ ತೂಕದ ಚಿನ್ನದ ಆಭರಣಗಳು ಮತ್ತು 7,000/- ರೂಪಾಯಿ ನಗದನ್ನು ಕಳವು ಮಾಡಲಾಗಿದ್ದು, ಕಳವಾದ ಸೊತ್ತುಗಳ ಒಟ್ಟು ಮೌಲ್ಯ ಸುಮಾರು 10,00,700/- ರೂಪಾಯಿ ಎಂದು

ಧರ್ಮಸ್ಥಳ : ವೃದ್ಧೆಯ ಪ್ರಜ್ಞೆ ತಪ್ಪಿಸಿ  ಲಕ್ಷಾಂತರ ರೂಪಾಯಿಯ ಚಿನ್ನಾಭರಣ ದರೋಡೆ  Read More »

ರಾಜೀನಾಮೆಗೆ ಸಮಯಾವಕಾಶ ಕೇಳಿದ ಸಿಎಂ ಸಿದ್ದು : ಮಧ್ಯರಾತ್ರಿ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲರು 

ಸಮಗ್ರ ನ್ಯೂಸ್ : ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಅವರು ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ. ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಬುಧವಾರ ತಡರಾತ್ರಿ 11:45 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಮುಂಬೈಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ ಸಿದ್ದರಾಮಯ್ಯ (Siddaramaiah)

ರಾಜೀನಾಮೆಗೆ ಸಮಯಾವಕಾಶ ಕೇಳಿದ ಸಿಎಂ ಸಿದ್ದು : ಮಧ್ಯರಾತ್ರಿ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲರು  Read More »

ಕರ್ನಾಟಕ ರಾಜಕೀಯದಲ್ಲಿ ಭಾರೀ ಬದಲಾವಣೆ| ಡಿಕೆಶಿ ಸಿಎಂ ಜೊತೆಗೆ ನಾಲ್ವರಿಗೆ ಡಿಸಿಎಂ ಭಾಗ್ಯ

ಸಮಗ್ರ ನ್ಯೂಸ್: ಕರ್ನಾಟಕ ರಾಜಕಾರಣದಲ್ಲಿ ಇದೀಗ ಭಾರಿ ಮಹಾತಿರುವು ಸಂಭವಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಂತಿಮ ನಿರ್ಧಾರ ಕೈಗೊಂಡಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ನಡೆದ ಸುದೀರ್ಘ ಸಭೆಗಳ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆಯಾಗಿದೆ. ಇದರೊಂದಿಗೆ, ಹೊಸ ಸರ್ಕಾರದಲ್ಲಿ ನಾಲ್ವರು ಉಪಮುಖ್ಯಮಂತ್ರಿಗಳ (ಡಿಸಿಎಂ) ಸ್ಥಾನ ಸೃಷ್ಟಿಯಾಗುವ ಸೂಚನೆಗಳು ಬಲಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಸೂಚನೆಯ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಕಳೆದ

ಕರ್ನಾಟಕ ರಾಜಕೀಯದಲ್ಲಿ ಭಾರೀ ಬದಲಾವಣೆ| ಡಿಕೆಶಿ ಸಿಎಂ ಜೊತೆಗೆ ನಾಲ್ವರಿಗೆ ಡಿಸಿಎಂ ಭಾಗ್ಯ Read More »

ಮೇಕೆದಾಟು ಯೋಜನೆಯ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಪ್ರಸ್ತಾವಿತ ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ಕರ್ನಾಟಕಕ್ಕೆ ಬಹು ದೊಡ್ಡ ಜಯ ಸಿಕ್ಕಿದೆ. ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ 2025ರ ನವೆಂಬರ್‌ನಲ್ಲಿ ವಜಾಗೊಳಿಸಿತ್ತು. ತಮಿಳುನಾಡಿನ ಆಕ್ಷೇಪಣೆ, ತಜ್ಞ ಸಂಸ್ಥೆಗಳು, ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಭಿಪ್ರಾಯ ಪರಿಗಣಿಸಿದ ನಂತರವೇ ಆಯೋಗ ಯೋಜನೆಗೆ ಅನುಮೋದನೆ ನೀಡಲಿದೆ ಎಂದು ತಿಳಿಸಿತ್ತು. ಈ ಮಧ್ಯೆ, 2025ರ

ಮೇಕೆದಾಟು ಯೋಜನೆಯ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ Read More »

ಮೇ.29ರಂದು ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ರಾಜ್ಯದ ನೂತನ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ. ದೆಹಲಿಯಲ್ಲಿ ನಡೆದ ಹೈಕಮಾಂಡ್ ನೇತೃತ್ವದ ಮಹತ್ವದ ಸಭೆ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ‌ಗುರುವಾರದ ಮೊದಲು ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚಿಸಿದೆ ಎಂದು ‌ಹೇಳಲಾಗಿದೆ. ದೆಹಲಿಯಲ್ಲಿ ನಡೆದ ಹೈಕಮಾಂಡ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೇ ದಿನಗಳಲ್ಲಿ ರಾಜೀನಾಮೆ

ಮೇ.29ರಂದು ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ Read More »

ಹೊಟೇಲ್ ಗ್ರಾಹಕರಿಗೆ ಬಿಗ್ ಶಾಕ್| ಆಹಾರಗಳ ಮೇಲೆ‌‌ ಶೇ 60ರಷ್ಟು ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ಕಾರ್ಮಿಕರ ಕನಿಷ್ಠ ವೇತನವನ್ನು ಶೇ.60ರಷ್ಟು ಹೆಚ್ಚಿಸಿರುವುದರಿಂದ ಹೊಟೇಲ್‌ಗಳಲ್ಲಿನ ತಿನಿಸುಗಳ ದರ ಹೆಚ್ಚಿಸುವುದು ಅನಿವಾರ್ಯವಾಗಲಿದೆ ಎಂದು ಹೊಟೇಲ್ ಮಾಲೀಕರ ಸಂಘ ಹೇಳಿದೆ. 30 ರು.ಯಿಂದ 40 ರು.ಗೆ ಸಿಗುತ್ತಿರುವ ಎರಡು ಇಡ್ಲಿ ದರ 60 ರು.ಯಿಂದ 90 ರು. ಹಾಗೂ ಮಸಾಲೆ ದೋಸೆ 150 ರು.ವರೆಗೆ ಏರಿಕೆಯಾಗಬಹುದು. ಅದೇ ರೀತಿ ಊಟ ಸೇರಿ ಎಲ್ಲ ತಿಂಡಿ, ತಿನಿಸುಗಳ ದರಗಳು ಮುಂಬರುವ ದಿನಗಳಲ್ಲಿ ಶೇ.60ರಷ್ಟು ಹೆಚ್ಚಳವಾಗುತ್ತವೆ. ಇದರಿಂದ ಗ್ರಾಹಕರಿಗೆ ನೇರವಾಗಿ ಹೊರೆ ಬೀಳುತ್ತದೆ. ಬೆಲೆ

ಹೊಟೇಲ್ ಗ್ರಾಹಕರಿಗೆ ಬಿಗ್ ಶಾಕ್| ಆಹಾರಗಳ ಮೇಲೆ‌‌ ಶೇ 60ರಷ್ಟು ಏರಿಕೆ ಸಾಧ್ಯತೆ Read More »

ನಾಯಿ ಕಡಿತ, ನಿರ್ಲಕ್ಷ ವಹಿಸಿದ ಯುವಕನ ದೇಹವನ್ನೇ ಅವರಿಸಿದ ರೇಬಿಸ್ ವೈರಸ್ !!

ಸಮಗ್ರ ನ್ಯೂಸ್ : ಹುಚ್ಚು ನಾಯಿ ಕಚ್ಚಿದ ನಂತರ ರೇಬಿಸ್ ನಿರೋಧಕ ಲಸಿಕೆ (Rabies Vaccine) ಹಾಕಿಸಿಕೊಳ್ಳದೆ ನಿರ್ಲಕ್ಷ್ಯ ವಹಿಸಿದ ಪರಿಣಾಮ, ಯುವಕನೊಬ್ಬ ಮೃತಪಟ್ಟಿರುವ ವಿಜಯಪುರ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗೋಲಸಂಗಿ ಗ್ರಾಮದ ನಿವಾಸಿ ಪ್ರದೀಪ್ ಚಂದ್ರಶೇಖರ ಹಳೇರೊಳ್ಳಿ (22) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಕಳೆದ ಮಾರ್ಚ್ ತಿಂಗಳಲ್ಲಿ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಮನ್ನಿಕೇರಿ ಗ್ರಾಮದಲ್ಲಿ ನಡೆದಿದ್ದ ‘ಮನ್ನಿಕೇರಿ ಚಂದ್ರಾದೇವಿ ಜಾತ್ರೆ’ಗೆ ಪ್ರದೀಪ್ ತೆರಳಿದ್ದನು. ಈ ಸಂದರ್ಭದಲ್ಲಿ

ನಾಯಿ ಕಡಿತ, ನಿರ್ಲಕ್ಷ ವಹಿಸಿದ ಯುವಕನ ದೇಹವನ್ನೇ ಅವರಿಸಿದ ರೇಬಿಸ್ ವೈರಸ್ !! Read More »

ಬೆಂಗಳೂರು: ಚಲಿಸುತ್ತಿದ್ದ ರೈಲಿನಿಂದ ಬೆರ್ಪಟ್ಟ ಬೋಗಿ 

ಸಮಗ್ರ ನ್ಯೂಸ್ : ಬೆಂಗಳೂರಿನಿಂದ ಬಿಹಾರಕ್ಕೆ ತೆರಳುತ್ತಿದ್ದ ರೈಲಿನ ಬೋಗಿ ಬೆರ್ಪಟ್ಟ ಘಟನೆ  ತಡವಾಗಿ ಬೆಳಕಿಗೆ ಬಂದಿದೆ. ಮೇ 23 ರಂದು ತಡರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರಿನ ಎಸ್ಎಂವಿಟಿ ನಿಲ್ದಾಣದಿಂದ (Bengaluru SMVT Station) ಬಿಹಾರಕ್ಕೆ ತೆರಳುತ್ತಿದ್ದ ದಾನಪೂರ್ ವಿಶೇಷ ರೈಲು  ಚಲಿಸುತ್ತಿದ್ದಾಗಲೇ ಜಾಯಿಂಟ್‌ ವೀಲ್‌ ಕಟ್ಟಾಗಿತ್ತು. ಮೇ 24 ರಂದು ಆಂಧ್ರ ಪ್ರದೇಶದ ವಿಜಯವಾಡ ನಿಲ್ದಾಣ ದಾಟಿ 30 ಕಿಮೀ ದೂರದಲ್ಲಿ 100 ಕಿಮೀ ವೇಗದಲ್ಲಿ ಚಲಿಸುತ್ತಿದ್ದಾಗ ಜಾಯಿಂಟ್‌ ವೀಲ್‌ ಕಟ್ಟಾಗಿ ಪ್ರಯಾಣಿಕರಿದ್ದ ಬೋಗಿ ಹಾಗೂ

ಬೆಂಗಳೂರು: ಚಲಿಸುತ್ತಿದ್ದ ರೈಲಿನಿಂದ ಬೆರ್ಪಟ್ಟ ಬೋಗಿ  Read More »