ರಾಜ್ಯ

ದ.ಕ ಜಿಲ್ಲೆಯ 386 ಕಡೆ ಸಾರ್ವಜನಿಕ ಗಣೇಶೋತ್ಸವ ಆಚರಣೆ| 30 ಕಡೆ ಅತಿ ಸೂಕ್ಷ್ಮ ಮೆರವಣಿಗೆ ಗುರುತು| ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ಈ ಬಾರಿ ಒಟ್ಟು 386 ಕಡೆ ಸಾರ್ವಜನಿಕ ಗಣೇಶೋತ್ಸವ ಜರಗಲಿದ್ದು ಇದರಲ್ಲಿ 30 ಕಡೆಗಳ ಗಣೇಶೋತ್ಸವ ಮೆರವಣಿಗೆಗಳನ್ನು ಅತೀ ಸೂಕ್ಷ್ಮವೆಂದು ಪೊಲೀಸ್‌ ಇಲಾಖೆ ಗುರುತಿಸಿದೆ. ಮಂಗಳೂರು ನಗರ ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಸೆ. 6ರಿಂದ ಸೆ.17ರ ವರೆಗೆ ಒಟ್ಟು 165 ಕಡೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಸರ್ಜನೆ ಮಾಡಲಾಗುತ್ತದೆ. ಇದರಲ್ಲಿ 22 ಅತೀ ಸೂಕ್ಷ್ಮ, 64 ಸೂಕ್ಷ್ಮ ಮತ್ತು 79 ಸಾಮಾನ್ಯ ಗಣೇಶ ಪ್ರತಿಷ್ಠಾಪನಾ ಮೆರವಣಿಗೆಯೆಂದು ಪರಿಗಣಿಸಲಾಗಿದೆ. ದ.ಕ ಜಿಲ್ಲಾ […]

ದ.ಕ ಜಿಲ್ಲೆಯ 386 ಕಡೆ ಸಾರ್ವಜನಿಕ ಗಣೇಶೋತ್ಸವ ಆಚರಣೆ| 30 ಕಡೆ ಅತಿ ಸೂಕ್ಷ್ಮ ಮೆರವಣಿಗೆ ಗುರುತು| ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ Read More »

ನಾನು ಪವಿತ್ರಾಗೌಡ ಮದುವೆ ಆಗಿಲ್ಲ, ಆದರೆ ಇಬ್ಬರು ಜತೆಯಲ್ಲಿ ಇದ್ದೀವಿ: ದರ್ಶನ್

ಸಮಗ್ರ ನ್ಯೂಸ್: ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ಇದೀಗ ನಾನು ಪವಿತ್ರಾಗೌಡ ಮದುವೆ ಆಗಿಲ್ಲ, ಆದರೆ ಇಬ್ಬರು ಜತೆಯಲ್ಲಿ ಇದ್ದೀವಿ ಎಂದು ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌, ಗೆಳತಿ ಪವಿತ್ರಾಗೌಡ ಸೇರಿ 17 ಮಂದಿ ಜೈಲು ಪಾಲಾಗಿದ್ದಾರೆ. ರೇಣುಕಾಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಮಸೇಜ್‌ಗಳನ್ನು ಮಾಡಿದ್ದಕ್ಕೆ, ಆತನನ್ನು ಕಿಡ್ನ್ಯಾಪ್‌ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಇದೀಗ ಇದೇ ಪ್ರಕರಣದಲ್ಲಿ ನಟ ದರ್ಶನ್‌ ಗ್ಯಾಂಗ್‌ ಕಂಬಿ ಎಣಿಸುತ್ತಿದ್ದಾರೆ. ಡಿಸಿಪಿಯಿಂದ

ನಾನು ಪವಿತ್ರಾಗೌಡ ಮದುವೆ ಆಗಿಲ್ಲ, ಆದರೆ ಇಬ್ಬರು ಜತೆಯಲ್ಲಿ ಇದ್ದೀವಿ: ದರ್ಶನ್ Read More »

ವಿನೇಶ್ ಪೋಗಟ್ ಮತ್ತು ಬಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ

ಸಮಗ್ರ ನ್ಯೂಸ್: ಕುಸ್ತಿಪಟುಗಳಾದ ವಿನೇಶ್ ಪೋಗಟ್ ಮತ್ತು ಬಜರಂಗ್ ಪೂನಿಯಾ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾಗುವ ತಮ್ಮ ರೈಲ್ವೆ ಇಲಾಖೆಯ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದೆ ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಇವರಿಬ್ಬರೂ ಸ್ಪರ್ಧಿಸುವ ಸಾಧ್ಯತೆ ಇದೆ.

ವಿನೇಶ್ ಪೋಗಟ್ ಮತ್ತು ಬಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ Read More »

ಮಂಗಳೂರು: ಯೆಯ್ಯಾಡಿ ಬಳಿ ಬೈಕ್ ಸ್ಕಿಡ್| ಯುವಕರಿಬ್ಬರು ದಾರುಣ ಸಾವು

ಸಮಗ್ರ ನ್ಯೂಸ್: ಬೈಕ್ ಸ್ಕಿಡ್ ಆಗಿ ಇಬ್ಬರು ಯುವಜರು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಯೆಯ್ಯಾಡಿ ಏರ್ಪೋರ್ಟ್ ರೋಡಲ್ಲಿ ಸೆ.5ರ ತಡರಾತ್ರಿ ನಡೆದಿದೆ. ಗುರುವಾರ ತಡರಾತ್ರಿ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಅನಾಹುತ ನಡೆದಿದೆ. ಕೋಡಿಕಲ್ ನಿವಾಸಿ ಕಾಶೀನಾಥ್(17) ಮತ್ತು ಉಪ್ಪಿನಂಗಡಿಯ ಚೇತನ್(24) ಮೃತ ದುರ್ದೈವಿ. ಇವರಿಬ್ಬರಿದ್ದ ಬೈಕ್ ಲಾರಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಉರುಳಿಬಿದ್ದಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸಂಚಾರಿ ಪೊಲೀಸರು ಪ್ರಕರಣ ದಾಖಲು

ಮಂಗಳೂರು: ಯೆಯ್ಯಾಡಿ ಬಳಿ ಬೈಕ್ ಸ್ಕಿಡ್| ಯುವಕರಿಬ್ಬರು ದಾರುಣ ಸಾವು Read More »

ಎತ್ತಿನಹೊಳೆ ಯೋಜನೆ ಉದ್ಘಾಟನೆ ಕಾರ್ಯಕ್ರಮದ ಮೊದಲೇ ಕುಸಿದ ಚಪ್ಪರ

ಸಮಗ್ರ ನ್ಯೂಸ್: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ವಿತರಣಾ ಟ್ಯಾಂಕ್ 4ರಲ್ಲಿ ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉದ್ಘಾಟನೆ ನೆರವೇರಿಸಲಿದ್ದಾರೆ. ಇದಕ್ಕೂ ಮುನ್ನ ದೊಡ್ಡನಗರ ವಿತರಣಾ ಟ್ಯಾಂಕ್ ಡಿಸಿ-3 ರಿಂದ ಹೆಬ್ಬನಹಳ್ಳಿ ಡಿಸಿ-4 ವರೆಗೆ ನೀರು ಪಂಪ್ ಮಾಡುವ ವ್ಯವಸ್ಥೆಗೆ ಸಿಎಂ ಮತ್ತು ಡಿಸಿಎಂ ಚಾಲನೆ ನೀಡಲಿದ್ದಾರೆ. ಆದರೆ ಗಂಗಾ ಪೂಜೆ ಮತ್ತು ಬಾಗೀನ ಅರ್ಪಣೆ ಕಾರ್ಯಕ್ರಮಕ್ಕೆ ನಿರ್ಮಿಸಿದ ಚಪ್ಪರ ಇಂದು ಉದ್ಘಾಟನೆಯ ಮೊದಲೇ

ಎತ್ತಿನಹೊಳೆ ಯೋಜನೆ ಉದ್ಘಾಟನೆ ಕಾರ್ಯಕ್ರಮದ ಮೊದಲೇ ಕುಸಿದ ಚಪ್ಪರ Read More »

ಚಿಕ್ಕಮಗಳೂರು: ಪ್ರಪಾತಕ್ಕೆ ಬಿದ್ದ ಗೂಡ್ಸ್ ಗಾಡಿ; ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್: ಗೂಡ್ಸ್ ಗಾಡಿಯೊಂದು 20 ಅಡಿ ಎತ್ತರದಿಂದ ಸ್ಕಿಡ್ ಆಗಿ ಕೆಳಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಲದುರ್ಗ ಗ್ರಾಮದಲ್ಲಿ ಸೆ.5 ರಂದು ನಡೆದಿದೆ. ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿದ್ದು ತಿರುವಿನಲ್ಲಿ ಗಾಡಿಯು ಗುಡ್ಡದ ಮರಗಿಡಗಳಿಗೆ ಸಿಲುಕಿ ಅಪಘಾತ ಸಂಭವಿಸಿದೆ. ಗಾಡಿ ಸ್ಲೋ ಇದ್ದ ಕಾರಣ ಗಾಡಿಯಲ್ಲಿದ್ದ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಕುರಿತು ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು: ಪ್ರಪಾತಕ್ಕೆ ಬಿದ್ದ ಗೂಡ್ಸ್ ಗಾಡಿ; ನಾಲ್ವರಿಗೆ ಗಾಯ Read More »

ವಿಶ್ವ ಸೌಂದರ್ಯ ಸ್ಪರ್ಧೆಗೆ ಕರಾವಳಿಯ ಇಬ್ಬರು ವೈದ್ಯೆಯರು ಆಯ್ಕೆ

ಸಮಗ್ರ ನ್ಯೂಸ್: ಈ ಬಾರಿಯ ವಿಶ್ವ ಸೌಂದರ್ಯ ಸ್ಪರ್ಧೆಗೆ ಕರಾವಳಿ ಇಬ್ಬರು ವೈದ್ಯ ಬೆಡಗಿಯರು ಆಯ್ಕೆಯಾಗಿದ್ದಾರೆ.‌ ಫಿಲಿಪ್ಪಿನ್ಸ್​​ನಲ್ಲಿ ಈ ವರ್ಷಾಂತ್ಯ ನಡೆಯುವ ಸೌಂದರ್ಯ ಸ್ಪರ್ಧೆಗೆ ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್ ಮತ್ತು ಡಾ.ಶ್ರುತಿ ಬಲ್ಲಾಳ್ ಆಯ್ಕೆಯಾಗಿದ್ದಾರೆ. ಈಚೆಗೆ ಬೆಂಗಳೂರಿನ ಕಿಂಗ್ಸ್‌ ಮೆಡೋಸ್‌ನಲ್ಲಿ ನಡೆದ ಮಿಸ್ ಆಯಂಡ್ ಮಿಸೆಸ್ ಇಂಡಿಯಾದ 8ನೇ ಆವೃತ್ತಿಯ ಫ್ಯಾಷನ್‌ ಶೋ ಕಿರೀಟವನ್ನು ಮುಡಿಗೇರಿಸಿಕೊಂಡು, ಇವರು ಅಂತಾರಾಷ್ಟ್ರೀಯ ಸೌಂದರ್ಯ‌ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದ್ದಾರೆ. ಇಂಡಿಪೆಂಡೆಂಟ್ ಇಂಡಿಯಾ ಇಂಟರ್ ನ್ಯಾಷನಲ್​ ವಿಭಾಗದಲ್ಲಿ ಡಾ.ನಿಶಿತಾ ಶೆಟ್ಟಿಯಾನ್ ಫೆರ್ನಾಂಡೀಸ್, ಅರ್ಥ್

ವಿಶ್ವ ಸೌಂದರ್ಯ ಸ್ಪರ್ಧೆಗೆ ಕರಾವಳಿಯ ಇಬ್ಬರು ವೈದ್ಯೆಯರು ಆಯ್ಕೆ Read More »

ಸುರತ್ಕಲ್: ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ

ಸಮಗ್ರ ನ್ಯೂಸ್: ರಾ. ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಏಕಾಏಕಿ ಬೆಂಕಿಗಾಹುತಿಯಾದ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಸೆ.5ರಂದು ನಡೆದಿದೆ. ಸುಟ್ಟು ಕರಕಲಾದ ಕಾರು ಬೆನ್ಸ್ ಕಂಪೆನಿಯ ಕಾರೆಂದು ಹೇಳಲಾಗುತ್ತಿದ್ದು, ಕಾರು ಉಡುಪಿಯಿಂದ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ. ಸುರತ್ಕಲ್ ಎನ್ ಐಟಿಕೆ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ . ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆಯ ಪೊಲಿಸರು ಸ್ಥಳಕ್ಕೆ

ಸುರತ್ಕಲ್: ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ Read More »

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ| ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಸಮಗ್ರ ನ್ಯೂಸ್: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಇಂದು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಅತ್ಯಾಚಾರ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣ ಜಾಮೀನು ಕೋರಿ

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣ| ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್ Read More »

ಹವಾಮಾನ ವರದಿ| ಸೆ.05ರಂದು ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗುರುವಾರವೂ (ಸೆ.05) ಮಳೆ ಮುಂದುವರಿಯಲಿದ್ದು, ರಾಜ್ಯದ 10 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಹಳದಿ ಅಲರ್ಟ್‌ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್‌, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಗುರುವಾರ ಭಾರಿ ಮಳೆಯಾಗಲಿದೆ.ಈ ಜಿಲ್ಲೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ಹಳದಿ ಅಲರ್ಟ್‌ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ

ಹವಾಮಾನ ವರದಿ| ಸೆ.05ರಂದು ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ Read More »