ರಾಜ್ಯ

ಬಿಬಿಎಂಪಿ ಮಾರ್ಗಸೂಚಿ/ 2000 ಪಿಜಿಗಳು ನೋಂದಣಿ

ಸಮಗ್ರ ನ್ಯೂಸ್‌: ಕೋರಮಂಗಲದ ವಸತಿ ಗೃಹದಲ್ಲಿ ಯುವತಿ ಬರ್ಬರ ಹತ್ಯೆ ಘಟನೆ ಬೆನ್ನಲ್ಲೇ, ನೋಂದಣಿಯಾಗದ ಪೇಯಿಂಗ್ ಗೆಸ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ಬಿಬಿಎಂಪಿ ಮುಂದಾಗಿದ್ದೇ ತಡ ಇದೀಗ 2000 ಪಿಜಿಗಳು ನೋಂದಣಿಯಾಗಿವೆ. ಇತ್ತೀಚೆಗಷ್ಟೇ ಪಾಲಿಕೆ ನಗರ ವ್ಯಾಪ್ತಿಯ’ಪೇಯಿಂಗ್ ಗೆಸ್ಟ್’ ಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಮಾರ್ಗಸೂಚಿ ಬೆನ್ನಲ್ಲೇ ಇದೀಗ ಪಾಲಿಕೆ ಅಧಿಕಾರಿಗಳು ಪಿಜಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಮುಂದಾಗಿದ್ದು, ಮಾರ್ಗಸೂಚಿ ಅನುಸರಿಲದ ಪಿಜಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಮಾರ್ಗೂಸೂಚಿಯಲ್ಲಿ ಹಲವು ಅಂಶಗಳನ್ನು ತಿಳಿಸಲಾಗಿದೆ. […]

ಬಿಬಿಎಂಪಿ ಮಾರ್ಗಸೂಚಿ/ 2000 ಪಿಜಿಗಳು ನೋಂದಣಿ Read More »

ಚಿಕ್ಕಮಗಳೂರು: ಸಹೋದರನನ್ನೇ ಮನಸ್ಸೋ ಇಚ್ಛೆ ಕೊಚ್ಚಿ ಕೊಂದ ಸಹೋದರಿಯರು

ಸಮಗ್ರ ನ್ಯೂಸ್ : ಸಹೋದರಿಯರು ಸಹೋದರನನ್ನು ಮನಸ್ಸೋ ಇಚ್ಛೆ ಕೊಚ್ಚಿ ಕೊಂದ ಘಟನೆ ಚಿಕ್ಕಮಗಳೂರಿನ ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ನಡೆದಿದೆ. ರಾಘವೇಂದ್ರ 40 ಮೃತ ದುರ್ದೈವಿ,ಕೆಲ ದಿನಗಳಿಂದ ಆಸ್ತಿಗಾಗಿ ಕುಟುಂಬಸ್ಥರ ಜೊತೆ ಗಲಾಟೆ ನಡೆಯುತ್ತಿತ್ತು. ಇದೇ ಕಾರಣದಿಂದ ಇಂದು ಬೆಳ್ಳಂಬೆಳಗ್ಗೆ ಬಾವನ ಜೊತೆಗೂಡಿ ಮೂವರು ಸಹೋದರಿಯರುಸಹೋದರನ ಕಣ್ಣಿಗೆ ಖಾರದ ಪುಡಿ ಎರಚಿ ಮನಸ್ಸೋ ಇಚ್ಛೆ ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಎಸ್ಪಿ ವಿಕ್ರಂ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತರೀಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ

ಚಿಕ್ಕಮಗಳೂರು: ಸಹೋದರನನ್ನೇ ಮನಸ್ಸೋ ಇಚ್ಛೆ ಕೊಚ್ಚಿ ಕೊಂದ ಸಹೋದರಿಯರು Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ಚಾರ್ಜ್ ಶೀಟ್ನಲ್ಲಿ ನಟ ದರ್ಶನ್ ನನ್ನು ಎ 1 ಆರೋಪಿ ಮಾಡಲು ತಯಾರಿ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎ2 ಆರೋಪಿಯಿಂದ ಎ1 ಆರೋಪಿ ಸ್ಥಾನಕ್ಕೆ ಏರಿದ ದರ್ಶನ್ ಗೆ ಚಾರ್ಜ್ ಶೀಟ್ ಬಡ್ತಿ ನೀಡಲು ತಯಾರಿ ನಡೆದಿದೆ. ಕೊಲೆ ಕೇಸಿನ ತನಿಖೆ ವೇಳೆ ದರ್ಶನ್ ಎ2 ಆರೋಪಿಯನ್ನಾಗಿ ಮಾಡಲಾಗಿತ್ತು. ಎ1 ಆರೋಪಿಯನ್ನಾಗಿ ಪವಿತ್ರಾಗೌಡರನ್ನ (Pavithra Gowda) ಹೆಸರಿಸಲಾಗಿತ್ತು. ತನಿಖೆ ಮುಗಿದು ಚಾರ್ಜ್ ಶೀಟ್ ಸಲ್ಲಿಕೆಯ ಸಿದ್ಧತೆಯಲ್ಲಿ ಎ2 ಇಂದ ಎ1 ಗೆ ಬಡ್ತಿ ನೀಡಲು ಸಿದ್ಧತೆಗಳು ಆರಂಭವಾಗಿದೆ. ಇದು ದರ್ಶನ್ ಗೆ ಮತ್ತಷ್ಟು ಸಂಕಷ್ಟ ತಂದೊಡ್ಡೋದು ಫಿಕ್ಸ್

ರೇಣುಕಾಸ್ವಾಮಿ ಕೊಲೆ ಪ್ರಕರಣ| ಚಾರ್ಜ್ ಶೀಟ್ನಲ್ಲಿ ನಟ ದರ್ಶನ್ ನನ್ನು ಎ 1 ಆರೋಪಿ ಮಾಡಲು ತಯಾರಿ Read More »

‘ಅರೆಸ್ಟ್ ಮಾಡಲು ಸಿದ್ದರಾಮಯ್ಯ ಯಾಕೆ? ಒಬ್ಬ ಕಾನ್ಸ್ ಟೇಬಲ್ ಸಾಕು’| ಹೆಚ್.ಡಿ ಕೆ ಹೇಳಿಕೆಗೆ ಸಿಎಂ‌ ತಿರುಗೇಟು

ಸಮಗ್ರ ನ್ಯೂಸ್: ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡೋಕೆ ನೂರು ಸಿದ್ದರಾಮಯ್ಯ ಬೇಕಿಲ್ಲ ಒಬ್ಬ ಕಾನ್‌ಸ್ಟೇಬಲ್ ಸಾಕು ಎಂದು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ನೀಡಿದರು. 100 ಸಿದ್ದರಾಮಯ್ಯ ಬಂದ್ರೂ ಏನು ಮಾಡೋಕಾಗಲ್ಲ ಎಂದಿದ್ದ ಹೆಚ್ಡಿಕೆ ಹೇಳಿಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಬಂಧನಕ್ಕೆ ಹೆದರಿ ಕುಮಾರಸ್ವಾಮಿ ಪ್ರೆಸ್‌ಮೀಟ್ ಮಾಡ್ತಿದ್ದಾರೆ. ಕುಮಾರಸ್ವಾಮಿದು ಬರೀ ಹಿಟ್ ಅಂಡ್ ರನ್. ದಾಖಲೆ ಬಿಡ್ತೀವಿ ಬಿಡ್ತೀವಿ ಅಂತಾರೆ ಯಾವ ದಾಖಲೆನೂ ಇಲ್ಲ. ಇದುವರೆಗೆ ಯಾವ ಪ್ರಕರಣವನ್ನು

‘ಅರೆಸ್ಟ್ ಮಾಡಲು ಸಿದ್ದರಾಮಯ್ಯ ಯಾಕೆ? ಒಬ್ಬ ಕಾನ್ಸ್ ಟೇಬಲ್ ಸಾಕು’| ಹೆಚ್.ಡಿ ಕೆ ಹೇಳಿಕೆಗೆ ಸಿಎಂ‌ ತಿರುಗೇಟು Read More »

ನಾಪತ್ತೆಯಾಗಿದ್ದ SSLCಯ 6 ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆ

ಸಮಗ್ರ ನ್ಯೂಸ್: ಹೊಳಲ್ಕೆರೆ ಪಟ್ಟಣದಿಂದ ಆರು ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ನಡೆದಿತ್ತು. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಡ್ರೀಮ್ ವರ್ಡ್ ಇಂಟರ್ ನ್ಯಾಷನಲ್‌ ಸ್ಕೂಲ್ ನಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ 6 ವಿದ್ಯಾರ್ಥಿಗಳಾದ ಶ್ರೇಯಸ್, ಧನುಷ್, ಮನು, ತರುಣ್, ಸಿದ್ದೇಶ್ ಹಾಗೂ ಯಶಸ್ ನಾಪತ್ತೆಯಾಗಿದ್ದರು. ಈ ಆರು ಜನ ವಿದ್ಯಾರ್ಥಿಗಳು, ಶಾಲೆಯ ವಸತಿ ಶಾಲೆಯಲ್ಲಿದ್ದರು. ಆದರೆ, ಇಂದು ಬೆಳಗ್ಗೆಯಿಂದ ನಾಪತ್ತೆ ಆಗಿದ್ದರು. ಈ ಕುರಿತು ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸಿದಾಗ ಇದೀಗ

ನಾಪತ್ತೆಯಾಗಿದ್ದ SSLCಯ 6 ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆ Read More »

ವಿಚ್ಛೇದನ ಪಡೆಯದೆ ಎರಡನೇ ಮದುವೆ.. ಮದುವೆ ಮನೆಗೆ ನುಗ್ಗಿ ಮೊದಲನೇ ಹೆಂಡತಿ ತರಾಟೆ

ಸಮಗ್ರ ನ್ಯೂಸ್: ವಿಚ್ಛೇದನ ಪಡೆಯದೆ ಇನ್ನೊಂದು ಮದುವೆಗೆ ಮುಂದಾದ ಗಂಡನನ್ನು ಮೊದಲನೇ ಹೆಂಡತಿ ಹಾಗೂ ಆಕೆಯ ಅಕ್ಕ ಮದುವೆ ಮನೆಗೆ ನುಗ್ಗಿ ತರಾಟೆಗೆ ತೆಗೆದುಕೊಂಡ ಘಟನೆ ಚಿಕ್ಕಬಳ್ಳಾಪುರ ನಗರದ ಕ್ರೈಸ್ಟ್ ಚರ್ಚ್‌ನಲ್ಲಿ ನಡೆದಿದೆ. ನೋಹನ್‌ ಕಾಂತ್‌ ಎಂಬಾತ ಮದುವೆಯಾಗುತ್ತಿರುವ ಸಂದರ್ಭದಲ್ಲಿ, ಆತನ ಮೊದಲನೇ ಹೆಂಡತಿ ರಶ್ಮಿ ಹಾಗೂ ಅವರ ಅಕ್ಕ ರೋಸಿ ಎಂಬವರು ಮದುವೆ ಮನೆಗೆ ಆಗಮಿಸಿ ಗಲಾಟೆ ಎಬ್ಬಿಸಿದ್ದಾರೆ. ನೋಹನ್‌ ಕಾಂತ್‌ ತನ್ನಿಂದ ವಿಚ್ಛೇದನ ಪಡೆಯದೆ ಎರಡನೇ ಮದುವೆಯಾಗುತ್ತಿದ್ದಾನೆ ಎಂದು ರಶ್ಮಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ

ವಿಚ್ಛೇದನ ಪಡೆಯದೆ ಎರಡನೇ ಮದುವೆ.. ಮದುವೆ ಮನೆಗೆ ನುಗ್ಗಿ ಮೊದಲನೇ ಹೆಂಡತಿ ತರಾಟೆ Read More »

ಶಿವಮೊಗ್ಗದಲ್ಲಿ ಸಿಲಿಂಡರ್ ಸ್ಪೋಟ| ಬೇಕರಿ ಅಂಗಡಿಗೆ ಬೆಂಕಿ

ಸಮಗ್ರ ನ್ಯೂಸ್: ಬೇಕರಿಯೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು ಸಿಲಿಂಡರ್‌ಗಳು ಸ್ಪೋಟಗೊಂಡ ಘಟನೆ ಶಿವಮೊಗ್ಗ ತಾಲೂಕು ಆಯನೂರಿನಲ್ಲಿ ನಡೆದಿದೆ. ಆಯನೂರಿನ ಹಣಗೆರೆ ರಸ್ತೆಯಲ್ಲಿರುವ ಎಸ್‌ಎಲ್‌ವಿ ಐಯ್ಯಾಂಗಾರ್ ಬೇಕರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ನಿಮಿಷದಲ್ಲಿ ಬೇಕರಿ ಒಳೆಗೆ ಮೂರು ಬಾರಿ ಸ್ಪೋಟ ಸಂಭವಿಸಿದೆ. ಸಿಲಿಂಡರ್‌ಗಳು ಸ್ಪೋಟಗೊಂಡಿವೆ ಎಂದು ತಿಳಿದು ಬಂದಿದೆ. ಬೇಕರಿಯ ಅಕ್ಕಪಕ್ಕದಲ್ಲಿನ ಅಂಗಡಿಯವರು, ಗ್ರಾಹಕರು ಕೂಡಲೇ ಸ್ಥಳದಿಂದ ಓಡಿ ಹೋಗಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಶಿವಮೊಗ್ಗದಲ್ಲಿ ಸಿಲಿಂಡರ್ ಸ್ಪೋಟ| ಬೇಕರಿ ಅಂಗಡಿಗೆ ಬೆಂಕಿ Read More »

ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು: ಎಚ್.ಡಿ.ಕುಮಾರಸ್ವಾಮಿ

ಸಮಗ್ರ ನ್ಯೂಸ್: ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು ಎಂದು ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಅಗತ್ಯವಿದ್ದರೆ ಕುಮಾರಸ್ವಾಮಿ ಅವರನ್ನು ಬಂಧಿಸುತ್ತೇವೆ ಎಂದು ಸಿಎಂ ಹೇಳಿಕೆ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಯಾವ ಸಿಎಂ ಕೂಡ ಇಂತಹ ಭಂಡತನವನ್ನು ಪ್ರದರ್ಶಿಸಿರಲಿಲ್ಲ ಎಂದು ಕಿಡಿಕಾರಿದ್ದಾರೆ. ಸಾಯಿ ವೆಂಕಟೇಶ್ವರ ಮಿನರಲ್ಸ್‌ ಕಂಪನಿಗೆ ನಿಯಮ ಉಲ್ಲಂಘಿಸಿ ಗಣಿಗಾರಿಕೆ ಗುತ್ತಿಗೆ ಮುಂಜೂರು ಮಾಡಿದ್ದ ಆರೋಪ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆಗೆ ಲೋಕಾಯುಕ್ತ ಸಿದ್ಧತೆ ನಡೆಸುತ್ತಿರುವ ಬಗ್ಗೆ ಕೇಂದ್ರ

ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬರಬೇಕು: ಎಚ್.ಡಿ.ಕುಮಾರಸ್ವಾಮಿ Read More »

ವಯನಾಡ್‌ ಭೂಕುಸಿತ/ 119 ಮಂದಿ ಇನ್ನೂ ಕಣ್ಮರೆ

ಸಮಗ್ರ ನ್ಯೂಸ್‌: ವಯನಾಡ್‌ನಲ್ಲಿ ಭೂಕುಸಿತದಿಂದ 119 ಮಂದಿ ಈಗಲೂ ಕಣ್ಮರೆಯಾಗಿದ್ದಾರೆ. ಇದುವರೆಗೂ ಗುರುತಿಸಲಾದ 179 ಮೃತದೇಹಗಳ ಪೈಕಿ ಐದು ಮಂದಿ ಅವಲಂಬಿತರನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಮೃತಪಟ್ಟ 59 ಮಂದಿ ಅವಲಂಬಿತರಿಗೆ ಸರ್ಕಾರದಿಂದ ತಲಾ 6 ಲಕ್ಷ ಆರ್ಥಿಕ ನೆರವು ನೀಡಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. 91 ಮಂದಿ ಸಂಬಂಧಿಕರ ಡಿಎನ್ಎ ಸ್ಯಾಂಪಲ್ಸ್ ಸಂಗ್ರಹಿಸಲಾಗಿದ್ದು, ಅದನ್ನು ಹೊಂದಾಣಿಕೆ ಮಾಡಿ ನೋಡುವ ಕೆಲಸವು ಪ್ರಗತಿಯಲ್ಲಿದೆ. ನಿರಾಶ್ರಿತ ಶಿಬಿರದಲ್ಲಿ ಆಶ್ರಯ ಪಡೆದಿರುವವರಿಗೆ ತಾತ್ಕಾಲಿಕ ನೆಲೆ ಕಲ್ಪಿಸಲು ಕ್ರಮ

ವಯನಾಡ್‌ ಭೂಕುಸಿತ/ 119 ಮಂದಿ ಇನ್ನೂ ಕಣ್ಮರೆ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ಮೂರು ದಿನದಲ್ಲಿ ಎಸ್‌ಐಟಿ ಪೊಲೀಸರ ಕೈ ಸೇರಲಿದೆ ಎಫ್‌ಎಸ್‌ಎಲ್‌ ವರದಿ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ (FSL Report) ಮೂರು ದಿನದಲ್ಲಿ ಎಸ್‌ಐಟಿ ಪೊಲೀಸರ ಕೈ ಸೇರಲಿದೆ. ಈಗಾಗಲೇ 70% ವರದಿ ಪೊಲೀಸರ ಕೈಸೇರಿದೆ. ಉಳಿದ 30% ವರದಿ ಎಫ್‌ಎಸ್‌ಎಲ್‌ನಿಂದ ಬರಬೇಕಾಗಿತ್ತು. ಬರಬೇಕಾದ ಅಷ್ಟೂ ವರದಿಗಳು ಎಲೆಕ್ಟ್ರಾನಿಕ್ ಸಾಧನಗಳಿಗೆ ಸಂಬಂಧಿಸಿದ ವರದಿಯಾಗಿದೆ. ಆರೋಪಿಗಳ ಐಪೋನ್ ಡೇಟಾ ರಿಟ್ರೀವ್ ಮತ್ತು ಡಿಲೀಟ್ ಮಾಡಿದ ದೃಶ್ಯಗಳ ರಿಟ್ರೀವ್ ಮಾಡಲು ಹೈದರಾಬಾದ್ ಗೆ ಕಳುಹಿಸಲಾಗಿತ್ತು. ರಿಟ್ರೀವ್ ವಿಡಿಯೋಗಳನ್ನು ಪರಿಶೀಲನೆಗಾಗಿ ಮತ್ತೆ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗುತ್ತದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ| ಮೂರು ದಿನದಲ್ಲಿ ಎಸ್‌ಐಟಿ ಪೊಲೀಸರ ಕೈ ಸೇರಲಿದೆ ಎಫ್‌ಎಸ್‌ಎಲ್‌ ವರದಿ Read More »