ರಾಜ್ಯ

ಸಕಲೇಶಪುರ: ಹಳಿ ಮೇಲೆ ಮತ್ತೆ ಭೂಕುಸಿತ| ರೈಲು ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಆ.16; ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತ ಸಂಭವಿಸಿದ್ದರಿಂದ ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರ ದಿಢೀರ್ ಸ್ಥಗಿತಗೊಳಿಸಲಾಗಿದೆ. ಕಳೆದ ಒಂದು ವಾರದ ಹಿಂದೆ ಇದೇ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಮತ್ತೆ ಮಣ್ಣು ಕುಸಿದಿದೆ. ಈ ಪರಿಣಾಮವಾಗಿ ಯಶವಂತಪುರ-ಕಾರವಾರ ಎಕ್ಸ್ಪ್ರೆಸ್ ರೈಲು ಕಳೆದ ಅರ್ಧ ಗಂಟೆಯಿಂದ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ನಿಂತಿದೆ. ರೈಲು […]

ಸಕಲೇಶಪುರ: ಹಳಿ ಮೇಲೆ ಮತ್ತೆ ಭೂಕುಸಿತ| ರೈಲು ಸಂಚಾರ ಸ್ಥಗಿತ Read More »

ಕಾರವಾರ: ತಿಂಗಳು ಕಳೆದರೂ ನಾಪತ್ತೆಯಾದವರಿಗಾಗಿ ಮುಂದುವರಿದ ಶೋಧ ಕಾರ್ಯ| ರೆಡಾರ್ ಮೂಲಕ ನದಿ ಭಾಗದಲ್ಲಿ ಹುಡುಕಾಟ

ಸಮಗ್ರ ನ್ಯೂಸ್: ಶಿರೂರಿನಲ್ಲಿ ಭೂಕುಸಿತವಾಗಿ ಒಂದು ತಿಂಗಳು ಕಳೆದರು ಶುಕ್ರವಾರ (ಆ.16) ಸಹ ಈಶ್ವರ್ ಮಲ್ಪೆ ನೇತೃತ್ವದಲ್ಲಿ ಕಾಣೆಯಾದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಘಟ್ಟ ಪ್ರದೇಶದಲ್ಲಿ ಮಳೆಯಿಂದ ನದಿ ನೀರು ಮಣ್ಣು ಮಿಶ್ರಿತವಾಗಿದ್ದು, ಇದರಿಂದ ಶೋಧ ಕಾರ್ಯಕ್ಕೆ ಅಡ್ಡಿಯಾಗಿದೆ. ಈ ಹಿನ್ನಲೆಯಲ್ಲಿ ಇಂದು ಗಂಗಾವಳಿ ನದಿಯಲ್ಲಿ ಬಿದ್ದಿರುವ ಎರಡು ಆಲದ ಮರವನ್ನು ಹೊರೆತೆಗೆಯಲು ನೌಕಾದಳ ಸಿದ್ಧತೆ ಮಾಡಿಕೊಂಡಿದೆ. ಕಾರ್ಯಾಚರಣೆಯಲ್ಲಿ NDRF ಹಾಗೂ SDRF ತಂಡ ಸಹ ಭಾಗಿಯಾಗಿದೆ. ನದಿ ನೀರಿನ ಪ್ರಮಾಣ ಕಡಿಮೆ ಇದ್ದು, ಗಂಗಾವಳಿ ನದಿಯಲ್ಲಿ

ಕಾರವಾರ: ತಿಂಗಳು ಕಳೆದರೂ ನಾಪತ್ತೆಯಾದವರಿಗಾಗಿ ಮುಂದುವರಿದ ಶೋಧ ಕಾರ್ಯ| ರೆಡಾರ್ ಮೂಲಕ ನದಿ ಭಾಗದಲ್ಲಿ ಹುಡುಕಾಟ Read More »

ಸಕಲೇಶಪುರ: ಬಾಳ್ಳುಪೇಟೆ ಬಳಿ ಮತ್ತೆ ಹಳಿ ಮೇಲೆ ಭೂಕುಸಿತ| ರೈಲು ಸಂಚಾರ ತಾತ್ಕಾಲಿಕ ಬಂದ್

ಸಮಗ್ರ ನ್ಯೂಸ್: ಸಕಲೇಶಪುರ ತಾಲೂಕಿನ ಆಚಂಗಿ ಸಮೀಪ ಕಳೆದ ವಾರ ರೈಲು ಹಳಿಯ ಮೇಲೆ ಭೂ ಕುಸಿತ ಉಂಟಾಗಿ ರೈಲು ಸಂಚಾರ ರದ್ದುಗೊಂಡಿತ್ತು. ಕಳೆದ 2 ದಿನಗಳ ಹಿಂದೆ ರೈಲು ಸಂಚಾರ ಪುನರ್ ಆರಂಭಗೊಂಡಿತ್ತು. ಇದೀಗ ಶುಕ್ರವಾರ ಬೆಳಿಗ್ಗೆ ಮತ್ತೊಮ್ಮೆ ಹಳಿಗಳ ಮೇಲೆ ಭೂ ಕುಸಿತ ಉಂಟಾಗಿದೆ. ಇದರಿಂದಾಗಿ ರೈಲು ಸಂಚಾರ ರದ್ದಾಗಿದ್ದು ಬೆಂಗಳೂರು – ಕಾರವಾರ ನಡುವಿನ ರೈಲು ಬಾಳ್ಳುಪೇಟೆ ಬಳಿ ನಿಂತಿದ್ದರಿಂದ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಬಳಿಕ

ಸಕಲೇಶಪುರ: ಬಾಳ್ಳುಪೇಟೆ ಬಳಿ ಮತ್ತೆ ಹಳಿ ಮೇಲೆ ಭೂಕುಸಿತ| ರೈಲು ಸಂಚಾರ ತಾತ್ಕಾಲಿಕ ಬಂದ್ Read More »

ಕಾರವಾರ: ಕಾಳಿ ನದಿಯಲ್ಲಿ ಮುಳುಗಿದ್ದ ಲಾರಿ ಕೊನೆಗೂ ದಡಕ್ಕೆ

ಸಮಗ್ರ ನ್ಯೂಸ್: ಕಳೆದ ಆ.7ರಂದು ರಾಷ್ಟ್ರೀಯ ಹೆದ್ದಾರಿ 66ರ ಗೋವಾ- ಕಾರವಾರ ಸಂಪರ್ಕಿಸುವ ಕೋಡಿಬಾಗ್‌ನ ಕಾಳಿ ಬ್ರಿಡ್ಜ್‌ ನಲ್ಲಿ ಲಾರಿ ಚಾಲಕನ ಸಮೇತ ಬಿದ್ದಿದ್ದ ತಮಿಳುನಾಡು ಮೂಲದ ಲಾರಿಯನ್ನು ಎಂಟು ದಿನದ ನಂತರ ಕಾರ್ಯಾಚರಣೆ ನಡೆಸಿ ಇಂದು ಹೊರತೆಗೆಯಲಾಯಿತು. ಗುರವಾರ ಬೆಳಗ್ಗೆ ಕಾರ್ಯಾಚರಣೆಗೆ ಐಆರ್‌ಬಿ ಕಂಪನಿಯು ಮೂರು ಕ್ರೇನ್ ಹಾಗೂ ಎರಡು ಬೋಟ್ ಬಳಸಿ ಕಾರ್ಯಾಚರಣೆಗೆ ಇಳಿದಿತ್ತು. ಆದರೆ ಲಾರಿ ಹೆಸ್ಕಾಂನ ತಂತಿಯ ಮೇಲೆ ತೇಲುತ್ತಿತ್ತು. ತಂತಿ ಕಟ್ ಮಾಡಿದಲ್ಲಿ ಲಾರಿ ಇನ್ನೂ ಕೆಳಕ್ಕೆ ಹೋಗುವ ಆತಂಕವಿತ್ತು.

ಕಾರವಾರ: ಕಾಳಿ ನದಿಯಲ್ಲಿ ಮುಳುಗಿದ್ದ ಲಾರಿ ಕೊನೆಗೂ ದಡಕ್ಕೆ Read More »

ತುಮಕೂರು: ವಿದ್ಯುತ್ ಕಂಬದ ವೈರ್‌ ತಗುಲಿ ಬಾಲಕ ಸಾವು

ಸಮಗ್ರ ನ್ಯೂಸ್: ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಮನೆಗೆ ತೆರಳುವಾಗ ವಿದ್ಯುತ್ ತಗುಲಿ 2ನೇ ತರಗತಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಎಚ್. ಕಾವಲ್ ಬಳಿ ನಡೆದಿದೆ. ಹೇಮಂತ್ (8) ಮೃತ ವಿದ್ಯಾರ್ಥಿ. ಈತ ಎಚ್.ಕಾವಲ್ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಹೇಮಂತ್ 2ನೇ ತರಗತಿ ಓದುತ್ತಿದ್ದ. ಇಂದು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಳಗ್ಗೆ ಶಾಲೆಗೆ ವಿದ್ಯಾರ್ಥಿ ತೆರಳಿದ್ದ. ಕಾರ್ಯಕ್ರಮ ಮುಗಿಸಿ ಮನೆಗೆ ಹಿಂತಿರುವಾಗ ರಸ್ತೆ ಭಾಗದಲ್ಲಿ ಅಳವಡಿಸಿದ್ದ ವಿದ್ಯುತ್ ಕಂಬದ

ತುಮಕೂರು: ವಿದ್ಯುತ್ ಕಂಬದ ವೈರ್‌ ತಗುಲಿ ಬಾಲಕ ಸಾವು Read More »

ಆಭರಣ ಪ್ರಿಯರಿಗೆ ಶುಭಸುದ್ದಿ| ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ

ಸಮಗ್ರ ನ್ಯೂಸ್: ವರ ಮಹಾಲಕ್ಷ್ಮೀ ಹಬ್ಬವಾದ ಇಂದು ಚಿನ್ನ, ಬೆಳ್ಳಿ ಎರಡೂ ಬೆಲೆ ಕಡಿಮೆ ಆಗಿದೆ. ಕಳೆದ ದಿನ ಕೂಡ ಭಾರತದಲ್ಲಿ ಚಿನ್ನದ ಬೆಲೆ ಇಳಿದಿತ್ತು. ಬೆಳ್ಳಿ ಬೆಲೆಯೂ ಸತತವಾಗಿ ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,550 ರೂಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,510 ರೂಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,350 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ

ಆಭರಣ ಪ್ರಿಯರಿಗೆ ಶುಭಸುದ್ದಿ| ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ Read More »

ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ ಸಂಗ್ರಹ| ಆರೋಪಿಗಳನ್ನು ವಶಕ್ಕೆ ಪಡೆದ ಮಂಗಳೂರು ಠಾಣಾ ಪೊಲೀಸರು

ಸಮಗ್ರ ನ್ಯೂಸ್: ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿದ ಮಂಗಳೂರು ಠಾಣೆಯ ಪೊಲೀಸರು. ಆರೋಪಿಗಳಿಂದ ಏರ್ಟೆಲ್ ಕಂಪೆನಿಯ 86 ಸಿಮ್‌ ಕಾರ್ಡ್‌‌ಗಳು, 2 ಮೊಬೈಲ್‌ ಫೊನ್‌ಗಳು ಮತ್ತು ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಬೆಳ್ತಂಗಡಿಯ ಶಮದ್ ಮಹಮ್ಮದ್ ಸಮರ್ (26) ಮತ್ತು ಮಹಮ್ಮದ್ ಅಜೀಂ (19) ಶಮದ್ ನಗರದ ಕಾಲೇಜೊಂದರ ಬಿಬಿಎ ವಿದ್ಯಾರ್ಥಿಯಾಗಿದ್ದು, ನಗರದಲ್ಲೇ ಬಾಡಿಗೆ ಮನೆಯಲ್ಲಿದ್ದರು. ಇವರು ಬೆಳ್ತಂಗಡಿಯ ಮುಸ್ತಾಫ ಮತ್ತು ಮಡಂತ್ಯಾರ್ನ ಸಾಜೀದ್ನ

ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ ಸಂಗ್ರಹ| ಆರೋಪಿಗಳನ್ನು ವಶಕ್ಕೆ ಪಡೆದ ಮಂಗಳೂರು ಠಾಣಾ ಪೊಲೀಸರು Read More »

ಬೈಂದೂರು::ಮುಸ್ಲಿಂ ಭಾಂಧವರಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

ಸಮಗ್ರ ನ್ಯೂಸ್: 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತಬೈಂದೂರು ಜಾಮೀಯ ಮಸೀದಿ ಹಾಗೂ ಅಂಜುಮಾನ್ ಶಬಾಬುಲ್ ವೆಲ್ಪೇರ್ ಟ್ರಸ್ಟಿನ ವತಿಯಿಂದ ಬೈಂದೂರು ಜಾಮೀಯ ಮಸೀದಿಯ ಮುಂಭಾಗದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಆಚರಿಸಲಾಯಿತು. ಜಾಮೀಯ ಮಸೀದಿಯ ಇಮಾಮರಾದ ತಯ್ಯಬ್ ಹುಸೇನ್ ನೂರಿಯವರು ಧ್ವಜಾರೋಹಣ ನೆರವೇರಿಸಿದರು. ಈ ಶುಭಸಂದರ್ಭದಲ್ಲಿ ಬೈಂದೂರು ನೂರ್ ಮಸೀದಿಯ ಇಮಾಮ್ ಇಬ್ನು ಮಸೂದ್, ಮುಸ್ಲಿಂ ಮುಖಂಡರಾದ ನಾಗೂರು ನಾಸಿರ್ ಅಹ್ಮದ್, ನ್ಯೂ ಪಾದರಕ್ಷಾ ಫುಟ್’ವೇರ್ ಮಾಲಿಕರಾದ ತಲ್ಹಾ ಬೈಂದೂರು, ಹಾಗೂ ಅಂಜುಮಾನ್ ಶಬಾಬುಲ್ ಇಸ್ಲಾಂ ವೆಲ್ಪೇರ್

ಬೈಂದೂರು::ಮುಸ್ಲಿಂ ಭಾಂಧವರಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ Read More »

ಕೋಲಾರ: ಕತ್ತುಕೊಯ್ದು ಶಿಕ್ಷಕಿಯ ಹತ್ಯೆ| ಜೊತೆಗಿದ್ದ ಮಗಳ ಕೊಲೆಗೂ ಯತ್ನ

ಸಮಗ್ರ ನ್ಯೂಸ್: ಕೋಲಾರ ಸರಕಾರಿ ಶಾಲೆಯ ಶಿಕ್ಷಕಿಯೊಬ್ಬರನ್ನು ಕತ್ತು ಕೊಯ್ದು ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ಮುತ್ಯಾಲಪೇಟೆ ಬಡಾವಣೆಯಲ್ಲಿ ನಡೆದಿದೆ. ಹತ್ಯೆಯಾದ ಶಿಕ್ಷಕಿಯನ್ನು ದಿವ್ಯಶ್ರೀ (42) ಅವರನ್ನು ಮೂವರು ಸುಪಾರಿ ಕಿಲ್ಲರ್ಸ್ ಹಂತಕರಿಂದ ಈ ಕೃತ್ಯ ನಡೆದಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಹಲವು ದಿನಗಳಿಂದ ಶಿಕ್ಷಕಿಯ ಚಲನವಲನ ಗಮನಿಸಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅವರು ಮುಳಬಾಗಿಲು ತಾಲ್ಲೂಕು ಮುಡಿಯನೂರು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದರು. ಮನೆಯಲ್ಲಿ ತನ್ನ ಮಗಳೊಂದಿಗೆ ಇದ್ದಾಗ

ಕೋಲಾರ: ಕತ್ತುಕೊಯ್ದು ಶಿಕ್ಷಕಿಯ ಹತ್ಯೆ| ಜೊತೆಗಿದ್ದ ಮಗಳ ಕೊಲೆಗೂ ಯತ್ನ Read More »

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃ ಶಕ್ತಿ ದುರ್ಗಾವಾಹಿನಿಯ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ

ಸಮಗ್ರ ನ್ಯೂಸ್: ಅಖಂಡ ಭಾರತ ಸಂಕಲ್ಪ ದಿನಾಚರಣೆ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃ ಶಕ್ತಿ ದುರ್ಗಾವಾಹಿನಿ ಸುಳ್ಯ ಪ್ರಖಂಡ ಇದರ ಆಶ್ರಯದಲ್ಲಿ ಬೃಹತ್ ಪಂಜಿನ ಮೆರವಣಿಗೆಯು ಆ.14 ರಂದು ಸುಳ್ಯದಲ್ಲಿ ನಡೆಯಿತು. ಬೃಹತ್ ಪಂಜಿನ ಮೆರವಣಿಗೆಯು ಶಾಸ್ತ್ರೀ ವೃತ್ತದಿಂದ ಪ್ರಾರಂಭಗೊಂಡು ಶ್ರೀ ಚೆನ್ನಕೇಶವ ದೇವಸ್ಥಾನದ ಎದುರು ಸಮಾಪನಗೊಂಡಿತು. ಕಾರ್ಯಕ್ರಮದ ದಿಕ್ಸೂಚಿ ಭಾಷಣಕಾರರಾಗಿ ಪ್ರದೀಪ್ ಸರಿಪಳ್ಳ ಮಾತನಾಡಿದರು. ವೇದಿಕೆಯಲ್ಲಿ ಭಜರಂಗದಳ ಪ್ರಖಂಡ ಅಧ್ಯಕ್ಷ ಸೋಮಶೇಖರ ಫೈಕ,. ಮುಖ್ಯ ಅತಿಥಿ ನಿವೃತ್ತ ಯೋಧ ಬಿ ಎಸ್.ಎಫ್ ಎಂ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಾತೃ ಶಕ್ತಿ ದುರ್ಗಾವಾಹಿನಿಯ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ Read More »