ರಾಜ್ಯ

ರಾಜ್ಯದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಸಮಗ್ರ ನ್ಯೂಸ್: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರತಿವರ್ಷ ನೀಡಲಾಗುವ ಪ್ರಶಸ್ತಿಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಕರ್ನಾಟಕದ ರಾಜ್ಯದ 19 ಪೊಲೀಸ್‌ ಅಧಿಕಾರಿಗಳು ರಾಷ್ಟ್ರಪತಿಯವರು ಪ್ರದಾನ ಮಾಡುವ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಹಿರಿಯ ಐಪಿಎಸ್​ ಅಧಿಕಾರಿ ಚಂದ್ರಶೇಖರ್​ M(ಎಡಿಜಿಪಿ, ಐಎಸ್​ಡಿ, ಬೆಂಗಳೂರು) ಅವರು ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಉಳಿದ 18 ಪೊಲೀಸ್​ ಅಧಿಕಾರಿಗಳು ಶ್ಲಾಘನೀಯ ಸೇವಾ ಪದಕಕ್ಕೆ ಆಯ್ಕೆಯಾಗಿದ್ದಾರೆ. ಅಧಿಕಾರಿಗಳ ವಿವರ ಈ ಕೆಳಕಂಡಂತಿದೆ. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರತಿವರ್ಷ […]

ರಾಜ್ಯದ 19 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ Read More »

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧ ಮುಂದೆ ಬೈಕ್ ಗೆ ಬೆಂಕಿ ಹಚ್ಚಿದ ಯುವಕ..!

ಸಮಗ್ರ ನ್ಯೂಸ್: ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ, ವಿಧಾನಸೌಧ ಮುಂದೆಯೇ ಬೈಕ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿರುವ ಘಟನೆ ಇಂದು ನಡೆದಿದೆ. ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬಾತನಿಂದ ಕತ್ಯ ನಡೆದಿದೆ. ಈತ ಟ್ರೆಕ್ಕಿಂಗ್ ಹೋಗಿ ನಾಪತ್ತೆಯಾಗಿದ್ದ. ಹೀಗಾಗಿ ದೂರು ನೀಡಲು ಚಳ್ಳಕೆರೆ ಪೊಲೀಸ್ ಠಾಣೆಗೆ ಯುವಕನ ತಾಯಿ ಹೋಗಿದ್ದರು. ಆ ವೇಳೆ ಪೊಲೀಸರು ಪೃಥ್ವಿ ತಾಯಿಯನ್ನು ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎನ್ನಲಾಗಿದೆ. ಆ ಕೋಪಕ್ಕೆ ವಿಧಾನಸೌಧ ಮುಂಭಾಗ ಬೈಕ್ ನಿಲ್ಲಿಸಿ ಯುವಕ ಬೆಂಕಿ ಇಟ್ಟಿದ್ದಾನೆ. ಸದ್ಯ ಯುವಕನನ್ನು

ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧ ಮುಂದೆ ಬೈಕ್ ಗೆ ಬೆಂಕಿ ಹಚ್ಚಿದ ಯುವಕ..! Read More »

ದರ್ಶನ್ ಗ್ಯಾಂಗ್ ಗೆ ಮತ್ತೆ ಬಂಧನ ವಿಸ್ತರಿಸಿ ಕೋರ್ಟ್ ಆದೇಶ

ಸಮಗ್ರ ನ್ಯೂಸ್: ನಟ ದರ್ಶನ್ ಮತ್ತು ಗ್ಯಾಂಗ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿರುವ ಅವರಿಗೆ ಈಗ ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಇಂದು (ಆ.14) ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯವು, ನಟ ದರ್ಶನ್ ಅಂಡ್ ಗ್ಯಾಂಗ್ ಗೆ ನ್ಯಾಯಾಂಗ ಬಂಧನದ ಅವಧಿಯನ್ನು ಆ.28ರವರೆಗೆ ವಿಸ್ತರಿಸಿ ಆದೇಶಿಸಿದೆ.

ದರ್ಶನ್ ಗ್ಯಾಂಗ್ ಗೆ ಮತ್ತೆ ಬಂಧನ ವಿಸ್ತರಿಸಿ ಕೋರ್ಟ್ ಆದೇಶ Read More »

ಚಿಕ್ಕಮಗಳೂರು : ಹುಡುಗಿಗಾಗಿ ಬುರ್ಖಾ ಧರಿಸಿ ಬಂದ ಯುವಕ…!

ಸಮಗ್ರ ನ್ಯೂಸ್: ಯುವಕನೊಬ್ಬ ತನ್ನ ಹುಡುಗಿಗಾಗಿ ಬುರ್ಖಾ ಧರಿಸಿ ಬಂದ ಘಟನೆ ಚಿಕ್ಕಮಗಳೂರು ನಗರದ ಮಲ್ಲಂದೂರು ಎಂಬಲ್ಲಿ ಆ.13 ರಂದು ನಡೆದಿದೆ. ಬುರ್ಖಾ ತೊಟ್ಟು, ಬೆರಳಿಗೆ ನೈಲ್ ಪಾಲಿಶ್ ಹಾಕಿ ಶೃಂಗಾರ ಮಾಡಿಕೊಂಡಿದ್ದ ಪ್ರೇಮಿ ಚಿಕ್ಕಮಗಳೂರು ನಗರದಲ್ಲಿ ಓಡಾಡುತ್ತಿದ್ದ. ಅವನ ಕೈ, ಬೆರಳು, ಕಾಲುಗಳನ್ನು ನೋಡಿ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದರು. ಬಾಳೆಹೊನ್ನೂರು ಮೂಲದ ಯುವಕನಾಗಿದ್ದು, ತನ್ನ ಹುಡುಗಿಯನ್ನು ನೋಡಲು ಬುರ್ಖಾ ಧರಿಸಿ ಬಂದಿದ್ದಾಗಿ ಹೇಳಿಕೆ ನೀಡಿದ್ದಾನೆ. ಅಲ್ಲದೆ, ಬುರ್ಖಾ ಒಳಗೆ ಚಾಕು ಸಹ ಇಟ್ಟುಕೊಂಡಿದ್ದ ಎಂದು

ಚಿಕ್ಕಮಗಳೂರು : ಹುಡುಗಿಗಾಗಿ ಬುರ್ಖಾ ಧರಿಸಿ ಬಂದ ಯುವಕ…! Read More »

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ‌ರೆಡ್ಡಿ‌ ನೇಮಕ

ಸಮಗ್ರ ನ್ಯೂಸ್: ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ, ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯರೆಡ್ಡಿಯನ್ನು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯನ್ನಾಗಿ ನೇಮಿಸಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಸದ್ಯ ಪುಷ್ಪಾ ಅಮರನಾಥ್ ಅವರು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದರು. ಕರ್ನಾಟಕದ, ಚಂಢೀಗಡ ಮತ್ತು ಅರುಣಾಚಲ ಪ್ರದೇಶ ಮಹಿಳಾ ಅಧ್ಯಕ್ಷರ ನೇಮಕ ಮಾಡಿ ಎಐಸಿಸಿ ಪತ್ರಿಕಾ ಪ್ರಕಟಣೆ ನೀಡಿದೆ. ಜಯನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ‌ರೆಡ್ಡಿ‌ ನೇಮಕ Read More »

ರೈಲು‌‌ ಹಳಿಗಳ ಮೇಲೆ ಗುಡ್ಡ ಕುಸಿತದ ಮಣ್ಣು ತೆರವು| ಮಂಗಳೂರು – ಸಕಲೇಶಪುರ ರೈಲು ಸಂಚಾರ ಪುನರಾರಂಭ

ಸಮಗ್ರ ನ್ಯೂಸ್: ಸಕಲೇಶಪುರ ಟು ಬಾಳ್ಳುಪೇಟೆ ಮಾರ್ಗಮಧ್ಯದ ರೈಲು ಹಳಿಗಳ ಮೇಲೆ ಭೂ ಕುಸಿತ ಉಂಟಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು. ಭೂ ಕುಸಿತದ ಮಣ್ಣನ್ನು ತೆರವುಗೊಳಿಸಲಾಗಿದ್ದು, ಸಂಚಾರ ಸುರಕ್ಷತೆಯ ಪರೀಕ್ಷೆಯನ್ನು ನಡೆಸಲಾಗಿದೆ. ಹೀಗಾಗಿ ನಾಳೆ(ಆ.14)ರಿಂದ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಪುನರಾರಂಭಗೊಳಿಸಲಾಗುತ್ತಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಮಾಹಿತಿ ನೀಡಿದ್ದು, ಸಕಲೇಶಪುರ-ಬಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತಕ್ಕೆ ಸಂಬಂಧಿಸಿದಂತೆ, ಹಳಿಯನ್ನು ಪುನಃಸ್ಥಾಪಿಸಲಾಗಿದೆ ಮತ್ತು ರೈಲು ಕಾರ್ಯಾಚರಣೆಗೆ ಯೋಗ್ಯವಾಗಿದೆ ಎಂದು ಪ್ರಮಾಣೀಕರಿಸಲಾಗಿದೆ ಎಂದು ತಿಳಿಸಿದೆ. ದಿನಾಂಕ 11.08.2024ರ ನೈರುತ್ಯ

ರೈಲು‌‌ ಹಳಿಗಳ ಮೇಲೆ ಗುಡ್ಡ ಕುಸಿತದ ಮಣ್ಣು ತೆರವು| ಮಂಗಳೂರು – ಸಕಲೇಶಪುರ ರೈಲು ಸಂಚಾರ ಪುನರಾರಂಭ Read More »

ಶಿರೂರು ಗುಡ್ಡ ಕುಸಿತ ಪ್ರಕರಣ| ನಾಪತ್ತೆಯಾಗಿದ್ದ ಲಾರಿಯ ಅವಶೇಷಗಳು ಪತ್ತೆ

ಸಮಗ್ರ ನ್ಯೂಸ್: ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವಳಿ ನದಿಯಲ್ಲಿ ಸ್ಕೂಬಾ ಡ್ರೈವಿಂಗ್ ವೇಳೆ ನಾಪತ್ತೆಯಾದ ಲಾರಿಯ ಜಾಕ್ ಪತ್ತೆಯಾಗಿದ್ದು, ಇದು ನಮ್ಮದೇ ಲಾರಿಯ ಬಿಡಿಭಾಗ ಎಂದು ಲಾರಿ ಮಾಲೀಕರು ಖಚಿತಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಸಂಭವಿಸಿತ್ತು. ಘಟನೆಯಲ್ಲಿ 12 ಜನರು ನಾಪತ್ತೆಯಾಗಿದ್ದು, ಅವರಲ್ಲಿ 8 ಜನರ ಮೃತದೇಹ ಪತ್ತೆಯಾಗಿದೆ. ಆದರೆ ಉಳಿದ ಮೂವರ ಸುಳಿವು

ಶಿರೂರು ಗುಡ್ಡ ಕುಸಿತ ಪ್ರಕರಣ| ನಾಪತ್ತೆಯಾಗಿದ್ದ ಲಾರಿಯ ಅವಶೇಷಗಳು ಪತ್ತೆ Read More »

ರಾಯಚೂರು: ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಪ್ರಭಾರ ಪ್ರಾಂಶುಪಾಲನಿಗೆ ಧರ್ಮದೇಟು

ಸಮಗ್ರ ನ್ಯೂಸ್: ರಾಯಚೂರು ಸಮೀಪದ ಯರಮರಸ್ ಬಳಿಯ ಆದರ್ಶ ವಿದ್ಯಾಲಯದ ಪ್ರಭಾರಿ ಪ್ರಾಚಾರ್ಯನೊಬ್ಬ ತರಬೇತಿಗೆ ಬಂದಿದ್ದ ಶಿಕ್ಷಕಿ ಜತೆ ಅನುಚಿತವಾಗಿ ವರ್ತಿಸಿದ್ದರಿಂದ ಥಳಿತಕ್ಕೊಳಗಾದ ಘಟನೆ ಸೋಮವಾರ ನಡೆದಿದೆ. ಮೆಹಬೂಬ್ ಅಲಿ ಎಂಬಾತನೇ ಏಟು ತಿಂದ ಪ್ರಭಾರಿ ಪ್ರಾಚಾರ್ಯ. ಈತ ಶಿಕ್ಷಕಿಯ ಮೊಬೈಲ್‌ಗೆ ಅಶ್ಲೀಲ ಮೆಸೇಜ್‌ಗಳನ್ನು ಕಳಿಸುತ್ತಿದ್ದನಲ್ಲದೆ, ರಾತ್ರಿ ಮಲಗಲು ಬಾ ಎಂದೂ ಕರೆದಿದ್ದ. ಇದರಿಂದ ನೊಂದ ಶಿಕ್ಷಕಿ ತಮ್ಮವರಿಗೆ ಮಾಹಿತಿ ತಿಳಿಸಿದ್ದರು. ಶಾಲೆಗೆ ಬಂದ ಶಿಕ್ಷಕಿಯ ಬಂಧುಗಳು, ಸಾರ್ವಜನಿಕರು ಪ್ರಭಾರ ಪ್ರಾಚಾರ್ಯನಿಗೆ ಚೆನ್ನಾಗಿ ಥಳಿಸಿ ಬುದ್ಧಿ ಕಲಿಸಿದ್ದಾರೆ.

ರಾಯಚೂರು: ಶಿಕ್ಷಕಿಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಪ್ರಭಾರ ಪ್ರಾಂಶುಪಾಲನಿಗೆ ಧರ್ಮದೇಟು Read More »

ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಇಂದು ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಘೋಷಣೆ ಮಾಡುವ ಮೂಲಕ ರಾಜ್ಯದ ರಂಗಭೂಮಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಿದ್ದಾರೆ. ಈ ಸಂಬಂಧ ಅಧಿಕೃತ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ. ನಿರ್ದೇಶಕರು ಅಧಿಕಾರ ವಹಿಸಿಕೊಂಡ

ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ Read More »

ಮೈಸೂರು ದಸರಾಗೆ ಮುಹೂರ್ತ ಫಿಕ್ಸ್…ಅ. 3ರಿಂದ ಅದ್ಧೂರಿ ದಸರಾ ಆಚರಣೆ

ಸಮಗ್ರ ನ್ಯೂಸ್: ವಿಶ್ವ ವಿಖ್ಯಾತ ಮೈಸೂರು ದಸರಾ-2024 ಆಚರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಈ ಬಾರಿ ಅಕ್ಟೋಬರ್ 3ರಿಂದ 12ರವರೆಗೆ ಅದ್ಧೂರಿಯಾಗಿ ದಸರಾ ಆಚರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದಸರಾ 2024 ಉನ್ನತ ಮಟ್ಟದ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌, ಮೈಸೂರು ಜಿಲ್ಲಾ ಉಸ್ತುವಾರಿ ಮಹದೇವಪ್ಪ, ಸಚಿವರಾದ ಕೆ.ವೆಂಕಟೇಶ್, ಕೆಜೆ ಜಾರ್ಜ್‌, ಹಿರಿಯ ಶಾಸಕ ಜಿಟಿ ದೇವೇಗೌಡ ಸೇರಿ ಮೈಸೂರು-ಕೊಡಗು, ಚಾಮರಾಜನಗರ ಭಾಗದ ಶಾಸಕರು, ಎಂಎಲ್‌ಸಿಗಳು

ಮೈಸೂರು ದಸರಾಗೆ ಮುಹೂರ್ತ ಫಿಕ್ಸ್…ಅ. 3ರಿಂದ ಅದ್ಧೂರಿ ದಸರಾ ಆಚರಣೆ Read More »