ರಾಜ್ಯ

ಚಿಕ್ಕಮಗಳೂರು, ಕೊಡಗಿನಲ್ಲಿ ಅರಣ್ಯ ಒತ್ತುವರಿ‌ ತೆರವು| ಕಾಫಿ ಬೆಳೆದಿದ್ದ ಜಮೀನು ವಶಕ್ಕೆ ಪಡೆದ ಅರಣ್ಯ ಇಲಾಖೆ

ಸಮಗ್ರ ನ್ಯೂಸ್: ಅರಣ್ಯ ಇಲಾಖೆಗೆ ಸಂಬಂಧಿಸಿದ ಒತ್ತುವರಿ ಜಮೀನು ತೆರವು ಕಾರ್ಯಾಚರಣೆ ವೇಗ ಪಡೆದುಕೊಂಡಿದ್ದು, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ‌ ಹಲವು ಗ್ರಾಮಗಳಲ್ಲಿ ಇಲಾಖೆ ಅಧಿಕಾರಿಗಳು ಒತ್ತುವರಿ ತೆರವುಗೊಳಿಸುತ್ತಿದ್ದಾರೆ. ಚಿಕ್ಕಮಗಳೂರು ತಾಲ್ಲೂಕಿನ ಮತ್ತಾವರ ಮೀಸಲು ಅರಣ್ಯದಲ್ಲಿ ಒತ್ತುವರಿ ಮಾಡಿ ಕಾಫಿ ತೋಟ ಮಾಡಿದ್ದ 20 ಎಕರೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ತೆರವುಗೊಳಿಸಿದರು. ವಸ್ತಾರೆ ಗ್ರಾಮದ ಸರ್ವೆ ನಂಬರ್ 369ರಲ್ಲಿ ಹಲವರು ಒತ್ತುವರಿ ಮಾಡಿ ಕಾಫಿ ಗಿಡಗಳನ್ನು ನೆಟ್ಟಿದ್ದರು. ಅರಣ್ಯ ಜಾಗದಲ್ಲಿದ್ದ ಕಾಫಿ ಗಿಡಗಳನ್ನು ಕತ್ತರಿಸಿ ಅರಣ್ಯ […]

ಚಿಕ್ಕಮಗಳೂರು, ಕೊಡಗಿನಲ್ಲಿ ಅರಣ್ಯ ಒತ್ತುವರಿ‌ ತೆರವು| ಕಾಫಿ ಬೆಳೆದಿದ್ದ ಜಮೀನು ವಶಕ್ಕೆ ಪಡೆದ ಅರಣ್ಯ ಇಲಾಖೆ Read More »

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಿಕ್ಷಕರ ಆಗ್ರಹ: ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

ಸಮಗ್ರ ನ್ಯೂಸ್: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಿಕ್ಷಣ ಇಲಾಖೆ ವಿರುದ್ಧ ಶಿಕ್ಷಕರು ನಾಳೆ ಅಂದರೆ ಜುಲೈ 12ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ರಾಜ್ಯದ ವಿವಿಧೆಡೆಯಿಂದ ಸುಮಾರು 1.30 ಲಕ್ಷ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಸುಮಾರು 48 ಸಾವಿರ ಶಾಲೆಗಳು ನಾಳೆ ಬಂದ್ ಆಗಲಿವೆ. ಶಾಲೆಗಳಿಗೆ ಸಾಮೂಹಿಕ ಗೈರು ಹಾಕಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಶಿಕ್ಷಕರು ನಿರ್ಧಾರ ಮಾಡಿದ್ದಾರೆ. ಶಿಕ್ಷಕರು ಅನೇಕ ಬಾರಿ ವಿವಿಧ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಿಕ್ಷಕರ ಆಗ್ರಹ: ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ Read More »

ಮುರಿದ ತುಂಗಭದ್ರಾ ಡ್ಯಾಂ ಗೇಟ್: ಅಪಾರ ಪ್ರಮಾಣದ ನೀರು ನದಿಗೆ

ಸಮಗ್ರ ನ್ಯೂಸ್: ನಾಲ್ಕು ಜಿಲ್ಲೆ ಮೂರು ರಾಜ್ಯಗಳಿಗೆ ಜೀವನಾಧಾರವಾದ ತುಂಗಭದ್ರಾ ಅಣೆಕಟ್ಟೆಯ 19ನೇ ಗೇಟ್ ಲಿಂಕ್ ‌ಮುರಿದು ಸಾಕಷ್ಟು ಪ್ರಮಾಣದಲ್ಲಿ ‌ನೀರು ಹರಿದು ಹೋಗುತ್ತಿರುವ ಕಾರಣ ಜನರು ಆತಂಕಕ್ಕೀಡಾಗಿದ್ದಾರೆ. ಇದರಿಂದ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ ಸಂಖ್ಯೆ 19ರಲ್ಲಿ ಚೈನ್‌ ಲಿಂಕ್‌ ತುಂಡಾಗಿರುವ ಕಾರಣ ನದಿಗೆ ಅಪಾರ ಪ್ರಮಾಣದ ನೀರು ಹರಿಸಲಾಗುತ್ತಿದೆ. ನೀರಿನ ರಭಸಕ್ಕೆ ತುಂಡಾಗಿರುವ ಭಾಗವೂ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದ

ಮುರಿದ ತುಂಗಭದ್ರಾ ಡ್ಯಾಂ ಗೇಟ್: ಅಪಾರ ಪ್ರಮಾಣದ ನೀರು ನದಿಗೆ Read More »

ಸುಬ್ರಹ್ಮಣ್ಯ: ಸಂಪೂರ್ಣ ಹದೆಗೆಟ್ಟ ಹೆದ್ದಾರಿಯಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ

ಸಮಗ್ರ ನ್ಯೂಸ್: ಸಂಪೂರ್ಣ ಹದೆಗೆಟ್ಟ ಕೈಕಂಬ – ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಬಾಳೆಗಿಡ, ಕೆಸು ನೆಟ್ಟು ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿದ್ದಾರೆ. ಕೈಕಂಬದಲ್ಲಿ‌ ಸುಬ್ರಹ್ಮಣ್ಯದವರೆಗೆ ಸುಮಾರು ಮೂರು ಕಿ.ಮೀ ಉದ್ದದ ಹೆದ್ದಾರಿ ಸಂಪೂರ್ಣ ‌ಹದೆಗೆಟ್ಟಿದ್ದು, ವಾಹನ ಓಡಾಟ ದುಸ್ತರವಾಗಿದೆ. ಹಲವು ವಾಹನಗಳು ಅಪಘಾತಕ್ಕೆ ಒಳಗಾಗಿದ್ದು, ಇದರಿಂದ ರೋಸಿಹೋದ ಸ್ಥಳೀಯ ರಿಕ್ಷಾ ಚಾಲಕರು ಇಂದು ರಸ್ತೆಯಲ್ಲಿ ಗಿಡಗಳನ್ನು ನೆಟ್ಟು ಪ್ರತಿಭಟನೆ ನಡೆಸಿದ್ದಾರೆ.

ಸುಬ್ರಹ್ಮಣ್ಯ: ಸಂಪೂರ್ಣ ಹದೆಗೆಟ್ಟ ಹೆದ್ದಾರಿಯಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ Read More »

ಮಂಗಳೂರು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಮುಸ್ಲಿಂ ಯುವಕನೊಂದಿಗೆ ದಾಂಪತ್ಯಕ್ಕೆ!!

ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಹಿಂದೂ ಧರ್ಮದ ವಿದ್ಯಾರ್ಥಿನಿಯೊಬ್ಬಳು ಕೇರಳದಲ್ಲಿ ಅನ್ಯ ಧರ್ಮದ ಯುವಕನೊಂದಿಗೆ ವಿವಾಹವಾದ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಘಟನೆ ಏನು?: ವಿದ್ಯಾರ್ಥಿನಿ ವಿಸ್ಮಯಳನ್ನು ಜೂ.30ರಂದು ಉಳ್ಳಾಲದಿಂದ ಕಾಸರಗೋಡು ವಿದ್ಯಾನಗರ ನಿವಾಸಿ ಮುಹಮ್ಮದ್‌ ಅಶ್ಫಕ್ ಅಪಹರಿಸಿದ್ದ ಬಗ್ಗೆ ವಿದ್ಯಾರ್ಥಿನಿಯ ತಂದೆ ವಿನೋದ್‌ ಅವರು ಮಂಗಳೂರಿನ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದರು. ‌ಮಗಳನ್ನು ಮತಾಂತರಗೊಳಿಸುವುದಕ್ಕಾಗಿ ಅಶ್ಪಕ್‌ ಮತ್ತು ಆತನ ತಂಡ ಅಪಹರಣ ನಡೆಸಿದೆ ಎಂದು ದೂರಿನಲ್ಲಿ ಹೇಳಿದ್ದರು. ಅಶ್ಫಕ್ ಈಗಾಗಲೇ ಒಂದು ವಿವಾಹವಾಗಿದ್ದು ಈತನ ಮೇಲೆ

ಮಂಗಳೂರು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಮುಸ್ಲಿಂ ಯುವಕನೊಂದಿಗೆ ದಾಂಪತ್ಯಕ್ಕೆ!! Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಆಗಸ್ಟ್‌ ತಿಂಗಳ ಎರಡನೇ ವಾರ 11-08- 2024ರಿಂದ 17-08-2024ರವರೆಗೆ ಇರಲಿದೆ. ಸೂರ್ಯನು ಸಿಂಹರಾಶಿಯನ್ನು ಪ್ರವೇಶ ಮಾಡುವನು. ಅದು ಸ್ವರಾಶಿಯೂ ಆಗಿದ್ದು, ಅನೇಕ ಶುಭಫಲಗಳನ್ನು ಕೆಲವು ರಾಶಿಯವರಿಗೆ ನೀಡುವನು. ವಿಶೇಷವಾಗಿ ಆರೋಗ್ಯವನ್ನು ನೀಡೆಂದು ಸೂರ್ಯನಲ್ಲಿ ಬೇಡುವುದು ಸೂಕ್ತ. ಆರೋಗ್ಯವೇ ಎಲ್ಲ ಸಂಪತ್ತಿನ್ನು ಪಡೆಯಲು ಮೂಲ ಕಾರಣವಾಗಿದೆ. ಜಗತ್ತಿನ ಆತ್ಮನಾದ ಸೂರ್ಯನ ಅನುಗ್ರಹ ಎಲ್ಲಿಗೂ ಲಭಿಸಲಿ. ಮೇಷ ರಾಶಿ:ಇದು ಆಗಷ್ಟ್ ತಿಂಗಳ ಎರಡನೇ ವಾರವಾಗಿದ್ದು, ಸೂರ್ಯನು ಪಂಚಮ ರಾಶಿಯನ್ನು ಪ್ರವೇಶಿಸುವನು. ವಿದ್ಯಾಭ್ಯಾಸದಲ್ಲಿ ಪ್ರಗತಿ ಸಾಧಿಸಲು ಉತ್ತಮ ಕಾಲವಾಗಿದೆ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಹಾಸನ ರೈಲ್ವೆ ಹಳಿ ಮೇಲೆ ಮತ್ತೆ ಮಣ್ಣು ಕುಸಿತ… ರೈಲು ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಸಕಲೇಶಪುರ-ಬಾಳ್ಳುಪೇಟೆ ನಡುವೆ ರೈಲು ಹಳಿಗಳ ಮೇಲೆ ಗುಡ್ಡ ಕುಸಿದಿದೆ. ಹಾಸನ-ಮಂಗಳೂರು ನಡುವಿನ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ಭೂ ಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಮಧ್ಯರಾತ್ರಿಯಿಂದ ರೈಲುಗಳ ಸಂಚಾರ ಬಂದ್ ಆಗಿದೆ. ರೈಲ್ವೆ ಇಲಾಖೆ ಕಾರ್ಮಿಕರು ಮಣ್ಣು ತೆರವು ಮಾಡುತ್ತಿದ್ದಾರೆ. ವಾರಗಳ ಹಿಂದಷ್ಟೇ ಇಂತಹ ಅವಘಡ ಸಂಭವಿಸಿದೆ. ಈಗ ಮತ್ತೊಮ್ಮೆ ಮರಗಳ ಸಮೇತ ಭಾರೀ ಪ್ರಮಾಣದ ಮಣ್ಣು ಕುಸಿದಿದೆ. ಇದರಿಂದ ಬೆಂಗಳೂರು-ಮಂಗಳೂರು ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ

ಹಾಸನ ರೈಲ್ವೆ ಹಳಿ ಮೇಲೆ ಮತ್ತೆ ಮಣ್ಣು ಕುಸಿತ… ರೈಲು ಸಂಚಾರ ಸ್ಥಗಿತ Read More »

ಗುಡ್ಡ ಕುಸಿತದಿಂದ ತತ್ತರವಾದ ಕೇರಳದ ವಯನಾಡಿಗೆ ಇಂದು ಪ್ರಧಾನಿ ಮೋದಿ ಭೇಟಿ

ಸಮಗ್ರ ನ್ಯೂಸ್: ವಯನಾಡಿನಲ್ಲಿ ಭಯಾನಕ ಭೂಕುಸಿತದಿಂದ ನೂರಾರು ಜನ ಮೃತಪಟ್ಟು ಅಪಾರ ಸಾವು-ನೋವು ಸಂಭವಿಸಿದೆ. ಇಂದು ಕೇರಳದ ವಯನಾಡ್ ಜಿಲ್ಲೆಯ ವಿಪತ್ತು ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿದ್ದಾರೆ. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ಭೂಕುಸಿತದಿಂದ ಧ್ವಂಸಗೊಂಡ ಚೂರಲ್‌ಮಲಾ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಕುಗ್ರಾಮಗಳ ವೈಮಾನಿಕ ಸಮೀಕ್ಷೆ ನಡೆಸಿದ ಮೋದಿ, ಬೆಳಗ್ಗೆ 11.15 ರ ಸುಮಾರಿಗೆ ಕಣ್ಣೂರು ವಿಮಾನ ನಿಲ್ದಾಣದಿಂದ ವಯನಾಡ್‌ಗೆ ತೆರಳಿದರು. ಪ್ರಧಾನಮಂತ್ರಿಯವರೊಂದಿಗೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ

ಗುಡ್ಡ ಕುಸಿತದಿಂದ ತತ್ತರವಾದ ಕೇರಳದ ವಯನಾಡಿಗೆ ಇಂದು ಪ್ರಧಾನಿ ಮೋದಿ ಭೇಟಿ Read More »

ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ/ ಇಂದಿನಿಂದ 12 ದಿನಗಳವರೆಗೆ ಫ್ಲವರ್ ಶೋ

ಸಮಗ್ರ ನ್ಯೂಸ್‌: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರತೀ ವರ್ಷ ಸದ್ಯೋದ್ಯಾನ ಲಾಲ್‌ಬಾಗ್‌ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನ ಗುರುವಾರದಿಂದ ಆರಂಭವಾಗುತ್ತಿದೆ. ಈ ಬಾರಿಯೂ ಭಾರೀ ಸಂಖ್ಯೆಯಲ್ಲಿ ಜನ ಆಗಮಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕೆ ಪ್ರಮುಖ ರಸ್ತೆಯಲ್ಲಿ ವಾಹನ ನಿಲುಗಡೆ ನಿಷೇಧ ಮಾಡಿ ಸಂಚಾರಿ ಪೊಲೀಸರಿಂದ ಆದೇಶ ಹೊರಡಿಸಲಾಗಿದೆ. ಇಂದಿನಿಂದ 12 ದಿನಗಳವರೆಗೆ ಫ್ಲವರ್ ಶೋ ನಡೆಯಲಿದ್ದು, ಫಲಪುಷ್ಪ ಪ್ರದರ್ಶನಕ್ಕೆ ಬರುವ ಜನರಿಗೆ ವಾಹನ ನಿಲುಗಡೆಗೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಪ್ರಮುಖ 9 ರಸ್ತೆಯಲ್ಲಿ ವಾಹನ

ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ/ ಇಂದಿನಿಂದ 12 ದಿನಗಳವರೆಗೆ ಫ್ಲವರ್ ಶೋ Read More »

ಚಿಕ್ಕಮಗಳೂರು : ಕಬ್ಬಿಣದ ಏಣಿ ಕೊಂಡೊಯ್ಯುವಾಗ ವಿದ್ಯುತ್ ಸ್ಪರ್ಶ|ವ್ಯಕ್ತಿ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗದ್ಗಲ್ ಗ್ರಾಮದ ವ್ಯಕ್ತಿ ಕಬ್ಬಿಣದ ಏಣಿನ್ನು ಕೊಂಡೊಯ್ಯುವಾಗ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆ.8 ರಂದು ನಡೆದಿದೆ. ಮೃತನನ್ನು 48 ವರ್ಷದ ಪ್ರಸನ್ನ ಸಾಲ್ಡನ್ ಎಂದು ಗುರುತಿಸಲಾಗಿದೆ. ಮೃತ ಪ್ರಸನ್ನ ಮನೆಯಲ್ಲಿ ಬೇರೆ ಕೆಲಸದ ನಿಮಿತ್ತ ಕಾಫಿ ತೋಟದಿಂದ ಕಬ್ಬಿಣದ ಏಣಿಯನ್ನು ಮನೆಗೆ ತಂದಿದ್ದರು. ಕೆಲಸವಾದ ಬಳಿಕ ಏಣಿಯನ್ನು ಮತ್ತೆ ಕಾಫಿ ತೋಟಕ್ಕೆ ಇಡಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಕಬ್ಬಿಣದ ಏಣಿಯಾದ

ಚಿಕ್ಕಮಗಳೂರು : ಕಬ್ಬಿಣದ ಏಣಿ ಕೊಂಡೊಯ್ಯುವಾಗ ವಿದ್ಯುತ್ ಸ್ಪರ್ಶ|ವ್ಯಕ್ತಿ ಸ್ಥಳದಲ್ಲೇ ಸಾವು Read More »