ಚಿಕ್ಕಮಗಳೂರು, ಕೊಡಗಿನಲ್ಲಿ ಅರಣ್ಯ ಒತ್ತುವರಿ ತೆರವು| ಕಾಫಿ ಬೆಳೆದಿದ್ದ ಜಮೀನು ವಶಕ್ಕೆ ಪಡೆದ ಅರಣ್ಯ ಇಲಾಖೆ
ಸಮಗ್ರ ನ್ಯೂಸ್: ಅರಣ್ಯ ಇಲಾಖೆಗೆ ಸಂಬಂಧಿಸಿದ ಒತ್ತುವರಿ ಜಮೀನು ತೆರವು ಕಾರ್ಯಾಚರಣೆ ವೇಗ ಪಡೆದುಕೊಂಡಿದ್ದು, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹಲವು ಗ್ರಾಮಗಳಲ್ಲಿ ಇಲಾಖೆ ಅಧಿಕಾರಿಗಳು ಒತ್ತುವರಿ ತೆರವುಗೊಳಿಸುತ್ತಿದ್ದಾರೆ. ಚಿಕ್ಕಮಗಳೂರು ತಾಲ್ಲೂಕಿನ ಮತ್ತಾವರ ಮೀಸಲು ಅರಣ್ಯದಲ್ಲಿ ಒತ್ತುವರಿ ಮಾಡಿ ಕಾಫಿ ತೋಟ ಮಾಡಿದ್ದ 20 ಎಕರೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶನಿವಾರ ತೆರವುಗೊಳಿಸಿದರು. ವಸ್ತಾರೆ ಗ್ರಾಮದ ಸರ್ವೆ ನಂಬರ್ 369ರಲ್ಲಿ ಹಲವರು ಒತ್ತುವರಿ ಮಾಡಿ ಕಾಫಿ ಗಿಡಗಳನ್ನು ನೆಟ್ಟಿದ್ದರು. ಅರಣ್ಯ ಜಾಗದಲ್ಲಿದ್ದ ಕಾಫಿ ಗಿಡಗಳನ್ನು ಕತ್ತರಿಸಿ ಅರಣ್ಯ […]










