ರಾಜ್ಯ

ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ| 70 ಮಂದಿ ಸಜೀವ ದಹನ

ಸಮಗ್ರ ನ್ಯೂಸ್: ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ ಸಂಭವಿಸಿದೆ. 62 ಪ್ರಯಾಣಿಕರು ಹಾಗೂ 8 ವಿಮಾನದ ಸಿಬ್ಬಂದಿ ಇದ್ದ ವಿಮಾನವು ಬ್ರೆಜಿಲ್‌ನ ಸಾವೋ ಪೌಲೋದಲ್ಲಿ ಪತನಗೊಂಡಿದ್ದು ಭೂಮಿಗೆ ಅಪ್ಪಳಿಸುತ್ತಲೇ ವಿಮಾನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಪತನಗೊಂಡ ಕೆಲವೇ ಸೆಕೆಂಡ್‌ಗಳಲ್ಲಿ ಭೀಕರವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ಹೊಗೆ ಆವರಿಸಿದೆ. ಇದರಿಂದಾಗಿ ವಿಮಾನದಲ್ಲಿದ್ದ ಎಲ್ಲ 70 ಜನರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕಾಸ್ಕಾವೆಲ್‌ನಿಂದ ಗುವಾರುಲ್ಹೋಸ್‌ ಏರ್‌ಪೋರ್ಟ್‌ಗೆ ತೆರಳುತ್ತಿದ್ದ ವೇಳೆ ಸಾವೋ ಪೌಲೋ ರಾಜ್ಯದ ವಿನ್ಹೇಡೋ ಎಂಬ ಪ್ರದೇಶದಲ್ಲಿ ವಿಮಾನವು ಪತನಗೊಂಡಿದೆ. ವಿಮಾನದ […]

ಬ್ರೆಜಿಲ್‌ನಲ್ಲಿ ಭೀಕರ ವಿಮಾನ ದುರಂತ| 70 ಮಂದಿ ಸಜೀವ ದಹನ Read More »

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತು: ಸತೀಶ್ ಜಾರಕಿಹೊಳಿಗೆ ಸಮನ್ಸ್

ಸಮಗ್ರ ನ್ಯೂಸ್: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಸಮನ್ಸ್ ನೀಡಿದೆ. ಹಿಂದೂ ಧರ್ಮ‌ಕ್ಕೆ ನಿಂದನೆ ಮಾಡುವ‌ ಮೂಲಕ ಅಶಾಂತಿ ಮೂಡಿಸಲು ಯತ್ನಿಸಲಾಗುತ್ತಿದೆ. ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಲಾಗಿದೆ ಎಂದು 2022ರಲ್ಲಿ ವಕೀಲ ಕೆ.ದಿಲೀಪ್ ಕುಮಾರ್ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ದೂರು ಪರಿಗಣಿಸಿದ ನ್ಯಾ. ಕೆ.ಎನ್.ಶಿವಕುಮಾರ್ ಅವರಿದ್ದ ಪೀಠ ಆಗಸ್ಟ್ 27ಕ್ಕೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತು: ಸತೀಶ್ ಜಾರಕಿಹೊಳಿಗೆ ಸಮನ್ಸ್ Read More »

ಉಡುಪಿ: ಪಂಚಮಿ ದಿನ ಜೀವಂತ ನಾಗನಿಗೆ ತನು ಎರೆದು ಪೂಜೆ

ಸಮಗ್ರ ನ್ಯೂಸ್: ಇಂದು ರಾಜ್ಯದೆಲ್ಲಡೆ ನಾಗರಪಂಚಮಿ ಸಂಭ್ರಮ, ನಾಗರಪಂಚಮಿಯಂದು ಕರಾವಳಿಯಲ್ಲಿ ನಾಗನ ಕಲ್ಲಿಗೆ ಹಾಲೆರೆದು ಪೂಜಿಸಲಾಗುತ್ತದೆ. ಕೆಲವು ಕಡೆಗಳಲ್ಲಿ ನಾಗನ ಹುತ್ತಕ್ಕೆ ಹಾಲೆರೆದು ನಾಗರಪಂಚಮಿಯನ್ನು ಆಚರಿಸುತ್ತಾರೆ ಆದರೆ. ಇಲ್ಲಿ ಕಾಪುವಿನ ಮಲ್ಲಾರು ನಿವಾಸಿ ಗೋವರ್ಧನ್ ಭಟ್ ಜೀವಂತ ಹಾವಿಗೆ ತನು ಎರೆಯುವುದರ ಮೂಲಕ ನಾಗರಪಂಚಮಿಯನ್ನು ಬಹಳ ವೈಶಿಷ್ಟ್ಯದಿಂದ ಆಚರಿಸಿ ತಮ್ಮ ಇಷ್ಟಾರ್ಥ ನೆರೆವೇರಿಸುವಂತೆ ಪ್ರಾರ್ಥನೆ ಸಲ್ಲಿಸುತ್ತಾರೆ. ಮಜೂರು ಮಲ್ಲಾರಿನ ಗೋವರ್ಧನ್ ಭಟ್ ಅವರು ಹಾವುಗಳ ರಕ್ಷಣೆ ಮಾಡುತ್ತಾರೆ. ಕಾಪು ಪರಿಸರದಲ್ಲಿ ಚಿರಪರಿಚಿತರು. ಈ ಪರಿಸರದಲ್ಲಿ ಎಲ್ಲೆ ಹಾವುಗಳೂ

ಉಡುಪಿ: ಪಂಚಮಿ ದಿನ ಜೀವಂತ ನಾಗನಿಗೆ ತನು ಎರೆದು ಪೂಜೆ Read More »

ಚಿಲ್ಲರೆ ಕೊಡದೆ ಪ್ರಯಾಣಿಕನ ಮೇಲೆ ಹಲ್ಲೆ.. ಕಂಡಕ್ಟರ್ ಸಸ್ಪೆಂಡ್

ಸಮಗ್ರ ನ್ಯೂಸ್: ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರಿಗೆ 5 ರೂ. ಚಿಲ್ಲರೆ ಕೊಡದೆ, ಅವರ ಮೇಲೆಯೇ ಹಲ್ಲೆ ನಡೆಸಿದ ಘಟನೆ ನಡೆದಿದೆ. ಈಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ಬಿಎಂಟಿಸಿ ಬಸ್‌ ಕಂಡಕ್ಟರ್‌ನನ್ನು ಅಮಾನತುಗೊಳಿಸಿದೆ. ಈ ಕುರಿತು ಬಿಎಂಟಿಸಿ ಆದೇಶ ಹೊರಡಿಸಿ ಪ್ರಕಟಣೆ ತಿಳಿಸಿದೆ. ಬಿಎಂಟಿಸಿ ಬಸ್‌ನಲ್ಲಿ ಅಭಿನವ್‌ ರಾಜ್‌ ಎಂಬ ಯುವಕ ಪ್ರಯಾಣಿಸುತ್ತಿದ್ದರು. ಅವರು 15 ರೂ. ಟಿಕೆಟ್‌ಗೆ 20 ರೂ. ನೀಡಿದ್ದರು. 5 ರೂ. ಚಿಲ್ಲರೆ ವಾಪಸ್‌ ಕೇಳಿದಾಗ ಪ್ರಯಾಣಿಕನ ಮೇಲೆ ಕಂಡಕ್ಟರ್‌ ರೇಗಾಡಿದ್ದಾರೆ.

ಚಿಲ್ಲರೆ ಕೊಡದೆ ಪ್ರಯಾಣಿಕನ ಮೇಲೆ ಹಲ್ಲೆ.. ಕಂಡಕ್ಟರ್ ಸಸ್ಪೆಂಡ್ Read More »

ಸಹಕಾರ ಸಂಘಗಳ ಸಿಬ್ಬಂದಿ ನೇಮಕಾತಿ, ವರ್ಗಾವಣೆ ಪ್ರಕ್ರಿಯೆ ಸರ್ಕಾರದ ಕೈಲಿಲ್ಲ| ಹೈಕೋರ್ಟ್ ಮಹತ್ವದ ಆದೇಶ

ಸಮಗ್ರ ನ್ಯೂಸ್: ಸಹಕಾರ ಸಂಘಗಳಲ್ಲಿ ನೌಕರರ ನೇಮಕಾತಿ, ವರ್ಗಾವಣೆ ಹಾಗೂ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಸಹಕಾರ ಸಂಘಗಳು ಹೊಂದಿದ್ದ ಅಧಿಕಾರ ಮೊಟಕುಗೊಳಿಸಿ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 128ಎಗೆ ರಾಜ್ಯ ಸರ್ಕಾರ ತಂದಿದ್ದ ತಿದ್ದುಪಡಿಯನ್ನು ಅಸಂವಿಧಾನಿಕವೆಂದು ಘೋಷಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಿದ್ದುಪಡಿ ನಿಯಮ ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಹಕಾರ ಕೃಷಿ ಸಂಸ್ಥೆಯ ಹಾಲಿ ಅಧ್ಯಕ್ಷ ಕೆ.ವಿ. ಪ್ರಸಾದ್ ಸೇರಿದಂತೆ 50ಕ್ಕೂ ಹೆಚ್ಚು ಸಹಕಾರ ಸಂಘಗಳು ಸಲ್ಲಿಸಿದ್ದ

ಸಹಕಾರ ಸಂಘಗಳ ಸಿಬ್ಬಂದಿ ನೇಮಕಾತಿ, ವರ್ಗಾವಣೆ ಪ್ರಕ್ರಿಯೆ ಸರ್ಕಾರದ ಕೈಲಿಲ್ಲ| ಹೈಕೋರ್ಟ್ ಮಹತ್ವದ ಆದೇಶ Read More »

ಲೈಂಗಿಕ ಕ್ರಿಯೆ ನಡೆಸಲು ‘ಶುಲ್ಕ’ ವಿಧಿಸುತ್ತಿದ್ದ ಪತ್ನಿ!! ಕೋರ್ಟ್‌ನಿಂದ ವಿಚ್ಛೇದನ ಮಂಜೂರು

ಸಮಗ್ರ ನ್ಯೂಸ್: ಪತ್ನಿಯೊಬ್ಬಳು ತನ್ನ ಪತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಶುಲ್ಕ ವಿಧಿಸುತ್ತಿದ್ದ ವಿಲಕ್ಷಣ ಪ್ರಕರಣ ಬೆಳಕಿಗೆ ಬಂದಿದೆ. ತೈವಾನ್ ನಲ್ಲಿ ಈ ಘಟನೆ ನಡೆದಿದ್ದು, ಪತ್ನಿಯ ಈ ನಡೆಯಿಂದ ಬೇಸತ್ತ ಪತಿ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದು, ಅದಕ್ಕೆ ಈಗ ನ್ಯಾಯಾಲಯ ಒಪ್ಪಿಗೆ ಸೂಚಿಸಿದೆ. 2014ರಲ್ಲಿ ಈ ಜೋಡಿ ವಿವಾಹವಾಗಿದ್ದು ಇಬ್ಬರು ಮಕ್ಕಳು ಸಹ ಇದ್ದಾರೆ. ಮೂರು ವರ್ಷಗಳ ಕಾಲ ಎಲ್ಲವೂ ಸರಿ ಇದ್ದು 2017 ರಲ್ಲಿ ಆತನ ಪತ್ನಿ ತಿಂಗಳಿಗೆ ಒಮ್ಮೆ ಮಾತ್ರ ಲೈಂಗಿಕ

ಲೈಂಗಿಕ ಕ್ರಿಯೆ ನಡೆಸಲು ‘ಶುಲ್ಕ’ ವಿಧಿಸುತ್ತಿದ್ದ ಪತ್ನಿ!! ಕೋರ್ಟ್‌ನಿಂದ ವಿಚ್ಛೇದನ ಮಂಜೂರು Read More »

ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ನವದಂಪತಿ ಹೊಡೆದಾಟ; ವಧು ಸಾವು!

ಸಮಗ್ರ ನ್ಯೂಸ್: ಮದುವೆಯಾದ ಹಲವು ತಿಂಗಳು, ವರ್ಷಗಳ ಬಳಿಕ ದಂಪತಿ ನಡುವೆ ಭಿನ್ನಾಭಿಪ್ರಾಯ ಮೂಡುವುದು ಸಾಮಾನ್ಯ. ಆದರೆ, ಇಲ್ಲೊಂದು ಜೋಡಿ ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ಹೊಡೆದಾಡಿಕೊಂಡಿದ್ದು , ಇವರಿಬ್ಬರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಮದುವೆಯಾದ ಕೆಲವೇ ಗಂಟೆಗಳಲ್ಲಿ ವಧು-ವರ ಹೊಡೆದಾಡಿಕೊಂಡು, ವಧು ಸಾವಿಗೀಡಾಗಿ, ವರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ತ್ಯಂಬರಸನಹಳ್ಳಿಯಲ್ಲಿ ನಡೆದಿದೆ. ಲಿಖಿತಶ್ರೀ ಮೃತ ವಧು, ನವೀನ್ ಗಾಯಾಳು ವರ. ಅದ್ಧೂರಿಯಾಗಿ ಲಿಖಿತಶ್ರೀ ಹಾಗೂ ನವೀನ್ ಮದುವೆಯಾಗಿತ್ತು. ಆದರೆ

ಸಪ್ತಪದಿ ತುಳಿದ ಕೆಲವೇ ಹೊತ್ತಿನಲ್ಲಿ ನವದಂಪತಿ ಹೊಡೆದಾಟ; ವಧು ಸಾವು! Read More »

ಪ್ರಾಣವನ್ನೇ ಪಣಕ್ಕಿಟ್ಟು ಕಳ್ಳನನ್ನು ಹಿಡಿದ ಪೊಲೀಸ್ ಪೇದೆ| ಕರ್ತವ್ಯ ನಿಷ್ಠೆಗೆ ಸಿಕ್ತು ಭಾರೀ ಪ್ರಶಂಸೆ

ಸಮಗ್ರ ನ್ಯೂಸ್: ಪೊಲೀಸ್‌ ಪೇದೆಯೊಬ್ಬರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು, ಸಿನೀಮಿಯ ಶೈಲಿಯಲ್ಲಿ ಕಳ್ಳನೊಬ್ಬನನ್ನು ಹಿಡಿದಿರುವ ಘಟನೆ ನಡೆದಿದ್ದು, ಕಳ್ಳನನ್ನು ಹಿಡಿಯುವ ಭಯಾನಕ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸ್ ಕಾನ್‌ಸ್ಟೇಬಲ್ ಕರ್ತವ್ಯ ನಿಷ್ಠೆಗೆ ಸಾರ್ವಜನಿಕ ವಲಯದಲ್ಲಿ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಮಂಜೇಶ್@420 ಮಂಜ @ಹೊಟ್ಟೆ ಮಂಜ ಪೊಲೀಸ್ ಕೈಗೆ ಸಿಕ್ಕಿಬಿದ್ದ ಖತರ್ನಾಕ್ ಕಳ್ಳ. ಕೊರಟಗೆರೆ ಪೊಲೀಸ್ ಠಾಣೆಯ ಪೇದೆ ದೊಡ್ಡಲಿಂಗಯ್ಯ ಕಳ್ಳನನ್ನು ಹಿಡಿದವರು. ಸುಮಾರು 10ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ 420 ಮಂಜನನ್ನು ಬೆಂಗಳೂರಿನ ಸದಾಶಿವನಗರ

ಪ್ರಾಣವನ್ನೇ ಪಣಕ್ಕಿಟ್ಟು ಕಳ್ಳನನ್ನು ಹಿಡಿದ ಪೊಲೀಸ್ ಪೇದೆ| ಕರ್ತವ್ಯ ನಿಷ್ಠೆಗೆ ಸಿಕ್ತು ಭಾರೀ ಪ್ರಶಂಸೆ Read More »

ಹೊನ್ನಾವರ ಸಮುದ್ರದಲ್ಲಿ ಕೊಳೆತ ಶವ ಪತ್ತೆ| ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಡ್ರೈವರ್ ಅರ್ಜುನ್ ನ ಶವವೆಂಬ ಶಂಕೆ

ಸಮಗ್ರ ನ್ಯೂಸ್: ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಈ ನಡುವಲ್ಲೇ ಗುಡ್ಡ ಕುಸಿತಗೊಂಡ ಸ್ಥಳದಿಂದ 25 ಕಿಮೀ ದೂರದಲ್ಲಿನ ಹೊನ್ನಾವರ ಸಮುದ್ರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಈ ಶವ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋದ ಲಾರಿ ಚಾಲಕ ಅರ್ಜುನ್​ (30) ಅವರದ್ದು ಎಂದು ಶಂಕಿಸಲಾಗಿದೆ. ಮೃತದೇಹ ಯಾರದ್ದು ಎಂಬುದು ಇನ್ನೂ ದೃಢವಾಗಿಲ್ಲ. ಸದ್ಯ ಕರಾವಳಿ ಪೊಲೀಸರು ಮೃತದೇಹವನ್ನು ದಡಕ್ಕೆ

ಹೊನ್ನಾವರ ಸಮುದ್ರದಲ್ಲಿ ಕೊಳೆತ ಶವ ಪತ್ತೆ| ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಡ್ರೈವರ್ ಅರ್ಜುನ್ ನ ಶವವೆಂಬ ಶಂಕೆ Read More »

ಶಿರೂರು-ಉಳವರೆಗೆ ಭೇಟಿ ನೀಡಿ ಮಾನವೀಯ ನೆರವು ಚಾಚಿದ ಮಂಗಳೂರಿನ ಪತ್ರಕರ್ತರು

ಸಮಗ್ರ ನ್ಯೂಸ್: ಗುಡ್ಡ ಕುಸಿತದಿಂದ ಮನೆಮಠ ಕಳೆದುಕೊಂಡ ಅಂಕೋಲ ತಾಲೂಕಿನ ಉಳವರೆ ಗ್ರಾಮಕ್ಕೆ ಉಳ್ಳಾಲ ಪತ್ರಕರ್ತರ ಸಂಘ ಹಾಗೂ ಮಂಗಳೂರಿನ ಪತ್ರಕರ್ತರ ಚಾರಣ ಬಳಗದ ಸದಸ್ಯರು ಭೇಟಿ ಕೊಟ್ಟು ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ಒದಗಿಸುವ ಮೂಲಕ ಮಾನವೀಯ ನೆರವು ಚಾಚಿದರು. ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು ಉಂಟಾದ ದುರಂತದ ಪರಿಣಾಮ ಗಂಗಾವಳಿ ನದಿ ತೀರದಲ್ಲಿರುವ ಉಳವರೆ ಗ್ರಾಮದ 27 ಕುಟುಂಬಗಳು ಮನೆ ಮಠ ಕಳೆದುಕೊಂಡಿದ್ದರೆ 6 ಮನೆಗಳು‌ ಸಂಪೂರ್ಣ ನಾಶವಾಗಿತ್ತು. ಸದ್ಯಉಳವರೆ ಗ್ರಾಮ‌

ಶಿರೂರು-ಉಳವರೆಗೆ ಭೇಟಿ ನೀಡಿ ಮಾನವೀಯ ನೆರವು ಚಾಚಿದ ಮಂಗಳೂರಿನ ಪತ್ರಕರ್ತರು Read More »