ರಾಜ್ಯ

ಬೆಂಗಳೂರಿಗೆ ಮೆಟ್ರೋಸಿಟಿ ಸ್ಥಾನಮಾನ/ ನಿರಾಕರಿಸಿದ ಕೇಂದ್ರ ಸರ್ಕಾರ

ಸಮಗ್ರ ನ್ಯೂಸ್: ಬಹು ದಿನಗಳ ಬೇಡಿಕೆಯಾಗಿದ್ದ, ಬೆಂಗಳೂರಿಗೆ ಮೆಟ್ರೋ ಸಿಟಿ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಆದಾಯ ತೆರಿಗೆ ನಿಯಮಗಳು, 1962ರ ನಿಯಮ 2 ಎ ಅಡಿಯಲ್ಲಿ ಮೆಟ್ರೋ ನಗರಗಳು ಮತ್ತು ಇತರ ನಗರಗಳ ನಡುವೆ ವ್ಯತ್ಯಾಸವಿದೆ ಎಂದು ಹೇಳಿದರು. ಪ್ರಸ್ತುತ ದೇಶದ ನಾಲ್ಕು ಪ್ರಮುಖ ನಗರಗಳಾದ ಮುಂಬೈ, ದೆಹಲಿ, ಕೋಲ್ಕತಾ ಮತ್ತು ಚೆನ್ನೈಯನ್ನು ಮೆಟ್ರೋ ಸಿಟಿ ಎಂದು ಗುರುತಿಸಲಾಗುತ್ತಿದೆ ಮೆಟ್ರೋ ಸ್ಥಾನಮಾನ ದೊರೆತರಿಗೆ ಆ ನಗರಕ್ಕೆ ಮನೆ ಬಾಡಿಗೆ ಭತ್ಯೆ ತೆರಿಗೆ ವಿನಾಯಿತಿ ಸೇರಿದಂತೆ […]

ಬೆಂಗಳೂರಿಗೆ ಮೆಟ್ರೋಸಿಟಿ ಸ್ಥಾನಮಾನ/ ನಿರಾಕರಿಸಿದ ಕೇಂದ್ರ ಸರ್ಕಾರ Read More »

ರಾಜ್ಯಸಭೆಯ 12 ಸ್ಥಾನಗಳಿಗೆ ಚುನಾವಣೆ/ ಸೆಪ್ಟೆಂಬರ್ 3 ರಂದು ಮತದಾನ

ಸಮಗ್ರ ನ್ಯೂಸ್: ರಾಜ್ಯಸಭೆಯಲ್ಲಿ ಖಾಲಿ ಇರುವ 12 ಸ್ಥಾನಗಳಿಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಸೆಪ್ಟೆಂಬ‌ರ್ 3ರಂದು ಚುನಾವಣೆ ನಡೆಯಲಿದ್ದು, ಅಂದು ಸಂಜೆಯೇ ಫಲಿತಾಂಶ ಹೊರಬರಲಿದೆ. ನಾಮಪತ್ರ ಹಿಂಪಡೆಯಲು ಆಗಸ್ಟ್ 26 ಮತ್ತು 27 ಕೊನೆಯ ದಿನವಾಗಿದೆ ಎಂದು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.

ರಾಜ್ಯಸಭೆಯ 12 ಸ್ಥಾನಗಳಿಗೆ ಚುನಾವಣೆ/ ಸೆಪ್ಟೆಂಬರ್ 3 ರಂದು ಮತದಾನ Read More »

ನೆಲಮಂಗಲದಲ್ಲಿ ಭೀಕರ ಅಪಘಾತ: ಪತಿ ಎದುರೇ ತುಂಬು ಗರ್ಭಿಣಿ ಸಾವು

ಸಮಗ್ರ ನ್ಯೂಸ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಟಿಪ್ಪರ್‌ ಲಾರಿಗೆ ಬೈಕ್ ಹಿಂಬದಿ ಕುಳಿತಿದ್ದ ಗರ್ಭಿಣಿ ಮೃತಪಟ್ಟ ಘಟನೆ ನಡೆದಿದೆ.ಘಟನೆಯಿಂದ ಹೊಟ್ಟೆಯಲ್ಲಿದ್ದ ಮಗು ಸಹಿತ ಹೊಟ್ಟೆಯಿಂದ ಹೊರಬಂದು ಸಾವಿಗೀಡಾಗಿದೆ. ಎಡೇಹಳ್ಳಿಯ ಸಿಂಚನಾ (30) ಮೃತದುರ್ದೈವಿ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸಿಂಚನಾಗೆ ಬರುವ ಆಗಸ್ಟ್​ 17ಕ್ಕೆ 8 ಮುಗಿದು 9 ತಿಂಗಳು ತುಂಬುತ್ತಿತ್ತು. ಹೀಗಾಗಿ ಹೆರಿಗೆ ಸುಸೂತ್ರವಾಗಿ ಆಗಲಿ ಎಂದು ದಂಪತಿ ಬೈಕ್​ನಲ್ಲಿ​​ ದಾಬಸ್​ ಪೇಟೆಯಲ್ಲಿರುವ ಶಿವಗಂಗೆಯ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿ ಪೂಜೆ ಸಲ್ಲಿಸಿ ಮರಳಿ

ನೆಲಮಂಗಲದಲ್ಲಿ ಭೀಕರ ಅಪಘಾತ: ಪತಿ ಎದುರೇ ತುಂಬು ಗರ್ಭಿಣಿ ಸಾವು Read More »

ಕಾರವಾರ: ಏಕಾಏಕಿ ಕುಸಿದ ಕಾಳಿ ನದಿ ಸೇತುವೆ| ಸೇತುವೆಯ‌ ಮೇಲೆ ಸಂಚರಿಸುತ್ತಿದ್ದ ಲಾರಿ ನದಿಗೆ|

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ನಾನಾ ಕಾರಣಗಳಿಂದ ಮಳೆಯ ಅವಾಂತರ, ಗುಡ್ಡ ಕುಸಿತ,ಅವಘಡಗಳು ಸಂಭವಿಸುತ್ತಲೇ ಇದ್ದು ಹೆದ್ದಾರಿ ಸಂಚಾರಿಗಳು ತಮ್ಮ ಜೀವವನ್ನು ಕೈಯಲ್ಲಿಯೇ ಹಿಡಿದು ಒಡಾಡುವಂತಾಗಿದೆ. ಕಾರವಾರ ನಗರ ವ್ಯಾಪ್ತಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ಕಾಳಿ ನದಿ ಸೇತುವೆ, ರಾತ್ರಿ ವೇಳೆ ಆಕಸ್ಮಿಕವಾಗಿ ಕುಸಿದು ಬಿದ್ದಿದೆ. ಈ ವೇಳೆ ಗೋವಾದಿಂದ ಹುಬ್ಬಳ್ಳಿಗೆ ತೆರಳುತ್ತಿತ್ತು ಎನ್ನಲಾದ ತಮಿಳುನಾಡು ಮೂಲದ ಲಾರಿಯೊಂದು ನದಿಯಲ್ಲಿ ಬಿದ್ದಿದೆ. ಚಾಲಕ, ಲಾರಿಯ ಕ್ಯಾಬಿನ್ ಏರಿ ನಿಂತು ತನ್ನ ರಕ್ಷಣೆಗಾಗಿ

ಕಾರವಾರ: ಏಕಾಏಕಿ ಕುಸಿದ ಕಾಳಿ ನದಿ ಸೇತುವೆ| ಸೇತುವೆಯ‌ ಮೇಲೆ ಸಂಚರಿಸುತ್ತಿದ್ದ ಲಾರಿ ನದಿಗೆ| Read More »

ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್| ಫಲಾನುಭವಿಗಳ ಖಾತೆಗೆ ಈ ದಿನ ಬೀಳಲಿದೆ ಗೃಹಲಕ್ಷ್ಮಿ ಹಣ

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಗಳಲ್ಲಿ ಗೃಹ ಲಕ್ಷ್ಮೀ ಯೋಜನೆಯಲ್ಲಿ ಕಳೆದ ಜೂನ್ ತಿಂಗಳಿನಿಂದ ಮಹಿಳೆಯರ ಖಾತೆಗೆ ಹಣ ಜಮಾ ಆಗಿರಲಿಲ್ಲ ಆದರೆ ಇದೀಗ ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಜೂನ್ ಜುಲೈ ತಿಂಗಳ ಗೃಹಲಕ್ಷ್ಮೀ ಹಣವನ್ನು ಇಂದೇ ಬಿಡುಗಡೆ ಮಾಡುತ್ತೇವೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಖಾತೆಗೆ ಇಂದಿನಿಂದ (ಆ.08) ಹಣ ಜಮಾವಣೆ ಆಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ

ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್| ಫಲಾನುಭವಿಗಳ ಖಾತೆಗೆ ಈ ದಿನ ಬೀಳಲಿದೆ ಗೃಹಲಕ್ಷ್ಮಿ ಹಣ Read More »

ಎಡಕುಮೇರಿಯಲ್ಲಿ ಭೂಕುಸಿತ/ ಆಗಸ್ಟ್ 8 ರವರೆಗೆ ಬೆಂಗಳೂರು-ಕಾರವಾರ ರೈಲು ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಭಾರೀ ಮಳೆ ಸುರಿಯುತ್ತಿರುವ ಪಶ್ಚಿಮ ಘಟ್ಟ ಭಾಗದ ಎಡಕುಮೇರಿ ಕಡಗರವಳ್ಳಿ ರೈಲು ಮಾರ್ಗದಲ್ಲಿ ಭೂಕುಸಿತ ಉಂಟಾಗಿದ್ದರಿಂದ ರೈಲು ಹಳಿಗಳ ಮೇಲೆ ಮಣ್ಣು ಕುಸಿದ ಕಾರಣ ಕಾರವಾರ ಹಾಗೂ ಬೆಂಗಳೂರು ನಡುವೆ ರೈಲು ಸಂಚಾರಕ್ಕೆ ತಡೆಯಾಗಿದೆ. ದುರಸ್ತಿ ಕಾರ್ಯಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಕೊಂಕಣ ರೈಲು ಮಾರ್ಗದಲ್ಲಿ ಕಾರವಾರ ಹಾಗೂ ಬೆಂಗಳೂರು ನಡುವಿನ ಎಲ್ಲಾ ರೈಲುಗಳ ಸಂಚಾರವನ್ನು ಆಗಸ್ಟ್ 8ರವರೆಗೆ ರದ್ದುಪಡಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ಎಡಕುಮೇರಿಯಲ್ಲಿ ಭೂಕುಸಿತ/ ಆಗಸ್ಟ್ 8 ರವರೆಗೆ ಬೆಂಗಳೂರು-ಕಾರವಾರ ರೈಲು ಸಂಚಾರ ಸ್ಥಗಿತ Read More »

ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ| ಮೊದಲ ದಿನ 69 ಎಕ್ರೆ‌ ಒತ್ತುವರಿ ತೆರವು

ಸಮಗ್ರ ನ್ಯೂಸ್: ವಯನಾಡು ದುರಂತದ ಬೆನ್ನಲ್ಲೇ ರಾಜ್ಯದಲ್ಲಿ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ 2015ರ ನಂತರ ಅಕ್ರಮವಾಗಿ ತಲೆ ಎತ್ತಿರುವ ರೆಸಾರ್ಟ್, ಹೋಂ ಸ್ಟೇ ಸೇರಿ ಎಲ್ಲಾ ಬಗೆಯ ಅರಣ್ಯ ಒತ್ತುವರಿ ತೆರವಿಗೆ ಸೋಮವಾರದಿಂದ ಕಾರ್ಯಾಚರಣೆ ಆರಂಭಿಸಲಾಗಿದೆ. ಮೊದಲ ದಿನವೇ ಪಶ್ಚಿಮ ಘಟ್ಟದ 69 ಎಕರೆ ಒತ್ತುವರಿ ತೆರವು ಮಾಡಲಾಗಿದೆ. ಅಕ್ರಮವಾಗಿ ನಿರ್ಮಿಸಿದ್ದ ಹೋಂ ಸ್ಟೇ, ರೆಸಾರ್ಟ್ ತೆರವು ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈಗಾಗಲೇ 69 ಎಕರೆ ಅರಣ್ಯ ಗುರುತಿಸಿ ತೆರವು ಮಾಡಿಸಲಾಗುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್

ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ| ಮೊದಲ ದಿನ 69 ಎಕ್ರೆ‌ ಒತ್ತುವರಿ ತೆರವು Read More »

ಯಾದಗಿರಿ ಪಿಎಸ್ಐ ಸಾವು ಬೆನ್ನಲ್ಲೇ ಸಿಸಿಬಿ ಇನ್ಸ್ಪೆಕ್ಟರ್ ತಿಮ್ಮೆಗೌಡ ಆತ್ಮಹತ್ಯೆ…!

ಸಮಗ್ರ ನ್ಯೂಸ್: ಯಾದಗಿರಿಯಲ್ಲಿ ಪಿಎಸ್ಐ ಪರಶುರಾಮ್ ಸಾವಿನ ಬೆನ್ನಲ್ಲೇ ಇದೀಗ ಸಿಸಿಬಿ ಇನ್ಸ್ಪೆಕ್ಟರ್ ತಿಮ್ಮೆಗೌಡ ಆತ್ಮಹತ್ಯೆಗೆ ಶರಣಾಗಿದ್ದು ಅಚ್ಚರಿಗೆ ಕಾರಣವಾಗಿದೆ. ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಇನ್ಸ್ ಪೆಕ್ಟರ್ ತಿಮ್ಮೇಗೌಡ ರಾಮನಗರ ಜಿಲ್ಲೆ ಬಿಡದಿಯ ಕಗ್ಗಲಿಪುರದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ಈ ಆತ್ಮಹತ್ಯೆ ವೈಯಕ್ತಿಕ ಕಾರಣಕ್ಕೋ ಅಥವಾ ಕೆಲಸದ ಒತ್ತಡವೋ ಎನ್ನುವ ಅನುಮಾನ ಮೂಡಿದೆ. ತಿಮ್ಮೇಗೌಡ ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ರಾತ್ರಿ ಕಗ್ಗಲಿಪುರ ಪೊಲೀಸ್ ಠಾಣೆ

ಯಾದಗಿರಿ ಪಿಎಸ್ಐ ಸಾವು ಬೆನ್ನಲ್ಲೇ ಸಿಸಿಬಿ ಇನ್ಸ್ಪೆಕ್ಟರ್ ತಿಮ್ಮೆಗೌಡ ಆತ್ಮಹತ್ಯೆ…! Read More »

ಬೆಂಗಳೂರಿನಲ್ಲಿ ವರುಣನ ಆರ್ಭಟ: ವಾಹನ ಸವಾರರ ಪರದಾಟ

ಸಮಗ್ರ ನ್ಯೂಸ್: ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿದ್ದು ಬೆಂಗಳೂರಿನಲ್ಲಿ ಮಾತ್ರ ಮೋಡ ಕವಿದ ವಾತಾವರಣ ಇರುತ್ತಿತ್ತು. ಅದರಂತೆ ಇಂದು ಮೊದಲ ಶ್ರಾವಣ ಸೋಮವಾರ, ಸಂಜೆಯಿಂದ ಬೆಂಗಳೂರಿನಲ್ಲಿ ವರುಣನ ಆರ್ಭಟ ಜೋರಾಗಿದೆ. ನಗರದೆಲ್ಲೆಡೆ ಮಳೆ ಬಂದು ಟ್ರಾಫಿಕ್ ಸಮಸ್ಯೆಯಿಂದ ವಾಹನ ಸವಾರರು ಪರದಾಡುವಂತಾಯಿತು. ಕತ್ರಿಗುಪ್ಪೆ, ಉತ್ತರಹಳ್ಳಿ, ಶಾಂತಿನಗರ, ರಿಚ್ಮಂಡ್ ಟೌನ್, ಹೆಚ್ಎಎಲ್, ದೊಡ್ಡ ನಕ್ಕುಂದಿ ಮಾರತಹಳ್ಳಿ, ಕುಂದ್ಲಹಳ್ಳಿ, ಇಂದಿರಾನಗರ, ಮುರುಗೇಶ್ ಪಾಳ್ಯ, ಸಿವಿ ರಾಮನ್ ನಗರ, ಈಜಿಪುರ, ದೊಮ್ಮಲೂರು, ಶಾಂತಿ ನಗರ, ಜಯನಗರ, ವಿಜಯನಗರ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್,

ಬೆಂಗಳೂರಿನಲ್ಲಿ ವರುಣನ ಆರ್ಭಟ: ವಾಹನ ಸವಾರರ ಪರದಾಟ Read More »

ವಾಕಿಂಗ್ ಗೆ ಬಂದಿದ್ದ ಮಹಿಳೆಯ ಚುಂಬಿಸಿದಾತ ಅರೆಸ್ಟ್

ಸಮಗ್ರ ನ್ಯೂಸ್: ವಾಯುವಿಹಾರಕ್ಕೆ ಬಂದಿದ್ದ ಮಹಿಳೆಯನ್ನು ಎಳೆದಾಡಿ ಚುಂಬಿಸಿ ಪರಾರಿಯಾಗಿದ್ದವನನ್ನು ಬೆಂಗಳೂರಿನ ಕೋಣನಕುಂಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಬ್ ಚಾಲಕ 25 ವರ್ಷದ ಸುರೇಶ್ ಬಂಧಿತ ಆರೋಪಿ. ಆಗಸ್ಟ್​ 2ರಂದು ಬೆಳಗಿನ ಜಾವ ಐದು ಗಂಟೆ ಕೋಣನಕುಂಟೆ ಬಳಿಯ ಕೃಷ್ಣಾನಗರದ ಪಾರ್ಕ್​ಗೆ ವಾಕಿಂಗ್​ಗೆ ಬಂದಿದ್ದ ಮಹಿಳೆಯನ್ನು ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿ ಎಸ್ಕೇಪ್ ಆಗಿದ್ದ. ಇದೀಗ ಘಟನೆ ನಡೆದು ಮೂರು ದಿನಗಳ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ನಿರ್ಲಕ್ಷ್ಯ ಮಾಡಿದ ಆರೋಪದಡಿಯಲ್ಲಿ ಕೋಣನಕುಂಟೆ

ವಾಕಿಂಗ್ ಗೆ ಬಂದಿದ್ದ ಮಹಿಳೆಯ ಚುಂಬಿಸಿದಾತ ಅರೆಸ್ಟ್ Read More »