ರಾಜ್ಯ

‘ಶಿಳ್ಳೆ ಹಾಕಿದ್ದು ಯಾರು? ಇಷ್ಟವಿಲ್ಲದಿದ್ರೆ ಬನ್ಸ್ ತಿಂದು ಹೋಗಿ”| ಯಕ್ಷರಂಗದಿಂದಲೇ ಪ್ರೇಕ್ಷಕರ ವಿರುದ್ಧ ಕಲಾವಿದ ಅಶೋಕ್ ಭಟ್ ಉಜಿರೆ ಗರಂ

ಸಮಗ್ರ ನ್ಯೂಸ್: ಕುಂದಾಪುರದ ಹೆನ್ನಾಬೈಲಿನಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರು ಆಯೋಜಿಸಿದ್ದ ಯಕ್ಷಗಾನ ಪ್ರದರ್ಶನದ ವೇಳೆ ಕಲಾವಿದ ಉಜಿರೆ ಅಶೋಕ್ ಭಟ್ ಪ್ರೇಕ್ಷಕರ ವಿರುದ್ಧ ಗರಂ ಆಗಿದ್ದಾರೆ. ಭಾಗವತರು ಪದ್ಯಗಳೊಂದಿಗೆ ಆಲಾಪನೆ ನಡೆಸುತ್ತಿದ್ದಾಗ, ಕೆಲ ಪ್ರೇಕ್ಷಕರು ಶಿಳ್ಳೆ ಹಾಕಿದಿದ್ದರು. ಪದ್ಯ ಮುಗಿದ ಬಳಿಕ ಕೃಷ್ಣನ ಪಾತ್ರದಲ್ಲಿ ಅಭಿನಯಿಸುತ್ತಿದ್ದ ಅಶೋಕ್ ಭಟ್, ವೇದಿಕೆಯಲ್ಲೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನೀವು ಶಿಳ್ಳೆ ನಿಲ್ಲಿಸದಿದ್ದರೆ ನಾನು ಹೋಗುತ್ತೇನೆ. ಇದು ಯಕ್ಷಗಾನವೋ? ಕಂಬಳವೋ? ನಿಮಗೆ ಈ ಕ್ಷೇತ್ರದ ಮೌಲ್ಯ ಗೊತ್ತಿದೆಯೇ?” […]

‘ಶಿಳ್ಳೆ ಹಾಕಿದ್ದು ಯಾರು? ಇಷ್ಟವಿಲ್ಲದಿದ್ರೆ ಬನ್ಸ್ ತಿಂದು ಹೋಗಿ”| ಯಕ್ಷರಂಗದಿಂದಲೇ ಪ್ರೇಕ್ಷಕರ ವಿರುದ್ಧ ಕಲಾವಿದ ಅಶೋಕ್ ಭಟ್ ಉಜಿರೆ ಗರಂ Read More »

ಎಸ್ಎಸ್ಎಲ್ ಸಿ ಪರೀಕ್ಷೆ ಅಂಕಗಳಲ್ಲಿ ಭಾರೀ ಬದಲಾವಣೆ| ಹಿಂದಿ ಭಾಷೆಗಿಲ್ಲ ಅಂಕ ಮಾನ್ಯತೆ; ಗ್ರೇಡ್ ಗೆ ಮಾತ್ರ ಸೀಮಿತ

ಸಮಗ್ರ ನ್ಯೂಸ್: ಕರ್ನಾಟಕ ಶಿಕ್ಷಣ ಇಲಾಖೆಯು SSLC ಪರೀಕ್ಷಾ ಪದ್ಧತಿಯಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ. ತೃತೀಯ ಭಾಷೆಯನ್ನು ಕೇವಲ ‘ಗ್ರೇಡಿಂಗ್’ ವಿಷಯವನ್ನಾಗಿ ಪರಿವರ್ತಿಸುವ ಮೂಲಕ, ಒಟ್ಟು ಅಂಕಗಳನ್ನು 625 ರಿಂದ 525 ಕ್ಕೆ ಇಳಿಸಿದೆ. ಇದರಿಂದ ವಿದ್ಯಾರ್ಥಿಗಳ ಶೇಕಡಾವಾರು ಅಂಕಗಳ ಲೆಕ್ಕಾಚಾರ ಸುಲಭವಾಗಲಿದ್ದು, ತೃತೀಯ ಭಾಷೆಯ ಅಂಕಗಳ ಆತಂಕ ದೂರವಾಗಲಿದೆ. ರಾಜ್ಯದಲ್ಲಿ ಎಸ್​​ಎಸ್​ಎಲ್​​ಸಿ ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಶಿಕ್ಷಣ ಇಲಾಖೆ ಎಸ್​​ಎಸ್​ಎಲ್​​ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗೆ ಮುಂದಾಗಿದೆ. ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ, ಅರೇಬಿಕ್, ಉರ್ದು,

ಎಸ್ಎಸ್ಎಲ್ ಸಿ ಪರೀಕ್ಷೆ ಅಂಕಗಳಲ್ಲಿ ಭಾರೀ ಬದಲಾವಣೆ| ಹಿಂದಿ ಭಾಷೆಗಿಲ್ಲ ಅಂಕ ಮಾನ್ಯತೆ; ಗ್ರೇಡ್ ಗೆ ಮಾತ್ರ ಸೀಮಿತ Read More »

ಮಹಾವೀರ ಜಯಂತಿ ರಜೆ ಬದಲಾವಣೆ ಹಿನ್ನೆಲೆ| ಎಸ್ಎಸ್ಎಲ್ ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಸಮಗ್ರ ನ್ಯೂಸ್: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದೆ. ಮಹಾವೀರ ಜಯಂತಿ ರಜೆ ಹಿಂದೂಡಿಕೆ ಮಾಡಿದ ಹಿನ್ನೆಲೆ ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಿಕೆ ಮಾಡಿದೆ. ಈ ಮೊದಲು ಮಾ.31ಕ್ಕೆ ರಜೆಯಿದ್ದ ಹಿನ್ನೆಲೆ ಮಾ.30ಕ್ಕೆ ಹಿಂದಿ ಪರೀಕ್ಷೆ ನಿಗದಿಯಾಗಿತ್ತು. ಇದೀಗ ಸರ್ಕಾರ ಪರಿಷ್ಕರಣೆ ಮಾಡಿ, ಮಾ.31ರ ರಜೆಯನ್ನು ಮಾ.30ಕ್ಕೆ ಘೋಷಿಸಿದೆ. ಹೀಗಾಗಿ ಪರೀಕ್ಷಾ ದಿನಾಂಕವನ್ನು ಬದಲಿಸಿ, ಮಾ.31ಕ್ಕೆ ನಡೆಸಲು ತೀರ್ಮಾನಿಸಿದೆ.ಮಾಧ್ಯಮಗಳಿಗೆ

ಮಹಾವೀರ ಜಯಂತಿ ರಜೆ ಬದಲಾವಣೆ ಹಿನ್ನೆಲೆ| ಎಸ್ಎಸ್ಎಲ್ ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ Read More »

ಮಹಾವೀರ ಜಯಂತಿ ರಜೆ ಮಾ.30ಕ್ಕೆ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು 2026ನೇ ಸಾಲಿನ ಮಹಾವೀರ ಜಯಂತಿ ಸಾರ್ವಜನಿಕ ರಜೆಯ ದಿನಾಂಕದಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಈ ಮೊದಲು ಮಾರ್ಚ್ 31ರ ಮಂಗಳವಾರ ರಜೆ ಎಂದು ಘೋಷಿಸಲಾಗಿತ್ತು, ಆದರೆ ಈಗ ಅದನ್ನು ಒಂದು ದಿನ ಮುಂಚಿತವಾಗಿ ಅಂದರೆ ಮಾರ್ಚ್ 30ರ ಸೋಮವಾರಕ್ಕೆ ವರ್ಗಾಯಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ. ರಾಜ್ಯ ಸರ್ಕಾರದಿಂದ ‘ಮಹಾವೀರ ಜಯಂತಿ’ ರಜೆ ದಿನಾಂಕ ಬದಲಾವಣೆ ; ಮಾ.30ಕ್ಕೆ ರಜೆ ಘೋಷಣೆಜೈನ ಸಮುದಾಯದ ಮುಖಂಡರ ಮನವಿ ಹಾಗೂ ಧಾರ್ಮಿಕ ಪಂಚಾಂಗದ ಲೆಕ್ಕಾಚಾರದಂತೆ ಮಾರ್ಚ್

ಮಹಾವೀರ ಜಯಂತಿ ರಜೆ ಮಾ.30ಕ್ಕೆ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ Read More »

ಭಾರತ‌ ಸೇರಿ ಮಿತ್ರರಾಷ್ಟ್ರಗಳಿಗೆ ಹಾರ್ಮೋಜ್ ಜಲಸಂಧಿ ಮುಕ್ತ – ಇರಾನ್

ಸಮಗ್ರ ನ್ಯೂಸ್: ‘ಚೀನಾ, ರಷ್ಯಾ, ಭಾರತ, ಇರಾಕ್ ಮತ್ತು ಪಾಕಿಸ್ತಾನ ಸೇರಿದಂತೆ ಮಿತ್ರ ರಾಷ್ಟ್ರಗಳ ಹಡುಗುಗಳಿಗೆ ಹೊರ್ಮುಜ್ ಜಲಸಂಧಿಯ ಮೂಲಕ ಸಂಚಾರಕ್ಕೆ ಅನುಮತಿಸಿದ್ದೇವೆ’ಎಂದು ಅರಾಘ್ಚಿ ಹೇಳಿರುವುದಾಗಿ ಮುಂಬೈನಲ್ಲಿರುವ ಇರಾನ್ ಕಾನ್ಸುಲೇಟ್ ಜನರಲ್ ಹಂಚಿಕೊಂಡ ಪೋಸ್ಟ್‌ನಲ್ಲಿ ತಿಳಿಸಲಾಗಿದೆ. ವಿಶ್ವದ ತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ(ಎನ್‌ಎನ್‌ಜಿ) ಸುಮಾರು ಶೇ 20ರಷ್ಟು ಸಾಗಾಟವು ಹೊರ್ಮುಜ್ ಜಲಸಂಧಿಯ ಮೂಲಕ ಆಗುತ್ತದೆ. ಇದು ಜಾಗತಿಕ ಇಂಧನ ಪೂರೈಕೆಯಲ್ಲಿ ಅತ್ಯಂತ ನಿರ್ಣಾಯಕ ಮಾರ್ಗಗಳಲ್ಲಿ ಒಂದಾಗಿದೆ. ‘ನಮ್ಮ ದೃಷ್ಟಿಕೋನದಲ್ಲಿ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ. .ಶತ್ರುಗಳಿಗೆ

ಭಾರತ‌ ಸೇರಿ ಮಿತ್ರರಾಷ್ಟ್ರಗಳಿಗೆ ಹಾರ್ಮೋಜ್ ಜಲಸಂಧಿ ಮುಕ್ತ – ಇರಾನ್ Read More »

ಪ್ರವೀಣ್ ನೆಟ್ಟಾರು‌ ಹತ್ಯೆ ಪ್ರಕರಣ| ಮತ್ತೋರ್ವ ಆರೋಪಿಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಓರ್ವನಿಗೆ ಜಾಮೀನು ಮಂಜೂರಾಗಿದೆ. ರಿಯಾಜ್‌ ಎಚ್‌ ವೈ ಎಂಬ ವ್ಯಕ್ತಿಗೆ ಜಾಮೀನು ಮಂಜೂರಾಗಿದೆ. ಜುಲೈ 26,2022 ರಂದು ತನ್ನ ಮನೆಗೆ ಹೊರಟಿದ್ದ ಪ್ರವೀಣ್‌ ನೆಟ್ಟಾರ್‌ ಮೇಲೆ ಆರೋಪಿಗಳು ಮಾರಕಾಸ್ತ್ರದಿಂದ ದಾಳಿ ಮಾಡಿ ಕೊ*ಲೆಗೈದಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‌ಐಎ ಒಟ್ಟು 26 ಮಂದಿಯನ್ನು ವಶಕ್ಕೆ ಪಡೆದುಕೊಂಡಿತ್ತು. ಈ ಪ್ರಕರಣದ 26 ನೇ ಆರೋಪಿಯಾಗಿರುವ ಕೊಡಗು ಸೋಮವಾರಪೇಟೆ ಮೂಲದ ರಿಯಾಜ್‌ ಎಂಬಾತನಿಗೆ ಜಾಮೀನು

ಪ್ರವೀಣ್ ನೆಟ್ಟಾರು‌ ಹತ್ಯೆ ಪ್ರಕರಣ| ಮತ್ತೋರ್ವ ಆರೋಪಿಗೆ ಜಾಮೀನು ಮಂಜೂರು Read More »

ಆರ್ ಸಿಬಿ‌ ಜೊತೆಪ್ರಾಯೋಜಕತ್ವ ಪಡೆದ ನಂದಿನಿ

ಸಮಗ್ರ ನ್ಯೂಸ್: ಕರ್ನಾಟಕ ಹಾಲು ಮಹಾಮಂಡಳಿಯು ನಂದಿನಿ ಉತ್ಪನ್ನಗಳ ಪ್ರಚಾರದ ಭಾಗವಾಗಿ ಐಪಿಎಲ್‌-2026 ಲೀಗ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು( ಆರ್‌ಸಿಬಿ) ತಂಡಕ್ಕೆ ಪ್ರಾಯೋಜಕತ್ವ ನೀಡಿದೆ. ಎರಡು ವರ್ಷದ ಹಿಂದೆ ಸ್ಕಾಟ್ಲೆಂಡ್‌ ಹಾಗೂ ಐರ್ಲೆಂಡ್‌ ತಂಡಗಳಿಗೆ ಕೆಎಂಎಫ್‌ ಪ್ರಾಯೋಜಕತ್ವ ನೀಡಿತ್ತು. ಈ ಬಾರಿ ಆರ್‌ಸಿಬಿ ತಂಡದ ಅಧಿಕೃತ ಡೈರಿ ಪಾಲುದಾರ ಆಗಿ ಕಾರ್ಯನಿರ್ವಹಿಸಲಿದ್ದು, ಇದಕ್ಕಾಗಿ ₹4.80 ಕೋಟಿ ವಿನಿಯೋಗ ಮಾಡಲಿದೆ. ‘ನಂದಿನಿ ಬ್ರಾಂಡ್‌ ಕ್ರೀಡೆ ಮತ್ತು ಯುವಜನತೆಯನ್ನು ಪ್ರೋತ್ಸಾಹಿಸುವ ಧ್ಯೇಯ ಹೊಂದಿದೆ. ಕರ್ನಾಟಕದ ಹೆಮ್ಮೆಯ ಎರಡು ಪ್ರತಿಷ್ಠಿತ ಬ್ರ‍್ಯಾಂಡ್‌ಗಳಾದ

ಆರ್ ಸಿಬಿ‌ ಜೊತೆಪ್ರಾಯೋಜಕತ್ವ ಪಡೆದ ನಂದಿನಿ Read More »

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿ – ಹರೀಶ್ ಪೂಂಜಾ

ಸಮಗ್ರ ನ್ಯೂಸ್: ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಆದ್ಯತೆ ನೀಡುವ ಮೂಲಕ ಯುವಕರಿಗೆ ಉದ್ಯೋಗ ಸೃಷ್ಟಿಗೆ ಕ್ರಮ ವಹಿಸಬೇಕು ಎಂದು ಬಿಜೆಪಿ ಸದಸ್ಯ ಹರೀಶ್ ಪೂಂಜ ಆಗ್ರಹಿಸಿದರು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ. ಇವತ್ತು ಗೋವಾ ರಾಜ್ಯಕ್ಕೆ ದೇಶ, ವಿದೇಶಗಳಿಂದ ಪ್ರವಾಸಿಗರು ಬರುತ್ತಾರೆ. ನಮ್ಮ ಕರಾವಳಿಯ ಮೂರು ಜಿಲ್ಲೆಗಳಲ್ಲಿ 25ಕ್ಕೂ ಹೆಚ್ಚು ಜಲಪಾತಗಳಿವೆ ಅವುಗಳ ಅಭಿವೃದ್ಧಿಗೆ ಪ್ರವಾಸೋದ್ಯಮ

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿ – ಹರೀಶ್ ಪೂಂಜಾ Read More »

110 ಸೈನಿಕರನ್ನು ಕೊತ್ತೊಯ್ಯುತ್ತಿದ್ದ ಕೊಲಂಬಿಯಾದ ಮಿಲಿಟರಿ ವಿಮಾನ ಪತನ

ಸಮಗ್ರ ನ್ಯೂಸ್: ಸುಮಾರು 110 ಜನರನ್ನು ಹೊತ್ತೊಯ್ಯುತ್ತಿದ್ದ ಕೊಲಂಬಿಯಾದ ಮಿಲಿಟರಿ ವಿಮಾನ ಸೋಮವಾರ (ಮಾರ್ಚ್‌ 23) ಪತನವಾಗಿದೆ ಕೊಲಂಬಿಯಾದ ಪೋರ್ಟೊ ಲೆಗುಯಿಜಾಮೊದ ದಕ್ಷಿಣ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ ಎಂದು ಮೂಲಗಳು ತಿಳಿಸಿವೆ. ಘಟನೆಯಲ್ಲಿ ಕನಿಷ್ಠ 80 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. 20 ಮಂದಿ ಗಾಯಗೊಂಡಿದ್ದಾರೆ. ʼʼಲಾಕ್‌ಹೀಡ್ ಮಾರ್ಟಿನ್ ಹರ್ಕ್ಯುಲಸ್ ಸಿ -130 ವಿಮಾನವು ಕೊಲಂಬಿಯಾದ ದಕ್ಷಿಣ ಅಮೆಜಾನ್ ಪ್ರದೇಶದ ಪೆರುವಿನ ಗಡಿಯ ಸಮೀಪದಲ್ಲಿರುವ ಪೋರ್ಟೊ ಲೆಗುಯಿಜಾಮೊದಿಂದ ಸಶಸ್ತ್ರ ಪಡೆಗಳ ಸೈನಿಕರನ್ನು ಕರೆದೊಯ್ಯುತ್ತಿದ್ದಾಗ ಈ ಅಪಘಾತ ಸಂಭವಿಸಿದೆʼʼ ಎಂದು

110 ಸೈನಿಕರನ್ನು ಕೊತ್ತೊಯ್ಯುತ್ತಿದ್ದ ಕೊಲಂಬಿಯಾದ ಮಿಲಿಟರಿ ವಿಮಾನ ಪತನ Read More »

ಸೌಜನ್ಯ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ನೋಟೀಸ್

ಸಮಗ್ರ ನ್ಯೂಸ್: 13 ವರ್ಷದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಸುಪ್ರೀಂ ಕೋರ್ಟ್ ಸೋಮವಾರ(ಮಾ.23), ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಮೃತ ವಿದ್ಯಾರ್ಥಿನಿಯ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಮತ್ತು ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿಯಾಗಿದ್ದ ಸೌಜನ್ಯ 2012 ರ ಅಕ್ಟೋಬರ್‌ನಲ್ಲಿ ನಾಪತ್ತೆಯಾಗಿದ್ದರು. ಮರುದಿನ ಮಣ್ಣಸಂಕದಲ್ಲಿ ಆಕೆಯ ಶವ

ಸೌಜನ್ಯ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ನೋಟೀಸ್ Read More »