ರಾಜ್ಯ

ಸಕಲೇಶಪುರ: ಕಂಟೈನರ್ ನೊಳಗೆ ಅಕ್ರಮವಾಗಿ ಗೋಸಾಗಾಟ| ಭಜರಂಗದಳ ಕಾರ್ಯಕರ್ತರಿಂದ 26 ಗೋವುಗಳ ರಕ್ಷಣೆ

ಸಮಗ್ರ ನ್ಯೂಸ್: ಸಕಲೇಶಪುರ – ಕೇರಳ ಹಾಗೂ ಮಂಗಳೂರು ಭಾಗಕ್ಕೆ ನಿತ್ಯ ನಿರಂತರ ಅಕ್ರಮವಾಗಿ ಗೋಸಾಗಾಟ ನಡೆಯುತ್ತಿದೆ ಎಂಬುದಕ್ಕೆ ಪುಷ್ಟಿ ನೀಡುವಂತಹ ಘಟನೆ ಆ.4ರ ರಾತ್ರಿ ಸಕಲೇಶಪುರ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕಾರ್ಯಾಚರಣೆಯಲ್ಲಿದ್ದ ಬಜರಂಗದಳ ಕಾರ್ಯಕರ್ತರಿಗೆ ಹಾಸನ ಭಾಗದಿಂದ ಬೈಪಾಸ್ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ವೇಗವಾಗಿ ಬಂದ ಕಂಟೈನರ್ ವಾಹನವನ್ನು ಬೆನ್ನಟ್ಟಿರುವ ಬಜರಂಗದಳ ಕಾರ್ಯಕರ್ತರು ನಗರದ ಬೈಪಾಸ್ ರಸ್ತೆ ಟೊಲ್ ಗೇಟ್ ಬಳಿ ಪೋಲಿಸರು ಸಹಯೋಗದಲ್ಲಿ KA 06 C 6919 ಕಂಟೈನರ್ ವಾಹನವನ್ನು ತಡೆದಿದ್ದಾರೆ. […]

ಸಕಲೇಶಪುರ: ಕಂಟೈನರ್ ನೊಳಗೆ ಅಕ್ರಮವಾಗಿ ಗೋಸಾಗಾಟ| ಭಜರಂಗದಳ ಕಾರ್ಯಕರ್ತರಿಂದ 26 ಗೋವುಗಳ ರಕ್ಷಣೆ Read More »

ಉಡುಪಿ: ಮತ್ತೊಮ್ಮೆ ಮಾನವೀಯತೆ ಮೆರೆದ ಕರಾವಳಿ ಬಸ್ ಡ್ರೈವರ್| ಅಸೌಖ್ಯಕ್ಕೊಳಗಾದ ಯುವತಿಯ ಚಿಕಿತ್ಸೆಗೆ ಆಸ್ಪತ್ರೆಯೊಳಗೆ ಬಸ್ ಚಲಾಯಿಸಿದ ಚಾಲಕ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಯುವತಿಯೋರ್ವಳು ಬಸ್ಸಿನಲ್ಲಿಯೇ ಅಸ್ವಸ್ಥಗೊಂಡಿದ್ದಾಗ ಬಸ್ಸನ್ನೇ ಅಂಬುಲೆನ್ಸ್‌ ಮಾದರಿಯಲ್ಲಿ ಚಾಲಕ, ನಿರ್ವಾಹಕರು ಆಸ್ಪತ್ರೆಗೆ ಸಾಗಿಸುವಲ್ಲಿ ಮಾನವೀಯತೆ ಮೆರೆದ ಘಟನೆ ಮಾಸುವ ಮೊದಲೇ ಉಡುಪಿಯಲ್ಲಿಯೂ ಇಂತಹುದೇ ಘಟನೆ (ಇಂದು 5 ಆಗಸ್ಟ್)‌ ಸೋಮವಾರ ಬೆಳಿಗ್ಗೆ ಘಟಿಸಿದೆ. ಶಿರ್ವ ದಿಂದ ಉಡುಪಿಗೆ ಬರುತ್ತಿದ್ದ ನವೀನ್ ಎಂಬ ಬಸ್‌ನಲ್ಲಿ ಯುವತಿಯೋರ್ವಳು ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾಳೆ. ತುರ್ತಾಗಿ ಸ್ಪಂಧಿಸಿದ ನವೀನ್ ಬಸ್ ನ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂರವರು ಅಸ್ವಸ್ಥ ಗೊಂಡ ಯುವತಿಯ ಚಿಕಿತ್ಸೆಗಾಗಿ ತಕ್ಷಣವೇ ಬಸ್ಸನ್ನು

ಉಡುಪಿ: ಮತ್ತೊಮ್ಮೆ ಮಾನವೀಯತೆ ಮೆರೆದ ಕರಾವಳಿ ಬಸ್ ಡ್ರೈವರ್| ಅಸೌಖ್ಯಕ್ಕೊಳಗಾದ ಯುವತಿಯ ಚಿಕಿತ್ಸೆಗೆ ಆಸ್ಪತ್ರೆಯೊಳಗೆ ಬಸ್ ಚಲಾಯಿಸಿದ ಚಾಲಕ Read More »

ಇಂದಿನಿಂದ(ಆ.5) ಪಶ್ಚಿಮ ಘಟ್ಟ ಒತ್ತುವರಿ ತೆರವು| ಕಾರ್ಯಪಡೆ ರಚಿಸಿ‌ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ವಯನಾಡ್ ಸೇರಿದಂತೆ ವಿವಿಧೆಡೆ ಸಂಭವಿಸಿದ ಭೂಕುಸಿತ ದುರಂತಗಳಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಅರಣ್ಯ ಒತ್ತುವರಿ ತೆರವು ಮತ್ತು ಅನಧಿಕೃತ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದೆ. ಇಂದಿನಿಂದ (ಆ.5) ರಾಜ್ಯದ ಪಶ್ಚಿಮಘಟ್ಟ ಪ್ರದೇಶಗಳ ಅರಣ್ಯ ಒತ್ತುವರಿ, ಅಕ್ರಮ ತೋಟಗಳು, ಅನಧಿಕೃತ ರೆಸಾರ್ಟ್‌ಗಳು ಮತ್ತು ಇತರ ನಿರ್ಮಾಣಗಳ ತೆರವು ಕಾರ್ಯ ಆರಂಭಿಸಲಿದೆ. ಇದಕ್ಕಾಗಿ ಕಾರ್ಯಪಡೆ ರಚಿಸಿದೆ. ಪಶ್ಚಿಮಘಟ್ಟ ಪ್ರದೇಶಗಳ ಅರಣ್ಯ ಒತ್ತುವರಿ ಮತ್ತು ಅನಧಿಕೃತ ನಿರ್ಮಾಣಗಳ ತೆರವಿಗೆ 2023ರಲ್ಲೇ ಅರಣ್ಯ ಇಲಾಖೆ ಟಿಪ್ಪಣಿ ಹೊರಡಿಸಿತ್ತು.

ಇಂದಿನಿಂದ(ಆ.5) ಪಶ್ಚಿಮ ಘಟ್ಟ ಒತ್ತುವರಿ ತೆರವು| ಕಾರ್ಯಪಡೆ ರಚಿಸಿ‌ ರಾಜ್ಯ ಸರ್ಕಾರ ಆದೇಶ Read More »

ಶಿರಾಡಿ ಘಾಟ್: ವಾಹನ ಸಂಚಾರ ಪುನರಾರಂಭ

ಸಮಗ್ರ ನ್ಯೂಸ್: ಸತತವಾಗಿ ಸುರಿಯುತ್ತಿದ್ದ ಮಳೆಗೆ ನಿರಂತರ ಭೂ ಕುಸಿತ ಕಂಡಿದ್ದ ಶಿರಾಡಿ ಘಾಟ್‌ ಪ್ರದೇಶದ ಸಕಲೇಶಪುರ ತಾಲೂಕಿನ ಮಾರ್ನಳ್ಳಿ ದೊಡ್ಡತಪ್ಪುಲಿನಲ್ಲಿ ಪರಿಸ್ಥಿತಿ ಸುಧಾರಿಸಿದ್ದು, ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹೆದ್ದಾರಿ ಅಗಲಗೊಳಿಸುವ ಕಾಮಗಾರಿ ಕಾರಣಕ್ಕೆ ಕತ್ತರಿಸಲ್ಪಟ್ಟ ಗುಡ್ಡಗಳ ಭಾಗದಲ್ಲಿ ಭಾರೀ ಮಳೆಗೆ ಕೆಲವು ದಿನಗಳಿಂದ ಭಾರೀ ಭೂ ಕುಸಿತವಾಗಿತ್ತು. ಸರಕಾರಿ ಬಸ್‌ಗಳು ಮಾತ್ರ ಪರ್ಯಾಯ ರಸ್ತೆಯಲ್ಲಿಯೇ ಸಂಚರಿಸುತ್ತಿದ್ದು, ಮಂಗಳೂರು – ಬೆಂಗಳೂರು ನಡುವೆ ನೇರ ರಸ್ತೆ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕಾಗಿದೆ.

ಶಿರಾಡಿ ಘಾಟ್: ವಾಹನ ಸಂಚಾರ ಪುನರಾರಂಭ Read More »

ಮಂಗಳೂರು- ಬೆಂಗಳೂರು ರೈಲುಮಾರ್ಗ ಪ್ರಾಯೋಗಿಕ ಸಂಚಾರ ಯಶಸ್ವಿ

ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರೈಲು ಮಾರ್ಗದ ಎಡಕುಮೇರಿ- ಕಡಗರವಳ್ಳಿ ನಡುವಿನ ದೋಣಿಹಗಲ್‌ನ ರೈಲು ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದ ದುರಸ್ತಿ ಕಾರ್ಯ ಅಂತಿಮ ಹಂತಕ್ಕೆ ತಲುಪಿದ್ದು, ಸ್ಥಳದಲ್ಲಿ ರೈಲು ಎಂಜಿನ್‌ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿದೆ. ರೈಲು ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ ಕ್ಷಣದಿಂದ ದುರಸ್ತಿ ಕಾರ್ಯಗಳನ್ನು ಆರಂಭಿಸಲಾಗಿದ್ದು, ಶನಿವಾರ ಭೂಕುಸಿತದ ಸ್ಥಳದಲ್ಲಿ ತಡೆಗೋಡೆ ಗೋಡೆ ಕಾಮಗಾರಿ ಪೂರ್ಣಗೊಂಡಿತ್ತು. ಹಳಿ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಅಂತಿಮ ಹಂತದ ಕಾಮಗಾರಿಗಳು ಭರದಿಂದ ನಡೆಯುತ್ತಿದೆ. ಕೆಳಭಾಗದಿಂದಲೇ ಬಂಡೆಗಳನ್ನು ಜೋಡಿಸಿ, ಕಬ್ಬಿಣದ ನೆಟ್‌

ಮಂಗಳೂರು- ಬೆಂಗಳೂರು ರೈಲುಮಾರ್ಗ ಪ್ರಾಯೋಗಿಕ ಸಂಚಾರ ಯಶಸ್ವಿ Read More »

ಸುಳ್ಯ: ಅರ್ಹತಾ ಪರೀಕ್ಷೆಗಳಲ್ಲಿ ವಿದ್ಯಾಮಾತಾ ಅಕಾಡೆಮಿಯ ಪಾರಮ್ಯ| ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ(CTET)ಹಾಗೂ ವಿಶ್ವವಿದ್ಯಾನಿಲಯದ ಸಾಮಾನ್ಯ ಪ್ರವೇಶ ಪರೀಕ್ಷೆ(CUET)ಯಲ್ಲಿ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

ಸಮಗ್ರ ನ್ಯೂಸ್: ಗ್ರಾಮೀಣ ಪ್ರದೇಶದ ಯುವ ಜನತೆಗೆ ಆಶಾಕಿರಣವಾಗಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಖ್ಯಾತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ವಿವಿಧ ಅರ್ಹತಾ ಪರೀಕ್ಷೆಗಳಿಗೆ ತರಬೇತಿ ಪಡೆದ 2 ವಿದ್ಯಾರ್ಥಿಗಳಲ್ಲಿ ಇಬ್ಬರೂ ಕೂಡ ಉತ್ತೀರ್ಣರಾಗುವ ಮೂಲಕ ಹೊಸ ಮೈಲುಗಲ್ಲನ್ನು ಸ್ಥಾಪಿಸಿದೆ. ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ-CTET2024 ವರ್ಷ ಮೊಳೆಯರ್ ಸಾಧನೆ:ವಿವಿಧ ಅರ್ಹತಾ ಪರೀಕ್ಷೆಗಳಿಗೆ ಸಂಬಂದಿಸಿದಂತೆ ವಿದ್ಯಾಮಾತಾ ಅಕಾಡೆಮಿಯು ನೀಡಿದ್ದ ತರಗತಿಗಳಿಗೆ ಹಾಜರಾಗಿದ್ದ ವರ್ಷ ಮೊಳೆಯರ್ ರವರು ಉತ್ತಮ ಶ್ರೇಣಿಯಲ್ಲಿ 2024ನೇ ಸಾಲಿನ CTET ನಲ್ಲಿ ಉತ್ತೀರ್ಣರಾಗುವ ಮೂಲಕ ಕೇಂದ್ರೀಯ ವಿದ್ಯಾಲಯಗಳ

ಸುಳ್ಯ: ಅರ್ಹತಾ ಪರೀಕ್ಷೆಗಳಲ್ಲಿ ವಿದ್ಯಾಮಾತಾ ಅಕಾಡೆಮಿಯ ಪಾರಮ್ಯ| ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ(CTET)ಹಾಗೂ ವಿಶ್ವವಿದ್ಯಾನಿಲಯದ ಸಾಮಾನ್ಯ ಪ್ರವೇಶ ಪರೀಕ್ಷೆ(CUET)ಯಲ್ಲಿ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ Read More »

ಶಿರಾಡಿ‌‌ ಘಾಟ್ ಗೆ ಭೇಟಿ ನೀಡಿದ ಸಿಎಂಗೆ ಬಿಗ್ ಶಾಕ್!! ಕಾರಣ ಏನು ಗೊತ್ತೇ?

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆರಾಯನ ಆರ್ಭಟದಿಂದ ಜನತೆ ಬೆಚ್ಚಿ ಬಿದ್ದಿದ್ದಾರೆ. ಚಿಕ್ಕಮಗಳೂರು, ಶಿರೂರು ಈಗ ಶಿರಾಡಿ ಘಾಟ್ ಕೂಡ ಗುಡ್ಡ ಕುಸಿತದಿಂದ ಹೊರತಾಗಿಲ್ಲ. ಇಂದು ಸಿಎಂ ಸಿದ್ದರಾಮಯ್ಯ ಅವರು ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತಗೊಂಡ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗುಡ್ಡ ಕುಸಿತದ ಭೀಕರತೆಯನ್ನು ಕಂಡು ಶಾಕ್ ಆದ ಸಿದ್ದರಾಮಯ್ಯ ಅವರು, ರಾಷ್ಟ್ರೀಯ ಹೆದ್ದಾರಿ‌ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ. ಜೊತೆಗೆ ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90

ಶಿರಾಡಿ‌‌ ಘಾಟ್ ಗೆ ಭೇಟಿ ನೀಡಿದ ಸಿಎಂಗೆ ಬಿಗ್ ಶಾಕ್!! ಕಾರಣ ಏನು ಗೊತ್ತೇ? Read More »

ನಮ್ಮ ಮೆಟ್ರೋ ಟ್ರ್ಯಾಕ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಟ್ರ್ಯಾಕ್ ಗೆ ಹಾರಿ 35 ವರ್ಷದ ವ್ಯಕ್ತಿ ಆತ್ಮಹತ್ಯೆ  ಮಾಡಿಕೊಂಡಿರುವಂತಹ ಘಟನೆ ಇಂದು ಸಂಜೆ ಸುಮಾರಿಗೆ ನಾಗಸಂದ್ರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತರ ಗುರುತು ಪತ್ತೆ ಆಗಿಲ್ಲ. ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ವ್ಯಕ್ತಿ ಟ್ರ್ಯಾಕ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮೆಟ್ರೋ ರೈಲಿನಡಿಯಲ್ಲೇ ವ್ಯಕ್ತಿಯ ಮೃತದೇಹ ಇದೆ. ಘಟನೆ ನಂತರ ಕೆಲಕಾಲ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ನಮ್ಮ ಮೆಟ್ರೋ ಟ್ರ್ಯಾಕ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ Read More »

ವಯನಾಡಿನಲ್ಲಿ ಗುಡ್ಡ ಕುಸಿತ: ಸಂತ್ರಸ್ತರಿಗೆ ಕರ್ನಾಟಕದಿಂದ 100 ಮನೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಸಮಗ್ರ ನ್ಯೂಸ್: ಗುಡ್ಡ ಕುಸಿತಕ್ಕೆ ಕೇರಳದ ವಯನಾಡು ತತ್ತರಿಸಿಹೋಗಿದ್ದು. ಇದೀಗ ಭೀಕರ ಭೂಕುಸಿತದಲ್ಲಿ ಮನೆ ಕಳೆದುಕೊಂಡು ಸಂತ್ರಸ್ತರಾದವರಿಗೆ ಪುನರ್ವಸತಿ ಕಲ್ಪಿಸುವ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೂಡ ಕೈಜೋಡಿಸಿದೆ. ಸಂತ್ರಸ್ತರಿಗೆ 100 ಮನೆಗಳನ್ನು ಕಟ್ಟಿಸಿಕೊಡಲಾಗುವುದು ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಶನಿವಾರ ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಅವರು ಸಂದೇಶ ಪ್ರಕಟಿಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ ಸಂಬಂಧಿಸಿ ಕರ್ನಾಟಕವು ಕೇರಳದೊಂದಿಗೆ ಒಗ್ಗಟ್ಟಿನಿಂದ ಇರಲಿದೆ. ನಾನು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ನಮ್ಮ ಬೆಂಬಲದ

ವಯನಾಡಿನಲ್ಲಿ ಗುಡ್ಡ ಕುಸಿತ: ಸಂತ್ರಸ್ತರಿಗೆ ಕರ್ನಾಟಕದಿಂದ 100 ಮನೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ Read More »

ಯಾದಗಿರಿ ಪಿಎಸ್ಐ ಅನುಮಾನಸ್ಪದ ಸಾವು: ಸಿಐಡಿ ತನಿಖೆಗೆ ವರ್ಗಾಯಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಯಾದಗಿರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪಿಎಸ್ಐ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಆದರೆ ಈ ಸಾವಿಗೆ ಯಾದಗಿರಿ ಶಾಸಕ ಮತ್ತು ಅವರ ಪುತ್ರನೇ ಕಾರಣ ಎಂದು ಕುಟುಂಬದವರು ಆರೋಪಿಸುತ್ತಿದ್ದಾರೆ. ಯಾದಗಿರಿ ನಗರ ಠಾಣೆಗೆ ಪೋಸ್ಟಿಂಗ್ಗಾಗಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಪರಶುರಾಮ 30 ಲಕ್ಷ ರೂ. ನೀಡಿ, ಯಾದಗಿರಿ ನಗರಕ್ಕೆ ವರ್ಗಾವಣೆಯಾಗಿದ್ದರು. ಆದರೆ, ಒಂದು ವರ್ಷದ ಪೂರೈಸುವ ಮುನ್ನವೇ ಪರಶುರಾಮ್ ಅವರನ್ನು ಮತ್ತೆ ಯಾದಗಿರಿ

ಯಾದಗಿರಿ ಪಿಎಸ್ಐ ಅನುಮಾನಸ್ಪದ ಸಾವು: ಸಿಐಡಿ ತನಿಖೆಗೆ ವರ್ಗಾಯಿಸಿದ ರಾಜ್ಯ ಸರ್ಕಾರ Read More »