ರಾಜ್ಯ

ಹವಾಮಾನ ವರದಿ| ಆ.6ರವರೆಗೂ ಸುರಿಯಲಿದೆ ಭಾರೀ ಮಳೆ

ಸಮಗ್ರ ನ್ಯೂಸ್: ರಾಜ್ಯದಾದ್ಯಂತ ಆಗಸ್ಟ್ 6ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.‌ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುತ್ತಿದೆ, ಕಳೆದ ಎರಡು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯು ಅನಾಹುತಗಳನ್ನು ಸೃಷ್ಟಿಸಿದೆ. ಅದೇ ರೀತಿ ಮಳೆ ಆಗಸ್ಟ್ 6ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ […]

ಹವಾಮಾನ ವರದಿ| ಆ.6ರವರೆಗೂ ಸುರಿಯಲಿದೆ ಭಾರೀ ಮಳೆ Read More »

ವಯನಾಡ್ ಕಾರ್ಯಾಚರಣೆಗೆ ಸಕಲೇಶಪುರದಿಂದ ತಂಡ

ಸಮಗ್ರ ನ್ಯೂಸ್: ವಯನಾಡು ಪ್ರಕೃತಿ ವಿಕೋಪಕ್ಕೆ ನಲುಗಿ ಹೋಗಿದೆ. ಪ್ರಾಣ ಕಳೆದುಕೊಂಡವರ ಕುಟುಂಬದ ರೋದನೆ ಕೇಳುವವರು ದಿಕ್ಕು ಇಲ್ಲದಂತಾಗಿದೆ. ಇದರ ಜೊತೆಗೆ ದೈಹಿಕವಾಗಿ ಗಾಯಗೊಂಡವರ ಪರಿಸ್ಥಿತಿ ಚಿಂತಾ ಜನಕವಾಗಿದೆ. ಇಂಥವರ ಸೇವೆಗೆ ಸಕಲೇಶಪುರ ತಾಲ್ಲೂಕಿನಿಂದ 25 ಜನರ ತಂಡ ಹೋಗುತ್ತಿದೆ. ಸುಮಾರು 25 ಜನ ಇರುವ ತಾಲೂಕಿನ ಈ ತಂಡವು ನೆರೆ ಸಂತ್ರಸ್ತರಿಗೆ ದಿನನಿತ್ಯದ ವಸ್ತುಗಳಾದ ಸೋಪ್, ಪೇಸ್ಟ್, ಆಹಾರ ಪದಾರ್ಥಗಳು ನೀರಿನ ಬಾಟಲಿ, ಬಿಸ್ಕತ್ ಸೇರಿದಂತೆ ಆಂಬುಲೆನ್ಸ್ ವ್ಯವಸ್ಥೆಯನ್ನು ವಿವಿಧ ಸಂಘಟನೆಯ ಮೂಲಕ ಸೇವೆ ಒದಗಿಸಲು

ವಯನಾಡ್ ಕಾರ್ಯಾಚರಣೆಗೆ ಸಕಲೇಶಪುರದಿಂದ ತಂಡ Read More »

ಪುನೀತ್ ಕೆರೆಹಳ್ಳಿ ಪರವಾಗಿ ಪೋಲಿಸ್ ಠಾಣೆಗೆ ತೆರಳಿದ ಪ್ರತಾಪ್ ಸಿಂಹ ವಿರುದ್ಧವೂ ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ನಾಯಿ ಮಾಂಸ ವಿಚಾರವಾಗಿ ಪುನೀತ್ ಕೆರೆಹಳ್ಳಿ ಮೇಲೆ ಎಸಿಪಿ ಚಂದನ್ ಕುಮಾರ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಬಸವೇಶ್ವರನಗರ ಠಾಣೆ ಮುಂದೆ ಪ್ರತಿಭಟನೆ ನಡೆಸಲಾಗಿತ್ತು. ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಇದರಲ್ಲಿ ಪಾಲ್ಗೊಂಡಿದ್ದರು. ಇದೀಗ ಇವರೆಲ್ಲರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಎ1 ಪುನೀತ್ ಕೆರೆಹಳ್ಳಿ , ಎ2 ಪ್ರತಾಪ್ ಸಿಂಹ ಎಂದು ಉಲ್ಲೇಖಿಸಲಾಗಿದೆ. ಪೊಲೀಸ್ ಠಾಣೆ ಮುಂದೆ ಅಕ್ರಮವಾಗಿ ಗುಂಪುಗೂಡಿ ಪ್ರತಿಭಟನೆ ನಡೆಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರಿನಲ್ಲಿ

ಪುನೀತ್ ಕೆರೆಹಳ್ಳಿ ಪರವಾಗಿ ಪೋಲಿಸ್ ಠಾಣೆಗೆ ತೆರಳಿದ ಪ್ರತಾಪ್ ಸಿಂಹ ವಿರುದ್ಧವೂ ಎಫ್ಐಆರ್ ದಾಖಲು Read More »

ಸಿಎಂಗೆ ಮುಡಾ ಸಂಕಷ್ಟ: ಹಗರಣದ ಸಂಪೂರ್ಣ ವರದಿ ಕೇಳಿದ ರಾಜ್ಯಪಾಲ

ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಲು ಚಿಂತನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯಪಾಲರು ಮತ್ತೆ ಮುಡಾ ಹಗರಣ ಸಂಪೂರ್ಣ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೇಳಿದ್ದಾರೆ. ಈಗಾಗಲೇ ಸರ್ಕಾರಿಂದ ಒಂದು ಬಾರಿ ವರದಿ ಪಡೆದುಕೊಂಡಿರುವ ರಾಜ್ಯಪಾಲರು ಇದೀಗ ನವದೆಹಲಿಯಲ್ಲಿ ಇದ್ದುಕೊಂಡೇ ಮತ್ತೊಮ್ಮೆ ವರದಿ ಕೇಳಿರುವುದು ಸಂಚಲನ ಮೂಡಿಸಿದೆ.

ಸಿಎಂಗೆ ಮುಡಾ ಸಂಕಷ್ಟ: ಹಗರಣದ ಸಂಪೂರ್ಣ ವರದಿ ಕೇಳಿದ ರಾಜ್ಯಪಾಲ Read More »

ವಯನಾಡ್ ಭೂಕುಸಿತ| ಮೃತರ ಸಂಖ್ಯೆ 254ಕ್ಕೆ ಏರಿಕೆ| 1592 ಮಂದಿಯ ರಕ್ಷಣೆ

ಸಮಗ್ರ ನ್ಯೂಸ್: ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತ ದುರಂತದಲ್ಲಿ ಮೃತರ ಸಂಖ್ಯೆ 254ಕ್ಕೆ ಏರಿಕೆಯಾಗಿದೆ. ಈವರೆಗೆ 192 ಮಂದಿ ನಾಪತ್ತೆಯಾಗಿದ್ದರೆ, 1,592 ಜನರನ್ನು ರಕ್ಷಣೆ ಮಾಡಲಾಗಿದೆ. 8 ಸಾವಿರಕ್ಕೂ ಹೆಚ್ಚು ಜನರು ಕಾಳಜಿ ಕೇದ್ರ ಸ್ಥಾಳಂತರಿಸಲಾಗಿದೆ. 3,332 ಪುರುಷರು ಹಾಗೂ 3398 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. 82 ನಿರಾಶ್ರಿತರ ಶಿಬಿರವನ್ನು ತೆರೆಯಲಾಗಿದೆ. 8 ಕ್ಯಾಂಪ್ ಅನ್ನು ಚೋರ್ ಮಂಡಲಾದಲ್ಲಿ ಓಪನ್ ಮಾಡಲಾಗಿದೆ. ಈವರೆಗೆ 1884 ಮಕ್ಕಳನ್ನು ರಕ್ಷಿಸಲಾಗಿದ್ದು, ಅವರನ್ನು ಕಾಳಜಿ ಕೇಂದ್ರಗಳಲ್ಲಿ ಇರಿಸಲಾಗಿದೆ. ಗುಡ್ಡ ಕುಸಿತದಲ್ಲಿ

ವಯನಾಡ್ ಭೂಕುಸಿತ| ಮೃತರ ಸಂಖ್ಯೆ 254ಕ್ಕೆ ಏರಿಕೆ| 1592 ಮಂದಿಯ ರಕ್ಷಣೆ Read More »

ಬೆಂಗಳೂರು: ಠಾಣೆ ಎದುರು ಹೈಡ್ರಾಮಾ ನಡೆಸಿದ ಪ್ರತಾಪ್ ಸಿಂಹ, ಹರೀಶ್ ಪೂಂಜಾ, ಪುನಿತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಪರ ಪೊಲೀಸ್ ಠಾಣೆಗೆ ಬಂದು ಅಕ್ರಮ ಕೂಟ ಸೇರಿ ಪ್ರತಿಭಟನೆ ಮಾಡಿದ್ದರಿಂದ ಪುನೀತ್ ಕೆರೆಹಳ್ಳಿ , ಪ್ರತಾಪ್ ಸಿಂಹ, ಹರೀಶ್ ಪೂಂಜ ಹಾಗೂ ಇತರರ ವಿರುದ್ಧ ಬಿಎನ್ಎಸ್ 126(2), 189(2), 191(2) 190BNS, ಮತ್ತು 103 ಕರ್ನಾಟಕ ಪೊಲೀಸ್ ಆ್ಯಕ್ಟ್ ಅಡಿ ಬೆಂಗಳೂರು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. A1ಪುನೀತ್ ಕೆರೆಹಳ್ಳಿ, A2ಪ್ರತಾಪ್‌ ಸಿಂಹ, A3 ಹರೀಶ್ ಪೂಂಜ ಸೇರಿ ಇತರರ ವಿರುದ್ಧ ಬೆಂಗಳೂರು ಬಸವೇಶ್ವರ

ಬೆಂಗಳೂರು: ಠಾಣೆ ಎದುರು ಹೈಡ್ರಾಮಾ ನಡೆಸಿದ ಪ್ರತಾಪ್ ಸಿಂಹ, ಹರೀಶ್ ಪೂಂಜಾ, ಪುನಿತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು Read More »

ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು (ಆ.1) ರಜೆ‌ ಘೋಷಣೆ

ಸಮಗ್ರ ನ್ಯೂಸ್: ಉತ್ತರಕನ್ನಡದಲ್ಲಿ ಮಳೆ ಮತ್ತೆ ಅಬ್ಬರಿಸುತ್ತಿದೆ. ಅಲ್ಲದೆ ಮತ್ತಷ್ಟು ಮಳೆಯಾಗುವ ಸಾದ್ಯತೆ ಹೆಚ್ಚಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು ಆಗಸ್ಟ್ 1ರ ಗುರುವಾರದಂದು ಜಿಲ್ಲೆಯ ಐದು ತಾಲೂಕಿಗೆ ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ಎಲ್ಲಾ ಸರ್ಕಾರಿ ಪ್ರಾಥಮಿಕ,ಪ್ರೌಡ ,ಪದವಿಪೂರ್ವ, ಐಟಿಐ, ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು‌ ಮಾಹಿತಿ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು (ಆ.1) ರಜೆ‌ ಘೋಷಣೆ Read More »

ಶಿರಾಡಿ‌ ಘಾಟ್ ನಲ್ಲಿ ಮತ್ತೆ ಭೂಕುಸಿತ| ಮಣ್ಣಿನಡಿ ಹೂತುಹೋದ ವಾಹನಗಳು| ರಸ್ತೆ‌ ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲುನಲ್ಲಿ ಗುಡ್ಡ ಕುಸಿದು ಮಣ್ಣಿನಡಿ ಕೆಲವು ವಾಹನಗಳು ಸಿಲುಕಿವೆ.‌ ಗುಡ್ಡ ಕುಸಿತದ ರಭಸಕ್ಕೆ ಕಂಟೇನರ್ ಪಲ್ಟಿಯಾಗಿದ್ದು, ಮತ್ತೊಂದು ಬೃಹತ್ ಕಂಟೇನರ್ ಮಣ್ಣಿನಡಿ ಸಿಲುಕಿದೆ. ಪಲ್ಟಿಯಾಗಿರುವ ಕಂಟೇನರ್‌ನಲ್ಲಿ ಚಾಲಕ ಸಿಲುಕಿದ್ದಾನೆ. ಸಂಜೆ ಮಳೆ ಹೆಚ್ಚಾಗಿರುವುದರಿಂದ ಗುಡ್ಡ ಕುಸಿದಿದೆ. ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ವಾಹನ ಸಂಚಾರ ಬಂದ್ ಆಗಿದೆ.

ಶಿರಾಡಿ‌ ಘಾಟ್ ನಲ್ಲಿ ಮತ್ತೆ ಭೂಕುಸಿತ| ಮಣ್ಣಿನಡಿ ಹೂತುಹೋದ ವಾಹನಗಳು| ರಸ್ತೆ‌ ಸಂಚಾರ ಸ್ಥಗಿತ Read More »

ಉಡುಪಿ: ಭಾರೀ ಮಳೆ ಹಿನ್ನೆಲೆ| ಆ.01ರಂದು ಪಿಯುಸಿವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯಿಂದ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಆಗಸ್ಟ್ 1ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

ಉಡುಪಿ: ಭಾರೀ ಮಳೆ ಹಿನ್ನೆಲೆ| ಆ.01ರಂದು ಪಿಯುಸಿವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಮುಂದುವರಿದ ‌ವರುಣಾರ್ಭಟ| ದ.ಕ‌ ಜಿಲ್ಲೆಯಲ್ಲಿ‌ ಆ.1 ರಂದು ಶಾಲಾ ಕಾಲೇಜುಗಳಿಗೆ ರಜೆ – ಮುಲ್ಲೈ ಮುಗಿಲನ್

ಸಮಗ್ರ ನ್ಯೂಸ್: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಆ.1ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮುಂದುವರಿದ ‌ವರುಣಾರ್ಭಟ| ದ.ಕ‌ ಜಿಲ್ಲೆಯಲ್ಲಿ‌ ಆ.1 ರಂದು ಶಾಲಾ ಕಾಲೇಜುಗಳಿಗೆ ರಜೆ – ಮುಲ್ಲೈ ಮುಗಿಲನ್ Read More »